Monday, September 21, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP NEWS | ಬಿಬಿಎಂಪಿಯಲ್ಲಿ ಬೃಹತ್ ಕಟ್ಟಡ ನಕ್ಷೆ ಶುಲ್ಕ ಇಳಿಕೆಗೆ “ಗುಪ್ತ” ಆದೇಶ

ಬಿಲ್ಡರ್ ಗಳ ಅನುಕೂಲಕ್ಕಾಗಿ ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕ ಶೇ. 78% ರಷ್ಟು ಕಡಿತಗೊಳಿಸಿ ಮುಖ್ಯ ಆಯುಕ್ತರ "ಗುಪ್ತ" ಆದೇಶ | ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಗುರುತರ ಆರೋಪ | ಅಧಿಕಾರ ದುರುಪಯೋಗ ಸಂಬಂಧ ಗೌರವ್ ಗುಪ್ತಾ, ಟೌನ್ ಪ್ಲಾನಿಂಗ್ ಜೆಡಿಟಿಪಿ ಮಂಜೇಶ್ ವಿರುದ್ಧ ACB & BMTF ನಲ್ಲಿ ದೂರು ದಾಖಲು

by Bengaluru Wire Desk
November 24, 2021
in Bengaluru Focus
Reading Time: 2 mins read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) :
ನಗರದಲ್ಲಿರುವ ಬಿಲ್ಡರ್ ಗಳ ಮಾಫಿಯಾ ಜೊತೆ ಶಾಮೀಲಾಗಿ ಪಾಲಿಕೆ ಮುಖ್ಯ ಆಯುಕ್ತರು ಬಿಬಿಎಂಪಿಗೆ ಎರಡನೇ ಅತೀ ದೊಡ್ಡ ಆದಾಯದ ಮೂಲವಾಗಿರುವ ನಕ್ಷೆ ಮಂಜೂರಾತಿ ಶುಲ್ಕವನ್ನು ಶೇ. 78% ರಷ್ಟು ಕಡಿತಗೊಳಿಸಿ ಪಾಲಿಕೆಗೆ ಮಹಾ ವಂಚನೆಯ ಪ್ರಯತ್ನದ ಹುನ್ನಾರ ಮಾಡಿದ್ದಾರೆ ಎಂದು
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್. ಆರ್. ರಮೇಶ್ ಆರೋಪಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ
ರಮೇಶ್ ಅವರು, ಸೀಮಿತ ವಾರ್ಷಿಕ ಆದಾಯವನ್ನು ಹೊಂದಿರುವ ಪಾಲಿಕೆಯ ಆರ್ಥಿಕ ವ್ಯವಸ್ಥೆಯನ್ನೇ ಬುಡ ಮೇಲು ಮಾಡಲು ಹೊರಟಿರುವ ಆಯುಕ್ತರು ದಿನಾಂಕ ನಮೂದಿಸಿದೇ ಬಿಲ್ಡರ್ ಗಳ ಪರವಾಗಿ ಬಿಬಿಎಂಪಿ ವಿರೋಧೀ ನಿರ್ಣಯ ಕೈಗೊಂಡಿದ್ದಾಗಿ ಹೇಳಿದ್ದಾರೆ.

ಬಿಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ

ಅಧಿಕಾರ ದುರುಪಯೋಗದ ಮೇಲೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ನಗರ ಯೋಜನೆಯ ಜಂಟಿ ನಿರ್ದೇಶಕ (ಉತ್ತರ) ಮಂಜೇಶ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಫೋರ್ಸ್ (BMTF) ಗಳಲ್ಲಿ ದೂರುಗಳನ್ನು ದಾಖಲಿಸಿದ್ದಾಗಿ ತಿಳಿಸಿದರು.

ನಗರ ಯೋಜನೆ ಉತ್ತರ ವಿಭಾಗದ ಜೆಡಿಟಿಪಿ ಮಂಜೇಶ್

ಪ್ರಸ್ತುತ ಬೃಹತ್ ಕಟ್ಟಡಗಳ ನಕ್ಷೆ ಮಂಜೂರಾತಿ ಶುಲ್ಕದ ರೂಪದಲ್ಲಿ ಪಾಲಿಕೆಗೆ ಪ್ರತೀ ವರ್ಷ ಸರಾಸರಿ 600 ಕೋಟಿ ಆದಾಯ ಬರುತ್ತದೆ. ಉಚ್ಛ ನ್ಯಾಯಾಲಯದ ಆದೇಶ ನೆಪವಾಗಿಟ್ಟುಕೊಂಡು ಬಿಲ್ಡರ್ ಮಾಫಿಯಾದೊಂದಿಗೆ ಸೇರಿಕೊಂಡು ಮಹಾಸಂಚು ಮಾಡಿದ್ದಾಗಿ ಎನ್.ಆರ್.ರಮೇಶ್ ದೂರಿದ್ದಾರೆ.

ಪಾಲಿಕೆಯ ಮುಖ್ಯ ಆಯುಕ್ತರು ಮಂಜೇಶ್ ರವರೊಂದಿಗೆ ಶಾಮೀಲಾಗಿ ಪ್ರತಿಷ್ಟಿತ ಬಿಲ್ಡರ್ ಗಳಿಂದ ಕೋಟ್ಯಾಂತರ ರೂಪಾಯಿಗಳಷ್ಟು ಹಣವನ್ನು ಕಿಕ್ ಬ್ಯಾಕ್ ರೂಪದಲ್ಲಿ ಪಡೆದು, 2008 ಕ್ಕೂ ಮೊದಲು ಇದ್ದಂತಹ ನಕ್ಷೆ ಮಂಜೂರಾತಿ ಶುಲ್ಕದ ಪದ್ಧತಿಯಂತೆ ಶುಲ್ಕ ವಸೂಲಿ ಮಾಡುವ ನಿರ್ಧಾರವನ್ನು ತೆಗೆದುಕೊಂಡು, ಈ ಸಂಬಂಧ ಆದೇಶವನ್ನೂ ಸಹ ಹೊರಡಿಸಿರುತ್ತಾರೆ.

ಮುಖ್ಯ ಆಯುಕ್ತರು ದಿನಾಂಕ – ರವಾನೆ ಸಂಖ್ಯೆ ನಮೂದಿಸದ ಸುತ್ತೋಲೆ ದಾಖಲೆ

ವಿಶೇಷವೆಂದರೆ ಪಾಲಿಕೆಯ ಮುಖ್ಯ ಆಯುಕ್ತರು ಬಹಳ ಗೌಪ್ಯವಾಗಿ ಹೊರಡಿಸಿರುವ ಈ ಆದೇಶದ ಪ್ರತಿಯಲ್ಲಿ ದಿನಾಂಕವನ್ನು ನಮೂದಿಸಿಲ್ಲ. ಹಾಗೂ ರವಾನೆ ಸಂಖ್ಯೆ (Dispatch Number)ಯನ್ನೂ ಸಹ ನಮೂದಿಸದೇ ಆದೇಶವನ್ನು ಹೊರಡಿಸಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ ಎಂದು ಅವರು ಹೇಳಿದ್ದಾರೆ.

2008ರ ಅವಧಿಯಲ್ಲಿದ್ದಂತೆ ಶುಲ್ಕ ಸಂಗ್ರಹ :

ಪಾಲಿಕೆಯ ಮುಖ್ಯ ಆಯುಕ್ತರ ಆದೇಶದಂತೆ 2008 ಕ್ಕೂ ಹಿಂದಿನ ನಕ್ಷೆ ಮಂಜೂರಾತಿ ಶುಲ್ಕವನ್ನು ಸಂಗ್ರಹಿಸಲು ಪಾಲಿಕೆ ಮುಂದಾಗುತ್ತಿರುವ ಪರಿಣಾಮದಿಂದ ಈಗಿನ ನಕ್ಷೆ ಮಂಜೂರಾತಿ ಶುಲ್ಕದ ಶೇ. 22 ರಷ್ಟು ಶುಲ್ಕವನ್ನು ಮಾತ್ರವೇ ಪಾಲಿಕೆಯು ಸಂಗ್ರಹಿಸಬೇಕಾಗಿರುತ್ತದೆ. ಉದಾಹರಣೆಗೆ ಪ್ರಸ್ತುತ ಯಾವುದೇ ಒಂದು ಕಟ್ಟಡದ ನಕ್ಷೆ ಮಂಜೂರಾತಿಗೆ 01 ಲಕ್ಷ ರೂಪಾಯಿ ಸಂಗ್ರಹವಾಗುತ್ತಿದ್ದರೆ, 2008 ಕ್ಕೂ ಹಿಂದಿನ ಪದ್ಧತಿಯಂತೆ ಕೇವಲ 22 ಸಾವಿರ ರೂಪಾಯಿಗಳಷ್ಟು ಮಾತ್ರ ಶುಲ್ಕವನ್ನು ವಸೂಲಿ ಮಾಡಬಹುದಾಗಿರುತ್ತದೆ.

ಪಾಲಿಕೆಯ ಮುಖ್ಯ ಆಯುಕ್ತರ ಆದೇಶದಂತೆ ಸಂಬಂಧಪಟ್ಟ ಬಿಲ್ಡರ್ ಗಳು ಪಾಲಿಕೆಗೆ ಮುಚ್ಚಳಿಕೆ ಪತ್ರವನ್ನು ಬರೆದುಕೊಡಬೇಕಿದ್ದು, ಸದರಿ ಮುಚ್ಚಳಿಕೆ ಪತ್ರದಲ್ಲಿ ಮುಂದೆ ನ್ಯಾಯಾಲಯವು ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧರಾಗಿ, ಅವರುಗಳು 2008 ಕ್ಕೂ ಹಿಂದಿನ ಪದ್ಧತಿಯಂತೆ ಶುಲ್ಕವನ್ನು ಪಾವತಿಸುವುದಾಗಿ ಬರೆದುಕೊಡಬೇಕಿರುತ್ತದೆ.

ಈ ರೀತಿ ಬರೆದುಕೊಟ್ಟ ಬಿಲ್ಡರ್ ಗಳು ತಮ್ಮ ಕಟ್ಟಡ ನಿರ್ಮಾಣ ಪೂರ್ಣಗೊಂಡ ನಂತರ ಗ್ರಾಹಕರಿಗೆ ವಾಣಿಜ್ಯ ಮಳಿಗೆಗಳನ್ನು ಅಥವಾ ವಸತಿ ಸಮುಚ್ಛಯಗಳನ್ನು ಮಾರಾಟ ಮಾಡಿರುತ್ತಾರಲ್ಲದೇ, ಅಂತಹ ಬಿಲ್ಡರ್ಗಳಿಂದ ಬಾಕಿ ಶುಲ್ಕವನ್ನು ಸಂಗ್ರಹಿಸುವುದು ನಿಜಕ್ಕೂ ಅಸಾಧ್ಯವಾದಂತಹ ಕೆಲಸವಾಗಿರುತ್ತದೆ.

ಹೈಕೋರ್ಟ್ ಗೆ ವಾಸ್ತವ ಸಂಗತಿ ತಿಳಿಸುವಲ್ಲಿ ಬಿಬಿಎಂಪಿ ವಿಫಲ :

“ನಕ್ಷೆ ಮಂಜೂರಾತಿ ಶುಲ್ಕ ವಸೂಲು ಮಾಡಲು ಪಾಲಿಕೆಗೆ ಅವಕಾಶ ನೀಡಬಾರದೆಂದು ಹತ್ತಕ್ಕೂ ಹೆಚ್ಚು ಪ್ರತಿಷ್ಟಿತ ಬಿಲ್ಡರ್ ಗಳಿಂದ ಉಚ್ಛ ನ್ಯಾಯಾಲಯದಲ್ಲಿ 10 ಕ್ಕೂ ಹೆಚ್ಚು PIL ಗಳು ಸಲ್ಲಿಕೆಯಾಗಿತ್ತು. ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಗಳನ್ನು ಒಂದುಗೂಡಿಸಿ (WP # 4601/2020) ನ್ಯಾಯಾಲಯದ ವಿಚಾರಣೆ ನಡೆಸಿ ತೀರ್ಪು ನೀಡಿತ್ತು.”

“ಹೈಕೋರ್ಟ್ ನಲ್ಲಿ ವಿಚಾರಣೆ ಸಂದರ್ಭದಲ್ಲಿ ಬಿಬಿಎಂಪಿ ಕಾನೂನು ಕೋಶದ ಅತ್ಯಂತ ದುರ್ಬಲ ವಕೀಲರು ಸೂಕ್ತ ದಾಖಲಾತಿಗಳನ್ನು ನ್ಯಾಯಾಲಯಕ್ಕೆ ಒದಗಿಸದೆ ಮತ್ತು ಅಂಕಿ ಅಂಶಗಳ ಸಹಿತ ವಾಸ್ತವ ಸಂಗತಿಗಳನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದ್ದರು.”

“ಪಾಲಿಕೆಯ ವಕೀಲರ ಉದಾಸೀನ ಮತ್ತು ವಸ್ತು ಸ್ಥಿತಿಯ ವಾಸ್ತವ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸದೇ ಇರುವ ಕಾರಣ ಉಚ್ಛ ನ್ಯಾಯಾಲಯದಲ್ಲಿ ಪಾಲಿಕೆಗೆ ತೀವ್ರ ಹಿನ್ನಡೆಯಾಗಿತ್ತು” ಎಂದು ಅವರು ಹೇಳಿದ್ದಾರೆ

“ಆಗಸ್ಟ್ 4ರಂದು “ನ್ಯಾಯಾಲಯದ ಮುಂದಿನ ಆದೇಶದವರೆಗೆ ಪಾಲಿಕೆಯು ಬಿಲ್ಡರ್ ಗಳಿಂದ ನಕ್ಷೆ ಮಂಜೂರಾತಿ ಶುಲ್ಕ ವಸೂಲಿ ಮಾಡುವಂತಿಲ್ಲ” ಎಂದು ನ್ಯಾಯಾಲಯದ ಆದೇಶ ನೀಡಿತ್ತು.”

“ಉಚ್ಛ ನ್ಯಾಯಾಲಯದ ಆದೇಶದಿಂದ ಪಾಲಿಕೆಯ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತ ಬೀಳುತ್ತದೆ ಎಂಬ ಅಂಶ ಅರಿವಿದ್ದರೂ ಸಹ ಮುಖ್ಯ ಆಯುಕ್ತರಾದ ಗೌರವಗುಪ್ತಾ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಮುಖ್ಯ ಆಯುಕ್ತರ ಬದಲಾವಣೆಗೆ ಸಿಎಂ ಗೆ ಆಗ್ರಹ :

ನಿರಂತರವಾಗಿ ಹಲವಾರು ಆರೋಪಗಳಿಗೆ ಗುರಿಯಾಗುತ್ತಿರುವ ಗೌರವ್ ಗುಪ್ತಾರನ್ನು ಕೂಡಲೇ ಪಾಲಿಕೆಯ ಮುಖ್ಯ ಆಯುಕ್ತರ ಸ್ಥಾನದಿಂದ ಬದಲಿಸಲು ಮುಖ್ಯಮಂತ್ರಿಗಳನ್ನು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ಬೆಂಗಳೂರು ವೈರ್ ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಸಿದರೂ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.

ಹೈಕೋರ್ಟ್ ನಲ್ಲಿ ತೀರ್ಪು ಪ್ರಶ್ನಿಸಲು ಅಥವಾ ತಡೆಯಾಜ್ಞೆ ತೆಗೆದುಕೊಳ್ಳಲು ಎಸಿಎಸ್ ಗೆ ಆಗ್ರಹ :

ವಿಭಾಗೀಯ ಪೀಠದಲ್ಲಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲು ಅಥವಾ ಅದಕ್ಕೆ ತಡೆಯಾಜ್ಞೆ ತೆಗೆದುಕೊಳ್ಳಲು ಹತ್ತಾರು ಅವಕಾಶಗಳಿದ್ದರೂ ಸಹ ಪಾಲಿಕೆಯ ಆರ್ಥಿಕ ಹಿತಾಸಕ್ತಿಯನ್ನು ಚೀಫ್ ಕಮಿಷನರ್ ಮರೆತಿದ್ದಾರೆ. ಹಿರಿಯ ಅನುಭವೀ ವಕೀಲರನ್ನು ಕೂಡಲೇ ಈ ಪ್ರಕರಣದಲ್ಲಿ ನಿಯೋಜಿಸಿ ಪಾಲಿಕೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪಾಲಿಕೆಯ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ACB RAID NEWS | ಬೆಂಗಳೂರು ಸೇರಿದಂತೆ ರಾಜ್ಯದ 68 ಕಡೆಗಳಲ್ಲಿ ಎಸಿಬಿ ಪೊಲೀಸರಿಂದ ಭ್ರಷ್ಟರ ಬೇಟೆ

Next Post

Crime News | ಆ ಭ್ರಷ್ಟ ಅಧಿಕಾರಿಗಳ ಬಳಿಯಿತ್ತಂತೆ ಬಲ್ಲ ಆದಾಯ ಮೂಲಕ್ಕಿಂತ ಶೇ.77 ರಿಂದ ಶೇ.879 ಪಟ್ಟು ಹೆಚ್ಚು ಅಕ್ರಮ ಆಸ್ತಿ…!!

Next Post

Crime News | ಆ ಭ್ರಷ್ಟ ಅಧಿಕಾರಿಗಳ ಬಳಿಯಿತ್ತಂತೆ ಬಲ್ಲ ಆದಾಯ ಮೂಲಕ್ಕಿಂತ ಶೇ.77 ರಿಂದ ಶೇ.879 ಪಟ್ಟು ಹೆಚ್ಚು ಅಕ್ರಮ ಆಸ್ತಿ...!!

Bangalore Earthquake | ಬೆಂಗಳೂರಿನ ಕೆಲವು ಕಡೆ ಸಾರ್ವಜನಿಕರಿಗೆ ಭಾರೀ ಶಬ್ದದ ಜೊತೆ ಭೂಕಂಪನದ ಅನುಭವ....!

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d