Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Karnataka Covid Updates | ಕೋವಿಡ್ ಪ್ರಕರಣ ಏರಿಕೆ ಹಿನ್ನಲೆ : ಬುಧವಾರದಿಂದಲೇ ನೈಟ್ ಕರ್ಫ್ಯೂ ಎರಡು ವಾರ ಮುಂದುವರಿಕೆ

ಕೋವಿಡ್ ತಂತ್ರಜ್ಞರ ಸಭೆಯ ಬಳಿಕ ಕಠಿಣ ನಿಯಮಗಳ ಜಾರಿಗೆ ಮುಂದಾದ ಸರ್ಕಾರ | ಕೋವಿಡ್ ಪ್ರಕರಣ ಬೆಂಗಳೂರು ಎಪಿಕ್ ಸೆಂಟರ್ | ರಾಜಧಾನಿಗೇ ಪ್ರತ್ಯೇಕ ಕಾರ್ಯತಂತ್ರ

by Bengaluru Wire Desk
January 4, 2022
in Bengaluru Focus, News Wire
Reading Time: 1 min read
0

ಬೆಂಗಳೂರು, (www.bengaluruwire.com) : ನಗರದಲ್ಲಿ ಜ.5 ರಿಂದ ಜಾರಿಗೆ ಬರುವಂತೆ ಮುಂದಿನ ಎರಡು ವಾರಗಳ ಕಾಲ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಇರಲಿದೆ. ಕೋವಿಡ್ ಏರಿಕೆಯ ನಿಯಂತ್ರಣಕ್ಕಾಗಿ ರಾಜ್ಯದೆಲ್ಲಡೆ ಹಾಗೂ ಪ್ರಮುಖವಾಗಿ ಬೆಂಗಳೂರಿಗೆ ಪ್ರತ್ಯೇಕವಾಗಿ ರಾಜ್ಯ ಸರ್ಕಾರ ನಿಯಂತ್ರಣ ಕ್ರಮಗಳನ್ನು ರೂಪಿಸಿದೆ.

ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹಾಗೂ ವೈದ್ಯಕೀಯ, ಅರೆವೈದ್ಯಕೀಯ ಕಾಲೇಜು ಹೊರತುಪಡಿಸಿ ಉಳಿದ ಎಲ್ಲಾ ಶಾಲಾ ಕಾಲೇಜುಗಳನ್ನು (School and College Close ) ಜ.6 ರಿಂದ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ.

ಸಾರ್ವಜನಿಕ ಸ್ಥಗಳಾದಂತ ಚಿತ್ರಮಂದಿರ, ಮಾಲ್, ಪಬ್, ಬಾರ್ ಗಳಲ್ಲಿ ಶೇ.50ರ ಮಿತಿಯನ್ನು ನಿಗಧಿಪಡಿಸಲಾಗಿದೆ.
ವಾರಾಂತ್ರ ಕರ್ಪ್ಯೂ ( Weekend Curfew ) ಜಾರಿಗೊಳಿಸಲಾಗಿದ್ದು, ನೈಟ್ ಕರ್ಪ್ಯೂ ( Night Curfew ) ಮುಂದಿನ ಎರಡು ವಾರ ಮುಂದುವರೆಸಲಾಗಿದೆ. ಈ ಮೂಲಕ ಕೊರೋನಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಕೋವಿಡ್ ತಾಂತ್ರಿಕ ಸಮಿತಿ ಜೊತೆ ಸಭೆ ನಡೆಸಿದ ಸಿಎಂ ಬೊಮ್ಮಾಯಿ

ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಕುರಿತಂತೆ ತಜ್ಞರ ಸಭೆಯ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಕೋವಿಡ್ ಸಭೆಯನ್ನು ಮಾಡಲಾಯಿತು. ತಜ್ಞರು, ಅಧಿಕಾರಿ ವರ್ಗದವರು ಸಭೆಯಲ್ಲಿ ಭಾಗವಹಿಸಿದ್ದರು. ಸಿಎಂ ಬೊಮ್ಮಾಯಿಯವರು ನಾವು ಯಾವುದೇ ನಿರ್ಧಾರ ಕೈಗೊಂಡರು ಕೂಡ, ವಿಶ್ವಆರೋಗ್ಯ ಸಂಸ್ಥೆ, ಕೇಂದ್ರ ಸರ್ಕಾರ, ಹಾಗೂ ನೆರೆಯ ರಾಜ್ಯಗಳ ಕೋವಿಡ್ ಕೇಸ್ ಗಳನ್ನು ಪರಿಶೀಲಿಸಿ ಈ ತೀರ್ಮಾನಗಳನ್ನು ಮಾಡಿದ್ದಾರೆ.

ಓಮಿಕ್ರಾನ್ ಕೋವಿಡ್ ಗಿಂತ 5 ಪಟ್ಟು ಜಾಸ್ತಿಯಾಗುತ್ತಿದೆ ಎಂದು ತಜ್ಞರು ವರದಿ ಕೊಟ್ಟಿದ್ದಾರೆ. ಇವತ್ತು ಬೆಂಗಳೂರಿನಲ್ಲಿ 2048 ಕೇಸ್ ಪತ್ತೆ ಆಗಿದೆ. ರಾಜ್ಯದಳಿ ಓಮಿಕ್ರಾನ್ 147 ಕೇಸ್ ಕಂಡುಬಂದಿದೆ ಎಂದರು.

ಕಳೆದ ಮೂರು ದಿನಗಳಿಂದ ಕೋವಿಡ್ ಪ್ರಕರಣಗಳು ಎರಡು ಪಟ್ಟು ಹೆಚ್ಚಾಗುತ್ತಿದೆ. ಇವತ್ತು ಮೂರು ಸಾವಿರ ಪ್ರಕರಣ ಕಂಡುಬಂದಿದ್ದು, ಅದು ಆರು ಸಾವಿರ, ಒಂಭತ್ತು ಸಾವಿರ ಆಗುತ್ತಾ ಐದಾರು ದಿನಗಳಲ್ಲಿ ಹತ್ತು ಸಾವಿರ ಆಗುವ ಸಾಧ್ಯತೆ ಇದೆ. ಇದರಿಂದಾಗಿ ವಿಶೇಷವಾಗಿ ಬೆಂಗಳೂರಿಗೆ ವಿಶೇಷ ನಿಯಮ ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಗೆ ಪ್ರತ್ಯೇಕ ನಿಯಮ ಜಾರಿಗೆ ತರೋ ತೀರ್ಮಾನವನ್ನು ಸಿಎಂ ನೇತೃತ್ವದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಮಂಗಳವಾರ ಒಂದೇ ದಿನ ಶೇ 3ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ :

ಇವತ್ತು ರಾಜ್ಯದಲ್ಲಿ ಶೇ.3ರಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಕಂಡುಬಂದಿದೆ. 20 ರಿಂದ 50 ವರ್ಷದವರಿಗೆ ಕೊರೋನಾ ಸೋಂಕು ಹೆಚ್ಚಾಗುತ್ತಿದೆ. ಈ ಎಲ್ಲಾ ದೃಷ್ಟಿಯಿಂದ ಬೆಂಗಳೂರಿನಲ್ಲಿ 10 -12ನೇ ತರಗತಿ ಹೊರತು ಪಡಿಸಿ, 2 ವಾರ ಆಫ್ ಲೈನ್ ತರಗತಿ ಮಾಡಲು ನಿರ್ಧರಿಸಲಾಗಿದೆ. ನಾಳೆ ರಾತ್ರಿ 10 ಗಂಟೆಯಿಂದ ಕೋವಿಡ್ ರೂಲ್ಸ್ ಜಾರಿಗೆ ಬರಲಿದೆ. 10 ಮತ್ತು 12ನೇ ತರಗತಿಗಳು ಮಾತ್ರ ತೆರೆದಿರಲು ನಿರ್ಧರಿಸಲಾಗಿದೆ. ಆನ್ ಲೈನ್ ತರಗತಿಗಳಲ್ಲಿ ಶೈಕ್ಷಣಿಕ ಚಟುವಟಿಕೆ ಎಂದಿನಂತೆ ಮುಂದುವರೆಯಲಿದೆ. ಶುಕ್ರವಾರ ಮತ್ತು ಶನಿವಾರ ವಾರಾಂತ್ಯ ಕರ್ಪ್ಯೂ ತೀರ್ಮಾನ ಕೈಗೊಳ್ಳಲಾಗಿದ್ದು, ಮತ್ತೆ ಎರಡು ವಾರ ವಿಸ್ತರಿಸಲಾಗಿದೆ ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಶೇ.50 ರಷ್ಟು ಮಿತಿ :

ಸರ್ಕಾರಿ ಕಚೇರಿ, ಮಾಲ್ ಗಳಲ್ಲಿ ಭಾರತ ಸರ್ಕಾರದ ಮಾರ್ಗಸೂಚಿ ಪಾಲಿಸಲು ನಿರ್ಧರಿಸಲಾಗಿದೆ. ಮಾಲ್, ಚಿತ್ರಮಂದಿರ, ಪಬ್, ಬಾರ್ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ಶೇ.50ರ ಜನರಿಗೆ ಮಾತ್ರ ಮಿತಿ ನಿಗಧಿಪಡಿಸಲಾಗಿದೆ. ಮದುವೆ ಹೊರಾಂಗಣಕ್ಕೆ 200 ಜನರು, ಒಳಾಂಗಣದಲ್ಲಿ 100 ಜನರಿಗೆ ಮಿತಿ ಹೇರಲಾಗಿದೆ. ಕೋವಿಡ್ ಸಂಪೂರ್ಣ ಡೋಸ್ ಪಡೆದವರಿಗೆ ಮಾತ್ರ ಅವಕಾಶ ನೀಡಲಾಗಿದೆ. ಹೊರ ರಾಜ್ಯಗಳಿಂದ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯಗೊಳಿಸಲಾಗಿದೆ ಎಂದು ತಿಳಿಸಿದರು.

ಬೆಂಗಳೂರು ಕೋವಿಡ್ ಎಪಿಕ್ ಸೆಂಟರ್ :

ಕೋವಿಡ್ ನಿಯಂತ್ರಣಕ್ಕಾಗಿ ಬೆಂಗಳೂರಿಗೆ ವಿಶೇಷವಾಗಿ ತಂತ್ರ‌ ರೂಪಿಸಲಾಗಿದೆ. ಸದ್ಯ ಬೆಂಗಳೂರಿನ್ನೇ ರಾಜ್ಯವಾಗಿ ಪರಿಗಣಿಸಿದ್ದೇವೆ. ಏಕೆಂದರೆ ಬೆಂಗಳೂರಿನಲ್ಲಿ ಅತಿ ಹೆಚ್ಚು ಸೋಂಕು ಕಾಣಿಸಿಕೊಂಡಿದೆ. ರಾಜಧಾನಿಯನ್ನು ಎಪಿಕ್ ಸೆಂಟರ್ ಆಗಿ ಪರಿಗಣಿಸಲಾಗಿದೆ. ಶೇ.85-90% ಪ್ರಕರಣಗಳು ಬೆಂಗಳೂರಿನಲ್ಲಿ ಕಂಡು ಬರ್ತಿದೆ.

ಬಿಬಿಎಂಪಿ 8 ವಲಯಗಳಿಗೆ ಐಎಎಸ್, ಐಪಿಎಸ್ ಅಧಿಕಾರಿಗಳ ನೇಮಕ :

ಹೀಗಾಗಿ ಕೋವಿಡ್ ನಿಯಂತ್ರಣಕ್ಕಾಗಿ ಎಂಟು ವಲಯಗಳಿಗೆ ಐಎಎಸ್, ಐಪಿಎಸ್ ಅಧಿಕಾರಿಗಳ ನೇಮಕ ಮಾಡಲಾಗಿದೆ.
ಹಾಸಿಗೆ, ಟ್ರಯಾಜ್‌ಸೆಂಟರ್, ಏರ್ ರ್ಪೋರ್ಟ್‌ಗಳಿಗೆ ನೇಮಿಸಲಾಗಿದೆ. ವೇಗವಾಗಿ ಹರಡುತ್ತಿರೋ ಓಮಿಕ್ರಾನ್ ಪ್ರಭೇದ ಕ್ರಮಕ್ಕೆ, ಹತೋಟಿಗೆ ನಮ್ಮ ಸರ್ಕಾರ ಸಿದ್ದವಿದೆ. ಮಹಾರಾಷ್ಟ್ರ, ತೆಲಂಗಾಣ, ದೆಹಲಿ ರಾಜ್ಯದ ಕ್ರಮದ ಬಗ್ಗೆ ಅವಲೋಕನ ಮಾಡಿದ್ದೇವೆ. ಬೇರೆ ಬೇರೆ ದೇಶದ ಬಗ್ಗೆ ಕೂಡ ಅವಲೋಕನ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಶೇ 0.16 ಇದ್ದ ಸೋಂಕಿತ ಸಂಖ್ಯೆ, ಕಳೆದ ನಾಲ್ಕು ದಿನದಲ್ಲಿ 3.18ರಷ್ಟಾಗಿದೆ.

ವಿದೇಶದಿಂದ ಬರುವವರಿಗೆ ಕಡ್ಡಾಯ ಕೋವಿಡ್ ಟೆಸ್ಟ್ ಮಾಡುತ್ತೇವೆ. ಹೈ ರಿಸ್ಕ್ ದೇಶದಿಂದ ಬರುವವರಿಗೆ ಟೆಸ್ಟ್ ಮಾಡಿ, ಹೋಟೆಲ್ ಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್ ಮಾಡುತ್ತೇವೆ. ಬಜೆಟ್ ಹೋಟೆಲ್ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಆದರೆ 2 ಸ್ಟಾರ್, 3 ಸ್ಟಾರ್ ಹಾಗೂ 5 ಸ್ಟಾರ್ ದರ್ಜೆಯ ದರವನ್ನು ಅವರೇ ಭರಿಸಬೇಕಾಗುತ್ತದೆ.

ಹಾಸಿಗೆ, ಆಕ್ಸಿಜನ್, ICU, ಔಷಧಿ ಖರೀದಿ, ಸಿದ್ದತೆ ಬಗ್ಗೆ ಸಂಪೂರ್ಣ ಚರ್ಚೆ ಮಾಡಿ ಕ್ರಮ ಕೈಗೊಳ್ಳಲಾಗಿದೆ. ಬಿಬಿಎಂಪಿಯ 198 ವಾರ್ಡ್‌ಗಳಿಗೆ ಆಂಬ್ಯುಲೆನ್ಸ್ ವ್ಯವಸ್ಥೆ ಕಲ್ಪಿಸಲಾಗಿದೆ.

ನೆರೆಯ ಮಹಾರಾಷ್ಟ್ರ, ಕೇರಳ ರಾಜ್ಯದವರ ಮೇಲೆ ಹದ್ದಿನಕಣ್ಣು ಇಡಲಾಗಿದೆ. ರೈಲು, ಬಸ್, ವಿಮಾನ ಮೂಲಕ ಬಂದವರ ಮೇಲೆ ನಿಗಾವಹಿಸಲಾಗುವುದು. ಎರಡು ಡೋಸ್, RTPCR ಟೆಸ್ಟ್ ಕಡ್ಡಾಯ. ಗೋವಾದಿಂದ ಬಂದವರಿಗೆ ಸೋಂಕು ಹರಡಿರೋದು ದೃಢಪಟ್ಟಿದೆ. ಮೊದಲ ಎರಡು ಅಲೆಗೆ ಹೋಲಿಸಿದ್ರೆ, ಅಷ್ಟೇನು ಪರಿಣಾಮ ಇಲ್ಲ. ಹಲವು ದೇಶದಲ್ಲಿ ಆಗಿರೋದು ನೋಡಿದ್ದೇವೆ. ಕೈ ಮೀರಿ ಹೋಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ.

ಮಾಸ್ಕ್ ಧರಿಸದಿದ್ದರೆ ದಂಡ ಬೀಳುತ್ತೆ :

ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇನ್ನು ಮುಂದೆ ಮೇಲೆ ಮಾಸ್ಕ್ ಧರಿಸದಿದ್ರೆ ದಂಡ ವಿಧಿಸಲಾಗುತ್ತದೆ. ಯಾವುದೇ ಕಾರ್ಯಕ್ರಮ, ಹೋರಾಟ ಮಾಡುವಂತಿಲ್ಲ. ಎಲ್ಲದಕ್ಕೂ ಸರ್ಕಾರ ನಿಯಮ ತರಲಾಗಿದೆ. ಎರಡು ಮೂರು ದಿನದಲ್ಲಿ ಆಸ್ಪತ್ರೆ ದಾಖಲಾತಿ ಹೆಚ್ಚಾಗಿದೆ. ಕಳೆದ ಒಂದು ವಾರದಿಂದ ಎಲ್ಲಾ ರೀತಿಯಲ್ಲಿ ವೈದ್ಯಕೀಯ ಸಿದ್ಧತೆ ಮಾಡಲಾಗಿದೆ. ಹಾಸಿಗೆ, ಆಕ್ಸಿಜನ್, ಮೆಡಿಸಿನ್ ತಯಾರಿದೆ.
ಜನರು ಆತಂಕ ಪಡೋದು ಬೇಡ. ಲಸಿಕೆ ತೆಗೆದುಕೊಳ್ಳಿ.
ಎರಡು ಡೋಸ್ ಲಸಿಕೆ ಪಡೆದವರಿಗೆ ಅಪಾಯ ಬಂದಿಲ್ಲ.
ದಯವಿಟ್ಟು ಲಸಿಕೆ ಪಡೆಯಿರಿ‌‌ ಎಂದು ಆರೋಗ್ಯ ಸಚಿವ ಡಾ.ವಿ.ಸುಧಾಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BDA PROPERTY RECOVERY | 300 ಕೋಟಿ ರೂ. ಮೌಲ್ಯದ ಸ್ವತ್ತು ವಶಕ್ಕೆ ಪಡೆದುಕೊಂಡ ಬಿಡಿಎ

Next Post

BW SPECIAL | BWSSB WATER THEFT | ಬೆಂಗಳೂರಿನಲ್ಲಿ ಅಕ್ರಮ ನೀರಿನ ಸಂಪರ್ಕಗಳು ಎಷ್ಟಿವೆ ಗೊತ್ತಾ? ಯಾವ ಪ್ರಮಾಣದಲ್ಲಾಗುತ್ತಿದೆ ನೀರು ಸೋರಿಕೆ?

Next Post
ಸಾಂದರ್ಭಿಕ ಚಿತ್ರ

BW SPECIAL | BWSSB WATER THEFT | ಬೆಂಗಳೂರಿನಲ್ಲಿ ಅಕ್ರಮ ನೀರಿನ ಸಂಪರ್ಕಗಳು ಎಷ್ಟಿವೆ ಗೊತ್ತಾ? ಯಾವ ಪ್ರಮಾಣದಲ್ಲಾಗುತ್ತಿದೆ ನೀರು ಸೋರಿಕೆ?

ಜೆಡಿಎಸ್ ಪಕ್ಷದ ಕೇಂದ್ರ ಕಚೇರಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮದ ಗಂಗಾರಥವನ್ನು ಶುಕ್ರವಾರ ಅನಾವರಣಗೊಳಿಸಲಾಯಿತು. ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚಿತ್ರದಲ್ಲಿದ್ದಾರೆ.

2023 Election Politics | ಜನರನ್ನು ಸೆಳೆಯಲು ಕಾಂಗ್ರೆಸ್ – ಜೆಡಿಎಸ್ ಪಕ್ಷಗಳ ಜಲಾಸ್ತ್ರ ಪ್ರಯೋಗ – ಬಿಜೆಪಿ ಸರ್ಕಾರದಿಂದ ಕೋವಿಡ್ ಅಸ್ತ್ರ ಬಳಕೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d