Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW SPECIAL | Lokayukta News | ಬಿಬಿಎಂಪಿ ಘನತ್ಯಾಜ್ಯ ವಿಲೇವಾರಿ 76 ಪ್ಯಾಕೇಜ್ ಟೆಂಡರ್ ಗೋಲ್ ಮಾಲ್ –ಅಧಿಕಾರಿಗಳಿಗೆ ಬಿಸಿ ತುಪ್ಪವಾಗುತ್ತಾ ಲೋಕಾಯುಕ್ತ ಪ್ರಕರಣ?

10 ವರ್ಷಗಳ ಹಿಂದಿನ ಟೆಂಡರ್ ಅವ್ಯವಹಾರ ಪ್ರಕರಣ | ಮಾಜಿ ಮೇಯರ್ ಪಿ.ಆರ್.ರಮೇಶ್, ಅಧಿಕಾರಿಗಳು ಟೆಂಡರ್ ದಾಖಲೆ ತಿದ್ದಿ ಕಾಂಟ್ರಾಕ್ಟರ್ ಗಳಿಗೆ ಅನುಕೂಲ ಮಾಡಿಕೊಟ್ಟಿದ್ದರೆಂದು ಆರೋಪಿಸಿ 2013ರಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು | ಹಲವು ವರ್ಷಗಳ ಕಾಲ ವಿಚಾರಣೆ ನಡೆದರೂ ಈತನಕ ಸೂಕ್ತ ದಾಖಲೆ ಸಲ್ಲಿಸಿದ ಪಾಲಿಕೆ |ಲೋಕಾಯುಕ್ತ ಪೊಲೀಸರಿಂದ ಪಾಲಿಕೆಗೆ ನೋಟಿಸ್ ಜಾರಿ

by Bengaluru Wire Desk
November 27, 2021
in Bengaluru Focus, BW Special
Reading Time: 2 mins read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ 10 ವರ್ಷಗಳ ಹಿಂದಿನ ನಗರದ ಘನತ್ಯಾಜ್ಯ ವಿಲೇವಾರಿ ಟೆಂಡರ್ ನಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತದಲ್ಲಿ ಆಗ ದಾಖಲಾಗಿದ್ದ ಪ್ರಕರಣ, ಪಾಲಿಕೆ ಹಾಗೂ ರಾಜ್ಯ ಸರ್ಕಾರದಲ್ಲಿ ಅಂದು ಕಾರ್ಯನಿರ್ವಹಿಸುತ್ತಿದ್ದ ಎಂಜಿನಿಯರ್ ಹಾಗೂ ಅಧಿಕಾರಿಗಳಿಗೆ ಈಗ ಬಿಸಿತುಪ್ಪವಾಗಿ ಪರಿಣಮಿಸಲಿದೆ.

ಲೋಕಾಯುಕ್ತದಲ್ಲಿ ದಾಖಲಾದ ಈ ಪ್ರಕರಣದ ತನಿಖೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ಲೋಕಾಯುಕ್ತ ನ್ಯಾಯಾಲಯ ಮೌಖಿಕ ಆದೇಶದ ಹಿನ್ನಲೆಯಲ್ಲಿ ಲೋಕಾಯುಕ್ತ ಪೊಲೀಸರು, ತನಿಖೆ ಸಂಬಂಧ ಸೂಕ್ತ ದಾಖಲೆ ನೀಡುವಂತೆ ಪಾಲಿಕೆಗೆ ನೋಟಿಸ್ ನೀಡಿದ್ದಾರೆ.

ಡಿವೈಎಸ್ ಪಿ ಕೆ.ಎಂ.ರಮೇಶ್ ಅ.11ರಂದು ಈ ಬಗ್ಗೆ ಬಿಬಿಎಂಪಿಯ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರೋಜ್ ಖಾನ್ ಅವರಿಗೆ ಈ ನೋಟಿಸ್ ರವಾನಿಸಿದ್ದಾರೆ. ಸಿಆರ್ ಪಿಸಿ ಕಲಂ 91ರ ಅನ್ವಯ ಈ ನೋಟಿಸ್ ನೀಡಿದ್ದು, ತನಿಖೆಗೆ ಅಗತ್ಯವಾದ ದಾಖಲೆಗಳನ್ನು ಆದ್ಯತೆ ಮೇರೆಗೆ ಒದಗಿಸುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ. ಈ ನೋಟಿಸ್ ನ ಪ್ರತಿ ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಲೋಕಾಯುಕ್ತ ಪೊಲೀಸ್ ಯಾವ್ಯಾವ ದಾಖಲೆ ಕೋರಿದೆ?

ಘನತ್ಯಾಜ್ಯ ವಿಲೇವಾರಿ ಮತ್ತು ಸಂಗ್ರಹಣೆಗಾಗಿ ಕರೆಯಲಾಗಿದ್ದ 76 ಪ್ಯಾಕೇಜ್ ಗಳಿಗೆ ಸಂಬಂಧಿಸಿದಂತೆ 5.02.2011ರಂದು ನಡೆದ ಬಿಬಿಎಂಪಿ ಸಭೆಯ ನಿರ್ಣಯದ ಧೃಢೀಕೃತ ಪ್ರತಿ, ಕಸದ ಟೆಂಡರ್ ಅವ್ಯವಹಾರ ನಡೆದಿದೆ ಎನ್ನಲಾದ ದೂರಿನ ಪ್ರಮುಖ ದಾಖಲೆಯಾದ 2011-12ನೇ ಸಾಲಿನ ಟೆಂಡರ್ ಅಧಿಸೂಚನೆಯ ಮಾಸ್ಟರ್ ಫೈಲ್ ಅಸಲು ಕಡತ ನೀಡುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಅಲ್ಲದೆ 2011-12 ಹಾಗೂ 2012-13ರಲ್ಲಿ ಬಿಬಿಎಂಪಿ ಆಯುಕ್ತರು “ಹಣಕಾಸು ವ್ಯವಹಾರ ನಡೆಸಲು ಅಧಿಕಾರ ಪ್ರತ್ಯಾಯೋಜನೆ” ಸಂಬಂಧ ಹೊರಡಿಸಿದ ಆದೇಶದ ಧೃಢೀಕೃತ ಪ್ರತಿ, ಈ ಅವಧಿಯಲ್ಲಿ ಬಿಬಿಎಂಪಿ ಕಮಿಷನರ್ ಗೆ ತಾಂತ್ರಿಕ ಸಹಾಯಕರಾಗಿದ್ದವರ ಹೆಸರು, ಹುದ್ದೆ, ವಿಳಾಸ, ಅವರು ಕಾರ್ಯನಿರ್ವಹಿಸಿದ ಅವಧಿ, ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳ, ಒಂದೊಮ್ಮೆ ನಿವೃತ್ತರಾಗಿದ್ದರೆ ಅದರ ಸಂಪೂರ್ಣ ವಿವರ ನೀಡುವಂತೆ ತಿಳಿಸಲಾಗಿದೆ.

ಇದಲ್ಲದೆ 2010ರಿಂದ 2015ನೇ ಸಾಲಿನ ತನಕ ಬಿಬಿಎಂಪಿ ಆಯುಕ್ತರಾಗಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳ ವಿವರ, ಅಧಿಕಾರ ಸ್ವೀಕರಿಸಿದ ಹಾಗೂ ನಿರ್ಗಮಿಸಿದ ವಿವರ. 18-09-2012ರಂದು 76 ಕಸದ ಪ್ಯಾಕೇಜ್ ಟೆಂಡರ್ ಗೆ ಸಂಬಂಧಪಟ್ಟಂತೆ ಆ ಟೆಂಡರ್ ಕರೆದಿದ್ದ ಕಾರ್ಯನಿರ್ವಾಕ ಎಂಜಿನಿಯರ್, ಸೂಪರಿಟೆಂಡೆಂಟ್ ಎಂಜಿನಿಯರ್ ಗಳು ಪ್ಯಾಕೇಜ್ ವಾರು ಹಾಗೂ ಪಾಲಿಕೆ ವಲಯವಾರು ಮಾಹಿತಿ ನೀಡುವಂತೆ ಡಿವೈಎಸ್ ಪಿ ಕೆ.ಎಂ.ರಮೇಶ್ ಆ ನೋಟಿಸ್ ನಲ್ಲಿ ಹೇಳಿದ್ದಾರೆ.

ಲೋಕಾಯುಕ್ತ ಡಿವೈಎಸ್ ಪಿ ಕೆ.ಎಂ.ರಮೇಶ್ ಅವರು ಬಿಬಿಎಂಪಿಗೆ ನೀಡಿದ ನೋಟಿಸ್ ದಾಖಲೆ

ಲೋಕಾಯುಕ್ತ ಪೊಲೀಸರ ಕೆಂಗಣ್ಣಿಗೆ ಗುರಿಯಾದ ಪಾಲಿಕೆ :

2013ರಲ್ಲಿ ಲೋಕಾಯುಕ್ತದಲ್ಲಿ ಕಸದ ಟೆಂಡರ್ ಅವ್ಯವಹಾರ ಸಂಬಂಧ ದೂರು ದಾಖಲಾಗಿ 10 ವರ್ಷ ಕಳೆದರೂ ಲೋಕಾಯುಕ್ತ ಪೊಲೀಸರು ಕೋರಿದ ಸೂಕ್ತ ದಾಖಲೆಗಳನ್ನು ಬಿಬಿಎಂಪಿಯ ಅಧಿಕಾರಿಗಳು ಈತನಕ ಒದಗಿಸಿರಲಿಲ್ಲ. ಹಾಗಾಗಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಪಾಲಿಕೆಯ ಘನತ್ಯಾಜ್ಯ ಅಧಿಕಾರಿಗಳಿಗೆ, ತಾವೇ ಕಾನೂನು ರೀತ್ಯ ಕಚೇರಿಗಳಿಗೆ ದಾಳಿ ನಡೆಸಿ ದಾಖಲೆ ವಶಪಡಿಸಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದಾಗಿ ಅಧಿಕೃತ ಮೂಲಗಳು ತಿಳಿಸಿವೆ. ಈ ಹಿನ್ನಲೆಯಲ್ಲಿ ಪಾಲಿಕೆ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರೋಜ್ ಖಾನ್ ನ.23ರಂದು ಪಾಲಿಕೆ ವಿವಿಧ ವಿಭಾಗಗಳು, ಶಾಖೆಗಳಿಂದ ಲೋಕಾಯುಕ್ತ ಪೊಲೀಸರು ಕೋರಿರುವ ದಾಖಲೆಗಳನ್ನು ನೀಡಲು ನೋಡಲ್ ಅಧಿಕಾರಿಗಳನ್ನು ನೇಮಿಸಿದ್ದಾರೆ. ಈ ಅಧಿಕಾರಿಗಳು ಅದ್ಯಾವ ಕಾಲಕ್ಕೆ ಲೋಕಾಯುಕ್ತಕ್ಕೆ ದಾಖಲೆ ನೀಡುತ್ತಾರೊ ಗೊತ್ತಿಲ್ಲ.

ಕಸದ ಟೆಂಡರ್ ಗೋಲ್ ಮಾಲ್? ಇತಿಹಾಸ :

2011-12 ಹಾಗೂ 2012-13ನೇ ಸಾಲಿನಲ್ಲಿ ಬಿಬಿಎಂಪಿಯ ವಿವಿಧ ವಲಯಗಳಲ್ಲಿ ನಗರದ ಘನತ್ಯಾಜ್ಯ ವಿಲೇವಾರಿ ಮಾಡಲು 76 ಪ್ಯಾಕೇಜ್ ಗಳಲ್ಲಿ ಟೆಂಡರ್ ಕರೆದು ಗುತ್ತಿಗೆದಾರರಿಗೆ ಟೆಂಡರ್ ಹಂಚಿಕೆ ಮಾಡಲಾಗಿತ್ತು. ನೂರಾರು ಕೋಟಿ ರೂಪಾಯಿ ಮೌಲ್ಯದ ಘನತ್ಯಾಜ್ಯ ವಿಲೇವಾರಿ ಹಾಗೂ ಸಂಗ್ರಹಣೆಯಲ್ಲಿ ಕರೆದಿರುವ ಟೆಂಡರ್ ನಲ್ಲಿ ಅವ್ಯವಹಾರ ನಡೆದಿತ್ತು ಎಂದು ಮಾಜಿ ಮೇಯರ್ ಪಿ.ಆರ್.ರಮೇಶ್ 2013ರ ಜನವರಿಯಲ್ಲಿ ಲೋಕಾಯುಕ್ತ ಸಂಸ್ಥೆಗೆ ದೂರು ನೀಡಿದ್ದರು.

ಕಸದ ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು ಟೆಂಡರ್ ದಾಖಲೆಯನ್ನೇ ತಿದ್ದಿ ಅವ್ಯವಹಾರ ಮಾಡಲಾಗಿತ್ತು ಎಂದು ಬಿಬಿಎಂಪಿಯಲ್ಲಿ ಆಗ ಆಯುಕ್ತರಾಗಿದ್ದ ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಮಿತ ಪ್ರಸಾದ್ ಮತ್ತು ಇತರ 8 ಮಂದಿಯು ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಟ್ಟಿದ್ದರು ಎಂದು ಪಿ.ಆರ್.ರಮೇಶ್ ದೂರು ನೀಡಿದ್ದರು.

ಟೆಂಡರ್ ದಾಖಲೆಯಲ್ಲಿ ಶೇ.100ರಷ್ಟು ಕಸ ಸಂಗ್ರಹಿಸಿ ವಿಲೇವಾರಿ ಮಾಡಬೇಕೆನ್ನುವ ಷರತ್ತು ವಿಧಿಸಲಾಗಿತ್ತು. ಬಳಿಕ ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮೀಲಾಗಿ, ನಗರದಲ್ಲಿ ಆಯಾ ಭಾಗಗಳಲ್ಲಿ ಕಸ ವಿಂಗಡಿಸುವ ಸ್ಥಳದಿಂದ ಶೇ.30ರಷ್ಟು ಒಣಕಸವನ್ನು ಸಂಗ್ರಹಿಸಿ ಕಾಂಟ್ರಾಕ್ಟರ್ ಗಳು ತಮಗಿಷ್ಟ ಬಂದಂತೆ ಮಾರಾಟ ಮಾಡುವ ಅವಕಾಶ ನೀಡುವ ಅಂಶವನ್ನು ಟೆಂಡರ್ ದಾಖಲೆಯಲ್ಲಿ ಸೇರ್ಪಡೆ ಮಾಡಲಾಗಿತ್ತು.

“ಗುತ್ತಿಗೆದಾರರು ಪಾಲಿಕೆ ವ್ಯಾಪ್ತಿಯಲ್ಲಿ ಆ ಘನತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಿದ್ದಕ್ಕೆ ಬಿಬಿಎಂಪಿಯು ಕಾಂಟ್ರಾಕ್ಟರ್ ಗಳಿಗೆ ಹಣ ಪಾವತಿಸುವ ವಿಧಾನವನ್ನು ಟೆಂಡರ್ ದಾಖಲೆಯಲ್ಲಿ ಮಾರ್ಪಡಿಸಿ, ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡಲು ಗುತ್ತಿಗೆದಾರ ಕಸ ವಿಂಗಡಣೆ ಸ್ಥಳದಿಂದ ಒಣಕಸ ಸಂಗ್ರಹಿಸಿ, ಮಾರಾಟಕ್ಕೆ ಅವಕಾಶ ಕಲ್ಪಿಸಲು ಟೆಂಡರ್ ದಾಖಲೆಯನ್ನು ತಿದ್ದಲಾಗಿತ್ತು. ಒಣಕಸ ಮಾರಾಟ ಮಾಡಿದರೆ ಪ್ರತಿ ಕೆಜಿಗೆ 10 ರೂ. ಲಭಿಸುತ್ತಿತ್ತು. ಒಬ್ಬ ಗುತ್ತಿಗೆದಾರ ಪ್ರತಿದಿನ ಈ ರೀತಿ ಒಣಕಸ ಮಾರಾಟದಿಂದ ಬರೋಬ್ಬರಿ 1 ಕೋಟಿ ರೂ. ಸಂಪಾದಿಸುವಂತಾಗುತ್ತಿತ್ತು. ಇದು ಬಿಬಿಎಂಪಿಯ ನಿಶ್ಚಿತ ಆದಾಯಕ್ಕೆ ಕೊಡಲಿ ಪೆಟ್ಟು ನೀಡಿದಂತಾಗಿತ್ತು. ಹಾಗಾಗಿ ಇದರಲ್ಲಿ ಅವ್ಯವಹಾರ ನಡೆದಿರುವ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ಸಂಸ್ಥೆಗೆ ನಾನು ಹಿಂದೆ ದೂರು ನೀಡಿದ್ದೆ” ಎಂದು ಹೇಳಿದ್ದಾರೆ ಮಾಜಿ ಮೇಯರ್ ಪಿ.ಆರ್.ರಮೇಶ್.

ಲೋಕಾಯುಕ್ತ ಪ್ರಕರಣ ಇತ್ಯರ್ಥ ವಿಳಂಬಕ್ಕೆ ಬೇಸರ :

 ಲೋಕಾಯುಕ್ತ ಸಂಸ್ಥೆಯಲ್ಲಿ 10 ವರ್ಷಗಳ ಹಿಂದೆ ದಾಖಲಾದ ಪ್ರಕರಣಕ್ಕೆ ಇನ್ನು ಮುಕ್ತಿ ಸಿಕ್ಕಿಲ್ಲ. ಇದು ಕೇವಲ ಇದೊಂದೇ ಪ್ರಕರಣವಲ್ಲ, ಲೋಕಾಯುಕ್ತ ಸಂಸ್ಥೆಯಲ್ಲಿ ಹೀಗೆ ಸಾವಿರಾರು ಪ್ರಕರಣಗಳು ಹಲವು ವರ್ಷಗಳು ಕಳೆದರೂ ಇತ್ಯರ್ಥವಾಗದೇ ನ್ಯಾಯಕ್ಕಾಗಿ ನಾಗರೀಕರು ಮೂಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ. ಇನ್ನಾದರೂ ಲೋಕಾಯುಕ್ತ ಸಂಸ್ಥೆಯು ಕಾನೂನು ರೀತ್ಯ ಕ್ಷಿಪ್ರವಾಗಿ ನ್ಯಾಯದಾನ ಮಾಡುವ ಕಾರ್ಯವನ್ನು ಕೈಗೊಳ್ಳಲಿ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Bangalore Earthquake | ಬೆಂಗಳೂರಿನ ಕೆಲವು ಕಡೆ ಸಾರ್ವಜನಿಕರಿಗೆ ಭಾರೀ ಶಬ್ದದ ಜೊತೆ ಭೂಕಂಪನದ ಅನುಭವ….!

Next Post

Covid19 News | ರಾಜ್ಯದಲ್ಲಿ 45 ಲಕ್ಷ ಜನರು ಇನ್ನೂ ಕೋವಿಡ್ ಎರಡನೇ ಲಸಿಕೆಯನ್ನೇ ಪಡೆದಿಲ್ಲ….!

Next Post

Covid19 News | ರಾಜ್ಯದಲ್ಲಿ 45 ಲಕ್ಷ ಜನರು ಇನ್ನೂ ಕೋವಿಡ್ ಎರಡನೇ ಲಸಿಕೆಯನ್ನೇ ಪಡೆದಿಲ್ಲ....!

ಸಾಂದರ್ಭಿಕ ಚಿತ್ರ

Covid New Varient | ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರು ಕರೋನಾ ಸೋಂಕಿತ ಪ್ರಯಾಣಿಕರಲ್ಲಿ ಡೆಲ್ಟಾ ಪ್ಲಸ್ ವೈರಸ್ - ಜಿನೋಮೆ ಸೀಕ್ವೆನ್ಸ್ ಪರೀಕ್ಷಾ ವರದಿ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d