Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗೆ ಪಕ್ಷ ರಾಜಕಾರಣದ ಹಸ್ತಕ್ಷೇಪ ಸಲ್ಲದು ; ಹಿರಿಯ ಸಾಹಿತಿಗಳ ಆಕ್ಷೇಪ

by Bengaluru Wire Desk
October 23, 2021
in Bengaluru Focus, News Wire
Reading Time: 1 min read
4
ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಕನ್ನಡಿಗರ ಸಾಕ್ಷಿ ಪ್ರಜ್ಞೆಯಂತಿರುವ ಕನ್ನಡ ಸಾಹಿತ್ಯ ಪರಿಷತ್ತಿ(ಕಸಾಪ)ನ ಮುಂಬರುವ ಅಧ್ಯಕ್ಷೀಯ ಚುನಾವಣೆ ಹಿನ್ನಲೆಯಲ್ಲಿ ಕಸಾಪವನ್ನು ರಾಜಕೀಕರಣ ಮಾಡುವುದರ ವಿರುದ್ಧ ಕನ್ನಡದ ಹಿರಿಯ ಸಾಹಿತಿಗಳಾದ ಡಾ.ಕೆ.ಮರುಳುಸಿದ್ಧಪ್ಪ,
ಪ್ರೊ.ಎಸ್.ಜಿ. ಸಿದ್ಧರಾಮಯ್ಯ, ಡಾ.ಬಂಜೆಗೆರೆ ಜಯಪ್ರಕಾಶ್
ಡಾ.ಮಲ್ಲಿಕಾ ಘಂಟಿ ಹಾಗೂ ರುದ್ರಪ್ಪ ಹನಗವಾಡಿ ಅವರು ಬಹಿರಂಗ ಪತ್ರ ಬರೆದಿದ್ದಾರೆ.

ಆ ಪತ್ರ ಈ ಕೆಳಗಿನಂತಿದೆ :

ಮಾನ್ಯರೇ ನಮಸ್ಕಾರಗಳು….

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಸಾಂಸ್ಕೃತಿಕ ಸಾಕ್ಷಿಪ್ರಜ್ಞೆಯಂತಿರಬೇಕಾದ ಒಂದು ಸ್ವಾಯತ್ತ ಸಾಂಸ್ಕೃತಿಕ ಸಂಸ್ಥೆ. ಇದನ್ನು ಪ್ರಾರಂಭಿಸಿದ  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಶಯ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪೋಷಿಸುವ ಹಾಗೂ ಜನತೆಯ ನಡುವೆ ಅವುಗಳನ್ನು ಬೇರೂರಿಸುವ ಉದ್ದೇಶದಿಂದ ಕೂಡಿತ್ತು. ಅದು ರಾಜಾಶ್ರಯದಲ್ಲಿ ಪ್ರಾರಂಭವಾದ ಪರಿಷತ್ತಾದರೂ ಎಂದೂ ರಾಜರ ರಾಜಮನೆತನದವರ ಪರಾಕುಪಂಪಿನ ವೇದಿಕೆಯಾಗಿ ಇರಲಿಲ್ಲ.

ಅದಕ್ಕಿಂತ ಸಾಹಿತ್ಯ, ಸಂಗೀತ, ರಂಗಭೂಮಿ ಇಂಥ ಸಾಹಿತ್ಯಿಕ ಮನಸ್ಸುಗಳ ಜನಮುಖಿ ವೇದಿಕೆಯಾಗಿ ರೂಪುಗೊಂಡಿದ್ದು, ಅದಕ್ಕನುಗುಣವಾಗುವಂತೆ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಂಡು ಬಂದಿದೆ. ಅಲ್ಲಲ್ಲಿ ಸಾಹಿತ್ಯೇತರ ವ್ಯಕ್ತಿಗಳು ಪರಿಷತ್ತಿನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರೂ, ಅವರೆಂದೂ ಸಾಹಿತ್ಯ ಪರಿಷತ್ತಿನ ಮೂಲ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿಲ್ಲ. ಅವರೂ ಸಾಹಿತಿಗಳ, ಸಂಸ್ಕೃತಿ ಚಿಂತಕರ ಸಹಕಾರ ಸಲಹೆ, ಸೂಚನೆಗಳ ಅನ್ವಯದಲ್ಲಿ ಪರಿಷತ್ತನ್ನು ಸರಿದಾರಿಯಲ್ಲಿ ನಡೆಸಿಕೊಂಡು ಬಂದಿದ್ದಾರೆ.

ಇದುವರೆಗಿನ ಅಧ್ಯಕ್ಷರ ಚುನಾವಣೆಗಳಲ್ಲಿ ಯಾವ ರಾಜಕೀಯ ಪಕ್ಷಗಳು ನೇರವಾಗಿಯಾಗಲಿ ಅಥವಾ ಪರೋಕ್ಷವಾಗಿಯಾಗಲಿ ಭಾಗವಹಿಸಿದಂತೆ ಪರಿಷತ್ತಿನ ರಾಜಕಾರಣಕ್ಕೆ ಪಕ್ಷ ರಾಜಕಾರಣದ ಪ್ರವೇಶವಾಗುವಂತೆ ನಡೆದುಕೊಂಡಿರಲಿಲ್ಲ. ಎಲ್ಲ ಪಕ್ಷಗಳೂ ಪರಿಷತ್ತಿನ ಸಾಂಸ್ಕೃತಿಕ ವಾತಾವರಣಕ್ಕೆ ರಾಜಕೀಯ ಸುಳಿಯದಂತೆ ಎಚ್ಚರವಹಿಸಿದ್ದವು. ಆರೋಗ್ಯಕರ ವಾತಾವರಣ ಉಳಿಯುವಂತೆ ನೋಡಿಕೊಂಡಿದ್ದವು. ಆದರೆ ಈ ಬಾರಿಯ ಚುನಾವಣೆಗೆ ಬಿಜೆಪಿ ಶಾಸಕರು, ಆರ್.ಎಸ್.ಎಸ್ ನ ಪ್ರಮುಖರು ನೇರವಾಗಿ ವ್ಯಕ್ತಿಯೊಬ್ಬರಿಗೆ ಪಕ್ಷದ ಬೆಂಬಲ ಘೋಷಿಸಿರುವುದು ಅಪಾಯಕಾರಿಯಾದ ಅನಾರೋಗ್ಯಕರ ಬೆಳವಣಿಗೆಯಾಗಿದೆ.

ಏಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವ್ಯಕ್ತಿ ವೈಯಕ್ತಿಕವಾಗಿ ಯಾವುದೇ ರಾಜಕೀಯ ಸಿದ್ಧಾಂತದ ಜೊತೆಗೆ ಗುರುತಿಸಿಕೊಳ್ಳುವುದು ಅವರ ಹಕ್ಕು. ಅದನ್ನು ಯಾರೂ ಪ್ರಶ್ನಿಸುವಂತಿಲ್ಲ. ಅಭಿಪ್ರಾಯ ಭೇದಗಳ ನಡುವೆಯೂ ಅವರ ನಿಲುವನ್ನು ಪ್ರಜಾಸತ್ತೆಯ ಅಭಿವ್ಯಕ್ತಿ ಸ್ವಾತಂತ್ರ್ಯದ  ಹಿನ್ನೆಲೆಯಲ್ಲಿ ಒಂದು ಧನಾತ್ಮಕ ನಡೆಯಾಗಿ ಗೌರವಿಸಬೇಕಾದುದು ಅವಶ್ಯ. ಯಾವುದೇ ಸ್ವಾಯತ್ತ ಸಂಸ್ಥೆಯಲ್ಲಿ ಅವರ ಭಾಗವಹಿಸುವಿಕೆಯನ್ನೂ ಯಾರೂ ಪ್ರಶ್ನಿಸಲಾಗದು. ಆದರೆ ಸ್ವಾಯತ್ತ ಸಂಸ್ಥೆಯನ್ನು ರಾಜಕೀಯ ಪಕ್ಷಕ್ಕೆ ಅಡವಿಟ್ಟಂತೆ ರಾಜಕಾರಣ ನಡೆಸುವುದು ಖಂಡನಿಯ ನಡವಳಿಕೆಯಾಗಿರುತ್ತದೆ.

ಪಕ್ಷಗಳೂ ಕೂಡ ಈ ಬಗ್ಗೆ ಆರೋಗ್ಯಕರ ನಿಲುವು ತಾಳಿದಂತೆ ಅಂತರ ಕಾಯ್ದುಕೊಳ್ಳಬೇಕಾದ ಹೊಣೆಗಾರಿಕೆಯನ್ನು ತೋರುವ ಅವಶ್ಯಕತೆ ಇದೆ. ಆದರೆ ಗಂಗಾವತಿಯ  ಶಾಸಕರಾದ ಪರಣ್ಣ ಮುನವಳ್ಳಿಯವರ ಹೇಳಿಕೆ ಹಾಗೂ ಆರ್.ಎಸ್.ಎಸ್.ನ ಕೆಲವು ಮುಖಂಡರ ಆಕ್ರಮಣಕಾರಿ ವರ್ತನೆ ಈ ಎರಡೂ, ಪರಿಷತ್ತಿನ ಪ್ರಜಾಸತ್ತಾತ್ಮಕ ಸ್ವಾಯತ್ತತೆಗೆ ಧಕ್ಕೆ ತರುವ ವರ್ತನೆಗಳಾಗಿವೆ.

ಆದ್ದರಿಂದ ಅವುರುಗಳು ತಮ್ಮ ನಿಲುವುಗಳಿಗೆ ವಿಷಾದ ಸೂಚಿಸಿ ಅವರ ಅಭಿಪ್ರಾಯವನ್ನು ಬದಲಿಸಿಕೊಳ್ಳಿಲಿ. ಹಾಗೆಯೇ ಮಹೇಶ್ ಜೋಷಿಯವರು ಈ ಬಗ್ಗೆ ಹೊಣೆಯರಿತು ಕನ್ನಡ ಸಾಹಿತ್ಯ ಪರಿಷತ್ತಿನ ಸ್ವಾಯತ್ತತೆಗೆ ಧಕ್ಕೆ ಬಾರದಂತೆ ಜವಾಬ್ದಾರಿ ಮೆರೆಯಲಿ ಎಂದು ಈ ಮೂಲಕ ಒತ್ತಾಯಿಸುತ್ತೇವೆ.

ಧನ್ಯವಾದಗಳೊಂದಿಗೆ

ಇಂತಿ ತಮ್ಮ ವಿಶ್ವಾಸಿಗಳು

ಡಾ.ಕೆ. ಮರುಳಸಿದ್ಧಪ್ಪ
ಪ್ರೊ.ಎಸ್.ಜಿ. ಸಿದ್ಧರಾಮಯ್ಯ
ಡಾ.ಬಂಜೆಗೆರೆ ಜಯಪ್ರಕಾಶ್
ಡಾ.ಮಲ್ಲಿಕಾ ಘಂಟಿ
ರುದ್ರಪ್ಪ ಹನಗವಾಡಿ

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KAS EXAM 2020 | ಕೆಎಎಸ್ ಮುಖ್ಯ ಪರೀಕ್ಷೆ ಆಯ್ತು – ಗಜ ಗರ್ಭದ ಫಲಿತಾಂಶದ ಪ್ರಸವ ಯಾವಾಗ?

Next Post

BY ELECTION 2021 | ಸಿಂದಗಿ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧ : ಸಿಎಂ ಬೊಮ್ಮಾಯಿ

Next Post

BY ELECTION 2021 | ಸಿಂದಗಿ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಂಕಣ ಬದ್ಧ : ಸಿಎಂ ಬೊಮ್ಮಾಯಿ

'ಕನ್ನಡಕ್ಕಾಗಿ ನಾವು' ಅಭಿಯಾನಕ್ಕೆ ಚಾಲನೆ ನೀಡಿದ ರಾಜ್ಯಪಾಲರು

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d