Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

‘ ರಸ್ತೆಗುಂಡಿ ಮುಚ್ಚಲು ಮೀಸಲಿಟ್ಟ 20 ಸಾವಿರ ಕೋಟಿ ರೂ. ಹಣ ಎಲ್ಲೋಯ್ತು? ‘ – ಎಚ್.ಡಿ. ಕುಮಾರಸ್ವಾಮಿ

ಭಾನುವಾರ ಸುರಿದ ಮಹಾಮಳೆ ಬೆಂಗಳೂರಿನ ಅದರಲ್ಲೂ ರಾಜರಾಜೇಶ್ವರಿ ನಗರದ ಅಭಿವೃದ್ಧಿಯನ್ನು ಬೆತ್ತಲು ಮಾಡಿದೆ | ಈ ಕ್ಷೇತ್ರಕ್ಕೆ ಹರಿದ ಹಣದ ಹೊಳೆ ಬಗ್ಗೆ ತನಿಖೆಗೆ ಮಾಜಿ ಸಿಎಂ ಒತ್ತಾಯ

by Bengaluru Wire Desk
October 4, 2021
in Bengaluru Focus
Reading Time: 2 mins read
0

ರಾಮನಗರ, (www.bengaluruwire.com) :  ಮಹಾಮಳೆಯಿಂದ ಬೆಂಗಳೂರು ತತ್ತರಿಸಿದೆ. ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಜನ ಸಾಯುತ್ತಿದ್ದಾರೆ. ನಗರದಲ್ಲಿ ರಸ್ತೆ ಗುಂಡಿ ಮುಚ್ಚಲು 20 ಸಾವಿರ ಕೋಟಿ ಹಣ ಖರ್ಚು ಮಾಡಿದ್ದೇವೆ ಎಂದು ಸದನದಲ್ಲಿ ಸಿಎಂ ಹೇಳಿದ್ದರು. ಆ ಹಣ ಎಲ್ಲಿ ಹೋಯಿತು? ಹೇಗೆ ಖರ್ಚಾಯಿತು?

ಇದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಎತ್ತಿದ ಪ್ರಶ್ನೆ.

ಜನತಾ ಪರ್ವ 1.O ಹಾಗೂ ಮಿಷನ್ 123 ಗುರಿಯೊಂದಿಗೆ ಬಿಡದಿಯ ತೋಟದಲ್ಲಿ ಜೆಡಿಎಸ್ ಪಕ್ಷ ಹಮ್ಮಿಕೊಂಡಿರುವ ಕಾರ್ಯಾಗಾರದ ನಡುವೆ ಸೋಮವಾರ ಮಾಧ್ಯಮಗಳ ಜತೆ ಮಾತನಾಡುತ್ತಾ, ನಗರದಲ್ಲಿ ಭಾನುವಾರ ರಾತ್ರಿ ಸುರಿದ ಒಂದೇ ಮಳೆ ನಗರದಲ್ಲಿ ದೊಡ್ಡ ಅನಾಹುತ ಉಂಟು ಮಾಡಿದೆ. ರಸ್ತೆಗಳ ಮೇಲೆ ನೀರು ನದಿಯಂತೆ ಹರಿದಿದೆ. ನಿರ್ವಹಣೆ ಕಳಪೆಯಾಗಿದೆ. ಹಾಗಾದ್ರೆ ರಸ್ತೆಗಳಿಗೆ ತೆಗೆದಿಟ್ಟ ಹಣ ಎಲ್ಲಿ ಹೋಯಿತು?  ಅಷ್ಟು ಹಣವನ್ನು ಯಾವುದಕ್ಕೆ ಬಳಕೆ ಮಾಡಿಕೊಂಡರು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂರು.

ಬೆಂಗಳೂರಿನಲ್ಲಿ ರಸ್ತೆಗುಂಡಿ ಮುಚ್ಚಲು ಸಾವಿರಾರು ಕೋಟಿ ರೂ. ಹಣ ವೆಚ್ಚ ಆಗಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿ ಬಂದಿದೆ. ಅದಕ್ಕೆ ಮುಖ್ಯಮಂತ್ರಿ ಪ್ರತಿಕ್ರಿಯೆ ಕೊಟ್ಟಿದ್ದರು. ಬೆಂಗಳೂರಿನ ಯಾವ ಭಾಗದಲ್ಲಿ ಎಷ್ಟೆಲ್ಲ ಹಣ ಖರ್ಚಾಗಿದೆ ಎಂಬ ಲೆಕ್ಕದ ಮಾಹಿತಿ ಜನರಿಗೆ ಗೊತ್ತಾಗಬೇಕಿದೆ ಎಂದು ಅವರು ನೇರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನೇ ಕೇಳಿದರು.

ರಾಜರಾಜೇಶ್ವರಿ ನಗರ ಜನಪ್ರಿಯ ಲೇಔಟ್ ಹೆಚ್ಚು ಮನೆಗೆ ನೀರು ನುಗ್ಗಿದ ದೃಶ್ಯ

ಭಾನುವಾರ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ನೂರಾರು ಕೋಟಿ‌ ರೂ. ವೆಚ್ಚದ ಯೋಜನೆಗಳಿಗೆ ಮುಖ್ಯಮಂತ್ರಿಗಳು, ಸಚಿವರು ಚಾಲನೆ ನೀಡಿದ್ದರು. ಆದರೆ ಸಂಜೆಗೆ ಆ ಭಾಗದಲ್ಲಿ ಮಳೆ ಬಂದು ಆ ಕ್ಷೇತ್ರದಲ್ಲಿ ಆಗಿರುವ ಪ್ರಗತಿಯನ್ನು ಬೆತ್ತಲು ಮಾಡಿತು. ಮನೆಗಳಿಗೆ ನೀರು ನುಗ್ಗಿ ಜನ ಇಡೀ ರಾತ್ರಿ ಜಾಗರಣೆ ಮಾಡಿದರು. ಮಳೆ ನೀರಿನಲ್ಲಿ ಹಸು, ಕುರಿಗಳು ಕೊಚ್ಚಿಕೊಂಡು ಹೋಗಿವೆ. ಇವರು ಯಾವ ರೀತಿಯ  ಅಭಿವೃದ್ಧಿಯನ್ನು ಮಾಡಿದ್ದಾರೆ. 

ರಾಜರಾಜೇಶ್ವರಿ ನಗರ ಕ್ಷೇತ್ರಕ್ಕೆ ಹಣ ಕರ್ಚಾದ ಬಗ್ಗೆ ತನಿಖೆಗೆ ಒತ್ತಾಯ :

ರಾಜರಾಜೇಶ್ವರಿ ನಗರ ಕ್ಷೇತ್ರ ಪ್ರಗತಿಗೆ ಹಲವಾರು ವರ್ಷಗಳಿಂದ ಕೋಟ್ಯಂತರ ರೂಪಾಯಿ ಹಣ ಹರಿದು ಬಂದಿದೆ. ಈ ಹಣ ಎಲ್ಲಿ ಹೋಯಿತು? ನಿರಂತರವಾಗಿ ಈ ಕ್ಷೇತ್ರಕ್ಕೆ ಹರಿದ ಹಣದ ಹೊಳೆ ಎತ್ತ ಹರಿಯಿತು? ಈ ಹಣವೂ ಸೇರಿ ಗುಂಡಿ ಮುಚ್ಚಲು ಖರ್ಚಾಗಿದೆ ಎಂದು ಸಿಎಂ ಹೇಳಿದ್ದ 20 ಸಾವಿರ ಕೋಟಿ ಹಣ ಏನಾಯಿತು ಎಂಬ ಮಾಹಿತಿ ಜನರಿಗೆ ಬೇಡವೇ? ಈ ಬಗ್ಗೆ ತನಿಖೆ ಆಗಲಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒತ್ತಾಯ ಮಾಡಿದರು.

ಬೆಂಗಳೂರಿನ‌ ಸಭೆ ನಡೆಸಲು ಅವರ ಪರ್ಮಿಷನ್ ಬೇಕಿತ್ತು :

ತಾವು ಸಮ್ಮಿಶ್ರ ಸರಕಾರದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬೆಂಗಳೂರು ಉಸ್ತುವಾರಿ ಕಾಂಗ್ರೆಸ್ ಪಕ್ಷದ ಕೈಲಿ ಇತ್ತು. ನಾನು ನಗರದ ಬಗ್ಗೆ ಒಂದು ಸಭೆ ಮಾಡಬೇಕಾದರೂ ಕಾಂಗ್ರೆಸ್ ನಾಯಕರ ಅಪ್ಪಣೆ ಬೇಕಾಗಿತ್ತು. ಆದರೆ ಅವರು ಸಭೆ ಕರೆಯಲು ಒಪ್ಪುತ್ತಿರಲಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಷ್ಟು ದಿನ ಬೆಂಗಳೂರು ಪ್ರಗತಿ ಪರಿಶೀಲನೆ ಮಾಡುವ ಹಾಗಿರಲಿಲ್ಲ. ಇದು ಸತ್ಯ ಸಂಗತಿ ಎಂದು ಎಚ್.ಡಿ‌.ಕುಮಾರಸ್ವಾಮಿ

ಇದೊಂದು ಪ್ರಚಾರ ಪ್ರಿಯ ಸರ್ಕಾರ : 

ಜನರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದರೆ ಸರಕಾರ ಪ್ರಚಾರದಲ್ಲಿ ಮುಳುಗಿದೆ. ಜಾಹೀರಾತುಗಳ ಮೂಲಕ ಸ್ವಯಂ ಪ್ರಶಂಸೆಯಲ್ಲಿ ತೇಲುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi),  ಬಸವರಾಜ ಬೊಮ್ಮಾಯಿ ಇಬ್ಬರೂ ನವ ಭಾರತಕ್ಕಾಗಿ ನವ ಕರ್ನಾಟಕವೆಂದು ಪ್ರಚಾರ ಮಾಡುತ್ತಿದ್ದಾರೆ. ಬೊಮ್ಮಾಯಿ ಅವರು ಮೋದಿ ಅವರಂತೆ ಬಟ್ಟೆ ಹಾಕಿಕೊಂಡು, ಫೋಟೋ ಶೂಟ್ ಮಾಡಿಸಿ, ಬಸ್ ನಿಲ್ದಾಣಗಳ ಮೇಲೆ ಜಾಹೀರಾತುಗಳಲ್ಲಿ ಪೋಸು ಕೊಡುತ್ತಿದ್ದಾರೆ. ಇವರು ಏನು ಮಾಡಲು ಹೊರಟಿದ್ದಾರೆ?

ನವ ಕರ್ನಾಟಕ ಏನು ಅನ್ನೋದು ನನಗೆ ಇನ್ನೂ ಅರ್ಥವಾಗಿಲ್ಲ. ಇವರಾದರೂ ನಮಗೆ ಹೇಳಲಿ ಎಂದು ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.

ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ, ಮಕ್ಕಳು ಆತ್ಮಹತ್ಯೆ ಮಾಡಿಕೊಂದರು. ಉತ್ತರ ಪ್ರದೇಶ (Uttarpradesh)ದಲ್ಲಿ ಹಲವು ತಿಂಗಳಿನಿಂದ ರೈತರು ಪ್ರತಿಭಟನೆ (Former Protest) ನಡೆಸುತ್ತಿದ್ದಾರೆ. ಮಳೆ ಪ್ರವಾಹದಲ್ಲಿ ಜನರ ಬದುಕು ಕೊಚ್ಚಿ ಹೋಗುತ್ತಿದೆ. ನವ ಭಾರತ ಎಂದರೆ ಇದೇನಾ? ಎಂದು ಅವರು ಕಟುವಾಗಿ ಪ್ರಶ್ನೆ ಮಾಡಿದರು.

ಉತ್ತರ ಪ್ರದೇಶ ಘಟನೆ ಅಕ್ಷಮ್ಯ: 

ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಕೇಂದ್ರದ ಮಂತ್ರಿಯ ಪುತ್ರ ವಾಹನ ಹತ್ತಿಸಿದ್ದಾರೆ. ಇದು ಹೇಯ ಮತ್ತು ಅಕ್ಷಮ್ಯ. ನಂತರ ನಡೆದ ಪ್ರತಿಭಟನೆಯಲ್ಲಿ ಇನ್ನಷ್ಟು ರೈತರು ಸಾವನ್ನಪ್ಪಿದ್ದಾರೆ. ಇದೇನಾ ನವ ಭಾರತ? ಹಿಂದುತ್ವದ ಹೆಸರಿನಲ್ಲಿ ದೇಶವನ್ನು ಒಡೆಯಲು ಹೊರಟಿರುವ ಬಿಜೆಪಿ ನವಭಾರತ ಕಟ್ಟುತ್ತಿರುವುದು ಹೀಗೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಒಬಿಸಿ ಪ್ರತಿನಿಧಿಗಳ ಸಭೆ :

ಬಿಡದಿಯ ತೋಟದಲ್ಲಿ ನಡೆಯುತ್ತಿರುವ ಜೆಡಿಎಸ್ ಪಕ್ಷದ ಜನತಾ ಪರ್ವ 1.O ಹಾಗೂ ಮಿಷನ್ 123 ಕಾರ್ಯಗಾರದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಪ್ರತಿನಿಧಿಗಳ ಸಭೆಗೆ ಮುನ್ನ ದ್ವಜಾರೋಹಣ ಹಾಗೂ ಉದ್ಘಾಟನಾ ಕಾರ್ಯಕ್ರಮ ಕೈಗೊಳ್ಳಲಾಯಿತು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಶಾಸಕ ಅನ್ನದಾನಿ, ಮಾಜಿ ಶಾಸಕ ಸುಧಾಕರ ಲಾಲ್, ಸುರೇಶ್ ಬಾಬು, ಮಾಜಿ ಸಚಿವ ಬಂಡೆಪ್ಪ ಕಾಷೆಂಪೂರ್ ಮುಂತಾದವರು ಉಪಸ್ಥಿತರಿದ್ದರು.

ಸಮಗ್ರ ಬೆಂಗಳೂರಿನ ಕಾಮಗಾರಿಗೆ 20 ಸಾವಿರ ಕೋಟಿ ರೂ. – ಎಸ್.ಟಿ.ಸೋಮಶೇಖರ್ ಸ್ಪಷ್ಟನೆ

ಬಿಜೆಪಿ ಪಕ್ಷದ ಜಗನ್ನಾಥ ಭವನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಚಿತ್ರ

ಭಾನುವಾರ ತೀವ್ರ ಮಳೆ ಬಿದ್ದ ಕಾರಣ ಕೆಲವೆಡೆ ಸ್ವಲ್ಪ ಸಮಸ್ಯೆ ಆಗಿದೆ. ಆ ಸಮಸ್ಯೆ ಬಗ್ಗೆ ಮಧ್ಯರಾತ್ರಿ ತಿಳಿದು ಸಂಬಂಧಿತ ಎಂಜಿನಿಯರ್‌ ಗಳಿಗೆ ತಿಳಿಸಿದ್ದು, ತಕ್ಷಣ ಸ್ಪಂದಿಸಿದ್ದಾರೆ. ಬೆಂಗಳೂರಿನಲ್ಲಿ 20 ಸಾವಿರ ಕೋಟಿ ಹಣದಲ್ಲಿ ವಿವಿಧೆಡೆ ವೈಟ್ ಟಾಪಿಂಗ್, ಡಾಂಬರೀಕರಣ ನಡೆಯುತ್ತಿಲ್ಲವೇ? ಯಡಿಯೂರಪ್ಪ ಅವರಿದ್ದ ಸಂದರ್ಭದಲ್ಲಿ ದೊಡ್ಡ ರಸ್ತೆಗಳ ಕಾಂಕ್ರಿಟೀಕರಣ, ಡಾಂಬರೀಕರಣಕ್ಕೆ ಟೆಂಡರ್ ಕೂಡ ಆಗಿದೆ. ಸಮಗ್ರ ಬೆಂಗಳೂರಿಗೆ ಸಂಬಂಧಿಸಿದ ಕಾಮಗಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಸದನದಲ್ಲಿ 20 ಸಾವಿರ ಕೋಟಿ ಮೊತ್ತದ ವಿಚಾರ ಹೇಳಿದ್ದಾರೆ. ಕೇವಲ ರಸ್ತೆಗಳ ಗುಂಡಿ ಮುಚ್ಚುವ ಬಗ್ಗೆ ಮುಖ್ಯಮಂತ್ರಿಗಳು ಹೇಳಿಲ್ಲ.

– ಎಸ್.ಟಿ.ಸೋಮಶೇಖರ್, ಸಹಕಾರ ಸಚಿವರು

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Vijaynagara District |ಉದಯವಾಯಿತು ನಮ್ಮ ಚೆಲುವ ವಿಜಯನಗರ….!!

Next Post

ಬೆಂಗಳೂರಿನ ರಾಜಕಾಲುವೆ ಪ್ರವಾಹಕ್ಕೆ ಇವರು ಕಾರಣರಂತೆ….!

Next Post

ಬೆಂಗಳೂರಿನ ರಾಜಕಾಲುವೆ ಪ್ರವಾಹಕ್ಕೆ ಇವರು ಕಾರಣರಂತೆ....!

ಮೂರು ದಿನಗಳ ಭೇಟಿಗೆಂದು ಇಂದು ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ

Please login to join discussion

Like Us on Facebook

Follow Us on Twitter

Recent News

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d