Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

Karnataka Flood | ರಾಜ್ಯದ ಪ್ರವಾಹ ಪರಿಸ್ಥಿತಿ ವಿಷಯದಲ್ಲಿ ಸಂವೇದನಾ ಶೀಲತೆಯಿಂದ ಕಾರ್ಯನಿರ್ವಹಿಸಿ : ಮುಖ್ಯಮಂತ್ರಿಗಳಿಂದ ಅಧಿಕಾರಿಗಳಿಗೆ ಸೂಚನೆ

ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ಮನೆಹಾನಿಯ ಬಾಕಿ ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು - ಬಿಎಸ್ವೈ ನಿಂದ ಜಿಲ್ಲಾಧಿಕಾರಿಗಳಿಗೆ ಫರ್ಮಾನು

by Bengaluru Wire Desk
July 25, 2021
in Public interest
Reading Time: 2 mins read
0

ಬೆಳಗಾವಿ ( www.bengaluruwire.com ) : ರಾಜ್ಯದಲ್ಲಿ ಕೋವಿಡ್ ಸಂಕಷ್ಟದ ಮಧ್ಯೆಯೂ ಪ್ರವಾಹ ಸ್ಥಿತಿ ಉದ್ಭವಿಸಿದೆ.‌ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾಡಳಿತಗಳು ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಹಣಕಾಸು ಸೇರಿದಂತೆ ಯಾವುದೇ ತೊಂದರೆ ಇದ್ದರೂ ತಕ್ಷಣವೇ ಸಂಬಂಧಿಸಿದವರ ಗಮನಕ್ಕೆ ತಂದು ಸರಿಪಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೂಚನೆ ನೀಡಿದರು.

ನಗರದ ಪ್ರವಾಸಿಮಂದಿರದಲ್ಲಿ ಭಾನುವಾರ (ಜು.25) ನಡೆದ ಅತಿವೃಷ್ಟಿ – ಪ್ರವಾಹ ಕುರಿತ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಳೆದ ವಾರದಿಂದ ದಾಖಲೆ ಪ್ರಮಾಣದ ಮಳೆಯಾಗಿದೆ. ರಾಜ್ಯದ ಅಧಿಕಾರಿಗಳು ಮಹಾರಾಷ್ಟ್ರದ ಜತೆ ನಿರಂತರ ಸಂಪರ್ಕದಲ್ಲಿದ್ದು, ಪ್ರವಾಹ‌ ನಿರ್ವಹಣೆ ಕುರಿತು ನಿಗಾ ವಹಿಸಲಾಗಿದೆ.

2-3 ದಿನಗಳಲ್ಲಿ ಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಪರಿಸ್ಥಿತಿ ನಿರ್ವಹಣೆಗೆ ಸರಕಾರದಿಂದ ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಇದಕ್ಕೂ ಮುನ್ನ ಬೆಳಗ್ಗೆ ಪ್ರವಾಹ ಪೀಡಿತ ಸ್ಥಳಗಳಿಗೆ ಹಿರಿಯ ಸಚಿವರು, ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಪ್ರವಾಹ-ಬಾಕಿ ಪರಿಹಾರ ಬಿಡುಗಡೆಗೆ ಸೂಚನೆ:

ಕಳೆದ ವರ್ಷದ ಪ್ರವಾಹ ಸಂದರ್ಭದಲ್ಲಿ ಮನೆಹಾನಿಯ ಬಾಕಿ ಪರಿಹಾರ ಬಿಡುಗಡೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ 113 ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿರುವುದರಿಂದ ಜನರ ತುರ್ತು ರಕ್ಷಣೆ ಹಾಗೂ ತಾತ್ಕಾಲಿಕ ಪುನರ್ವಸತಿಗಾಗಿ 89 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ.

ಜನರ ಕಷ್ಟಗಳನ್ನು ಅರಿತುಕೊಂಡು ಜಿಲ್ಲಾಡಳಿತ ಸಂವೇದನಾಶೀಲತೆಯಿಂದ ಕೆಲಸ ಮಾಡಬೇಕು. ಪರಿಹಾರ ಕಾರ್ಯದಲ್ಲಿ ತೊಡಕು ಉಂಟಾದರೆ ತಕ್ಷಣವೇ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ನಿರ್ದೇಶನ ನೀಡಿದರು.

  • ಪ್ರವಾಹದಿಂದ ತೊಂದರೆಗೆ ಒಳಗಾದ ನಾಗರೀಕರ ಬವಣೆ ಆಲಿಸಿದ ಬಿ.ಎಸ್.ಯಡಿಯೂರಪ್ಪ

ಎನ್.ಡಿ.ಆರ್.ಎಫ್. ಅನುದಾನ ಹೆಚ್ಚಳಕ್ಕೆ ಮನವಿ:

ಸಭೆಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ ಅವರು, ಪ್ರವಾಹ ಸಂದರ್ಭದಲ್ಲಿ ತುರ್ತು ಔಷಧಿ ಮತ್ತಿತರ ಸಾಮಗ್ರಿಗಳನ್ನು ಎನ್.ಡಿ.ಆರ್.ಎಫ್. ಅನುದಾನದಲ್ಲಿ ಖರೀದಿಸಬೇಕು ಎಂದು ಸೂಚನೆ ನೀಡಿದರು.

ಎನ್.ಡಿ.ಆರ್.ಎಫ್. ಹೊರತುಪಡಿಸಿ ಉಳಿದ ಹೆಚ್ಚಿನ ಅನುದಾನ ಅಗತ್ಯವಿದೆ ಎಂಬುದರ ಬಗ್ಗೆ ಪ್ರಸ್ತಾವ ಸಲ್ಲಿಸಬೇಕು.
ಎನ್.ಡಿ.ಆರ್.ಎಫ್. ಅನುದಾನ ಹೆಚ್ಚಿಸುವಂತೆ ಕೋರಿ ಸಂಬಂಧಿಸಿದ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

ಜಾನುವಾರು ಹಾನಿ ಪರಿಹಾರ ವಿತರಣೆಗೆ ಸೂಚನೆ:

ಪ್ರವಾಹ ಸಂದರ್ಭದಲ್ಲಿ ಕೊಚ್ಚಿ ಹೋಗಿರುವ ಜಾನುವಾರುಗಳ ಕುರಿತು ಸ್ಥಳೀಯವಾಗಿ ಮಾಹಿತಿ ಸಂಗ್ರಹಿಸಿ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ನಿರ್ದೇಶನ ನೀಡಿದರು.

ಆಲಮಟ್ಟಿ ಸದ್ಯಕ್ಕೆ 72 ಟಿಎಂಸಿ ಮಾತ್ರ ಸಂಗ್ರಹವಿದೆ. ಆದಾಗ್ಯೂ ಒಳಹರಿವು ಆಧರಿಸಿ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಜಲಾಶಯಗಳಲ್ಲಿ ಕನಿಷ್ಠ ಅಗತ್ಯತೆ ಕಾಯ್ದುಕೊಂಡು ಉಳಿದ ನೀರು ಬಿಡುಗಡೆ ಮಾಡಲಾಗುತ್ತಿದೆ.

1200 ಕೋಟಿ ಹಾನಿ; ತಕ್ಷಣವೇ 170 ಕೋಟಿ ಬಿಡುಗಡೆಗೆ ಮನವಿ :

ಬೆಳಗಾವಿ ವಿಭಾಗದಲ್ಲಿ 1400 ಕಿ.ಮೀ. ರಸ್ತೆ ಹಾನಿಯಾಗಿಸೆ. 305 ಸೇತುವೆ ಹಾನಿ ಸೇರಿ ಒಟ್ಟಾರೆ 1200 ಕೋಟಿ ರೂಪಾಯಿ ಹಾನಿಯಾಗಿದ್ದು, ತಕ್ಷಣ ದುರಸ್ತಿಗೆ 170 ಕೋಟಿ ಬಿಡುಗಡೆ ಮಾಡಬೇಕು ಎಂದು ಲೋಕೋಪಯೋಗಿ ಇಲಾಖೆಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಕಳೆದ ಬಾರಿ ಶಾಶ್ವತ ಪುನರ್ವಸತಿ ಕಲ್ಪಿಸಿ ವಿತರಿಸಿರುವ ಮನೆಗಳ ಪೈಕಿ, ಖಾಲಿಯಿರುವ ಮನೆಗಳನ್ನು ಅಗತ್ಯತೆ ಆಧರಿಸಿ ಬೇರೆಯವರಿಗೆ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

ಕೃಷ್ಣಾ ನದಿಯಲ್ಲಿ ಈಗಲೂ ನೀರಿನ ಹರಿವು ಜಾಸ್ತಿ ಇರುವುದರಿಂದ ಆಲಮಟ್ಟಿ ಜಲಾಶಯದಿಂದ‌ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಜನರ ತುರ್ತು ರಕ್ಷಣೆಗೆ ಅಗತ್ಯವಾಗಿರುವ ಬೋಟ್ ಗಳನ್ನು ನದಿ ತೀರದ ಭಾಗಗಳ ಗ್ರಾಮಗಳಿಗೆ ಒದಗಿಸಬೇಕು ಎಂದು ಹೇಳಿದರು.

ಶಾಸಕರಾದ ಮಹಾಂತೇಶ ಕೌಜಲಗಿ, ಲಕ್ಷ್ಮಿ ಹೆಬ್ಬಾಳಕರ್ ಕಳೆದ ಬಾರಿ ಪ್ರವಾಹದಿಂದ ಹಾನಿಗೊಳಗಾದ ರಸ್ತೆ ದುರಸ್ಥಿ, ಮನೆ ಕಳೆದುಕೊಂಡವರಿಗೆ ಸೂರು ಕಲ್ಪಿಸುವಂತೆ ಸಭೆಯಲ್ಲಿ ಒತ್ತಾಯಿಸಿದರು.

ಸಭೆಯಲ್ಲಿ‌ ಜವಳಿ ಮತ್ತು ಕೈಮಗ್ಗ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಶ್ರೀಮಂತ ಪಾಟೀಲ, ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ, ವಿಧಾನಪರಿಷತ್ತಿನ ಸರಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಶಾಸಕರಾದ ಮಹಾಂತೇಶ ದೊಡ್ಡಗೌಡ್ರ, ಮಹಾಂತೇಶ ಕೌಜಲಗಿ, ಅಭಯ್ ಪಾಟೀಲ, ಅನಿಲ್ ಬೆನಕೆ, ಮಹಾದೇವಪ್ಪ ಯಾದವಾಡ, ಮಹಾಂತೇಶ ಕೌಜಲಗಿ, ವಿಧಾನ ಪರಿಷತ್ ಸದಸ್ಯರಾದ ಸಾಯಬಣ್ಣ ತಳವಾರ, ಕಾಡಾ ಅಧ್ಯಕ್ಷ ವಿ.ಐ.ಪಾಟೀಲ, ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ್ ಕುಮಠಳ್ಳಿ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ‌.ರಾಜೀವ್, ಶಾಸಕಿ ಅಂಜಲಿ ನಿಂಬಾಳ್ಕರ್, ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಜಕ್ಕೂರು ಏರೊಡ್ರಮ್ ಜಾಗಕ್ಕೆ ಬಾಡಿಗೆ ನೀಡದೆ ಅನಧಿಕೃತವಾಗಿ ಒತ್ತುವರಿ ಹಿನ್ನಲೆ : ಅಗ್ನಿ ಏರೋಸ್ಪೋರ್ಟ್ಸ್ ಆಡ್ವೆಂಚರ್ ಆಕಾಡೆಮಿ ಸಂಸ್ಥೆ ಆಸ್ತಿ ಸೀಜ್ – ಕಚೇರಿಗೆ ಬೀಗಮುದ್ರೆ

Next Post

Koramangala Flood | ಬೆಂಗಳೂರು ಜಲಮಂಡಳಿ ಎಡವಟ್ಟು : ಕೋರಮಂಗಲದ ಕ್ರೀಡಾ ಗ್ರಾಮದ ಆವರಣಕ್ಕೆ ನುಗ್ಗಿದ ರಾಜಕಾಲುವೆಯ ಕೊಳಚೆ ನೀರು

Next Post

Koramangala Flood | ಬೆಂಗಳೂರು ಜಲಮಂಡಳಿ ಎಡವಟ್ಟು : ಕೋರಮಂಗಲದ ಕ್ರೀಡಾ ಗ್ರಾಮದ ಆವರಣಕ್ಕೆ ನುಗ್ಗಿದ ರಾಜಕಾಲುವೆಯ ಕೊಳಚೆ ನೀರು

CM BS Yediyurappa resign | ಮುಖ್ಯಮಂತ್ರಿ ಹುದ್ದೆಗೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ : ಬಿಜೆಪಿ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ದಿನವೇ ಹುದ್ದೆಯಿಂದ ನಿರ್ಗಮಿಸಿದ ಶಿಕಾರಿಪುರದ ನೇತಾರ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group