Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಬಿಎಂಪಿ- 2020ರ ಬಜೆಟ್ ಅನುಷ್ಠಾನ ಆಗಿದ್ದು ಎಷ್ಟು ಗೊತ್ತಾ?

ಅಭಿವೃದ್ಧಿಯಿಲ್ಲದೆ ಸೊರಗುತ್ತಿದೆ ಬೆಂಗಳೂರು | ಬಜೆಟ್ ಅನುಷ್ಠಾನ ವೈಫಲ್ಯಕ್ಕೆ ಕೋವಿಡ್ ಸೋಂಕಿನ ದೂಷಣೆ

by Bengaluru Wire Desk
February 16, 2021
in Bengaluru Focus, BW Special
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು : ಬೃಹತ್ ಬೆಂಗಳೂರಿನ 2020-21ನೇ ಸಾಲಿನ ಬಜೆಟ್ ಅನುಷ್ಠಾನ ಶೇ.20ರಷ್ಟು ಆಗಿಲ್ಲ. ಇದಕ್ಕೆ ಪಾಲಿಕೆ ಅಧಿಕಾರಿಗಳು ಕೊಡ್ತಿರೋ ರೆಡಿಮೇಡ್ ಉತ್ತರ ಅಂದರೆ ಅದು ಕೋವಿಡ್ ಸೋಂಕು.

2020-21ನೇ ಸಾಲಿನ 10,899 ಕೋಟಿ ರೂಪಾಯಿ ಮೊತ್ತದ ಬಜೆಟ್ ಅನ್ನು ಹಿಂದಿನ ಮೇಯರ್ ಗೌತಮ್ ಕುಮಾರ್ 2020 ಏಪ್ರಿಲ್ 24 ರಂದು ಮಂಡಿಸಿದ್ದರು. ಆದರೆ ಅದಾದ ಎರಡೇ ದಿನಕ್ಕೆ ಬಜೆಟ್ ಗಾತ್ರ ಏಕಾಏಕಿ 10,716 ಕೋಟಿ ರೂಪಾಯಿ ಮೊತ್ತಕ್ಕೆ ಕುಸಿಯಿತು. ಅದಾದ ಬಳಿಕ ದೇಶವ್ಯಾಪಿ ಕೋವಿಡ್ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೇರಿದ ನಿರಂತರ ಲಾಕ್ ಡೌನ್, ಕೋವಿಡ್ ನಿಯಂತ್ರಣದ ನಿಯಮಾವಳಿಗಳಿಂದ ಪಾಲಿಕೆ ಆರ್ಥಿಕ ಸಂಪನ್ಮೂಲ ಒಂದು ಕಡೆ ಕುಸಿಯಿತು. ಮತ್ತೊಂದು ಕಡೆ ಪಾಲಿಕೆ ಬಜೆಟ್ ನಲ್ಲಿ ಪ್ರಸ್ತಾಪಿಸಿದ ಶೇಕಡ 20ರಷ್ಟು ಅಂಶಗಳೂ ಆರ್ಥಿಕ ವರ್ಷ ಪೂರ್ಣಗೊಳ್ಳಲು ಇನ್ನು ಕೇವಲ ಒಂದೂವರೆ ತಿಂಗಳಿಗಿಂತ ಕಡಿಮೆ ಅವಧಿಯಿದ್ದರೂ ಅನುಷ್ಠಾನಕ್ಕೆ ಬಂದಿಲ್ಲ.

 ಪ್ರತಿ ಬಾರಿ ಆಡಳಿತ ನಡೆಸುವ ಪಕ್ಷಗಳು ಬಜೆಟ್ ಮಂಡಿಸುವಾಗಲೂ ನಾವು ವಾಸ್ತವಿಕ ಬಜೆಟ್ ಮಂಡಿಸುತ್ತೇವೆ ಅಂತಾನೆ ಹೇಳುತ್ತಾರೆ. ಆದರೆ ಪಾಲಿಕೆಯ ಆರ್ಥಿಕ ಸಂಪನ್ಮೂಲಕ್ಕಿಂತ ಹೆಚ್ಚಿನ ಬಜೆಟ್ ಮಂಡಿಸಿ ಸಂಪೂರ್ಣವಾಗಿ ಆಯವ್ಯಯ ಮಂಡನೆಯಾದ ಉದಾಹರಣೆಯೇ ಇಲ್ಲ.

ಬಜೆಟ್ ನಲ್ಲಿ ಹೇಳಿದ್ದೊಂದು ಆಗಿದ್ದೊಂದು :

ನಗರದಲ್ಲಿರುವ 19 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ ಲಕ್ಷಾಂತರ ಆಸ್ತಿಗಳು ಬಿ-ಖಾತಾ ಇರುವಂತದ್ದೇ. ಅವುಗಳನ್ನು ಸರ್ಕಾರದ ಅನುಮೋದನೆ ಪಡೆದು ಎ-ಖಾತೆಗಳಾಗಿ ಪರಿವರ್ತನೆ ಮಾಡೋದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಕಾರ್ಯರೂಪಕ್ಕೆ ಬರಲಿಲ್ಲ. ಆದರೆ ಪಾಲಿಕೆ ಕಂದಾಯ ಅಧಿಕಾರಿಗಳು ಅದರಲ್ಲೂ ಹೊಸ ವಲಯ ವ್ಯಾಪ್ತಿಯಲ್ಲಿರುವ ಅಧಿಕಾರಿಗಳು ಲಂಚದ ಹಣ ಪಡೆದು ದುಡ್ಡಿನ ಆಸೆಗೆ ಅನಧಿಕೃತವಾಗಿ ಬಿ- ಖಾತಾ ಆಸ್ತಿಗಳಿಗೆ ಎ- ಖಾತಾ ಮಾಡಿಕೊಡುತ್ತಿದ್ದಾರೆ ಎಂಬ ಸಾಕಷ್ಟು ಆರೋಪಗಳು ಕೇಳಿಬಂದಿದೆ. ಬಾಕಿ ಸುಧಾರಣಾ ಶುಲ್ಕ ಅಂದಾಜು 300 ಕೋಟಿ ರೂಪಾಯಿ ವಸೂಲು ಮಾಡುವುದಾಗಿ ತಿಳಿಸಲಾಗಿತ್ತು. ಆ ಕಡೆಯೂ ಪಾಲಿಕೆ ಅಧಿಕಾರಿಗಳು ಗಮನ ಹರಿಸಲಿಲ್ಲ. ಮೂಲಭೂತ ಸೌಕರ್ಯ, ರಸ್ತೆ ನಿರ್ವಹಣೆ, ಕೆರೆ ಅಭಿವೃದ್ಧಿ, ಉದ್ಯಾನವನ ಅಭಿವೃದ್ಧಿ ಕಾರ್ಯಕ್ರಮಗಳು ಸೂಕ್ತ ರೀತಿ ಜಾರಿಯಾಗಿಲ್ಲ.

ನೆಲಕಚ್ಚಿದ ಕಲ್ಯಾಣ ಕಾರ್ಯಕ್ರಮಗಳು :

ಪಾಲಿಕೆ ವ್ಯಾಪ್ತಿಯಲ್ಲಿರುವ 198 ವಾರ್ಡ್ ಗಳಲ್ಲಿ ಶೇ.24.10 ಅನುದಾನದ ಕಲ್ಯಾಣ ಕಾರ್ಯಕ್ರಮಗಳು ಸೇರಿದಂತೆ ಕಲ್ಯಾಣ ಇಲಾಖೆಯಲ್ಲಿ 1,025 ಕೋಟಿ ರೂಪಾಯಿ ವೆಚ್ಚ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ವಾಸ್ತವವಾಗಿ ಶೇಕಡ 20ರಷ್ಟು ಹಣವನ್ನು ಕರ್ಚುಮಾಡಿಲ್ಲ. ವಾರ್ಡ್ ನಲ್ಲಿ ಅಂಗವಿಕಲರಿಗೆ ಸೈಕಲ್ ವಿತರಣೆ, ಬಡ ಮಹಿಳೆಯರಿಗೆ ಟೈಲರಿಂಗ್ ಮಿಷಿನ್ ವಿತರಣೆ, ಒಂಟಿಮನೆ ಹೀಗೆ ಕಲ್ಯಾಣ ಕಾರ್ಯಕ್ರಮಗಳು ಯಾವುದೂ ಅನುಷ್ಠಾನವಾಗಿಲ್ಲ. ವಾರ್ಡ್ ಪ್ರಾಗ್ರಾಮ್ ಆಫ್ ವರ್ಕ್ಸ ಕೆಲಸಗಳು ಕೇವಲ ಬುಕ್ ನಲ್ಲೇ ಉಳಿದಿದೆ.

ಮೇಯರ್ ವೈದ್ಯಕೀಯ ಪರಿಹಾರ ನಿಧಿ ಅರ್ಜಿಗಳಿಗೆ ತ್ರಿಶಂಕು ಸ್ಥಿತಿ :

2020-21ರ ಬಜೆಟ್ ಮಂಡಿಸಿದ ಹಿಂದಿನ ಮೇಯರ್ ಗೌತಮ್ ಕುಮಾರ್ ಹಾಗೂ ಆಗಿದ್ದ ಕಮಿಷನರ್ ಸುನಿಲ್ ಕುಮಾರ್ ನಡುವಿನ ಶೀಥಲ ಸಮರದಿಂದಾಗಿ ಮೇಯರ್ ನಿಧಿಯಿಂದ ವೈದ್ಯಕೀಯ ಪರಿಹಾರ ನೀಡುವ ಕಡತಗಳು ವಿಲೇವಾರಿಯಾಗಲಿಲ್ಲ. ಆನಂತರ ಮೇಯರ್ ಅವಧಿ ಹಾಗೂ ಕಾರ್ಪೊರೇಟರ್ ಗಳ ಅವಧಿ ಪೂರ್ಣಗೊಂಡ ಬಳಿಕ ಕ್ಯಾನ್ಸರ್, ಕಿಡ್ನಿ ಕಾಯಿಲೆ ಯಂತಹ ಗಂಭೀರ ಆರೋಗ್ಯ ಸಮಸ್ಯೆಯಿಂದ ನರಳುವವರ ಚಿಕಿತ್ಸೆಗಾಗಿ ಸಲ್ಲಿಸಿದ್ದ 3 ರಿಂದ 4 ಕೋಟಿ ರೂಪಾಯಿ ಮೊತ್ತದ ಸಾವಿರಾರು ಅರ್ಜಿಗಳು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗುವ ಹಂತಕ್ಕೆ ಬಂದಿತ್ತು. ಜನಪ್ರತಿನಿಧಿಗಳ ಅವಧಿ ಮುಗಿದ ಹಿನ್ನಲೆಯಲ್ಲಿ ಪಾಲಿಕೆ ಆಯುಕ್ತರು ಹಣ ಬಿಡುಗಡೆಗೆ ತಡೆ ನೀಡಿದ್ದರು. ಹೀಗಾಗಿ ಆ ಹಣವೂ ಅನಾರೋಗ್ಯ ಪೀಡಿತರಿಗೆ ಬಿಡುಗಡೆಯಾಗಿಲ್ಲ.

ಬಜೆಟ್ ಅನುಷ್ಠಾನಕ್ಕೆ ನಿರ್ಲಕ್ಷ್ಯ :

ಈ ಬಗ್ಗೆ ಬೆಂಗಳೂರು ವೈರ್ ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್ ಪದ್ಮಾವತಿ, ಬಿಬಿಎಂಪಿಯಲ್ಲಿ ಸಾಮಾನ್ಯವಾಗಿ ಪ್ರತಿವರ್ಷ ಶೇಕಡ 40 ರಿಂದ 45ರಷ್ಟು ಬಜೆಟ್ ಅನುಷ್ಠಾನಕ್ಕೆ ಬರುತ್ತಿತ್ತು. 2020ರಲ್ಲಿ ಕೋವಿಡ್ ಸೋಂಕು ಕಂಡುಬಂದ ಕಾರಣ ಹಾಗೂ ಜನಪ್ರತಿನಿಧಿಗಳ ಆಡಳಿತ ಮುಗಿದ ಹಿನ್ನಲೆಯಲ್ಲಿ ಅಧಿಕಾರಿಗಳು ಬಜೆಟ್ ಅನುಷ್ಠಾನಕ್ಕೆ ಹೆಚ್ಚು ಗಮನ ನೀಡಿಲ್ಲ.

ಹಾಗಾಗಿ ಪಾಲಿಕೆಯಲ್ಲಿ ಈ ಬಾರಿ ಶೇ.15ರಿಂದ 20ರಷ್ಟು ಆಯವ್ಯಯದ ಕಾರ್ಯಕ್ರಮಗಳು ಜಾರಿಗೆ ಬಂದಿಲ್ಲ. ಈಗ ರಾಜ್ಯ ಸರ್ಕಾರ ಬಿಬಿಎಂಪಿ ಕಾಯ್ದೆ-2020 ಅನುಷ್ಠಾನಕ್ಕೆ ತಂದು ಕೌನ್ಸಿಲರ್ ಗಳ ಅಧಿಕಾರವನ್ನು ಕಿತ್ತುಕೊಂಡಿದೆ. ಪಾಲಿಕೆ ಚುನಾವಣೆ ನಡೆಸಲು ಬೆಂಗಳೂರು ಶಾಸಕರ ಒತ್ತಡದ ಕಾರಣ ರಾಜ್ಯ ಸರ್ಕಾರ ಒಂದಲ್ಲಾ ಒಂದು ಕುಂಟುನೆಪ ಹೇಳುತ್ತಿದೆ. ಹೀಗಾದ್ರೆ ಬೆಂಗಳೂರಿನ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯೋದಾದ್ರು ಹೇಗೆ? ಎಂದು ಮಾಜಿ ಮೇಯರ್ ಪದ್ಮಾವತಿ ಬೇಸರ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರರಿಗೆ ಮೊದಲು ಕಾಮಗಾರಿ ಪೂರ್ಣಗೊಳಿಸಿದ ಒಂದೂವರೆ ವರ್ಷದ ಒಳಗೆ ಪಾಲಿಕೆಯಿಂದ ಹಣ ಪಾವತಿಯಾಗುತ್ತಿತ್ತು. ಈಗ ಆ ಅವಧಿ 28 ತಿಂಗಳಿಗೆ ಏರಿಕೆಯಾಗಿದೆ. ಹೊಸ ಯೋಜನೆಗಳು ಕಾರ್ಯಗತವಾಗಲಿಲ್ಲ. ಕೋವಿಡ್ ಕಿಟ್ ಹಗರಣವೇ ಸಾಧನೆಯಾಯಿತು. 110 ಹಳ್ಳಿಗಳಿಗೆ ಅಗತ್ಯ ಸೌಕರ್ಯ ಕಲ್ಪಿಸುವಲ್ಲಿ ಪಾಲಿಕೆ ಆಡಳಿತ ಎಡವಿತು. ಕಸದ ಗುತ್ತಿಗೆದಾರರಿಗೆ ಆರೇಳು ತಿಂಗಳ ಹಣ ಪಾವತಿಯಾಗಿಲ್ಲ. ಆಡಳಿತಗಾರರು ಬಂದ ಮೇಲಂತೂ ಹಲವು ಕಾರ್ಯಕ್ರಮಗಳಿಗೆ ವರ್ಕ್ ಕೋಡ್ ನೀಡುವುದನ್ನೇ ನಿಲ್ಲಿಸಿದ್ದಾರೆ. ಒಟ್ಟಾರೆ 2021ರ ಬಜೆಟ್ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದ್ದಾರೆ ವಿರೋಧ ಪಕ್ಷದ ಮಾಜಿ ನಾಯಕ ಶಿವರಾಜ್.

2021-22ರಲ್ಲಿ ವಾಸ್ತವಿಕ ಬಜೆಟ್ ಗೆ ಒತ್ತು :

ಈ ಬಾರಿ ಕೌನ್ಸಿಲರ್ ಗಳ ಬದಲಿಗೆ ಅಧಿಕಾರಿಗಳ ಬಳಿ ಪಾಲಿಕೆ ಆಡಳಿತ ಇರುವುದರಿಂದ ಪಾಲಿಕೆ ಆದಾಯಕ್ಕೆ ತಕ್ಕಂತೆ 2021-22ರ ಆಯವ್ಯಯ ಮಂಡಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆಡಳಿತಗಾರರಾದ ಗೌರವ್ ಗುಪ್ತಾ ಹಾಗೂ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ಹಲವು ಬಜೆಟ್ ಪೂರ್ವ ಚರ್ಚೆಗಳು ನಡೆಯುತ್ತಿದೆ. ಪಾಲಿಕೆಯಲ್ಲಿ ಆರ್ಥಿಕ ಶಿಸ್ತಿನ ಜಪ ಮಾಡುತ್ತಿರುವ ಮಂಜುನಾಥ್ ಪ್ರಸಾದ್ ಈ ಬಾರಿ ಶತಾಯ ಗತಾಯ 7 ಸಾವಿರ ಕೋಟಿ ರೂಪಾಯಿ ಒಳಗೆ ಬಜೆಟ್ ಮಂಡಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

2021-22ರಲ್ಲಿ 7 ಸಾವಿರ ಕೋಟಿ ರೂ. ಮೀರದ ಬಜೆಟ್ ಮಂಡನೆ ನಿರೀಕ್ಷೆ :

2020-21ರ ಬಜೆಟ್ ಅನುಷ್ಠಾನ ಹಾಗೂ 2021-2022ರ ಹೊಸ ಆಯವ್ಯಯ ಮಂಡನೆ ಕುರಿತಂತೆ ಬಿಬಿಎಂಪಿ ವಿಶೇಷ ಹಣಕಾಸು ಆಯುಕ್ತರಾದ ತುಳಸಿ ಮದ್ದಿಮನಿ, ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಪಾಲಿಕೆಯ ಅಧಿಕಾರಿಗಳನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಆರ್ಥಿಕ ಸಂಕಷ್ಠ ಸೇರಿದಂತೆ ಮೊದಲಾದ ಕಾರಣಗಳಿಂದ 2020-21ನೇ ಸಾಲಿನಲ್ಲಿ ಈ ತನಕ ಶೇಕಡ 25ರಷ್ಟು ಬಜೆಟ್ ಅನುಷ್ಠಾನವಾಗಿದೆ. 2021-22ನೇ ಸಾಲಿನಲ್ಲಿ ಪಾಲಿಕೆಯ ಆದಾಯ 5 ರಿಂದ 6 ಸಾವಿರ ಕೋಟಿ ರೂಪಾಯಿಯಿದ್ದು, 7 ಸಾವಿರ ಕೋಟಿ ರೂಪಾಯಿಗಳಿಗೆ ಮೀರದಂತೆ ಬಜೆಟ್ ಮಂಡಿಸುವ ಸಾಧ್ಯತೆಯಿದೆ ಎಂದು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಪಾಲಿಕೆ ಚುನಾವಣೆ ಮುಂದೂಡಿಕೆಗೆ ಮುಂದುವರೆದ ತಂತ್ರ :

ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಭರದಿಂದ ಪೂರ್ವಸಿದ್ಧತೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಪಾಲಿಕೆಯಲ್ಲೂ ರಾಜ್ಯ ಸರ್ಕಾರದ ಆಯವ್ಯಯದ ನಂತರ ಬಜೆಟ್ ಮಂಡಿಸಲು ತೆರೆಮರೆಯ ಕಸರತ್ತು ನಡೆಯುತ್ತಿದೆ. ಪಾಲಿಕೆಯಲ್ಲಿ ಕೌನ್ಸಿಲರ್ ಗಳು ಇಲ್ಲದ ಕಾರಣ ಅಧಿಕಾರಿಗಳ ಮೂಲಕ ಪರೋಕ್ಷವಾಗಿ ಆಡಳಿತ ನಡೆಸಲು ಬೆಂಗಳೂರು ಶಾಸಕರು ಒಂದಾಗಿ ರಾಜ್ಯ ಹಾಗೂ ಪಾಲಿಕೆ ಬಜೆಟ್ ನಲ್ಲಿ ತಮಗೆ ಬೇಕಾದಂತೆ ಯೋಜನೆಗಳಿಗೆ ಹಣ ಮೀಸಲಿಡಲು ಪ್ರಭಾವ ಬೀರುತ್ತಿದ್ದಾರೆ ಎಂದು ಗೊತ್ತಾಗಿದೆ. ಪಾಲಿಕೆ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರದ ಮೂಲಕ, ಸುಪ್ರೀಂಕೋರ್ಟ್ ನಲ್ಲಿ ಈಗಾಗಲೇ ಇರುವ ಪ್ರಕರಣದಲ್ಲಿ 243 ವಾರ್ಡ್ ಪುನರ್ ವಿಂಗಡಣೆ ಹಾಗೂ 2021ರ ಜನಗಣತಿ ಕಾರ್ಯಕ್ರಮದ ಕಾರಣ ನೀಡಿ, ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.   

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಕೋವಿಡ್ ಅವಧಿಯ ಕಡತಗಳ ವಿಲೇವಾರಿಗೆ ಶೀಘ್ರದಲ್ಲೇ ಕಡತಯಙ್ಞ ಕಾರ್ಯಕ್ರಮ ; ನೂತನ ಜಿಲ್ಲಾಧಿಕಾರಿ ಜೆ.ಮಂಜುನಾಥ್

Next Post

ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಟ್ರೀ-ಪಾರ್ಕ್ ಯೋಜನೆ ತಾತ್ಕಾಲಿಕ ಸ್ಥಗಿತ ; ಅರಣ್ಯ ಸಚಿವ ಅರವಿಂದ ಲಿಂಬಾವಳಿ

Next Post

ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಟ್ರೀ-ಪಾರ್ಕ್ ಯೋಜನೆ ತಾತ್ಕಾಲಿಕ ಸ್ಥಗಿತ ; ಅರಣ್ಯ ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರಿನ ಮಗ್ಗುಲಲ್ಲೇ ಬೃಹತ್ ಬಂಡೆಗಳ ಬ್ಲಾಸ್ಟಿಂಗ್ : ಘಟನೆಯಲ್ಲಿ ಓರ್ವ ವ್ಯಕ್ತಿಯ ತಲೆಗೆ ಗಾಯ – ಅನಾಥಾಶ್ರಮ ಮೇಲ್ಛಾವಣಿ ಜಖಂ

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d