Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

MYSURU DASARA | ನಾಡಹಬ್ಬ ದಸರಾಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಚಾಲನೆ

ವೈಭವದ ನಾಡಹಬ್ಬ ದಸರಾಗೆ ಚಾಲನೆಯಿಂದ ಮೈಸೂರಿನಲ್ಲಿ ಗತವೈಭವ ಮರುಕಳಿಸಿದೆ

by Bengaluru Wire Desk
October 7, 2021
in News Wire, Public interest
Reading Time: 2 mins read
0

ಮೈಸೂರು, (www.bengaluruwire.com ) :
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ಬೆಳಗ್ಗೆ 8:15 ರಿಂದ 8:45 ರವರೆಗೆ ಸಲ್ಲುವ ಶುಭ ಮುಹೂರ್ತದಲ್ಲಿ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು  ಚಾಲನೆ ನೀಡಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸೇರಿ ಹಲವರು ನಾಡಹಬ್ಬ ದಸರಾ ಉದ್ಘಾಟನೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರೋನಾ ನಿರ್ಬಂಧದ ಹಿನ್ನೆಲೆಯಲ್ಲಿ ಕೇವಲ 100 ಮಂದಿಗೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಹಾಗಾಗಿ ಚಾಮುಂಡಿಬೆಟ್ಟಕ್ಕೆ ಭಕ್ತರು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿತ್ತು.

ತಾವರೆಕಟ್ಟೆ ಗೇಟ್ ಬಳಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು,  ಚಾಮುಂಡಿಬೆಟ್ಟದ ನಿವಾಸಿಗಳು, ಉದ್ಘಾಟನಾ ಕಾರ್ಯಕ್ರಮದ ಸಿಬ್ಬಂದಿ, ಸರ್ಕಾರಿ ಅಧಿಕಾರಿಗಳಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿತ್ತು.  ಕೆ.ಆರ್ ಠಾಣಾ ಪೊಲೀಸರು ಸಾರ್ವಜನಿಕರ ವಾಹನ ತಪಾಸಣೆ ಕೈಗೊಂಡು ಕಾರ್ಯಕ್ರಮಕ್ಕೆ ಆಹ್ವಾನವಿದ್ದವರಿಗೆ ಚಾಮುಂಡಿಬೆಟ್ಟದ ಮೇಲೆ ತೆರಳಲು ಅವಕಾಶ ಕಲ್ಪಿಸಿದ್ದರು.

ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭ, ಅರಮನೆ ವೇದಿಕೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಜಂಬೂ ಸವಾರಿ ಕಾರ್ಯಕ್ರಮ ವೆಬ್‌ಸೈಟ್‌ , ಫೇಸ್‌ಬುಕ್‌, ಯೂಟ್ಯೂಬ್ ‌ನಲ್ಲಿ ನೇರಪ್ರಸಾರವಾಗಲಿವೆ.
ಕಾರ್ಯಕ್ರಮಗಳ ವೇಳಾಪಟ್ಟಿಯನ್ನು ಈ ಮುಂದಿನ ವೆಬ್‌ಸೈಟ್ www.mysoredasara.gov.in ನಲ್ಲಿ ಪ್ರಕಟಿಸಲಾಗಿದೆ.

ವಾರ್ತಾ ಇಲಾಖೆಯಿಂದ ನಾಡಹಬ್ಬ ದಸರಾ ನೇರಪ್ರಸಾರ

ಒಂದೆಡೆ ನಾಡ ಹಬ್ಬ ದಸರಾಗೆ ಚಾಮುಂಡಿ ಬೆಟ್ಟದಲ್ಲಿ ಚಾಲನೆ ಸಿಕ್ಕಿದರೆ. ಇತ್ತ ಬೆಳಗ್ಗೆಯೇ ಅಂಬಾ ವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಿದೆ. ಗತ ಕಾಲದ ವೈಭವ ಮರುಕಳಿಸಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನರೋಹಣ ಮಾಡಿ ದರ್ಬಾರ್ ನಡೆಸುವ ಕಾರ್ಯಕ್ರಮ ನಡೆಯುತ್ತಿದೆ.

ಸಂಗ್ರಹ ಚಿತ್ರ

ಅಕ್ಟೋಬರ್ 7 ರಿಂದ 15 ರ ವರೆಗೆ 2021ನೇ ಸಾಲಿನ ವಿಶ್ವವಿಖ್ಯಾತಿ ಮೈಸೂರು ದಸರಾ ಮಹೋತ್ಸವ ನಡೆಯಲಿದ್ದು ಅರಮನೆ ಆವರಣದಲ್ಲಿ ಸಂಜೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಗರಿಷ್ಠ 500 ಜನರಿಗೆ ಅನುಮತಿ ನೀಡಲಾಗಿದೆ. ಅಲ್ಲದೆ ಅ.15ರಂದು ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂ ಸವಾರಿಯಲ್ಲಿ 500 ಜನರಿಗೆ ಮಾತ್ರ ಪ್ರವೇಶ ಅವಕಾಶವಿದೆ.

ದಸರಾ ಆಚರಣೆಯಲ್ಲಿ ಭಾಗವಹಿಸುವವರು ಅ.4 ರ ನಂತರ ಕೋವಿಡ್ ತಪಾಸಣೆಗೆ (ಆರ್ ಟಿಪಿಆರ್) ಒಳಪಟ್ಟು, ಕರೋನಾ ಸೋಂಕು ಇರದ ಬಗ್ಗೆ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಎಂದು ಸರ್ಕಾರ ನಿರ್ಬಂಧ ವಿಧಿಸಿದೆ.

ದಸರೆಯ ಮುಖ್ಯ ಆಕರ್ಷಣೆ ಜಂಬೂ ಸವಾರಿ ಅಕ್ಟೋಬರ್ 15 ರಂದು ಜರುಗಲಿದ್ದು, ಅಂದು ಸಂಜೆ 4:36 ರಿಂದ 4:44 ರವರೆಗೆ ನಂದಿ ಧ್ವಜ ಪೂಜೆ ನೆರವೇರಲಿದೆ. ಬಳಿಕ ಸಂಜೆ 5 ರಿಂದ 5:30 ರ ವರೆಗೆ ಜಂಬೂ ಸವಾರಿ ನಡೆಯಲಿದೆ. ಕೊರೊನಾ ಹಿನ್ನೆಲೆ ಕಳೆದ ವರ್ಷದಿಂದ ದಸರಾ ಮಹೋತ್ಸವ ಸರಳವಾಗಿ ಆಚರಿಸಲಾಗ್ತಿದ್ದು, ಈ ವರ್ಷವೂ ಜಂಬೂ ಸವಾರಿ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೆಲ್ಲಾ ಅರಮನೆ ಆವರಣದಲ್ಲಿ ಆಚರಿಸಲಾಗುತ್ತಿದೆ.

ಸಾಂದರ್ಭಿಕ ಚಿತ್ರ

ನಾಡಹಬ್ಬ ದಸರಾ ಅಂದರೆ ಅಲ್ಲಿ ವೈಭವಕ್ಕೇನು ಕಮ್ಮಿ ಇಲ್ಲ. ಅದು ಸರಳವಾಗಿರಲೀ ಅಥವಾ ಅದ್ಧೂರಿಯಾಗಿರಲಿ ದಸರಾ ಅಂದರೆ ಇಡೀ ನಾಡಿಗೆ ಹರುಷ ತರುವ ಹಬ್ಬ. 9 ದಿನಗಳ ಕಾಲ ನಡೆಯುವ ಈ ನವರಾತ್ರಿ ಉತ್ಸವದಲ್ಲಿ ಮೈಸೂರು ಸಿಂಗಾರಗೊಳ್ಳುವುದನ್ನು ನೋಡುವುದೇ ಕಣ್ಣುಗಳಿಗೆ ಸಂಭ್ರಮ. ಮನೆಮನೆಗಳಲ್ಲಿ ಬೊಂಬೆ ಕೂರಿಸುವುದು, ದುರ್ಗಾ ಪೂಜೆ, ಆಯುಧ ಪೂಜೆ, ಸರಸ್ವತಿ ಪೂಜೆಗಳನ್ನು ಕೈಗೊಳ್ಳುವುದು ಈ ಹಬ್ಬದ ವಿಶೇಷತೆ.

ನಾಡಹಬ್ಬ ಮೈಸೂರು ದಸರಾ ಉತ್ಸವ ಕರ್ನಾಟಕ ಸರ್ಕಾರ ನಡೆಸುತ್ತಿರುವ ಅತಿ ದೊಡ್ಡ ಹಾಗೂ ಪ್ರಮುಖ ಉತ್ಸವವಾಗಿದೆ. ಈ ದಸರಾ ಮಹೋತ್ಸವಕ್ಕೆ ನೂರಾರು ವರ್ಷಗಳ ಸುದೀರ್ಘ ಇತಿಹಾಸವಿದೆ.

ಮೈಸೂರು ಅರಸರಾದ ಶ್ರೀ ರಾಜ ಒಡೆಯರ್ ಅವರು ಕ್ರಿ.ಶ. 1610ರಲ್ಲಿ ಶ್ರೀರಂಗಪಟ್ಟಣದಲ್ಲಿ ದಸರಾ ಆರಂಭಿಸಿದರು. ಆದರೆ ಕ್ರಿ.ಶ 1336ರಲ್ಲಿಯೇ ವಿಜಯನಗರ ಸಾಮ್ರಾಜ್ಯದಲ್ಲಿ ನವರಾತ್ರಿ ಉತ್ಸವವನ್ನು ಆಚರಿಸಲಾಗುತ್ತಿತ್ತು ಎಂಬುದಾಗಿ ವಿಜಯನಗರ ಸಾಮ್ರಾಜ್ಯಕ್ಕೆ ಬಂದಿದ್ದ ವಿದೇಶಿ ಪ್ರವಾಸಿಗರು ದಾಖಲಿಸಿದ ಮಾಹಿತಿಯಿಂದ ತಿಳಿಯುತ್ತದೆ. ದಸರಾ ಮಹೋತ್ಸವಕ್ಕೆ ವೈಭವದ ಇತಿಹಾಸ ಇರುವುದಂತು ಸತ್ಯ. ಈ ದಸರಾ ಉತ್ಸವ ಸಾಂಸ್ಕೃತಿಕ ಸಂಕೇತವಾಗಿ ಕಂಡು ಬರುತ್ತದೆ.

ಈ ಬಾರಿ ಅಕ್ಟೋಬರ್ 15 ರಂದು ವಿಜಯದಶಮಿ ಪ್ರಯುಕ್ತ ಜಂಬೂ ಸವಾರಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ಆನೆಯು ನಾಡದೇವಿ ತಾಯಿ ಚಾಮುಂಡಿಯ ಚಿನ್ನದ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ಹೆಜ್ಜೆ ಹಾಕಲಿದ್ದಾನೆ. ಇದಕ್ಕಾಗಿ ದಸರೆ ಆನೆಗಳಿಗೂ ತಾಲೀಮು ನೀಡಲಾಗಿದೆ. ಫಿರಂಗಿ ತಾಲೀಮು ಕೂಡ ಕೈಗೊಳ್ಳಲಾಗಿತ್ತು.

ಕೊರೊನಾ ಕಾರಣದಿಂದ ದಸರಾ ವೀಕ್ಷಣೆಗೆ ಹೆಚ್ಚು ಜನರಿಗೆ ಪ್ರವೇಶಾವಕಾಶ ಇಲ್ಲ. ಹೀಗಾಗಿ ದಸರಾ ವೈಭವವನ್ನು ಜನರು ತಾವು ಇರುವಲ್ಲಿಯೇ ವೀಕ್ಷಿಸಲು ಅನುಕೂಲವಾಗುವಂತೆ ಎಲ್ಲಾ ಕಾರ್ಯಕ್ರಮಗಳನ್ನು ವೆಬ್‌ಸೈಟ್ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ನೇರ ಪ್ರಸಾರ ಮಾಡುವ ವ್ಯವಸ್ಥೆ ಮಾಡಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Kichcha Sudeepa | ಕಿಚ್ಚ ಸುದೀಪ್ ಕೋಟಿಗೊಬ್ಬ-3‌ ಚಿತ್ರದ ಟ್ರೈಲರ್ ಗುರುವಾರ ಬಿಡುಗಡೆ

Next Post

BUILDING COLLAPSE | ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ

Next Post

BUILDING COLLAPSE | ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ

ಸಾಂದರ್ಭಿಕ ಚಿತ್ರ

BW SPECIAL | BENGALURU RAIN | ಬೆಂಗಳೂರಿಗರೇ ATTENTION….!

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d