Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಬಿಬಿಎಂಪಿಯ ಕೋವಿಡ್ ಸೆರೋ ಸಮೀಕ್ಷೆ ಅಪೂರ್ಣ, ಸಂಪೂರ್ಣವಾಗಿ ಆಧಾರವಾಗಿಟ್ಟುಕೊಳ್ಳಲಾಗದು : ತಜ್ಞರ ಅಭಿಮತ

ನಗರದ ಪ್ರತಿ ವಾರ್ಡ್ ನಿಂದ ಕನಿಷ್ಟ 500 ಮಂದಿ ಸ್ಥಳೀಯರಿಂದ ರಕ್ತದ ದ್ರವ ಸಂಗ್ರಹಿಸಿ ಪರೀಕ್ಷೆ ನಡೆಸಿ ಬಂದ ವರದಿ ನಂಬಲಾರ್ಹ | ನಗರದ ಒಟ್ಟಾರೆ 1,800 ಜನರಿಂದ ರಕ್ತದ ದ್ರವ ಮಾದರಿ ಆಧರಿಸಿ ಬಂದ ಸೆರೋ ಸಮೀಕ್ಷೆ ಫಲಿತಾಂಶ ತಪ್ಪಿಗೆ ಎಡೆಮಾಡಿಕೊಡುವುದು – ತಜ್ಞರ ಅಭಿಪ್ರಾಯ | ಬಿಬಿಎಂಪಿ ಡೆತ್ ಆಡಿಟ್ ವರದಿ ಸಾರ್ವಜನಿಕವಾಗಿ ಬಹಿರಂಗಕ್ಕೆ ಅಧಿಕಾರಿಗಳ ಹಿಂದೇಟು ಏಕೆ?

by Bengaluru Wire Desk
September 3, 2021
in Bengaluru Focus, Public interest
Reading Time: 2 mins read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ರಾಜಧಾನಿ ಬೆಂಗಳೂರಿನಲ್ಲಿ ಕರೋನಾ ವಿರುದ್ಧ ಹೋರಾಡಲು ಲಸಿಕೆ ಕಾರ್ಯಕ್ರಮ ಚುರುಕುಗೊಳಿಸಲಾಗಿದೆ. ಈ ಮಧ್ಯೆ ಕರೋನಾ ವಿರುದ್ಧ ಲಸಿಕೆ ಪಡೆದವರಲ್ಲಿ ಹಾಗೂ ಲಸಿಕೆ ಪಡೆಯದವರಲ್ಲಿ ಯಾವ ರೀತಿ ಪ್ರತಿಕಾಯ ವೃದ್ಧಿಯಾಗಿದೆ ಎಂದು ತಿಳಿಯಲು ಬಿಬಿಎಂಪಿಯು ಕಿದ್ವಾಯಿ ಆಸ್ಪತ್ರೆ ಮೂಲಕ ನಗರದ 1,800 ಜನರಿಂದ ರಕ್ತದ ದ್ರವ ಸಂಗ್ರಹಿಸಿ ನಡೆಸಿದ ಸೆರೋ ಸಮೀಕ್ಷೆ ಅಪೂರ್ಣವಾಗಿದೆ. ಕೆಲವೇ ಜನರಿಂದ ಸಂಗ್ರಹಿಸಿದ ಮಾದರಿಯನ್ನು ನಗರದ ಇಡೀ ಸಮುದಾಯಕ್ಕೆ ಅನ್ವಯಿಸಲಾಗದು ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ಸಿಲಿಕಾನ್ ಸಿಟಿಯ ವಿವಿಧ ಏರಿಯಾಗಳಲ್ಲಿನ ನಿವಾಸಿಗಳಲ್ಲಿ 18 ವಯೋಮಾನದ ಒಳಗಿನ ಶೇ.30ರಷ್ಟು ಮಂದಿ, 18 ರಿಂದ 45 ವಯೋಮಾನದ ಒಳಗಿನ ಶೇ.50ರಷ್ಟು ಹಾಗೂ 45 ವರ್ಷ ವಯಸ್ಸು ಮೇಲ್ಪಟ್ಟ ಶೇ.29 ರಷ್ಟು ಮಂದಿಯ ರಕ್ತದ ದ್ರವ (ಸೀರಂ) ಅನ್ನು ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. 1,800 ಮಂದಿಯಲ್ಲಿ ಅರ್ಧದಷ್ಟು ಕೋವಿಡ್ ಲಸಿಕೆ ಪಡೆದವರು ಹಾಗೂ ಅರ್ಧದಷ್ಟು ಕೋವಿಡ್ ಲಸಿಕೆ ಪಡೆಯದವರನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು.

ಸಮೀಕ್ಷೆಯಲ್ಲಿ ಸಂಗ್ರಹಿಸಿದ ಸೀರಂ ಪರೀಕ್ಷೆಯಲ್ಲಿ ಶೇ.75ರಷ್ಟು ಮಂದಿಯಲ್ಲಿ ಕೋವಿಡ್ ಪ್ರತಿಕಾಯ ವೃದ್ಧಿಯಾಗಿರುವುದನ್ನು ಕಿದ್ವಾಯಿ ಸಂಸ್ಥೆಯ ವೈದ್ಯರು ಬಿಬಿಎಂಪಿಗೆ ಸಲ್ಲಿಸಿದ ಪ್ರಾಥಮಿಕ ವರದಿಯಲ್ಲಿ ತಿಳಿಸಲಾಗಿದೆ ಎಂದು ಉನ್ನತ ಮೂಲಗಳು ಖಚಿತಪಡಿಸಿದೆ.

“ಸೆರೋ ಸಮೀಕ್ಷೆಗೆ ಕೇವಲ 1,800 ಮಂದಿಯ ರಕ್ತ ದ್ರವನ್ನು ಮಾತ್ರ ಪಡೆದು ಪರೀಕ್ಷೆಗೆ ಒಳಪಡಿಸಿರುವುದರಿಂದ ಕೋವಿಡ್ ಸೋಂಕಿನ ವಿರುದ್ಧ ಜನರಲ್ಲಿ ಯಾವ ರೀತಿ ರೋಗ ಪ್ರತಿರೋಧಕ ಶಕ್ತಿ ಉತ್ಪತ್ತಿಯಾಗಿದೆ ಎಂದು ಸ್ಪಷ್ಟವಾಗಿ ತಿಳಿಯಲಾಗದು. ಈ ಸಮೀಕ್ಷೆಯ ವರದಿಯನ್ನು ಪೂರ್ಣ ರೂಪದಲ್ಲಿ ಆಧಾರವಾಗಿ ಬಳಸಿಕೊಳ್ಳಲಾಗದು. ಅದರ ಬದಲು ಬಿಬಿಎಂಪಿ ವ್ಯಾಪ್ತಿಯಲ್ಲಿನ 198 ವಾರ್ಡ್ ಗಳಲ್ಲಿ ಪ್ರತಿ ವಾರ್ಡ್ ನಲ್ಲಿನ ಸ್ಥಳೀಯ 500 ನಿವಾಸಿಗಳನ್ನು ರಾಂಡಮ್ ಆಗಿ ಆರಿಸಿ ಅವರ ಒಪ್ಪಿಗೆ ಪಡೆದು ರಕ್ತದ ದ್ರವ ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಅಧ್ಯಯನ ನಡೆಸಿದ ನಂತರ ಬರುವ ಫಲಿತಾಂಶವು ಸೂಕ್ತವಾಗಿರುತ್ತದೆ. ಆ ಸಮೀಕ್ಷೆಯು ನಗರದ ನಾಗರೀಕಲ್ಲಿ ಕೋವಿಡ್ ವಿರುದ್ಧದ ರೋಗ ನಿರೋಧಕ ಶಕ್ತಿಯ ಬಗ್ಗೆ ಸೂಕ್ತ ಚಿತ್ರಣ ನೀಡುತ್ತದೆ.”

– ಡಾ.ಪ್ರಸನ್ನ.ಎಚ್.ಎಂ, ಅಧ್ಯಕ್ಷರು, ಖಾಸಗಿ ಆಸ್ಪತ್ರೆ ಮತ್ತು ನರ್ಸಿಂಗ್ ಹೋಮ್ ಗಳ ಸಂಘ

ಈ ಮಧ್ಯೆ ನಗರದಲ್ಲಿ 12.38 ಲಕ್ಷ ಮಂದಿ ಕರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಆ ಪೈಕಿ 12.15 ಲಕ್ಷ ಜನರು ಕೋವಿಡ್ ಸೋಂಕಿನ ವಿರುದ್ಧ ಹೋರಾಡಿ ಗುಣಮುಖರಾಗಿದ್ದಾರೆ. ಅಲ್ಲದೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಈತನಕ 18 ವರ್ಷ ಮೇಲ್ಪಟ್ಟ 70.65 ಲಕ್ಷ ಜನರಿಗೆ ಕೋವಿಡ್ ಮೊದಲ ಡೋಸ್ ಹಾಗೂ 27.03 ಲಕ್ಷ ಜನರಿಗೆ ಕೋವಿಡ್ ಲಸಿಕೆ ಹಾಕಲಾಗಿದೆ. ಒಟ್ಟಾರೆ 97.68 ಲಕ್ಷ ಡೋಸ್ ಗಳನ್ನು ಜನರು ತೆಗೆದುಕೊಂಡಿದ್ದಾರೆ. ಪರಿಸ್ಥಿತಿ ಹೀಗಿರುವಾಗ ಬಿಬಿಎಂಪಿ ಕೋವಿಡ್ ನಿರ್ವಹಣೆ ನಡೆಸುತ್ತಿರುವ ಆರೋಗ್ಯ ವಿಭಾಗವು ಕಿದ್ವಾಯಿ ವೈದ್ಯರ ಮೂಲಕ ಆಗಸ್ಟ್ 4 ರಿಂದ ಸಮೀಕ್ಷೆ ಆರಂಭಿಸಿ ಕೇವಲ 1,800 ನಗರದ ನಿವಾಸಿಗಳಿಂದ ಸೀರಂ (ರಕ್ತದ ದ್ರವ)ವನ್ನು ಸಂಗ್ರಹಿಸಿ ಪ್ರಯೋಗಾಲಯದಲ್ಲಿ ಸಮೀಕ್ಷೆಗೆ ಒಳಪಡಿಸಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ.

“ಬಿಬಿಎಂಪಿಯು ನಡೆಸಿದ ಸೆರೊ ಸಮೀಕ್ಷೆಯಲ್ಲಿ ಪಾಲ್ಗೊಂಡವರ ಪೈಕಿ ಶೇ.75ರಷ್ಟು ಮಂದಿಯಲ್ಲಿ ಕೋವಿಡ್ ರೋಗ ನಿರೋಧಕ ಶಕ್ತಿ ವೃದ್ಧಿಯಾಗಿದೆ ಎಂದು ಫಲಿತಾಂಶ ಬಂದಿರುವುದು ಖುಷಿಯ ಸಂಗತಿ. ಆದರೆ ಯಾವುದೇ ವ್ಯಕ್ತಿಯ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾದಲ್ಲಿ ಮೂರರಿಂದ ನಾಲ್ಕು ತಿಂಗಳು ಮಾತ್ರ ಆ ಶಕ್ತಿಯಿರುತ್ತದೆ. ನಗರದಲ್ಲಿನ ಕೇವಲ ಕೆಲವೇ ಕೆಲವು ನಿವಾಸಿಗಳಿಂದ ಸೀರಂ ಸಮೀಕ್ಷೆ ನಡೆಸಿ ಅದನ್ನು ಆಧಾರವಾಗಿಟ್ಟುಕೊಂಡು ಜನರಲ್ಲಿ ರೋಗ ನಿರೋಧಕ ಶಕ್ತಿಯಾಗಿದೆ. ಜನರಿಗೆ ಯಾವುದೇ ತೊಂದರೆಯಾಗದು ಎಂದು ಹೇಳೋದು ತಪ್ಪಾಗುತ್ತದೆ. ಕೋವಿಡ್ ಹೊಸ ತಳಿಯು ಬಂದಾಗ ಈ ರೋಗನಿರೋಧಕ ಶಕ್ತಿಯಿಂದ ವ್ಯಕ್ತಿ ಸಂಪೂರ್ಣ ಸುರಕ್ಷಿತನಾಗಿರುತ್ತಾನೆ ಎಂದು ಹೇಳಲು ಆಗದು. ಎಲ್ಲರೂ ಕೋವಿಡ್ ಲಸಿಕೆ ಹಾಕಿಸಿಕೊಂಡು, ಖಡ್ಡಾಯವಾಗಿ ಮಾಸ್ಕ್ ಧರಿಸಿದರೆ ಕೋವಿಡ್ ಸೋಂಕಿನಿಂದಾಗುವ ಗಂಭೀರ ಸ್ಥಿತಿ ಹಾಗೂ ಸೋಂಕಿನಿಂದ ಸಾವು ಸಂಭವಿಸುವುದು ಕಡಿಮೆಯಾಗುತ್ತದೆ.”

– ಡಾ.ವಿ.ರವಿ, ಸದಸ್ಯರು, ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ

ಪ್ರತಿ ಬುಧವಾರ ವಿಶೇಷ ಲಸಿಕೆ ಅಭಿಯಾನ ಹೀಗೆ ಮುಂದುವರೆದರೆ ಡಿಸೆಂಬರ್ ವೇಳೆಗೆ ರಾಜ್ಯಾದ್ಯಂತ ಶೇಕಡ 75ರಷ್ಟು ಜನರು ಎರಡನೇ ಡೋಸ್ ಪಡೆದುಕೊಳ್ಳಬಹುದು. ಕೋವಿಡ್ ಲಸಿಕೆಯ ಅಡ್ಡಪರಿಣಾಮ ಶೇ.005 ರಷ್ಟಿದೆ. ಹಾಗಾಗಿ ಭಯಬಿಟ್ಟು ಎಲ್ಲರೂ ಲಸಿಕೆ ಪಡೆದರೆ ಉತ್ತಮ. ಬೆಂಗಳೂರಿನಲ್ಲಿ ಎಷ್ಟು ಜನರಿಗೆ ಲಸಿಕೆ ಹಾಕಲಾಗಿದೆ? ಕೋವಿಡ್ ಎರಡನೇ ಅಲೆಯಲ್ಲಿ ಎಷ್ಟು ಜನರು ಕೋವಿಡ್ ಪಾಸಿಟಿವ್ ಆಗಿದ್ದರು. ಇವನ್ನೆಲ್ಲವೂ  ಸೆರೋ ಸಮೀಕ್ಷೆಯಲ್ಲಿ ಗಣನೆಗೆ ತೆಗೆದುಕೊಳ್ಳಬೇಕು ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

“ಕಿದ್ವಾಯಿ ಆಸ್ಪತ್ರೆಯಿಂದ ಸೆರೊ ಸಮೀಕ್ಷೆ ವರದಿ ಬಿಬಿಎಂಪಿ ಕೈಸೇರಿದೆ. ಈ ಸಮೀಕ್ಷಾ ವರದಿಯನ್ನು ಬಿಬಿಎಂಪಿಯ ಆರೋಗ್ಯ ತಜ್ಞರ ಸಮಿತಿ ಮುಂದೆ ಮಂಡಿಸುತ್ತೇವೆ. ಆ ವರದಿಯಲ್ಲಿನ ಅಂಶವನ್ನು ಪರಿಶೀಲನೆ ನಡೆಸಿ, ಸಾರ್ವಜನಿಕವಾಗಿ ಪ್ರಕಟಣೆ ಮಾಡುತ್ತೇವೆ”

– ರಂದೀಪ್, ವಿಶೇಷ ಆಯುಕ್ತರು, ಬಿಬಿಎಂಪಿ ಆರೋಗ್ಯ ವಿಭಾಗ

ನಗರದಲ್ಲಿ ಸದ್ಯ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 7,718 ಮಾತ್ರ ಇದೆ. ಒಟ್ಟು 1,031 ಕಂಟೈನ್ ಮೆಂಟ್ ಜೋನ್ ಗಳೆಂದು ಪಾಲಿಕೆ ಘೋಷಿಸಿದ್ದು, ಆ ಪೈಕಿ ಸದ್ಯ 99 ಜೋನ್ ಗಳು ಮಾತ್ರ ಸಕ್ರಿಯವಾಗಿದೆ. ಅದೇ ರೀತಿ ಕೋವಿಡ್ ಚಿಕಿತ್ಸೆಗೆಂದು ನಿಗಧಿಪಡಿಸಿದ 27 ಆಸ್ಪತ್ರೆಗಳಲ್ಲಿ 2,086 ವಿವಿಧ ರೀತಿಯ ಹಾಸಿಗೆಗಳಿದ್ದು ಆ ಪೈಕಿ 139 ಹಾಸಿಗೆಗಳು ಮಾತ್ರ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವುದು ಸಮಾಧಾನದ ಸಂಗತಿ. ಹಾಗೆಂದು ಬಿಬಿಎಂಪಿ ಮೈಮರೆತು ಕೂರುವಂತಿಲ್ಲ. ಹೊರ ರಾಜ್ಯ ಕೇರಳದಿಂದ ಬೆಂಗಳೂರಿಗೆ ಬಂದವರ ಮೇಲೆ ಹದ್ದುಗಣ್ಣಿಟ್ಟು ಕೋವಿಡ್ ಪರೀಕ್ಷೆ, ಸಾಂಸ್ಥಿಕ ಕ್ವಾರಂಟೈನ್ ಒಳಪಡಿಸುವುದು ಸೇರಿದಂತೆ ಮತ್ತಿತರ ಬಿಗಿಯಾದ ಕ್ರಮ ಕೈಗೊಳ್ಳಲೇ ಬೇಕಾದ ಅನಿವಾರ್ಯತೆಯಿದೆ.

ಕೋವಿಡ್ ಡೆತ್ ಆಡಿಟ್ ರಿಪೋರ್ಟ್ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ ಯಾಕೆ?

  • ಸಾಂದರ್ಭಿಕ ಚಿತ್ರ

ಕಳೆದ ವರ್ಷ ಕರೋನಾ ಸೋಂಕು ಆರಂಭವಾದಾಗಿನಿಂದ ಇಲ್ಲಿಯ ತನಕ ನಗರದಲ್ಲಿ 16,013 ಮಂದಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಬಿಬಿಎಂಪಿ ಅಧಿಕೃತವಾಗಿ ಹೇಳುತ್ತಿದೆ. ಆದರೆ ಕೋವಿಡ್ ಸೋಂಕಿನಿಂದ ಸಂಭವಿಸಿದ ಕರೋನಾ ಸಾವಿನ ಕುರಿತ ಮರಣ ಪರಿಶೋಧನಾ ವರದಿಯನ್ನು ಇಲ್ಲಿಯವರೆಗೂ ಸಾರ್ವಜನಿಕವಾಗಿ ಬಿಬಿಎಂಪಿಯು ಬಹಿರಂಗಪಡಿಸಿಲ್ಲ. ಈ ಕುರಿತಂತೆ ಆರ್ ಟಿಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆಯಲ್ಲಿ ಅರ್ಜಿ ಸಲ್ಲಿಸಿದರೂ, ಮಾಧ್ಯಮದವರು, ಸಾಮಾಜಿಕ ಕಾರ್ಯಕರ್ತರು, ನಾಗರೀಕ ಸಂಘ ಸಂಸ್ಥೆಗಳು ಕೇಳಿದರೂ ಅದಕ್ಕೆ ಸೂಕ್ತ ಮಾಹಿತಿ ಒದಿಗಿಸುವಲ್ಲಿ ಸಂಬಂಧಿಸಿದ ಅಧಿಕಾರಿಗಳು ವಿಫಲರಾಗಿದ್ದಾರೆ.

ಇದು ನಗರದಲ್ಲಿ ವಾಸ್ತವವಾಗಿ ಕೋವಿಡ್ ನಿಂದ ಸಂಭವಿಸಿದ ಸಾವಿನ ಲೆಕ್ಕಕ್ಕೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೊಡುತ್ತಿರುವ ಸಾವಿನ ಲೆಕ್ಕಕ್ಕೂ ಅಜಗಜಾಂತರ ವ್ಯತ್ಯಾಸವಿರುವ ಸಾಧ್ಯತೆ ಹೆಚ್ಚಿದೆ. ಈ ಕಾರಣಕ್ಕಾಗಿ ಬಿಬಿಎಂಪಿ ಅಧಿಕಾರಿಗಳು ಕೋವಿಡ್ ಡೆತ್ ಆಡಿಟ್ ವರದಿಯನ್ನು ಈತನಕ ಸಾರ್ವಜನಿಕವಾಗಿ ಬಹಿರಂಗಪಡಿಸಿಲ್ಲ ಎಂಬ ಬಲವಾದ ಆರೋಪಗಳು ಕೇಳಿಬರುತ್ತಿದೆ. ಇದು ಹಲವು ಅನುಮಾನಗಳಿಗೆ ಕೂಡ ಕಾರಣವಾಗಿದೆ.

WhatsApp Join our WhatsApp Channel
Previous Post

ಧಾರ್ಮಿಕ ವಿಧಿವಿಧಾನಗಳ ರೀತಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿ : ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿ ಸರ್ಕಾರಕ್ಕೆ ಮನವಿ

Next Post

“ವೃಂದ ಮತ್ತು ನೇಮಕಾತಿ ನಿಯಮ” ಗಾಳಿಗೆ ತೂರಿದ ಮುಖ್ಯ ಆಯುಕ್ತ ಗೌರವ್ ಗುಪ್ತಾ : ಎನ್.ಆರ್. ರಮೇಶ್ ಗಂಭೀರ ಆರೋಪ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

"ವೃಂದ ಮತ್ತು ನೇಮಕಾತಿ ನಿಯಮ” ಗಾಳಿಗೆ ತೂರಿದ ಮುಖ್ಯ ಆಯುಕ್ತ ಗೌರವ್ ಗುಪ್ತಾ : ಎನ್.ಆರ್. ರಮೇಶ್ ಗಂಭೀರ ಆರೋಪ

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಕರೋನಾ ಸೋಂಕಿನ ಮಧ್ಯೆಯೂ ಭರ್ಜರಿ ಮದ್ಯ ಮಾರಾಟ...!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group