Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Covid19 News | ರಾಜ್ಯದಲ್ಲಿ 45 ಲಕ್ಷ ಜನರು ಇನ್ನೂ ಕೋವಿಡ್ ಎರಡನೇ ಲಸಿಕೆಯನ್ನೇ ಪಡೆದಿಲ್ಲ….!

ಕೋವಿಡ್ ನ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

by Bengaluru Wire Desk
November 27, 2021
in News Wire
Reading Time: 1 min read
0

ಬೆಂಗಳೂರು, ನ.27 (www.bengaluruwire.com) :
ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ (Omicron Variant) ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆ ಎಲ್ಲರೂ ಪಡೆದು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು (New Varient Virus) ಕಾಣಿಸಿದೆ. ಆದರೆ ರಾಜ್ಯದಲ್ಲಿ ಎಲ್ಲೂ ಇದು ಕಂಡುಬಂದಿಲ್ಲ. ಇದಕ್ಕಾಗಿ ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ.

ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಕೂಡ, ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಿ, ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ವಿಮಾನ ನಿಲ್ದಾಣದಲ್ಲಿ ಸೂಕ್ತ ಮಾರ್ಗಸೂಚಿ ಬಿಡುಗಡೆ

ಸಾಂದರ್ಭಿಕ ಚಿತ್ರ

ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್ ನ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದರು.

ಕೋವಿಡ್ ವೈರಸ್ 25 ಬಗೆಯ ರೂಪಾಂತರಿ ಹೊಂದಿದೆ :

ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ ಎಂದು ತಜ್ಞರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಈಗ ಕಂಡುಬಂದಿರುವ ಹೊಸ ವೈರಾಣು ಬಗ್ಗೆಯೂ ಅಧ್ಯಯನಗಳಾಗುತ್ತಿದೆ. ಹೊಸ ವೈರಾಣುವಿನ ಮೇಲೆ ಈಗಿನ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯಬೇಕಿದೆ. ಆದರೂ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕಿದೆ. ಜೊತೆಗೆ ಸುರಕ್ಷತಾ ನಿಯಮ ಪಾಲಿಸಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ವೈರಾಣುಗೆ ಓಮಿಕ್ರಾನ್ ಎಂಬ ಹೆಸರು ನೀಡಿದ್ದಾರೆ. ಇದು ಎಷ್ಟು ತೀವ್ರತೆ ಹೊಂದಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ ಎಂದರು.

ಔಷಧಿ ಖರೀದಿಗಾಗಿ ಜಿಲ್ಲೆಗಳಿಗೆ 38 ಕೋಟಿ ರೂ. ಹಂಚಿಕೆ :

ಔಷಧಿ ಖರೀದಿ ಕುರಿತು ಸಭೆ ನಡೆಸಲಾಗಿದೆ. ಔಷಧಿಗಾಗಿ ಸುಮಾರು 38 ಕೋಟಿ ರೂ. ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದೆ. ಕೋವಿಡ್ ನಿಂದಾಗಿ ಜನರಲ್ ಔಷಧಿಗಳನ್ನು ಖರೀದಿಸುವುದು ಈ ವರ್ಷ ಸ್ವಲ್ಪ ವಿಳಂಬವಾಗಿದೆ. ಕೋರ್ಟ್ ನಲ್ಲೂ ಪ್ರಕರಣ ಇದ್ದಿದ್ದರಿಂದ ಕೆಲ ಟೆಂಡರ್ ಗಳೂ ಆಗಿರಲಿಲ್ಲ. ಸ್ಥಳೀಯವಾಗಿಯೇ ಔಷಧಿ ಖರೀದಿಸಲು ಹಣ ನೀಡಲಾಗಿದೆ. ತಾಲೂಕು, ಜಿಲ್ಲಾಸ್ಪತ್ರೆ ಎಲ್ಲ ಆಸ್ಪತ್ರೆಗಳಲ್ಲಿ ಎರಡು ಮೂರು ದಿನಗಳಲ್ಲಿ ಔಷಧಿ ದೊರೆಯಲಿದೆ. ಯಾವುದೇ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

45 ಲಕ್ಷ ಜನರು ಇನ್ನೂ ಎರಡನೇ ಡೋಸ್ ಪಡೆದಿಲ್ಲ :

ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವ ವಿಚಾರದಲ್ಲಿ ಯಾರೂ ಉದಾಸೀನ ಮಾಡಬಾರದು. ಒಬ್ಬರಿಗೆ ಕೊರೊನಾ ಬಂದರೆ ಅದು ಇಡೀ ಕುಟುಂಬಕ್ಕೆ ಬರುವ ಸಾಧ್ಯತೆ ಇರುವುದರಿಂದ ಲಸಿಕೆ ಪಡೆಯಬೇಕು. ಮೂರನೇ ಅಲೆ ಬಂದಾಗ ಲಸಿಕೆ ಪಡೆಯದವರಿಗೆ ಸಮಸ್ಯೆಯಾಗಬಹುದು. ದೇಶದಲ್ಲಿ ಮೊದಲ ಡೋಸ್ ಸರಾಸರಿ ಶೇ.80 ಇದ್ದರೆ, ರಾಜ್ಯದಲ್ಲಿ ಶೇ.90 ಕ್ಕೂ ಅಧಿಕವಾಗಿದೆ. ಎರಡನೇ ಡೋಸ್ ನಲ್ಲಿ ದೇಶದ ಸರಾಸರಿ ಶೇ.42-43 ಇದ್ದು, ರಾಜ್ಯದಲ್ಲಿ ಶೇ.57 ಇದೆ. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಬೇಕು ಎಂದರು.

ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ :

ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ನಂತರ ಚರ್ಚೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಕಳೆದೆರಡು ವರ್ಷದಿಂದ ಅನೇಕ ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ ಬೇರೆ ದೇಶಗಳಲ್ಲಿ ಹೊಸ ವೈರಾಣು ಕಂಡುಬಂದಿರುವುದರಿಂದ ಪ್ರಧಾನಿಗಳು ಸಭೆ ನಡೆಸಲಿದ್ದಾರೆ ಎಂದರು.

ಧಾರವಾಡದ ಕಾಲೇಜಿನಲ್ಲಿ ಸಮಾರಂಭ ನಡೆದ ವೇಳೆ ಕೋವಿಡ್ ಹರಡಿದೆ ಎನ್ನಲಾಗಿದೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 281 ವಿದ್ಯಾರ್ಥಿಗಳ ಮಾದರಿ ಪಾಸಿಟಿವ್ ಆಗಿದೆ. ಇನ್ನೂ ಹಲವರ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಆದರೆ ಪಾಸಿಟಿವ್ ಆದವರಿಗೂ ಹೆಚ್ಚು ತೀವ್ರತೆ ಇಲ್ಲ. ಇದರಲ್ಲಿ ಕೆಲವನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗುವುದು. ಡಿಸೆಂಬರ್ ಆರಂಭದಲ್ಲಿ ಈ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ ಎಂದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW SPECIAL | Lokayukta News | ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ 76 ಪ್ಯಾಕೇಜ್ ಟೆಂಡರ್ ಗೋಲ್ ಮಾಲ್ –ಅಧಿಕಾರಿಗಳಿಗೆ ಬಿಸಿ ತುಪ್ಪವಾಗುತ್ತಾ ಲೋಕಾಯುಕ್ತ ಪ್ರಕರಣ?

Next Post

Covid New Varient | ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಕರೋನಾ ಸೋಂಕಿತ ಪ್ರಯಾಣಿಕರಲ್ಲಿ ಡೆಲ್ಟಾ ಪ್ಲಸ್ ವೈರಸ್ – ಜಿನೋಮೆ ಸೀಕ್ವೆನ್ಸ್ ಪರೀಕ್ಷಾ ವರದಿ

Next Post
ಸಾಂದರ್ಭಿಕ ಚಿತ್ರ

Covid New Varient | ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಕರೋನಾ ಸೋಂಕಿತ ಪ್ರಯಾಣಿಕರಲ್ಲಿ ಡೆಲ್ಟಾ ಪ್ಲಸ್ ವೈರಸ್ - ಜಿನೋಮೆ ಸೀಕ್ವೆನ್ಸ್ ಪರೀಕ್ಷಾ ವರದಿ

Kadalekai Parishe | ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆಗೆ ಚಾಲನೆ : ಐತಿಹಾಸಿಕ ಜಾತ್ರೆಗೆ ಕಳೆಗಟ್ಟಿದ ಸಂಭ್ರಮ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d