Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | ಬಿಬಿಎಂಪಿ ಟೌನ್ ಪ್ಲಾನಿಂಗ್ ನಲ್ಲಿ ನಡೆಯುತ್ತಿದೆ “ಹಣದ ಗಣಿಗಾರಿಕೆ”

ಮಂಜೂರಾತಿ ಹುದ್ದೆಗಿಂತ ಹೆಚ್ಚುವರಿಯಾಗಿ ಎಂಜಿನಿಯರ್ ಗಳ ಕಾರ್ಯನಿರ್ವಹಣೆ | ಪಾಲಿಕೆಗೆ ಅನಗತ್ಯ ಆರ್ಥಿಕ ಹೊರೆ

by Bengaluru Wire Desk
March 23, 2021
in BW Special, Public interest
Reading Time: 1 min read
0

ಬೆಂಗಳೂರು : ನೂರಾರು ಕೋಟಿ ರೂ. ಆದಾಯ ಸಂಗ್ರಹವಾಗುವ ಬಿಬಿಎಂಪಿ ನಗರ ಯೋಜನೆ ವಿಭಾಗದಲ್ಲಿ ಕೋಟಿ ಕೋಟಿ ಲಂಚದ ಹಣದ ಕಾರಣಕ್ಕಾಗಿ ತುಂಬಿ ತುಳುಕುತ್ತಿದೆ.

ಹತ್ತಾರು ಕೋಟಿ ರೂಪಾಯಿ ಕಮಾಯಿ ಆಗೋ ಆಯಕಟ್ಟಿನ ಜಾಗಕ್ಕೆ ಇಲ್ಲಿ ಸಖತ್ ಡಿಮ್ಯಾಂಡೋ ಡಿಮ್ಯಾಂಡ್. ಹೀಗಾಗಿ ಇಲ್ಲಿ ಬಿಬಿಎಂಪಿ ಕಮಿಷನರ್ ವರ್ಗಾವಣೆ ಮಾಡಿದ್ರೂ ಆ ಸ್ಥಾನದಿಂದ ಎಂಜಿನಿಯರ್ ಗಳು ರಿಲೀವ್ ಆಗಲ್ಲ. ರಿಲೀವ್ ಆದ್ರೂ ಪುನಃ ಹಿಂಬಾಗಲಿನಿಂದ ವಾಪಸ್ ಬರುತ್ತಾರೆ.

21 ಎಂಜಿನಿಯರ್ ಗಳು ಹೆಚ್ಚುವರಿಯಾಗಿ ಕಾರ್ಯನಿರ್ವಹಣೆ

ನಗರ ಯೋಜನೆ ವಿಭಾಗದಲ್ಲಿ ಕೇಂದ್ರ ಕಚೇರಿ, ಜೆಡಿಟಿಪಿ ಉತ್ತರ ಹಾಗೂ ದಕ್ಷಿಣ ಮತ್ತು 8 ಜೋನ್ ಗಳಲ್ಲಿ ಕೇವಲ 7 ನಗರ ಯೋಜನೆ ಸಹಾಯಕ ನಿರ್ದೇಶಕರ (ಎಡಿಟಿಪಿ) ಹುದ್ದೆ ಮಂಜೂರಾಗಿದೆ. ಆದರೆ ಹೆಚ್ಚುವರಿಯಾಗಿ 16 ಎಂಜಿನಿಯರ್ ಗಳು ಇನ್ನೂ ಎಡಿಟಿಪಿ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಅದೇ ರೀತಿ ಕೇವಲ 2 ಉಪನಿರ್ದೇಶಕ ಹುದ್ದೆ ಮಂಜೂರಾತಿ ಆಗಿದ್ದರೂ 5 ಮಂದಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಟೌನ್ ಪ್ಲಾನಿಂಗ್ ಇಲಾಖೆ ಬಿಳಿ ಆನೆ ಸಾಕಿದಂತೆ

ವರ್ಷಂಪ್ರತಿ ಟೌನ್ ಪ್ಲಾನಿಂಗ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿ – ಅಧಿಕಾರಿಗಳ ವೇತನ ಭತ್ಯೆಗಾಗಿ ಕಳೆದ ಮೂರು ವರ್ಷದಿಂದ ಪಾಲಿಕೆ ಸರಾಸರಿ 5 ಕೋಟಿ ರೂಪಾಯಿ ಕರ್ಚು ಮಾಡುತ್ತಿದೆ. ಹೆಚ್ಚುವರಿ ಹುದ್ದೆಗಳಿಂದ ಪಾಲಿಕೆಗೆ ಅನಗತ್ಯವಾಗಿ ಹೆಚ್ಚು ಹೊರೆ ಬೀಳುತ್ತಿದೆ. ಯಾರು ಎಷ್ಟೇ ಪ್ರಶ್ನೆ ಮಾಡಿದರೂ ಈ ವ್ಯವಸ್ಥೆಯನ್ನು ಸರಿಪಡಿಸಲು ಸಾಧ್ಯವಾಗಿಲ್ಲ ಏಕೆ? ಎಂಬುದು ಇನ್ನೂ ಯಕ್ಷಪ್ರಶ್ನೆಯಾಗಿ ಉಳಿದಿದೆ.

ಎಸಿಬಿ ದಾಳಿಯ ಬಳಿಕ 41 ಮಂದಿ ಟ್ರಾನ್ಸ್ ಫರ್

ಬೊಮ್ಮನಹಳ್ಳಿ ವಲಯದಲ್ಲಿ ಎಡಿಟಿಪಿಯಾಗಿದ್ದ ದೇವೇಂದ್ರಪ್ಪ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಫೆಬ್ರವರಿ 5 ರಂದು ದಾಳಿ ನಡೆಸಿದಾಗ ಬಿಬಿಎಂಪಿ ನಗರ ಯೋಜನೆ ವಿಭಾಗಕ್ಕೆ ಸೇರಿದ 400ಕ್ಕೂ ಹೆಚ್ಚು ಫೈಲ್ ಗಳು, ಕಚೇರಿ ಸೀಲು ಹಾಗೂ ಲಕ್ಷಾಂತರ ರೂಪಾಯಿ ನಗದು ಹಣ ಪತ್ತೆಯಾಗಿತ್ತು.

ಇದರಿಂದ ಎಚ್ಚೆತ್ತುಕೊಂಡ ಪಾಲಿಕೆ ಆಯುಕ್ತ ಮಂಜುನಾಥ್ ಪ್ರಸಾದ್, ಫೆಬ್ರವರಿ 10 ರಂದು ಜಂಟಿ ನಿರ್ದೇಶಕರ ಉತ್ತರ ಮತ್ತು ದಕ್ಷಿಣ ಕಚೇರಿ, 8 ವಲಯಗಳ ಪೈಕಿ ದಕ್ಷಿಣ ವಲಯ ಹೊರತುಪಡಿಸಿ 7 ವಲಯಗಳಲ್ಲಿನ 41 ಎಡಿಟಿಪಿ, ಎಇ, ನಗರ ಯೋಜಕರು ಮತ್ತಿತರರನ್ನು ವರ್ಗಾವಣೆ ಮಾಡಿದ್ದರು.

ದಕ್ಷಿಣ ವಲಯದಲ್ಲಿ ಪ್ರಭಾವಿ ರಾಜಕಾರಣಿಗಳ ಕೃಪಾ ಕಟಾಕ್ಷ ಹಾಗೂ ಒತ್ತಡದ ಕಾರಣದಿಂದ ಒಬ್ಬನೇ ಒಬ್ಬ ಎಂಜಿನಿಯರ್ ಅನ್ನು ಆಯುಕ್ತರು ವರ್ಗಾವಣೆ ಮಾಡಲು ಸಾಧ್ಯವಾಗಲಿಲ್ಲ.

ಬಿಬಿಎಂಪಿ ನಗರ ಯೋಜನೆ ವಿಭಾಗದಲ್ಲಿ ಫೆಬ್ರವರಿ 10ಕ್ಕೆ ಮುಂಚೆ 54 ಹುದ್ದೆಗಳು ಮಂಜೂರಾತಿಯಿದ್ದರೆ ಬರೋಬ್ಬರಿ 77 ಜನ ಕಾರ್ಯನಿರ್ವಹಣೆ ಮಾಡುತ್ತಿದ್ದರು. ಪಿಡಬ್ಲ್ಯುಡಿ, ರಾಜ್ಯ ನಗರ ಯೋಜನಾ ಇಲಾಖೆ, ಬಿಡಬ್ಲ್ಯುಎಸ್ ಎಸ್ ಬಿ, ಕೆಪಿಟಿಸಿಎಲ್ ಹಾಗೂ ಸಹಕಾರ ಇಲಾಖೆಯ ಬರೋಬ್ಬರಿ 47 ಎಂಜಿನಿಯರ್ ಗಳು ಪಾಲಿಕೆಗೆ ತಮ್ಮ ಪ್ರಭಾವ ಬಳಸಿ, ದುಬಾರಿ ಹಣ ತೆತ್ತು ಇಲ್ಲಿಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು.

ಆಯುಕ್ತರ ವರ್ಗಾವಣೆ ಕ್ರಮದಿಂದಾಗಿ ಈಗ ಟೌನ್ ಪ್ಲಾನಿಂಗ್ ನಲ್ಲಿ ಹೊರಗಿನ ಇಲಾಖೆಯ ಎಂಜಿನಿಯರ್ ಗಳ ಸಂಖ್ಯೆ ಸ್ವಲ್ಪ ಕಡಿಮೆಯಾಗಿದೆ. ಆದರೆ ಮಂಜೂರಾತಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಎಂಜಿನಿಯರ್ ಗಳು ಈಗಲೂ ಕೆಲಸ ಮಾಡುತ್ತಿದ್ದಾರೆ.

ನಗರ ಯೋಜನಾ ಇಲಾಖೆಯ ಸಮೃದ್ಧ ಸ್ಥಳಗಳು :

(2018 ರಿಂದ 2021 ಜ.31 ತನಕ ಶುಲ್ಕ ಸಂಗ್ರಹ ವಿವರ)

ಉತ್ತರ ಜಂಟಿ ನಿರ್ದೇಶಕರ ಕಚೇರಿ – 543.73 ಕೋಟಿ ರೂ.
ದಕ್ಷಿಣ ಜಂಟಿ ನಿರ್ದೇಶಕರ ಕಚೇರಿ – 220.52 ಕೋಟಿ ರೂ.

ಮಹದೇವಪುರ ವಲಯ – 85.22 ಕೋಟಿ ರೂ.
ಬೊಮ್ಮನಹಳ್ಳಿ ವಲಯ – 84 ಕೋಟಿ ರೂ.
ಬೆಂಗಳೂರು ದಕ್ಷಿಣ ವಲಯ – 64.68 ಕೋಟಿ ರೂ.

ಎಸಿಬಿ ದಾಳಿ ಇಲ್ಲಿ ಕಾಮನ್ !!

ಬೊಮ್ಮನಹಳ್ಳಿ ಎಡಿಟಿಪಿ ದೇವೇಂದ್ರಪ್ಪ ಎಸಿಬಿ ದಾಳಿಯಲ್ಲಿ ಸಿಕ್ಕಿಹಾಕಿಕೊಂಡ ಬಳಿಕ 41 ಎಂಜಿನಿಯರ್ ಗಳ ವರ್ಗಾವಣೆ ಪಟ್ಟಿಯಲ್ಲಿದ್ದ ಯಲಹಂಕ ಟೌನ್ ಪ್ಲಾನಿಂಗ್ ಎಇ ಕೆ.ಸುಬ್ರಮಣ್ಯ ಮನೆ ಮೇಲೆಯೂ ಮಾರ್ಚ್ 9ರಂದು ಎಸಿಬಿ ದಾಳಿ ನಡೆದಿತ್ತು.

ಆಗ ಅವರ ಬಳಿ ಬಲ್ಲ ಎಲ್ಲ ಮೂಲಗಳಿಂದ ಶೇ.364 ಪಟ್ಟು ಹೆಚ್ಚಿನ ಚರ- ಸ್ಥಿರಾಸ್ಥಿ‌ ಇರುವುದು ಕಂಡು ಬಂದಿತ್ತು. ಇದು ನಗರ ಯೋಜನಾ ವಿಭಾಗದಲ್ಲಿ ಹಣದ ಗಣಿಗಾರಿಕೆ ಎಷ್ಟು ನಡೆಯಬಹುದು ಎಂಬುದಕ್ಕೆ ತಾಜಾ ಉದಾಹರಣೆಯಾಗಿದೆ.

ಒಂದು ಕಡೆಯಿಂದ ಟ್ರಾನ್ಸ್ ಫರ್ ಮಾಡುತ್ತಿದ್ದರೂ ಮತ್ತೊಂದು ಕಡೆಯಿಂದ ಬೇರೆ ಬೇರೆ ಇಲಾಖೆಯಿಂದ ಇಂತಹ ಲಾಭದಾಯಕ ಹಾಗೂ ಆಯಕಟ್ಟಿನ ಹುದ್ದೆಗೆ ಎಡತಾಗುವುದು ನಿತ್ಯ ನಿರಂತರವಾಗಿದೆ. ಈ ಬಗ್ಗೆ ಆಡಳಿತಗಾರರು, ಆಯುಕ್ತರು ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

WhatsApp Join our WhatsApp Channel
Previous Post

ಬಿಬಿಎಂಪಿ ಕಾಂಟ್ರಾಕ್ಟರ್ ಗಳಿಗೆ ಬಂತು ಹೊಸ ಫಜೀತಿ

Next Post

ಕೋವಿಡ್ ಪರಿಣಾಮ ; ರೇಬಿಸ್ ನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಇಳಿಕೆ !!

Next Post

ಕೋವಿಡ್ ಪರಿಣಾಮ ; ರೇಬಿಸ್ ನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿ ಇಳಿಕೆ !!

ಶತ್ರು ರಾಷ್ಟ್ರಗಳ ಸ್ಯಾಟಲೈಟ್ ಹೊಡೆದುರುಳಿಸುವ ದೇಶೀಯ ಕ್ಷಿಪಣಿ ತಂತ್ರಙ್ಞನ ಪ್ರಯೋಗಕ್ಕೆ ಎರಡು ವರ್ಷ

Please login to join discussion

Like Us on Facebook

Follow Us on Twitter

Recent News

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group