Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

NON KAS OFFICERS FACE KPSC EXAMS | ಕೆಎಎಸ್ ಹೊರತುಪಡಿಸಿದ ನಾಗರೀಕ ಸೇವೆ ಅಧಿಕಾರಿಗಳಿಗೆ ಐಎಎಸ್ ಆಯ್ಕೆಗೆ ಲಿಖಿತ ಪರೀಕ್ಷೆ ಖಡ್ಡಾಯ…!

ಐಎಎಸ್ ಆಯ್ಕೆ ಮೂಲಕ ನೇಮಕಾತಿ ಶಿಫಾರಸ್ಸಿಗೆ ಸೂಕ್ತ ಮಾನದಂಡವೇ ಇರಲಿಲ್ಲ | ಪ್ರಭಾವಿಗಳೇ ಈವರೆಗೆ ಕೆಎಎಸ್ ಯೇತರ ಅಧಿಕಾರಿಗಳಿಗೆ ಐಎಎಸ್ ಹುದ್ದೆ ಗಿಟ್ಟಿಸುತ್ತಿದ್ದರು | ಹೊಸ ಕಾರ್ಯವಿಧಾನದಿಂದ ಅರ್ಹರಿಗೆ ಅನುಕೂಲ

by Bengaluru Wire Desk
February 18, 2022
in News Wire
Reading Time: 1 min read
0
ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ ಇನ್ನುಮುಂದೆ ಕರ್ನಾಟಕ ನಾಗರೀಕ ಸೇವೆ ಹೊರತುಪಡಿಸಿದ ಅಧಿಕಾರಿಗಳಿಗೆ (Non –State Civil Service) ಭಾರತೀಯ ನಾಗರೀಕ ಸೇವಾವೃಂದ (Indian Civil Service)ಕ್ಕೆ ಪರಿಗಣಿಸಲು ಹಾಗೂ ಶಿಫಾರಸ್ಸು ಮಾಡಲು ಕರ್ನಾಟಕ ಲೋಕಸೇವಾ ಆಯೋಗ(KPSC)ದಿಂದ ಪರೀಕ್ಷೆ ನಡೆಸಿ ಅದರ ಫಲಿತಾಂಶದ ಆಧಾರದ ಮೇಲೆ ಕೇಂದ್ರ ಲೋಕಾಸೇವಾ ಆಯೋಗ (UPSC)ಕ್ಕೆ ಅರ್ಹ ಅಧಿಕಾರಿಗಳ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ತನ್ನ ನಿಯಮಾವಳಿಗಳಿಗೆ ಇತ್ತೀಚೆಗೆ ತಿದ್ದುಪಡಿ ತಂದಿದೆ.

ಕರ್ನಾಟಕದಲ್ಲಿ ಈತನಕ ರಾಜ್ಯೇತರ ನಾಗರೀಕ ಸೇವೆ (NON KAS) ಹುದ್ದೆಗಳಲ್ಲಿರುವ ಕೃಷಿ, ಆರ್ಥಿಕ ಇಲಾಖೆ, ಸಾರಿಗೆ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಕೇವಲ ಆಯಾ ಇಲಾಖೆಗಳ ಜೇಷ್ಠತಾಪಟ್ಟಿ ಹಾಗೂ ಆಯಾ ವ್ಯಕ್ತಿಯು ಎಷ್ಟರ ಮಟ್ಟಿಗೆ ಪ್ರಭಾವಿ ಎಂಬುದರ ಆಧಾರದ ಮೇಲೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸುತ್ತಿದ್ದ ಶಿಫಾರಸ್ಸು ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಿದ್ದರು.

ಭಾರತೀಯ ನಾಗರೀಕ ಸೇವಾ ವೃಂದಕ್ಕೆ ಪರಿಗಣಿಸಲು ಹಾಗೂ ಶಿಫಾರಸ್ಸು ಮಾಡುವ ಪ್ರಕ್ರಿಯೆಯು ಇದರಿಂದಾಗಿ ಹೆಚ್ಚು ವ್ಯಕ್ತಿಗತವಾಗಿರುತ್ತಿತ್ತು. ಅಲ್ಲದೆ ಇದರ ಪರಿಣಾಮವಾಗಿ ನ್ಯಾಯಾಲಯಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿ, ಕೇಂದ್ರ ನಾಗರೀಕ ಸೇವಾ ವೃಂದಕ್ಕೆ ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ವಿಳಂಬಗೊಳ್ಳುತ್ತಿತ್ತು. ಹೀಗಾಗಿ ಈ ನಿಟ್ಟಿನಲ್ಲಿ ಭಾರತೀಯ ನಾಗರೀಕ ಸೇವಾ (ಆಯ್ಕೆ ಮೂಲಕ ನೇಮಕಾತಿ) ನಿಯಮಾವಳಿ 1977ರ ನಿಯಮ 2(ಎ) ಪ್ರಕಾರ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು (KAS) ಹೊರತುಪಡಿಸಿ ಉಳಿದಂತೆ ಸಿವಿಲ್ ಸೇವೆಯಲ್ಲಿರುವ ಅಧಿಕಾರಿಗಳಿಗೆ ಭಾರತೀಯ ಆಡಳಿತ ಸೇವೆ (IAS) ವೃಂದಕ್ಕೆ ನೇಮಿಸಲು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ (DPAR) ಇಲಾಖೆ ಫೆ.10ರಂದು ಈ ಸಂಬಂಧ ಆದೇಶ ಹೊರಡಿಸಿದೆ.

ವಿಧಾನಸೌಧದ ಸಾಂದರ್ಭಿಕ ಚಿತ್ರ

ಗುಜರಾತ್, ಹರಿಯಾಣ ಸೇರಿದಂತೆ ಮುಂತಾದ ವಿವಿಧ ರಾಜ್ಯಗಳಲ್ಲಿ ಕೇಂದ್ರ ಲೋಕಸೇವಾ ಆಯೋಗಕ್ಕೆ ಅಧಿಕಾರಿಗಳ ಹೆಸರನ್ನು ಶಿಫಾರಸ್ಸು ಮಾಡಲು ಲಿಖಿತ ಪರೀಕ್ಷೆಗಳನ್ನು ಈಗಾಗಲೇ ಪರಿಚಯಿಸಿವೆ. ಇದರಿಂದ NON- SCS ವೃಂದ ಅಧಿಕಾರಿಗಳಿಗೆ IAS ವೃಂದಕ್ಕೆ ಆಯ್ಕೆ ಹೊಂದಲು ಸಮಾನಾಂತರ ಅವಕಾಶಗಳು ದೊರೆಯುತ್ತದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

ಹೇಗೆ ನಡೆಯಲಿದೆ ಐಎಎಸ್ ಆಯ್ಕೆಗೆ ರಾಜ್ಯ ಸರ್ಕಾರದ ಶಿಫಾರಸ್ಸು ಪ್ರಕ್ರಿಯೆ?

ಕೇಂದ್ರ ಲೋಕಸೇವಾ ಆಯೋಗದ ಐಎಎಸ್ ಹುದ್ದೆಗೆ ಅರ್ಹರಿರುವ ಕೆಎಎಎಸ್ ಸೇವೆ ಹೊರತುಪಡಿಸಿದ ರಾಜ್ಯೇತರ ನಾಗರೀಕ ಸೇವೆಯ ಅಭ್ಯರ್ಥಿಗಳು ಕೆಪಿಎಸ್ ಸ್ಸಿ ಅಧಿಸೂಚನೆ ಹೊರಡಿಸುವ ಲಿಖಿತ ಪರೀಕ್ಷೆಗೆ (Objective Type) ಅರ್ಜಿ ಸಲ್ಲಿಸಬಹುದು. ಈ ಲಿಖಿತ ಪರೀಕ್ಷೆಯಲ್ಲಿ ಎಲ್ಲಾ ಅಧಿಕಾರಿಗಳು ಪಡೆದ ಅಂಕಗಳೊಂದಿಗೆ ಶ್ರೇಣಿಪಟ್ಟಿಯನ್ನು ಕೆಪಿಎಸ್ ಸ್ಸಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ. ಈ ಶ್ರೇಣಿಪಟ್ಟಿ ಹಾಗೂ ರಾಜ್ಯ ಸರ್ಕಾರವು ಅರ್ಹ ಅಧಿಕಾರಿಗಳ ಸಿಆರ್ ದಸ್ತಾವೇಜಿನ ಜೊತೆಗೆ ನಿಗಧಿತ ಫಾರ್ಮ್ ನಲ್ಲಿ ಆಯಾ ಇಲಾಖೆಗಳಿಂದ ಅಭ್ಯರ್ಥಿಗಳ ಸೇವಾ ಮಾಹಿತಿಗಳ ಸಾರಾಂಶವನ್ನು ಪಡೆದು, ಕೇಂದ್ರ ಸರ್ಕಾರ ಅಥವಾ ಕೇಂದ್ರ ಲೋಕಾಸೇವಾ ಆಯೋಗಕ್ಕೆ ಅರ್ಹತೆಯ ಆಧಾರದಲ್ಲಿ ಹೆಸರನ್ನು ಶಿಫಾರಸ್ಸು ಮಾಡಲಿದೆ.

ರಾಜ್ಯದಲ್ಲಿ ಸದ್ಯ 260 ಐಎಎಸ್ ಅಧಿಕಾರಿಗಳು, 170ಕ್ಕೂ ಹೆಚ್ಚು ಐಪಿಎಸ್ ಅಧಿಕಾರಿಗಳು ಹಾಗೂ 360ಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಐಎಎಸ್ ಆಯ್ಕೆ ಪ್ರಕ್ರಿಯೆಗೆ ಶಿಫಾರಸ್ಸು ಮಾಡಲು ಅಭ್ಯರ್ಥಿಗಳಿಗಾಗಿ ಈ ಕೆಳಕಂಡ ವಿಷಯಗಳನ್ನು ಪರೀಕ್ಷೆಯ ಪಠ್ಯಕ್ರಮವಾಗಿ ಪರಿಗಣಿಸಿದೆ :

ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಾಮುಖ್ಯತೆಗೆ ಸಂಬಂಧಿಸಿದ ಪ್ರಚಲಿತ ವಿದ್ಯಮಾನಗಳು, ಇತಿಹಾಸ ಮತ್ತು ಪರಂಪರೆಗಳು (ಭಾರತ ಹಾಗೂ ಕರ್ನಾಟಕ), ಪ್ರಚಲಿತ ಸನ್ನಿವೇಶದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಅರ್ಥಶಾಸ್ತ್ರದ ಪರಿಕಲ್ಪನೆ, ಭಾರತ ಸಂವಿಧಾನದ ಅವಲೋಕನ, ಪರಿಸರ ವಿಜ್ಞಾನ, ಜೀವವೈವಿಧ್ಯತೆ ಮತ್ತು ಹವಾಮಾನ ಬದಲಾವಣೆಯಲ್ಲಿನ ಸಾಮಾನ್ಯ ಜ್ಞಾನ, ಪ್ರಮುಖವಾದ ಅಂತರರಾಷ್ಟ್ರೀಯ ಸಂಸ್ಥೆಗಳು, ಏಜನ್ಸೀಸ್ ಮತ್ತು ಅವುಗಳ ರಚನೆ, ಕರ್ತವ್ಯಗಳು, ಭಾರತದ ಅಂತರರಾಷ್ಟ್ರೀಯ ಸಂಬಂಧಗಳು, ಮಾಹಿತಿ ತಂತ್ರಜ್ಞಾನ, ಬಾಹ್ಯಾಕಾಶ, ಕಂಪ್ಯೂರ್ ಗಳು, ರೋಬೋಟಿಕ್ಸ್, ನ್ಯಾನೋ- ಟೆಕ್ನಾಲಜಿ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿನ ಸಾಮಾನ್ಯ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ಧಿ ಮತ್ತು ಅದರ ಅನ್ವಯಿಸುವಿಕೆ, ಸಾಮಾನ್ಯ ವಿಜ್ಞಾನ, ತಾರ್ಕಿಕ ಮತ್ತು ವಿಶ್ಲೇಷಣಾತ್ಮಕ ಸಾಮರ್ಥ್ಯ ವಿಷಯಗಳನ್ನು ಲಿಖಿತ ಪರೀಕ್ಷೆಗೆ ಪಠ್ಯಕ್ರಮವಾಗಿ ನಿಗಧಿಪಡಿಸಿದೆ.

ಖಾಲಿಯಿರುವ ಐಎಎಸ್ ವೃಂದದ ಹುದ್ದೆ ಹೇಗೆ ಭರ್ತಿಮಾಡಲಾಗುತ್ತಿತ್ತು?

ರಾಜ್ಯದಲ್ಲಿ ಐಎಎಸ್ ಹುದ್ದೆ ಖಾಲಿಯಾದಾಗ ಸಾಮಾನ್ಯವಾಗಿ 65:35 ಅನುಪಾತದ ಪೈಕಿ 65 ಅನುಪಾತದ ಖಾಲಿ ಹುದ್ದೆಯನ್ನು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣದ ಅರ್ಹ ಅಭ್ಯರ್ಥಿಗಳನ್ನು ತುಂಬಲಾಗುತ್ತಿತ್ತು. ಉಳಿದ 35ರ ಅನುಪಾತದ ಭಾಗದ ಖಾಲಿ ಹುದ್ದೆಯಲ್ಲಿ ಶೇ.6ರಷ್ಟು ಹುದ್ದೆಯನ್ನು ಕೆಎಎಸ್ ಅಲ್ಲದ ನಾಗರೀಕ ಸೇವಾ ಅಧಿಕಾರಿಗಳನ್ನು ನೇಮಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುತ್ತಿತ್ತು. ಶೇ.94ರಷ್ಟು ಹುದ್ದೆಯನ್ನು ಕೆಎಎಎಸ್ ಅಧಿಕಾರಿಗಳಿಗೆ ಮೀಸಲಿಡಲಾಗುತ್ತಿತ್ತು. ಆಯ್ಕೆ ಪ್ರಕ್ರಿಯೆಗೆ ಕೆಎಎಸ್ ಅಥವಾ ರಾಜ್ಯೇತರ ನಾಗರೀಕ ಸೇವೆಯ ಅಧಿಕಾರಿಗಳು ಕನಿಷ್ಠ 8 ವರ್ಷ ಸೇವೆ ಸಲ್ಲಿಸಬೇಕಾಗಿರುತ್ತದೆ. ಎಷ್ಟೋ ವೇಳೆ ಪ್ರತಿ ವರ್ಷ ಖಾಲಿಯಿರುವ ಐಎಎಸ್ ಹುದ್ದೆಗಳಿಗೆ ಅರ್ಹರನ್ನು ಆಯ್ಕೆ ಮೂಲಕ ಶಿಫಾರಸ್ಸು ಮಾಡುವಾಗ ಸೂಕ್ತ ಮಾನದಂಡಗಳಿಲ್ಲದೆ ಪ್ರಭಾವಿಗಳಷ್ಟೇ ಐಎಎಸ್ ಹುದ್ದೆಗಳನ್ನು ಪಡೆಯುವಂತಾಗುತ್ತಿತ್ತು.

ಇದೀಗ ಪರೀಕ್ಷೆಯ ಮೂಲಕ ರಾಜ್ಯ ನಾಗರೀಕ ಸೇವೆಯೇತರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರ ಸೂಕ್ತ ಕಾರ್ಯವಿಧಾನವನ್ನು ಅಳವಡಿಸಿಕೊಂಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ACB TRAP 3 Officials Arrest | ಪೋನ್ ಪೇ ಮೂಲಕ ಲಂಚದ ಹಣ ಪಡೆದು ಸಿಕ್ಕಬಿದ್ದ ಭೂಪ…! : ಎಸಿಬಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಸರ್ಕಾರಿ ನೌಕರರ ಬಂಧನ

Next Post

Smart City Bengaluru | ನಡಿಗೆ ಮತ್ತು ಓಟದ ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ ಗರಿ

Next Post

Smart City Bengaluru | ನಡಿಗೆ ಮತ್ತು ಓಟದ ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ ಗರಿ

ಛತ್ರಪತಿ ಶಿವಾಜಿ 395ನೇ ಜಯಂತ್ಯೋತ್ಸವ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d