Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

  • Bengaluru Focus

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BUILDING COLLAPSE | ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ

ಕಸ್ತೂರಿನಗರ ಡಾಕ್ಟರ್ಸ್ ಲೇಔಟ್ ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಘಟನೆ | ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ | ಸಚಿವ ಆರ್.ಅಶೋಕ್ ಹೇಳಿದರೂ ನಗರದಲ್ಲಿ ಆರಂಭವಾಗದ ಶಿಥಿಲ ಕಟ್ಟಡಗಳ ಸಮೀಕ್ಷೆ

by Bengaluru Wire Desk
October 7, 2021
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ನಗರದಲ್ಲಿ ನಿರಂತರವಾಗಿ ಎಡಬಿಡದೆ ಮಳೆ ಸುರಿಯುತ್ತಿರುವ ಮಧ್ಯೆ ಕಳಪೆ ಕಟ್ಟಡಗಳ ಕುಸಿತ ಪ್ರಕರಣವೂ ಮರುಕಳಿಸುತ್ತಿದೆ. ಗುರುವಾರ ಮಧ್ಯಾಹ್ನ ಬೆನ್ನಗಾನಹಳ್ಳಿ ಕಸ್ತೂರಿನಗರದ ಡಾಕ್ಟರ್ಸ್ ಲೇಔಟ್ ನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ನಡೆದಿಲ್ಲ.

ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಸಿ ಕಟ್ಟಡ ಕಟ್ಟಿದ್ದರಿಂದಲೇ ಈ ದುರ್ಘಟನೆ ಸಂಭವಿಸಿರುವುದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸದಾಗ ಮೇಲ್ನೋಟಕ್ಕೆ ಈ ಅಂಶ ಕಂಡುಬಂದಿದೆ. ಕಟ್ಟಡ ಮಾಲೀಕರ ವಿರುದ್ಧ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

ಮುಖ್ಯ ಆಯುಕ್ತರು ಏನಂತಾರೆ ? :
ಕಟ್ಟಡ ಕುಸಿದು ಬಿದ್ದಿರುವ ಸ್ಥಳಕ್ಕೆ ಮುಖ್ಯ ಆಯುಕ್ತರಾದ ಗೌರವ್ ಗುಪ್ತಾ ಭೇಟಿ ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಡಾಕ್ಟರ್ಸ್ ಲೇಔಟ್ ನಲ್ಲಿ ಕುಸಿತಗೊಂಡ ಕಟ್ಟಡದ ಸುತ್ತಮುತ್ತಲಿನ ಕಟ್ಟಡಗಳ ದೃಢತೆಯ ಬಗ್ಗೆ ನುರಿತ ಕಟ್ಟಡ ರಚನಾ ಅಭಯಂತರರು (structural engineering) ಒಳಗೊಂಡ ಪ್ರತಿಷ್ಠಿತ ಕನ್ಸಲ್ಟೆಂಟ್ ಮುಖಾಂತರ ಸಮೀಕ್ಷೆ ನಡೆಸಿ ವರದಿ ನೀಡಲು ವಲಯ ಜಂಟಿ ಆಯುಕ್ತರು ಹಾಗೂ ಮುಖ್ಯ ಅಭಿಯಂತರರು ರವರಿಗೆ ಸೂಚನೆ ನೀಡಿದ್ದಾಗಿ ಹೇಳಿದರು.

ಸುತ್ತಮುತ್ತಲಿನ ಕಟ್ಟಡಗಳ ಭದ್ರತೆಯ ದೃಷ್ಟಿಯಿಂದ ಮಣ್ಣಿನ ಪರೀಕ್ಷೆ(Soil test) ಮಾಡುವುದು. ಕಟ್ಟಡದ ವಾಸ ಯೋಗ್ಯದ ಬಗ್ಗೆ ಪರಿಶೀಲನೆ ಮಾಡಿ ಅದರಲ್ಲಿ ಲೋಪದೋಷಗಳಿದ್ದಲ್ಲಿ ಕಟ್ಟಡ ತೆರವುಗೊಳಿಸಲು ಸೂಚನೆ ನೀಡಿದ್ದಾಗಿ ತಿಳಿಸಿದರು.

ಯಾವುದಾದರು ಕಟ್ಟಡದಲ್ಲಿ ನಿಯಮ ಬಾಹಿರವಾಗಿ ಅನಧಿಕೃತ ಮಹಡಿಗಳನ್ನು ನಿರ್ಮಿಸಿಕೊಂಡಿರುವುದು ದೃಢಪಟ್ಟಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲು ಖಡಕ್ ಸೂಚನೆ ನೀಡಿದ್ದಾರೆ.

ಘಟನೆ ನಡೆದಿದ್ದು ಹೇಗೆ? :

ನೆಲ ಅಂತಸ್ತು,‌ ನೆಲ ಮಹಡಿ ಸೇರಿದಂತೆ ನಾಲ್ಕು ಅಂತಸ್ತು ಹೊಂದಿರುವ ಈ ಕಟ್ಟಡದಲ್ಲಿ ಒಟ್ಟು ಎಂಟು ವಸತಿ ಸಮುಚ್ಛಯಗಳಿದ್ದು, ಮೂರು ಮನೆಯಲ್ಲಿ ವಾಸವಿದ್ದು, 5 ಮನೆಗಳು ಕಾಲಿಯಿದ್ದವು. ಮಧ್ಯಾಹ್ನ 2:30 ರಿಂದ 3:30ರ ಸಮಯದಲ್ಲಿ ಈ ಡಾಕ್ಟರ್ಸ್ ಲೇಔಟ್ ನಲ್ಲಿನ ಈ ನಾಲ್ಕು ಅಂತಸ್ತಿನ ಕಟ್ಟಡದ ಪಿಲ್ಲರ್ ನಲ್ಲಿ ಬಿರುಕು ಬಿಟ್ಟಿರುವುದನ್ನು ಗಮನಿಸಿದ ಅಕ್ಕಪಕ್ಕದ ನಿವಾಸಿಗಳು ಬಿಬಿಎಂಪಿ ಸಹಾಯವಾಣಿಗೆ ಕರೆ ಮಾಡಿ ತಿಳಿಸಿದರು.

ಸ್ಥಳಕ್ಕೆ ಬಂದ ಪಾಲಿಕೆ ಅಧಿಕಾರಿಗಳು ಕುಸಿತವಾಗುತ್ತಿರುವ ಮನೆಯಲ್ಲಿದ್ದವರನ್ನು ತೆರವುಗೊಳಿಸಿದರು. ಪಾಲಿಕೆ ಕಂದಾಯ ಇಲಾಖೆ ದಾಖಲೆ ಪ್ರಕಾರ 2012 ರಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆದಿದ್ದು ಅಯೇಷಾ ಬೇಗ್ ಹೆಸರಿನಲ್ಲಿ ಖಾತಾ ಇರುವುದನ್ನು ಪಾಲಿಕೆ ಅಧಿಕಾರಿಗಳು ದೃಢಪಡಿಸಿದ್ದಾರೆ.

ಬಳಿಕ ಸ್ವತ್ತಿನ‌ ಮಾಲೀಕರು, ನಾಲ್ಕು ಫ್ಲಾಟ್ ಗಳನ್ನು ತಾವೇ ಉಳಿಸಿಕೊಂಡು, ಬಾಕಿ ಉಳಿದ ನಾಲ್ಕು ಫ್ಲಾಟ್ ಗಳನ್ನು ತನ್ವೀರ್ ಪಾಷಾ, ಡಾ.ನಾರಾಯಣಸ್ವಾಮಿ, ಮೊಹಮ್ಮದ್ ತಯಿಸುದ್ದೀನ್ ಹಾಗೂ ಜಮೀಲ್ ಬಾನು ಎಂಬುವರಿಗೆ ಮಾರಾಟ ಮಾಡಿದ್ದರು ಎಂದು ಪಾಲಿಕೆ ಅಧಿಕಾರಿಗಳು ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ನಗರದಲ್ಲಿ ಶಿಥಿಲ ಕಟ್ಟಡ ಸಮೀಕ್ಷೆ ಸಚಿವರು ನೀಡಿದ ಗಡುವಿನ ಒಳಗೆ ಪೂರ್ಣವಾಗದು :

ನಗರದಲ್ಲಿ ಶಿಥಿಲ ಕಟ್ಟಡಗಳ ಸಮೀಕ್ಷೆಯನ್ನು 15 ದಿನಗಳ ಒಳಗಾಗಿ ಪೂರ್ಣಗೊಳಿಸಿ ವರದಿ ನೀಡಲು ಕಂದಾಯ ಸಚಿವ ಆರ್.ಅಶೋಕ್ ಸೆ.30ರಂದು ವಿಧಾನಸೌಧದಲ್ಲಿ ಪಾಲಿಕೆ ಅಧಿಕಾರಿಗಳ‌ ಸಭೆಯಲ್ಲಿ ಗಡುವು ನೀಡಿದ್ದರು.

ಹೀಗೆ ಸಮೀಕ್ಷೆ ಮಾಡಲಾದ ಕಟ್ಟಡಗಳ ಮಾಲೀಕರಿಗೆ ನೋಟಿಸ್ ನೀಡಿ ಅವುಗಳನ್ನು ನಿಯಮಾನುಸಾರ ತೆರವು ಮಾಡಲು ಸೂಚಿಸಿದ್ದರು. ಇಷ್ಟರ ಹೊರತಾಗಿಯೂ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸಚಿವ ಅಶೋಕ್ ಸಭೆ ನಡೆಸಿದ ಐದು ದಿನದ ಬಳಿಕ ಅಂದರೆ ಅ.5ರಂದು ಶಿಥಿಲ ಕಟ್ಟಡ ಸಮೀಕ್ಷೆ ಸಂಬಂಧ ಸಮೀಕ್ಷೆ ನಡೆಸಲು ಕಚೇರಿ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೀಗಾದರೆ ಬಿಬಿಎಂಪಿಯ ಎಂಟು ವಲಯಗಳಲ್ಲಿ ಶಿಥಿಲ ಕಟ್ಟಡಗಳನ್ನು ಗುರುತಿಸಿ, ಕಟ್ಟಡ ಸ್ಟ್ರಕ್ಚರಲ್ ಎಂಜಿನಿಯರ್ ಗಳಿಂದ ಅವುಗಳ ದೃಢತೆಯ ಬಗ್ಗೆ ಪರಿಶೀಲಿಸಿ ನಂತರವಷ್ಟೆ ಕಟ್ಟಡ ಶಿಥಿಲವೇ? ಅಲ್ಲವೇ ಎಂಬುದನ್ನು ತಿಳಿಯಬೇಕು. ಹಾಗೇ ಮಾಡದಿದ್ದಲ್ಲಿ ಪಾಲಿಕೆ ಕಾನೂನು ಹೋರಾಟದಲ್ಲಿ ಸಿಲುಕಬಹುದು. ಹಾಗಾಗಿ ಶಿಥಿಲ ಕಟ್ಟಡ ಸಮೀಕ್ಷೆ ನಡೆಸಲು ಸಾಕಷ್ಟು ಸಮಯ ಹಿಡಿಯಲಿದ್ದು, ಸಚಿವರು ನೀಡಿದ ಗಡುವಿನೊಳಗೆ ಸಮೀಕ್ಷೆ ಪೂರ್ಣಗೊಳ್ಳದು ಎಂದು ಅಧಿಕಾರಿಯೊಬ್ಬರು ವಾಸ್ತವ ಬಿಚ್ಚಿಟ್ಟಿದ್ದಾರೆ.

ಕಟ್ಟಡ ಕುಸಿತ ಪರಿಶೀಲನೆ ವೇಳೆ ಪೂರ್ವ ವಲಯ ಜಂಟಿ ಆಯುಕ್ತರು ಪಲ್ಲವಿ, ಮುಖ್ಯ ಇಂಜಿನಿಯರ್ ಮೋಹನ್ ಕೃಷ್ಣ, ಕಾರ್ಯಪಾಲಕ ಇಂಜಿನಿಯರ್ ಪ್ರಭಾಕರ್, ಬಿಬಿಎಂಪಿ ಅಧಿಕಾರಿಗಳು, ಕರ್ನಾಟಕ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

MYSURU DASARA | ನಾಡಹಬ್ಬ ದಸರಾಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚಾಲನೆ

Next Post

BW SPECIAL | BENGALURU RAIN | ಬೆಂಗಳೂರಿಗರೇ ATTENTION….!

Next Post
ಸಾಂದರ್ಭಿಕ ಚಿತ್ರ

BW SPECIAL | BENGALURU RAIN | ಬೆಂಗಳೂರಿಗರೇ ATTENTION….!

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

Please login to join discussion

Like Us on Facebook

Follow Us on Twitter

Recent News

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

June 15, 2026

#OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

June 15, 2026

Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

June 15, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group