Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Public interest

#NationalYouthDay | “ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ” ಎಂದ ಮನುಕುಲದ ಮಹಾಸಂತನಿಗೆ ಅಕ್ಷರ ನಮನ

ಸ್ವಾಮಿ ವಿವಾಕನಂದರ ಬಿರುನುಡಿಗಳು ಎಂತಹವರನ್ನು ಮಂತ್ರಮುಗ್ಧಗೊಳಿಸುತ್ತಿತ್ತು

by Bengaluru Wire Desk
January 12, 2022
in Public interest
Reading Time: 2 mins read
0
ಸ್ವಾಮಿ ವಿವೇಕಾನಂದರ ಭಾವಚಿತ್ರ

ಸ್ವಾಮಿ ವಿವೇಕಾನಂದರ ಭಾವಚಿತ್ರ

“ನನಗೆ ಬೇಕಾಗಿರುವುದು ಕಬ್ಬಿಣದ ಸ್ನಾಯುಗಳು, ಉಕ್ಕಿನ ನರಗಳು ಮತ್ತು ಸಿಡಿಲಿನಂಥ ಮನಸ್ಸುಗಳು. ಅಂತಹ ಕೆಲವೇ ತರುಣರಿಂದ ದೇಶದ ಭವಿಷ್ಯವನ್ನೇ ಬದಲಾಯಿಸಬಹುದು.”

ಸ್ವಾಮಿ ವಿವೇಕಾನಂದರ ವಿದ್ಯುತ್ ಹಾಗೆಯೇ ವಿದ್ವತ್ ನುಡಿಗಳನ್ನು ಕೇಳಿದವರ ಹೃದಯ ಮತ್ತು ಮನಸ್ಸಿನಲ್ಲಿ ಉತ್ಸಾಹ ಪುಟಿದೇಳುತ್ತದೆ. ಅವರು ಬದುಕಿದ್ದು 39 ವರ್ಷವಾದರೂ ಅವರ ತೂಕದ ಮಾತುಗಳು, ಹಿಂದೂ ಧರ್ಮಕ್ಕೆ ನೀಡಿದ ಹೊಸ ಭಾಷ್ಯ ಸರ್ವಕಾಲಕ್ಕೂ ಅನ್ವಯವಾಗುವಂತಿದೆ.

ದೇಶವು ಜನವರಿ 12 ರ ಅವರ ಜನ್ಮದಿನವನ್ನು ಯುವದಿನವನ್ನಾಗಿ ಆಚರಿಸುತ್ತಿದೆ. ತಮ್ಮ ಬದುಕು, ಬರಹ, ಪ್ರಖಾಂಡ ಮಾತುಗಳ ಮೂಲಕ ಇಡೀ ಜಗತ್ತಿನ ಜಗತ್ತಿಗೇ ಸಿಡಿಲನುಡಿಯ ಅಮೃತವನ್ನು ನೀಡಿದ ಆ ಮಹಾನ್ ಚೇತನಕ್ಕೆ ಗೌರವ ಸಲ್ಲಿಸುವ ದಿನವಾಗಿದೆ.‌

19ನೇ ಶತಮಾನದ ಶ್ರೇಷ್ಠ ಸಂತರಾದ ಶ್ರೀ ರಾಮಕೃಷ್ಣ ಪರಮಹಂಸರ ಪ್ರಧಾನ ಶಿಷ್ಯರಲ್ಲಿ ಒಬ್ಬರಾದ ಸ್ವಾಮಿ ವಿವೇಕಾನಂದರು ಬದುಕಿದ್ದ ಅಲ್ಪ ಅವಧಿಯಲ್ಲೇ ತಮ್ಮ ಧ್ಯಾನ, ಆಧ್ಯಾತ್ಮ, ವೈಚಾರಿಕತೆ, ಮಾನವತೆ ಬಗೆಗಿನ ನಿಲುವು, ಹಿಂದೂ ಧರ್ಮದ ಸಾರವನ್ನು ತಮ್ಮದೇ ಧಾಟಿಯ ವೀರವಾಣಿಯಲ್ಲಿ ಪ್ರವಚನದ ಮೂಲಕ ವಿಶ್ವದ ಕೋಟ್ಯಾಂತರ ಜನರನ್ನು ಸೆಳೆದು ಅವರೆಲ್ಲ ಆಧ್ಯಾತ್ಮ ಮತ್ತು ಮನುಕುಲದ ಸೇವೆಗೆ ಟೊಂಕ ಕಟ್ಟಿ ನಿಲ್ಲುವಂತೆ ಹುರಿದುಂಬಿಸುವ ಪ್ರೇರಕ ಶಕ್ತಿಯಾಗಿದ್ದರು.

ಸ್ವಾಮಿ ವಿವೇಕಾನಂದರು ಉತ್ತರ ಕೋಲ್ಕತಾದ ಶ್ರೀಮಂತ ಕುಟುಂಬದಲ್ಲಿ 12 ಜನವರಿ 1863ರಲ್ಲಿ ಜನಿಸಿದರು. ಅವರ ಹಿಂದಿನ ಹೆಸರು ನರೇಂದ್ರನಾಥ. ತಂದೆ ವಿಶ್ವನಾಥ ದತ್ತ ಹಾಗೂ ತಾಯಿಯ ಹೆಸರು ಭುವನೇಶ್ವರಿ ಸುಪುತ್ರನಾಗಿ ಜನಿಸಿದ ನರೇಂದ್ರರು ಶ್ರೀ ರಾಮಕೃಷ್ಣ ಪರಮಹಂಸರ ಶಿಷ್ಯರಾದ ಮೇಲೆ ವಿವೇಕಾನಂದ ಎಂಬ ಹೆಸರು ಪಡೆದರು.

“ಸಮಾಧಿ” ಪದ ಕಲ್ಪಿಸಿದ ಅಪೂರ್ವ ಭೇಟಿ :

  • ಶ್ರೀ ರಾಮಕೃಷ್ಣ ಪರಮಹಂಸರು
ಚಿತ್ರಕೃಪೆ : ವಿಕಿಪೀಡಿಯಾ

ಕೋಲ್ಕತಾದ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ತತ್ವಶಾಸ್ತ್ರ ಅಧ್ಯನ ಮಾಡಿದರು. ಆ ಸಂದರ್ಭದಲ್ಲಿ ನರೇಂದ್ರರಿಗೆ ಶ್ರೀ ರಾಮಕೃಷ್ಣರ ಮೊದಲ ಪರಿಚಯವನ್ನು ವಿಲಿಯಮ್ ಹೆಸ್ಟಿಯವರ ತರಗತಿಯಲ್ಲಾಯಿತು. ಹೆಸ್ಟಿಯವರು, ವಿಲಿಯಮ್ ವುಡ್ಸ್ ವರ್ತ್ ಅವರ ‘ದ ಎಕ್ಸ್ ಕರ್ಶನ್’  ಎಂಬ ಕವಿತೆಯಲ್ಲಿನ “ಸಮಾಧಿ” ಪದವನ್ನು ವಿವರಿಸುವಾಗ ಸಮಾಧಿ ಪದದ ನೈಜ ಅರ್ಥ ತಿಳಿಯಲು ದಕ್ಷಿಣೇಶ್ವರದಲ್ಲಿನ ಶ್ರೀ ರಾಮಕೃಷ್ಣ ಪರಮಹಂಸರನ್ನು ಭೇಟಿಯಾಗುವಂತೆ ತರಗತಿಯ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದರು. ಇವರ ಸಲಹೆ ಮೇರೆಗೆ ನರೇಂದ್ರೂ ಸೇರಿದಂತೆ ಹಲವು ವಿದ್ಯಾರ್ಥಿಗಳು ಪರಮಹಂಸರನ್ನು ಕಾಣಲು ಉತ್ಸುಕರಾಗಿದ್ದರು.

1881 ಇಸವಿಯಲ್ಲಿ ಮೊದಲ ಬಾರಿಗೆ ಸ್ವಾಮಿ ವಿವೇಕಾನಂದರು ಶ್ರೀ ರಾಮಕೃಷ್ಣ ಪರಮಹಂಸರನ್ನು ಭೇಟಿಯಾದರು.  ಆನಂತರ ವಿವೇಕಾನಂದರು ಹಿಡಿದ ಹಾದಿ ಆಧ್ಯಾತ್ಮಿಕತೆಯ ಹಾದಿ. ವಸಾಹತುಶಾಹಿ ಅವಧಿಯ ಭಾರತದಲ್ಲಿ ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ಮಿಶನ್ ಸ್ಥಾಪಿಸಿದ ವಿವೇಕಾನಂದರು ದೇಶದ ಜನರಲ್ಲಿ ರಾಷ್ಟ್ರೀಯತೆಯ ಕಿಚ್ಚನ್ನು ಜಾಗೃತಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದರು. ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಶನ್ ತತ್ವಶಾಸ್ತ್ರ ಹಾಗೂ ವೇದಾಂತ ಸಂಬಂಧಿತ ವಿಷಯಗಳನ್ನು ಬೋಧಿಸುವ ಪ್ರಮುಖ ಕೇಂದ್ರಗಳಾದವು.

 ಹಿಂದೂ ಧರ್ಮದಲ್ಲಿದ್ದ ಅನಿಷ್ಠ ಪದ್ಧತಿಗಳಾದ  ಮಡಿ, ಮೈಲಿಗೆ, ಜಾತಿಯತೆ ಹಾಗೂ ಕಂದಾಚಾರಗಳ ಬಗ್ಗೆ ತಮ್ಮ ವಿರೋಧ ವ್ಯಕ್ತಪಡಿಸುತ್ತಲೇ ಹಿಂದೂಧರ್ಮದ ಅಂತಃಸತ್ವ, ಅದರ ಸಾರವನ್ನು ಇಡೀ ಜಗತ್ತಿಗೇ ತಮ್ಮದೇ ಆದ ಆಳವಾದ ವಿಚಾರಧಾರೆಯ ಮೂಲಕ ಪಸರಿಸಿದರು.

‘ಪೂರ್ವ ದೇಶದ ವಿಚಿತ್ರ ಧರ್ಮ’ :

ಚಿಕಾಗೋ ಸರ್ವಧರ್ಮ ಸಮ್ಮೇಳನದಲ್ಲಿ ಭಾಗವಹಿಸಿದ್ದ ಸ್ವಾಮಿ ವಿವೇಕಾನಂದರು

ಚಿಕಾಗೋದಲ್ಲಿ 1893 ರಲ್ಲಿ‌ ನಡೆದ ವಿಶ್ವ ಸರ್ವಧರ್ಮ ಸಮ್ಮೇಳನದಲ್ಲಿ ತಮ್ಮ ಭಾಷಣದ ಆರಂಭದಲ್ಲಿ “ಅಮೆರಿಕದ ಸಹೋದರ, ಸಹೋದರಿಯರೇ” ಎಂಬ ಸಂಬೋಧನೆ ಅಲ್ಲಿ ನೆರೆದಿದ್ದವರೆಲ್ಲರ ಗಮನವನ್ನು ಸೂಜಿಗಲ್ಲಿನಂತೆ ಸೆಳೆದಿತ್ತು. ಪಾಶ್ಚಿಮಾತ್ಯರು ಭಾರತದ ಬಗ್ಗೆ ಇದ್ದ ಅಭಿಪ್ರಾಯವನ್ನೇ ಬದಲಿಸಿ, ಹಿಂದೂಧರ್ಮದಲ್ಲಿದ್ದ ಅಮೂಲ್ಯ ಅಂಶಗಳನ್ನು ತಮ್ಮ ಪ್ರಖರ ಮಾತುಗಳ ಮೂಲಕ ತಿಳಿಹೇಳಿದರು. ಇದು ಮಿಂಚಿನಂತೆ ಅಲ್ಲಿನ ಜನರನ್ನು ಆಕರ್ಷಿಸಿತು.

ಈ ಸಮ್ಮೇಳನಕ್ಕಿಂತ ಮುಂಚೆ ‘ಪೂರ್ವ ದೇಶದ ವಿಚಿತ್ರ ಧರ್ಮ’ ಎಂದು ಪರಿಗಣಿತವಾಗಿದ್ದ ಹಿಂದೂ ಧರ್ಮದ ತಾತ್ವಿಕ ಹಾಗೂ ಧಾರ್ಮಿಕ ಸಂಪ್ರದಾಯಗಳು, ಸಮ್ಮೇಳನದಲ್ಲಿ ಸ್ವಾಮಿ ವಿವೇಕಾನಂದರ ಅಭೂತಪೂರ್ವ ಭಾಷಣದ ಬಳಿಕ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲೂ ಗುರುತಿಸಲ್ಪಟ್ಟಿತು.

ಹಿಂದೂಧರ್ಮದ ಪುನರುತ್ಥಾನ :

ಹಿಂದೂಧರ್ಮದ ಪುನರುತ್ಥಾನಕ್ಕೆ ಹೊಸ ಭಾಷ್ಯ ಬರೆದ ಸ್ವಾಮಿ ವಿವೇಕಾನಂದರು ಜ್ಞಾನಯೋಗ, ಭಕ್ತಿ ಯೋಗ, ಕರ್ಮಯೋಗ‌ ಹಾಗೂ ರಾಜಯೋಗ ಎಂಬ ಗ್ರಂಥಗಳನ್ನು ರಚಿಸಿದರು. ತತ್ವಶಾಸ್ತ್ರ ಹಾಗೂ ವೇದಾಂತ ಕುರಿತ ಅವರ ವಿಚಾರಧಾರೆಗಳು, ಆಲೋಚನೆಗಳು ಆ ವೀರಸನ್ಯಾಸಿಯ ಪ್ರವಚನಗಳಲ್ಲಿ, ಸ್ನೇಹಿತರು, ಶಿಷ್ಯರಿಗೆ ಬರೆದ ಪತ್ರಗಳಲ್ಲಿ, ಅವರು ಬರೆದ ಕವನಗಳಲ್ಲಿ, ಹಾಡುಗಳಲ್ಲಿ ಹಾಸು ಹೊಕ್ಕಾಗಿ ಕಂಡುಬರುತ್ತಿತ್ತು.

  • ಬೇಲೂರು ಮಠ
ಚಿತ್ರ ಕೃಪೆ : ವಿಕಿಪೀಡಿಯಾ

‘ಶಕ್ತಿಯೆಲ್ಲ ನಿಮ್ಮೊಳಗೇ ಇದೆ’ :

“ಇತರರಿಗಾಗಿ ಯಾರು ಮರುಗುತ್ತಾರೋ, ಅವರೇ ನಿಜವಾಗಿ ಬದುಕಿರುವವರು. ಉಳಿದವರು ಬದುಕಿಯೂ ಸತ್ತಂತೆ” ಎಂಬ ದಿವ್ಯ ನುಡಿಯನ್ನು ನುಡಿದ ವೀರಸನ್ಯಾಸಿ, “ಶಕ್ತಿಯೆಲ್ಲ ನಿಮ್ಮೊಳಗೇ ಇದೆ ; ನೀವು ಏನು ಬೇಕಾದರೂ ಮಾಡಬಲ್ಲಿರಿ, ಎಲ್ಲವನ್ನೂ ಮಾಡಬಲ್ಲಿರಿ” ಎಂದು ಹೇಳುತ್ತಲೇ ಕೋಟ್ಯಾಂತರ ಯುವ ಮನಸ್ಸುಗಳಲ್ಲಿ ಶಾಶ್ವತ ಸ್ಥಾನ ಪಡೆದ ಸ್ವಾಮಿ ವಿವೇಕಾನಂದರು 4ನೇ ಜುಲೈ 1902 ರಂದು ಬೇಲೂರು ಮಠದಲ್ಲಿ ಧ್ಯಾನಾಸಕ್ತರಾಗಿದ್ದಾಗಲೇ ಇಹಲೋಕದ ಪಯಣ ಮುಗಿಸಿದರು. ದೈಹಿಕವಾಗಿ ಸ್ವಾಮಿ ವಿವೇಕಾನಂದರು ಅಗಲಿದರೂ, ಅವರ ವಿಚಾರಧಾರೆ, ಕಿಡಿನುಡಿಗಳು, ಸ್ಪೂರ್ತಿದಾಯಕ ಮಾತುಗಳು ನೂರಾರು ವರ್ಷಗಳು ಕಳೆದರೂ ಗತಿಸಲಾರವು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW INVESTIGATION -1 | COVID GOALMAL | ಕೋವಿಡ್ ನಿಯಂತ್ರಣಕ್ಕೆ ಬಿಬಿಎಂಪಿ ಖರ್ಚು ಮಾಡಿದ 880 ಕೋಟಿ ರೂ. ಹಣದಲ್ಲಿ ಅಕ್ರಮದ ಘಾಟು…..!

Next Post

ISRO Gaganyan News | ಇಸ್ರೋ ಗಗನಯಾನದ ಕ್ರಯೋಜಿನಿಕ್ ಎಂಜಿನ್ ಯಶಸ್ವಿ ಪರೀಕ್ಷೆ

Next Post

ISRO Gaganyan News | ಇಸ್ರೋ ಗಗನಯಾನದ ಕ್ರಯೋಜಿನಿಕ್ ಎಂಜಿನ್ ಯಶಸ್ವಿ ಪರೀಕ್ಷೆ

Makar Sankranthi 2022 | ಸಂಕ್ರಾಂತಿ ಹಬ್ಬಕ್ಕೆ ಮೂರನೇ ಅಲೆಯ ಭೀತಿಯ ಛಾಯೆ....! ಸಂಕ್ರಾಂತಿ ಹಬ್ಬದ ಅಗತ್ಯ ವಸ್ತುಗಳ ಬೆಲೆಗಳ ಡಿಟೇಲ್ಸ್ ಇಲ್ಲಿದೆ ನೋಡಿ...

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d