Friday, August 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ವಿಮೆ ಇಲ್ಲದ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ಇಲ್ಲ: ಸುಪ್ರೀಂ ಕೋರ್ಟ್ ಪೈಲೆಟ್ ಯೋಜನೆ ರೂಪಿಸಲು ಕೇಂದ್ರಕ್ಕೆ ಸೂಚನೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

  • Bengaluru Focus

    BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

    80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

    GBA News | ​ಕೆ.ಆರ್. ಮಾರುಕಟ್ಟೆ, ವಿಕ್ಟೋರಿಯಾ ಆಸ್ಪತ್ರೆ ಬಳಿಯ ಫುಟ್‌ಪಾತ್ ಒತ್ತುವರಿ ತೆರವು: 223 ಅಕ್ರಮ ಅಂಗಡಿಗಳ ನೆಲಸಮ

    ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಅಪಘಾತ: ಚಿಕಿತ್ಸೆ ಫಲಿಸದೆ ವಿವಿ ವಿದ್ಯಾರ್ಥಿನಿ ಮಾನಸ ಸಾವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

    Science News | ಪ್ರೊ. ಅನ್ನಪೂರ್ಣಿ ಸುಬ್ರಮಣ್ಯಂಗೆ ‘ಕಾಸ್ಪಾರ್ ವಿಕ್ರಮ್ ಸಾರಾಭಾಯ್’ ಪ್ರಶಸ್ತಿ: ಈ ಗೌರವ ಪಡೆದ ಮೊದಲ ಭಾರತೀಯ ಮಹಿಳೆ

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Covid19 News | ರಾಜ್ಯದಲ್ಲಿ 45 ಲಕ್ಷ ಜನರು ಇನ್ನೂ ಕೋವಿಡ್ ಎರಡನೇ ಲಸಿಕೆಯನ್ನೇ ಪಡೆದಿಲ್ಲ….!

ಕೋವಿಡ್ ನ ಹೊಸ ರೂಪಾಂತರಿ ವೈರಾಣು ನಿಯಂತ್ರಣಕ್ಕೆ ಕ್ರಮ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

by Bengaluru Wire Desk
November 27, 2021
in News Wire
Reading Time: 1 min read
0

ಬೆಂಗಳೂರು, ನ.27 (www.bengaluruwire.com) :
ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ (Omicron Variant) ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆ ಎಲ್ಲರೂ ಪಡೆದು ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ.

ಶನಿವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು (New Varient Virus) ಕಾಣಿಸಿದೆ. ಆದರೆ ರಾಜ್ಯದಲ್ಲಿ ಎಲ್ಲೂ ಇದು ಕಂಡುಬಂದಿಲ್ಲ. ಇದಕ್ಕಾಗಿ ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ.

ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಕೂಡ, ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಿ, ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ವಿಮಾನ ನಿಲ್ದಾಣದಲ್ಲಿ ಸೂಕ್ತ ಮಾರ್ಗಸೂಚಿ ಬಿಡುಗಡೆ

ಸಾಂದರ್ಭಿಕ ಚಿತ್ರ

ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್ ನ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದರು.

ಕೋವಿಡ್ ವೈರಸ್ 25 ಬಗೆಯ ರೂಪಾಂತರಿ ಹೊಂದಿದೆ :

ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ ಎಂದು ತಜ್ಞರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಈಗ ಕಂಡುಬಂದಿರುವ ಹೊಸ ವೈರಾಣು ಬಗ್ಗೆಯೂ ಅಧ್ಯಯನಗಳಾಗುತ್ತಿದೆ. ಹೊಸ ವೈರಾಣುವಿನ ಮೇಲೆ ಈಗಿನ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯಬೇಕಿದೆ. ಆದರೂ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕಿದೆ. ಜೊತೆಗೆ ಸುರಕ್ಷತಾ ನಿಯಮ ಪಾಲಿಸಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ವೈರಾಣುಗೆ ಓಮಿಕ್ರಾನ್ ಎಂಬ ಹೆಸರು ನೀಡಿದ್ದಾರೆ. ಇದು ಎಷ್ಟು ತೀವ್ರತೆ ಹೊಂದಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ ಎಂದರು.

ಔಷಧಿ ಖರೀದಿಗಾಗಿ ಜಿಲ್ಲೆಗಳಿಗೆ 38 ಕೋಟಿ ರೂ. ಹಂಚಿಕೆ :

ಔಷಧಿ ಖರೀದಿ ಕುರಿತು ಸಭೆ ನಡೆಸಲಾಗಿದೆ. ಔಷಧಿಗಾಗಿ ಸುಮಾರು 38 ಕೋಟಿ ರೂ. ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದೆ. ಕೋವಿಡ್ ನಿಂದಾಗಿ ಜನರಲ್ ಔಷಧಿಗಳನ್ನು ಖರೀದಿಸುವುದು ಈ ವರ್ಷ ಸ್ವಲ್ಪ ವಿಳಂಬವಾಗಿದೆ. ಕೋರ್ಟ್ ನಲ್ಲೂ ಪ್ರಕರಣ ಇದ್ದಿದ್ದರಿಂದ ಕೆಲ ಟೆಂಡರ್ ಗಳೂ ಆಗಿರಲಿಲ್ಲ. ಸ್ಥಳೀಯವಾಗಿಯೇ ಔಷಧಿ ಖರೀದಿಸಲು ಹಣ ನೀಡಲಾಗಿದೆ. ತಾಲೂಕು, ಜಿಲ್ಲಾಸ್ಪತ್ರೆ ಎಲ್ಲ ಆಸ್ಪತ್ರೆಗಳಲ್ಲಿ ಎರಡು ಮೂರು ದಿನಗಳಲ್ಲಿ ಔಷಧಿ ದೊರೆಯಲಿದೆ. ಯಾವುದೇ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

45 ಲಕ್ಷ ಜನರು ಇನ್ನೂ ಎರಡನೇ ಡೋಸ್ ಪಡೆದಿಲ್ಲ :

ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವ ವಿಚಾರದಲ್ಲಿ ಯಾರೂ ಉದಾಸೀನ ಮಾಡಬಾರದು. ಒಬ್ಬರಿಗೆ ಕೊರೊನಾ ಬಂದರೆ ಅದು ಇಡೀ ಕುಟುಂಬಕ್ಕೆ ಬರುವ ಸಾಧ್ಯತೆ ಇರುವುದರಿಂದ ಲಸಿಕೆ ಪಡೆಯಬೇಕು. ಮೂರನೇ ಅಲೆ ಬಂದಾಗ ಲಸಿಕೆ ಪಡೆಯದವರಿಗೆ ಸಮಸ್ಯೆಯಾಗಬಹುದು. ದೇಶದಲ್ಲಿ ಮೊದಲ ಡೋಸ್ ಸರಾಸರಿ ಶೇ.80 ಇದ್ದರೆ, ರಾಜ್ಯದಲ್ಲಿ ಶೇ.90 ಕ್ಕೂ ಅಧಿಕವಾಗಿದೆ. ಎರಡನೇ ಡೋಸ್ ನಲ್ಲಿ ದೇಶದ ಸರಾಸರಿ ಶೇ.42-43 ಇದ್ದು, ರಾಜ್ಯದಲ್ಲಿ ಶೇ.57 ಇದೆ. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಬೇಕು ಎಂದರು.

ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ :

ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ನಂತರ ಚರ್ಚೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಕಳೆದೆರಡು ವರ್ಷದಿಂದ ಅನೇಕ ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ ಬೇರೆ ದೇಶಗಳಲ್ಲಿ ಹೊಸ ವೈರಾಣು ಕಂಡುಬಂದಿರುವುದರಿಂದ ಪ್ರಧಾನಿಗಳು ಸಭೆ ನಡೆಸಲಿದ್ದಾರೆ ಎಂದರು.

ಧಾರವಾಡದ ಕಾಲೇಜಿನಲ್ಲಿ ಸಮಾರಂಭ ನಡೆದ ವೇಳೆ ಕೋವಿಡ್ ಹರಡಿದೆ ಎನ್ನಲಾಗಿದೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 281 ವಿದ್ಯಾರ್ಥಿಗಳ ಮಾದರಿ ಪಾಸಿಟಿವ್ ಆಗಿದೆ. ಇನ್ನೂ ಹಲವರ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಆದರೆ ಪಾಸಿಟಿವ್ ಆದವರಿಗೂ ಹೆಚ್ಚು ತೀವ್ರತೆ ಇಲ್ಲ. ಇದರಲ್ಲಿ ಕೆಲವನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗುವುದು. ಡಿಸೆಂಬರ್ ಆರಂಭದಲ್ಲಿ ಈ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ ಎಂದರು.

WhatsApp Join our WhatsApp Channel
Previous Post

BW SPECIAL | Lokayukta News | ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ 76 ಪ್ಯಾಕೇಜ್ ಟೆಂಡರ್ ಗೋಲ್ ಮಾಲ್ –ಅಧಿಕಾರಿಗಳಿಗೆ ಬಿಸಿ ತುಪ್ಪವಾಗುತ್ತಾ ಲೋಕಾಯುಕ್ತ ಪ್ರಕರಣ?

Next Post

Covid New Varient | ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಕರೋನಾ ಸೋಂಕಿತ ಪ್ರಯಾಣಿಕರಲ್ಲಿ ಡೆಲ್ಟಾ ಪ್ಲಸ್ ವೈರಸ್ – ಜಿನೋಮೆ ಸೀಕ್ವೆನ್ಸ್ ಪರೀಕ್ಷಾ ವರದಿ

Next Post
ಸಾಂದರ್ಭಿಕ ಚಿತ್ರ

Covid New Varient | ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಕರೋನಾ ಸೋಂಕಿತ ಪ್ರಯಾಣಿಕರಲ್ಲಿ ಡೆಲ್ಟಾ ಪ್ಲಸ್ ವೈರಸ್ - ಜಿನೋಮೆ ಸೀಕ್ವೆನ್ಸ್ ಪರೀಕ್ಷಾ ವರದಿ

Kadalekai Parishe | ಬಸವನಗುಡಿಯಲ್ಲಿ ಕಡಲೆಕಾಯಿ ಪರಿಷೆಗೆ ಚಾಲನೆ : ಐತಿಹಾಸಿಕ ಜಾತ್ರೆಗೆ ಕಳೆಗಟ್ಟಿದ ಸಂಭ್ರಮ

Please login to join discussion

Like Us on Facebook

Follow Us on Twitter

Recent News

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW EXCLUSIVE | ಉದ್ಘಾಟನೆಯಾದ ಒಂದೇ ತಿಂಗಳಿಗೆ ಕೆಂಪೇಗೌಡ ಬಡಾವಣೆ ಎಂಎಆರ್ ಫುಟ್ ಪಾತ್ ಕಳಪೆ ಕಾಮಗಾರಿ ಬಟಾಬಯಲು: ಬಿಡಿಎ ವಿರುದ್ಧ ಜನಾಕ್ರೋಶ

August 6, 2026

GI Tag | ಭಾರತದಲ್ಲಿ ಜಿಐ ಟ್ಯಾಗ್‌ ಕ್ರಾಂತಿ: ಪಟ್ಟಿಯಲ್ಲಿ ಕರ್ನಾಟಕಕ್ಕೆ 4ನೇ ಸ್ಥಾನ, ಚನ್ನಪಟ್ಟಣ ಬೊಂಬೆ ಸೇರಿ 49 ಉತ್ಪನ್ನಗಳಿಗೆ ಜಾಗತಿಕ ಮಾನ್ಯತೆ

August 6, 2026

80ನೇ ಸ್ವಾತಂತ್ರ್ಯ ದಿನಾಚರಣೆ: ಆಗಸ್ಟ್ 9ಕ್ಕೆ ವಿಧಾನಸೌಧದಲ್ಲಿ ಭಾರತೀಯ ವಾಯುಪಡೆ ಬ್ಯಾಂಡ್ ಸಂಭ್ರಮ

August 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group