Friday, June 13, 2025
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

  • Bengaluru Focus
    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
  • Home
  • News Wire

    ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

    Air India Plane Crash | ಏರ್ ಇಂಡಿಯಾ ಭಾರೀ ವಿಮಾನ ದುರಂತ: 242 ಜನರಿದ್ದ ವಿಮಾನ ಟೇಕ್ ಆಫ್ ಆಗುತ್ತಿದ್ದಂತೆಯೇ ಪತನ 

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಸಾಂದರ್ಭಿಕ ಚಿತ್ರ

    Railway News | ರೈಲ್ವೇ ಪ್ರಯಾಣಿಕರಿಗೆ ಸಂತಸದ ಸುದ್ದಿ : 24 ಗಂಟೆ ಮುಂಚಿತವಾಗಿ ಸೀಟು ಖಚಿತ!

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಗೌರಿಬಿದನೂರು ತಾಲೂಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿಯಲ್ಲಿ ಇಂಧನ ಇಲಾಖೆ ಮತ್ತು ಬೆಸ್ಕಾಂ ವತಿಯಿಂದ ಸ್ಥಾಪಿಸಲಾದ ಸೋಲಾರ್ ಘಟಕವನ್ನು ಲೋಕಾರ್ಪಣೆಗೊಳಿಸಿದರು.

    ಕುಸುಮ್‌- ಸಿ ಯೋಜನೆಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು 7 ತಾಸು ವಿದ್ಯುತ್: ಸಿಎಂ ಸಿದ್ದರಾಮಯ್ಯ

    ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಮುಂದೂಡಿಕೆ: ತಾಂತ್ರಿಕ ದೋಷವೇ ಕಾರಣ

    DCM DK Shivakumar

    ಜಾತಿಗಣತಿ ವಿಚಾರವಾಗಿ ಎದ್ದಿರುವ ಅಪಸ್ವರ, ಗೊಂದಲ ಬಗೆಹರಿಸಲು ಮತ್ತೊಮ್ಮೆ ಅವಕಾಶ: ಡಿಸಿಎಂ ಡಿ.ಕೆ. ಶಿವಕುಮಾರ್

    ಪ್ರಧಾನಿ ನರೇಂದ್ರ ಮೋದಿಯವರ ಸಾಂದರ್ಭಿಕ ಚಿತ್ರ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 11 ವರ್ಷಗಳ ಸಂಭ್ರಮ: ಅಭಿವೃದ್ಧಿ ಪಥದಲ್ಲಿ ಭಾರತ

    ರಾಷ್ಟ್ರೀಯ ತನಿಖಾ ದಳಕ್ಕೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಭಯೋತ್ಪಾದನಾ ಕೃತ್ಯದ ಆಯಾಮದಲ್ಲಿ ತನಿಖೆಗೆ ಆದೇಶ

  • Bengaluru Focus
    ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

    ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

    ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

    Weather News | ಮಳೆಗಾಲದ ಆರ್ಭಟ: ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್ : ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಬನ್ನೇರುಘಟ್ಟದಲ್ಲಿ ಗರ್ಭಿಣಿ ಜೀಬ್ರಾ ‘ಕಾವ್ಯ’ ಸಾವು: ಆಘಾತ ಮತ್ತು ಕ್ಯಾಪ್ಚರ್‌ ಮಯೋಪತಿ ಕಾರಣವಿರುವ ಶಂಕೆ

    ಹಸಿರು ಕ್ರಾಂತಿಗೆ ಬಮೂಲ್‌ನ ಪರಿಸರಸ್ನೇಹಿ ಹೆಜ್ಜೆ: ಆರು ತಿಂಗಳಲ್ಲಿ ಕರಗುವ ಹಾಲಿನ ಕವರ್‌ಗಳ ಬಳಕೆ

    ಚೆನಾಬ್ ಸೇತುವೆ ನಿರ್ಮಾಣಕ್ಕೆ 17 ವರ್ಷ ಕಾಲ ಕೊಡುಗೆ ನೀಡಿದ ಪ್ರೊ.ಮಾಧವಿ ಲತಾ: ಬೆಂಗಳೂರು ಐಐಎಸ್‌ಸಿ ಶಿಲಾತಜ್ಞೆಯ ಸಾಧನೆ ಅಂತಿಂತದ್ದಲ್ಲ!!

    ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ದುರಂತ; ಪೊಲೀಸ್ ಅಧಿಕಾರಿಗಳ ಅಮಾನತು ತೀವ್ರ ಖಂಡಿಸಿದ ಭಾಸ್ಕರ್ ರಾವ್!

    Namma Metro Purple Line

    ನಮ್ಮ ಮೆಟ್ರೋದಲ್ಲಿ ದಾಖಲೆಯ ಪ್ರಯಾಣಿಕರ ಸಂಖ್ಯೆ: ಒಂದು ದಿನದಲ್ಲಿ 9.66 ಲಕ್ಷಕ್ಕೂ ಹೆಚ್ಚು ಜನ ಸಂಚಾರ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ದುರಂತ ಪ್ರಕರಣ : ವಿರಾಟ್ ಕೊಹ್ಲಿ ತಂಡದಿಂದ ತೀವ್ರ ಸಂತಾಪ

  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil
No Result
View All Result
Bengaluru Wire
No Result
View All Result
Home BW Special

BW SPECIAL | ಹೊಸ ರೇಷನ್ ಕಾರ್ಡ್ ಗಾಗಿ 3.37 ಲಕ್ಷ ಅರ್ಜಿ ಸಲ್ಲಿಕೆ ; ಎರಡೂವರೆ ವರ್ಷದಿಂದ ಹೊಸ ಕಾರ್ಡ್ ವಿತರಣೆಯನ್ನೇ ನಿಲ್ಲಿಸಿದ ರಾಜ್ಯ ಸರ್ಕಾರ…!

4.08 ಲಕ್ಷ ಎಎವೈ, ಬಿಪಿಎಲ್ ಕಾರ್ಡ್ ಅನರ್ಹರ ಪಾಲು | ಅನರ್ಹರ ಬೇಟೆಗೆ ನೈಜ ಫಲಾನುಭವಿಗಳಿಗೆ ಶಿಕ್ಷೆ ? | ರಾಜ್ಯದಲ್ಲಿ 1.48 ಕೋಟಿ ರೇಷನ್ ಕಾರ್ಡ್ ಹಂಚಿಕೆ | 2011 ಜನಗಣತಿಯಂತೆ ರಾಜ್ಯದಲ್ಲಿವೆ ಶೇ.96ರಷ್ಟು ಬಿಪಿಎಲ್ ಕುಟುಂಬಗಳು | ಈ ಆಗಸ್ಟ್ ನಂತರ ಹೊಸ ಪಡಿತರಚೀಟಿ ವಿತರಣೆ ಸಾಧ್ಯತೆ

by Bengaluru Wire Desk
July 2, 2021
in BW Special, Public interest
Reading Time: 2 mins read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು ( www.bengaluruwire.com ) : ರಾಜ್ಯ ಸರ್ಕಾರ ಕಳೆದ ಎರಡೂವರೆ ವರ್ಷದಿಂದ ಹೊಸದಾಗಿ ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ವಿತರಣೆಯನ್ನೇ ಸ್ಥಗಿತಗೊಳಿಸಿದೆ. ಅಲ್ಲದೆ ಈಗಾಗಲೇ ಆಹಾರ ಇಲಾಖೆಗೆ 3.37 ಲಕ್ಷ ಅರ್ಜಿ ಸಲ್ಲಿಸಿದ್ದರೂ ಇನ್ನೂ ವಿಲೇವಾರಿಯಾಗದೆ ಬಾಕಿ ಉಳಿದಿದೆ.

ಕರೋನಾ ಸಂಕಷ್ಠ ರಾಜ್ಯದಲ್ಲಿ ಒಂದೆಡೆ‌ ಸಾಮಾನ್ಯ ಜನರನ್ನು ಹಿಂಡೆ ಹಿಪ್ಪೆ ಮಾಡ್ತಿದ್ರೆ ಇನ್ನೊಂದೆಡೆ ಆರ್ಥಿಕ‌‌ ತೊಂದರೆಯಿಂದ ಬಳಲುತ್ತಿದ್ದಾರೆ. ಈ‌ ಮಧ್ಯೆ ಎಪಿಎಲ್ ಮತ್ತು ಬಿಪಿಎಲ್ ರೇಷನ್ ಕಾರ್ಡ್ ವಿತರಣೆ ಪ್ರಕ್ರಿಯೆ ನಿಲ್ಲಿಸಿರುವುದು ಅರ್ಹತೆ ಹೊಂದಿದ ನಿಜವಾದ ಫಲಾನುಭವಿಗಳ ಜೀವನಕ್ಕೆ ಕಲ್ಲು ಹಾಕಿದಂತಾಗಿದೆ.

2018 ರ ಮಧ್ಯಭಾಗದಿಂದಲೇ ರಾಜ್ಯದಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್ ವಿತರಣೆ ಮಾಡುವುದನ್ನು ನಿಲ್ಲಿಸಲಾಗಿದೆ. ಅಲ್ಲಿಂದ 2019 ಹಾಗೂ 2020ರಲ್ಲಿ ಕೆಲವು ದಿನಗಳ ಕಾಲ ಮಾತ್ರ ಅರ್ಜಿ ಪರಿಶೀಲಿಸಿ, ಕಾರ್ಡ್ ವಿತರಿಸಿ ಪುನಃ ಕಾರ್ಡ್ ವಿತರಣೆಯನ್ನೇ ನಿಲ್ಲಿಸಲಾಗಿದೆ. ಇದರಿಂದ ನಿಜವಾದ ಫಲಾನುಭವಿಗಳು ತೊಂದರೆ ಅನುಭವಿಸುವಂತಾಗಿದೆ.

ಕರ್ನಾಟಕದಲ್ಲಿ 1.48 ಕೋಟಿ ರೇಷನ್ ಕಾರ್ಡ್ ಹಂಚಿಕೆ :

ರಾಜ್ಯಾದ್ಯಂತ ಒಟ್ಟು 1,48,89,430 ರೇಷನ್ ಕಾರ್ಡ್ (1.48 ಕೋಟಿ ರೇಷನ್ ಕಾರ್ಡ್) ಗಳನ್ನು ಹಂಚಿಕೆ ಮಾಡಲಾಗಿದೆ. ಆ ಪೈಕಿ 10,91,038 ಅಂತ್ಯೋದಯ, 1,15,48,861 ಬಿಪಿಎಲ್ ಕಾರ್ಡ್ ಹಾಗೂ 22,49,531 ಎಪಿಎಲ್ ಕಾರ್ಡ್ ದಾರರಿದ್ದಾರೆ.

4.08 ಲಕ್ಷ ಎಎವೈ, ಬಿಪಿಎಲ್ ಕಾರ್ಡ್ ಅನರ್ಹರ ಪಾಲು :

ರಾಜ್ಯದಲ್ಲಿ ನಕಲಿ ದಾಖಲೆ ಅಥವಾ ಮಾಹಿತಿ ಮುಚ್ಚಿಟ್ಟು 4,06,488 ಅನರ್ಹತೆ ಹೊಂದಿದ ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ದಾರರು ಕಾರ್ಡ್ ಪಡೆದುಕೊಂಡಿರುವುದನ್ನು ಆಹಾರ ಇಲಾಖೆ ಗುರ್ತಿಸಿದೆ. ಆ ರೇಷನ್ ಕಾರ್ಡ್ ಗಳ ಪೈಕಿ 3.77 ಲಕ್ಷ ಬಿಪಿಎಲ್ ಕಾರ್ಡ್ ಗಳಿರುವುದು ಕಳವಳಕಾರಿ ಸಂಗತಿಯಾಗಿದೆ. ಈ ಬಗ್ಗೆ ಇಲಾಖೆ, ಈ ವರ್ಷದ ಏಪ್ರಿಲ್‌ ನಿಂದ ವಿವಿಧ ಆಯಾಮಾದಲ್ಲಿ ಪರಿಶೀಲನೆ ನಡೆಸಿ ಈತನಕ 7630 ಅಂತ್ಯೋದಯ, 1,39,851 ಬಿಪಿಎಲ್ ಕಾರ್ಡ್ ಸೇರಿ ಒಟ್ಟು 1.47 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಿದೆ.

2011 ಜನಗಣತಿಯಂತೆ ರಾಜ್ಯದಲ್ಲಿ ಶೇ.96ರಷ್ಟು ಬಿಪಿಎಲ್ ಕುಟುಂಬಗಳಿವೆ…!

ರಾಜ್ಯದ ಆಹಾರ ಇಲಾಖೆಯ ಅಧಿಕೃತ ಮಾಹಿತಿಯಂತೆ 2011 ರ ಜನಗಣತಿ ಪ್ರಕಾರ ಒಟ್ಟಾರೆ ಶೇ.96ರಷ್ಟು ಬಿಪಿಎಲ್ ಕುಟುಂಬಗಳಿವೆ ಎಂದು ಲೆಕ್ಕ ನೀಡಿದೆ. ಇನ್ನು ಈಗಾಗಲೇ ರಾಜ್ಯದಲ್ಲಿ ಹಂಚಿಕೆ ಮಾಡಿರುವ ರೇಷನ್ ಕಾರ್ಡ್ ಗಳ ಪೈಕಿ ಶೇ.85ರಷ್ಟು ಬಿಪಿಎಲ್ ಕಾರ್ಡ್ ಗಳಿವೆ ಎಂದು ತಿಳಿಸಿದೆ. ಪರಿಸ್ಥಿತಿ ಹೀಗಿರುವಾಗ ಹೊಸದಾಗಿ ಮತ್ತಷ್ಟು ಅಂತ್ಯೋದಯ ಅಥವಾ ಬಿಪಿಎಲ್ ರೇಷನ್ ಕಾರ್ಡ್ ಹಂಚಿಕೆ ಮಾಡಲು ಆಗದು. ಹಾಗಾಗಿಯೇ ಸರ್ಕಾರ, ಅಂತ್ಯೋದಯ ಹಾಗೂ ಬಿಪಿಎಲ್ ಕಾರ್ಡ್ ಪಡೆದುಕೊಂಡ ಅನರ್ಹರನ್ನು ಗುರ್ತಿಸುವ ಕೆಲಸಕ್ಕೆ ಕೈ ಹಾಕಿದೆ.

ಅನರ್ಹರನ್ನು ಗುರ್ತಿಸಿ ಅವರ ಬಿಪಿಎಲ್ ಕಾರ್ಡ್ ರದ್ದು ಮಾಡಿ ಆ ಜಾಗದಲ್ಲಿ ಅರ್ಹರಿಗೆ ಕಾರ್ಡ್ ವಿತರಿಸುವ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ. ಹೀಗಾಗಿ ಅನರ್ಹರನ್ನು ಗುರ್ತಿಸುವ ಕಾರ್ಯ ನಿರಂತರವಾಗಿ ಸಾಗಿದೆ ಅಂದು ಸರ್ಕಾದ ಉನ್ನತ ಮೂಲಗಳು ತಿಳಿಸಿವೆ.

ಬಿ.ಎಚ್.ಅನಿಲ್ ಕುಮಾರ್, ಐಎಎಸ್

“ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗಳ ಸಂಖ್ಯೆ 2011 ರ ಜನಗಣತಿ ಪ್ರಕಾರ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಬಿಪಿಎಲ್ ಕಾರ್ಡ್ ಪಡೆಯಲು ಯಾರು ಅರ್ಹರು, ಅನರ್ಹರೆಂದು‌ ಮಾನದಂಡ ನಿಗಧಿಪಡಿಸಿದೆ. ಆ ಮಾನದಂಡ ಉಲ್ಲಂಘಿಸಿ ಕಾರ್ಡ್ ಪಡೆದುಕೊಂಡ ಫಲಾನುಭವಿಗಳ ವಿವರಗಳ ದತ್ತಾಂಶಗಳನ್ನು ವಿವಿಧ ಇಲಾಖೆ ವಿವರಗಳ ಜೊತೆ ತಾಳೆ ಹಾಕಿ ಅನರ್ಹರನ್ನು ಗುರ್ತಿಸುವ ಕೆಲಸ ಏಪ್ರಿಲ್ ನಿಂದ ಆರಂಭವಾಗಿದೆ. ಇದು ನಿರಂತವಾಗಿ ನಡೆಯಲಿದೆ.”

“ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರ ಅಪ್ಲಿಕೇಶನ್ ಗಳನ್ನು ಪರಿಶೀಲಿಸುವ ಕಾರ್ಯ ಆಗಸ್ಟ್ ಒಳಗೆ ಪೂರ್ಣವಾಗಲಿದೆ. ಆನಂತರ ಸರ್ಕಾರ ತೀರ್ಮಾನ ಕೈಗೊಂಡು, ಹೊಸ ಕಾರ್ಡ್ ವಿತರಣೆ ಮಾಡಲಿದೆ.”

– ಬಿ.ಎಚ್.ಅನಿಲ್ ಕುಮಾರ್, ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ, ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ

1.51 ಲಕ್ಷ ಅರ್ಜಿಗಳಿನ್ನೂ ವಿಲೇವಾರಿಯಾಗಿಲ್ಲ :

ಜೂ.30 ರ ಆಹಾರ ಇಲಾಖೆಯ ಅಧಿಕೃತ ಮಾಹಿತಿ ಪ್ರಕಾರ ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ಗಾಗಿ 3,34,457 ಮಂದಿ ಅರ್ಜಿ ಸಲ್ಲಿಸಿದ್ದರೆ, 3,463 ಮಂದಿ ಎಪಿಎಲ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಆ ಪೈಕಿ ಒಟ್ಟಾರೆ 1,51,828 ಅರ್ಜಿಗಳನ್ನು ಇನ್ನೂ ಪರಿಶೀಲಿಸಬೇಕಿದೆ. ಈತನಕ ಒಟ್ಟಾರೆ ವಿವಿಧ ಕಾರಣಗಳಿಗಾಗಿ 62,411 ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಆದರೆ ಸ್ವೀಕರಿಸಿರುವ ಅರ್ಜಿಗಳ ಪೈಕಿ ದಾಖಲೆ ಪರಿಶೀಲನೆ ನಡೆಸಿದರೂ ಇನ್ನೂ ಅರ್ಜಿದಾರರು ನೆಲೆಸಿರುವ ವಾಸಸ್ಥಳ, ಅವರ ಸ್ಥಿತಿಗತಿಗಳ ಪರಿಶೀಲನೆ ನಡೆಸಿಲ್ಲ. ಕಳೆದ ವರ್ಷದಿಂದ ಕರೋನಾ ಸೋಂಕು ಏರಿಕೆಯಾದ ಮೇಲಂತೂ ಆಹಾರ ಇಲಾಖೆ ಸಿಬ್ಬಂದಿ ಸ್ಥಳ ಪರಿಶೀಲನೆಯನ್ನೇ ನಿಲ್ಲಿಸಿದ್ದಾರೆ.

ಹೀಗಾಗಿ ಅರ್ಜಿ ಸಲ್ಲಿಸಿದರೂ ಅರ್ಹರು ಬಿಪಿಎಲ್ ಕಾರ್ಡ್ ಪಡೆಯಲು ವರ್ಷಗಟ್ಟಲೆ ಕಾಯುವಂತಾಗಿದೆ. ಆಗಸ್ಟ್ ವೇಳೆಗೆ ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ಹೊಸ ಕಾರ್ಡ್ ವಿತರಣೆಗೆ ಅಗತ್ಯವಾದ ಪರಿಶೀಲನೆ ಕಾರ್ಯ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಆನಂತರ ಸರ್ಕಾರ ಈ ಕಾರ್ಡ್ ಗಳನ್ನು ವಿತರಣೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಅನರ್ಹ ರೇಷನ್ ಕಾರ್ಡ್ ದಾರರ ಹೆಡೆಮುರಿ ಕಟ್ಟುತ್ತಿರುವ ಇಲಾಖೆ :

ರಾಜ್ಯಾದ್ಯಂತ ಇರುವ ಎಲ್ಲಾ ರೇಷನ್ ಕಾರ್ಡ್ ಫಲಾನುಭವಿಗಳ ಆಧಾರ್ ಕಾರ್ಡ್ ದತ್ತಾಂಶವನ್ನು ಆಹಾರ ಇಲಾಖೆ ಹೊಂದಿದೆ. ಇಲಾಖೆ ಬಳಿಯಿರುವ ಆಹಾರ ಕಾರ್ಡ್ ಫಲಾನುಭವಿಗಳ ದತ್ತಾಂಶವನ್ನು ಆದಾಯ ತೆರಿಗೆ ಇಲಾಖೆ, ಕಂದಾಯ ಇಲಾಖೆ, ಮರಣಗಳ ದತ್ತಾಂಶ, ಸರ್ಕಾರಿ ನೌಕರರ ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (ಎಚ್ ಆರ್ ಎಂಎಸ್) ಮತ್ತಿತರ ಮೂಲಗಳಿಂದ ಮಾಹಿತಿ ಕಲೆ ಹಾಕಿ ಒಟ್ಟಾರೆ 4.06 ಲಕ್ಷ ಅನರ್ಹ ರೇಷನ್ ಕಾರ್ಡ್ ಗಳನ್ನು ಆಹಾರ ಇಲಾಖೆ ಗುರ್ತಿಸಿದೆ.

ಯಾವ ಮೂಲಗಳಿಂದ ಎಷ್ಟೆಷ್ಟು ಅನರ್ಹರಾಗಿರುವ ಅಂತ್ಯೋದಯ/ ಬಿಪಿಎಲ್ ರೇಷನ್ ಕಾರ್ಡ್ ಗುರ್ತಿಸಲಾಗಿದೆ?
ಮೂಲಗಳು
• ಜಿಲ್ಲಾ / ತಾಲೂಕು ಅಧಿಕಾರಿಗಳಿಂದ – 50,833
• ಆದಾಯ ತೆರಿಗೆ ಇಲಾಖೆ ದತ್ತಾಂಶ – 85,204
• 1.2 ಲಕ್ಷ ರೂ.ವಾರ್ಷಿಕ ಕುಟುಂಬದ ಆದಾಯ ಮೀರಿದ ಕಾರ್ಡ್ ಗಳು – 50,060
• ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಗಿಂತ ಹೆಚ್ಚು ಜಮೀನು ಹೊಂದಿದವರು – 2,18,125
• ಖಾಯಂ ಸರ್ಕಾರಿ ನೌಕರರು – 2,127

4.01 ಲಕ್ಷ ಮರಣ ಹೊಂದಿದ ಫಲಾನುಭವಿಗಳ ಹೆಸರು ಕೈಬಿಟ್ಟ ಇಲಾಖೆ…!

ಜನನ – ಮರಣಗಳ ಸಾಂಖ್ಯಿಕ ಇಲಾಖೆ ದತ್ತಾಂಶದೊಂದಿಗೆ ಆಹಾರ ಇಲಾಖೆ ವಿತರಿಸಿರುವ ದತ್ತಾಂಶದೊಂದಿಗೆ ತಾಳೆಹಾಕಿ ಈಗಾಗಲೇ ಮರಣ ಹೊಂದಿದ 4,01,30 ಫಲಾನುಭವಿಗಳ ಹೆಸರನ್ನು ರೇಷನ್ ಕಾರ್ಡ್ ಸದಸ್ಯರ ಪಟ್ಟಿಯಿಂದ ತಗೆದು ಹಾಕಿದೆ.

ಆಹಾರ ಧಾನ್ಯ ಖರೀದಿಗೆ ವರ್ಷಂಪ್ರತಿ 1 ಸಾವಿರ ಕೋಟಿ ರೂ. ಖರ್ಚು :

ಕೇಂದ್ರ ಸರ್ಕಾರ ಪ್ರತಿವರ್ಷ ರಾಜ್ಯಕ್ಕೆ 10 ಲಕ್ಷ ಅಂತ್ಯೋದಯ ಕಾರ್ಡ್ ಗಳಿಗೆ ಕೇಂದ್ರದ ಪಾಲಿನಲ್ಲಿ ಉಚಿತ ಆಹಾರ ಹಂಚಿಕೆ ಮಾಡುತ್ತೆ. ಅದೇ ರೀತಿ ಪ್ರತಿ ತಿಂಗಳು 1.10 ಕೋಟಿ ಬಿಪಿಎಲ್ ಕಾರ್ಡ್ ಗಳಿಗೆ 2.17 ಲಕ್ಷ ಮೆಟ್ರಿಕ್ ಟನ್ (21.10 ಕೋಟಿ) ಅಕ್ಕಿಯನ್ನು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಕೆಜಿಗೆ 2 ರೂ. ನಂತೆ ಸಬ್ಸೀಡಿ ದರದಲ್ಲಿ ರಾಜ್ಯಕ್ಕೆ ಹಂಚಿಕೆ ಮಾಡಲಿದೆ. ಆನಂತರ ಇದನ್ನು ಬಿಪಿಎಲ್ ಕಾರ್ಡ್ ದಾರರಿಗೆ ಉಚಿತವಾಗಿ ಆಹಾರ ಇಲಾಖೆ ವಿತರಣೆ ಮಾಡುತ್ತಿದೆ. ಉಳಿದ 5 ಲಕ್ಷ ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಅಕ್ಕಿ ವಿತರಣೆ ಮಾಡಲು ರಾಜ್ಯ ಸರ್ಕಾರವೇ ರೈತರಿಂದ ನೇರವಾಗಿ ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ಖರೀದಿ ಮಾಡುತ್ತದೆ.

ಹೀಗೆ ವರ್ಷಕ್ಕೆ ಆಹಾರಧಾನ್ಯ ಸಬ್ಸೀಡಿಗಾಗಿಯೇ ರಾಜ್ಯ ಸರ್ಕಾರ ಸಾರಿಗೆ ಮತ್ತಿತರ ಕರ್ಚು ಹೊರತುಪಡಿಸಿ ಕನಿಷ್ಠ ಒಂದು ಸಾವಿರ ಕೋಟಿ ರೂ. ಕರ್ಚು ಮಾಡುತ್ತಿದೆ. ಇದರಲ್ಲಿ ಅನರ್ಹ ಪಡಿತರದಾರರೂ ಸೇರಿಕೊಂಡರೆ ಅರ್ಹರಿಗೆ ದೊರಕಬೇಕಾದ ಸವಲತ್ತು ಸಿಗದೆ ವಂಚಿತರಾಗುತ್ತಾರೆ. ಇದಕ್ಕಾಗಿ ಸರ್ಕಾರ ಅನರ್ಹರನ್ನು ಗುರುತಿಸುವ ಪ್ರಕ್ರಿಯೆಯಲ್ಲಿ ನೂತನವಾಗಿ ಕಾರ್ಡ್ ಗಾಗಿ ಅರ್ಜಿ ಹಾಕಿದವರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಸರ್ಕಾರ ಇದನ್ನು ತ್ವರಿತವಾಗಿ ಸರಿಪಡಿಸುವ ಅಗತ್ಯವಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

Sharing is Caring

  • Click to share on Follow Us on Google News (Opens in new window) Follow Us on Google News
  • Click to share on WhatsApp (Opens in new window) WhatsApp
  • Click to print (Opens in new window) Print
  • Click to share on X (Opens in new window) X
  • Click to share on Facebook (Opens in new window) Facebook
  • Click to share on Telegram (Opens in new window) Telegram

Like this:

Like Loading...
Previous Post

ಅಧಿಕ ಪೌಷ್ಠಿಕಾಂಶವುಳ್ಳ ತಾಮ್ರ ಕೆಂಪು ಬಣ್ಣದ ಸಿದ್ದು ಹಲಸಿನ ರುಚಿಗೆ ಮನಸೋತ ಬಿ.ಎಸ್.ಯಡಿಯೂರಪ್ಪ

Next Post

ಪೆಟ್ರೊಲ್ ಬಂಕ್ ಮೇಲೆ ದರೋಡೆಕೋರರಿಂದ ಹಠಾತ್ ದಾಳಿ ; ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದರೋಡೆ ಕೃತ್ಯ

Next Post

ಪೆಟ್ರೊಲ್ ಬಂಕ್ ಮೇಲೆ ದರೋಡೆಕೋರರಿಂದ ಹಠಾತ್ ದಾಳಿ ; ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ದರೋಡೆ ಕೃತ್ಯ

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2ರ ಮೊದಲ ವರದಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಸಲ್ಲಿಕೆ ಮಾಡಿದ ಸಂದರ್ಭದ ಚಿತ್ರ

ಸಾರ್ವಜನಿಕರು ಆನ್ ಲೈನ್ ನಲ್ಲಿ ಈಗಾಗಲೇ ಸಲ್ಲಿಸಿದ ದಾಖಲೆಗಳನ್ನು ಪದೇ ಪದೇ ಕೇಳದಿರಿ ; ಸರ್ಕಾರಕ್ಕೆ ಆಡಳಿತ ಸುಧಾರಣಾ ಆಯೋಗ-2ರ ಶಿಫಾರಸ್ಸು

Please login to join discussion

Like Us on Facebook

Follow Us on Twitter

Recent News

ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

June 13, 2025
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

June 13, 2025
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಅಹಮದಾಬಾದ್ ವಿಮಾನ ದುರಂತ: ಪ್ರಧಾನಿ ಮೋದಿ ಸ್ಥಳಕ್ಕೆ ಭೇಟಿ, ಪರಿಹಾರ ಕಾರ್ಯಗಳಿಗೆ ಚುರುಕು

June 13, 2025
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಕಟ್ಟಡಗಳಲ್ಲಿ ನೆಲ ಅಂತಸ್ತು ಸಂಪೂರ್ಣವಾಗಿ ‘ಸ್ಟಿಲ್ಟ್ ಪಾರ್ಕಿಂಗ್’ ಕಡ್ಡಾಯ : ನಗರಾಭಿವೃದ್ಧಿ ಇಲಾಖೆಯಿಂದ ಹೊಸ ಕರಡು ಅಧಿಸೂಚನೆ

June 13, 2025

ಕೆಂಪೇಗೌಡ ಬಡಾವಣೆಯಲ್ಲಿ ರಸ್ತೆ ಕಾಮಗಾರಿಗೆ ಅಡ್ಡಿಯಾಗಿದ್ದ 3.12 ಎಕರೆ ಭೂಮಿ ವಶಕ್ಕೆ: ಬಿಡಿಎ ಕಾರ್ಯಾಚರಣೆ

June 13, 2025
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video
  • Change language
    • Kannada
    • English
    • Telugu
    • Hindi
    • Malayalam
    • Tamil

© 2023 All Rights Reserved ಬೆಂಗಳೂರು ವೈರ್‌

Join the Group
%d