Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | BENGALURU RAIN | ಬೆಂಗಳೂರಿಗರೇ ATTENTION….!

ಅಕ್ಟೋಬರ್ ತಿಂಗಳ ಮೊದಲ 8 ದಿನದಲ್ಲಿ ಅತಿ ಭಾರೀ ಮಳೆಯಾಗಿದೆ !! | ಶೇ.104ರಷ್ಟು ಅತಿಹೆಚ್ಚು ಮಳೆಯು ಪಶ್ಚಿಮ ವಲಯದಲ್ಲಿ ಸುರಿದಿದೆ | 2021ರಲ್ಲಿ ಒಂದೇ ದಿನ ಅತಿಹೆಚ್ಚು ಮಳೆಯಾಗಿದ್ದು ನಾಗರಬಾವಿಯಲ್ಲಿ | ಮುಂದಿನ ಮೂರು- ನಾಲ್ಕು ದಿನ ಸಿಲಿಕಾನ್ ಸಿಟಿಯಲ್ಲಿ ಭಾರೀ ಮಳೆ ಸಾಧ್ಯತೆ |

by Bengaluru Wire Desk
October 8, 2021
in Bengaluru Focus, BW Special, Public interest
Reading Time: 2 mins read
1
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com)  : ರಾಜಧಾನಿ ಬೆಂಗಳೂರಿನಲ್ಲಿ ವಾರ್ಷಿಕ ಮಳೆಯ ಪ್ರಮಾಣದಲ್ಲಿ ಅತಿಹೆಚ್ಚು ಮಳೆಯಾಗುವ ತಿಂಗಳು ಸೆಪ್ಟೆಂಬರ್. ಆದರೆ ಈ ಬಾರಿ ಸೆಪ್ಟೆಂಬರ್ ಇಡೀ ತಿಂಗಳಲ್ಲಿ ಸಾಮಾನ್ಯ ಮಳೆ ವಾಡಿಕೆ ಸರಾಸರಿ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿತ್ತು. ಆದರೆ ಅಕ್ಟೋಬರ್ ತಿಂಗಳಲ್ಲಿ 1ನೇ ತಾರೀಖಿನಿಂದ 8ನೇ ತಾರೀಖಿನವರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 8 ವಲಯಗಳಲ್ಲಿ ಯಲಹಂಕ ಹೊರತುಪಡಿಸಿ ಉಳಿದ ಜೋನ್ ಗಳಲ್ಲಿ ಹೆಚ್ಚಿಗಿಂತ ಭಾರೀ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ ಎನ್ ಡಿಎಮ್ ಸಿ) ನೀಡಿರುವ ಮಾಹಿತಿಯಲ್ಲಿ ಈ ವಿಷಯ ಬಹಿರಂಗವಾಗಿದೆ. ಕಳೆದ ಎಂಟು ದಿನದಲ್ಲಿ ಬೆಂಗಳೂರು ಪಶ್ಚಿಮ ವಲಯದಲ್ಲಿ ಅಕ್ಟೋಬರ್ ನಲ್ಲಿ ಸಾಮಾನ್ಯವಾಗಿ 53 ಮಿಲಿ ಮೀಟರ್ ಮಳೆಯಾದರೆ ಈ ಅವಧಿಯಲ್ಲಿ 107 ಮಿ.ಮೀ ಮಳೆಯಾಗಿ ಶೇ.104ರಷ್ಟು ಅತಿಹೆಚ್ಚು ಮಳೆಯಾಗಿರುವುದು ದಾಖಲಾಗಿದೆ. ಯಾವ ಯಾವ ಬಿಬಿಎಂಪಿ ವಲಯದಲ್ಲಿ ಕಳೆದ 8 ದಿನದಲ್ಲಿ ಎಷ್ಟೆಷ್ಟು ಪ್ರಮಾಣದ ಮಳೆಯಾಗಿದೆ ಎಂಬುದನ್ನು ಈ ಕೆಳಕಂಡಂತೆ ನೀಡಲಾಗಿದೆ.

ಬಿಬಿಎಂಪಿ ವಲಯ  ವಾಡಿಕೆ ಮಳೆ (ಮಿ.ಮೀ ಗಳಲ್ಲಿ)ವಾಸ್ತವವಾಗಿ ಮಳೆಯಾದ ಪ್ರಮಾಣ% ಶೇಕಡವಾರು ಹೆಚ್ಚು ಮಳೆಯಾದ ಪ್ರಮಾಣಮಳೆಯಾದ ಪ್ರಮಾಣದ ವರ್ಗ
ಪಶ್ಚಿಮ53107104ಅತಿ ಹೆಚ್ಚು
ರಾಜರಾಜೇಶ್ವರಿ ನಗರ5811190ಅತಿ ಹೆಚ್ಚು
ಬೆಂಗಳೂರು ದಕ್ಷಿಣ589766ಅತಿ ಹೆಚ್ಚು
ದಾಸರಹಳ್ಳಿ538663ಅತಿ ಹೆಚ್ಚು
ಪೂರ್ವ577633ಹೆಚ್ಚು
ಮಹದೇವಪುರ607424ಹೆಚ್ಚು
ಬೊಮ್ಮನಹಳ್ಳಿ455727ಹೆಚ್ಚು
ಯಲಹಂಕ50526ಸಾಮಾನ್ಯ

ಕೇವಲ ಎಂಟು ದಿನಗಳಲ್ಲಿ ಸಿಲಿಕಾನ್ ಸಿಟಿಯಲ್ಲಿ ಸರಾಸರಿಯಾಗಿ 113.4 ಮಿ.ಮೀನಷ್ಟು ಮಳೆಯಾಗಿದೆ. ಈ ಅವಧಿಯಲ್ಲಿ ವರುಣನ ಆರ್ಭಟ ಹೆಚ್ಚಾದ ಕಾರಣ ಬೆಂಗಳೂರಿನ ತಗ್ಗು ಪ್ರದೇಶದಲ್ಲಿನ ಮನೆಗಳಿಗೆ ನೀರು ನುಗ್ಗುವ, ಹಲವು ರಸ್ತೆಗಳಲ್ಲಿ ನೀರು ನಿಂತು ಸರಾಗ ವಾಹನ ಸಂಚಾರಕ್ಕೆ ಸಾಕಷ್ಟು ತೊಂದರೆಯಾಗಿದೆ. ಕೆಲಸ ಮುಗಿಸಿ ಮನೆಗೆ ತೆರಳುವ ಸಾರ್ವಜನಿಕರಂತೂ ಸಾಕಷ್ಟು ಪರದಾಡಿರುವುದನ್ನು ಕಾಣಬಹುದಿತ್ತು.

ಬಿಬಿಎಂಪಿ 8 ವಲಯಗಳಲ್ಲಿ ಅತ್ಯಧಿಕ ಮಳೆಯಾದ ಬಗ್ಗೆ ಕೆಎ,ಸ್ಎನ್ ಡಿಎಂಸಿ ಕೇಂದ್ರದ ಅಧಿಕೃತ ಮಾಹಿತಿಯ ದಾಖಲೆ

ಅದೂ ಅಲ್ಲದೆ ಇದೇ ಅಕ್ಟೋಬರ್ 4ರ ಸೋಮವಾರದಂದು ನಾಗರಬಾವಿಯಲ್ಲಿ 117 ಮಿ.ಮೀನಷ್ಟು ಮಳೆಯಾಗಿದ್ದು, 2021ರ ವರ್ಷದಲ್ಲಿ ರಾಜಧಾನಿಯಲ್ಲಿ ಅತಿಹೆಚ್ಚು ಮಳೆ ಬಿದ್ದ ಸ್ಥಳವಾಗಿದೆ. ಸಾಮಾನ್ಯವಾಗಿ ಬೆಂಗಳೂರಿನ ವಾರ್ಷಿಕ ಸರಾಸರಿ ಮಳೆಯ ಪ್ರಮಾಣ 986 ಮಿ.ಮೀ ಆಗಿದೆ. ಸೆಪ್ಟೆಂಬರ್ ತಿಂಗಳು ಅತಿಹೆಚ್ಚು ಒದ್ದೆಯ ತಿಂಗಳು (ಸರಾಸರಿ 211.5 ಮಿ.ಮೀ) ಅಂದರೆ ಮಳೆಯಾಗುವ ಅವಧಿಯಾದರೆ, ಜನವರಿ ತಿಂಗಳು ಶುಷ್ಕ ವಾತಾವರಣವಿರುವ ಕಾಲ (ಸರಾಸರಿ 2.00 ಮಿ.ಮೀ) ಎಂದು ಹವಾಮಾನ ಇಲಾಖೆ ಪರಿಗಣಿಸಿದೆ. ಈ ವರ್ಷದ ಸೆಪ್ಟೆಂಬರ್ ನಲ್ಲಿ ಯಲಹಂಕ ಹೊರತುಪಡಿಸಿದರೆ ಉಳಿದ ಬಿಬಿಎಂಪಿಯ ಏಳು ವಲಯ ವ್ಯಾಪ್ತಿಯಲ್ಲಿ 211.5 ಮಿ.ಮೀನಷ್ಟು ವಾಡಿಕೆ ಮಳೆಗಿಂತ ಅತಿ ಕಡಿಮೆ ಮಳೆಯಾಗಿರುವುದನ್ನು ಕೆಎಸ್ ಎನ್ ಡಿಎಮ್ ಸಿ ಖಚಿತಪಡಿಸಿದೆ.

ಮುಂದಿನ ಮೂರ್ನಾಲ್ಕು ದಿನದಲ್ಲಿ ಬೆಂಗಳೂರಿನಲ್ಲಿ ಭಾರೀ ಮಳೆ ಸಾಧ್ಯತೆ :

“ಇತ್ತೀಚೆಗೆ ತಮಿಳುನಾಡಿನ ಕರಾವಳಿ ಪ್ರದೇಶದ ಬಳಿ ಬಂಗಾಳಕೊಲ್ಲಿ ಸಮುದ್ರದ ಆಗ್ನೇಯ ಭಾಗದಲ್ಲಿ ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಕರ್ನಾಟಕದಲ್ಲಿ ಉತ್ತಮ ಮಳೆಯಾಗಿದ್ದು, ಅದರ ಪರಿಣಾಮದಿಂದಾಗಿ ಬೆಂಗಳೂರಿನಲ್ಲೂ ಉತ್ತಮ ಮಳೆಯಾಗಿದೆ. ಮುಂದಿನ 3- 4 ದಿನದಲ್ಲಿ ಬೆಂಗಳೂರಿನಲ್ಲಿ ಸಾಮಾನ್ಯದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲೂ ಅಕ್ಟೋಬರ್ 10 ಹಾಗೂ 12ನೇ ತಾರೀಖು ನಗರದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.”

– ಗೀತಾ ಅಗ್ನಿಹೋತ್ರಿ, ಉಸ್ತುವಾರಿ ನಿರ್ದೇಶಕಿ, ಬೆಂಗಳೂರು ಹವಾಮಾನ ಇಲಾಖೆ

ಒಂಭತ್ತು ವರ್ಷಗಳಲ್ಲಿ (2013 ರಿಂದ 2021 ಅ.8ರ ತನಕ) ವಾರ್ಷಿಕವಾಗಿ ಅತಿಹೆಚ್ಚು ಮಳೆಯಾದ ಸ್ಥಳದ ವಿವರಗಳು ಈ ಕೆಳಕಂಡಂತಿದೆ :

ವರ್ಷಮಳೆಯಾದ ದಿನ& ತಿಂಗಳುಅತಿ ಹೆಚ್ಚು ಮಳೆ (ಮಿ.ಮೀಗಳಲ್ಲಿ)ಸ್ಥಳ
201325ನೇ ನವೆಂಬರ್147ಸಂಪಂಗಿರಾಮನಗರ
20149ನೇ ಅಕ್ಟೋಬರ್141ಹಂಪಿನಗರ
201517ನೇ ಆಗಸ್ಟ್198ಬೇಗೂರು
20162ನೇ ಜೂನ್111ಬೆಳ್ಳಂದೂರು
201715ನೇ ಆಗಸ್ಟ್182ಬಿಟಿಎಮ್ ಲೇಔಟ್
201824ನೇ ಸೆಪ್ಟೆಂಬರ್206ಹೆಮ್ಮಿಗೆಪುರ
20198ನೇ ಮೇ186ದೊಡ್ಡಬಿದರಕಲ್ಲು
202026ನೇ ಜೂನ್186ಕೆಂಗೇರಿ
20214ನೇ ಅಕ್ಟೋಬರ್117ನಾಗರಬಾವಿ

ಕಳೆದ 9 ವರ್ಷದಲ್ಲಿ ಒಂದೇ ದಿನ ಅತಿಹೆಚ್ಚು ಮಳೆಯಾದ ಸ್ಥಳ ಹೆಮ್ಮಿಗೆಪುರ :

ಬೆಂಗಳೂರಿನಲ್ಲಿ 2013ರಿಂದ 2021ರ ಒಂಭತ್ತು ವರ್ಷಗಳಲ್ಲಿ ಆಯಾ ವರ್ಷದಲ್ಲಿ ಅತಿಹೆಚ್ಚು ಮಳೆ ಬಿದ್ದ ಸ್ಥಳವನ್ನು ಗಮನಿಸುವುದಾದರೆ 2018ರಲ್ಲಿ ರಾಜರಾಜೇಶ್ವರಿನಗರ ವಲಯದ ಹೆಮ್ಮಿಗೆಪುರದಲ್ಲಿ 24ನೇ ಸೆಪ್ಟೆಂಬರ್ ರಂದು ಬರೋಬ್ಬರಿ 206 ಮಿ.ಮೀ ಮಳೆಯಾಗಿದ್ದು ಆ ವರ್ಷದಲ್ಲಿ ಅತಿಹೆಚ್ಚು ಮಳೆ ಬಿದ್ದ ದಿನವಾಗಿದೆ. ಅಲ್ಲದೆ ಒಂಭತ್ತು ವರ್ಷದಲ್ಲೇ ಅತಿಹೆಚ್ಚು ಮಳೆ ಬಿದ್ದ ದಿನ ಹಾಗೂ ಸ್ಥಳವಾಗಿದೆ. ಇನ್ನು ಹಂಪಿನಗರದಲ್ಲಿ ಈ 9 ವರ್ಷಗಳಲ್ಲಿ ಆಯಾ ವರ್ಷದಲ್ಲಿ ಅತಿಹೆಚ್ಚು ಮಳೆಯಾದ ಪ್ರಮಾಣದಲ್ಲಿ ಒಂದೇ ದಿನ ಅತಿ ಕಡಿಮೆ ಮಳೆಯಾಗಿದ್ದು 2014ರ ಅಕ್ಟೋಬರ್ 9ರಂದು ಎಂದು ಕೆಎಸ್ ಎನ್ ಡಿಎಮ್ ಸಿಯ ವರದಿಯಲ್ಲಿ ತಿಳಿಸಿದೆ.

ಈ ವರ್ಷದಲ್ಲೇ ಒಂದು ದಿನದಲ್ಲಿ ಅತಿಹೆಚ್ಚು ಮಳೆ ಸುರಿದಿದ್ದು 4ನೇ ಅಕ್ಟೋಬರ್ ರಂದು ನಾಗರಬಾವಿ (117 ಮಿ.ಮೀ)ಯಲ್ಲಿ ಎಂದು ವರದಿಯಲ್ಲಿ ಹೇಳಲಾಗಿದೆ. ಒಟ್ಟಾರೆ ಇನ್ನು ಮೂರ್ನಾಲ್ಕು ನಗರದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಂಗಳೂರಿನ ನಾಗರೀಕರು ಈ ಬಗ್ಗೆ ಜಾಗೃತೆವಹಿಸಬೇಕು ಎಂದು ಇಲಾಖೆಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BUILDING COLLAPSE | ಬೆಂಗಳೂರಿನಲ್ಲಿ ಮತ್ತೊಂದು ಬಹುಮಹಡಿ ಕಟ್ಟಡ ಕುಸಿತ

Next Post

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರು ಪರಿಹಾರ ಪಡೆಯಲು ಹೀಗೆ ಮಾಡಿ

Manual Scavengers | ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಮಲ ಹೊರುವ ಪದ್ಧತಿ ಜೀವಂತ....!?

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d