Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

ಮೈಸೂರಿನಲ್ಲಿ ತಯಾರಾಯಿತು ಇಸ್ರೋ ಗಗನಯಾತ್ರಿಗಳ ಆಹಾರ

by Bengaluru Wire Desk
February 6, 2021
in BW Special, Public interest
Reading Time: 1 min read
0
ಮೈಸೂರು ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದಲ್ಲಿ ಇಸ್ರೋ ಗಗನಯಾನಿಗಳಿಗೆಂದು ಸಿದ್ಧವಾದ ರೆಡಿ-ಟು ಈಟ್ ಆಹಾರ ಪೊಟ್ಟಣಗಳು

ಬೆಂಗಳೂರು : ದೇಶದ ಮೊತ್ತಮೊದಲ ಮಾನವಸಹಿತ ಗಗನಯಾನಕ್ಕೆ ಸಕಲ ಸಿದ್ಧತೆಗಳು ಭರದಿಂದ ಸಾಗಿದೆ. ಈ ನಡುವೆ ಏರೋ ಇಂಡಿಯಾದ ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯ (ಡಿಎಫ್ ಆರ್ ಎಲ್) ದ ಪೆವಿಲಿಯನ್ ನಲ್ಲಿ ಗಗನಯಾನಿಗಳಿಗೆಂದು ರೆಡಿ ಟು ಈಟ್ ನಂತಹ ಸಿದ್ಧಪಡಿಸಿರುವ ತರಹೇವಾರಿ ಆಹಾರವನ್ನು ಪ್ರದರ್ಶನಕ್ಕೆ ಇಟ್ಟಿದೆ.

ಇದೇ ಮೊತ್ತ ಮೊದಲ ಬಾರಿಗೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ)ಯ ಭಾಗವಾಗಿರುವ ಡಿಎಫ್ ಆರ್ ಎಲ್, ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮಹತ್ವದ ಗಗನಯಾನ ಯೋಜನೆಯಲ್ಲಿ ಬಾಹ್ಯಾಕಾಶಕ್ಕೆ ತೆರಳಿಲಿರುವ ಗಗನಯಾತ್ರಿಗಳಿಗೆ ಆಹಾರ ಸಿದ್ಧಪಡಿಸಿಕೊಡಲು ಒಪ್ಪಂದ ಮಾಡಿಕೊಂಡಿದೆ. ಕೋವಿಡ್ ಸೋಂಕು ಹಿನ್ನಲೆಯಲ್ಲಿ ಗಗನಯಾತ್ರೆಯ ನಿಗಧಿತ ಸಮಯ ಬದಲಾವಣೆಯಾಗಿದೆ. ಆದರೂ ಅದಕ್ಕೆ ಸಂಬಂಧಿಸಿದ ಕೆಲಸ ಕಾರ್ಯಗಳು ಸದ್ದಿಲ್ಲದೆ ನಿರಂತರವಾಗಿ ನಡೆಯುತ್ತಿದೆ.

ಮೈಸೂರಿನ ಸಿದ್ಧಾರ್ಥ ನಗರದಲ್ಲಿರುವ ಡಿಎಫ್ ಆರ್ ಎಲ್ ನಲ್ಲಿ ಮಾನವ ಸಹಿತ ಗಗನನೌಕೆಯಲ್ಲಿ ತೆರಳುತ್ತಿರುವ ಮೂವರು ಬಾಹ್ಯಾಕಾಶ ಯಾತ್ರಿಗಳಿಗೆ ಅಗತ್ಯವಾಗಿ ಬೇಕಾಗಿರುವ 35 ರೀತಿಯ ಆಹಾರ ಪದಾರ್ಥಗಳನ್ನು ಸಿದ್ದಪಡಿಸಿದೆ. ಡಿಎಫ್ ಆರ್ ಎಲ್ ಈತನಕ ವಿಶ್ವದ ಅತಿ ಎತ್ತರದ ಪ್ರದೇಶವಾದ ಸಿಯಾಚಿನ್ ನಲ್ಲಿ ಕಾರ್ಯನಿರ್ವಹಿಸುವ ಸೈನಿಕರು, ಅಂಟಾರ್ಟಿಕಾಕ್ಕೆ ಸಂಶೋಧನೆಗೆ ತೆರಳುವ ವಿಜ್ಞಾನಿಗಳು ಹೀಗೆ ವಿವಿಧ ಹವಾಮಾನ ವೈಪರಿತ್ಯದಲ್ಲಿ ಕೆಲಸ ಮಾಡುವವರಿಗೆಗಾಗಿ ವಿಶೇಷವಾಗಿ ಸಿದ್ಧಪಡಿಸಿದ ಆಹಾರವನ್ನು ಕನಿಷ್ಠ 6 ತಿಂಗಳು ಹಾಳಾಗದಂತೆ ಪ್ಯಾಕ್ ಮಾಡಿ ಪೂರೈಕೆ ಮಾಡುತ್ತಿತ್ತು.

ಇಸ್ರೋ ನಿರ್ಮಿತ ಗಗನಯಾನ ನೌಕೆಯ ಮಾದರಿ ಚಿತ್ರ

ಆದರೀಗ ಇಸ್ರೋ ಗಗನಯಾನ ಯೋಜನೆಗೆ ಕನಿಷ್ಠ 1 ವರ್ಷ ಯಾವುದೇ ಪರಿಸ್ಥಿತಿಯಲ್ಲೂ ಆಹಾರ ಕೆಡದಂತೆ, ಪುಡಿಯಾಗದಂತೆ, ತನ್ನ ಪೋಷಕಾಂಶ ಅಂಶವನ್ನು ಕಳೆದುಕೊಳ್ಳದ ರೀತಿಯಲ್ಲಿ ಮೈಸೂರು ಆಹಾರ ಸಂಶೋಧನಾ ಪ್ರಯೋಗಾಲಯ ವಿವಿಧ ರೀತಿಯ ಸಸ್ಯಹಾರಿ ಮತ್ತು ಮಾಂಸಹಾರಿ ಆಹಾರವನ್ನು ತಯಾರು ಮಾಡಿದೆ. ಅದನ್ನು 4 ಪದರಗಳುಳ್ಳ ಪೌಚ್ ನಲ್ಲಿ ಹಾಕಿಟ್ಟು ಪ್ಯಾಕ್ ಮಾಡಿದೆ. ಈ ಪ್ಯಾಂಕಿಗ್ ಪೌಚ್ 120 ಡಿಗ್ರಿ ಉಷ್ಣಾಂಶವನ್ನು ತಡೆದುಕೊಳ್ಳುವ ಸಾಮರ್ಥ್ಯ ಹೊಂದಿದೆ. ಬಾಹ್ಯಾಕಾಶದಲ್ಲಿ ತೆರಳುವ ಆಸ್ಟ್ರೊನಾಟ್ ಗಳಿಗೆ ಹೆಚ್ಚಿನ ಪೋಷಕಾಂಶವುಳ್ಳ, ಸರಿಯಾಗಿ ಜೀರ್ಣವಾಗುವ, ಶಕ್ತಿ ನೀಡುವ ಆಹಾರದ ಅಗತ್ಯವಾಗಿದೆ. ಇಂತಹ 34 ಆಹಾರ ಪದಾರ್ಥಗಳನ್ನು ಮೈಸೂರಿನ ಪ್ರಯೋಗಾಲಯದಲ್ಲಿ ಸಿದ್ದಪಡಿಸಲಾಗಿದೆ ಎಂದು ಡಿಎಫ್ ಆರ್ ಎಲ್ ನಿರ್ದೇಶಕ ಡಾ. ಅನಿಲ್ ದತ್ ಸೇಮವಾಲ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ರಷ್ಯಾದಿಂದ ತರಬೇತಿ ಮುಗಿಸಿ ಭಾರತಕ್ಕೆ ಗಗನಯಾನಿಗಳು ಬಂದಾಗ ಅವರುಗಳಿಗೆ ಡಿಎಫ್ ಆರ್ ಎಲ್ ಸಿದ್ದಪಡಿಸಿರುವ ವಿವಿಧ ರೀತಿಯ ಸಸ್ಯಹಾರಿ ಹಾಗೂ ಮಾಂಸಹಾರಿ ರೆಡಿ- ಟು ಈಟ್ ಆಹಾರವನ್ನು ನೀಡಲಾಗುತ್ತದೆ. ಅದರಲ್ಲಿ ತಮಗೆ ಹೊಂದಿಕೆಯಾಗುವ ಪದಾರ್ಥಗಳನ್ನು ಆಯ್ಕೆ ಮಾಡಿದರೆ ಅವುಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸುತ್ತೇವೆ. ಬಾಹ್ಯಾಕಾಶ ನೌಕೆಯಲ್ಲಿ ಯಾತ್ರೆಯ ಸಂದರ್ಭ ತಿನ್ನುವ ಮುಂಚೆ ಗಗನಯಾತ್ರಿಗಳು ಡಿಎಫ್ ಆರ್ ಎಲ್ ನೀಡಿರುವ ಆಹಾರ ಬಿಸಿಮಾಡುವ ಸಣ್ಣಬಾಕ್ಸ್ ನಲ್ಲಿಟ್ಟರೆ ಸಾಕು10 ನಿಮಿಷದ ಒಳಗೆ ಬಿಸಿಬಿಸಿ ತಿಂಡಿ- ಊಟ ಸಿದ್ಧವಿರುತ್ತೆ ಎಂದು ಹೇಳುತ್ತಾರೆ ಡಾ.ಅನಿಲ್ ದತ್.

ಆಹಾರ ಬಿಸಿ ಮಾಡುವ ಸಣ್ಣ ಬಾಕ್ಸ್

ಮೈಸೂರಿನ ಆಹಾರ ಸಂಶೋಧನಾ ಪ್ರಯೋಗಾಲಯವು ಏರ್ ಶೋ ಪ್ರದರ್ಶನ ಮಳಿಗೆಯಲ್ಲಿ ಪೊಷಕಾಂಶ ಭರಿತ ಮಿಠಾಯಿಗಳು, ಉಪ್ಪಿನಕಾಯಿ, ಟಮೊಟೊ ಸಾಸ್, ವೆಜ್ ಪಲಾವ್, ಚಪಾತಿ, ಪರೋಟ, ದಾಲ್ ಕರಿ, ಅನ್ನ- ಸಾಂಬಾರ್, ಇನ್ ಸ್ಟೆಂಟ್ ಕಾಫಿ, 250 ಮಿ.ಲಿ ಕುಡಿಯುವ ನೀರು ಸೇರಿದಂತೆ ಹಲವು ಪದಾರ್ಥಗಳನ್ನು ಪ್ರದರ್ಶನಕ್ಕೆ ಇಟ್ಟಿದೆ. ಈ ಪದಾರ್ಥಗಳನ್ನು ಶುದ್ಧ ವಾತಾವರಣದಲ್ಲಿ, ಧನಾತ್ಮಕ ಒತ್ತಡವಿರುವ ಪರಿಸರ ಹೊಂದಿರುವ ಅತ್ಯಾಧುನಿಕ ಮತ್ತು ವಿಶೇಷ ಅಡುಗೆ ಮನೆಯಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಇಸ್ರೋದ ಮೂವರು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ 7 ದಿನಗಳ ಕಾಲ ಉಳಿದುಕೊಳ್ಳಲಿದ್ದಾರೆ. ಈ ಹಿನ್ನಲೆಯಲ್ಲಿ ಗಗನಯಾನಿಗಳಿಗೆ ಅಗತ್ಯವಾದ ಆಹಾರ ಸಿದ್ಧಪಡಿಸಿಕೊಡುವಂತೆ ಇಸ್ರೋ ಡಿಎಪ್ ಆರ್ ಎಲ್ ಜೊತೆ ಈ ಹಿಂದೆ ಒಪ್ಪಂದ ಮಾಡಿಕೊಂಡಿತ್ತು. 4 ಗಗನಯಾತ್ರಿಗಳಿಗೆ ಸಂಪೂರ್ಣ ಗಗನಯಾನ ಕೈಗೊಳ್ಳುವ ಬಗ್ಗೆ ದೈಹಿಕ, ಮಾನಸಿಕ ತರಬೇತಿ, ತಾಂತ್ರಿಕ ನೈಪುಣ್ಯತೆ, ಸ್ಪೇಸ್ ಕ್ರಾಫ್ಟ್ ನಲ್ಲಿ ಕಾರ್ಯನಿರ್ವಹಿಸುವ ಬಗ್ಗೆ ತರಬೇತಿ ಆರಂಭವಾಗಿದೆ. ಸುರಕ್ಷಿತವಾಗಿ ಬಾಹ್ಯಾಕಾಶದಿಂದ ಭೂಮಿಗೆ ಮರಳುವುದು ಸೇರಿದಂತೆ ಹಲವು ಆಯಾಮಗಳಲ್ಲಿ ಫೆಬ್ರವರಿ 2020ರಿಂದ ರಷ್ಯಾದಲ್ಲಿ 11 ತಿಂಗಳ ತರಬೇತಿ ನಡೆಯುತ್ತಿದೆ.

ರಷ್ಯಾದ ಬಾಹ್ಯಾಕಾಶ ತರಬೇತಿ ಕೇಂದ್ರದಲ್ಲಿನ ಕೃತಕ ಬಾಹ್ಯಕಾಶ ನೌಕೆಯ ಚಿತ್ರ

4 ಗಗನಯಾತ್ರಿಗಳು ಸದ್ಯ ರಷ್ಯಾದ 11 ತಿಂಗಳ ಕಠಿಣ ತರಬೇತಿಯಲ್ಲಿ ತೊಡಗಿದ್ದಾರೆ. ಅವರ ತರಬೇತಿ 2021ರ ಮೊದಲ ತ್ರೈಮಾಸಿಕ ಅವಧಿಯಾದ ಜೂನ್ ನಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಆನಂತರ ದೇಶದಲ್ಲಿನ ಇಸ್ರೋ ಕೇಂದ್ರದಲ್ಲಿ ಗಗನಯಾನದ ತರಬೇತಿಗೆಂದು ವಿನ್ಯಾಸಗೊಳಿಸಲಾದ ಬಾಹ್ಯಾಕಾಶ ನೌಕೆಯ ಮಾದರಿಯಲ್ಲಿ ಟ್ರೈನಿಂಗ್ ನೀಡಲಾಗುತ್ತದೆ. 2022ಕ್ಕೆ ಮುಂಚಿತವಾಗಿ ಇಸ್ರೋ ಶ್ರೀಹರಿಕೋಟಾ ಉಡಾವಣಾ ಸ್ಥಳದಿಂದ ಭಾರತದ ಅತಿ ಭಾರತದ ರಾಕೇಟ್ ಬಾಹುಬಲಿ ಜಿಎಸ್ಎಲ್ ವಿ- ಮಾರ್ಕ್ 3 ರಾಕೇಟ್ ಮೂಲಕ ಮೂವರು ಗಗನಯಾತ್ರಿಗಳು ಸ್ಪೇಸ್ ಕ್ರಾಫ್ಟ್ ಮೂಲಕ ತೆರಳಲಿದ್ದಾರೆ.

ಗಗನಯಾತ್ರಿಗಳಿಗೆ ಸಂಪೂರ್ಣ ತರಬೇತಿ ನೀಡುವ ಕುರಿತಂತೆ ಇಸ್ರೋ ರಷ್ಯಾದ ಬಾಹ್ಯಾಕಾಶ ಸಂಸ್ಥೆಯ ಜೊತೆ 2019ರ ಜೂನ್ ನಲ್ಲಿ ಒಪ್ಪಂದಕ್ಕೆ ಸಹಿ ಹಾಕಿತ್ತು. ಇದಾದ ಬಳಿಕೆ ಭಾರತದ ನಾಲ್ವರು ಗಗನಯಾತ್ರಿಗಳಿಗೆ ಗಗರಿನ್ ಕಾಸ್ಮೊನಾಟ್ ತರಬೇತಿ ಕೇಂದ್ರ ಸೇರಿದಂತೆ ಹಲವು ಕಡೆಗಳಲ್ಲಿ ಕಠಿಣ ತರಬೇತಿ ನೀಡಲಾಗುತ್ತಿದೆ.

WhatsApp Join our WhatsApp Channel
Previous Post

ಆಕಾಶ ಸಮರಕ್ಕೆ ಕ್ಯಾಟ್ ವಾರಿಯರ್ ದ್ರೋಣ್

Next Post

ಏರೋ ಶೋ 2021| ಉಕ್ಕಿನ ಹಕ್ಕಿಗಳ ಸುಂದರ ಚಿತ್ರಗಳು

Next Post
ಯಲಹಂಕ ವಾಯುನೆಲೆಯಲ್ಲಿ ವಿವಿಧ ಯುದ್ಧ ವಿಮಾನಗಳು, ಹೆಲಿಕಾಪ್ಟರ್ ಗಳು ನೆಲೆನಿಂತಿರುವ ಚಿತ್ರ

ಏರೋ ಶೋ 2021| ಉಕ್ಕಿನ ಹಕ್ಕಿಗಳ ಸುಂದರ ಚಿತ್ರಗಳು

ಸೂರ್ಯಕಿರಣ- ಸಾರಂಗ್ ಹೆಲಿಕಾಪ್ಟರ್ ಹಾರಾಟ ದೃಶ್ಯ

ನೀಲಾಕಾಶದಲ್ಲಿ ಸಾರಂಗ - ಸೂರ್ಯಕಿರಣ ಮೂಡಿಸಿದೆ ಚಿತ್ತಾರ

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group