Friday, July 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

    ಉಡುಪಿಯ ಕೋಟದಲ್ಲಿ ಸರ್ವರ್ ಸಮಸ್ಯೆಯಿಂದ ಸಾಲಿನಲ್ಲಿ ನಿಂತರೂ ಪಡಿತರ ಪಡೆಯಲು ಆಗದೆ ಅಸಹಾಯಕರಾಗಿ ನಿಂತ ಪಡಿತರ ಚೀಟಿದಾರರು

    Lokayukta News | ರಾಜ್ಯದ ಪಡಿತರ ವಿತರಣೆಯಲ್ಲಿ ಭಾರೀ ಅಕ್ರಮ: ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ

    Central Election Commission | ಚುನಾವಣಾ ಆಯೋಗದಿಂದ ಅಖಿಲ ಭಾರತ ಮಾಧ್ಯಮ ಸಮ್ಮೇಳನ: ಪಾರದರ್ಶಕತೆಗೆ ‘ಇಸಿಐನೆಟ್’ ಮತ್ತು 100% ವೆಬ್‌ಕಾಸ್ಟಿಂಗ್‌ಗೆ ಒತ್ತು

  • Bengaluru Focus

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ಫುಟ್‌ಪಾತ್‌ ಮೇಲೆ ವಾಹನ ಚಲಾಯಿಸಿದರೆ ₹5,000 ದಂಡ ಏರಿಕೆ ಮಾಡಿ, ನಿಯಮ ಬಿಗಿಗೊಳಿಸಲು ಸಚಿವ ಕೃಷ್ಣ ಬೈರೇಗೌಡ ಪತ್ರ

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

    ಬೆಂಗಳೂರು ವೈರ್ ರಿಯಾಲಿಟಿ ಚೆಕ್ ವರದಿ ಹಿನ್ನಲೆ: ಶಿವಾಜಿನಗರ ಪಾದಾಚಾರಿ ಮಾರ್ಗ ಒತ್ತುವರಿ ತೆರವು: ಪಾಲಿಕೆ ಅಧಿಕಾರಿಗಳ ಮೇಲೆ ಪುಂಡರ ಅಟ್ಯಾಕ್ ಅಕ್ಷಮ್ಯ!!

    Namma Metro Green Train

    Namma Metro News | ನಮ್ಮ ಮೆಟ್ರೋ ಹಸಿರು ಮಾರ್ಗ: ವಿದ್ಯುತ್ ವ್ಯತ್ಯಯ ಸರಿಪಡಿಸಿದ ಬೆನ್ನಲ್ಲೇ ಸೇವೆ ಪುನರಾರಂಭ

    BWSSB News | ಬೆಂಗಳೂರಿನ ಈ ಪ್ರಮುಖ ಪ್ರದೇಶಗಳಲ್ಲಿ ಬುಧವಾರ ಕಾವೇರಿ ನೀರು ಇರಲ್ಲ

    ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಶಾಸಕರ ಸಮಿತಿ ರಚನೆ, ವಿಮಾನ ನಿಲ್ದಾಣಗಳಲ್ಲಿ ಎಬೋಲಾ ಸ್ಕ್ರೀನಿಂಗ್: ಸಚಿವ ಯು.ಟಿ. ಖಾದರ್

    ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ: ಕೇಂದ್ರದ ಸಿಜಿಹೆಚ್ಎಸ್ (CGHS) ಪರಿಷ್ಕೃತ ದರಗಳ ಅಳವಡಿಕೆಗೆ ರಾಜ್ಯ ಸರ್ಕಾರ ಆದೇಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಬಿಎಂಪಿ- 2020ರ ಬಜೆಟ್ ಅನುಷ್ಠಾನ ಆಗಿದ್ದು ಎಷ್ಟು ಗೊತ್ತಾ?

ಅಭಿವೃದ್ಧಿಯಿಲ್ಲದೆ ಸೊರಗುತ್ತಿದೆ ಬೆಂಗಳೂರು | ಬಜೆಟ್ ಅನುಷ್ಠಾನ ವೈಫಲ್ಯಕ್ಕೆ ಕೋವಿಡ್ ಸೋಂಕಿನ ದೂಷಣೆ

by Bengaluru Wire Desk
February 16, 2021
in Bengaluru Focus, BW Special
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು : ಬೃಹತ್ ಬೆಂಗಳೂರಿನ 2020-21ನೇ ಸಾಲಿನ ಬಜೆಟ್ ಅನುಷ್ಠಾನ ಶೇ.20ರಷ್ಟು ಆಗಿಲ್ಲ. ಇದಕ್ಕೆ ಪಾಲಿಕೆ ಅಧಿಕಾರಿಗಳು ಕೊಡ್ತಿರೋ ರೆಡಿಮೇಡ್ ಉತ್ತರ ಅಂದರೆ ಅದು ಕೋವಿಡ್ ಸೋಂಕು.

2020-21ನೇ ಸಾಲಿನ 10,899 ಕೋಟಿ ರೂಪಾಯಿ ಮೊತ್ತದ ಬಜೆಟ್ ಅನ್ನು ಹಿಂದಿನ ಮೇಯರ್ ಗೌತಮ್ ಕುಮಾರ್ 2020 ಏಪ್ರಿಲ್ 24 ರಂದು ಮಂಡಿಸಿದ್ದರು. ಆದರೆ ಅದಾದ ಎರಡೇ ದಿನಕ್ಕೆ ಬಜೆಟ್ ಗಾತ್ರ ಏಕಾಏಕಿ 10,716 ಕೋಟಿ ರೂಪಾಯಿ ಮೊತ್ತಕ್ಕೆ ಕುಸಿಯಿತು. ಅದಾದ ಬಳಿಕ ದೇಶವ್ಯಾಪಿ ಕೋವಿಡ್ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹೇರಿದ ನಿರಂತರ ಲಾಕ್ ಡೌನ್, ಕೋವಿಡ್ ನಿಯಂತ್ರಣದ ನಿಯಮಾವಳಿಗಳಿಂದ ಪಾಲಿಕೆ ಆರ್ಥಿಕ ಸಂಪನ್ಮೂಲ ಒಂದು ಕಡೆ ಕುಸಿಯಿತು. ಮತ್ತೊಂದು ಕಡೆ ಪಾಲಿಕೆ ಬಜೆಟ್ ನಲ್ಲಿ ಪ್ರಸ್ತಾಪಿಸಿದ ಶೇಕಡ 20ರಷ್ಟು ಅಂಶಗಳೂ ಆರ್ಥಿಕ ವರ್ಷ ಪೂರ್ಣಗೊಳ್ಳಲು ಇನ್ನು ಕೇವಲ ಒಂದೂವರೆ ತಿಂಗಳಿಗಿಂತ ಕಡಿಮೆ ಅವಧಿಯಿದ್ದರೂ ಅನುಷ್ಠಾನಕ್ಕೆ ಬಂದಿಲ್ಲ.

 ಪ್ರತಿ ಬಾರಿ ಆಡಳಿತ ನಡೆಸುವ ಪಕ್ಷಗಳು ಬಜೆಟ್ ಮಂಡಿಸುವಾಗಲೂ ನಾವು ವಾಸ್ತವಿಕ ಬಜೆಟ್ ಮಂಡಿಸುತ್ತೇವೆ ಅಂತಾನೆ ಹೇಳುತ್ತಾರೆ. ಆದರೆ ಪಾಲಿಕೆಯ ಆರ್ಥಿಕ ಸಂಪನ್ಮೂಲಕ್ಕಿಂತ ಹೆಚ್ಚಿನ ಬಜೆಟ್ ಮಂಡಿಸಿ ಸಂಪೂರ್ಣವಾಗಿ ಆಯವ್ಯಯ ಮಂಡನೆಯಾದ ಉದಾಹರಣೆಯೇ ಇಲ್ಲ.

ಬಜೆಟ್ ನಲ್ಲಿ ಹೇಳಿದ್ದೊಂದು ಆಗಿದ್ದೊಂದು :

ನಗರದಲ್ಲಿರುವ 19 ಲಕ್ಷಕ್ಕೂ ಹೆಚ್ಚು ಆಸ್ತಿಗಳ ಪೈಕಿ ಲಕ್ಷಾಂತರ ಆಸ್ತಿಗಳು ಬಿ-ಖಾತಾ ಇರುವಂತದ್ದೇ. ಅವುಗಳನ್ನು ಸರ್ಕಾರದ ಅನುಮೋದನೆ ಪಡೆದು ಎ-ಖಾತೆಗಳಾಗಿ ಪರಿವರ್ತನೆ ಮಾಡೋದಾಗಿ ಬಜೆಟ್ ನಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ ಕಾರ್ಯರೂಪಕ್ಕೆ ಬರಲಿಲ್ಲ. ಆದರೆ ಪಾಲಿಕೆ ಕಂದಾಯ ಅಧಿಕಾರಿಗಳು ಅದರಲ್ಲೂ ಹೊಸ ವಲಯ ವ್ಯಾಪ್ತಿಯಲ್ಲಿರುವ ಅಧಿಕಾರಿಗಳು ಲಂಚದ ಹಣ ಪಡೆದು ದುಡ್ಡಿನ ಆಸೆಗೆ ಅನಧಿಕೃತವಾಗಿ ಬಿ- ಖಾತಾ ಆಸ್ತಿಗಳಿಗೆ ಎ- ಖಾತಾ ಮಾಡಿಕೊಡುತ್ತಿದ್ದಾರೆ ಎಂಬ ಸಾಕಷ್ಟು ಆರೋಪಗಳು ಕೇಳಿಬಂದಿದೆ. ಬಾಕಿ ಸುಧಾರಣಾ ಶುಲ್ಕ ಅಂದಾಜು 300 ಕೋಟಿ ರೂಪಾಯಿ ವಸೂಲು ಮಾಡುವುದಾಗಿ ತಿಳಿಸಲಾಗಿತ್ತು. ಆ ಕಡೆಯೂ ಪಾಲಿಕೆ ಅಧಿಕಾರಿಗಳು ಗಮನ ಹರಿಸಲಿಲ್ಲ. ಮೂಲಭೂತ ಸೌಕರ್ಯ, ರಸ್ತೆ ನಿರ್ವಹಣೆ, ಕೆರೆ ಅಭಿವೃದ್ಧಿ, ಉದ್ಯಾನವನ ಅಭಿವೃದ್ಧಿ ಕಾರ್ಯಕ್ರಮಗಳು ಸೂಕ್ತ ರೀತಿ ಜಾರಿಯಾಗಿಲ್ಲ.

ನೆಲಕಚ್ಚಿದ ಕಲ್ಯಾಣ ಕಾರ್ಯಕ್ರಮಗಳು :

ಪಾಲಿಕೆ ವ್ಯಾಪ್ತಿಯಲ್ಲಿರುವ 198 ವಾರ್ಡ್ ಗಳಲ್ಲಿ ಶೇ.24.10 ಅನುದಾನದ ಕಲ್ಯಾಣ ಕಾರ್ಯಕ್ರಮಗಳು ಸೇರಿದಂತೆ ಕಲ್ಯಾಣ ಇಲಾಖೆಯಲ್ಲಿ 1,025 ಕೋಟಿ ರೂಪಾಯಿ ವೆಚ್ಚ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ ವಾಸ್ತವವಾಗಿ ಶೇಕಡ 20ರಷ್ಟು ಹಣವನ್ನು ಕರ್ಚುಮಾಡಿಲ್ಲ. ವಾರ್ಡ್ ನಲ್ಲಿ ಅಂಗವಿಕಲರಿಗೆ ಸೈಕಲ್ ವಿತರಣೆ, ಬಡ ಮಹಿಳೆಯರಿಗೆ ಟೈಲರಿಂಗ್ ಮಿಷಿನ್ ವಿತರಣೆ, ಒಂಟಿಮನೆ ಹೀಗೆ ಕಲ್ಯಾಣ ಕಾರ್ಯಕ್ರಮಗಳು ಯಾವುದೂ ಅನುಷ್ಠಾನವಾಗಿಲ್ಲ. ವಾರ್ಡ್ ಪ್ರಾಗ್ರಾಮ್ ಆಫ್ ವರ್ಕ್ಸ ಕೆಲಸಗಳು ಕೇವಲ ಬುಕ್ ನಲ್ಲೇ ಉಳಿದಿದೆ.

ಮೇಯರ್ ವೈದ್ಯಕೀಯ ಪರಿಹಾರ ನಿಧಿ ಅರ್ಜಿಗಳಿಗೆ ತ್ರಿಶಂಕು ಸ್ಥಿತಿ :

2020-21ರ ಬಜೆಟ್ ಮಂಡಿಸಿದ ಹಿಂದಿನ ಮೇಯರ್ ಗೌತಮ್ ಕುಮಾರ್ ಹಾಗೂ ಆಗಿದ್ದ ಕಮಿಷನರ್ ಸುನಿಲ್ ಕುಮಾರ್ ನಡುವಿನ ಶೀಥಲ ಸಮರದಿಂದಾಗಿ ಮೇಯರ್ ನಿಧಿಯಿಂದ ವೈದ್ಯಕೀಯ ಪರಿಹಾರ ನೀಡುವ ಕಡತಗಳು ವಿಲೇವಾರಿಯಾಗಲಿಲ್ಲ. ಆನಂತರ ಮೇಯರ್ ಅವಧಿ ಹಾಗೂ ಕಾರ್ಪೊರೇಟರ್ ಗಳ ಅವಧಿ ಪೂರ್ಣಗೊಂಡ ಬಳಿಕ ಕ್ಯಾನ್ಸರ್, ಕಿಡ್ನಿ ಕಾಯಿಲೆ ಯಂತಹ ಗಂಭೀರ ಆರೋಗ್ಯ ಸಮಸ್ಯೆಯಿಂದ ನರಳುವವರ ಚಿಕಿತ್ಸೆಗಾಗಿ ಸಲ್ಲಿಸಿದ್ದ 3 ರಿಂದ 4 ಕೋಟಿ ರೂಪಾಯಿ ಮೊತ್ತದ ಸಾವಿರಾರು ಅರ್ಜಿಗಳು ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗುವ ಹಂತಕ್ಕೆ ಬಂದಿತ್ತು. ಜನಪ್ರತಿನಿಧಿಗಳ ಅವಧಿ ಮುಗಿದ ಹಿನ್ನಲೆಯಲ್ಲಿ ಪಾಲಿಕೆ ಆಯುಕ್ತರು ಹಣ ಬಿಡುಗಡೆಗೆ ತಡೆ ನೀಡಿದ್ದರು. ಹೀಗಾಗಿ ಆ ಹಣವೂ ಅನಾರೋಗ್ಯ ಪೀಡಿತರಿಗೆ ಬಿಡುಗಡೆಯಾಗಿಲ್ಲ.

ಬಜೆಟ್ ಅನುಷ್ಠಾನಕ್ಕೆ ನಿರ್ಲಕ್ಷ್ಯ :

ಈ ಬಗ್ಗೆ ಬೆಂಗಳೂರು ವೈರ್ ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಮೇಯರ್ ಪದ್ಮಾವತಿ, ಬಿಬಿಎಂಪಿಯಲ್ಲಿ ಸಾಮಾನ್ಯವಾಗಿ ಪ್ರತಿವರ್ಷ ಶೇಕಡ 40 ರಿಂದ 45ರಷ್ಟು ಬಜೆಟ್ ಅನುಷ್ಠಾನಕ್ಕೆ ಬರುತ್ತಿತ್ತು. 2020ರಲ್ಲಿ ಕೋವಿಡ್ ಸೋಂಕು ಕಂಡುಬಂದ ಕಾರಣ ಹಾಗೂ ಜನಪ್ರತಿನಿಧಿಗಳ ಆಡಳಿತ ಮುಗಿದ ಹಿನ್ನಲೆಯಲ್ಲಿ ಅಧಿಕಾರಿಗಳು ಬಜೆಟ್ ಅನುಷ್ಠಾನಕ್ಕೆ ಹೆಚ್ಚು ಗಮನ ನೀಡಿಲ್ಲ.

ಹಾಗಾಗಿ ಪಾಲಿಕೆಯಲ್ಲಿ ಈ ಬಾರಿ ಶೇ.15ರಿಂದ 20ರಷ್ಟು ಆಯವ್ಯಯದ ಕಾರ್ಯಕ್ರಮಗಳು ಜಾರಿಗೆ ಬಂದಿಲ್ಲ. ಈಗ ರಾಜ್ಯ ಸರ್ಕಾರ ಬಿಬಿಎಂಪಿ ಕಾಯ್ದೆ-2020 ಅನುಷ್ಠಾನಕ್ಕೆ ತಂದು ಕೌನ್ಸಿಲರ್ ಗಳ ಅಧಿಕಾರವನ್ನು ಕಿತ್ತುಕೊಂಡಿದೆ. ಪಾಲಿಕೆ ಚುನಾವಣೆ ನಡೆಸಲು ಬೆಂಗಳೂರು ಶಾಸಕರ ಒತ್ತಡದ ಕಾರಣ ರಾಜ್ಯ ಸರ್ಕಾರ ಒಂದಲ್ಲಾ ಒಂದು ಕುಂಟುನೆಪ ಹೇಳುತ್ತಿದೆ. ಹೀಗಾದ್ರೆ ಬೆಂಗಳೂರಿನ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯೋದಾದ್ರು ಹೇಗೆ? ಎಂದು ಮಾಜಿ ಮೇಯರ್ ಪದ್ಮಾವತಿ ಬೇಸರ ವ್ಯಕ್ತಪಡಿಸಿದ್ದಾರೆ.

ಗುತ್ತಿಗೆದಾರರಿಗೆ ಮೊದಲು ಕಾಮಗಾರಿ ಪೂರ್ಣಗೊಳಿಸಿದ ಒಂದೂವರೆ ವರ್ಷದ ಒಳಗೆ ಪಾಲಿಕೆಯಿಂದ ಹಣ ಪಾವತಿಯಾಗುತ್ತಿತ್ತು. ಈಗ ಆ ಅವಧಿ 28 ತಿಂಗಳಿಗೆ ಏರಿಕೆಯಾಗಿದೆ. ಹೊಸ ಯೋಜನೆಗಳು ಕಾರ್ಯಗತವಾಗಲಿಲ್ಲ. ಕೋವಿಡ್ ಕಿಟ್ ಹಗರಣವೇ ಸಾಧನೆಯಾಯಿತು. 110 ಹಳ್ಳಿಗಳಿಗೆ ಅಗತ್ಯ ಸೌಕರ್ಯ ಕಲ್ಪಿಸುವಲ್ಲಿ ಪಾಲಿಕೆ ಆಡಳಿತ ಎಡವಿತು. ಕಸದ ಗುತ್ತಿಗೆದಾರರಿಗೆ ಆರೇಳು ತಿಂಗಳ ಹಣ ಪಾವತಿಯಾಗಿಲ್ಲ. ಆಡಳಿತಗಾರರು ಬಂದ ಮೇಲಂತೂ ಹಲವು ಕಾರ್ಯಕ್ರಮಗಳಿಗೆ ವರ್ಕ್ ಕೋಡ್ ನೀಡುವುದನ್ನೇ ನಿಲ್ಲಿಸಿದ್ದಾರೆ. ಒಟ್ಟಾರೆ 2021ರ ಬಜೆಟ್ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದ್ದಾರೆ ವಿರೋಧ ಪಕ್ಷದ ಮಾಜಿ ನಾಯಕ ಶಿವರಾಜ್.

2021-22ರಲ್ಲಿ ವಾಸ್ತವಿಕ ಬಜೆಟ್ ಗೆ ಒತ್ತು :

ಈ ಬಾರಿ ಕೌನ್ಸಿಲರ್ ಗಳ ಬದಲಿಗೆ ಅಧಿಕಾರಿಗಳ ಬಳಿ ಪಾಲಿಕೆ ಆಡಳಿತ ಇರುವುದರಿಂದ ಪಾಲಿಕೆ ಆದಾಯಕ್ಕೆ ತಕ್ಕಂತೆ 2021-22ರ ಆಯವ್ಯಯ ಮಂಡಿಸಲು ಸಿದ್ಧತೆ ನಡೆಸಲಾಗುತ್ತಿದೆ. ಆಡಳಿತಗಾರರಾದ ಗೌರವ್ ಗುಪ್ತಾ ಹಾಗೂ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್ ನೇತೃತ್ವದಲ್ಲಿ ಹಲವು ಬಜೆಟ್ ಪೂರ್ವ ಚರ್ಚೆಗಳು ನಡೆಯುತ್ತಿದೆ. ಪಾಲಿಕೆಯಲ್ಲಿ ಆರ್ಥಿಕ ಶಿಸ್ತಿನ ಜಪ ಮಾಡುತ್ತಿರುವ ಮಂಜುನಾಥ್ ಪ್ರಸಾದ್ ಈ ಬಾರಿ ಶತಾಯ ಗತಾಯ 7 ಸಾವಿರ ಕೋಟಿ ರೂಪಾಯಿ ಒಳಗೆ ಬಜೆಟ್ ಮಂಡಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

2021-22ರಲ್ಲಿ 7 ಸಾವಿರ ಕೋಟಿ ರೂ. ಮೀರದ ಬಜೆಟ್ ಮಂಡನೆ ನಿರೀಕ್ಷೆ :

2020-21ರ ಬಜೆಟ್ ಅನುಷ್ಠಾನ ಹಾಗೂ 2021-2022ರ ಹೊಸ ಆಯವ್ಯಯ ಮಂಡನೆ ಕುರಿತಂತೆ ಬಿಬಿಎಂಪಿ ವಿಶೇಷ ಹಣಕಾಸು ಆಯುಕ್ತರಾದ ತುಳಸಿ ಮದ್ದಿಮನಿ, ಕೋವಿಡ್ ಸೋಂಕು ನಿಯಂತ್ರಣ ಕಾರ್ಯದಲ್ಲಿ ಪಾಲಿಕೆಯ ಅಧಿಕಾರಿಗಳನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದು, ಆರ್ಥಿಕ ಸಂಕಷ್ಠ ಸೇರಿದಂತೆ ಮೊದಲಾದ ಕಾರಣಗಳಿಂದ 2020-21ನೇ ಸಾಲಿನಲ್ಲಿ ಈ ತನಕ ಶೇಕಡ 25ರಷ್ಟು ಬಜೆಟ್ ಅನುಷ್ಠಾನವಾಗಿದೆ. 2021-22ನೇ ಸಾಲಿನಲ್ಲಿ ಪಾಲಿಕೆಯ ಆದಾಯ 5 ರಿಂದ 6 ಸಾವಿರ ಕೋಟಿ ರೂಪಾಯಿಯಿದ್ದು, 7 ಸಾವಿರ ಕೋಟಿ ರೂಪಾಯಿಗಳಿಗೆ ಮೀರದಂತೆ ಬಜೆಟ್ ಮಂಡಿಸುವ ಸಾಧ್ಯತೆಯಿದೆ ಎಂದು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಪಾಲಿಕೆ ಚುನಾವಣೆ ಮುಂದೂಡಿಕೆಗೆ ಮುಂದುವರೆದ ತಂತ್ರ :

ರಾಜ್ಯ ಸರ್ಕಾರದ ಬಜೆಟ್ ಮಂಡನೆಗೆ ಭರದಿಂದ ಪೂರ್ವಸಿದ್ಧತೆಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ಪಾಲಿಕೆಯಲ್ಲೂ ರಾಜ್ಯ ಸರ್ಕಾರದ ಆಯವ್ಯಯದ ನಂತರ ಬಜೆಟ್ ಮಂಡಿಸಲು ತೆರೆಮರೆಯ ಕಸರತ್ತು ನಡೆಯುತ್ತಿದೆ. ಪಾಲಿಕೆಯಲ್ಲಿ ಕೌನ್ಸಿಲರ್ ಗಳು ಇಲ್ಲದ ಕಾರಣ ಅಧಿಕಾರಿಗಳ ಮೂಲಕ ಪರೋಕ್ಷವಾಗಿ ಆಡಳಿತ ನಡೆಸಲು ಬೆಂಗಳೂರು ಶಾಸಕರು ಒಂದಾಗಿ ರಾಜ್ಯ ಹಾಗೂ ಪಾಲಿಕೆ ಬಜೆಟ್ ನಲ್ಲಿ ತಮಗೆ ಬೇಕಾದಂತೆ ಯೋಜನೆಗಳಿಗೆ ಹಣ ಮೀಸಲಿಡಲು ಪ್ರಭಾವ ಬೀರುತ್ತಿದ್ದಾರೆ ಎಂದು ಗೊತ್ತಾಗಿದೆ. ಪಾಲಿಕೆ ಚುನಾವಣೆ ಮುಂದೂಡಲು ರಾಜ್ಯ ಸರ್ಕಾರದ ಮೂಲಕ, ಸುಪ್ರೀಂಕೋರ್ಟ್ ನಲ್ಲಿ ಈಗಾಗಲೇ ಇರುವ ಪ್ರಕರಣದಲ್ಲಿ 243 ವಾರ್ಡ್ ಪುನರ್ ವಿಂಗಡಣೆ ಹಾಗೂ 2021ರ ಜನಗಣತಿ ಕಾರ್ಯಕ್ರಮದ ಕಾರಣ ನೀಡಿ, ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.   

WhatsApp Join our WhatsApp Channel
Previous Post

ಕೋವಿಡ್ ಅವಧಿಯ ಕಡತಗಳ ವಿಲೇವಾರಿಗೆ ಶೀಘ್ರದಲ್ಲೇ ಕಡತಯಙ್ಞ ಕಾರ್ಯಕ್ರಮ ; ನೂತನ ಜಿಲ್ಲಾಧಿಕಾರಿ ಜೆ.ಮಂಜುನಾಥ್

Next Post

ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಟ್ರೀ-ಪಾರ್ಕ್ ಯೋಜನೆ ತಾತ್ಕಾಲಿಕ ಸ್ಥಗಿತ ; ಅರಣ್ಯ ಸಚಿವ ಅರವಿಂದ ಲಿಂಬಾವಳಿ

Next Post

ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಟ್ರೀ-ಪಾರ್ಕ್ ಯೋಜನೆ ತಾತ್ಕಾಲಿಕ ಸ್ಥಗಿತ ; ಅರಣ್ಯ ಸಚಿವ ಅರವಿಂದ ಲಿಂಬಾವಳಿ

ಬೆಂಗಳೂರಿನ ಮಗ್ಗುಲಲ್ಲೇ ಬೃಹತ್ ಬಂಡೆಗಳ ಬ್ಲಾಸ್ಟಿಂಗ್ : ಘಟನೆಯಲ್ಲಿ ಓರ್ವ ವ್ಯಕ್ತಿಯ ತಲೆಗೆ ಗಾಯ – ಅನಾಥಾಶ್ರಮ ಮೇಲ್ಛಾವಣಿ ಜಖಂ

Please login to join discussion

Like Us on Facebook

Follow Us on Twitter

Recent News

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

July 23, 2026

ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

July 23, 2026

ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

July 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group