Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

“ವೃಂದ ಮತ್ತು ನೇಮಕಾತಿ ನಿಯಮ” ಗಾಳಿಗೆ ತೂರಿದ ಮುಖ್ಯ ಆಯುಕ್ತ ಗೌರವ್ ಗುಪ್ತಾ : ಎನ್.ಆರ್. ರಮೇಶ್ ಗಂಭೀರ ಆರೋಪ

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತರಿಂದ ನಿರಂತರ ಕಾನೂನು ಬಾಹಿರ ಕಾರ್ಯದ ಆರೋಪ | ಟಿಇಸಿ ಇಇ ನೇಮಕಾತಿ ತಾತ್ಕಾಲಿಕ ಕ್ರಮವಷ್ಟೆ ಎಂದು ಸಮರ್ಥಿಸಿಕೊಂಡ ಗೌರವ್ ಗುಪ್ತಾ

by Bengaluru Wire Desk
September 4, 2021
in Bengaluru Focus
Reading Time: 2 mins read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) :
“ನೀರಾವರಿ ಇಲಾಖೆ” ಯಿಂದ ಪಾಲಿಕೆಗೆ ನಿಯೋಜನೆಗೊಂಡ ಪ್ರಭಾರಿ ಸಹಾಯಕ ಎಂಜನಿಯರ್ ಅಶೋಕ್ ಬಾಗಿ ಅವರನ್ನು “ವೃಂದ ಮತ್ತು ನೇಮಕಾತಿ ನಿಯಮ” ಗಳಿಗೆ ವಿರುದ್ಧವಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಲಂಚ ಹಣ ಪಡೆದು ಆಯಕಟ್ಟಿನ ಸ್ಥಳಕ್ಕೆ ನೇಮಕ ಮಾಡಿದ್ದಾರೆ ಎಂದು ಬೆಂಗಳೂರು ದಕ್ಷಿಣ ನಗರ ಜಿಲ್ಲೆ ಬಿಜೆಪಿ ಅಧ್ಯಕ್ಷ ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.

ಅಶೋಕ್ ಬಾಗಿ ರವರನ್ನು ರಸ್ತೆಗಳ ಮೂಲಭೂತ ಸೌಕರ್ಯಗಳ ಇಲಾಖೆಯ ಮುಖ್ಯ ಅಭಿಯಂತರರಾಗಿರುವ ಬಿ. ಎಸ್. ಪ್ರಹ್ಲಾದ್ ರವರ ಶಿಫಾರಸ್ಸಿನಂತೆ ಪಾಲಿಕೆಯಲ್ಲಿ ನೂರಾರು ಕೋಟಿ ರೂ. ಕಾಮಗಾರಿ ನಡೆಯುತ್ತಿರುವ ಸಂಚಾರಿ ಎಂಜಿನಿಯರಿಂಗ್ ಕೋಶ (ಟ್ರಾಫಿಕ್ ಎಂಜಿನಿಯರಿಂಗ್ ಸೆಲ್) ದ ಕಾರ್ಯಪಾಲಕ ಅಭಿಯಂತರರಾಗಿ ಅಧಿಕ ಪ್ರಭಾರದಲ್ಲಿ ನಿಯೋಜನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ಎನ್.ಆರ್.ರಮೇಶ್, ಬಿಜೆಪಿ ಬೆಂಗಳೂರು ದಕ್ಷಿಣ ನಗರ ಜಿಲ್ಲೆ ಅಧ್ಯಕ್ಷ

ವಾಸ್ತವವಾಗಿ ಯಾವುದೇ ಒಬ್ಬ ಅಧಿಕಾರಿಯ ವರ್ಗಾವಣೆಯನ್ನು ಅಥವಾ ಯಾವುದೇ ಒಂದು ಹುದ್ದೆಗೆ ನಿಯೋಜನೆ ಮಾಡಬೇಕಾದ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರ ಅಧೀನದಲ್ಲಿರುವ ಆಡಳಿತ ವಿಭಾಗದ ಸಂಬಂಧಪಟ್ಟ ಗುಮಾಸ್ತರು ಕಡತವನ್ನು ತಯಾರಿಸುತ್ತಾರೆ.

ಮೊದಲು ಆಡಳಿತ ಶಾಖೆಯ ಸಹಾಯಕ ಆಯುಕ್ತರು, ನಂತರ ಆಡಳಿತ ಉಪ ಆಯುಕ್ತರು, ಆನಂತರ ಆಡಳಿತ ವಿಭಾಗದ ವಿಶೇಷ ಆಯುಕ್ತರಿಂದ ಅನುಮೋದನೆ ಪಡೆದು ಅಂತಿಮವಾಗಿ ಮುಖ್ಯ ಆಯುಕ್ತರ ಅನುಮೋದನೆ ಪಡೆದುಕೊಳ್ಳಬೇಕಿರುವುದು ಕಡ್ಡಾಯವಾಗಿರುತ್ತದೆ.

ಆದರೆ, ಈ ಪ್ರಕರಣದಲ್ಲಿ ಆಡಳಿತ ವಿಭಾಗದಿಂದ ಕಡತವು ಮಂಡನೆಯಾಗಿಲ್ಲ. ಬದಲಿಗೆ ರಸ್ತೆಗಳ ಮೂಲಭೂತ ಸೌಕರ್ಯಗಳ ಇಲಾಖೆಯ ಚೀಫ್ ಎಂಜಿನಿಯರ್ ಪ್ರಹ್ಲಾದ್ ತಮ್ಮ ಪರಮ ಶಿಷ್ಯ ಅಶೋಕ್ ಬಾಗಿಯನ್ನ ಕರೆತರಲು ಸ್ವತಃ ತಾವೇ ತಯಾರಿಸಿದ ಟಿಪ್ಪಣಿ ಹಾಳೆಗಳ ಕಡತವನ್ನು ನೇರವಾಗಿ ತೆಗೆದುಕೊಂಡು ಮುಖ್ಯ ಆಯುಕ್ತರ ಬಳಿ ಅನುಮೋದನೆ ಪಡೆದಿದ್ದಾರೆ. ಇದು ಹಲವಾರು ಅನುಮಾನಗಳಿಗೆ ಮತ್ತು ಮುಖ್ಯ ಆಯುಕ್ತರ ಕಾನೂನು ಬಾಹಿರ ನಡೆಗೆ ಪ್ರಮುಖ ಸಾಕ್ಷಿಯಾಗಿರುತ್ತದೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಅಶೋಕ್ ಬಾಗಿ ರವರಿಂದ ಬಿ.ಎಸ್. ಪ್ರಹ್ಲಾದ್ ರವರ ಮೂಲಕ ಲಕ್ಷಾಂತರ ರೂಪಾಯಿ ಅಕ್ರಮ ಹಣವನ್ನು ಮುಖ್ಯ ಆಯುಕ್ತ ಗೌರವ್ ಗುಪ್ತಾ ಪಡೆದಿರುವುದೂ ಕೂಡ ಅತ್ಯಂತ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

“ಎರವಲು ಸೇವಾ ನಿಯಮ” ಗಳಂತೆ ಪಾಲಿಕೆಯಲ್ಲಿ ಮೂರು ವರ್ಷಗಳು ಸಂಪೂರ್ಣವಾಗಿರುವ ಅಧಿಕಾರಿಗಳನ್ನು ಅವರ ಮಾತೃ ಇಲಾಖೆಗೆ ವಾಪಸ್ಸು ಕಳುಹಿಸಬೇಕೆಂಬ ನಿಯಮವಿದೆ. ಕೇವಲ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾತ್ರವೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಎರವಲು ಸೇವೆ ಅಡಿಯಲ್ಲಿ ನಿಯೋಜನೆಗೊಳ್ಳಬೇಕು. “ವೃಂದ ಮತ್ತು ನೇಮಕಾತಿ ನಿಯಮ” ಗಳ ಅನ್ವಯ ಈ ಅವಕಾಶವಿದ್ದರೂ, ಹಲವಾರು ಗುರುತರ ಆರೋಪಗಳನ್ನು ಎದುರಿಸುತ್ತಿರುವ ನೀರಾವರಿ ಇಲಾಖೆಯ ಎಂಜಿನಿಯರ್ ಅಶೋಕ್ ಬಾಗಿ ರವರನ್ನು ಟ್ರಾಫಿಕ್ ಎಂಜನಿಯರಿಂಗ್ ಸೆಲ್ ನಲ್ಲಿ ನಿಯೋಜನೆಗೊಳಿಸಲಾಗಿದೆ. 

ಗುತ್ತಿಗೆ ಕಾಮಗಾರಿ ಬಿಲ್ ನಲ್ಲೂ ಭ್ರಷ್ಟಾಚಾರ?

ಕಳೆದ ಎರಡು ಮೂರು ವರ್ಷಗಳಿಂದ ತಮ್ಮ ಪಾಲಿನ ಹಣದ ಬಿಡುಗಡೆಗಾಗಿ ಗುತ್ತಿಗೆದಾರರು ಸರದಿಯಲ್ಲಿ ಕಾಯುತ್ತಿದ್ದಾರೆ. ಆದರೆ ಇಲ್ಲಿ ಜೇಷ್ಠತೆ (ಹಿರಿತನ) ಯನ್ನು ಕಡೆಗಣಿಸಿ ಹತ್ತಾರು ಮಂದಿ ಪ್ರಭಾವಿ ಗುತ್ತಿಗೆದಾರರಿಗೆ ಜೇಷ್ಠತೆ ಇಲ್ಲದಿದ್ದರೂ ಸಹ ವಿಶೇಷ ಮಂಜೂರಾತಿ (ಸ್ಪೆಷಲ್ ಎಲ್ ಒಸಿ) ಎಂಬ ಹೆಸರಿನಲ್ಲಿ ನೂರಾರು ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಮುಖ್ಯ ಆಯುಕ್ತರು ನೇರವಾಗಿ ಭ್ರಷ್ಟಾಚಾರಗಳಲ್ಲಿ ತೊಡಗಿಕೊಂಡಿರುವುದು ಅತ್ಯಂತ ಸ್ಪಷ್ಟವಾಗಿದೆ ಎಂದು ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾನೂನು ಬಾಹಿರವಾಗಿ ಟಿಇಸಿ ಕಾರ್ಯಪಾಲಕ ಅಭಯಂತರರಾಗಿ ಅಶೋಕ್ ಬಾಗಿ ರವರನ್ನು ನಿಯೋಜನೆ ಮಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಪಾಲಿಕೆ ಆಡಳಿತ ಉಪ ಆಯುಕ್ತ ಲಿಂಗ ಮೂರ್ತಿ, ಚೀಫ್ ಎಂಜಿನಿಯರ್ ಬಿ. ಎಸ್. ಪ್ರಹ್ಲಾದ್ ಹಾಗೂ ಅಶೋಕ್ ಬಾಗಿ ರವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ  ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಅಲ್ಲದೆ ನಿರಂತರವಾಗಿ ಹಲವಾರು ಅಕ್ರಮಗಳಲ್ಲಿ ಬಾಗಿಯಾಗಿರುವ ಗೌರವ್ ಗುಪ್ತ ರವರನ್ನು ಪಾಲಿಕೆಯ ಮುಖ್ಯ ಆಯುಕ್ತರ ಹುದ್ದೆಯಿಂದ ಬದಲಿಸಿ, ಅರ್ಹರಾದ ಹಿರಿಯ ಅಧಿಕಾರಿಯನ್ನು ಪಾಲಿಕೆಯ ಮುಖ್ಯ ಆಯುಕ್ತರ ಹುದ್ದೆಗೆ ನಿಯೋಜಿಸಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರಮೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ.

  • ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ತಮ್ಮ ನಿರ್ಧಾರ ಸಮರ್ಥಿಸಿಕೊಂಡ ಮುಖ್ಯ ಆಯುಕ್ತ ಗೌರವ್ ಗುಪ್ತಾ :

ತಮ್ಮ ಮೇಲೆ ಬಂದಿರೋ ಆರೋಪಕ್ಕೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಬೆಂಗಳೂರು ವೈರ್ ಗೆ  ಪ್ರತಿಕ್ರಿಯಿಸಿದ್ದು, ಎನ್.ಆರ್.ರಮೇಶ್ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಲ್ಲ. ಟಿಇಸಿ ಸೆಲ್ ಕಾರ್ಯಪಾಲಕ ಅಭಿಯಂತರರ ಹುದ್ದೆಯಲ್ಲಿದ್ದವರು ನಿವೃತ್ತಿಯಾಗಿದ್ದರು. ಆ ತೆರವಾದ ಸ್ಥಾನಕ್ಕೆ ಆ ವಿಭಾಗದ ಚೀಫ್ ಎಂಜಿನಿಯರ್, ಸೂಕ್ತ ವ್ಯಕ್ತಿಯನ್ನು ತಾತ್ಕಾಲಿಕವಾಗಿ ನೇಮಿಸಿದ್ದಾರೆ. ಆಡಳಿತ ವಿಭಾಗ ತದನಂತರ ಟಿಇಸಿ ಸೆಲ್ ನ ಇಇ ಹುದ್ದೆಗೆ ಖಾಯಂ ಆಗಿ ನೇಮಕ ಮಾಡಲಿದೆ. ಯಾವುದೇ ನೇಮಕಾತಿ ಆಗಿದ್ದರೂ ಅಭಿವೃದ್ಧಿ ದೃಷ್ಟಿಯಿಂದ ಆಗಿರುತ್ತೆ ಎಂದು ಅವರು ಹೇಳಿದ್ದಾರೆ.

WhatsApp Join our WhatsApp Channel
Previous Post

ಬಿಬಿಎಂಪಿಯ ಕೋವಿಡ್ ಸೆರೋ ಸಮೀಕ್ಷೆ ಅಪೂರ್ಣ, ಸಂಪೂರ್ಣವಾಗಿ ಆಧಾರವಾಗಿಟ್ಟುಕೊಳ್ಳಲಾಗದು : ತಜ್ಞರ ಅಭಿಮತ

Next Post

ಕರೋನಾ ಸೋಂಕಿನ ಮಧ್ಯೆಯೂ ಭರ್ಜರಿ ಮದ್ಯ ಮಾರಾಟ…!

Next Post
ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ (ಸಾಂದರ್ಭಿಕ ಚಿತ್ರ)

ಕರೋನಾ ಸೋಂಕಿನ ಮಧ್ಯೆಯೂ ಭರ್ಜರಿ ಮದ್ಯ ಮಾರಾಟ...!

ವಾರ್ಡ್ ಗೊಂದರಂತೆ ಸಾರ್ವಜನಿಕ ಗಣೇಶ ಮೂರ್ತಿ ಸ್ಥಾಪನೆಗೆ ಅವಕಾಶ - ಬಿಬಿಎಂಪಿ ವಿಧಿಸಿದ ಷರತ್ತುಗಳಿಗೆ ಗಣೇಶೋತ್ಸವ ಸಂಘಟಕರಿಂದ ಆಕ್ಷೇಪ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group