Monday, March 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

  • Bengaluru Focus

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

  • Bengaluru Focus

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Nandini Duplicate Ghee | ಮೈಸೂರಾಯ್ತು ಈಗ ಬೆಂಗಳೂರಲ್ಲೂ ನಕಲಿ ನಂದಿನಿ ತುಪ್ಪದ ಹಾವಳಿ : ಆನ್ ಲೈನ್ ನಲ್ಲೂ ಡೂಪ್ಲಿಕೇಟ್ ತುಪ್ಪ ಮಾರಾಟ..!

ಮತ್ತೆ ಮೂರು ಕಡೆ ಡೂಪ್ಲಿಕೇಟ್ ನಂದಿನಿ ತುಪ್ಪ ಪತ್ತೆ | ಬೆಂಗಳೂರಲ್ಲಿ ಎರಡು ಕಡೆ, ಹೊಸಕೋಟೆಯಲ್ಲಿ ಒಂದು ಕಡೆ ನಕಲಿ ನಂದಿನಿ ತುಪ್ಪ ಮಾರಾಟ | ಮೂರು ಅಂಗಡಿ ಸೀಜ್ |

by Bengaluru Wire Desk
December 22, 2021
in Bengaluru Focus, BW Special, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ಮೈಸೂರಿನ ಹೊಸ ಹುಂಡಿಯ ಖಾಸಗಿ ಗೋದಾಮಿನಲ್ಲಿ ನಕಲಿ ನಂದಿನಿ ತುಪ್ಪ ಜಾಲ ಪತ್ತೆಯಾದ ಬಳಿಕ ಇದೀಗ ಬೆಂಗಳೂರು ಹಾಗೂ ಹೊಸಕೋಟೆಯಲ್ಲಿ ನಕಲಿ ನಂದಿನಿ ತುಪ್ಪ ಮಾರುತ್ತಿದ್ದ ಮೂರು ಅಂಗಡಿಗಳನ್ನು ಕರ್ನಾಟಕ ಹಾಲು ಮಹಾಮಂಡಳಿ (KMF)‌ ಅಧಿಕಾರಿಗಳು ಸೋಮವಾರ ಸೀಜ್ ಮಾಡಿದ್ದಾರೆ.

ಬೆಂಗಳೂರಿನ ಹನುಮಂತನಗರದ ಎರಡು ಅಂಗಡಿಗಳಲ್ಲಿ ಹಾಗೂ ಹೊಸಕೋಟೆಯ ಒಂದು ಅಂಗಡಿಯಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಕೆಎಂಎಫ್ ಜಾಗೃತ ದಳ ಪತ್ತೆ ಹಚ್ಚಿದೆ ಎಂದು ಕೆಎಂಎಫ್ ಉನ್ನತ ಮೂಲಗಳ “ಬೆಂಗಳೂರು ವೈರ್” ಗೆ ಖಚಿತಪಡಿಸಿವೆ.

ಸಾಂದರ್ಭಿಕ ಚಿತ್ರ

ಹೊಸಹುಂಡಿ ಪ್ರಕರಣದ ಬಳಿಕ ಕೆಎಂಎಫ್ ರಾಜ್ಯದಾದ್ಯಂತ ತನ್ನ 14 ಹಾಲು ಒಕ್ಕೂಟಗಳಲ್ಲಿ ಜಾಗೃತ ತಂಡಗಳನ್ನು ರಚಿಸಿ ಪರಿಶೀಲನೆ ಕಾರ್ಯವನ್ನು ಚುರುಕುಗೊಳಿಸಿದೆ. ಈ ಹಿನ್ನಲೆಯಲ್ಲಿ ಈಗಾಗಲೇ 150 ತಂಡಗಳು ಕಾರ್ಯಾಚರಣೆ ಸಕ್ರಿಯಗೊಳಿಸಿದೆ.

ಹನುಮಂತನಗರದ ಎರಡು ರಿಟೇಲ್ ಅಂಗಡಿಗಳಲ್ಲಿ ಕ್ರಮವಾಗಿ 150 ಲೀಟರ್ ಹಾಗೂ 11 ಲೀಟರ್ ನಕಲಿ ತುಪ್ಪವನ್ನು ಸೀಜ್ ಮಾಡಲಾಗಿದೆ.‌ ಅದೇ ರೀತಿ ಆನ್ ಲೈನ್ ಶಾಪಿಂಗ್ ಮೂಲಕ ನಕಲಿ ತುಪ್ಪ ಮಾರುತ್ತಿದ್ದ ಅಂಗಡಿ ಸೀಜ್ ಮಾಡಿ ಕೆಎಂಎಫ್ ಜಾಗೃತ ದಳ ಆ ಅಂಗಡಿಯಿಂದ 60 ಲೀಟರ್ ತುಪ್ಪವನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ ಆ ಅಂಗಡಿ ಮಾಲೀಕ ಹಾಗೂ ಆನ್ ಲೈನ್ ಶಾಪಿಂಗ್ ಆಪ್ ಕಂಪನಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ಕೆಎಂಎಫ್ ಅಧಿಕಾರಿಗಳು ದೂರು ದಾಖಲಿಸಿದ್ದಾರೆ.

ಹೊಸಹುಂಡಿ ಗೋದಾಮಿನಲ್ಲಿ ಪತ್ತೆಯಾದ ನಂದಿನಿ‌ ನಕಲಿ ಪ್ಯಾಕೇಟ್ ತಯಾರಿಕಾ ಯಂತ್ರ

ಕೆಎಂಎಫ್ ಗೆ ರಾಜಧಾನಿ ಬೆಂಗಳೂರು ತನ್ನ ಎಲ್ಲಾ ಉತ್ಪನ್ನಗಳ ಮಾರಾಟಕ್ಕೆ ಪ್ರಮುಖ ಮಾರುಕಟ್ಟೆಯಾಗಿದೆ. ನಗರದಲ್ಲೇ ಕೆಎಂಎಫ್ ವಿವಿಧ ಉತ್ಪನ್ನ ಮಾರಾಟ ಮಾಡುವ 10 ಸಾವಿರಕ್ಕೂ ಅಧಿಕ‌ ಮಾರಾಟ ಕೇಂದ್ರಗಳಲ್ಲಿ ಹಾಗೂ ಸಾವಿರಾರು ರಿಟೇಲ್ ಶಾಪ್ ಗಳಲ್ಲಿ ನಂದಿನಿ ತುಪ್ಪ ಮಾರಾಟವಾಗುತ್ತಿದೆ. ಹಾಗಾಗಿ ಬೆಂಗಳೂರಿನಲ್ಲಿ 15ಕ್ಕೂ ಹೆಚ್ಚು ತಂಡಗಳನ್ನು ಅನುಮಾನ ಬಂದ ಕಡೆ ಕಳುಹಿಸಿ ತುಪ್ಪದ ಮಾದರಿಗಳನ್ನು ಲ್ಯಾಬ್ ನಲ್ಲಿ ಪರೀಕ್ಷಿಸಿ ನಕಲಿ ತುಪ್ಪ ಎಂದು ಖಚಿತವಾದ ಬಳಿಕ ಆ ಅಂಗಡಿಗಳನ್ನು ಜಪ್ತಿ ಮಾಡಲಾಗುವುದು ಎಂದು ಕೆಎಂಎಫ್ ವಿಶ್ವಸನೀಯ ಮೂಲಗಳು ತಿಳಿಸಿವೆ.

ತುಪ್ಪದ ಪ್ಯಾಕೇಟ್ ಗಳಿಗೆ ಕ್ಯುಆರ್ ಕೋಡ್ ಹಾಗೂ ಹಾಲೊಗ್ರಾಂ ಬಳಕೆಗೆ ಕ್ರಮ :

ಕೆಎಂಎಫ್ ತನ್ನ ಪ್ರಸಿದ್ಧ ನಂದಿನಿ ಬ್ರಾಂಡ್ ತುಪ್ಪ ನಕಲಿಯಾಗುವುದನ್ನು ತಪ್ಪಿಸಲು ಎಲ್ಲಾ ಮಾದರಿಯ ತುಪ್ಪದ ಪ್ಯಾಕೇಟ್ ಗಳಿಗೆ ಕ್ಯುಆರ್ ಕೋಡ್ ಹಾಗೂ ಹಾಲೊಗ್ರಾಂ ಬಳಕೆ ಮಾಡಲು ನಿರ್ಧರಿಸಿದೆ.

ಸದ್ಯದಲ್ಲೇ ಕೆಎಂಎಫ್ ನಂದಿನಿ ತುಪ್ಪದ ಪ್ಯಾಕೇಟ್ ಗಳಿಗೆ ಈ ಅತ್ಯಾಧುನಿಕ ಪದ್ಧತಿ ಅಳವಡಿಸುತ್ತೇವೆ. ಈ ಕಾರ್ಯ ಪ್ರಗತಿಯಲ್ಲಿದೆ. ಗುಣಮಟ್ಟದ ತುಪ್ಪ ನಕಲಿ ಮಾಡುವುದನ್ನು ತಡೆಯಲು ಈ ಹೊಸ ವ್ಯವಸ್ಥೆ ಸಹಾಯಕವಾಗಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಸತೀಶ್ ತಿಳಿಸಿದ್ದಾರೆ.

ಮೈಸೂರು ಬಳಿಯ ಹೊಸ ಹುಂಡಿಯ ಖಾಸಗಿ ಗೋದಾಮಿನಲ್ಲಿ ಡಿ.16 ರಂದು ನಕಲಿ ನಂದಿನಿ ತುಪ್ಪ ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಆ ಗೋಡೌನ್ ಮೇಲೆ‌ ದಾಳಿ ನಡೆಸಿದಾಗ ಆಹಾರ ಸುರಕ್ಷತಾ ಪ್ರಾಧಿಕಾರದ ಅಧಿಕಾರಿಗಳು ನಂದಿನಿ ತುಪ್ಪ ಕಲಬೆರೆಕೆಗೆ ಡಾಲ್ಡಾ, ಬಣ್ಣ, ಯಂತ್ರಗಳು, ಪಾಮ್ ಆಯಿಲ್‌, ನಕಲಿ ನಂದಿನಿ ಪ್ಯಾಕೇಟ್, ಟಿನ್ ಮುಚ್ಚುವ ಕ್ಯಾಪ್ ಸೇರಿದಂತೆ ನಾನಾ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.

ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಗ್ರಾಹಕರು ನಂದಿನಿಯ ಗುಣಮಟ್ಟದ ತುಪ್ಪವನ್ನು ಮಾರುಕಟ್ಟೆಯಲ್ಲಿ ಯಾವುದೇ ಆತಂಕವಿಲ್ಲದೆ ಖರೀದಿಸಬಹುದು. ನಕಲಿ ನಂದಿನಿ ತುಪ್ಪ ಪತ್ತೆಯ ನಂತರ ರಾಜ್ಯದ‌ ಎಲ್ಲೆಡೆ ಎಲ್ಲಾ ಒಕ್ಕೂಟಗಳಲ್ಲಿ ಜಾಗೃತದಳ ರಚನೆ ಮಾಡಿ, ಆಗಾಗ 14 ಒಕ್ಕೂಟಗಳ ವ್ಯಾಪ್ತಿಯ ನಂದಿನಿ ತುಪ್ಪದ ಮಾರಾಟ ಮಾಡುವ 21,000 ಮಾರಾಟ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಲು ಸೂಚನೆ ನೀಡಲಾಗಿದೆ ಎಂದು ಬಿ.ಸಿ.ಸತೀಶ್ ತಿಳಿಸಿದ್ದಾರೆ.

ನಂದಿನಿ ತುಪ್ಪದ ಒಂದು ಕೆಜಿಯ ಗರಿಷ್ಠ ಮಾರಾಟ ಬೆಲೆ ಪ್ರಸ್ತುತ 470 ರೂ. ಗಳಾಗಿದೆ. ಇನ್ನು ಮುಂದೆ ನಂದಿನಿ ತುಪ್ಪದ ಎಲ್ಲಾ ಪ್ಯಾಕ್ ಗಳಿಗೆ ಕ್ಯುಆರ್ ಕೋಡ್ ಹಾಗೂ ಹಾಲೊಗ್ರಾಂ ಅಳವಡಿಸುತ್ತೇವೆ ಎಂದಿದ್ದಾರೆ.

ನಂದಿನಿ ತುಪ್ಪದ ಬ್ರಾಂಡ್ ದೇಶ ವಿದೇಶಗಳಲ್ಲೂ ಹೆಸರುವಾಸಿಯಾಗಿದ್ದು, ಭಾರತೀಯ ರಕ್ಷಣಾ ಇಲಾಖೆ, ತಿರುಪತಿ‌ ದೇವಸ್ಥಾನಕ್ಕೆ ನಂದಿನಿ ತುಪ್ಪ ಪೂರೈಕೆಯಾಗುತ್ತಿದೆ. ಅಯೋಧ್ಯೆಯಲ್ಲಿ ವರ್ಷಪೂರ್ತಿ ನಂದಿನಿ ತುಪ್ಪದಿಂದ ಅಖಂಡ ಜ್ಯೋತಿ ಬೆಳಗಿಸಲಾಗುತ್ತಿದೆ. ಅಮರಿಕ, ಕತಾರ್, ಸಿಂಗಾಪುರ, ದುಬೈ, ಆಸ್ಟ್ರೇಲಿಯಾ, ಓಮನ್ ಸೇರಿದಂತೆ ವಿವಿಧ ರಾಷ್ಟ್ರಗಳಿಗೂ ಕೆಎಂಎಫ್ ತುಪ್ಪ ರಫ್ತಾಗುತ್ತಿದೆ ಎಂದು ಸತೀಶ್ ಮಾಹಿತಿ ನೀಡಿದ್ದಾರೆ.

ಪ್ರತಿದಿನ ಮಾರುಕಟ್ಟೆಯಲ್ಲಿ ಮಾರಟವಾಗುವ ನಂದಿನಿ ತುಪ್ಪದ ಮಾದರಿಗಳನ್ನು ಪರೀಕ್ಷೆ ನಡೆಸಲಾಗುತ್ತದೆ. ಸಾರ್ವಜನಿಕರಿಗೆ ಅನುಮಾನ ಬಂದರೆ ಕೆಎಂಎಫ್ ಕೇಂದ್ರ ಪ್ರಯೋಗಾಲಯದಲ್ಲಿ ತುಪ್ಪದ ಮಾದರಿಗಳನ್ನು ನೀಡಿ ಖಚಿತಪಡಿಸಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಮಾಹಿತಿಗೆ ಟೋಲ್‌ಫ್ರೀ ಸಂಖ್ಯೆ : 18004258030, ಅಥವಾ ನಂದಿನಿ ಸಹಾಯವಾಣಿ : 080-66660000 ಸಂಪರ್ಕಿಸಬಹುದು. ಇ-ಮೇಲ್ : customercare.nandini@kmf.coop ಮಾಡಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Industry News | ನಾನಾ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಿಂದ ಇಂದು ಪ್ರತಿಭಟನೆ

Next Post

ಇಂದಿನಿಂದ ಕಂಟೋನ್ಮೆಂಟ್ ನಿಂದ – ಪಾಟರಿ ಟೌನ್ ಮಾರ್ಗದ ಮೆಟ್ರೊ ಸುರಂಗ ಕಾಮಗಾರಿ ಆರಂಭ

Next Post

ಇಂದಿನಿಂದ ಕಂಟೋನ್ಮೆಂಟ್ ನಿಂದ - ಪಾಟರಿ ಟೌನ್ ಮಾರ್ಗದ ಮೆಟ್ರೊ ಸುರಂಗ ಕಾಮಗಾರಿ ಆರಂಭ

Chikkaballapura Earthquake | ಚಿಕ್ಕಾಬಳ್ಳಾಪುರದಲ್ಲಿ ಎರಡು ಬಾರಿ ಭೂಕಂಪನ...!

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

March 8, 2026

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

March 8, 2026

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d