Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Mi-17 Chopper Crash News Update | Mi-17 ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ಏರ್ ಮಾರ್ಷಲ್ ನೇತೃತ್ವದಲ್ಲಿ ತನಿಖೆ ಆರಂಭ

ತನಿಖೆ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಂಸತ್ ನಲ್ಲಿ ಹೇಳಿಕೆ | ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿಗೆ ಶಿಫ್ಟ್ | ಅಪಘಾತಕ್ಕೀಡಾದ ಹೆಲಿಕಾಪ್ಟರ್ ನ ಬ್ಲಾಕ್ ಬಾಕ್ಸ್ ಪತ್ತೆ‌ | ಯಾರಾಗಲಿದ್ದಾರೆ ದೇಶದ ಮುಂದಿನ ಸಿಡಿಎಸ್ ಹುದ್ದೆಗೇರುವ ಅಧಿಕಾರಿ? |

by Bengaluru Wire Desk
December 9, 2021
in News Wire
Reading Time: 2 mins read
0

ನವದೆಹಲಿ, (www.bengaluruwire.com) :
ತಮಿಳುನಾಡಿನ ನೀಲಗಿರಿ ಬೆಟ್ಟದ ಕೊನೂರು ಜಿಲ್ಲೆಯಲ್ಲಿ ಬುಧವಾರ ಸೇನಾ ಹೆಲಿಕಾಪ್ಟರ್ ನಲ್ಲಿ ತೆರಳುತ್ತಿದ್ದಾಗ ಜನರಲ್ ಬಿಪಿನ್ ರಾವತ್ ಸೇರಿ 13 ಮಂದಿ ಹೆಲಿಕಾಪ್ಟರ್ ದುರಂತದಿಂದ ದಾರುಣ ಸಾವನ್ನಪ್ಪಿರುವುದು ದೇಶದ ರಕ್ಷಣಾ ವ್ಯವಸ್ಥೆಗೆ ತುಂಬಲಾರದ ನಷ್ಟವಾಗಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್

ಈ ದುರ್ಘಟನೆ ಕುರಿತಂತೆ ಮೂರು ಸ್ಟಾರ್ ಹೊಂದಿದ ಏರ್ ಮಾರ್ಷಲ್ ನೇತೃತ್ವದಲ್ಲಿ Mi-17 ಸೇನಾ ಹೆಲಿಕಾಪ್ಟರ್ ದುರಂತದ ಬಗ್ಗೆ ತನಿಖೆ ನಡೆಯಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರ ಲೋಕಸಭೆಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಜನರಲ್ ಬಿಪಿನ್ ರಾವತ್

ಜನರಲ್ ಬಿಪಿನ್ ರಾವತ್ ಅವರ ಅಂತ್ಯಸಂಸ್ಕಾರವನ್ನು ಸಕಲ ಮಿಲಿಟರಿ ಗೌರವದೊಂದಿಗೆ ನೆರವೇರಿಸಲಾಗುತ್ತದೆ. ಅದೇ ರೀತಿ ಉಳಿದ ಸೇನಾ ಸಿಬ್ಬಂದಿ ಅಂತ್ಯಸಂಸ್ಕಾರವನ್ನು ಸೂಕ್ತ ಮಿಲಿಟರಿ ಗೌರವ ದೊಂದಿಗೆ ಪೂರೈಸಲಾಗುವುದು ಎಂದು ಸಂಸತ್ ನಲ್ಲಿ ಸಚಿವ ರಾಜನಾಥ್ ಸಿಂಗ್ ವಿವರಿಸಿದ್ದಾರೆ.

ಹಲವು ಮಾಧ್ಯಮ ವರದಿಗಳ ಪ್ರಕಾರ ಏರ್ ಮಾರ್ಷಲ್ ಮನವೇಂದ್ರ ಸಿಂಗ್ ಮೂರು ಪಡೆಗಳ ನೇತೃತ್ವವಹಿಸಿ ಬುಧವಾರದ ಹೆಲಿಕಾಪ್ಟರ್ ದುರಂತದ ತನಿಖೆ ನಡೆಸಲಿದ್ದಾರೆ ಎಂದು ಹೇಳಿವೆ. ಏರ್ ಮಾರ್ಷಲ್ ಮನವೇಂದ್ರ ಸಿಂಗ್ ಪ್ರಸ್ತುತ ಭಾರತೀಯ ವಾಯುಪಡೆಯ ತರಬೇತಿ ಕಮಾಂಡ್ ನ ಕಮಾಂಡರ್ ಹಾಗೂ ಹೆಲಿಕಾಪ್ಟರ್ ಪೈಲೆಟ್ ಕೂಡ ಆಗಿದ್ದಾರೆ.

ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬೆಂಗಳೂರಿಗೆ ಶಿಫ್ಟ್

ಅಪಘಾತದಲ್ಲಿ ಬದುಕಿಳಿದಿದ್ದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಏರ್ ಫೋರ್ಸ್ ಕಮಾಂಡ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ. ಶೌರ್ಯ ಚಕ್ರ ಪ್ರಶಸ್ತಿ ವಿಜೇತ ವರುಣ್ ಸಿಂಗ್ ಬುಧವಾರ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸಿಲುಕಿದ್ದ 14 ಮಂದಿಯ ಪೈಕಿ ಬದುಕುಳಿದ ಏಕೈಕ ವ್ಯಕ್ತಿಯಾಗಿದ್ದಾರೆ.

ಅಪಘಾತಕ್ಕೀಡಾದ ಹೆಲಿಕಾಪ್ಟರ್ ಬ್ಲಾಕ್ ಬಾಕ್ಸ್ ಪತ್ತೆ‌ :

ಬುಧವಾರ ಮಧ್ಯಾಹ್ನ ವೆಲ್ಲಿಂಗ್ಟನ್ ಸೇನಾ ಕಾಲೇಜಿನತ್ತ ಹೊರಟಿದ್ದ Mi-17VH ಸೇನಾ ಹೆಲಿಕಾಪ್ಟರ್ ಹೊತ್ತಿಯುರಿದು ಜನರಲ್ ಬಿಪಿಎನ್ ರಾವತ್ ಸೇರಿದಂತೆ 13 ಮಂದಿಯು ಸಾವನ್ನಪಿದ್ದರು. ಆ ಹೆಲಿಕಾಪ್ಟರ್ ನಲ್ಲಿ ದುರಂತಕ್ಕೀಡಾದ ಸಮಯದಲ್ಲಿನ‌ ಮಹತ್ವದ ಮಾಹಿತಿ ಹೊಂದಿದ್ದ ಬ್ಲಾಕ್ ಬಾಕ್ಸ್ (ಕಪ್ಪು ಪೆಟ್ಟಿಗೆ) ಅನ್ನು ದುರಂತಕ್ಕೀಡಾದ ಸ್ಥಳದಿಂದ 300 ರಿಂದ 1 ಕಿ.ಮೀ ವ್ಯಾಪ್ತಿಯಲ್ಲಿ ತೀವ್ರ ಶೋಧ ನಡೆಸಿದಾಗ ಪತ್ತೆಯಾಗಿದೆ.

ಬ್ಲಾಕ್ ಬಾಕ್ಸ್ ನಲ್ಲಿ ಏನಿರುತ್ತದೆ?

ಸಾಂದರ್ಭಿಕ ಚಿತ್ರ

ಇದರ ಜೊತೆಗೆ ಸೇನಾ ಹೆಲಿಕಾಪ್ಟರ್ ನಲ್ಲಿನ ಫ್ಲೈಟ್ ಡಾಟಾ ರೆಕಾರ್ಡರ್ ಹಾಗೂ ಕಾಕ್ ಪಿಟ್ ವಾಯ್ಸ್ ರೆಕಾರ್ಡರ್ ಅಪಘಾತ ಸ್ಥಳದಿಂದ ರಕ್ಷಣಾ ಇಲಾಖೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಬ್ಲಾಕ್ ಬಾಕ್ಸ್ ಅಥವಾ ಫ್ಲೈಟ್ ಡಾಟಾ ರೆಕಾರ್ಡರ್ ಎಂದು ಕರೆಯಲಾಗುವ ಎಲೆಕ್ಟ್ರಾನಿಕ್ ಸಾಧನದಲ್ಲಿ ಹೆಲಿಕಾಪ್ಟರ್ ಹಾರುವಾಗ ಇದ್ದ ಗಾಳಿಯ ವೇಗ, ಹಾರಾಟದ ಎತ್ತರ, ಕಾಕ್ ಪಿಟ್ ನಲ್ಲಿ ಪೈಲಟ್ ಸಂವಹನ, ಗಾಳಿಯ ಒತ್ತಡ ಸೇರಿದಂತೆ 88 ವಿವಿಧ ಬಗೆಯ ಅಂಕಿ- ಅಂಶಗಳ ಮಾಹಿತಿಯನ್ನು ಒಳಗೊಂಡಿರುತ್ತದೆ. ಒಟ್ಟಾರೆ ದುರ್ಘಟನೆ ಕಾರಣ ಏನೆಂಬುದನ್ನು ತಿಳಿಸುವ ಮಹತ್ವದ ಮಾಹಿತಿಯನ್ನು ಒಳಗೊಂಡಿರುತ್ತದೆ.

ಯಾರಾಗಬಹುದು ಸಿಡಿಎಸ್ ಹುದ್ದೆಗೇರುವ ಅಧಿಕಾರಿ ?

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (CDS)ರಾಗಿದ್ದ ಜನರಲ್ ಬಿಪಿನ್ ರಾವತ್ ನಿಧನದಿಂದ ಆ ಸ್ಥಾನವೀಗ ಖಾಲಿಯಾಗಿದೆ. ಆ ಸ್ಥಾನಕ್ಕೆ ಸೇನಾಪಡೆ, ವಾಯುಪಡೆ ಹಾಗೂ ನೌಕಾಪಡೆಯೊಂದಿಗೆ ಯಶಸ್ವಿಯಾಗಿ ಸಮನ್ವಯ ಸಾಧಿಸಬಲ್ಲ ಸರ್ವಸಮ್ಮತ ಹಿರಿಯ ಸೇನಾಧಿಕಾರಿಯೊಬ್ಬರನ್ನು ಆಯ್ಕೆ ಮಾಡುವುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರಕ್ಕೆ ಪ್ರಮುಖ ಸವಾಲಾಗಿದೆ.

ಮಾಧ್ಯಮಗಳಲ್ಲಿ ಉನ್ನತ ಮೂಲಗಳ ಆಧಾರದ ಮೇಲೆ ಬಂದಿರುವ ವರದಿಗಳ ಪ್ರಕಾರ ಮುಂದಿನ ಒಂದು ವಾರದಿಂದ 10 ದಿನಗಳಲ್ಲಿ ಖಾಲಿಯಿರುವ ಸಿಡಿಎಸ್ ಸ್ಥಾನಕ್ಕೆ ನೇಮಕ ಮಾಡಲು ಮೋದಿ ಸರ್ಕಾರ ಮುಂದಾಗಿದ್ದು, ಆರಂಭಿಕ ಪ್ರಕ್ರಿಯೆಗೆ ಚಾಲನೆ ದೊರೆತಿರುವುದಾಗಿ ತಿಳಿದುಬಂದಿದೆ.

ಜನರಲ್ ಬಿಪಿನ್ ರಾವತ್ ಅವರ ಅಕಾಲಿಕ ಮರಣದಿಂದಾಗಿ, ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಣೆ ಅವರು ಬಿಪಿನ್ ರಾವತ್ ನಂತರ ಸದ್ಯ ಇರುವ ದೇಶದ ಅತ್ಯಂತ ಹಿರಿಯ ಮಿಲಿಟರಿ ಅಧಿಕಾರಿಯಾಗಿದ್ದಾರೆ. ಆರ್ಮಿ ವೈಸ್ ಚೀಫ್ ಲೆಫ್ಟಿನೆಂಟ್ ಜನರಲ್ ಸಿಪಿ ಮೊಹಂತಿ ಮತ್ತು ಉತ್ತರ ಸೇನೆಯ ಕಮಾಂಡರ್ ಲೆಫ್ಟಿನೆಂಟ್ ಜನರಲ್ ವೈ.ಕೆ ಜೋಶಿ ಅವರು ನಂತರದ ಸ್ಥಾನದಲ್ಲಿದ್ದಾರೆ.

2019 ರಲ್ಲಿ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಿಡಿಎಸ್ ಅನ್ನು ನೇಮಕ ಮಾಡಲಾಗುವುದು ಎಂದು ಘೋಷಣೆ ಮಾಡಿದ್ದರು. 2020 ರ ಜನವರಿಯಲ್ಲಿ ಜನರಲ್ ಬಿಪಿನ್ ರಾವತ್ ಅವರು ದೇಶದ ಮೊದಲ ಸಿಡಿಎಸ್ ಮುಖ್ಯಸ್ಥರಾದರು. ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರ ಸಮ್ಮತಿ ಈ ಸ್ಥಾನದ ನೇಮಕಕ್ಕೆ ದೊರೆತಿತ್ತು. ರಕ್ಷಣಾ ಇಲಾಖೆಯ ಮೂರೂ ಪಡೆಗಳ ಮುಖ್ಯಸ್ಥರಾಗಿ ದೇಶದ ಮಹಾ ದಂಡನಾಯಕ ರಾಷ್ಟ್ರಪತಿಗಳಾಗಿರುತ್ತಾರೆ.

ರಾಷ್ಟ್ರಪತಿಗಳ ಅಂಕಿತ ದೊರೆತ ಮೇಲೆ ಜನರಲ್ ಬಿಪಿನ್ ಆಯ್ಕೆಯಾಗಿದ್ದರು. ಅವರ ಸೇವಾವಧಿ ಇದೇ ಡಿಸೆಂಬರ್ 31ಕ್ಕೆ ಮುಗಿಯುವುದಲ್ಲಿತ್ತು. ಆದರೆ ಅದಿಕ್ಕೆ ಮುಂಚೆಯೇ ವಿಧಿಯ ಕ್ರೂರದಾಟಕ್ಕೆ ಒಬ್ಬ ಮಹಾನ್ ವೀರಯೋಧ ಮೃತಪಟ್ಟಿದ್ದಾರೆ. ಸೇನಾ ಮುಖ್ಯಸ್ಥ ಜನರಲ್ ಮುಕುಂದ್ ನವರಣೆ ಅವರ ಸೇವಾವಧಿ ಏಪ್ರಿಲ್ 2022ರ ತನಕ ಇದೆ.

WhatsApp Join our WhatsApp Channel
Previous Post

BW EXCLUSIVE | Covid Death Componsation | ರಾಜ್ಯ ಸರ್ಕಾರದ ಘೋಷಣೆಗಷ್ಟೆ ಸೀಮಿತವಾಯ್ತಾ ಕೋವಿಡ್ ಸಾವಿನ ಪರಿಹಾರ?

Next Post

Tunga Aarathi | ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Next Post

Tunga Aarathi | ಕಾಶಿಯಲ್ಲಿ ಗಂಗಾ ಆರತಿಯಂತೆ ದಕ್ಷಿಣದಲ್ಲಿ ತುಂಗಾ ಆರತಿ ಮಂಟಪ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Gen Bipin Rawat's Funeral | ಸಕಲ ಸೇನಾ ಗೌರವದೊಂದಿಗೆ ಸೇನಾಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಗೆ ಅಂತಿಮ ನಮನ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group