Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

IAS Shilpa Nag | ಮೈಸೂರು ಐಎಎಸ್ ಅಧಿಕಾರಿಗಳ ನಡುವಣ ಶೀಥಲ ಸಮರ ; ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡೆಯಿಂದ ಬೇಸೆತ್ತು ರಾಜಿನಾಮೆ ನೀಡಿದ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್

ಡಿಸಿ ರೋಹಿಣಿ ಸಿಂಧೂರಿ ಕಿರುಕುಳಕ್ಕೆ ರಾಜಿನಾಮೆ ನೀಡಿದ ಮೈಸೂರು ನಗರ ಪಾಲಿಕೆ ಆಯುಕ್ತೆ | ಸಿಂಧೂರಿ ನಡೆಗೆ ಈ ಹಿಂದೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಜನಪ್ರತಿನಿಧಿಗಳು | ಶಿಲ್ಪನಾಗ್ ರಾಜಿನಾಮೆ ಅಂಗೀಕರಿಸದಂತೆ ಪ್ರಧಾನಿ ಜೊತೆ ಮಾತನಾಡಿ, ಪತ್ರ ಬರೆದ ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ |

by Bengaluru Wire Desk
June 3, 2021
in News Wire
Reading Time: 2 mins read
0

ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕಿರುಕುಳ ನೀಡಿದ್ದರಿಂದ ಬೇಸೆತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುತ್ತಿರುವುದಾಗಿ ಮೈಸೂರು ‌ನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಗುರುವಾರ ತಿಳಿಸಿದ್ದಾರೆ.

ನಗರದಲ್ಲಿ ಸಂಜೆ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಶಿಲ್ಪಾನಾಗ್ ಅವರು, ಡಿಸಿ ವಿರುದ್ಧ ಹರಿಹಾಯ್ದಿದ್ದಾರಲ್ಲದೆ, ಇಂತಹ ಡಿಸಿ ಮೈಸೂರಿನಂತಹ‌ ನಗರದಲ್ಲಿ ಇರಬಾರದು ಎಂದು ಕಿಡಿಕಾರಿದ್ದಾರೆ. ಜಿಲ್ಲಾಧಿಕಾರಿಗಳ ಈ ರೀತಿಯ ನಡೆಯಿಂದಾಗಿ ಮೈಸೂರಿನ ಮಾನ ಮರ್ಯಾದೆ ಬೀದಿಗೆ ಬಂದು ನಿಂತಿದೆ ಎಂದು ಟೀಕಿಸಿದರು.

ತಮ್ಮ ಮಾತಿನುದ್ದಕ್ಕೂ ಡಿಸಿ ನಡೆಯನ್ನು ಬೇಸರದಿಂದಲೇ ನುಡಿದರಲ್ಲದೆ, ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು. ಮಾತ್ರವಲ್ಲ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ಘೋಷಿಸಿದರು.

ಐಎಎಸ್ ಅಧಿಕಾರಿ ಶಿಲ್ಪಾನಾಗ್

ಜಿಲ್ಲಾಡಳಿತದಿಂದ‌ ನಮಗೆ ಯಾವುದೇ ಸಹಕಾರ ದೊರೆತಿಲ್ಲ. ಸಿಎಸ್‌ಆರ್ ಫಂಡ್‌ನಿಂದ ನಾವು ಕೆಲಸ ಮಾಡುತ್ತಿದ್ದೇವೆ. ಎಲ್ಲರಿಗೂ ಒಂದು ಸಹನೆ ಇರುತ್ತೆ, ಸಹನೆ ಒಡೆದಾಗ ಏನು ಮಾಡಬೇಕು. ಒಬ್ಬರು ಐಎಎಸ್ ಅಧಿಕಾರಿಯಾಗಿ ಮತ್ತೊಬ್ಬ ಅಧಿಕಾರಿ ಮೇಲೆ ದಬ್ಬಾಳಿಕೆ ಮಾಡೋದು ಎಷ್ಟು ಸರಿ ?
ನನ್ನನ್ನು ತುಳಿಯುವ ವ್ಯವಸ್ಥಿತ ಪಿತೂರಿ ನಡೆದಿದೆ.

ಅವರ ಪ್ರತಿಷ್ಠೆಯಿಂದಾಗಿ ನಾವು ಮಾಡುವ ಕೆಲಸಕ್ಕೆ ಮನ್ನಣೆ ಸಿಗುತ್ತಿಲ್ಲ. ಪ್ರಾಥಮಿಕ ಹಂತದಿಂದಲೂ ಕೆಲಸ ನಿರ್ವಹಿಸುತ್ತಿದ್ದೇವೆ. ಆದರೂ, ಸಿಟಿಯಲ್ಲಿ ಯಾವುದೇ ಕೆಲಸ ಆಗುತ್ತಿಲ್ಲ, ಟೆಸ್ಟ್ ಸರಿಯಾಗಿ ನಡೆಯುತ್ತಿಲ್ಲ ಎಂಬ ಮಾತುಗಳು ಬರುತ್ತಿವೆ.

ಮೊನ್ನೆ ಒಂದು ದುಃಖದ ಸಂಗತಿ ಯಾಯಿತು.
3000 ಮೆಡಿಷನ್ ಕಿಟ್ ನ್ನು ಒಂದು ಸಂಸ್ಥೆ ನೀಡಿತು.
ಪಾಲಿಕೆ ಕಚೇರಿಯ ಬೀಗ ತೆಗೆದು ಪೊಲೀಸರನ್ನ ಕಳುಹಿಸಿ ಜಿಲ್ಲಾಡಳಿತ ಔಷಧಿ ತೆಗೆದುಕೊಳ್ಳಲಾಯಿತು.
ಒಬ್ಬ ಐಎಎಸ್ ಅಧಿಕಾರಿಯಿಂದ ಮತ್ತೊಬ್ಬ ಐಎಎಸ್ ಅಧಿಕಾರಿಗಳ ಮೇಲೆ ಈ ನಡೆ ಸರಿಯಿಲ್ಲ ಎಂದು ದೂರಿದರು.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ

ಜಿಲ್ಲಾಡಳಿತದ ಕೆಲವು ನಿರ್ಣಯ ಸಹಿಸಿಕೊಂಡು ಸಾಕಾಗಿದೆ. ನಮಗೆ ಯಾವುದೇ ಅನುಧಾನ ನೀಡಿಲ್ಲ, ಸಿ.ಎಸ್.ಆರ್ ನಿಧಿಯಿಂದ ಎಲ್ಲ ಕೆಲಸ ಮಾಡುತ್ತಿದ್ದೇವೆ. ಸಿ.ಎಸ್.ಆರ್ ನ ವಾಟ್ಸಾಪ್ ಗ್ರೂಪ್ ನಿಂದ ನನ್ನನ್ನು ತೆಗೆಯುವ ಕೆಲಸ ಆಗಿದೆ. ನಾನೂ ಸಹ ಸಾಕಷ್ಟು ಐಎಎಸ್ ಅಧಿಕಾರಿಗಳ ಜೊತೆ ಕೆಲಸ ಮಾಡಿದ್ದೇನೆ. ಆದರೆ ಈ ರೀತಿ ಎಂದೂ ಆಗಿಲ್ಲ.

ಪ್ರತಿ ದಿನ ಈ ಅವಮಾನ ಸಾಕಾಗಿದೆ. ಒಬ್ಬ ಅಧಿಕಾರಿಯಾಗಿ ಕೆಲಸ ಮಾಡಲು ಸಾಕಾಗಿದೆ. ಒಬ್ಬರ ದುರಾಹಂಕಾರದಿಂದ ಇಡೀ ನಗರವನ್ನು ಸುಡುವ ಕೆಲಸವಾಗುತ್ತಿದೆ. ಮೈಸೂರು ನಗರದಲ್ಲಿ ಜನರು, ಅಧಿಕಾರಿಗಳು ನಮಗೆ ಸಹಕಾರ ನೀಡುತ್ತಿದ್ದಾರೆ ಆದರೂ, ಜಿಲ್ಲಾಡಳಿತ ಸರಿಯಾದ ರೀತಿಯಲ್ಲಿ ನಡೆದುಕೊಳ್ಳುತ್ತಿಲ್ಲ.

ಮಾಧ್ಯಮಗಳಲ್ಲಿ ಪಾಲಿಕೆ ಚೆನ್ನಾಗಿ ಕೆಲಸ ಮಾಡುತ್ತಿದೆ ಎಂಬ ವರದಿ ಬಂದ ಹಿನ್ನೆಲೆಯಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ನನಗೆ ಕೆಲಸ ಮಾಡುವ ಆಸಕ್ತಿಯೇ ಇಲ್ಲದಂತಾಗಿದೆ. ನಗರ ಪ್ರದೇಶಕ್ಕೆ ಒಂದು ಮಾನದಂಡ, ಗ್ರಾಮೀಣ ಪ್ರದೇಶಕ್ಕೆ ಒಂದು ಮಾನದಂಡ ಮಾಡಲಾಗಿದೆ. ಸೂಕ್ತವಾಗಿ ಕರೊನಾ ನಿರ್ವಹಣೆ ಮಾಡಿದರೂ, ಪಾಲಿಕೆ ಕೆಲಸ ಮಾಡುತ್ತಿಲ್ಲ ಎಂದು ಬಿಂಬಿಸಲಾಗುತ್ತಿದೆ.

ಸುಮ್ಮನೆ ಟಾರ್ಗೆಟ್ ಮಾಡಿದ ಪರಿಣಾಮ ನಮ್ಮ ಪಾಲಿಕೆ ಅಧಿಕಾರಿಗಳಿಗೆ ಟೀಕೆ ಉತ್ತರಗಳು ಬಂದಿದೆ.
ನಾನು 2016 ಬ್ಯಾಚ್, ಅವರು 2009ರ ಬ್ಯಾಚಿನವರು. ಅವರಿಗೆ ಯಾವತ್ತೂ ಮರ್ಯಾದೆ ಇಲ್ಲದೆ ನಡೆದುಕೊಂಡಿಲ್ಲ. ನಾನು ರಾಜೀನಾಮೆ ನೀಡಿ ನನ್ನ ಕೆಲಸ ನಾನು ನೋಡಿಕೊಳ್ಳುತ್ತೇನೆ.

ಮೈಸೂರು ಜನತೆಗೆ ಮುಂದಾದರೂ ಒಳ್ಳೆಯದಾಗಲಿ.
ಮುಂದೆ 3ನೇ ಅಲೆ ಇದೆ, ಮಕ್ಕಳ ಮೇಲೆ ಪರಿಣಾಮ ಬೀರಲಿದೆ.

ನಮ್ಮ ಅಧಿಕಾರಿಗಳಿಗೆ ಅವಮಾನವಾದರೆ ಅದನ್ನು ನಾನು ಸಹಿಸೋದಿಲ್ಲ. ಕೆಲವರನ್ನು ಹೋಗು , ಬಾ ಅಂತ ಮಾತನಾಡಿಸೋದು, ನಾನೇ ಜಿಲ್ಲಾಧಿಕಾರಿ, ನಾನೇ ಸುಪ್ರೀಂ ಅಂತ ಹೇಳೋದು ನಾಯಕತ್ವದ ಗುಣ ಅಲ್ಲ. ನಾನು ರಾಜೀನಾಮೆ ನೀಡಿದರೆ ಆಗಲಾದರೂ ನಮ್ಮ ಮೈಸೂರಿಗೆ ಒಳ್ಳೆಯದಾಗಲಿ. ನನ್ನಿಂದ ಮೈಸೂರು ಜನತೆಗೆ ತೊಂದರೆ ಆಗೋದು ಬೇಡ.

ಇನ್ನೂ ನಾನಾ ವಿಚಾರಗಳಿಂದಾದ ಬೇಸರದಿಂದ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನೆ. ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೇನೆ. ಯಾವುದೇ ಅಧಿಕಾರಿಗೂ ಈ ರೀತಿಯ ಜಿಲ್ಲಾಧಿಕಾರಿ ಸಿಗದಿರಲಿ ಎಂದು ಪತ್ರ ಉಲ್ಲೇಖಿಸಿದ್ದೇನೆ ಎಂದು ಹೇಳಿದ್ದಾರೆ.

ಮಾನಸಿಕ ಕಿರುಕುಳ ನೀಡಿಲ್ಲವೆಂದು ಡಿಸಿ ಸಿಂಧೂರಿ ಸ್ಪಷ್ಟನೆ

ಇನ್ನೊಂದೆಡೆ ಐಎಎಸ್ ಅಧಿಕಾರಿ ಶಿಲ್ಪಾನಾಗ್ ಗೆ ತಾವು ಯಾವುದೇ ರೀತಿ ಕಿರುಕುಳ ನೀಡಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟಪಡಿಸಿದ್ದಾರೆ. ಶಿಲ್ಪ ನಾಗ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಎಲ್ಲೂ ಆ ರೀತಿ ಹೇಳಿಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ ಶಿಲ್ಪಾ ನಾಗ್ ಮಾಡಿರುವ ಆರೋಪಗಳಿಗೆ ಪ್ರತಿಯಾಗಿ, ಮೈಸೂರು ನಗರದಲ್ಲಿ ಕೋವಿಡ್ ವಿಷಯದಲ್ಲಿ ನಗರ ಪಾಲಿಕೆ ಆಯುಕ್ತೆಯಾಗಿ ಸೂಕ್ತ ರೀತಿ ಕೆಲಸ ಮಾಡಿಲ್ಲ‌ ಎಂದು ರೋಹಿಣಿ ಹೇಳಿದ್ದಾರೆ.

ಸಿಎಸ್ ಆರ್ ನಿಧಿಯನ್ನು ಮೈಸೂರು ಜಿಲ್ಲೆ ತಾಲೂಕು, ಗ್ರಾಮೀಣ ಪ್ರದೇಶದಲ್ಲಿ ಬಳಸದೆ ಸಂಪೂರ್ಣವಾಗಿ ಮೈಸೂರು ನಗರಕ್ಕೆ ಬಳಸಿದ್ದು ತಪ್ಪು. ಆ ಬಗ್ಗೆ ಲೆಕ್ಕ ಕೇಳಿದರೆ ಈ ತನಕ ಶಿಲ್ಪ ನಾಗ್ ಕೊಟ್ಟಿಲ್ಲ ಎಂದು ಡಿಸಿ ರೋಹಿಣಿ ಕೌಂಟರ್ ಕೊಟ್ಟಿದ್ದಾರೆ.

ಇತ್ತೀಚೆಗೆ ಮೈಸೂರು ಜನಪ್ರತಿನಿಧಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆಡಳಿತ ವೈಖರಿ ಹಾಗೂ ನಡೆಯ ಬಗ್ಗೆ ಮುಖಂಡರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೆ ತೀವ್ರ ತರಾಟೆ ತೆಗೆದುಕೊಂಡಿದ್ದರು ಎನ್ನಲಾಗಿದೆ.

ಬಿಜೆಪಿ ಎಸ್.ಎ.ರಾಮದಾಸ್ ರಿಂದ ಶಿಲ್ಪಾನಾಗ್ ಪರ ಟ್ವೀಟ್

ಬಿಜೆಪಿ ಹಿರಿಯ ಮುಖಂಡ ಹಾಗೂ ಶಾಸಕ ಎಸ್.ಎ.ರಾಮದಾಸ್, ಶಿಲ್ಪನಾಗ್ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಇವರ ರಾಜೀನಾಮೆ ಪಡೆಯದಂತೆ ಪ್ರಧಾನಮಂತ್ರಿ ಜೊತೆ ಮಾತನಾಡಿದ್ದಾಗಿ ಹೇಳಿದ್ದಾರೆ. ಕೆಲವು ವಿಷಯಗಳಲ್ಲಿ ಬೇಸೆತ್ತು ರಾಜಿನಾಮೆ ನೀಡಿದ್ದಾರೆ. ಇಂತಹ ಅಧಿಕಾರಿ ಅವಶ್ಯಕತೆಯಿದೆ ಎಂದು ತಮ್ಮ ಟ್ವಿಟರ್ ನಲ್ಲಿ ತಿಳಿಸಿದ್ದಾರೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿಗೆ ಈ ಕುರಿತು ಬರೆದ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ

I Wrote and sent a letter to Hon. PM @narendramodi ji to not accept the resignation of MCC Commissioner Smt.Shilpa Nag and Copy of the letter sent to Hon.@BSYBJP and Hon. CS,, Karnataka Govt. pic.twitter.com/ZgFZTNNetU

— S A Ramadass ( Modi ka Parivar ) (@ramadassmysuru) June 3, 2021

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

PROPERTY TAX | ಆಸ್ತಿ ತೆರಿಗೆ ತಪ್ಪಾಗಿ ಘೋಷಿಸಿಕೊಂಡ ಮಾಲೀಕರಿಗೆ ನೋಟಿಸ್ ನೀಡುವಲ್ಲೂ ಎಡವಿದ ಬಿಬಿಎಂಪಿ ; ನಾಲ್ಕು ವರ್ಷದಿಂದ ರೆವಿನ್ಯೂ ಸಿಬ್ಬಂದಿ ಮಾಡಿದ್ದೇನು?

Next Post

Don’t Blame Bengaluru | “ಡೋಂಟ್ ಬ್ಲೇಮ್ ಬೆಂಗಳೂರು” – ಆಡಿಯೋ ನಾಳೆ ಬಿಡುಗಡೆ

Next Post

Don't Blame Bengaluru | "ಡೋಂಟ್ ಬ್ಲೇಮ್ ಬೆಂಗಳೂರು" - ಆಡಿಯೋ ನಾಳೆ ಬಿಡುಗಡೆ

ಸ್ಮಶಾನದಲ್ಲಿ ಶವ ಸುಡುವ ಸಿಬ್ಬಂದಿ ಜೊತೆ ಉಪಹಾರ ಸೇವಿಸಿದ ಬೆಂಗಳೂರು ನಗರ ಜಿಲ್ಲಾಧಿಕಾರಿ...!

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d