Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus
    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus
    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Puneeth Funeral | ಪ್ರಕೃತಿಯಲ್ಲಿ ಲೀನರಾದ ಪುನೀತ್ ರಾಜಕುಮಾರ್

ಹೋಗಿ ಬನ್ನಿ ಅಪ್ಪು | ನಿಮ್ಮ ಅಭಿನಯ, ವ್ಯಕ್ತಿತ್ವ ಲಕ್ಷಾಂತರ ಕನ್ನಡಿಗರಲ್ಲಿ ಬೆಚ್ಚಗೆ - ಹಚ್ಚ ಹಸಿರಾಗಿ ಚಿರಂತನವಾಗಿ ನೆಲಸಿದೆ

by Bengaluru Wire Desk
October 31, 2021
in News Wire, Public interest
Reading Time: 2 mins read
0

ಬೆಂಗಳೂರು, ಅ.31 (www.bengaluruwire.com) : ಅಭಿಮಾನಿಗಳ ಅಪ್ಪು ಹಾಗೂ ವರ ನಟ ಡಾ.ರಾಜ್ ಕುಮಾರ್ ಅವರ ಕಿರಿಯ ಪುತ್ರ ಸುಪ್ರಸಿದ್ಧ ನಟ ಪುನೀತ್ ರಾಜಕುಮಾರ್ ತಮ್ಮ ತಂದೆ- ತಾಯಿ ಪಕ್ಕದಲ್ಲೇ ಚಿರನಿದ್ರೆಗೆ ಜಾರಿದ್ದಾರೆ.

ಅವರ ಪಾರ್ಥಿವ ಶರೀರಕ್ಕೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಗರದ ಶ್ರೀ ಕಂಠೀರವ ಸ್ಟುಡಿಯೋಸ್ ಆವರಣದಲ್ಲಿರುವ ಡಾ .ರಾಜ್ ಕುಮಾರ್ ಅವರ ಸಮಾಧಿಯ ಸಮೀಪವೇ ಭಾನುವಾರ ಬೆಳಿಗ್ಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.

ಭದ್ರತಾ ಕಾರಣಗಳ ಹಿನ್ನೆಲೆಯಲ್ಲಿ ಕುಟುಂಬಸ್ಥರ ಸಹಮತಿ ಪಡೆದು ಪ್ರಕಟಿಸಿದ ಸಮಯಕ್ಕೆ ಮೊದಲೇ, ಶುಕ್ರವಾರ ಹಠಾತ್ ನಿಧನರಾದ ಈ ಯುವ ನಟನ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಚಿಕ್ಕಪ್ಪನ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಮೊದಲು ಗಣ್ಯಾತಿ ಗಣ್ಯರು ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರದ ಮೇಲೆ ಪುಷ್ಪ ಗುಚ್ಛ ಅರ್ಪಿಸಿದ ನಂತರ ಪೊಲೀಸ್ ವಾದ್ಯಗೋಷ್ಠಿಯಿಂದ ರಾಷ್ಟ್ರ ಗೀತೆ ಮೊಳಗಿತು.

ಸಕಲ ಸರ್ಕಾರಿ ಗೌರವ ನೆರವೇರಿದ ಕ್ಷಣ

ಅಲ್ಲದೆ, ಅದೇ ಸಂದರ್ಭದಲ್ಲಿ ಪೊಲೀಸರು ಮೂರು ಬಾರಿ ಕುಶಾಲ ತೋಪು ಸಿಡಿಸಿದರು. ತದ ನಂತರ, ಎರಡು ನಿಮಿಷಗಳ ಮೌನ ಆಚರಿಸಲಾಯಿತು.

ಪುನೀತ್ ಪತ್ನಿ ಅಶ್ವಿನಿಗೆ ಸಿಎಂ ಬೊಮ್ಮಾಯಿ ರಾಷ್ಟ್ರಧ್ವಜ ಹಸ್ತಾಂತರಿಸಿದರು.

ಇದಾದ ಕೂಡಲೇ, ಪುನೀತ್ ರಾಜಕುಮಾರ್ ಅವರ ದೇಹದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ಹಸ್ತಾಂತರಿಸಿದರು.

ಪೊಲೀಸರು ಮೊಳಗಿಸಿದ ಶೋಕ ಗೀತೆ ಹಾಗೂ ರಾಷ್ಟ್ರ ಗೀತೆಯ ನಂತರ ಅಗಲಿದ ನಟನಿಗೆ ಸರ್ಕಾರದ ಗೌರವ ಸಮರ್ಪಣಾ ಕಾರ್ಯಕ್ರಮ ಪೂರ್ಣಗೊಂಡಿತು.

ಕೊನೆಯ ಬಾರಿಗೆ ಯುವರತ್ನನ ಹಣೆಗೆ ಭಾರವಾದ ಮನಸ್ಸುಗಳಿಂದ ಮುತ್ತಿಟ್ಟ ಸಿಎಂ ಬಸವರಾಜ ಬೊಮ್ಮಾಯಿ

ನಂತರದಲ್ಲಿ ನಡೆದ ಕೌಟುಂಬಿಕ ಕಾರ್ಯಕ್ರಮದಲ್ಲಿ ಪುಷ್ಪಾಲಂಕೃತ ಹಂಸತೋಲಿಕಾ ಪಲ್ಲಕ್ಕಿಯಲ್ಲಿ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರವನ್ನು ಇರಿಸಿ ಮೂರು ಬಾರಿ ಪ್ರದಕ್ಷಿಣೆ ಮಾಡಿಸಿ, ಗುಂಡಿಯೊಳಗೆ ಶವವನ್ನು ಇಳಿಸಲಾಯಿತು.

ಗಣ್ಯರಿಂದ ಪುನೀತ್ ಮೃತದೇಹದ ಮೇಲೆ ಉಪ್ಪು ಮತ್ತು ಮಣ್ಣು ಸಮರ್ಪಿಸಿದರು

ರಾಘವೇಂದ್ರ ರಾಜಕುಮಾರ್ ಅವರ ಪುತ್ರ ಹಾಗೂ ಕುಟುಂಬಸ್ಥರ ಜೊತೆಯಲ್ಲಿ ಗಣ್ಯರೂ ಕೂಡಾ ಪುನೀತ್ ರಾಜಕುಮಾರ್ ಅವರ ದೇಹದ ಮೇಲೆ ಉಪ್ಪು ಮತ್ತು ಮಣ್ಣು ಸಮರ್ಪಿಸುವುದರೊಂದಿಗೆ ಪುನೀತ್ ರಾಜಕುಮಾರ್ ಎಂಬ ಕಲಾಲೋಕದ ತಾರೆ ಮಣ್ಣಲ್ಲಿ ಮಣ್ಣಾಗಿ ಬೆರೆತಾಗ, ಎಲ್ಲರ ಕಣ್ಣಾಲಿಗಳು ತುಂಬಿದ್ದವು ಹಾಗೂ ಹೃದಯ ಭಾರವಾಗಿದ್ದವು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಅವರ ಸಚಿವರಾದ ಕೆ.ಗೋಪಾಲಯ್ಯ, ಆರ್ ಅಶೋಕ್, ಮುನಿರತ್ನ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ, ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ, ಪುತ್ರಿಯರಾದ ಧೃತಿ ಮತ್ತು ವಂದಿತಾ, ಸೋದರರಾದ ಶಿವ ರಾಜಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್, ಕುಟುಂಬಸ್ಥರಲ್ಲಿ ಪ್ರಮುಖರಾದ ಕುಮಾರ್ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ, ಚಿತ್ರ ರಂಗದ ಹೆಸರಾಂತ ಕಲಾವಿದರಾದ ವಿ. ರವಿಚಂದ್ರನ್, ಶಶಿಕುಮಾರ್, ಉಪೇಂದ್ರ, ಜಗ್ಗೇಶ್, ಸುದೀಪ್, ದುನಿಯಾ ವಿಜಿ, ಗಣೇಶ್, ವಿಜಯ ರಾಘವೇಂದ್ರ, ಶ್ರೀ ಮುರಳಿ, ಸಾಧು ಕೋಕಿಲ, ಉಮಾಶ್ರೀ, ತಾರಾ ಅನುರಾಧಾ, ಶೃತಿ, ರಶ್ಮಿಕಾ ಮಂದಣ್ಣ, ರಚಿತಾ ರಾಮ್ ಉಪಸ್ಥಿತರಿದ್ದರು.

ಚಿತ್ರೋದ್ಯಮದ ಗಣ್ಯರಾದ ಸಾ.ರಾ ಗೋವಿಂದ್, ರಾಕ್ ಲೈನ್ ವೆಂಕಟೇಶ್ ಹಾಗೂ ನೂರಾರು ಅಭಿಮಾನಿಗಳ ಸಾಗರವೇ ಪುನೀತ್ ರಾಜಕುಮಾರ್ ಅವರ ಅಂತ್ಯ ಸಂಸ್ಕಾರದ ಅಂತಿಮ ಕ್ಷಣಗಳನ್ನು ಕಣ್ತುಂಬಿಕೊಂಡರು.

ಲೋಹಿತ್ ಎಂಬ ಹೆಸರಿನಲ್ಲಿ ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ ಪುನೀತ್ ರಾಜಕುಮಾರ್ ಎಂಬ ತಾರೆ ಮಿಂಚಿ ಮರೆಯಾದರೂ, ಕನ್ನಡಿಗರ ಹೃದಯದಲ್ಲಿ ಮಾತ್ರ ಚಿರಸ್ಥಾಯಿಯಾಗಿ ನೆಲೆಸುತ್ತಾರೆ ಎಂಬುದಂತೂ ನಿಶ್ಚಿತ.

WhatsApp Join our WhatsApp Channel
Previous Post

Appu Painting Tribute | ಯುವರತ್ನನಿಗೆ ಸ್ಪೀಡ್ ಪೇಂಟಿಂಗ್ ಮೂಲಕ ನಮನ

Next Post

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ ; ಎಲೆ ಮರೆಕಾಯಿಯಂತಿರುವ ಸಾಧಕರ ಆಯ್ಕೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ ; ಎಲೆ ಮರೆಕಾಯಿಯಂತಿರುವ ಸಾಧಕರ ಆಯ್ಕೆ

Vidhanasoudha | ಕನ್ನಡ ರಾಜ್ಯೋತ್ಸವದ ಬೆಳಕಿನಲ್ಲಿ ವಿಧಾನಸೌಧ

Please login to join discussion

Like Us on Facebook

Follow Us on Twitter

Recent News

Vidhana Soudha

ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

April 29, 2026

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
Vidhana Soudha

ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

April 29, 2026

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group