Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

  • Bengaluru Focus

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಬಿಎಂಪಿಯ ಕೋವಿಡ್ ಸೆರೋ ಸಮೀಕ್ಷೆ ಅಪೂರ್ಣ, ಸಂಪೂರ್ಣವಾಗಿ ಆಧಾರವಾಗಿಟ್ಟುಕೊಳ್ಳಲಾಗದು : ತಜ್ಞರ ಅಭಿಮತ

ನಗರದ ಪ್ರತಿ ವಾರ್ಡ್ ನಿಂದ ಕನಿಷ್ಟ 500 ಮಂದಿ ಸ್ಥಳೀಯರಿಂದ ರಕ್ತದ ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಿ ಬಂದ ವರದಿ ನಂಬಲಾರ್ಹ | ನಗರದ ಒಟ್ಟಾರೆ 1,800 ಜನರಿಂದ ರಕ್ತದ ದ್ರವ ಮಾದರಿ ಆಧರಿಸಿ ಬಂದ ಸೆರೋ ಸಮೀಕ್ಷೆ ಫಲಿತಾಂಶ ತಪ್ಪಿಗೆ ಎಡೆಮಾಡಿಕೊಡುವುದು – ತಜ್ಞರ ಅಭಿಪ್ರಾಯ | ಬಿಬಿಎಂಪಿ ಡೆತ್ ಆಡಿಟ್ ವರದಿ ಸಾರ್ವಜನಿಕವಾಗಿ ಬಹಿರಂಗಕ್ಕೆ ಅಧಿಕಾರಿಗಳ ಹಿಂದೇಟು ಏಕೆ?

by Bengaluru Wire Desk
September 3, 2021
in Bengaluru Focus, Public interest
Reading Time: 2 mins read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ರಾಜಧಾನಿ ಬೆಂಗಳೂರಿನಲ್ಲಿ ಕರೋನಾ ವಿರುದ್ಧ ಹೋರಾಡಲು ಲಸಿಕೆ ಕಾರ್ಯಕ್ರಮ ಚುರುಕುಗೊಳಿಸಲಾಗಿದೆ. ಈ ಮಧ್ಯೆ ಕರೋನಾ ವಿರುದ್ಧ ಲಸಿಕೆ ಪಡೆದವರಲ್ಲಿ ಹಾಗೂ ಲಸಿಕೆ ಪಡೆಯದವರಲ್ಲಿ ಯಾವ ರೀತಿ ಪ್ರತಿಕಾಯ ವೃದ್ಧಿಯಾಗಿದೆ ಎಂದು ತಿಳಿಯಲು ಬಿಬಿಎಂಪಿಯು ಕಿದ್ವಾಯಿ ಆಸ್ಪತ್ರೆ ಮೂಲಕ ನಗರದ 1,800 ಜನರಿಂದ ರಕ್ತದ ದ್ರವ ಸಂಗ್ರಹಿಸಿ ನಡೆಸಿದ ಸೆರೋ ಸಮೀಕ್ಷೆ ಅಪೂರ್ಣವಾಗಿದೆ. ಕೆಲವೇ ಜನರಿಂದ ಸಂಗ್ರಹಿಸಿದ ಮಾದರಿಯನ್ನು ನಗರದ ಇಡೀ ಸಮುದಾಯಕ್ಕೆ ಅನ್ವಯಿಸಲಾಗದು ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಸಿಲಿಕಾನ್ ಸಿಟಿಯ ವಿವಿಧ ಏರಿಯಾಗಳಲ್ಲಿನ ನಿವಾಸಿಗಳಲ್ಲಿ 18 ವಯೋಮಾನದ ಒಳಗಿನ ಶೇ.30ರಷ್ಟು ಮಂದಿ, 18 ರಿಂದ 45 ವಯೋಮಾನದ ಒಳಗಿನ ಶೇ.50ರಷ್ಟು ಹಾಗೂ 45 ವರ್ಷ ವಯಸ್ಸು ಮೇಲ್ಪಟ್ಟ ಶೇ.29 ರಷ್ಟು ಮಂದಿಯ ರಕ್ತದ ದ್ರವ (ಸೀರಂ) ಅನ್ನು ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. 1,800 ಮಂದಿಯಲ್ಲಿ ಅರ್ಧದಷ್ಟು ಕೋವಿಡ್ ಲಸಿಕೆ ಪಡೆದವರು ಹಾಗೂ ಅರ್ಧದಷ್ಟು ಕೋವಿಡ್ ಲಸಿಕೆ ಪಡೆಯದವರನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು.

ಸಮೀಕ್ಷೆಯಲ್ಲಿ ಸಂಗ್ರಹಿಸಿದ ಸೀರಂ ಪರೀಕ್ಷೆಯಲ್ಲಿ ಶೇ.75ರಷ್ಟು ಮಂದಿಯಲ್ಲಿ ಕೋವಿಡ್ ಪ್ರತಿಕಾಯ ವೃದ್ಧಿಯಾಗಿರುವುದನ್ನು ಕಿದ್ವಾಯಿ ಸಂಸ್ಥೆಯ ವೈದ್ಯರು ಬಿಬಿಎಂಪಿಗೆ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿದೆ.

“ಸೆರೋ ಸಮೀಕ್ಷೆಗೆ ಕೇವಲ 1,800 ಮಂದಿಯ ರಕ್ತ ದ್ರವನ್ನು ಮಾತ್ರ ಪಡೆದು ಪರೀಕ್ಷೆಗೆ ಒಳಪಡಿಸಿರುವುದರಿಂದ ಕೋವಿಡ್ ಸೋಂಕಿನ ವಿರುದ್ಧ ಜನರಲ್ಲಿ ಯಾವ ರೀತಿ ರೋಗ ಪ್ರತಿರೋಧಕ ಶಕ್ತಿ ಉತ್ಪತ್ತಿಯಾಗಿದೆ ಎಂದು ಸ್ಪಷ್ಟವಾಗಿ ತಿಳಿಯಲಾಗದು. ಈ ಸಮೀಕ್ಷೆಯ ವರದಿಯನ್ನು ಪೂರ್ಣ ರೂಪದಲ್ಲಿ ಆಧಾರವಾಗಿ ಬಳಸಿಕೊಳ್ಳಲಾಗದು. ಅದರ ಬದಲು ಬಿಬಿಎಂಪಿ ವ್ಯಾಪ್ತಿಯಲ್ಲಿನ 198 ವಾರ್ಡ್ ಗಳಲ್ಲಿ ಪ್ರತಿ ವಾರ್ಡ್ ನಲ್ಲಿನ ಸ್ಥಳೀಯ 500 ನಿವಾಸಿಗಳನ್ನು ರಾಂಡಮ್ ಆಗಿ ಆರಿಸಿ ಅವರ ಒಪ್ಪಿಗೆ ಪಡೆದು ರಕ್ತದ ದ್ರವ ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಅಧ್ಯಯನ ನಡೆಸಿದ ನಂತರ ಬರುವ ಫಲಿತಾಂಶವು ಸೂಕ್ತವಾಗಿರುತ್ತದೆ. ಆ ಸಮೀಕ್ಷೆಯು ನಗರದ ನಾಗರೀಕಲ್ಲಿ ಕೋವಿಡ್ ವಿರುದ್ಧದ ರೋಗ ನಿರೋಧಕ ಶಕ್ತಿಯ ಬಗ್ಗೆ ಸೂಕ್ತ ಚಿತ್ರಣ ನೀಡುತ್ತದೆ.”

– ಡಾ.ಪ್ರಸನ್ನ.ಎಚ್.ಎಂ, ಅಧ್ಯಕ್ಷರು, ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘ

ಈ ಮಧ್ಯೆ ನಗರದಲ್ಲಿ 12.38 ಲಕ್ಷ ಮಂದಿ ಕರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಆ ಪೈಕಿ 12.15 ಲಕ್ಷ ಜನರು ಕೋವಿಡ್ ಸೋಂಕಿನ ವಿರುದ್ಧ ಹೋರಾಡಿ ಗುಣಮುಖರಾಗಿದ್ದಾರೆ. ಅಲ್ಲದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಈತನಕ 18 ವರ್ಷ ಮೇಲ್ಪಟ್ಟ 70.65 ಲಕ್ಷ ಜನರಿಗೆ ಕೋವಿಡ್ ಮೊದಲ ಡೋಸ್ ಹಾಗೂ 27.03 ಲಕ್ಷ ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ. ಒಟ್ಟಾರೆ 97.68 ಲಕ್ಷ ಡೋಸ್ ಗಳನ್ನು ಜನರು ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಬಿಬಿಎಂಪಿ ಕೋವಿಡ್ ನಿರ್ವಹಣೆ ನಡೆಸುತ್ತಿರುವ ಆರೋಗ್ಯ ವಿಭಾಗವು ಕಿದ್ವಾಯಿ ವೈದ್ಯರ ಮೂಲಕ ಆಗಸ್ಟ್ 4 ರಿಂದ ಸಮೀಕ್ಷೆ ಆರಂಭಿಸಿ ಕೇವಲ 1,800 ನಗರದ ನಿವಾಸಿಗಳಿಂದ ಸೀರಂ (ರಕ್ತದ ದ್ರವ)ವನ್ನು ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಸಮೀಕ್ಷೆಗೆ ಒಳಪಡಿಸಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.

“ಬಿಬಿಎಂಪಿಯು ನಡೆಸಿದ ಸೆರೊ ಸಮೀಕ್ಷೆಯಲ್ಲಿ ಪಾಲ್ಗೊಂಡವರ ಪೈಕಿ ಶೇ.75ರಷ್ಟು ಮಂದಿಯಲ್ಲಿ ಕೋವಿಡ್ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿದೆ ಎಂದು ಫಲಿತಾಂಶ ಬಂದಿರುವುದು ಖುಷಿಯ ಸಂಗತಿ. ಆದರೆ ಯಾವುದೇ ವ್ಯಕ್ತಿಯ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾದಲ್ಲಿ ಮೂರರಿಂದ ನಾಲ್ಕು ತಿಂಗಳು ಮಾತ್ರ ಆ ಶಕ್ತಿಯಿರುತ್ತದೆ. ನಗರದಲ್ಲಿನ ಕೇವಲ ಕೆಲವೇ ಕೆಲವು ನಿವಾಸಿಗಳಿಂದ ಸೀರಂ ಸಮೀಕ್ಷೆ ನಡೆಸಿ ಅದನ್ನು ಆಧಾರವಾಗಿಟ್ಟುಕೊಂಡು ಜನರಲ್ಲಿ ರೋಗ ನಿರೋಧಕ ಶಕ್ತಿಯಾಗಿದೆ. ಜನರಿಗೆ ಯಾವುದೇ ತೊಂದರೆಯಾಗದು ಎಂದು ಹೇಳೋದು ತಪ್ಪಾಗುತ್ತದೆ. ಕೋವಿಡ್ ಹೊಸ ತಳಿಯು ಬಂದಾಗ ಈ ರೋಗನಿರೋಧಕ ಶಕ್ತಿಯಿಂದ ವ್ಯಕ್ತಿ ಸಂಪೂರ್ಣ ಸುರಕ್ಷಿತನಾಗಿರುತ್ತಾನೆ ಎಂದು ಹೇಳಲು ಆಗದು. ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಂಡು, ಖಡ್ಡಾಯವಾಗಿ ಮಾಸ್ಕ್ ಧರಿಸಿದರೆ ಕೋವಿಡ್ ಸೋಂಕಿನಿಂದಾಗುವ ಗಂಭೀರ ಸ್ಥಿತಿ ಹಾಗೂ ಸೋಂಕಿನಿಂದ ಸಾವು ಸಂಭವಿಸುವುದು ಕಡಿಮೆಯಾಗುತ್ತದೆ.”

– ಡಾ.ವಿ.ರವಿ, ಸದಸ್ಯರು, ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ

ಪ್ರತಿ ಬುಧವಾರ ವಿಶೇಷ ಲಸಿಕೆ ಅಭಿಯಾನ ಹೀಗೆ ಮುಂದುವರೆದರೆ ಡಿಸೆಂಬರ್ ವೇಳೆಗೆ ರಾಜ್ಯಾದ್ಯಂತ ಶೇಕಡ 75ರಷ್ಟು ಜನರು ಎರಡನೇ ಡೋಸ್ ಪಡೆದುಕೊಳ್ಳಬಹುದು. ಕೋವಿಡ್ ಲಸಿಕೆಯ ಅಡ್ಡಪರಿಣಾಮ ಶೇ.005 ರಷ್ಟಿದೆ. ಹಾಗಾಗಿ ಭಯಬಿಟ್ಟು ಎಲ್ಲರೂ ಲಸಿಕೆ ಪಡೆದರೆ ಉತ್ತಮ. ಬೆಂಗಳೂರಿನಲ್ಲಿ ಎಷ್ಟು ಜನರಿಗೆ ಲಸಿಕೆ ಹಾಕಲಾಗಿದೆ? ಕೋವಿಡ್ ಎರಡನೇ ಅಲೆಯಲ್ಲಿ ಎಷ್ಟು ಜನರು ಕೋವಿಡ್ ಪಾಸಿಟಿವ್ ಆಗಿದ್ದರು. ಇವನ್ನೆಲ್ಲವೂ  ಸೆರೋ ಸಮೀಕ್ಷೆಯಲ್ಲಿ ಗಣನೆಗೆ ತೆಗೆದುಕೊಳ್ಳಬೇಕು ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

“ಕಿದ್ವಾಯಿ ಆಸ್ಪತ್ರೆಯಿಂದ ಸೆರೊ ಸಮೀಕ್ಷೆ ವರದಿ ಬಿಬಿಎಂಪಿ ಕೈಸೇರಿದೆ. ಈ ಸಮೀಕ್ಷಾ ವರದಿಯನ್ನು ಬಿಬಿಎಂಪಿಯ ಆರೋಗ್ಯ ತಜ್ಞರ ಸಮಿತಿ ಮುಂದೆ ಮಂಡಿಸುತ್ತೇವೆ. ಆ ವರದಿಯಲ್ಲಿನ ಅಂಶವನ್ನು ಪರಿಶೀಲನೆ ನಡೆಸಿ, ಸಾರ್ವಜನಿಕವಾಗಿ ಪ್ರಕಟಣೆ ಮಾಡುತ್ತೇವೆ”

– ರಂದೀಪ್, ವಿಶೇಷ ಆಯುಕ್ತರು, ಬಿಬಿಎಂಪಿ ಆರೋಗ್ಯ ವಿಭಾಗ

ನಗರದಲ್ಲಿ ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 7,718 ಮಾತ್ರ ಇದೆ. ಒಟ್ಟು 1,031 ಕಂಟೈನ್ ಮೆಂಟ್ ಜೋನ್ ಗಳೆಂದು ಪಾಲಿಕೆ ಘೋಷಿಸಿದ್ದು, ಆ ಪೈಕಿ ಸದ್ಯ 99 ಜೋನ್ ಗಳು ಮಾತ್ರ ಸಕ್ರಿಯವಾಗಿದೆ. ಅದೇ ರೀತಿ ಕೋವಿಡ್ ಚಿಕಿತ್ಸೆಗೆಂದು ನಿಗಧಿಪಡಿಸಿದ 27 ಆಸ್ಪತ್ರೆಗಳಲ್ಲಿ 2,086 ವಿವಿಧ ರೀತಿಯ ಹಾಸಿಗೆಗಳಿದ್ದು ಆ ಪೈಕಿ 139 ಹಾಸಿಗೆಗಳು ಮಾತ್ರ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವುದು ಸಮಾಧಾನದ ಸಂಗತಿ. ಹಾಗೆಂದು ಬಿಬಿಎಂಪಿ ಮೈಮರೆತು ಕೂರುವಂತಿಲ್ಲ. ಹೊರ ರಾಜ್ಯ ಕೇರಳದಿಂದ ಬೆಂಗಳೂರಿಗೆ ಬಂದವರ ಮೇಲೆ ಹದ್ದುಗಣ್ಣಿಟ್ಟು ಕೋವಿಡ್ ಪರೀಕ್ಷೆ, ಸಾಂಸ್ಥಿಕ ಕ್ವಾರಂಟೈನ್ ಒಳಪಡಿಸುವುದು ಸೇರಿದಂತೆ ಮತ್ತಿತರ ಬಿಗಿಯಾದ ಕ್ರಮ ಕೈಗೊಳ್ಳಲೇ ಬೇಕಾದ ಅನಿವಾರ್ಯತೆಯಿದೆ.

ಕೋವಿಡ್ ಡೆತ್ ಆಡಿಟ್ ರಿಪೋರ್ಟ್ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ ಯಾಕೆ?

  • ಸಾಂದರ್ಭಿಕ ಚಿತ್ರ

ಕಳೆದ ವರ್ಷ ಕರೋನಾ ಸೋಂಕು ಆರಂಭವಾದಾಗಿನಿಂದ ಇಲ್ಲಿಯ ತನಕ ನಗರದಲ್ಲಿ 16,013 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಬಿಬಿಎಂಪಿ ಅಧಿಕೃತವಾಗಿ ಹೇಳುತ್ತಿದೆ. ಆದರೆ ಕೋವಿಡ್ ಸೋಂಕಿನಿಂದ ಸಂಭವಿಸಿದ ಕರೋನಾ ಸಾವಿನ ಕುರಿತ ಮರಣ ಪರಿಶೋಧನಾ ವರದಿಯನ್ನು ಇಲ್ಲಿಯವರೆಗೂ ಸಾರ್ವಜನಿಕವಾಗಿ ಬಿಬಿಎಂಪಿಯು ಬಹಿರಂಗಪಡಿಸಿಲ್ಲ. ಈ ಕುರಿತಂತೆ ಆರ್ ಟಿಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಅರ್ಜಿ ಸಲ್ಲಿಸಿದರೂ, ಮಾಧ್ಯಮದವರು, ಸಾಮಾಜಿಕ ಕಾರ್ಯಕರ್ತರು, ನಾಗರೀಕ ಸಂಘ ಸಂಸ್ಥೆಗಳು ಕೇಳಿದರೂ ಅದಕ್ಕೆ ಸೂಕ್ತ ಮಾಹಿತಿ ಒದಿಗಿಸುವಲ್ಲಿ ಸಂಬಂಧಿಸಿದ ಅಧಿಕಾರಿಗಳು ವಿಫಲರಾಗಿದ್ದಾರೆ.

ಇದು ನಗರದಲ್ಲಿ ವಾಸ್ತವವಾಗಿ ಕೋವಿಡ್ ನಿಂದ ಸಂಭವಿಸಿದ ಸಾವಿನ ಲೆಕ್ಕಕ್ಕೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೊಡುತ್ತಿರುವ ಸಾವಿನ ಲೆಕ್ಕಕ್ಕೂ ಅಜಗಜಾಂತರ ವ್ಯತ್ಯಾಸವಿರುವ ಸಾಧ್ಯತೆ ಹೆಚ್ಚಿದೆ. ಈ ಕಾರಣಕ್ಕಾಗಿ ಬಿಬಿಎಂಪಿ ಅಧಿಕಾರಿಗಳು ಕೋವಿಡ್ ಡೆತ್ ಆಡಿಟ್ ವರದಿಯನ್ನು ಈತನಕ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ ಎಂಬ ಬಲವಾದ ಆರೋಪಗಳು ಕೇಳಿಬರುತ್ತಿದೆ. ಇದು ಹಲವು ಅನುಮಾನಗಳಿಗೆ ಕೂಡ ಕಾರಣವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಧಾರ್ಮಿಕ ವಿಧಿವಿಧಾನಗಳ ರೀತಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿ : ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಸರ್ಕಾರಕ್ಕೆ ಮನವಿ

Next Post

“ವೃಂದ ಮತ್ತು ನೇಮಕಾತಿ ನಿಯಮ” ಗಾಳಿಗೆ ತೂರಿದ ಮುಖ್ಯ ಆಯುಕ್ತ ಗೌರವ್ ಗುಪ್ತಾ : ಎನ್.ಆರ್. ರಮೇಶ್ ಗಂಭೀರ ಆರೋಪ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

"ವೃಂದ ಮತ್ತು ನೇಮಕಾತಿ ನಿಯಮ” ಗಾಳಿಗೆ ತೂರಿದ ಮುಖ್ಯ ಆಯುಕ್ತ ಗೌರವ್ ಗುಪ್ತಾ : ಎನ್.ಆರ್. ರಮೇಶ್ ಗಂಭೀರ ಆರೋಪ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಕರೋನಾ ಸೋಂಕಿನ ಮಧ್ಯೆಯೂ ಭರ್ಜರಿ ಮದ್ಯ ಮಾರಾಟ...!

Please login to join discussion

Like Us on Facebook

Follow Us on Twitter

Recent News

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026

ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

September 18, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d