Tuesday, June 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

    Big Breaking News | ರಾಜಧಾನಿಯಲ್ಲಿ ಕಸದ ದರ್ಬಾರ್: ಬಿಎಸ್‌ಡಬ್ಲ್ಯೂಎಂಎಲ್, ಜಿಬಿಎಗೆ ಬೆವರಿಳಿಸಿದ ಲೋಕಾಯುಕ್ತ; ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲು

    ಖಾತೆ ಹಂಚಿಕೆ ಬೆನ್ನಲ್ಲೇ ಕಾಂಗ್ರೆಸ್ ಗೆ ಶಾಕ್: ಸಚಿವ ಸ್ಥಾನಕ್ಕೆ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ

    ಡಿಕೆಶಿ ನೂತನ ಸಂಪುಟ ಖಾತೆ ಹಂಚಿಕೆ: ಕೃಷ್ಣಭೈರೇಗೌಡಗೆ ‘ಗ್ರೇಟರ್ ಬೆಂಗಳೂರು’ ಹೊಣೆ, ರಾಮಲಿಂಗಾರೆಡ್ಡಿ ಅಸಮಾಧಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬೆಂಗಳೂರಿನ ಮಕ್ಕಳಲ್ಲಿ ಕೋವಿಡ್ ಸೋಂಕು ಪ್ರಮಾಣ ; ಒಟ್ಟಾರೆ ಕೇಸ್ ಗಳಲ್ಲಿ ಶೇ.11.5

ಮಕ್ಕಳಲ್ಲಿ ಕೋವಿಡ್ ಸೋಂಕು ಪ್ರಮಾಣ ವಿಚಾರದಲ್ಲಿ ನಗರದ ನಾಗರೀಕರು ಭಯಪಡುವ ಅಗತ್ಯವಿಲ್ಲ ಎಂದ ಬಿಬಿಎಂಪಿ ಮಕ್ಕಳ ತಜ್ಞರ ಸಮಿತಿ

by Bengaluru Wire Desk
August 14, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com): ಆಗಸ್ಟ್ ತಿಂಗಳಿನ 13ನೇ ತಾರೀಖಿನವರೆಗೆ 0-18 ವರ್ಷದ ಮಕ್ಕಳಲ್ಲಿ 511 ಪ್ರಕರಣಗಳು ಪತ್ತೆಯಾಗಿವೆ. ಇದು ಪ್ರತಿನಿತ್ಯ ಕಂಡುಬರುವ ಒಟ್ಟಾರೆ ಪ್ರಕರಣಗಳಲ್ಲಿ ಶೇ.11.5 ರಷ್ಟಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಕ್ಕಳ ತಜ್ಞರ ಸಮಿತಿ ಸ್ಪಷ್ಟಪಡಿಸಿದೆ.

ಬಿಬಿಎಂಪಿಯ ವ್ಯಾಪ್ತಿಯಲ್ಲಿ 9 ರಿಂದ 19 ವರ್ಷದ ಮಕ್ಕಳಲ್ಲಿ ಹೆಚ್ಚು ಕೋವಿಡ್ ಸೋಂಕು ಕಂಡುಬರುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವುದನ್ನು ಗಮನಿಸಿದ ಪಾಲಿಕೆ ಮಕ್ಕಳ ತಜ್ಞರ ಸಮಿತಿ ಪತ್ರಿಕಾ ಪ್ರಕಟಣೆಯ ಮೂಲಕ ಸಮಜಾಯಿಷಿ ನೀಡಿದೆ.

ಬಿಬಿಎಂಪಿಯು ನಗರದಲ್ಲಿ ಪ್ರತಿನಿತ್ಯ ಕಂಡುಬರುವ ಕೋವಿಡ್ ಪ್ರಕರಣಗಳಲ್ಲಿ ವಯಸ್ಸಿನ ನಿರ್ದಿಷ್ಟ ಪ್ರಕರಣಗಳನ್ನು ಪತ್ತೆಮಾಡುತ್ತಿದ್ದು ಈ ಕೆಳಕಂಡ ಅಂಶಗಳನ್ನು ಪಟ್ಟಿ ಮಾಡಿದೆ :

  1. ಕಳೆದ 20 ದಿನಗಳಿಂದ ಒಟ್ಟಾರೆ ಕೋವಿಡ್ ಪ್ರಕರಣಗಳು ದಿನಕ್ಕೆ ಸರಾಸರಿ 388 ಕಂಡುಬರುತ್ತಿದ್ದು, ಯಾವುದೇ ಗಮನಾರ್ಹ ಏರಿಕೆ ಕಂಡುಬಂದಿಲ್ಲ.
  2. ಮಕ್ಕಳ ಪ್ರಕರಣಗಳ ಮೌಲ್ಯಮಾಪನ ಮಾಡಿದ್ದು (0-18 ವರ್ಷಗಳು), ಕಳೆದ 4 ತಿಂಗಳಲ್ಲಿ ಒಟ್ಟಾರೆ ಪ್ರಕರಣಗಳಿಗೆ ಹೋಲಿಸಿದರೆ ಸರಾಸರಿ ಪ್ರಕರಣಗಳು ಸುಮಾರು ಶೇ. 11 ರಷ್ಟಿದೆ.
  3. ತಿಂಗಳಿನಿಂದ ತಿಂಗಳಿಗೆ ಹೋಲಿಸಿದರೆ ಕೋವಿಡ್ ಸೋಂಕು ಅಲ್ಪ ಏರಿಕೆಯನ್ನು ಮಾತ್ರ ಗಮನಿಸಬಹುದಾಗಿದೆ. ಆದರೆ ಇನ್ನೂ ಒಟ್ಟು ಪ್ರತಿನಿತ್ಯದ ಸೋಂಕಿನಲ್ಲಿ ಶೇ. 11.5 ಕ್ಕಿಂತ ಕಡಿಮೆಯಿದೆ. ಆದಾಗ್ಯೂ, ಪಾಲಿಕೆಯು 0-12 ವಯೋಮಾನದ ಮಕ್ಕಳನ್ನು ಗಮನಿಸಿದರೆ, ಜೂನ್ ತಿಂಗಳಲ್ಲಿ 2,643 ಪ್ರಕರಣಗಳು, ಜುಲೈ ತಿಂಗಳಲ್ಲಿ 778 ಪ್ರಕರಣಗಳು ಮತ್ತು 2021ರ ಆಗಸ್ಟ್ 13 ರವರೆಗೆ 309 ಪ್ರಕರಣಗಳು ಕಂಡುಬಂದಿದೆ. ಒಟ್ಟಾರೆ ಮಕ್ಕಳಲ್ಲಿ ಕೋವಿಡ್ ಪ್ರಕರಣಗಳು ಹಂತ ಹಂತವಾಗಿ ಇಳಿಕೆಯಾಗಿದೆ.
  4. ಬಿಬಿಎಂಪಿಯಲ್ಲಿ ಲಭ್ಯವಿರುವ ದತ್ತಾಂಶಗಳ ಪ್ರಕಾರ, ಕಳೆದ 10 ದಿನಗಳಲ್ಲಿ ಕಂಡುಬಂದಿರುವ ಪಾಸಿಟಿವ್ ಕೇಸ್‌ಗಳಲ್ಲಿ ಕೇವಲ 5 ಮಕ್ಕಳು ಮಾತ್ರ ಸರ್ಕಾರಿ ಕೋಟಾದಡಿ ದಾಖಲಾಗಿದ್ದಾರೆ. 24 ಮಕ್ಕಳು ಖಾಸಗಿ ಕೋಟಾದಲ್ಲಿ ಚಿಕಿತ್ಸೆಪಡೆದಿದ್ದಾರೆ. ಒಟ್ಟಾರೆ ಶೇ. 5.7 ರಷ್ಟು ಮಕ್ಕಳು ಆಸ್ಪತ್ರೆಯಲ್ಲಿ ದಾಖಲಾತಿಯಾಗಿದ್ದು, ಬೇರೆ ವಯೋಮಾನದ ಪಾಸಿಟಿವ್ ರೋಗಿಗಳಿಗೆ ಹೋಲಿಸಿದರೆ ಇದು ಕಡಿಮೆಯಿದೆ.
  5. ಇತರೆ ವಯೋಮಾನದವರಿಗೆ ಹೋಲಿಸಿದರೆ, ಆಸ್ಪತ್ರೆಗೆ ದಾಖಲಾಗುವ ಮಕ್ಕಳ ಸಂಖ್ಯೆ ತುಂಬಾ ಅಲ್ಪ ಪ್ರಮಾಣದ್ದಾಗಿದೆ. ಆಸ್ಪತ್ರೆಗಳಲ್ಲಿ ದಾಖಲಾಗುವ 29 ಪ್ರವೇಶಗಳಲ್ಲಿ 3 ಪ್ರವೇಶ ಎಚ್‌ಡಿಯು ವಾರ್ಡ್ ನಲ್ಲಿ ಮತ್ತು ಐಸಿಯುಗೆ ದಾಖಲಾಗುವ ಪ್ರಮಾಣ ಶೂನ್ಯವಾಗಿದೆ.
  6. ಮಕ್ಕಳಲ್ಲಿ ಕೋವಿಡ್ ಸೋಂಕು ದೃಢಪಟ್ಟು, ಮರಣ ಹೊಂದಿರುವ ಸಂಖ್ಯೆಯನ್ನು ಗಮನಿಸಿದಾಗ ಏಪ್ರಿಲ್ ನಿಂದ ಜೂನ್ ವರೆಗೆ 14 ಮಕ್ಕಳ ಮೃತಪಟ್ಟಿರುವುದು ವರದಿಯಾಗಿದ್ದು, ಕಳೆದ ಎರಡು ತಿಂಗಳಲ್ಲಿ ಯಾರೂ ಮೃತರಾಗಿರುವುದಿಲ್ಲ (ಜುಲೈ ಮತ್ತು ಆಗಸ್ಟ್ 2021).
  7. ಅಮೆರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ಪ್ರಕಟಿಸಿದ ಜಾಗತಿಕ ದತ್ತಾಂಶವನ್ನು ಪರಿಶೀಲಿಸಿದಾಗ, ಕರೋನಾ ಸೋಂಕು ಆರಂಭದಿಂದಲೂ ಒಟ್ಟಾರೆ ಪ್ರಕರಣದಲ್ಲಿ ಮಕ್ಕಳಿಗೆ ಸೋಂಕು ತಗುಲಿರುವ ಪ್ರಮಾಣ ಶೇ.14.3 ರಷ್ಟಿದೆ. ಈ ಪೈಕಿ ಕೇವಲ ಶೇ.0.1-1.9 ಮಕ್ಕಳು ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಇದೇ ಪ್ರಮಾಣ ಬೆಂಗಳೂರಿಗೂ ಅನ್ವಯವಾಗುವುದು.
  8. ಕೋವಿಡ್ ಸೋಂಕು ಲಕ್ಷಣಗಳು ಕಂಡುಬಂದರೆ, ಮಕ್ಕಳನ್ನು ವೈದ್ಯಕೀಯ ಮೌಲ್ಯಮಾಪನಕ್ಕಾಗಿ ಬಿಬಿಎಂಪಿ ದೈಹಿಕ ಚಿಕಿತ್ಸಾ ಕೇಂದ್ರಗಳಿಗೆ (ಪಿಟಿಸಿ) ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ (ಪಿಎಚ್‌ಸಿ) ಅಥವಾ ಸಮುದಾಯ ಆರೋಗ್ಯ ಕೇಂದ್ರಗಳಿಗೆ(ಸಿಎಚ್‌ಸಿಎ) ಕರೆದುಕೊಂಡು ಬರಬಹುದು.
  9. ಪ್ರಸ್ತುತ ಬೆಂಗಳೂರಿನಲ್ಲಿ ಮಕ್ಕಳ ಆರೈಕೆಗಾಗಿ 7 ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಇದರಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯೂ ಸೇರಿದೆ. ಅಲ್ಲದೆ, ಬಿಬಿಎಂಪಿಯು ಮಕ್ಕಳ ಆರೈಕೆಗಾಗಿ ಶೀಘ್ರದಲ್ಲೇ 30 ಹಾಸಿಗೆಗಳ ಸಾಮರ್ಥ್ಯದ ವೈದ್ಯಕೀಯ ವ್ಯವಸ್ಥೆ ಮಾಡಲಿದೆ.
  10. ಮುನ್ನೆಚ್ಚರಿಕಾ ಕ್ರಮವಾಗಿ, 3 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಮಕ್ಕಳು ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು.(ಮಾಸ್ಕ್ ಧರಿಸುವುದು, ಕೈ ತೊಳೆಯುವುದು ಮತ್ತು ಹೆಚ್ಚು ಜನಸೇರುವ ಕಡೆ ಹೋಗದಿರುವುದು) ಮತ್ತು ಚಿಕ್ಕ ಮಕ್ಕಳು ಯಾವಾಗಲೂ ಪೋಷಕರ ಮೇಲ್ವಿಚಾರಣೆಯಲ್ಲಿರುತ್ತಾರೆ ಎಂದು ಖಚಿತಪಡಿಸಿಕೊಳ್ಳುವುದು ಸೂಕ್ತ.
  11. ಒಟ್ಟಾರೆಯಾಗಿ ನಗರದ ನಾಗರೀಕರು ಭಯಪಡುವ ಅಗತ್ಯವಿಲ್ಲ. ಹಾಗೂ ಕೋವಿಡ್ ಪ್ರಕರಣ ಕಂಡುಬಂದ ಮಕ್ಕಳನ್ನು ಆಸ್ಪತ್ರೆಗೆ ಕೊಂಡೊಯ್ಯುವ ಅಗತ್ಯವಿಲ್ಲ. ಕೋವಿಡ್ ಸೊಂಕು ಕಂಡುಬಂದ ಬಹುತೇಕ ಮಕ್ಕಳಲ್ಲಿ ಸೌಮ್ಯ ರೋಗಲಕ್ಷಣಗಳು ಇರುತ್ತದೆ. ಆ ಮಕ್ಕಳು ತಮ್ಮಷ್ಟಕ್ಕೆ ತಾವೇ ಚೇತರಿಸಿಕೊಳ್ಳುತ್ತಾರೆ ಎಂದು ಬಿಬಿಎಂಪಿಯ ಮಕ್ಕಳ ತಜ್ಞರ ಸಮಿತಿಯು ಅಭಿಪ್ರಾಯಪಡುತ್ತದೆ ಎಂದು ಬಿಬಿಎಂಪಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ ಗುಪ್ತ ನೇತೃತ್ವದಲ್ಲಿ ಪಾಲಿಕೆ ಆರೋಗ್ಯ ಇಲಾಖೆಯ ವಿಶೇಷ ಆಯುಕ್ತ ಡಿ.ರಂದೀಪ್ ಹಾಗೂ 13 ವೈದ್ಯರು ಸೇರಿದಂತೆ 15 ಜನರ ಮಕ್ಕಳ ತಜ್ಞರ ಸಮಿತಿ ಸದಸ್ಯರಿದ್ದು ಕಾಲ ಕಾಲಕ್ಕೆ ಕರೋನಾ ಸೋಂಕು ಕುರಿತಂತೆ ನಿರಂತರ ವಿಶ್ಲೇಷಣೆ ನಡೆಸಿ ಸೂಕ್ತ ಕ್ರಮಕ್ಕೆ ಸೂಚಿಸಲಿದ್ದಾರೆ.

WhatsApp Join our WhatsApp Channel
Previous Post

75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಭರಪೂರ ಸಿದ್ಧತೆ

Next Post

COVID19 SPECIAL STORY | ಕರೋನಾ 2ನೇ ಅಲೆಯಲ್ಲಿ ಸೋಂಕಿಗೆ ಬಲಿಯಾದವರಲ್ಲಿ ಶೇ.91.06 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು…!

Next Post

COVID19 SPECIAL STORY | ಕರೋನಾ 2ನೇ ಅಲೆಯಲ್ಲಿ ಸೋಂಕಿಗೆ ಬಲಿಯಾದವರಲ್ಲಿ ಶೇ.91.06 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು...!

ಕರ್ನಾಟಕ ರಾಜ್ಯ ವಿಪ್ರ ಪೋಟೋ ಮತ್ತು ವಿಡಿಯೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

June 8, 2026

Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

June 8, 2026

ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

June 8, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group