Saturday, September 19, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL STORY | BBMP B-Khatha Property News | ಬೆಂಗಳೂರಿನ ಆಸ್ತಿ ಮಾಲೀಕರ B-ಖಾತೆಯನ್ನು A- ಖಾತೆ ಮಾಡಲು ಸರ್ಕಾರಕ್ಕೆ ಇದು ಸಕಾಲ…!!!

ಕಳೆದ 15 ವರ್ಷಗಳಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿನ ನಾಗರೀಕರ ಪರದಾಟ | ತಮ್ಮದಲ್ಲದ ತಪ್ಪಿಗೆ ರೆವೆನ್ಯೂ ಸ್ವತ್ತು ಖರೀದಿಸಿದವರಿಗೆ A- ವಹಿ ರಿಜಿಸ್ಟರ್ ನಲ್ಲಿ ದಾಖಲಿಸುವ ಸೌಲಭ್ಯವಿಲ್ಲ – ಖಾತೆ ನೋಂದಣಿಯಾಗುತ್ತಿಲ್ಲ |ಸರ್ಕಾರದ ಇಬ್ಬಗೆ ನೀತಿಯಿಂದ ಲಕ್ಷಾಂತರ ಆಸ್ತಿ ಮಾಲೀಕರಿಗೆ ತಪ್ಪದ ತೊಂದರೆ |ರಾಜ್ಯ ಸರ್ಕಾರ ಇರುವ ಗೊಂದಲ- ಸಮಸ್ಯೆಯನ್ನು ಹೀಗೆ ಪರಿಹರಿಸಬಹುದು...!

by Bengaluru Wire Desk
September 29, 2021
in Bengaluru Focus, BW Special, Public interest
Reading Time: 2 mins read
1
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಬೆಂಗಳೂರಿನಲ್ಲಿ ಬಿ- ಖಾತಾ ಸ್ವತ್ತಿನ ಮಾಲೀಕರ ಸ್ವತ್ತುಗಳನ್ನು ಸುಧಾರಣಾ ವೆಚ್ಚ ಪಾವತಿಸಿಕೊಂಡು “ಎ” ಖಾತಾ ಸ್ವತ್ತುಗಳಾಗಿ ನೋಂದಾಯಿಸಲು 15 ವರ್ಷದಿಂದ ಸಾಧ್ಯವಾಗಿಲ್ಲ. ಸರ್ಕಾರದ ಇಬ್ಬಗೆಯ ನೀತಿಯಿಂದಾಗಿ “ಬಿ” ಖಾತೆ ಸ್ವತ್ತು ಹೊಂದಿದ ನಗರದ ಆಸ್ತಿ ಮಾಲೀಕರು ಬ್ಯಾಂಕ್ ಲೋನ್ ಪಡೆಯುವುದು ಸೇರಿದಂತೆ ಮತ್ತಿತರ ಸೌಲಭ್ಯದಿಂದ ವಂಚಿತರಾಗಿದ್ದಾರೆ.

ಇನ್ನೊಂದೆಡೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ಅಂದಾಜು 6.90 ಲಕ್ಷ ಸ್ವತ್ತುಗಳಿಂದ ಏಳು ವರ್ಷಗಳ ಆಸ್ತಿ ತೆರಿಗೆ ಹಾಗೂ ಸುಧಾರಣಾ ವೆಚ್ಚವೂ ಇಲ್ಲದೆ ನಷ್ಟ ಅನುಭವಿಸುವಂತಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಭೂಪರಿವರ್ತನೆ ಆಗದೆ ಇರುವ ರೆವೆನ್ಯೂ ಬಡಾವಣೆಗಳಲ್ಲಿನ ನಿವೇಶನಗಳಿಗೆ ಸುಧಾರಣಾ ವೆಚ್ಚ ಪಾವತಿಸಿಕೊಂಡು “ಬಿ” ವಹಿ ಖಾತಾಗಳನ್ನು “ಎ” ವಹಿಗೆ ಖಾತೆ ನೋಂದಾಯಿಸುವಂತೆ ಸೂಕ್ತ ಸರ್ಕಾರಿ ಆದೇಶ ಹೊರಡಿಸಲು ಪಾಲಿಕೆಯ ಮುಖ್ಯ ಆಯುಕ್ತರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಇತ್ತೀಚೆಗೆ ಪತ್ರ ಬರೆದಿದ್ದಾರೆ.

ಬೆಂಗಳೂರಿನ ಪಾಲಿಕೆ ವ್ಯಾಪ್ತಿಯಲ್ಲಿ 19 ಲಕ್ಷಕ್ಕೂ ಹೆಚ್ಚು ಆಸ್ತಿಗಳಿದ್ದು ಆ ಪೈಕಿ 6.90 ಲಕ್ಷ ಸ್ವತ್ತುಗಳ ಪೈಕಿ 5.40 ಲಕ್ಷ ಸ್ವತ್ತುಗಳು “ಬಿ” ವಹಿ ಖಾತಗಳಾಗಿದ್ದು, 1.50 ಲಕ್ಷ ಸ್ವತ್ತುಗಳು “ಬಿ” ವಹಿ ಖಾತಾಗಳನ್ನು “ಎ” ವಹಿಗೆ ಖಾತೆ ಈ ಎರಡಕ್ಕೂ ಸೇರಿಲ್ಲದ ಆಸ್ತಿಗಳಾಗಿದೆ. ಈ ಎರಡು ವರ್ಗದ ಆಸ್ತಿಗಳಿಂದ ಪಾಲಿಕೆಯು ಏಳು ವರ್ಷದ ಆಸ್ತಿ ತೆರಿಗೆ ಹಾಗೂ ಸುಧಾರಣಾ ವೆಚ್ಚವನ್ನು ಕಟ್ಟಿಸಿಕೊಂಡರೆ ಪಾಲಿಕೆಗೆ ಕನಿಷ್ಠ ಅಂದರೂ ಒಂದು ಬಾರಿಗೆ 2,000 ಕೋಟಿ ರೂಪಾಯಿ ಆದಾಯ ಹರಿದು ಬರಲಿದೆ. ಹಾಗೆಯೇ 1.50 ಲಕ್ಷ ಆಸ್ತಿಗಳು ನಿಯಮಿತವಾಗಿ ಆಸ್ತಿ ತೆರಿಗೆ ಪರಿಧಿಗೆ ಸೇರ್ಪಡೆಯಾಗಲಿದೆ ಎಂದು ಪಾಲಿಕೆಯ ಹಿರಿಯ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ಖಚಿತಪಡಿಸಿದ್ದಾರೆ.

ಈ ಹಿಂದೆಯೂ ಬಿಬಿಎಂಪಿಯು 2019ರ ಜನವರಿ 29ರಂದು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು ಪಾಲಿಕೆ ವ್ಯಾಪ್ತಿಯಲ್ಲಿರುವ ಪ್ರತಿಯೊಂದು ಸ್ವತ್ತುಗಳನ್ನು ಆಸ್ತಿತೆರಿಗೆ ಪರಿಧಿಗೆ ತಂದು “ಬಿ” ವಹಿ ಖಾತಾಗಳನ್ನು “ಎ” ವಹಿಗೆ ಖಾತೆಗೆ ದಾಖಲಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಆಗಲೂ ಸರ್ಕಾರ ಇದಕ್ಕೆ ಸೊಪ್ಪು ಹಾಕಿರಲಿಲ್ಲ.

  • ಬಿಬಿಎಂಪಿ ಮುಖ್ಯ ಆಯುಕ್ತರಿಂದ ನಗರಾಭಿವೃದ್ಧಿ ಇಲಾಖೆಗೆ ಬರೆದಿರುವ ಪತ್ರದ ಪ್ರತಿ
ಸರ್ಕಾರಕ್ಕೆ ಬಿಬಿಎಂಪಿ ಬರೆದ ಪತ್ರ

ಸರ್ಕಾರದ ಇಬ್ಬಗೆ ನೀತಿಯೇನು?

ಇದರಿಂದ ಸಾಮಾನ್ಯ ಜನರಿಗೆ ಆಗುತ್ತಿರುವ ತೊಂದರೆಯೇನು?

ರಾಜ್ಯ ಸರ್ಕಾರವು 11-12-2006ರಂದು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಪ್ರಕರಣ 95ರ ಅನ್ವಯ ಭೂಪರಿವರ್ತನೆಗೊಂಡು ಸಕ್ಷಮ ಪ್ರಾಧಿಕಾರದಿಂದ  ಅನುಮೋದನೆ ಪಡೆಯದೇ ವಿಭಜನೆಗೊಳಗಾದ ಸ್ವತ್ತುಗಳಿಗೆ ಖಾತೆ ನೋಂದಾಯಿಸುವುದು ಶಿಕ್ಷಾರ್ಹ ಅಪರಾಧ ಎಂದು ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಈ ಹಿನ್ನಲೆಯಲ್ಲಿ 02-01-2007ರಿಂದ ಬೆಂಗಳೂರಿನಲ್ಲಿ ರೆವಿನ್ಯೂ ನಿವೇಶನಗಳಿಗೆ ಖಾತೆ ನೋಂದಾಯಿಸುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಆದರೂ ಕರ್ನಾಟಕ ಮುನಿಸಿಪಲ್ ಕಾಯ್ದೆ (ಕೆಎಂಸಿ) 1976ರ ಪ್ರಕರಣ 108ಕ್ಕೆ ತಿದ್ದುಪಡಿ ತಂದು ಹೊಸದಾಗಿ 102ಎ ಎಂಬುದನ್ನು ಜಾರಿಗೆ ತಂದು ರೆವೆನ್ಯೂ ನಿವೇಶನ ಅಥವಾ ಸ್ವತ್ತುಗಳ ವಿವರವನ್ನು “ಬಿ” ವಹಿ ರಿಜಿಸ್ಟರ್ ಪುಸ್ತಕದಲ್ಲಿ ದಾಖಲಿಸಿಕೊಂಡು ಆಸ್ತಿ ತೆರಿಗೆ ಮಾತ್ರ ವಸೂಲು ಮಾಡಲಾಗುತ್ತಿದೆ. ಆದರೆ ಪಾಲಿಕೆಯು ಇಂತಹ ಸ್ವತ್ತುಗಳಿಗೆ ಖಾತೆ ಮಾಡುತ್ತಿಲ್ಲ.

ಇನ್ನೊಂದೆಡೆ ಬಿಬಿಎಂಪಿಯು 2019ರ ಜನವರಿ 24ರಂದು “ಬಿ” ವಹಿ ರಿಜಿಸ್ಟರ್ ನಲ್ಲಿರುವ ಸ್ವತ್ತುಗಳನ್ನು “ಎ” ವಹಿಗೆ ನಮೂದಿಸಿ ಖಾತೆಗೆ ಮಾಡಿಕೊಡಲು ಅನುವಾಗುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ ರಾಜ್ಯ ಸರ್ಕಾರವು 12-07-2019ರಂದು ಬಿ- ವಹಿಯನ್ನು ಎ- ರಿಜಿಸ್ಟರ್ ಗೆ ಬದಲಾಯಿಸಿ ಖಾತೆ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಲು ಆದೇಶಿಸಿತ್ತು.

ಈ ಮಧ್ಯೆ 04-09-2021ರಂದು ರಾಜ್ಯ ಸರ್ಕಾರವೇ ಬಿಬಿಎಂಪಿ ಕಾಯ್ದೆ 2020ರ ಪ್ರಕರಣ 144(20)ರಂತೆ “ಪಾಲಿಕೆಯು ಸ್ವತ್ತು ತೆರಿಗೆಯನ್ನು ಪಾವತಿಸುವ ಪ್ರತಿಯೊಬ್ಬ ವ್ಯಕ್ತಿಗೆ ಅಂತ ತೆರಿಗೆ ಪಾವತಿಗಾಗಿ ಸ್ವೀಕೃತಿ ಅಥವಾ ಖಾತಾವನ್ನು ನೀಡತಕ್ಕದ್ದು. ಮತ್ತು ಹಾಗೆ ನೀಡಲಾದ ಅಂಥ ಸ್ವೀಕೃತಿ ಅಥವಾ ಖಾತಾವು ಕಾನೂನುಬದ್ಧ ಮತ್ತು ಕಾನೂನು ಬದ್ಧವಲ್ಲದ ಕಟ್ಟಡಗಳಿಗೆ ಅಥವಾ ಖಾಲಿ ಭೂಮಿಗೆ ವಿಭಿನ್ನವಾಗಿರತಕ್ಕದ್ದು. ಹಾಗೆಯೇ ಅಂಥಹ ಸ್ವೀಕೃತಿ ಅಥವಾ ಖಾತಾದ ನಮೂನೆಯು ನಿಯಮಗಳ ಅಡಿಯಲ್ಲಿ ಕಾಲಕಾಲಕ್ಕೆ ನಿಯಮಿಸಬಹುದಾದಂತೆ ಇರತಕ್ಕದ್ದು” ಎಂದು ತಿಳಿಸಲಾಗಿದೆ. ಇದಕ್ಕೆ ಸರ್ಕಾರದ ಅನುಮೋದನೆ ಪಡೆಯುವ ಪ್ರಶ್ನೆ ಉದ್ಭವಿಸುವುದಿಲ್ಲ ಮತ್ತು ಈ ವಿಷಯದಲ್ಲಿ ಸರ್ಕಾರವು ಪಾಲಿಕೆಗೆ ಯಾವುದೇ ನಿರ್ದೇಶನ ನೀಡಬೇಕಾಗಿಲ್ಲ. ಬಿಬಿಎಂಪಿಯು ಇದನ್ನು ಅನುಷ್ಠಾನಗೊಳಿಸಬೇಕೆಂದು ತಿಳಿಸಿದೆ.

ಒಂದೆಡೆ ರೆವೆನ್ಯೂ ಬಡಾವಣೆಗಳಲ್ಲಿನ ಬಿ ವಹಿ ಸ್ವತ್ತುಗಳಿಗೆ ಸುಧಾರಣಾ ವೆಚ್ಚ ಪಾವತಿಸಿಕೊಂಡು ಎ- ಖಾತಾ ನೋಂದಾಯಿಸಲು ಕೆಎಂಸಿ 1976ರ ಕಾಯ್ದೆಯಲ್ಲಾಗಲಿ ಹಾಗೂ ಬಿಬಿಎಂಪಿ 2020ರ ಕಾಯ್ದೆಯಲ್ಲಾಗಲಿ ಅವಕಾಶವಿಲ್ಲ. ಹಾಗಾಗಿ ಸರ್ಕಾರ ಸೂಚಿಸಿರುವಂತೆ ವಿವಿಧ ಇಲಾಖೆಗಳ  ಅಧಿಕಾರಿಗಳನ್ನು ಒಳಗೊಂಡ ಸರ್ಕಾರದ ಸಮಿತಿ ರಚಿಸಿ ನಿಯಮಾವಳಿ ರಚಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಸರ್ಕಾರದಿಂದ ಸೂಕ್ತ ಆದೇಶ ಹೊರಡಿಸುವಂತೆ ಕೋರಿ ಬಿಬಿಎಂಪಿ ಮುಖ್ಯ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ ಪಾಲಿಕೆಯ ಅಸಹಾಯಕ ಪರಿಸ್ಥಿತಿಯನ್ನು ಪತ್ರ ಬರೆದು ಸರ್ಕಾರಕ್ಕೆ ಕೋರಿದ್ದಾರೆ.

“ಬೆಂಗಳೂರು ನಗರ ಸಾಕಷ್ಟು ಅಭಿವೃದ್ಧಿಯಾಗಿದೆ. ಈ ಸಂದರ್ಭದಲ್ಲಿ ಇಲ್ಲಿನ ಜಮೀನುಗಳ ಭೂಪರಿವರ್ತನೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಹೀಗಿರುವಾಗ ಈ ಹಿಂದೆ 2006ರಲ್ಲಿ ರಾಜ್ಯ ಸರ್ಕಾರ ಭೂ ಕಂದಾಯ ಕಾಯ್ದೆ 1964ರ ಪ್ರಕರಣ 97ರ ಅನ್ವಯ ತಂದಿದ್ದ ಸುಗ್ರೀವಾಜ್ಞೆಯನ್ನು ರದ್ದುಪಡಿಸಿ, ಬಿ- ವಹಿಯಲ್ಲಿ ದಾಖಲಿಸಿದ ಸ್ವತ್ತುಗಳಿಗೆ ಸುಧಾರಣಾ ವೆಚ್ಚ ಪಾವತಿಸಿಕೊಂಡು ಎ- ವಹಿಯಲ್ಲಿ ನಮೂದಿಸಿ ಖಾತಾ ನೋಂದಾಯಿಸಿದರೆ ಬೆಂಗಳೂರಿನ ಲಕ್ಷಾಂತರ ಸ್ವತ್ತಿನ ಮಾಲೀಕರಿಗೆ ಅನುಕೂಲವಾಗುತ್ತದೆ. ಈ ಹಿಂದೆಯೂ ಪಾಲಿಕೆಯಲ್ಲಿ ಈ ರೀತಿ ಮಾಡಿದ ನಿದರ್ಶನಗಳಿವೆ.”

– ರಾಮಲಿಂಗಾರೆಡ್ಡಿ, ಮಾಜಿ ಸಚಿವರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು

ಈಗ ಸರ್ಕಾರದಿಂದ ಆಗಬೇಕಿರುವ ಕೆಲಸವೇನು?

ಪ್ರಸ್ತುತ 2010ರಲ್ಲಿ ಕೆಎಂಸಿ ಕಾಯ್ದೆ 1976ರ ಪ್ರಕರಣ 466 ಮತ್ತು 466 (ಬಿ) ಕ್ಕೆ ಹೊಸದಾಗಿ ನಿಯಮಗಳನ್ನು ರಚಿಸಿ, ಭೂಪರಿವರ್ತನೆಯಾಗಿ ವಿಭಜನೆ ಮಾಡಿರದ ಏಕ ನಿವೇಶನಗಳಿಗೆ ಮಾತ್ರ ಸುಧಾರಣಾ ವೆಚ್ಚ ಪಾವತಿಸಿಕೊಂಡು ಖಾತೆ ರಿಜಿಸ್ಟರ್ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ. ಆದ್ರೆ ಭೂಪರಿವರ್ತನೆಯಾಗಿ ವಿಭಜನೆಯಾದ ನಿವೇಶನಗಳಿಗೆ ಸುಧಾರಣಾ ವೆಚ್ಚ ಕಟ್ಟಿಸಿಕೊಂಡು ಎ-ಖಾತೆಯಾಗಿ ನೋಂದಾಯಿಸಲು ಅವಕಾಶವಿಲ್ಲ. ಒಂದು ಬಾರಿ ಬೆಂಗಳೂರು ನಗರ ಅಥವಾ ನಗರ ಪಾಲಿಕೆ ವ್ಯಾಪ್ತಿಗೆ ಒಳಪಟ್ಟ ನಂತರ ಕೃಷಿಭೂಮಿ ಅಥವಾ ಜಮೀನಿನ ಭೂಪರಿವರ್ತನೆ ಎಂಬ ವಿಚಾರ ತರ್ಕಹೀನವಾಗಿರುತ್ತೆ. ಆದ್ದರಿಂದ ಸರ್ಕಾರದ ಕಂದಾಯ ಇಲಾಖೆ 11-12-2006ರಂದು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಪ್ರಕರಣ 95ರ ಅನ್ವಯ ಭೂಪರಿವರ್ತನೆಗೊಂಡು ಸಕ್ಷಮ ಪ್ರಾಧಿಕಾರದಿಂದ  ಅನುಮೋದನೆ ಪಡೆಯದೇ ವಿಭಜನೆಗೊಳಗಾದ ಸ್ವತ್ತುಗಳಿಗೆ ಖಾತೆ ನೋಂದಾಯಿಸುವುದು ಶಿಕ್ಷಾರ್ಹ ಅಪರಾಧ ಎಂದು ಸುಗ್ರೀವಾಜ್ಞೆಯನ್ನು ಹೊರಡಿಸಿದ್ದು ಹಿಂಪಡೆದೋ ಅಥವಾ ಸೂಕ್ತ ತಿದ್ದುಪಡಿ ತಂದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ “ಬಿ” ರಿಜಿಸ್ಟರ್ ನಲ್ಲಿ ದಾಖಲಿಸಿದ ಆಸ್ತಿಗಳಿಗೆ ಸುಧಾರಣಾ ವೆಚ್ಚ ಪಾವತಿಸಿಕೊಂಡು “ಎ” ವಹಿನಲ್ಲಿ ನಮೂದಿಸಿ, ಖಾತೆ ನೋಂದಾಯಿಸಲು ಅನುಕೂಲವಾಗುತ್ತದೆ. ಇದನ್ನು ಬಹಳ ಸೂಕ್ಷ್ಮವಾಗಿ ಹಾಗೂ ಪರೋಕ್ಷವಾಗಿ ಮುಖ್ಯ ಆಯುಕ್ತರು ತಮ್ಮ ಪತ್ರದಲ್ಲಿ ಸರ್ಕಾರಕ್ಕೆ ತಿಳಿಸಿದ್ದಾರೆ.

ಒಂದೊಮ್ಮೆ ಇದು ಹೀಗೆ ಮುಂದುವರೆದರೆ ಈಗಾಗಲೇ ಆರ್ಥಿಕ ಮುಗ್ಗಟ್ಟಿನಿಂದ ನರಳುತ್ತಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು, ತನ್ನ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ವರ್ಷಂಪ್ರತಿ ಸಾವಿರಾರು ಕೋಟಿ ರೂಪಾಯಿ ಹಣ ಕರ್ಚು ಮಾಡುತ್ತಿದೆ. ಆದರೂ ಕಂದಾಯ ಇಲಾಖೆ ಭೂ ಕಂದಾಯ ಕಾಯ್ದೆ ತಿದ್ದುಪಡಿಯಿಂದ ಪಾಲಿಕೆಗೆ ಆಸ್ತಿ ತೆರಿಗೆ ಹಾಗೂ ಸುಧಾರಣಾ ವೆಚ್ಚದ ವರಮಾನ ಇಲ್ಲದೆ 15 ವರ್ಷಗಳಿಂದ ವರಮಾನ ಸ್ಥಗಿತಗೊಂಡಿದೆ. ಈ ಗೊಂದಲಕ್ಕೆ ಸರ್ಕಾರ ತೆರೆ ಎಳೆದು ಬಿ- ರಿಜಿಸ್ಟರ್ ನಲ್ಲಿ ದಾಖಲಿಸಿರುವ ಸ್ವತ್ತಿನ ಮಾಲೀಕರು ಹಾಗೂ ಬಿಬಿಎಂಪಿಗೆ ಬಿಗ್ ರಿಲೀಫ್ ನೀಡಬೇಕಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಮರದ ಕೊಂಬೆ ಬಿದ್ದು ಮೃತಪಟ್ಟಿದ್ದ ಸಿದ್ದಪ್ಪ ಕುಟುಂಬಕ್ಕೆ 1 ಲಕ್ಷ ರೂ. ಧನ ಸಹಾಯ

Next Post

DEFENCE MEG DAY | ದೇಶದ ಯುದ್ಧ ಇತಿಹಾಸದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಮದ್ರಾಸ್ ಸ್ಯಾಪರ್ಸ್ ಗೆ 241 ವರ್ಷ ವಯಸ್ಸು….!!

Next Post
ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಕೇಂದ್ರ ಕಚೇರಿ

DEFENCE MEG DAY | ದೇಶದ ಯುದ್ಧ ಇತಿಹಾಸದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಮದ್ರಾಸ್ ಸ್ಯಾಪರ್ಸ್ ಗೆ 241 ವರ್ಷ ವಯಸ್ಸು....!!

BBMP Missed the Deadline | Pothole Bangalore | ಮಾತಿಗೆ ತಪ್ಪಿದ ಬಿಬಿಎಂಪಿ ; ಮುಂದಿನ 20 ರಿಂದ 30 ದಿನಗಳಲ್ಲಿ ನಗರದ ರಸ್ತೆಗಳು ಗುಂಡಿ ಮುಕ್ತವಾಗಲಿದೆಯಂತೆ...! - ಮತ್ತೆ ಹೊಸ ಡೆಡ್ ಲೈನ್

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d