Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

NEW IT PORTAL 2.0 | ಸಾವಿರಾರು ಕೋಟಿ ರೂ. ವೆಚ್ಚ ಮಾಡಿ ನಿರ್ಮಾಣ ಮಾಡಿದ ಹೊಸ ಇನ್ ಕಮ್ ಟ್ಯಾಕ್ಸ್ 2.0 ಪೋರ್ಟಲ್ ನಲ್ಲಿ ದೋಷ ; ಇ-ಫೈಲಿಂಗ್ ಮಾಡೋಕೆ ಆದಾಯ ತೆರಿಗೆದಾರರ ಸರ್ಕಸ್

ಆದಾಯ ತೆರಿಗೆ ನೂತನ ಇ-ಫೈಲಿಂಗ್ ಪೋರ್ಟಲ್ ಜೂ.7ರಂದು ಅಧಿಕೃತವಾಗಿ ಉದ್ಘಾಟನೆಗೊಂಡು ಮೂರು ವಾರ ಕಳೆದರೂ ವೆಬ್ ಸೈಟ್ ಸೂಕ್ತ ರೀತಿ ಕಾರ್ಯ ನಿರ್ವಹಿಸುತ್ತಿಲ್ಲ. ಈ ಬಗ್ಗೆ ದೇಶಾದ್ಯಂತ 700ಕ್ಕೂ ಹೆಚ್ಚು ಇ-ಮೇಲ್ ಗಳು ಆದಾಯ ತೆರಿಗೆ ಇಲಾಖೆಗೆ ಹರಿದುಬಂದಿದೆ. ಕೇಂದ್ರ ಹಣಕಾಸು ಸಚಿವರಿಂದ ಶೀಘ್ರ ಸಮಸ್ಯೆ ಇತ್ಯರ್ಥದ ಭರವಸೆ

by Bengaluru Wire Desk
June 24, 2021
in BW Special, News Wire
Reading Time: 2 mins read
1

ಬೆಂಗಳೂರು ( www.bengaluruwire.com ) : ಆದಾಯ ತೆರಿಗೆ ಇಲಾಖೆಯು ಬರೋಬ್ಬರಿ 4,242 ಕೋಟಿ ರೂ. ಖರ್ಚು ಮಾಡಿ ಹೊರತಂದ ಇನ್ ಕಮ್‌ಟ್ಯಾಕ್ಸ್ ಪೋರ್ಟಲ್.2 ನೆಲಕಚ್ಚಿದೆ….!

2020-21ನೇ ಸಾಲಿನ ತೆರಿಗೆ ವಿವರ ಸಲ್ಲಿಕೆ ಮಾಡಲು ಇದೇ ಜೂನ್ 30ರಂದು ಇದ್ದ ಅವಧಿಯನ್ನು ಆದಾಯ ತೆರಿಗೆ ಇಲಾಖೆ ಸೆಪ್ಟೆಂಬರ್ 30ರ ತನಕ ವಿಸ್ತರಣೆ ಮಾಡಿದೆ. ಈ ಮಧ್ಯೆ ಈಗಾಗಲೇ ಕರ್ನಾಟಕ ಸೇರಿದಂತೆ ದೇಶಾದ್ಯಂತ ಇರುವ 5 ಕೋಟಿ ಗೂ ಹೆಚ್ಚಿನ ತೆರಿಗೆದಾರರು ಇ- ಫೈಲಿಂಗ್  ಮಾಡಲು ಜೂ.7ರಂದು ಉದ್ಘಾಟನೆಯಾದ ಇನ್ ಕಮ್‌ಟ್ಯಾಕ್ಸ್ ಪೋರ್ಟಲ್.2 ನಲ್ಲಿ ಶತ ಪ್ರಯತ್ನ ಮಾಡಿದರೂ ಆಗುತ್ತಿಲ್ಲ.

ಸಾಫ್ಟ್ ವೇರ್ ದೈತ್ಯ ಸಂಸ್ಥೆಯೆಂಬ ಹಿರಿಮೆಗಳಿಸಿದ ಇನ್ ಫೋಸಿಸ್ ಈ ವೆಬ್ ಸೈಟ್ ವಿನ್ಯಾಸ ಮಾಡಿದ್ದು, ಸೂಕ್ತ ರೀತಿಯಲ್ಲಿ ಪೋರ್ಟಲ್ ಕಾರ್ಯನಿರ್ವಹಿಸದ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ನೂರಾರು ಆಕ್ಷೇಪಣೆಗಳು ಸಲ್ಲಿಕೆಯಾಗಿದೆ.

ಈಗಾಗಲೇ ಅಸ್ಥಿತ್ವದಲ್ಲಿದ್ದ www.incometaxindiaefiling.gov.in ಕಾಲ ಕಾಲಕ್ಕೆ ಈ ಪೋರ್ಟಲ್ ಅಪಡೇಟ್ ಆಗುತ್ತಿದ್ದರಿಂದ ಈ ವೆಬ್ ಫೊರ್ಟಲ್, ಆದಾಯ ತೆರಿಗೆ ಪಾವತಿದಾರರು, ತೆರಿಗೆ ವೃತ್ತಿಪರರು ಹಾಗೂ ಆದಾಯ ತೆರಿಗೆ ಇಲಾಖೆಗೂ ಸಾಕಷ್ಟು ಅನುಕೂಲವಾಗಿತ್ತು. ಆದರೆ ಇತ್ತೀಚೆಗೆ  www.incometax.gov.in ಎಂಬ ಹೊಸ ವೆಬ್ ಸೈಟ್ ಪ್ರಾರಂಭಿಸಲು ಐಟಿ ಇಲಾಖೆ ನಿರ್ಧರಿಸಿತ್ತು. ಅದರಂತೆ ಹಳೆಯ ವೆಬ್ ಸೈಟ್ ಕಾರ್ಯಾಚರಣೆ ನಿಲ್ಲಿಸಿ, ತೆರಿಗೆದಾರರ 4,242 ಕೋಟಿ ರೂ. ಅಥವಾ 6,000 ಕೋಟಿ ರೂ. ಹಣ ಕರ್ಚು ಮಾಡಿ ಹೊಸ ವೆಬ್ ಸೈಟ್ ಮಾಡುವ ಅವಶ್ಯಕತೆಯ ಬಗ್ಗೆ ಕರ್ನಾಟಕ ತೆರಿಗೆ ಪಾವತಿದಾರರು ಹಾಗೂ ವೃತ್ತಿಪರರ ಸಂಘ (ಕೆಟಿಪಿಎ),  ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಗೆ ಬರೆದಿರುವ ಇ-ಮೇಲ್ ನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.

ಕೇಂದ್ರ ಹಣಕಾಸು ಸಚಿವರಿಗೆ ಕಳುಹಿಸಿದ ಇ-ಮೇಲ್

ಹೊಸ ವೆಬ್ ಸೈಟ್ ಬದಲಿಗೆ ಹಳೆಯದೇ ಮುಂದುವರೆಸಿ :

ಹೊಸ ವೆಬ್ ಸೈಟ್ ಮಾಡುವ ಬದಲು ಹಳೆಯ ವೆಬ್ ಸೈಟ್ ಗೆ ಹೊಸ ರೂಪ ನೀಡಬಹುದಿತ್ತು. ಅದೇ ಹಣವನ್ನು ತೆರಿಗೆ ಪಾವತಿದಾರರ ಹಾಗೂ ತೆರಿಗೆ ವೃತ್ತಿಪರರ ಸಾಮಾಜಿಕ ಭದ್ರತಾ ಕೆಲಸ ಕಾರ್ಯಗಳಿಗೆ ಬಳಸಬಹುದಿತ್ತು ಎಂದು ಇ-ಮೇಲ್ ನಲ್ಲಿ ತಿಳಿಸಲಾಗಿದೆ. ಈ ಪತ್ರದ ಪ್ರತಿ “ಬೆಂಗಳೂರು ವೈರ್” ಗೆ ಲಭ್ಯವಾಗಿದೆ.

ಕರ್ನಾಟಕ ಟ್ಯಾಕ್ಸ್ ಪೇಯರ್ಸ್ ಎಂಡ್ ಪ್ರಾಕ್ಟೀಷನರ್ ಅಸೋಸಿಯೇಷನ್ ಈ ಸಂಬಂಧ ಕೇಂದ್ರ ಸಚಿವರಿಗೆ ಆದಾಯ ತೆರಿಗೆ ಇಲಾಖೆಯ ಇನ್ ಕಮ್‌ಟ್ಯಾಕ್ಸ್ ಪೋರ್ಟಲ್.2 ಕಾರ್ಯನಿರ್ವಹಣೆಯಲ್ಲಿ ಎದುರಾಗುತ್ತಿರುವ ಪ್ರಮುಖ 31 ಸಮಸ್ಯೆಗಳನ್ನು ಪಟ್ಟಿ ಮಾಡಿದೆ.

  • ಜಫ್ರುಲ್ಲಾ ಸತ್ತಾರ್ ಖಾನ್, ಅಧ್ಯಕ್ಷರು, ಕೆಟಿಪಿಎ ಸಂಘ

“ಹೊಸ ವೆಬ್ ಸೈಟ್ ನಲ್ಲಿನ ಸಮಸ್ಯೆಗಳನ್ನೂ ಸಂಪೂರ್ಣವಾಗಿ ಪರಿಹರಿಸಿದ ನಂತರ 2022 ರ ಏ.1ರಿಂದ ಹೊಸ ವೆಬ್ ಸೈಟ್ ಕಾರ್ಯಾಚರಣೆ ಜಾರಿಗೆ ಬರಲಿ. ಅಲ್ಲಿಯ ತನಕ ಹಳೆಯ ವೆಬ್ ಸೈಟ್ ಬಳಕೆ ಮಾಡಲಿ. ಜಿಎಸ್ ಟಿ ಪೋರ್ಟಲ್ ನಿರ್ಮಾಣ ವಿಚಾರದಲ್ಲಿ ಇನ್ ಫೋಸಿಸ್ ಕಾರ್ಯವೈಖರಿ ಬಗ್ಗೆ ಹಲವಾರು ಗ್ರಾಹಕರು ಸಾಕಷ್ಟು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಹಳೆಯ ವೆಬ್ ಸೈಟ್ ನಿರ್ವಹಣೆ ಮಾಡುತ್ತಿದ್ದ ಟಾಟಾ ಕನ್ಸಲ್ಟೆನ್ಸಿ ಸಂಸ್ಥೆಗೆ ಹೊಸ ಪೋರ್ಟಲ್ ಜವಾಬ್ದಾರಿ ನೀಡಬೇಕಿದೆ.”
– ಜಫ್ರುಲ್ಲಾ ಸತ್ತಾರ್ ಖಾನ್, ಅಧ್ಯಕ್ಷರು, ಕೆಟಿಪಿಎ ಸಂಘ

ಹೊಸ ವೆಬ್ ಸೈಟ್ ಇನ್ ಕಮ್‌ಟ್ಯಾಕ್ಸ್ ಪೋರ್ಟಲ್.2 ನಲ್ಲಿ ಕಂಡುಬಂದಿರುವ ಪ್ರಮುಖ ಸಮಸ್ಯೆಗಳೆಂದರೆ :

1. ಮೊದಲ ಬಾರಿ ಲಾಗಿನ್ ಆಗುವಲ್ಲಿ ಸಮಸ್ಯೆ.
2. ಆದಾಯ ತೆರಿಗೆ ಕಲಮ್ 288 ರ ಅಡಿ ನೋಂದಣಿಯಾದ ಅಧಿಕೃತ ಆದಾಯ ತೆರಿಗೆ ವೃತ್ತಿಪರರು ಹೊಸ ಪೋರ್ಟಲ್ ನಲ್ಲಿ  ಅಧಿಕೃತ ಪ್ರತಿನಿಧಿಯಾಗಿ ನೋಂದಾಯಿಸಲು ಅವಕಾಶ ಕಲ್ಪಿಸಿಲ್ಲ.
3. ಪಾಸ್ ವರ್ಡ್ ಒಂದೊಮ್ಮೆ ಮರೆತು ಹೋದರೆ ಪುನಃ ಪಾಸ್ ವರ್ಡ್ ಸೆಟ್ ಮಾಡಲು ಫರ್ಗಾಟ್ ಪಾಸ್ ವರ್ಡ್ ಆಪ್ಶನ್ ಕಾರ್ಯನಿರ್ವಹಿಸುತ್ತಿಲ್ಲ.
4. ಹೊಸ ವೆಬ್ ಸೈಟ್ ನಲ್ಲಿ ಪ್ರೊಫೈಲ್ ಪಾನ್ ಕಾರ್ಡ್ ವಿಳಾಸಕ್ಕೂ, ಐಟಿಆರ್ ಸಂಪರ್ಕ ವಿಳಾಸಕ್ಕೂ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ.
5. ಆದಾಯ ತೆರಿಗೆ ಪಾವತಿಸಿದ ಪಿಡಿಎಫ್ ಫೈಲ್ ಡೌನ್ ಲೋಡ್ ಮಾಡಲಾಗುತ್ತಿಲ್ಲ.
6. ಫಾರ್ಮ್ 15-ಸಿಎ / 15- ಸಿಬಿ ಸಲ್ಲಿಕೆ ಮಾಡಲು ಆಗುತ್ತಿಲ್ಲ.
7. ತೆರಿಗೆ ಕಟ್ಟಿದರೂ ವೆಬ್ ಸೈಟ್ ನಲ್ಲಿ ಹಳೆಯ ತೆರಿಗೆ ಬೇಡಿಕೆ ಬಾಕಿಯಿದೆ ಎಂಬುದಾಗಿ ಹಳೆಯ ವೆಬ್ ಸೈಟ್ ನಲ್ಲಿರುವಂತೆ ಪ್ರದರ್ಶನವಾಗುತ್ತಿದೆ. ಇದನ್ನು ಸರಿಪಡಿಸುವ ಅಗತ್ಯವಿದೆ.
8. ಅಧಿಕೃತತೆಯನ್ನು ಖಚಿತಪಡಿಸಲು ಆಧಾರ್ ಒಟಿಪಿ ಜನರೇಟ್ ಮಾಡುವ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿಲ್ಲ.
9. ಉದ್ಯೋಗದ ಸ್ವರೂಪ ತಿಳಿಸುವುದನ್ನು ಖಡ್ಡಾಯಗೊಳಿಸಲಾಗಿದೆ. ಇದರಿಂದ ವಿವಿಧ ಮೂಲಗಳಿಂದ ಆದಾಯ ಪಡೆಯುವವರಿಗೆ “ಅನ್ವಯವಾಗುವುದಿಲ್ಲ” ಎಂಬ ಆಪ್ಶನ್ ಹೊಸ ವೆಬ್ ಸೈಟ್ ನಲ್ಲಿಲ್ಲ.
10. ಆಮೆಗತಿಯಲ್ಲಿ ವೆಬ್ ಸೈಟ್ ಕಾರ್ಯನಿರ್ವಹಿಸುತ್ತಿದೆ.
11. ತೆರಿಗೆ ಪಾವತಿದಾರರ ಪ್ರೊಫೈಲ್ ಅಪಡೇಟ್ ಮಾಡುವಾಗ ಆಧಾರ್ ಹಾಗೂ ಪ್ಯಾನ್ ಕಾರ್ಡ್ ದತ್ತಾಂಶವನ್ನು ಹೊಂದಾಣಿಕೆ ಮಾಡುವುದು ಕಷ್ಟವಾಗಿದೆ.

ಮೂರು ವಾರ ಕಳೆದರೂ ಸಮಸ್ಯೆ ಬಗೆಹರಿದಿಲ್ಲ :

ಹೊಸ ಐ-ಟಿ ಇ-ಫೈಲಿಂಗ್ ಪೋರ್ಟಲ್ ಜೂ.7ರಂದು ಅಧಿಕೃತವಾಗಿ ಉದ್ಘಾಟನೆಗೊಂಡರೂ ಎರಡು ವಾರ ಕಳೆದರೂ ವೆಬ್ ಸೈಟ್ ಸೂಕ್ತ ರೀತಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆದ್ದರಿಂದ ಈ ಬಗ್ಗೆ ತೆರಿಗೆದಾರರು, ಲೆಕ್ಕ ಪರಿಶೋಧಕರು ಸೇರಿದಂತೆ ಹಲವರು ಆದಾಯ ತೆರಿಗೆ ಇಲಾಖೆಗೆ 700ಕ್ಕೂ ಹೆಚ್ಚು ಇ-ಮೇಲ್ ಮಾಡಿ ಆ ಕುರಿತಂತೆ ವೆನ್ ಸೈಟ್ ನಲ್ಲಿ 2,000ಕ್ಕೂ‌ ಮಿಗಿಲಾದ ಸಮಸ್ಯೆಗಳನ್ನು ಗುರ್ತಿಸಿದ್ದರು. ಈ ಬಗ್ಗೆ ಇದೇ ಜೂ.22ರಂದು ಆನ್ ಲೈನ್ ಮೀಟಿಂಗ್ ಕರೆದಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಇನ್ ಫೋಸಿಸ್ ಸಂಸ್ಥೆಗೆ ಶೀಘ್ರದಲ್ಲೇ ನೂತನ ಟ್ಯಾಕ್ಸ್ ಪೋರ್ಟಲ್ ನಲ್ಲಿನ ಸಮಸ್ಯೆ ಬಗೆಹರಿಸಲು ಸೂಚಿಸಿದ್ದರು. ಇನ್ನೊಂದೆಡೆ ಕಾಲಮಿತಿಯಲ್ಲಿ ಎಲ್ಲಾ ತಾಂತ್ರಿಕ ಸಮಸ್ಯೆ ಬಗೆಹರಿಯುವ ಬಗ್ಗೆ ಭರವಸೆ ನೀಡಿದ್ದಾರೆ.

ಇನ್ಸ್ ಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಸಂಸ್ಥೆಗೆ ಏಳು ಜನರ ಟಾಸ್ಕ್ ಫೋರ್ಸ್ ತಂಡ ರಚಿಸಿ, ನೂತನ ವಬ್ ಸೈಟ್ ನಲ್ಲಿ ಕಂಡುಬಂದಿರುವ ಸಮಸ್ಯೆಗಳನ್ನು ಗುರ್ತಿಸಿ ವರದಿ ನೀಡುವ ಜವಾಬ್ದಾರಿಯನ್ನು ನೀಡಿದೆ ಎಂದು ಕೆಟಿಪಿಎ ಸಂಘ ತಿಳಿಸಿದೆ.

ಈ ಹಿಂದಿನ ಟ್ಯಾಕ್ಸ್ ಪೋರ್ಟಲ್ ನಲ್ಲಿ ತೆರಿಗೆ ಪಾವತಿದಾರರಿಗೆ ತೆರಿಗೆ ಹಣದ ಮರುಪಾವತಿ (ರಿ-ಫಂಡ್) ಮೂರು ತಿಂಗಳ ಒಳಗೆ ಬರುತ್ತಿತ್ತು. ಆದರೆ ಹೊಸ ಟ್ಯಾಕ್ಸ್ ಪೋರ್ಟಲ್ ನಿರ್ಮಿಸಿ,  ಕೇವಲ ಒಂದು ದಿನದಲ್ಲಿ ರಿ-ಫಂಡ್ ನೀಡುವುದಾಗಿ ಕೇಂದ್ರ ಸಚಿವರು ಈ ಹಿಂದೆ ಹೇಳಿದ್ದರು. ಒಟ್ಟಾರೆ ಟ್ಯಾಕ್ಸ್ ಫೈಲಿಂಗ್ ನಲ್ಲಿ ಕೇವಲ ಶೇ.2 ರಿಂದ 3ರಷ್ಟು ರಿ-ಫಂಡ್ ಹಣ ಕೊಡಿಸಲು ತೆರಿಗೆದಾರ 4,242 ಕೋಟಿ ರೂ. ಹಣ ಕರ್ಚು ಮಾಡಬೇಕಾದ ಅವಶ್ಯಕತೆ ಏನಿತ್ತು? ಅಂತ ಕೆಟಿಪಿಎ ಸಂಘದ ಅಧ್ಯಕ್ಷ ಜಫ್ರುಲ್ಲಾ ಸತ್ತರ್ ಖಾನ್ ಪ್ರಶ್ನಿಸಿದ್ದಾರೆ.

A meeting was held between senior officers of Finance Ministry & @Infosys on 22.06.2021 on issues in new Income Tax Portal.The meeting was presided over by Hon’ble FM, Smt. @nsitharaman. MoS(Finance), Sh @ianuragthakur also participated in the meeting(1/5)https://t.co/USjZV486W7 pic.twitter.com/0dDLiyuWJx

— Income Tax India (@IncomeTaxIndia) June 22, 2021

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW BIG EXPOSE- 2 | ಕಾಂಟ್ರಾಕ್ಟರ್ಸ್ ಲಾಭಿಗೆ ಬಲಿಯಾಗುತ್ತಿದೆ ಬಿಬಿಎಂಪಿ ಅರಣ್ಯ ಇಲಾಖೆ? : ಸಮಗ್ರ ಶುದ್ಧೀಕರಣದ ಅಗತ್ಯವಿದೆ ಅರಣ್ಯ ಘಟಕಕ್ಕೆ

Next Post

ವಿಸ್ತ್ರತ ಶ್ರೇಣಿಯ ಪಿನಾಕ ರಾಕೆಟ್ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ : ಡಿಆರ್ ಡಿಒ

Next Post

ವಿಸ್ತ್ರತ ಶ್ರೇಣಿಯ ಪಿನಾಕ ರಾಕೆಟ್ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿಯಾಗಿದೆ : ಡಿಆರ್ ಡಿಒ

ವಿಧಾನಸೌಧದ ಸಾಂದರ್ಭಿಕ ಚಿತ್ರ

SMART CITY NEWS | ಕೋವಿಡ್ ತುರ್ತು ಪರಿಸ್ಥಿತಿಯ ನಿರ್ವಹಣೆಗೆ ಕೇಂದ್ರ ಸರ್ಕಾರದ ವಿಶೇಷ ಪುರಸ್ಕಾರಕ್ಕೆ ಪಾತ್ರವಾಯ್ತು ಬೆಂಗಳೂರು

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d