Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

GST NEWS | ದೇಶಾದ್ಯಂತ ಅಕ್ಟೋಬರ್ ತಿಂಗಳಿನಲ್ಲಿ 1.30 ಲಕ್ಷ ಕೋಟಿ ರೂ. ದಾಖಲೆ ಜಿಎಸ್ ಟಿ ಸಂಗ್ರಹ

2017ರಲ್ಲಿ ಜಿಎಸ್ ಟಿ ನೂತನ ತೆರಿಗೆ ಪದ್ಧತಿ ಜಾರಿಗೆ ಬಂದ ನಂತರ 2ನೇ ಅತಿಹೆಚ್ಚು ಜಿಎಸ್ ಟಿ ತೆರಿಗೆ ಸಂಗ್ರಹ ಇದಾಗಿದೆ | ರಾಜ್ಯಗಳ ಪಾಲಿನ ಸಿಜಿಎಸ್ ಟಿ ಈತನಕ 22,394 ಕೋಟಿ ರೂ. ಪಾವತಿ | ಕರ್ನಾಟಕದ ಎಸ್ ಜಿಎಸ್ ಟಿ ಆದಾಯ ಶೇ.18ರಷ್ಟು ಏರಿಕೆ

by Bengaluru Wire Desk
November 1, 2021
in News Wire
Reading Time: 2 mins read
0
ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

ನವದೆಹಲಿ, (www.bengaluruwire.com) : ಅಕ್ಟೋಬರ್ ತಿಂಗಳಿನಲ್ಲಿ ದೇಶದ ಸರಕು ಮತ್ತು ಸೇವಾ ತೆರಿಗೆ ಆದಾಯ (GOODS AND SERVICE TAX INCOME) 1.30 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. ಈ ಮೂಲಕ 2017ರಲ್ಲಿ ಜಿಎಸ್ ಟಿ ಅನುಷ್ಠಾನವಾದ ಬಳಿಕ ಎರಡನೆಯ ಬಾರಿ ಅತಿಹೆಚ್ಚು ಆದಾಯ ಸಂಗ್ರಹ ಏರಿಕೆಯಾದಂತಾಗಿದೆ. ಇದು ಕೋವಿಡ್-19 ಸಾಂಕ್ರಾಮಿಕ ಹಾಗೂ ಸಾಲು ಸಾಲು ಹಬ್ಬಗಳ ಹಿನ್ನಲೆಯಲ್ಲಿ ಆರ್ಥಿಕ ಚೇತರಿಕೆಯಾಗುತ್ತಿರುವುದರ ಲಕ್ಷಣ ಎಂದು ಹಣಕಾಸು ಸಚಿವಾಲಯ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.

ಜಿಎಸ್ ಟಿ (GST) ನೂತನ ತೆರಿಗೆ ಪದ್ಧತಿ ಜಾರಿಗೆಯಾದ ನಂತರ ಇದೇ ವರ್ಷದ ಏಪ್ರಿಲ್ ನಲ್ಲಿ 1.41 ಲಕ್ಷ ಕೋಟಿ ರೂ. ತೆರಿಗೆ ಆದಾಯ ಸಂಗ್ರಹವಾಗಿದ್ದೇ ಅತಿಹೆಚ್ಚು ಎನ್ನುತ್ತಿದೆ ಹಣಕಾಸು ಸಚಿವಾಲಯ. ಎರಡನೇ ಅಲೆಯ ನಂತರ ಪ್ರತಿ ತಿಂಗಳು ಸೃಜನೆಯಾಗುತ್ತಿರುವ ಇ-ವೇ ಬಿಲ್ ಗಳಲ್ಲಿನ ಪ್ರವೃತ್ತಿಯಿಂದ ಇದು ಸ್ಪಷ್ಟವಾಗಿದೆ. ಸೆಮಿ ಕಂಡಕ್ಟರ್ ಗಳ ಪೂರೈಕೆಯಲ್ಲಿ ಅಡಚಣೆಯಿಂದಾಗಿ ಕಾರುಗಳು ಮತ್ತು ಇತರ ಉತ್ಪನ್ನಗಳ ಮಾರಾಟದ ಮೇಲೆ ಪರಿಣಾಮ ಬೀರದಿದ್ದರೆ ಆದಾಯವು ಇನ್ನೂ ಹೆಚ್ಚಾಗಿರುತ್ತಿತ್ತು. 1 ಲಕ್ಷ ಕೋಟಿ ರೂ. ಆದಾಯ ಸಂಗ್ರಹ ಸರಣಿಯಲ್ಲಿ ನಾಲ್ಕನೆಯ ಬಾರಿ ಜಿಎಸ್ ಟಿ ತೆರಿಗೆ ಸಂಗ್ರಹ ದಾಖಲೆ ಬರೆದಿದೆ. ಈ ವರ್ಷದ ಸೆಪ್ಟೆಂಬರ್ ನಲ್ಲಿ ಜಿಎಸ್ ಟಿ ಸಂಗ್ರಹ 1.17 ಲಕ್ಷ ಕೋಟಿ ರೂ. ಗಳಾಗಿತ್ತು.

ಅಕ್ಟೋಬರ್ 2021ರ ತಿಂಗಳಲ್ಲಿ ಸಂಗ್ರಹಿಸಲಾದ ಒಟ್ಟು ಜಿಎಸ್ ಟಿ ಆದಾಯವು 1,30,127 ಕೋಟಿ ರೂಗಳಾಗಿದ್ದು, ಇದರಲ್ಲಿ ಕೇಂದ್ರ ಸರ್ಕಾರದ ಪಾಲಿನ (CGST) 23,861 ಕೋಟಿ ರೂ., ರಾಜ್ಯ ಸರ್ಕಾರಗಳ ಪಾಲಿನ (SGST)  30,421 ಕೋಟಿ ರೂ., ಐಜಿಎಸ್ ಟಿ (IGST)   67,361 ಕೋಟಿ ರೂ. (ಸರಕುಗಳ ಆಮದಿನಲ್ಲಿ ಸಂಗ್ರಹಿಸಲಾದ 32,998 ಕೋಟಿ ರೂ. ಸೇರಿದಂತೆ), ಉಪಕರ (CESS) 8,484 ಕೋಟಿ ರೂ. (ಸರಕುಗಳ ಆಮದಿನಲ್ಲಿ ಸಂಗ್ರಹಿಸಲಾದ  699 ಕೋಟಿ ರೂ. ಸೇರಿದಂತೆ) ಆಗಿದೆ.

ರಾಜ್ಯಗಳ ಪಾಲಿನ ಎಸ್ ಜಿಎಸ್ ಟಿ ಈತನಕ  52,815 ಕೋಟಿ ರೂ. ಪಾವತಿ :

ಕೇಂದ್ರ ಸರ್ಕಾರದ ಐಜಿಎಸ್ ಟಿಯು ಈ ತನಕ 27,310 ಕೋಟಿ ರೂ. ಸಿಜಿಎಸ್ ಟಿ ಹಾಗೂ 22,394 ಕೋಟಿ ರೂ. ಎಸ್ ಜಿಎಸ್ ಟಿಯನ್ನು ಪಾವತಿಸಿದೆ. ಅಕ್ಟೋಬರ್ 2021ರ ತಿಂಗಳಲ್ಲಿ ನಿಯಮಿತ ಇತ್ಯರ್ಥದ ನಂತರ ಕೇಂದ್ರ ಮತ್ತು ರಾಜ್ಯಗಳ ಒಟ್ಟು ಆದಾಯವು ಸಿಜಿಎಸ್ಟಿಗೆ 51,171  ಕೋಟಿ ರೂ. ಮತ್ತು ಎಸ್ ಜಿಎಸ್ ಟಿ ಗೆ 52,815 ಕೋಟಿ ರೂ. ಆಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಅಕ್ಟೋಬರ್ 2021ರ ತಿಂಗಳ ಆದಾಯವು ಕಳೆದ ವರ್ಷದ ಇದೇ ತಿಂಗಳಲ್ಲಿ ಜಿಎಸ್ ಟಿ ಆದಾಯಕ್ಕಿಂತ ಶೇ.24 ರಷ್ಟು ಹೆಚ್ಚಾಗಿದೆ ಮತ್ತು 2019-20 ಕ್ಕಿಂತ ಶೇ.36ರಷ್ಟು ಹೆಚ್ಚಾಗಿದೆ. ಈ ತಿಂಗಳಲ್ಲಿ, ಸರಕುಗಳ ಆಮದಿನಿಂದ ಬರುವ ಆದಾಯವು ಶೇ.39ರಷ್ಟು ಹೆಚ್ಚಾಗಿದೆ ಮತ್ತು ದೇಶೀಯ ವಹಿವಾಟಿನಿಂದ ಬರುವ ಆದಾಯವು (ಸೇವೆಗಳ ಆಮದು ಸೇರಿದಂತೆ) ಕಳೆದ ವರ್ಷದ ಇದೇ ತಿಂಗಳಲ್ಲಿ ಈ ಮೂಲಗಳಿಂದ ಬರುವ ಆದಾಯಕ್ಕಿಂತ ಶೇ.19 ಹೆಚ್ಚಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಕರ್ನಾಟಕದ ಎಸ್ ಜಿಎಸ್ ಟಿ ಆದಾಯ ಶೇ.18ರಷ್ಟು ಏರಿಕೆ :

ಸರಕು ಮತ್ತು ಸೇವಾ ತೆರಿಗೆಗಳಿಂದ ಅಕ್ಟೋಬರ್ ತಿಂಗಳಿನಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಬರುವ ರಾಜ್ಯಗಳ ಪಾಲಿನ ಆದಾಯವು ಕಳೆದ ವರ್ಷ 6,998 ಕೋಟಿ ರೂ. ಆಗಿದ್ದರೆ, ಈ ವರ್ಷದ ಅಕ್ಟೋಬರ್ ನಲ್ಲಿ 8,259 ಕೋಟಿ ರೂ. ಜಿಎಸ್ ಟಿ ತೆರಿಗೆ ಆದಾಯದಲ್ಲಿ ಏರಿಕೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.18ರಷ್ಟು ಆದಾಯ ವೃದ್ಧಿಯಾಗಿದೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆಯಲ್ಲಿ ಹೇಳಿದೆ.

ಆರ್ಥಿಕ ಚಟುವಟಿಕೆಗಳ ಚೇತರಿಕೆ ಸ್ಪಷ್ಟ ಸೂಚನೆ :

ಅಕ್ಟೋಬರ್ ತಿಂಗಳಲ್ಲಿ ಉತ್ಪತ್ತಿಯಾದ ಇ-ವೇ ಬಿಲ್ ಗಳ ಸಂಖ್ಯೆಯ ಹೆಚ್ಚಳದ ಪ್ರವೃತ್ತಿ ಮತ್ತು ಆರ್ಥಿಕ ಚಟುವಟಿಕೆಯಲ್ಲಿನ ಚೇತರಿಕೆಯಾಗುತ್ತಿರುವುದರ ಸ್ಪಷ್ಟ ಸೂಚನೆ ಇದಾಗಿದೆ. ರಾಜ್ಯ ಮತ್ತು ಕೇಂದ್ರ ತೆರಿಗೆ ಆಡಳಿತದ ಪ್ರಯತ್ನಗಳು ಆದಾಯ ಹೆಚ್ಚಳಕ್ಕೆ ಸಹಾಯ ಮಾಡಿದ್ದು, ಇದರ ಪರಿಣಾಮವಾಗಿ ಹಿಂದಿನ ತಿಂಗಳುಗಳಿಗಿಂತ ಹೆಚ್ಚಿನ ತೆರಿಗೆ ಸಂಗ್ರಹವಾಗಿದೆ. ವೈಯಕ್ತಿಕ ತೆರಿಗೆ ವಂಚಕರ ವಿರುದ್ಧ ಕೈಗೊಂಡ ಕ್ರಮದ ಜೊತೆಗೆ,  ಜಿಎಸ್ ಟಿ ಕೌನ್ಸಿಲ್ ಅನುಸರಿಸಿದ ಬಹುಹಂತದ ಕ್ರಮಗಳು ಈಗೀಗ ಫಲಿತಾಂಶ ನೀಡುತ್ತಿರುವುದು ಕಂಡು ಬಂದಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಒಂದು ಕಡೆ, ಎಸ್.ಎಂಎಸ್ ಮೂಲಕ ನಿಲ್ ಫೈಲಿಂಗ್ ನಂತಹ ಅನುಸರಣೆಯನ್ನು ಸುಲಭಗೊಳಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಇದು ತ್ರೈಮಾಸಿಕ ರಿಟರ್ನ್ ಗಳ ಮಾಸಿಕ ಪಾವತಿ (QRMP) ವ್ಯವಸ್ಥೆ ಮತ್ತು ಆಟೋ- ಪಾಪ್ಯುಲೇಷನ್ ರಿಟರ್ನ್ ಗೆ ಅವಕಾಶ ಕಲ್ಪಿಸಿದೆ. ಕಳೆದ ಒಂದು ವರ್ಷದಲ್ಲಿ, ಜಿಎಸ್ಟಿಎನ್ ಬಳಕೆದಾರರ ಅನುಭವವನ್ನು ಸುಧಾರಿಸಲು ಸಿಸ್ಟಂ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿದೆ.

ಜಿಎಸ್ ಟಿ ತೆರಿಗೆ ತಪ್ಪಿಸಿದರೆ ಕಾದಿದೆ ಆಪತ್ತು :

ಜಿಎಸ್ ಟಿ ತೆರಿಗೆ ಪದ್ಧತಿಯನ್ನು ಅನುಸರಿಸದೇ ಅಡ್ಡದಾರಿ ಹಿಡಿಯುವುದಕ್ಕೆ ಸಾಕಷ್ಟು ನಿಯಂತ್ರಣ ಕ್ರಮಗಳನ್ನು ಜಿಎಸ್ ಟಿ ಮಂಡಳಿ ಕೈಗೊಂಡಿದೆ. ಉದಾಹರಣೆಗೆ ರಿಟರ್ನ್ಸ್ ಸಲ್ಲಿಸದ ಇ-ವೇ ಬಿಲ್ (E-WAY BILL) ಗಳನ್ನು ನಿರ್ಬಂಧಿಸುವುದು, ಸತತವಾಗಿ ಆರು ರಿಟರ್ನ್ಸ್ ಸಲ್ಲಿಸಲು ವಿಫಲವಾದ ತೆರಿಗೆದಾರರ ನೋಂದಣಿಯನ್ನು ಸಿಸ್ಟಮ್ ಆಧಾರಿತವಾಗಿ ಅಮಾನತುಗೊಳಿಸುವುದು ಮತ್ತು ರಿಟರ್ನ್ ಸಲ್ಲಿಸದರವರುಗಳಿಗೆ ಸಾಲವನ್ನು ನಿರ್ಬಂಧಿಸುವುದು. ಮುಂದಿನ ತಿಂಗಳ ಅಂತ್ಯದ ವೇಳೆಗೆ ಪ್ರತಿ ತಿಂಗಳು/ತ್ರೈಮಾಸಿಕದ ರಿಟರ್ನ್ಸ್ (GSTR-3B) ಸಂಖ್ಯೆಯು ಉತ್ತಮ ನಿಯತಾಂಕವಾಗಿದ್ದು, ಇದು ರಿಟರ್ನ್ಸ್ ಸಕಾಲದಲ್ಲಿ ಪಾವತಿ ಮಾಡುವುದನ್ನು ಮತ್ತು ರಿಟರ್ನ್ಸ್ ಫೈಲ್ (RETURN FILE) ಮಾಡುವುದನ್ನು ಸೂಚಿಸುತ್ತದೆ.

ಜಿಎಸ್ ಟಿಎನ್ ಬಿಗಿಯಾದ ಸುಧಾರಣಾ ಕ್ರಮದ ಪರಿಣಾಮ :

ಕಳೆದ ಒಂದು ವರ್ಷದಲ್ಲಿ ಜಿಎಸ್ ಟಿಎನ್ ಕೈಗೊಂಡ ಸಮಗ್ರ ಕ್ರಮಗಳಿಂದಾಗಿ ಜಿಎಸ್ ಟಿ ತೆರಿಗೆದಾರರು ಜಿಎಸ್ ಟಿ ಕಟ್ಟುವ ಸೂಕ್ತ ವಾತಾವರಣ ನಿರ್ಮಾಣವಾಗಿದೆ. ಇದರಿಂದಾಗಿ ಪ್ರತಿ ತಿಂಗಳು ಜಿಎಸ್ ಟಿ ಫೈಲ್ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಅಲ್ಲದೆ ಹಳೆಯ ಬಾಕಿ ತೆರಿಗೆಗಳನ್ನು ಯಾವುದೇ ತಿಂಗಳಲ್ಲಿ ಕಟ್ಟಲು ಅವಕಾಶ ಕಲ್ಪಿಸಿರುವುದರಿಂದ ಆ ಸೌಲಭ್ಯವನ್ನು ಬಳಸುವವರ ಪ್ರಮಾಣವೂ ಹೆಚ್ಚಿದೆ. ಕೋವಿಡ್ ನಿಂದಾಗಿ ನೀಡಲಾದ ಸಡಿಲಿಕೆಯ ಲಾಭವನ್ನು ಪಡೆದು ತೆರಿಗೆದಾರರು ಕಳೆದ ತಿಂಗಳುಗಳ ರಿಟರ್ನ್ಸ್ ಸಲ್ಲಿಸಿದ್ದರಿಂದ ಜುಲೈ 2021ರ ತಿಂಗಳಲ್ಲಿ 1.5 ಕೋಟಿ ರಿಟರ್ನ್ಸ್ ಸಲ್ಲಿಕೆಯಾಗಿದೆ.

ಜಿಎಸ್ ಟಿ ತೆರಿಗೆ ಸಲ್ಲಿಕೆಯಲ್ಲಿ ಜಿಎಸ್ ಟಿ ಮಂಡಳಿಯು ನಿರಂತರವಾಗಿ ಕೈಗೊಳ್ಳುತ್ತಿರುವ ಸಕಾಲಿಕ ಕ್ರಮಗಳಿಂದಾಗಿ ಬಳಕೆದಾರರು ಇನ್ ಪುಟ್ ಕ್ರೆಡಿಟ್ ಪಡೆಯಲು ಅನುಕೂಲವಾಗುವಂತೆ ಸಮಯಕ್ಕೆ ಸರಿಯಾಗಿ ಜಿಎಸ್ ಟಿಆರ್ -1 (GSTR-1) ಅನ್ನು ಪ್ರತಿ ತಿಂಗಳು ಫೈಲ್ ಮಾಡುವುದರ ಬಗ್ಗೆ ಜಿಎಸ್ ಟಿ ಮಂಡಳಿ ತನ್ನ ಗಮನವನ್ನು ಕೇಂದ್ರಕರಿಸಿದೆ. ಜಿಎಸ್ ಟಿಆರ್ -1 ಎಂದರೆ ಸರಕು- ಸೇವೆಗಳ ಇನ್ವಾಯಿಸ್ ಮಾಹಿತಿ ನೀಡಬೇಕಾದ ಫಾರಮ್ ಆಗಿದೆ. ಒಟ್ಟಾರೆ ದೇಶದಲ್ಲಿ ದಿನೇ ದಿನೇ ಜಿಎಸ್ ಟಿ ವ್ಯಾಪ್ತಿಗೆ ಸೇರ್ಪಡೆಯಾಗುತ್ತಿರುವವರ ಪ್ರಮಾಣ ಒಂದೆಡೆ ಹೆಚ್ಚಾದರೆ, ಮತ್ತೊಂದೆಡೆ ಜಿಎಸ್ ಟಿ ತೆರಿಗೆ ವಿವರ ಸಲ್ಲಿಕೆ ಕಟ್ಟುವಲ್ಲಿ ಇರುವ ಗೊಂದಲಗಳು ಮಾತ್ರ ನಿವಾರಣೆಯಾಗದೆ ಗ್ರಾಹಕರು ಪರದಾಡುವುದು ಮಾತ್ರ ತಪ್ಪುತ್ತಿಲ್ಲ. ಈ ಬಗ್ಗೆ ಜಿಎಸ್ ಟಿ ಮಂಡಳಿಯೂ ಸೂಕ್ತ ಗಮನಹರಿಸಬೇಕಿದೆ.

WhatsApp Join our WhatsApp Channel
Previous Post

Vidhanasoudha | ಕನ್ನಡ ರಾಜ್ಯೋತ್ಸವದ ಬೆಳಕಿನಲ್ಲಿ ವಿಧಾನಸೌಧ

Next Post

BW SPECIAL | Google Trending | “ಯುವರತ್ನ” ಪುನೀತ್ ರಾಜ್ ಕುಮಾರ್ ಗೂಗಲ್ ಟ್ರೆಂಡಿಂಗ್ ಸರ್ಚ್ ನಲ್ಲಿ ಅಂದು ಟಾಪ್-1

Next Post

BW SPECIAL | Google Trending | “ಯುವರತ್ನ” ಪುನೀತ್ ರಾಜ್ ಕುಮಾರ್ ಗೂಗಲ್ ಟ್ರೆಂಡಿಂಗ್ ಸರ್ಚ್ ನಲ್ಲಿ ಅಂದು ಟಾಪ್-1

Narak Chaturdashi Sadguru Message | ದೀಪಾವಳಿಯಂದು ಪಟಾಕಿ ನಿಷೇಧಿಸದಿರಿ - ಸದ್ಗುರು

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group