Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Namma Metro URJA TBM | ಭೂಮಿ ಸೀಳಿ ಸುರಂಗ ಕೊರೆದು ಹೊರಬಂದ ಊರ್ಜಾ….!

ನಮ್ಮ ಮೆಟ್ರೋ 2ನೇ ಹಂತದ ಕಾಮಗಾರಿ ಗಡುವು 2025ಕ್ಕೆ ಬದಲು, 2024ಕ್ಕೆ ಪೂರ್ಣ - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಡುವು.

by Bengaluru Wire Desk
September 22, 2021
in Bengaluru Focus, News Wire, Video
Reading Time: 2 mins read
0

ಬೆಂಗಳೂರು, (www.bengaluruwire.com) : ಎರಡನೇ ಹಂತದ ನಮ್ಮ ಮೆಟ್ರೊ ಸುರಂಗ ಮಾರ್ಗದ ಮೊದಲ ಟನಲ್ ಬೋರಿಂಗ್ ಮೆಷಿನ್ (ಟಿಬಿಎಮ್) ಊರ್ಜಾ ಯಂತ್ರ, ಸುರಂಗ ಕೊರೆದು ಬೆಳಗ್ಗೆ 10:16ಕ್ಕೆ ಸರಿಯಾಗಿ ಶಿವಾಜಿನಗರ ಮೆಟ್ರೋ‌ನಿಲ್ದಾಣದಲ್ಲಿ 13 ತಿಂಗಳ ಬಳಿಕ ಹೊರಬಂದಿದೆ.

ಶಿವಾಜಿನಗರದಿಂದ ಟ್ಯಾನರಿ ರಸ್ತೆ ನಿಲ್ದಾಣದವರೆಗೆ ಎರಡು ಸುರಂಗ ಮಾರ್ಗಗಳ ಪೈಕಿ ಊರ್ಜಾ ಉತ್ತರ ಮಾರ್ಗದಲ್ಲಿ 855 ಮೀಟರ್ ಉದ್ದದ ಸುರಂಗ ಮಾರ್ಗವನ್ನು ಕೊರೆದಿತ್ತು. ಅಂತಿಮವಾಗಿ ಶಿವಾಜಿನಗರ ಮೆಟ್ರೊ ಸುರಂಗ ನಿಲ್ದಾಣದಲ್ಲಿ ಸುರಂಗ ಮಾರ್ಗಕ್ಕೆ ಹಾಕಲಾಗಿದ್ದ ಕಾಂಕ್ರೀಟ್ ತಡೆಗೋಡೆಯನ್ನು ಸೀಳಿ ಆಚೆ ಬಂದಿತು.

ಟನಲ್ ಬೋರಿಂಗ್ ಮೆಷಿನ್ ಊರ್ಜಾ ಸುರಂಗ ಮಾರ್ಗದಲ್ಲಿ ನಿಂತಿರುವ ಚಿತ್ರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿದ್ದರು. ಟಿಬಿಎಮ್ ಯಂತ್ರ ಊರ್ಜಾ ಕಾರ್ಯಾಚರಣೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬೆಂಗಳೂರು ನಗರಕ್ಕೆ ಇದೊಂದು ಪ್ರಮುಖ ಯೋಜನೆಯಾಗಿದೆ. ಮೆಟ್ರೋ ಎರಡನೇ ಹಂತದ ಕಾಮಗಾರಿ 2025 ರ ಡಿಸೆಂಬರ್ ಒಳಗೆ ಬದಲಾಗಿ 2024 ರ ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಕ್ರಮವಹಿಸಿ ಎಂದು ಮೆಟ್ರೊ ಅಧಿಕಾರಿಗಳಿಗೆ ಗಡುವು ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ‌ ಮಾತನಾಡುತ್ತಿರುವ ದೃಶ್ಯ

ಮೆಟ್ರೊ ಹೆಚ್ಚಿನ ಕಾರ್ಮಿಕರು, ಅಧಿಕಾರಿಗಳು ಹಾಗೂ ಯಂತ್ರೋಪಕರಣ ಮತ್ತಿತರ ಸಂಪನ್ಮೂಲ ಬಳಸಿ ಗಡುವಿಗಿಂತ ಒಂದು ವರ್ಷ ಮುಂಚೆ ಕಾಮಗಾರಿ ಮುಗಿಸಲಿ. ಇದರಿಂದ ನಗರದ ಮೇಲಿನ ಸಂಚಾರದ ಒತ್ತಡ ಕಡಿಮೆಯಾಗಲಿದೆ. ಸುರಂಗ ಮಾರ್ಗ ನಿರ್ಮಾಣ ಬಹಳ ಸವಾಲಿನ ಕೆಲಸ. ಮೊದಲ ಹಂತದ ಸುರಂಗ ಮಾರ್ಗ ನಿರ್ಮಾಣ ಮಾಡುವಾಗ ಮೆಜಿಸ್ಟಿಕ್ ನಲ್ಲಿಬಟಿಬಿಎಮ್ ಯಂತ್ರ ಸಿಲುಕಿ ಕಾಮಗಾರಿಗೆ ಸಾಕಷ್ಟು ಅಡಚಣೆ ಆಗಿತ್ತು. ಆದರೆ ಅದನ್ನು ಸವಾಲಾಗಿ ಸ್ವೀಕರಿಸಿ ಕೆಲಸ ಪೂರ್ಣಗೊಳಿಸಲಾಗಿತ್ತು.

ಹಿಂದಿನ ಅನುಭವದ ಆಧಾರದ ಮೇಲೆ ಎರಡನೇ ಹಂತದಲ್ಲಿ ಸುರಂಗ ಮಾರ್ಗ ನಿರ್ಮಾಣ ಕೆಲಸವನ್ನು ಯಶಸ್ವಿಯಾಗಿ ನಮ್ಮ ಮೆಟ್ರೊ ಪೂರ್ಣಗೊಳಿಸಲಿ. ಊರ್ಜಾ ಯಂತ್ರ ಯಶಸ್ವಿಯಾಗಿ ಕಾರ್ಯಾಚರಣೆ ಮುಗಿಸಿದ್ದು, ಮುಂದೆ ಕಂಟೋನ್ಮೆಂಟ್ ನಿಂದ ಪಾಟರಿ ಟೌನ್ ಸುರಂಗ ನಿಲ್ದಾಣದ ತನಕ ಸುರಂಗ ಕೊರೆಯಲು ಬಳಕೆಯಾಗಲಿದೆ ಎಂದು ಸಿಎಂ ಹೇಳಿದರು.

ಮೆಟ್ರೊ ಗೆ ಬೆಂಗಳೂರಿನ ಜನ ಸಹಕಾರ ಮಾಡಿದ್ದಾರೆ. ಈ ಕಾಮಗಾರಿಗಳಿಂದ ಸಂಚಾರ ಅಡಚಣೆ ಮತ್ತಿತರ ತೊಂದರೆ ಆದರೂ ಸಹಿಸಿಕೊಂಡಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಏರ್ ಪೋರ್ಟ್ 2ಬಿ ಮಾರ್ಗದ ಕಾಮಗಾರಿಗೆ ಸದ್ಯದಲ್ಲೇ ಚಾಲನೆ ನೀಡಲಿದ್ದೇವೆ. ಎರಡನೇ ಹಂತ ಪೂರ್ಣಗೊಂಡ ಬಳಿಕ ಮೂರನೇ ಹಂತದ ಕಾಮಗಾರಿ ಕಾರ್ಯಾರಂಭ ಮಾಡಲಿದೆ. ಮೂರು ಹಂತ ಪೂರ್ಣ ಗೊಂಡಾಗ ನಗರ ಸಾರಿಗೆಯಲ್ಲಿ ಮೆಟ್ರೋ ಲೈಫ್ ಲೈನ್ ಆಗಲಿದೆ ಎಂದು ಮುಖ್ಯಮಂತ್ರಿಗಳು ವಿಶ್ಲೇಷಿಸಿದರು.

ಬಿಬಿಎಂಆರ್ ಸಿಎಲ್ ಎಂಡಿ ಅಂಜುಮ್ ಪರ್ವೇಜ್

ಬಳಿಕ ಮಾತನಾಡಿದ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೇಜ್, ಇವತ್ತು ಬಿಎಂಆರ್ಸಿಎಲ್ ಗೆ ಖುಷಿಯ ದಿನ. ಮೊದಲ ಹಂತ ಯಶಸ್ವಿ ಬಳಿಕ ಎರಡನೇ ಹಂತದ ಸುರಂಗ‌ ಮಾರ್ಗದಲ್ಲಿ‌ ಮೊದಲ ಟಿಬಿಎಮ್ ಊರ್ಜಾ ತನ್ನ ಪಾಲಿನ ಒಂದು ಹಂತದ ಕಾರ್ಯಾಚರಣೆ ಮುಗಿಸಿದೆ. ಆರ್ ವಿ ರಸ್ತೆ – ಬೊಮ್ಮಸಂದ್ರ ಮೆಟ್ರೊ ಮಾರ್ಗ ಹಾಗೂ ಡೈರಿ ಸರ್ಕಲ್ , ಕಂಟೋನ್ಮೆಂಟ್ ಸುರಂಗ ಮಾರ್ಗ ಸವಾಲಿನ  ಮಾರ್ಗ ಆಗಿದೆ.

2ನೇ ಹಂತದ ಮೆಟ್ರೊ ಸುರಂಗ ಮಾರ್ಗದಲ್ಲಿ ಶೇ.60 ಕಲ್ಲುಗಳಿವೆ :

ಪ್ರತಿನಿತ್ಯ 9 ಟಿಬಿಎಂ ಗಳು ಮೂರೂವರೆ ಕಿಲೋ ಮೀಟರ್ ಸುರಂಗ ಕೊರೆಯುತ್ತವೆ. ಮುಖ್ಯಮಂತ್ರಿಗಳು ನೀಡಿದ ಗಡುವಿನಂತೆ ಮೆಟ್ರೊ ಟಾರ್ಗೆಟ್ ಗಿಂತ ಒಂದು ವರ್ಷ ಮೊದಲೇ ಎರಡನೇ ಹಂತದ ಕಾಮಗಾರಿ ಕೆಲಸ ಮುಗಿಸಲು ಬದ್ಧರಾಗಿದ್ದೇವೆ. 13.9 ಕಿ.ಮೀ ಸುರಂಗ ಮಾರ್ಗದಲ್ಲಿ ಶೇ.60 ರಷ್ಟು ಕಠಿಣವಾದ ಬಂಡೆಗಲ್ಲು, ಮೆದುಗಲ್ಲು ಸೇರಿದಂತೆ ವಿವಿಧ ಬಗೆಯ ಕಲ್ಲುಗಳಿರುವುದು ಭೌಗೋಳಿಕ ಸಮೀಕ್ಷೆ‌ ನಡೆಸಿದಾಗ ತಿಳಿದು ಬಂದಿದೆ. ಟಿಬಿಎಂ ದಿನದ 24 ಗಂಟೆ ಕಾರ್ಯಾಚರಣೆ ನಡೆಸುತ್ತವೆ ಎಂದು ಹೇಳಿದರು.

ಎರಡನೇ ಹಂತದಲ್ಲಿ ಮರಗಳ ಕಡಿತ ವಿಚಾರದ ಅಡ್ಡಿ ನಿವಾರಣೆ :
ಎರಡನೇ ಹಂತದಲ್ಲಿ ಕಾಮಗಾರಿ ನಡೆಯುವ ಮಾರ್ಗದಲ್ಲಿ‌ ಮರಗಳ ವಿಚಾರದಲ್ಲಿ ಇದ್ದ ಅಡ್ಡಿ ಆತಂಕಗಳನ್ನು ಹೈಕೋರ್ಟ್ ನಿವಾರಿಸಿದೆ. ಏರ್ ಪೋರ್ಟ್ 2ಬಿ ಮಾರ್ಗ ನಿರ್ಮಾಣದ ವಿಚಾರದಲ್ಲಿ ಇದ್ದ ಸಮಸ್ಯೆ ನಿವಾರಣೆಯಾಗಿದೆ. ಏರ್ ಪೋರ್ಟ್ ಮೆಟ್ರೊ ಮಾರ್ಗ ಪೂರ್ಣಗೊಳಿಸಲು‌ 2025ರ ಡಿಸೆಂಬರ್ ಗುರಿಯಿದ್ದರೂ ಒಂದು ವರ್ಷ ಮೊದಲೇ ಕಾಮಗಾರಿ ಮುಗಿಸುತ್ತೇವೆ ಎಂದು ಮೆಟ್ರೋ ಎಂಡಿ ಅಂಜುಂ ಪರ್ವೇಜ್ ಭರವಸೆ ನೀಡಿದರು.

ಮೆಟ್ರೊ ಎರಡನೇ ಹಂತದ ಕಾಮಗಾರಿಗಳ ಪೈಕಿ ಗೊಟ್ಟಗೆರೆಯಿಂದ ನಾಗಾವಾರದ ತನಕ ಒಟ್ಟು 21 ಕಿ.ಮೀ ಮೆಟ್ರೋ ಮಾರ್ಗವಿದೆ. ಆ ಪೈಕಿ 13.9 ಕಿ.ಮೀ ಮಾರ್ಗ ಸುರಂಗ ಮಾರ್ಗವಾಗಿದ್ದು ಒಟ್ಟು 4 ಪ್ಯಾಕೇಜ್ ಗಳಲ್ಲಿ ಮೂರು ಕಂಪನಿಗಳು ಕಾರ್ಯಾಚರಣೆ ನಡೆಸುತ್ತಿದೆ.

ಊರ್ಜಾ ಟಿಬಿಎಮ್ ಯಂತ್ರ ಬರಮಾಡಿಕೊಳ್ಳುವ ಕಾರ್ಯಕ್ರಮದಲ್ಲಿ ಸಂಸದ ಪಿ.ಸಿ.ಮೋಹನ್, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಸದಸ್ಯರು ಹಾಗೂ ಮೆಟ್ರೋ ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುರಂಗ ಮಾರ್ಗ ನಿರ್ಮಾಣದ ಬಗ್ಗೆ ಅಧಿಕಾರಿಗಳ ಅನುಭವ :

“ಬಿಎಂಆರ್ ಸಿಎಲ್ ನೇತೃತ್ವದಲ್ಲಿ ನಡೆಯುತ್ತಿರುವ ಸುರಂಗ ಮಾರ್ಗ ನಿರ್ಮಾಣ ಕಾರ್ಯದಲ್ಲಿ ಊರ್ಜಾ ಟಿಬಿಎಮ್ ಯಂತ್ರ ಹಳೆಯ ಪ್ರದೇಶ ಹಾಗೂ ಹಳೆಯ ಕಟ್ಟಡಗಳಿರುವ ಭೂಮಿಯಡಿ ಜನರಿಗೆ ತೊಂದರೆಯಾಗದಂತೆ ಕಾರ್ಯನಿರ್ವಹಿಸಿದೆ. ಈ ಭಾಗದಲ್ಲಿ ಟಿಬಿಎಮ್ ಯಂತ್ರದ ಮೇಲೆ ಹೆಚ್ಚಿನ ಒತ್ತಡ ಇರಲಿಲ್ಲ.‌ ಯಂತ್ರದ ವೈಬ್ರೇಷನ್ ಜಾಸ್ತಿ ಬಂದಿರಲಿಲ್ಲ. ಶಿವಾಜಿನಗರ – ಟ್ಯಾನರಿ ರಸ್ತೆ ಮಾರ್ಗದಲ್ಲಿ 14 ಬೋರ್ ವೆಲ್ ಗಳ ಪೈಕಿ 3 ಬೋರ್ ವೆಲ್ ಬಳಕೆಯಾಗುತ್ತಿರಲಿಲ್ಲ. ಉಳಿದ ಬೋರ್ ವೆಲ್ ಮಾಲೀಕರಿಗೆ ಪರಿಹಾರ ನೀಡಿ ಅದನ್ನು ಬಂದ್ ಮಾಡಿ ಕೆಲಸ ಮಾಡಿದ್ದೇವೆ.”

– ಮಜರ್, ಎಇಇ, ಬಿಎಂಆರ್ ಸಿಎಲ್

ರೋಹಿತ್, ಎಲ್ ಅಂಡ್ ಟಿ ಟನಲ್ ಸೇಫ್ಟಿ ಮ್ಯಾನೇಜರ್

“ಕಳೆದ ಒಂದು ವರ್ಷದಿಂದ ಊರ್ಜಾ ಟಿಬಿಎಮ್ ಬಳಸಿ ದಿನದ 24 ಗಂಟೆ ಕೆಲಸ ಮಾಡಿ ಬುಧವಾರ ಯಶಸ್ವಿಯಾಗಿ ಶಿವಾಜಿನಗರ ನಿಲ್ದಾಣಕ್ಕೆ ಈ ಯಂತ್ರ ಬಂದು ನಿಂತಿದೆ. ಒಂದೊಂದು ಶಿಫ್ಟ್ ನಲ್ಲಿ ತಲಾ 60 ಜನ ಕಾರ್ಮಿಕರು ಸೇರಿದಂತೆ ಎರಡು ಶಿಫ್ಟ್ ನಲ್ಲಿ 120 ಮಂದಿ ಕಾರ್ಯ ನಿರ್ವಹಿಸಿ ಎದುರಾದ ಸವಾಲುಗಳನ್ನು ನಿವಾರಿಸಿ ಯಶಸ್ವಿಯಾಗಿದ್ದೇವೆ. ಸುರಂಗ ಕಾಮಗಾರಿ ಸ್ಥಳದಲ್ಲಿ ಆಮ್ಲಜನಕ ಸಿಲಿಂಡರ್, ವೈದ್ಯರು ಸೂಕ್ತ ಔಷಧಿ ಹಾಗೂ ವೈದ್ಯೋಪಕರಣಗಳೊಂದಿಗೆ ಸದಾ ಲಭ್ಯವಿರುತ್ತಾರೆ. ಆ ಮೂಲಕ ಕಾರ್ಮಿಕರ ಸುರಕ್ಷತೆಗೆ ಆದ್ಯ ಗಮನ ನೀಡಿ ಭೂಮಿ ಮೇಲಿನ ಕಟ್ಟಡಗಳಿಗೆ ಹಾನಿಯಾಗದಂತೆ ಊರ್ಜಾ ಕೆಲಸ ಮಾಡಿದೆ.”

– ರೋಹಿತ್, ಎಲ್ ಅಂಡ್ ಟಿ ಟನಲ್ ಸುರಕ್ಷತಾ ಮ್ಯಾನೇಜರ್

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

NAMMA METRO 2ND PHASE TUNNEL | ಭೂಮಿಯಡಿಯ ಮೆಟ್ರೊ ಸುರಂಗಮಾರ್ಗದಿಂದ ಹೊರಬರಲಿದೆ ಊರ್ಜಾ ಟಿಬಿಎಮ್ ಯಂತ್ರ….!

Next Post

BBMP TREE BRANCH MISHAP | ಮರದಕೊಂಬೆ ಬಿದ್ದು ಸಾವನ್ನಪ್ಪಿದ ಕುಟುಂಬಕ್ಕೆ 1 ವರ್ಷವಾದರೂ ಪರಿಹಾರ ನೀಡದ ಬಿಬಿಎಂಪಿ

Next Post

BBMP TREE BRANCH MISHAP | ಮರದಕೊಂಬೆ ಬಿದ್ದು ಸಾವನ್ನಪ್ಪಿದ ಕುಟುಂಬಕ್ಕೆ 1 ವರ್ಷವಾದರೂ ಪರಿಹಾರ ನೀಡದ ಬಿಬಿಎಂಪಿ

ಎತ್ತಿನಗಾಡಿ ಆಯ್ತು, ಸೈಕಲ್ ಜಾಥಾ ಮುಗೀತು ಈಗ ಕುದುರೆ ಟಾಂಗ ಏರಿದ ಕಾಂಗ್ರೆಸ್ ಮುಖಂಡರು

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d