Thursday, August 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಪಕ್ಷ ರಾಜಕಾರಣದ ಹಸ್ತಕ್ಷೇಪ ಸಲ್ಲದು ; ಹಿರಿಯ ಸಾಹಿತಿಗಳ ಆಕ್ಷೇಪ

by Bengaluru Wire Desk
October 23, 2021
in Bengaluru Focus, News Wire
Reading Time: 1 min read
4
ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಕನ್ನಡಿಗರ ಸಾಕ್ಷಿ ಪ್ರಜ್ಞೆಯಂತಿರುವ ಕನ್ನಡ ಸಾಹಿತ್ಯ ಪರಿಷತ್ತಿ(ಕಸಾಪ)ನ ಮುಂಬರುವ ಅಧ್ಯಕ್ಷೀಯ ಚುನಾವಣೆ ಹಿನ್ನಲೆಯಲ್ಲಿ ಕಸಾಪವನ್ನು ರಾಜಕೀಕರಣ ಮಾಡುವುದರ ವಿರುದ್ಧ ಕನ್ನಡದ ಹಿರಿಯ ಸಾಹಿತಿಗಳಾದ ಡಾ.ಕೆ.ಮರುಳುಸಿದ್ಧಪ್ಪ,
ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಡಾ.ಬಂಜೆಗೆರೆ ಜಯಪ್ರಕಾಶ್
ಡಾ.ಮಲ್ಲಿಕಾ ಘಂಟಿ ಹಾಗೂ ರುದ್ರಪ್ಪ ಹನಗವಾಡಿ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಆ ಪತ್ರ ಈ ಕೆಳಗಿನಂತಿದೆ :

ಮಾನ್ಯರೇ ನಮಸ್ಕಾರಗಳು….

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸಾಂಸ್ಕೃತಿಕ ಸಾಕ್ಷಿಪ್ರಜ್ಞೆಯಂತಿರಬೇಕಾದ ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆ. ಇದನ್ನು ಪ್ರಾರಂಭಿಸಿದ  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಶಯ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪೋಷಿಸುವ ಹಾಗೂ ಜನತೆಯ ನಡುವೆ ಅವುಗಳನ್ನು ಬೇರೂರಿಸುವ ಉದ್ದೇಶದಿಂದ ಕೂಡಿತ್ತು. ಅದು ರಾಜಾಶ್ರಯದಲ್ಲಿ ಪ್ರಾರಂಭವಾದ ಪರಿಷತ್ತಾದರೂ ಎಂದೂ ರಾಜರ ರಾಜಮನೆತನದವರ ಪರಾಕುಪಂಪಿನ ವೇದಿಕೆಯಾಗಿ ಇರಲಿಲ್ಲ.

ಅದಕ್ಕಿಂತ ಸಾಹಿತ್ಯ, ಸಂಗೀತ, ರಂಗಭೂಮಿ ಇಂಥ ಸಾಹಿತ್ಯಿಕ ಮನಸ್ಸುಗಳ ಜನಮುಖಿ ವೇದಿಕೆಯಾಗಿ ರೂಪುಗೊಂಡಿದ್ದು, ಅದಕ್ಕನುಗುಣವಾಗುವಂತೆ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಂಡು ಬಂದಿದೆ. ಅಲ್ಲಲ್ಲಿ ಸಾಹಿತ್ಯೇತರ ವ್ಯಕ್ತಿಗಳು ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೂ, ಅವರೆಂದೂ ಸಾಹಿತ್ಯ ಪರಿಷತ್ತಿನ ಮೂಲ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಅವರೂ ಸಾಹಿತಿಗಳ, ಸಂಸ್ಕೃತಿ ಚಿಂತಕರ ಸಹಕಾರ ಸಲಹೆ, ಸೂಚನೆಗಳ ಅನ್ವಯದಲ್ಲಿ ಪರಿಷತ್ತನ್ನು ಸರಿದಾರಿಯಲ್ಲಿ ನಡೆಸಿಕೊಂಡು ಬಂದಿದ್ದಾರೆ.

ಇದುವರೆಗಿನ ಅಧ್ಯಕ್ಷರ ಚುನಾವಣೆಗಳಲ್ಲಿ ಯಾವ ರಾಜಕೀಯ ಪಕ್ಷಗಳು ನೇರವಾಗಿಯಾಗಲಿ ಅಥವಾ ಪರೋಕ್ಷವಾಗಿಯಾಗಲಿ ಭಾಗವಹಿಸಿದಂತೆ ಪರಿಷತ್ತಿನ ರಾಜಕಾರಣಕ್ಕೆ ಪಕ್ಷ ರಾಜಕಾರಣದ ಪ್ರವೇಶವಾಗುವಂತೆ ನಡೆದುಕೊಂಡಿರಲಿಲ್ಲ. ಎಲ್ಲ ಪಕ್ಷಗಳೂ ಪರಿಷತ್ತಿನ ಸಾಂಸ್ಕೃತಿಕ ವಾತಾವರಣಕ್ಕೆ ರಾಜಕೀಯ ಸುಳಿಯದಂತೆ ಎಚ್ಚರವಹಿಸಿದ್ದವು. ಆರೋಗ್ಯಕರ ವಾತಾವರಣ ಉಳಿಯುವಂತೆ ನೋಡಿಕೊಂಡಿದ್ದವು. ಆದರೆ ಈ ಬಾರಿಯ ಚುನಾವಣೆಗೆ ಬಿಜೆಪಿ ಶಾಸಕರು, ಆರ್.ಎಸ್.ಎಸ್ ನ ಪ್ರಮುಖರು ನೇರವಾಗಿ ವ್ಯಕ್ತಿಯೊಬ್ಬರಿಗೆ ಪಕ್ಷದ ಬೆಂಬಲ ಘೋಷಿಸಿರುವುದು ಅಪಾಯಕಾರಿಯಾದ ಅನಾರೋಗ್ಯಕರ ಬೆಳವಣಿಗೆಯಾಗಿದೆ.

ಏಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವ್ಯಕ್ತಿ ವೈಯಕ್ತಿಕವಾಗಿ ಯಾವುದೇ ರಾಜಕೀಯ ಸಿದ್ಧಾಂತದ ಜೊತೆಗೆ ಗುರುತಿಸಿಕೊಳ್ಳುವುದು ಅವರ ಹಕ್ಕು. ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ಅಭಿಪ್ರಾಯ ಭೇದಗಳ ನಡುವೆಯೂ ಅವರ ನಿಲುವನ್ನು ಪ್ರಜಾಸತ್ತೆಯ ಅಭಿವ್ಯಕ್ತಿ ಸ್ವಾತಂತ್ರ್ಯದ  ಹಿನ್ನೆಲೆಯಲ್ಲಿ ಒಂದು ಧನಾತ್ಮಕ ನಡೆಯಾಗಿ ಗೌರವಿಸಬೇಕಾದುದು ಅವಶ್ಯ. ಯಾವುದೇ ಸ್ವಾಯತ್ತ ಸಂಸ್ಥೆಯಲ್ಲಿ ಅವರ ಭಾಗವಹಿಸುವಿಕೆಯನ್ನೂ ಯಾರೂ ಪ್ರಶ್ನಿಸಲಾಗದು. ಆದರೆ ಸ್ವಾಯತ್ತ ಸಂಸ್ಥೆಯನ್ನು ರಾಜಕೀಯ ಪಕ್ಷಕ್ಕೆ ಅಡವಿಟ್ಟಂತೆ ರಾಜಕಾರಣ ನಡೆಸುವುದು ಖಂಡನಿಯ ನಡವಳಿಕೆಯಾಗಿರುತ್ತದೆ.

ಪಕ್ಷಗಳೂ ಕೂಡ ಈ ಬಗ್ಗೆ ಆರೋಗ್ಯಕರ ನಿಲುವು ತಾಳಿದಂತೆ ಅಂತರ ಕಾಯ್ದುಕೊಳ್ಳಬೇಕಾದ ಹೊಣೆಗಾರಿಕೆಯನ್ನು ತೋರುವ ಅವಶ್ಯಕತೆ ಇದೆ. ಆದರೆ ಗಂಗಾವತಿಯ  ಶಾಸಕರಾದ ಪರಣ್ಣ ಮುನವಳ್ಳಿಯವರ ಹೇಳಿಕೆ ಹಾಗೂ ಆರ್.ಎಸ್.ಎಸ್.ನ ಕೆಲವು ಮುಖಂಡರ ಆಕ್ರಮಣಕಾರಿ ವರ್ತನೆ ಈ ಎರಡೂ, ಪರಿಷತ್ತಿನ ಪ್ರಜಾಸತ್ತಾತ್ಮಕ ಸ್ವಾಯತ್ತತೆಗೆ ಧಕ್ಕೆ ತರುವ ವರ್ತನೆಗಳಾಗಿವೆ.

ಆದ್ದರಿಂದ ಅವುರುಗಳು ತಮ್ಮ ನಿಲುವುಗಳಿಗೆ ವಿಷಾದ ಸೂಚಿಸಿ ಅವರ ಅಭಿಪ್ರಾಯವನ್ನು ಬದಲಿಸಿಕೊಳ್ಳಿಲಿ. ಹಾಗೆಯೇ ಮಹೇಶ್ ಜೋಷಿಯವರು ಈ ಬಗ್ಗೆ ಹೊಣೆಯರಿತು ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆಗೆ ಧಕ್ಕೆ ಬಾರದಂತೆ ಜವಾಬ್ದಾರಿ ಮೆರೆಯಲಿ ಎಂದು ಈ ಮೂಲಕ ಒತ್ತಾಯಿಸುತ್ತೇವೆ.

ಧನ್ಯವಾದಗಳೊಂದಿಗೆ

ಇಂತಿ ತಮ್ಮ ವಿಶ್ವಾಸಿಗಳು

ಡಾ.ಕೆ. ಮರುಳಸಿದ್ಧಪ್ಪ
ಪ್ರೊ.ಎಸ್.ಜಿ. ಸಿದ್ಧರಾಮಯ್ಯ
ಡಾ.ಬಂಜೆಗೆರೆ ಜಯಪ್ರಕಾಶ್
ಡಾ.ಮಲ್ಲಿಕಾ ಘಂಟಿ
ರುದ್ರಪ್ಪ ಹನಗವಾಡಿ

WhatsApp Join our WhatsApp Channel
Previous Post

KAS EXAM 2020 | ಕೆಎಎಸ್ ಮುಖ್ಯ ಪರೀಕ್ಷೆ ಆಯ್ತು – ಗಜ ಗರ್ಭದ ಫಲಿತಾಂಶದ ಪ್ರಸವ ಯಾವಾಗ?

Next Post

BY ELECTION 2021 | ಸಿಂದಗಿ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧ : ಸಿಎಂ ಬೊಮ್ಮಾಯಿ

Next Post

BY ELECTION 2021 | ಸಿಂದಗಿ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧ : ಸಿಎಂ ಬೊಮ್ಮಾಯಿ

'ಕನ್ನಡಕ್ಕಾಗಿ ನಾವು' ಅಭಿಯಾನಕ್ಕೆ ಚಾಲನೆ ನೀಡಿದ ರಾಜ್ಯಪಾಲರು

Please login to join discussion

Like Us on Facebook

Follow Us on Twitter

Recent News

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

August 5, 2026

ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

August 5, 2026
ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

August 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group