Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

ಮೈಸೂರಿನಲ್ಲಿ ತಯಾರಾಯಿತು ಇಸ್ರೋ ಗಗನಯಾತ್ರಿಗಳ ಆಹಾರ

by Bengaluru Wire Desk
February 6, 2021
in BW Special, Public interest
Reading Time: 1 min read
0
ಮೈಸೂರು ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಇಸ್ರೋ ಗಗನಯಾನಿಗಳಿಗೆಂದು ಸಿದ್ಧವಾದ ರೆಡಿ-ಟು ಈಟ್ ಆಹಾರ ಪೊಟ್ಟಣಗಳು

ಬೆಂಗಳೂರು : ದೇಶದ ಮೊತ್ತಮೊದಲ ಮಾನವಸಹಿತ ಗಗನಯಾನಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ. ಈ ನಡುವೆ ಏರೋ ಇಂಡಿಯಾದ ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ (ಡಿಎಫ್ ಆರ್ ಎಲ್) ದ ಪೆವಿಲಿಯನ್ ನಲ್ಲಿ ಗಗನಯಾನಿಗಳಿಗೆಂದು ರೆಡಿ ಟು ಈಟ್ ನಂತಹ ಸಿದ್ಧಪಡಿಸಿರುವ ತರಹೇವಾರಿ ಆಹಾರವನ್ನು ಪ್ರದರ್ಶನಕ್ಕೆ ಇಟ್ಟಿದೆ.

ಇದೇ ಮೊತ್ತ ಮೊದಲ ಬಾರಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ)ಯ ಭಾಗವಾಗಿರುವ ಡಿಎಫ್ ಆರ್ ಎಲ್, ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮಹತ್ವದ ಗಗನಯಾನ ಯೋಜನೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿಲಿರುವ ಗಗನಯಾತ್ರಿಗಳಿಗೆ ಆಹಾರ ಸಿದ್ಧಪಡಿಸಿಕೊಡಲು ಒಪ್ಪಂದ ಮಾಡಿಕೊಂಡಿದೆ. ಕೋವಿಡ್ ಸೋಂಕು ಹಿನ್ನಲೆಯಲ್ಲಿ ಗಗನಯಾತ್ರೆಯ ನಿಗಧಿತ ಸಮಯ ಬದಲಾವಣೆಯಾಗಿದೆ. ಆದರೂ ಅದಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳು ಸದ್ದಿಲ್ಲದೆ ನಿರಂತರವಾಗಿ ನಡೆಯುತ್ತಿದೆ.

ಮೈಸೂರಿನ ಸಿದ್ಧಾರ್ಥ ನಗರದಲ್ಲಿರುವ ಡಿಎಫ್ ಆರ್ ಎಲ್ ನಲ್ಲಿ ಮಾನವ ಸಹಿತ ಗಗನನೌಕೆಯಲ್ಲಿ ತೆರಳುತ್ತಿರುವ ಮೂವರು ಬಾಹ್ಯಾಕಾಶ ಯಾತ್ರಿಗಳಿಗೆ ಅಗತ್ಯವಾಗಿ ಬೇಕಾಗಿರುವ 35 ರೀತಿಯ ಆಹಾರ ಪದಾರ್ಥಗಳನ್ನು ಸಿದ್ದಪಡಿಸಿದೆ. ಡಿಎಫ್ ಆರ್ ಎಲ್ ಈತನಕ ವಿಶ್ವದ ಅತಿ ಎತ್ತರದ ಪ್ರದೇಶವಾದ ಸಿಯಾಚಿನ್ ನಲ್ಲಿ ಕಾರ್ಯನಿರ್ವಹಿಸುವ ಸೈನಿಕರು, ಅಂಟಾರ್ಟಿಕಾಕ್ಕೆ ಸಂಶೋಧನೆಗೆ ತೆರಳುವ ವಿಜ್ಞಾನಿಗಳು ಹೀಗೆ ವಿವಿಧ ಹವಾಮಾನ ವೈಪರಿತ್ಯದಲ್ಲಿ ಕೆಲಸ ಮಾಡುವವರಿಗೆಗಾಗಿ ವಿಶೇಷವಾಗಿ ಸಿದ್ಧಪಡಿಸಿದ ಆಹಾರವನ್ನು ಕನಿಷ್ಠ 6 ತಿಂಗಳು ಹಾಳಾಗದಂತೆ ಪ್ಯಾಕ್ ಮಾಡಿ ಪೂರೈಕೆ ಮಾಡುತ್ತಿತ್ತು.

ಇಸ್ರೋ ನಿರ್ಮಿತ ಗಗನಯಾನ ನೌಕೆಯ ಮಾದರಿ ಚಿತ್ರ

ಆದರೀಗ ಇಸ್ರೋ ಗಗನಯಾನ ಯೋಜನೆಗೆ ಕನಿಷ್ಠ 1 ವರ್ಷ ಯಾವುದೇ ಪರಿಸ್ಥಿತಿಯಲ್ಲೂ ಆಹಾರ ಕೆಡದಂತೆ, ಪುಡಿಯಾಗದಂತೆ, ತನ್ನ ಪೋಷಕಾಂಶ ಅಂಶವನ್ನು ಕಳೆದುಕೊಳ್ಳದ ರೀತಿಯಲ್ಲಿ ಮೈಸೂರು ಆಹಾರ ಸಂಶೋಧನಾ ಪ್ರಯೋಗಾಲಯ ವಿವಿಧ ರೀತಿಯ ಸಸ್ಯಹಾರಿ ಮತ್ತು ಮಾಂಸಹಾರಿ ಆಹಾರವನ್ನು ತಯಾರು ಮಾಡಿದೆ. ಅದನ್ನು 4 ಪದರಗಳುಳ್ಳ ಪೌಚ್ ನಲ್ಲಿ ಹಾಕಿಟ್ಟು ಪ್ಯಾಕ್ ಮಾಡಿದೆ. ಈ ಪ್ಯಾಂಕಿಗ್ ಪೌಚ್ 120 ಡಿಗ್ರಿ ಉಷ್ಣಾಂಶವನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಬಾಹ್ಯಾಕಾಶದಲ್ಲಿ ತೆರಳುವ ಆಸ್ಟ್ರೊನಾಟ್ ಗಳಿಗೆ ಹೆಚ್ಚಿನ ಪೋಷಕಾಂಶವುಳ್ಳ, ಸರಿಯಾಗಿ ಜೀರ್ಣವಾಗುವ, ಶಕ್ತಿ ನೀಡುವ ಆಹಾರದ ಅಗತ್ಯವಾಗಿದೆ. ಇಂತಹ 34 ಆಹಾರ ಪದಾರ್ಥಗಳನ್ನು ಮೈಸೂರಿನ ಪ್ರಯೋಗಾಲಯದಲ್ಲಿ ಸಿದ್ದಪಡಿಸಲಾಗಿದೆ ಎಂದು ಡಿಎಫ್ ಆರ್ ಎಲ್ ನಿರ್ದೇಶಕ ಡಾ. ಅನಿಲ್ ದತ್ ಸೇಮವಾಲ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ರಷ್ಯಾದಿಂದ ತರಬೇತಿ ಮುಗಿಸಿ ಭಾರತಕ್ಕೆ ಗಗನಯಾನಿಗಳು ಬಂದಾಗ ಅವರುಗಳಿಗೆ ಡಿಎಫ್ ಆರ್ ಎಲ್ ಸಿದ್ದಪಡಿಸಿರುವ ವಿವಿಧ ರೀತಿಯ ಸಸ್ಯಹಾರಿ ಹಾಗೂ ಮಾಂಸಹಾರಿ ರೆಡಿ- ಟು ಈಟ್ ಆಹಾರವನ್ನು ನೀಡಲಾಗುತ್ತದೆ. ಅದರಲ್ಲಿ ತಮಗೆ ಹೊಂದಿಕೆಯಾಗುವ ಪದಾರ್ಥಗಳನ್ನು ಆಯ್ಕೆ ಮಾಡಿದರೆ ಅವುಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುತ್ತೇವೆ. ಬಾಹ್ಯಾಕಾಶ ನೌಕೆಯಲ್ಲಿ ಯಾತ್ರೆಯ ಸಂದರ್ಭ ತಿನ್ನುವ ಮುಂಚೆ ಗಗನಯಾತ್ರಿಗಳು ಡಿಎಫ್ ಆರ್ ಎಲ್ ನೀಡಿರುವ ಆಹಾರ ಬಿಸಿಮಾಡುವ ಸಣ್ಣಬಾಕ್ಸ್ ನಲ್ಲಿಟ್ಟರೆ ಸಾಕು10 ನಿಮಿಷದ ಒಳಗೆ ಬಿಸಿಬಿಸಿ ತಿಂಡಿ- ಊಟ ಸಿದ್ಧವಿರುತ್ತೆ ಎಂದು ಹೇಳುತ್ತಾರೆ ಡಾ.ಅನಿಲ್ ದತ್.

ಆಹಾರ ಬಿಸಿ ಮಾಡುವ ಸಣ್ಣ ಬಾಕ್ಸ್

ಮೈಸೂರಿನ ಆಹಾರ ಸಂಶೋಧನಾ ಪ್ರಯೋಗಾಲಯವು ಏರ್ ಶೋ ಪ್ರದರ್ಶನ ಮಳಿಗೆಯಲ್ಲಿ ಪೊಷಕಾಂಶ ಭರಿತ ಮಿಠಾಯಿಗಳು, ಉಪ್ಪಿನಕಾಯಿ, ಟಮೊಟೊ ಸಾಸ್, ವೆಜ್ ಪಲಾವ್, ಚಪಾತಿ, ಪರೋಟ, ದಾಲ್ ಕರಿ, ಅನ್ನ- ಸಾಂಬಾರ್, ಇನ್ ಸ್ಟೆಂಟ್ ಕಾಫಿ, 250 ಮಿ.ಲಿ ಕುಡಿಯುವ ನೀರು ಸೇರಿದಂತೆ ಹಲವು ಪದಾರ್ಥಗಳನ್ನು ಪ್ರದರ್ಶನಕ್ಕೆ ಇಟ್ಟಿದೆ. ಈ ಪದಾರ್ಥಗಳನ್ನು ಶುದ್ಧ ವಾತಾವರಣದಲ್ಲಿ, ಧನಾತ್ಮಕ ಒತ್ತಡವಿರುವ ಪರಿಸರ ಹೊಂದಿರುವ ಅತ್ಯಾಧುನಿಕ ಮತ್ತು ವಿಶೇಷ ಅಡುಗೆ ಮನೆಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಇಸ್ರೋದ ಮೂವರು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ 7 ದಿನಗಳ ಕಾಲ ಉಳಿದುಕೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಗಗನಯಾನಿಗಳಿಗೆ ಅಗತ್ಯವಾದ ಆಹಾರ ಸಿದ್ಧಪಡಿಸಿಕೊಡುವಂತೆ ಇಸ್ರೋ ಡಿಎಪ್ ಆರ್ ಎಲ್ ಜೊತೆ ಈ ಹಿಂದೆ ಒಪ್ಪಂದ ಮಾಡಿಕೊಂಡಿತ್ತು. 4 ಗಗನಯಾತ್ರಿಗಳಿಗೆ ಸಂಪೂರ್ಣ ಗಗನಯಾನ ಕೈಗೊಳ್ಳುವ ಬಗ್ಗೆ ದೈಹಿಕ, ಮಾನಸಿಕ ತರಬೇತಿ, ತಾಂತ್ರಿಕ ನೈಪುಣ್ಯತೆ, ಸ್ಪೇಸ್ ಕ್ರಾಫ್ಟ್ ನಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ಆರಂಭವಾಗಿದೆ. ಸುರಕ್ಷಿತವಾಗಿ ಬಾಹ್ಯಾಕಾಶದಿಂದ ಭೂಮಿಗೆ ಮರಳುವುದು ಸೇರಿದಂತೆ ಹಲವು ಆಯಾಮಗಳಲ್ಲಿ ಫೆಬ್ರವರಿ 2020ರಿಂದ ರಷ್ಯಾದಲ್ಲಿ 11 ತಿಂಗಳ ತರಬೇತಿ ನಡೆಯುತ್ತಿದೆ.

ರಷ್ಯಾದ ಬಾಹ್ಯಾಕಾಶ ತರಬೇತಿ ಕೇಂದ್ರದಲ್ಲಿನ ಕೃತಕ ಬಾಹ್ಯಕಾಶ ನೌಕೆಯ ಚಿತ್ರ

4 ಗಗನಯಾತ್ರಿಗಳು ಸದ್ಯ ರಷ್ಯಾದ 11 ತಿಂಗಳ ಕಠಿಣ ತರಬೇತಿಯಲ್ಲಿ ತೊಡಗಿದ್ದಾರೆ. ಅವರ ತರಬೇತಿ 2021ರ ಮೊದಲ ತ್ರೈಮಾಸಿಕ ಅವಧಿಯಾದ ಜೂನ್ ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಆನಂತರ ದೇಶದಲ್ಲಿನ ಇಸ್ರೋ ಕೇಂದ್ರದಲ್ಲಿ ಗಗನಯಾನದ ತರಬೇತಿಗೆಂದು ವಿನ್ಯಾಸಗೊಳಿಸಲಾದ ಬಾಹ್ಯಾಕಾಶ ನೌಕೆಯ ಮಾದರಿಯಲ್ಲಿ ಟ್ರೈನಿಂಗ್ ನೀಡಲಾಗುತ್ತದೆ. 2022ಕ್ಕೆ ಮುಂಚಿತವಾಗಿ ಇಸ್ರೋ ಶ್ರೀಹರಿಕೋಟಾ ಉಡಾವಣಾ ಸ್ಥಳದಿಂದ ಭಾರತದ ಅತಿ ಭಾರತದ ರಾಕೇಟ್ ಬಾಹುಬಲಿ ಜಿಎಸ್ಎಲ್ ವಿ- ಮಾರ್ಕ್ 3 ರಾಕೇಟ್ ಮೂಲಕ ಮೂವರು ಗಗನಯಾತ್ರಿಗಳು ಸ್ಪೇಸ್ ಕ್ರಾಫ್ಟ್ ಮೂಲಕ ತೆರಳಲಿದ್ದಾರೆ.

ಗಗನಯಾತ್ರಿಗಳಿಗೆ ಸಂಪೂರ್ಣ ತರಬೇತಿ ನೀಡುವ ಕುರಿತಂತೆ ಇಸ್ರೋ ರಷ್ಯಾದ ಬಾಹ್ಯಾಕಾಶ ಸಂಸ್ಥೆಯ ಜೊತೆ 2019ರ ಜೂನ್ ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದಾದ ಬಳಿಕೆ ಭಾರತದ ನಾಲ್ವರು ಗಗನಯಾತ್ರಿಗಳಿಗೆ ಗಗರಿನ್ ಕಾಸ್ಮೊನಾಟ್ ತರಬೇತಿ ಕೇಂದ್ರ ಸೇರಿದಂತೆ ಹಲವು ಕಡೆಗಳಲ್ಲಿ ಕಠಿಣ ತರಬೇತಿ ನೀಡಲಾಗುತ್ತಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಆಕಾಶ ಸಮರಕ್ಕೆ ಕ್ಯಾಟ್ ವಾರಿಯರ್ ದ್ರೋಣ್

Next Post

ಏರೋ ಶೋ 2021| ಉಕ್ಕಿನ ಹಕ್ಕಿಗಳ ಸುಂದರ ಚಿತ್ರಗಳು

Next Post
ಯಲಹಂಕ ವಾಯುನೆಲೆಯಲ್ಲಿ ವಿವಿಧ ಯುದ್ಧ ವಿಮಾನಗಳು, ಹೆಲಿಕಾಪ್ಟರ್ ಗಳು ನೆಲೆನಿಂತಿರುವ ಚಿತ್ರ

ಏರೋ ಶೋ 2021| ಉಕ್ಕಿನ ಹಕ್ಕಿಗಳ ಸುಂದರ ಚಿತ್ರಗಳು

ಸೂರ್ಯಕಿರಣ- ಸಾರಂಗ್ ಹೆಲಿಕಾಪ್ಟರ್ ಹಾರಾಟ ದೃಶ್ಯ

ನೀಲಾಕಾಶದಲ್ಲಿ ಸಾರಂಗ - ಸೂರ್ಯಕಿರಣ ಮೂಡಿಸಿದೆ ಚಿತ್ತಾರ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d