Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

CM Bommai Meeting | ಬೆಂಗಳೂರು ರಸ್ತೆ ಗುಂಡಿ ಮುಚ್ಚದ ಅಧಿಕಾರಿ ಗಳಿಗೆ ಸಿಎಂ ತರಾಟೆ – ಮಾ.31 ಗಡುವು

ರಾಜಕಾಲುವೆ ಸಮಸ್ಯೆ ತಗ್ಗಿಸಲು 1,500 ಕೋಟಿ ಹಣ ಬಿಡುಗಡೆ | ಜನವರಿ 31 ರೊಳಗೆ ನಗರದ ಎಲ್ಲಾ ಬೀದಿ ದೀಪಗಳ ಬದಲಾವಣೆ | 150 ಇಂಜಿನಿಯರ್ ಗಳ ನೇಮಕ | ಕರೋನಾ, ಒಮಿಕ್ರಾನ್ ಕೇಸ್ ಹೆಚ್ಚಳ ಹಿನ್ನಲೆ ಬೆಳಗಾವಿ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ

by Bengaluru Wire Desk
January 2, 2022
in Bengaluru Focus, News Wire
Reading Time: 1 min read
0

ಬೆಂಗಳೂರು/ಬೆಳಗಾವಿ, (www.bengaluruwire.com) : ನಗರದಲ್ಲಿ ಮಳೆ ನಿಂತು ಹಲವು ದಿನಗಳು ಕಳೆದರೂ, ಈತನಕ ರಸ್ತೆ ಸರಿಪಡಿಸದ ಬೃಹತ್ ಬೆಂಗಳೂರು‌ ಮಹಾನಗರ ಪಾಲಿಕೆ (BBMP) ಅಧಿಕಾರಿಗಳನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾನುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

ಭಾನುವಾರ ನಗರದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಕುರಿತು ಶಾಸಕರು, ಸಂಸದರು ಮತ್ತು ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಪಾಲ್ಗೊಂಡಿದ್ದರು. ಇದೇ ಸಭೆಯಲ್ಲಿ, ಮಳೆಯಿಂದ ಹಾಳಾಗಿರುವ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ತಾಕೀತು ಮಾಡಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸುರಿದ ಮಳೆಯಿಂದಾಗಿ ರಾಜಧಾನಿಯ ರಸ್ತೆಗಳು ಗುಂಡಿಮಯ ಆಗಿತ್ತು. ಗುಂಡಿಗಳಿಂದ ಸಾವು ನೋವುಗಳು ಕೂಡ ಉಂಟಾಗಿತ್ತು.

ರಸ್ತೆ ಗುಂಡಿ ಮುಚ್ಚದ ಅಧಿಕಾರಿಗಳ ಕ್ರಮದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಿಎಂ, ಮಾರ್ಚ್ 31 ರೊಳಗೆ ಹೈ ಡೆನ್ಸಿಟಿ ರಸ್ತೆ ಸೇರಿದಂತೆ ಹಾಳಾದ 731 ಕಿಲೋ ಮೀಟರ್ ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚುವಂತೆ ಗಡುವು ನೀಡಿದರು.

ಅಲ್ಲದೆ ಬೆಂಗಳೂರು ಅಭಿವೃದ್ಧಿ ಸಂಬಂಧ ಹಲವು ನಿರ್ಧಾರ ಗಳನ್ನು ಮಾಡಲಾಯಿತು. ಅವುಗಳ ಪ್ರಮುಖ ಅಂಶಗಳು ಈ ಕೆಳಗಿನಂತಿದೆ :

  • ವೈಟ್ ಟಾಪಿಂಗ್ ಬಾಕಿ ಇರುವುದನ್ನು ಪೂರ್ತಿಗೊಳಿಸುವಂತೆ ಸೂಚನೆ.
  • ರಾಜಕಾಲುವೆಯಿಂದ ನೀರು ಸುಗಮವಾಗಿ ಹೋಗುವ ಕಾಮಗಾರಿಗೆ 1,500 ಕೋಟಿ ಕೊಡಲು ನಿರ್ಣಯ.
  • ಜನವರಿ 31 ರೊಳಗೆ ನಗರದ ಎಲ್ಲಾ ಬೀದಿ ದೀಪಗಳ ಬದಲಾವಣೆ – ಎಲ್ಇಡಿ ಬೀದಿ ದೀಪಗಳ ಅಳವಡಿಕೆಗೆ ತೀರ್ಮಾನ.
  • ಬಿಬಿಎಂಪಿ ವ್ಯಾಪ್ತಿಯಲ್ಲಿ 150 ಇಂಜಿನಿಯರ್ ನೇಮಕದ ಪ್ರಕ್ರಿಯೆ ಮಾಡಲು ತೀರ್ಮಾನ.
  • ನಿರ್ಭಯ ಯೋಜನೆಯಡಿ ಬೆಂಗಳೂರಿನಲ್ಲಿ 7 ಸಾವಿರ ಸಿಸಿಟಿವಿಗಳ ಅಳವಡಿಕೆಗೆ ನಿರ್ಧಾರ.
  • ಟೆಂಡರ್ ಶ್ಯೂರ್ ಕಾಮಗಾರಿಗಳನ್ನು ಮುಗಿಸಲು ಸಿಎಂ ಸೂಚನೆ.
  • ಅಮೃತ ನಗರೋತ್ಥಾನವನ್ನು ಮುಂದಿನ ಸಚಿವ ಸಂಪುಟದಲ್ಲಿ ಅನುಮೋದನೆ.
  • ಜಲಮಂಡಳಿ ಹಾಗೂ ಬಿಬಿಎಂಪಿ ನಡುವೆ ಮುಖ್ಯಮಂತ್ರಿ ಗಳು ಹಾಗೂ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚನೆ.
  • ಅಕ್ರಮ ಸಕ್ರಮದಡಿ ಎ ಹಾಗೂ ಬಿ ಖಾತಾ ಗೊಂದಲ ನಿವಾರಿಸಲು ಕ್ರಮ. ಸದ್ಯ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದೆ. ಶೀಘ್ರ ಇತ್ಯರ್ಥಕ್ಕೆ ಕೋರ್ಟಿಗೆ ಮನವಿ.
  • ಟಿಡಿಆರ್ ಸಮಸ್ಯೆ ಬಗೆಹರಿಸಲು ನೂತನ ನೀತಿ ಜಾರಿಗೆ ತರಲು ತೀರ್ಮಾನ.

ಹೀಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ, ಭಾನುವಾರ ನಡೆದ ಸಭೆಯಲ್ಲಿ ಹಲವು ಮಹತ್ವದ ವಿಷಯಗಳ ಬಗ್ಗೆ ಚರ್ಚೆ ಹಾಗೂ ಪ್ರಗತಿ ಪರಿಶೀಲನೆ ನಡೆಸುವ ಮೂಲಕ ನಗರದಲ್ಲಿ ನಾಗರೀಕರು ಎದುರಿಸುತ್ತಿರುವ ಸಮಸ್ಯೆಗಳ ನಿವಾರಣೆಗೆ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

ಬೆಳಗಾವಿ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ – ಚೆಕ್ ಪೋಸ್ಟ್ ಗಳಲ್ಲಿ ಬಿಗಿ ಕ್ರಮ :

ಕಳೆದ ಒಂದು ವಾರದಲ್ಲಿ ಕರೋನಾ, ಒಮಿಕ್ರಾನ್ ಕೇಸ್ ಹೆಚ್ಚಾಗುತ್ತಿದೆ. ಮಹಾರಾಷ್ಟ್ರ ಅದರಲ್ಲಿಯೂ ಮುಂಬೈಯಲ್ಲಿ ಪ್ರಕರಣಗಳು ಹೆಚ್ಚುತ್ತಿದೆ. ಮುಂಬೈ ಮತ್ತು ಕರ್ನಾಟಕದ ವಹಿವಾಟು ಜಾಸ್ತಿಯಿರುವ ಕಾರಣ ಗಡಿಜಿಲ್ಲೆಗಳಲ್ಲಿ ಹೆಚ್ಚಿನ ಕಟ್ಟೆಚ್ಚರವನ್ನು ವಹಿಸಲು ಈಗಾಗಲೇ ಸೂಚಿಸಲಾಗಿದೆ
ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಡೋಸ್ ಕಡ್ಡಾಯ ಲಸಿಕೆ ಹಾಗೂ ಆರ್ ಟಿಪಿಸಿಆರ್ ಪರೀಕ್ಷೆಯ ಪ್ರಮಾಣಪತ್ರ ಕಡ್ಡಾಯವಾಗಿ ಹೊಂದಿದವರಿಗೆ ಪ್ರವೇಶಕ್ಕೆ ಅನುಮತಿಸಲಾಗುವುದು. ಬೆಳಗಾವಿ ಚೆಕ್ ಪೋಸ್ಟ್ ಜೊತೆಗೆ ಅಕ್ಕಪಕ್ಕದ ಚೆಕ್ ಪೋಸ್ಟ್ಗಳನ್ನೂ ಬಿಗಿಗೊಳಿಸಲು ಸೂಚನೆ ನೀಡಲಾಗಿದೆ. ಮಹಾರಾಷ್ಟ್ರಕ್ಕೆ ಹೊಂದಿಕೊಂಡಿರುವ ವಿಜಯಪುರ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಸುಮಾರು 11 ಚೆಕ್ ಪೋಸ್ಟ್ ಗಳನ್ನು ಮಾಡಲಾಗಿದೆ.

ಜ.3 ರಿಂದ ಲಸಿಕಾ ಅಭಿಯಾನ :

ಜನವರಿ 3 ರಿಂದ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಜನವರಿ 3 ರಂದು ಚಾಲನೆ ನೀಡಲಾಗುವುದು. ಜನವರಿ 10 ರಂದು ಕೊ -ಮಾರ್ಬಿಡಿಟಿ ಇರುವ ಹಾಗೂ 60 ವರ್ಷಕ್ಕಿಂತ ಮೇಲ್ಪಟ್ಟಿರುವ ವ್ಯಕ್ತಿಗಳಿಗೆ ಲಸಿಕಾಕರಣವನ್ನು ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಕರೋನಾ ಎದುರಿಸಲು ಸಕಲ ಸಿದ್ಧತೆ :

ಕರೋನಾ ವನ್ನು ನಿರ್ಬಂಧಿಸುವ ಜೊತೆಗೆ ಕರೋನಾವನ್ನು ಎದುರಿಸಲು ಸಿದ್ಧತೆಯನ್ನು ಮಾಡಿಕೊಳ್ಳಬೇಕಿದೆ. ಕಳೆದ ಬಾರಿ ಸಂಭವಿಸಿದ ಆಕ್ಸಿಜನ್ ಕೊರತೆಯನ್ನು ನೀಗಿಸಲು ಸಂಬಂಧಪಟ್ಟ ಆಕ್ಸಿಜನ್ ಸರಬರಾಜು ಕಂಪನಿಗಳೊಂದಿಗೆ ಸಂಯೋಜಿಸಿ ಸಮರ್ಪಕ ಆಕ್ಸಿಜನ್ ಪೂರೈಕೆಗೆ ಕ್ರಮ ವಹಿಸಲಾಗಿದೆ. ಜಿಲ್ಲಾ ಹಾಗು ತಾಲ್ಲೂಕು ಮಟ್ಟದಲ್ಲಿರುವ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಪ್ಲಾಂಟ್ ಗಳನ್ನು ಸಿದ್ಧಪಡಿಸಿಟ್ಟುಕೊಳ್ಳಲು ಮತ್ತು ಹೆಚ್ಚುವರಿ ಬೆಡ್, 4,000 ಐಸಿಯುಗಳನ್ನು ಇಡೀ ರಾಜ್ಯದಲ್ಲಿ ಸಿದ್ಧಪಡಿಸಲು ಕ್ರಮ ವಹಿಸಲಾಗಿದೆ. ಸಮರ್ಪಕ ಔಷಧಿ ಪೂರೈಕೆಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಿಸಿ ತೀರ್ಮಾನ :
ನೈಟ್ ಕರ್ಫ್ಯೂ ವಿಸ್ತರಣೆ ಬಗ್ಗೆ ಚರ್ಚಸಿ ತೀರ್ಮಾನ ಕೈಗೊಳ್ಳಲಾಗುವುದು. ಕರೋನಾ ಸ್ಥಿತಿಗತಿ, ಬೆಂಗಳೂರು ನಗರದಲ್ಲಿ ಕರೋನಾ ಬೆಳವಣಿಗೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Guidance Value 10% Cut | ರಾಜ್ಯದಲ್ಲಿ ಸ್ವತ್ತುಗಳ ಮಾರ್ಗಸೂಚಿ ದರ ಶೇ.10ರಷ್ಟು ಇಳಿಕೆ ಮಾಡಿದ ರಾಜ್ಯ ಸರ್ಕಾರ

Next Post

BDA Open Gym | ಬಿಡಿಎ ಅಪಾರ್ಟ್ ಮೆಂಟ್ ಗಳಲ್ಲಿ ಹಂತ ಹಂತವಾಗಿ ಓಪನ್ ಜಿಮ್ ವ್ಯವಸ್ಥೆ : ಎಸ್.ಆರ್.ವಿಶ್ವನಾಥ್

Next Post

BDA Open Gym | ಬಿಡಿಎ ಅಪಾರ್ಟ್ ಮೆಂಟ್ ಗಳಲ್ಲಿ ಹಂತ ಹಂತವಾಗಿ ಓಪನ್ ಜಿಮ್ ವ್ಯವಸ್ಥೆ : ಎಸ್.ಆರ್.ವಿಶ್ವನಾಥ್

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು - ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ : ಸಿಎಂ ಬಸವರಾಜ ಬೊಮ್ಮಾಯಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d