Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BBMP NEWS | ಬಿಬಿಎಂಪಿಯಲ್ಲಿ ಬೃಹತ್ ಕಟ್ಟಡ ನಕ್ಷೆ ಶುಲ್ಕ ಇಳಿಕೆಗೆ “ಗುಪ್ತ” ಆದೇಶ

ಬಿಲ್ಡರ್ ಗಳ ಅನುಕೂಲಕ್ಕಾಗಿ ಕಟ್ಟಡ ನಕ್ಷೆ ಮಂಜೂರಾತಿ ಶುಲ್ಕ ಶೇ. 78% ರಷ್ಟು ಕಡಿತಗೊಳಿಸಿ ಮುಖ್ಯ ಆಯುಕ್ತರ "ಗುಪ್ತ" ಆದೇಶ | ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಗುರುತರ ಆರೋಪ | ಅಧಿಕಾರ ದುರುಪಯೋಗ ಸಂಬಂಧ ಗೌರವ್ ಗುಪ್ತಾ, ಟೌನ್ ಪ್ಲಾನಿಂಗ್ ಜೆಡಿಟಿಪಿ ಮಂಜೇಶ್ ವಿರುದ್ಧ ACB & BMTF ನಲ್ಲಿ ದೂರು ದಾಖಲು

by Bengaluru Wire Desk
November 24, 2021
in Bengaluru Focus
Reading Time: 2 mins read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) :
ನಗರದಲ್ಲಿರುವ ಬಿಲ್ಡರ್ ಗಳ ಮಾಫಿಯಾ ಜೊತೆ ಶಾಮೀಲಾಗಿ ಪಾಲಿಕೆ ಮುಖ್ಯ ಆಯುಕ್ತರು ಬಿಬಿಎಂಪಿಗೆ ಎರಡನೇ ಅತೀ ದೊಡ್ಡ ಆದಾಯದ ಮೂಲವಾಗಿರುವ ನಕ್ಷೆ ಮಂಜೂರಾತಿ ಶುಲ್ಕವನ್ನು ಶೇ. 78% ರಷ್ಟು ಕಡಿತಗೊಳಿಸಿ ಪಾಲಿಕೆಗೆ ಮಹಾ ವಂಚನೆಯ ಪ್ರಯತ್ನದ ಹುನ್ನಾರ ಮಾಡಿದ್ದಾರೆ ಎಂದು
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್. ಆರ್. ರಮೇಶ್ ಆರೋಪಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಾ
ರಮೇಶ್ ಅವರು, ಸೀಮಿತ ವಾರ್ಷಿಕ ಆದಾಯವನ್ನು ಹೊಂದಿರುವ ಪಾಲಿಕೆಯ ಆರ್ಥಿಕ ವ್ಯವಸ್ಥೆಯನ್ನೇ ಬುಡ ಮೇಲು ಮಾಡಲು ಹೊರಟಿರುವ ಆಯುಕ್ತರು ದಿನಾಂಕ ನಮೂದಿಸಿದೇ ಬಿಲ್ಡರ್ ಗಳ ಪರವಾಗಿ ಬಿಬಿಎಂಪಿ ವಿರೋಧೀ ನಿರ್ಣಯ ಕೈಗೊಂಡಿದ್ದಾಗಿ ಹೇಳಿದ್ದಾರೆ.

ಬಿಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ

ಅಧಿಕಾರ ದುರುಪಯೋಗದ ಮೇಲೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಮತ್ತು ನಗರ ಯೋಜನೆಯ ಜಂಟಿ ನಿರ್ದೇಶಕ (ಉತ್ತರ) ಮಂಜೇಶ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಬೆಂಗಳೂರು ಮೆಟ್ರೊಪಾಲಿಟನ್ ಟಾಸ್ಕ್ ಫೋರ್ಸ್ (BMTF) ಗಳಲ್ಲಿ ದೂರುಗಳನ್ನು ದಾಖಲಿಸಿದ್ದಾಗಿ ತಿಳಿಸಿದರು.

ನಗರ ಯೋಜನೆ ಉತ್ತರ ವಿಭಾಗದ ಜೆಡಿಟಿಪಿ ಮಂಜೇಶ್

ಪ್ರಸ್ತುತ ಬೃಹತ್ ಕಟ್ಟಡಗಳ ನಕ್ಷೆ ಮಂಜೂರಾತಿ ಶುಲ್ಕದ ರೂಪದಲ್ಲಿ ಪಾಲಿಕೆಗೆ ಪ್ರತೀ ವರ್ಷ ಸರಾಸರಿ 600 ಕೋಟಿ ಆದಾಯ ಬರುತ್ತದೆ. ಉಚ್ಛ ನ್ಯಾಯಾಲಯದ ಆದೇಶ ನೆಪವಾಗಿಟ್ಟುಕೊಂಡು ಬಿಲ್ಡರ್ ಮಾಫಿಯಾದೊಂದಿಗೆ ಸೇರಿಕೊಂಡು ಮಹಾಸಂಚು ಮಾಡಿದ್ದಾಗಿ ಎನ್.ಆರ್.ರಮೇಶ್ ದೂರಿದ್ದಾರೆ.

ಪಾಲಿಕೆಯ ಮುಖ್ಯ ಆಯುಕ್ತರು ಮಂಜೇಶ್ ರವರೊಂದಿಗೆ ಶಾಮೀಲಾಗಿ ಪ್ರತಿಷ್ಟಿತ ಬಿಲ್ಡರ್ ಗಳಿಂದ ಕೋಟ್ಯಾಂತರ ರೂಪಾಯಿಗಳಷ್ಟು ಹಣವನ್ನು ಕಿಕ್ ಬ್ಯಾಕ್ ರೂಪದಲ್ಲಿ ಪಡೆದು, 2008 ಕ್ಕೂ ಮೊದಲು ಇದ್ದಂತಹ ನಕ್ಷೆ ಮಂಜೂರಾತಿ ಶುಲ್ಕದ ಪದ್ಧತಿಯಂತೆ ಶುಲ್ಕ ವಸೂಲಿ ಮಾಡುವ ನಿರ್ಧಾರವನ್ನು ತೆಗೆದುಕೊಂಡು, ಈ ಸಂಬಂಧ ಆದೇಶವನ್ನೂ ಸಹ ಹೊರಡಿಸಿರುತ್ತಾರೆ.

ಮುಖ್ಯ ಆಯುಕ್ತರು ದಿನಾಂಕ – ರವಾನೆ ಸಂಖ್ಯೆ ನಮೂದಿಸದ ಸುತ್ತೋಲೆ ದಾಖಲೆ

ವಿಶೇಷವೆಂದರೆ ಪಾಲಿಕೆಯ ಮುಖ್ಯ ಆಯುಕ್ತರು ಬಹಳ ಗೌಪ್ಯವಾಗಿ ಹೊರಡಿಸಿರುವ ಈ ಆದೇಶದ ಪ್ರತಿಯಲ್ಲಿ ದಿನಾಂಕವನ್ನು ನಮೂದಿಸಿಲ್ಲ. ಹಾಗೂ ರವಾನೆ ಸಂಖ್ಯೆ (Dispatch Number)ಯನ್ನೂ ಸಹ ನಮೂದಿಸದೇ ಆದೇಶವನ್ನು ಹೊರಡಿಸಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದೆ ಎಂದು ಅವರು ಹೇಳಿದ್ದಾರೆ.

2008ರ ಅವಧಿಯಲ್ಲಿದ್ದಂತೆ ಶುಲ್ಕ ಸಂಗ್ರಹ :

ಪಾಲಿಕೆಯ ಮುಖ್ಯ ಆಯುಕ್ತರ ಆದೇಶದಂತೆ 2008 ಕ್ಕೂ ಹಿಂದಿನ ನಕ್ಷೆ ಮಂಜೂರಾತಿ ಶುಲ್ಕವನ್ನು ಸಂಗ್ರಹಿಸಲು ಪಾಲಿಕೆ ಮುಂದಾಗುತ್ತಿರುವ ಪರಿಣಾಮದಿಂದ ಈಗಿನ ನಕ್ಷೆ ಮಂಜೂರಾತಿ ಶುಲ್ಕದ ಶೇ. 22 ರಷ್ಟು ಶುಲ್ಕವನ್ನು ಮಾತ್ರವೇ ಪಾಲಿಕೆಯು ಸಂಗ್ರಹಿಸಬೇಕಾಗಿರುತ್ತದೆ. ಉದಾಹರಣೆಗೆ ಪ್ರಸ್ತುತ ಯಾವುದೇ ಒಂದು ಕಟ್ಟಡದ ನಕ್ಷೆ ಮಂಜೂರಾತಿಗೆ 01 ಲಕ್ಷ ರೂಪಾಯಿ ಸಂಗ್ರಹವಾಗುತ್ತಿದ್ದರೆ, 2008 ಕ್ಕೂ ಹಿಂದಿನ ಪದ್ಧತಿಯಂತೆ ಕೇವಲ 22 ಸಾವಿರ ರೂಪಾಯಿಗಳಷ್ಟು ಮಾತ್ರ ಶುಲ್ಕವನ್ನು ವಸೂಲಿ ಮಾಡಬಹುದಾಗಿರುತ್ತದೆ.

ಪಾಲಿಕೆಯ ಮುಖ್ಯ ಆಯುಕ್ತರ ಆದೇಶದಂತೆ ಸಂಬಂಧಪಟ್ಟ ಬಿಲ್ಡರ್ ಗಳು ಪಾಲಿಕೆಗೆ ಮುಚ್ಚಳಿಕೆ ಪತ್ರವನ್ನು ಬರೆದುಕೊಡಬೇಕಿದ್ದು, ಸದರಿ ಮುಚ್ಚಳಿಕೆ ಪತ್ರದಲ್ಲಿ ಮುಂದೆ ನ್ಯಾಯಾಲಯವು ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧರಾಗಿ, ಅವರುಗಳು 2008 ಕ್ಕೂ ಹಿಂದಿನ ಪದ್ಧತಿಯಂತೆ ಶುಲ್ಕವನ್ನು ಪಾವತಿಸುವುದಾಗಿ ಬರೆದುಕೊಡಬೇಕಿರುತ್ತದೆ.

ಈ ರೀತಿ ಬರೆದುಕೊಟ್ಟ ಬಿಲ್ಡರ್ ಗಳು ತಮ್ಮ ಕಟ್ಟಡ ನಿರ್ಮಾಣ ಪೂರ್ಣಗೊಂಡ ನಂತರ ಗ್ರಾಹಕರಿಗೆ ವಾಣಿಜ್ಯ ಮಳಿಗೆಗಳನ್ನು ಅಥವಾ ವಸತಿ ಸಮುಚ್ಛಯಗಳನ್ನು ಮಾರಾಟ ಮಾಡಿರುತ್ತಾರಲ್ಲದೇ, ಅಂತಹ ಬಿಲ್ಡರ್ಗಳಿಂದ ಬಾಕಿ ಶುಲ್ಕವನ್ನು ಸಂಗ್ರಹಿಸುವುದು ನಿಜಕ್ಕೂ ಅಸಾಧ್ಯವಾದಂತಹ ಕೆಲಸವಾಗಿರುತ್ತದೆ.

ಹೈಕೋರ್ಟ್ ಗೆ ವಾಸ್ತವ ಸಂಗತಿ ತಿಳಿಸುವಲ್ಲಿ ಬಿಬಿಎಂಪಿ ವಿಫಲ :

“ನಕ್ಷೆ ಮಂಜೂರಾತಿ ಶುಲ್ಕ ವಸೂಲು ಮಾಡಲು ಪಾಲಿಕೆಗೆ ಅವಕಾಶ ನೀಡಬಾರದೆಂದು ಹತ್ತಕ್ಕೂ ಹೆಚ್ಚು ಪ್ರತಿಷ್ಟಿತ ಬಿಲ್ಡರ್ ಗಳಿಂದ ಉಚ್ಛ ನ್ಯಾಯಾಲಯದಲ್ಲಿ 10 ಕ್ಕೂ ಹೆಚ್ಚು PIL ಗಳು ಸಲ್ಲಿಕೆಯಾಗಿತ್ತು. ಎಲ್ಲ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಗಳನ್ನು ಒಂದುಗೂಡಿಸಿ (WP # 4601/2020) ನ್ಯಾಯಾಲಯದ ವಿಚಾರಣೆ ನಡೆಸಿ ತೀರ್ಪು ನೀಡಿತ್ತು.”

“ಹೈಕೋರ್ಟ್ ನಲ್ಲಿ ವಿಚಾರಣೆ ಸಂದರ್ಭದಲ್ಲಿ ಬಿಬಿಎಂಪಿ ಕಾನೂನು ಕೋಶದ ಅತ್ಯಂತ ದುರ್ಬಲ ವಕೀಲರು ಸೂಕ್ತ ದಾಖಲಾತಿಗಳನ್ನು ನ್ಯಾಯಾಲಯಕ್ಕೆ ಒದಗಿಸದೆ ಮತ್ತು ಅಂಕಿ ಅಂಶಗಳ ಸಹಿತ ವಾಸ್ತವ ಸಂಗತಿಗಳನ್ನು ನ್ಯಾಯಾಧೀಶರಿಗೆ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದ್ದರು.”

“ಪಾಲಿಕೆಯ ವಕೀಲರ ಉದಾಸೀನ ಮತ್ತು ವಸ್ತು ಸ್ಥಿತಿಯ ವಾಸ್ತವ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸದೇ ಇರುವ ಕಾರಣ ಉಚ್ಛ ನ್ಯಾಯಾಲಯದಲ್ಲಿ ಪಾಲಿಕೆಗೆ ತೀವ್ರ ಹಿನ್ನಡೆಯಾಗಿತ್ತು” ಎಂದು ಅವರು ಹೇಳಿದ್ದಾರೆ

“ಆಗಸ್ಟ್ 4ರಂದು “ನ್ಯಾಯಾಲಯದ ಮುಂದಿನ ಆದೇಶದವರೆಗೆ ಪಾಲಿಕೆಯು ಬಿಲ್ಡರ್ ಗಳಿಂದ ನಕ್ಷೆ ಮಂಜೂರಾತಿ ಶುಲ್ಕ ವಸೂಲಿ ಮಾಡುವಂತಿಲ್ಲ” ಎಂದು ನ್ಯಾಯಾಲಯದ ಆದೇಶ ನೀಡಿತ್ತು.”

“ಉಚ್ಛ ನ್ಯಾಯಾಲಯದ ಆದೇಶದಿಂದ ಪಾಲಿಕೆಯ ಆರ್ಥಿಕ ವ್ಯವಸ್ಥೆಗೆ ದೊಡ್ಡ ಹೊಡೆತ ಬೀಳುತ್ತದೆ ಎಂಬ ಅಂಶ ಅರಿವಿದ್ದರೂ ಸಹ ಮುಖ್ಯ ಆಯುಕ್ತರಾದ ಗೌರವಗುಪ್ತಾ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ” ಎಂದು ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಮುಖ್ಯ ಆಯುಕ್ತರ ಬದಲಾವಣೆಗೆ ಸಿಎಂ ಗೆ ಆಗ್ರಹ :

ನಿರಂತರವಾಗಿ ಹಲವಾರು ಆರೋಪಗಳಿಗೆ ಗುರಿಯಾಗುತ್ತಿರುವ ಗೌರವ್ ಗುಪ್ತಾರನ್ನು ಕೂಡಲೇ ಪಾಲಿಕೆಯ ಮುಖ್ಯ ಆಯುಕ್ತರ ಸ್ಥಾನದಿಂದ ಬದಲಿಸಲು ಮುಖ್ಯಮಂತ್ರಿಗಳನ್ನು ಅವರು ಆಗ್ರಹಿಸಿದ್ದಾರೆ. ಈ ಬಗ್ಗೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ಬೆಂಗಳೂರು ವೈರ್ ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಸಿದರೂ ಪ್ರತಿಕ್ರಿಯೆಗೆ ಲಭ್ಯವಾಗಲಿಲ್ಲ.

ಹೈಕೋರ್ಟ್ ನಲ್ಲಿ ತೀರ್ಪು ಪ್ರಶ್ನಿಸಲು ಅಥವಾ ತಡೆಯಾಜ್ಞೆ ತೆಗೆದುಕೊಳ್ಳಲು ಎಸಿಎಸ್ ಗೆ ಆಗ್ರಹ :

ವಿಭಾಗೀಯ ಪೀಠದಲ್ಲಿ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಲು ಅಥವಾ ಅದಕ್ಕೆ ತಡೆಯಾಜ್ಞೆ ತೆಗೆದುಕೊಳ್ಳಲು ಹತ್ತಾರು ಅವಕಾಶಗಳಿದ್ದರೂ ಸಹ ಪಾಲಿಕೆಯ ಆರ್ಥಿಕ ಹಿತಾಸಕ್ತಿಯನ್ನು ಚೀಫ್ ಕಮಿಷನರ್ ಮರೆತಿದ್ದಾರೆ. ಹಿರಿಯ ಅನುಭವೀ ವಕೀಲರನ್ನು ಕೂಡಲೇ ಈ ಪ್ರಕರಣದಲ್ಲಿ ನಿಯೋಜಿಸಿ ಪಾಲಿಕೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಪಾಲಿಕೆಯ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರನ್ನು ಒತ್ತಾಯಿಸಿದ್ದಾರೆ.

WhatsApp Join our WhatsApp Channel
Previous Post

ACB RAID NEWS | ಬೆಂಗಳೂರು ಸೇರಿದಂತೆ ರಾಜ್ಯದ 68 ಕಡೆಗಳಲ್ಲಿ ಎಸಿಬಿ ಪೊಲೀಸರಿಂದ ಭ್ರಷ್ಟರ ಬೇಟೆ

Next Post

Crime News | ಆ ಭ್ರಷ್ಟ ಅಧಿಕಾರಿಗಳ ಬಳಿಯಿತ್ತಂತೆ ಬಲ್ಲ ಆದಾಯ ಮೂಲಕ್ಕಿಂತ ಶೇ.77 ರಿಂದ ಶೇ.879 ಪಟ್ಟು ಹೆಚ್ಚು ಅಕ್ರಮ ಆಸ್ತಿ…!!

Next Post

Crime News | ಆ ಭ್ರಷ್ಟ ಅಧಿಕಾರಿಗಳ ಬಳಿಯಿತ್ತಂತೆ ಬಲ್ಲ ಆದಾಯ ಮೂಲಕ್ಕಿಂತ ಶೇ.77 ರಿಂದ ಶೇ.879 ಪಟ್ಟು ಹೆಚ್ಚು ಅಕ್ರಮ ಆಸ್ತಿ...!!

Bangalore Earthquake | ಬೆಂಗಳೂರಿನ ಕೆಲವು ಕಡೆ ಸಾರ್ವಜನಿಕರಿಗೆ ಭಾರೀ ಶಬ್ದದ ಜೊತೆ ಭೂಕಂಪನದ ಅನುಭವ....!

Please login to join discussion

Like Us on Facebook

Follow Us on Twitter

Recent News

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026

ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

April 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group