Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

NON KAS OFFICERS FACE KPSC EXAMS | ಕೆಎಎಸ್ ಹೊರತುಪಡಿಸಿದ ನಾಗರೀಕ ಸೇವೆ ಅಧಿಕಾರಿಗಳಿಗೆ ಐಎಎಸ್ ಆಯ್ಕೆಗೆ ಲಿಖಿತ ಪರೀಕ್ಷೆ ಖಡ್ಡಾಯ…!

ಐಎಎಸ್ ಆಯ್ಕೆ ಮೂಲಕ ನೇಮಕಾತಿ ಶಿಫಾರಸ್ಸಿಗೆ ಸೂಕ್ತ ಮಾನದಂಡವೇ ಇರಲಿಲ್ಲ | ಪ್ರಭಾವಿಗಳೇ ಈವರೆಗೆ ಕೆಎಎಸ್ ಯೇತರ ಅಧಿಕಾರಿಗಳಿಗೆ ಐಎಎಸ್ ಹುದ್ದೆ ಗಿಟ್ಟಿಸುತ್ತಿದ್ದರು | ಹೊಸ ಕಾರ್ಯವಿಧಾನದಿಂದ ಅರ್ಹರಿಗೆ ಅನುಕೂಲ

by Bengaluru Wire Desk
February 18, 2022
in News Wire
Reading Time: 1 min read
0
ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ ಇನ್ನುಮುಂದೆ ಕರ್ನಾಟಕ ನಾಗರೀಕ ಸೇವೆ ಹೊರತುಪಡಿಸಿದ ಅಧಿಕಾರಿಗಳಿಗೆ (Non –State Civil Service) ಭಾರತೀಯ ನಾಗರೀಕ ಸೇವಾವೃಂದ (Indian Civil Service)ಕ್ಕೆ ಪರಿಗಣಿಸಲು ಹಾಗೂ ಶಿಫಾರಸ್ಸು ಮಾಡಲು ಕರ್ನಾಟಕ ಲೋಕಸೇವಾ ಆಯೋಗ(KPSC)ದಿಂದ ಪರೀಕ್ಷೆ ನಡೆಸಿ ಅದರ ಫಲಿತಾಂಶದ ಆಧಾರದ ಮೇಲೆ ಕೇಂದ್ರ ಲೋಕಾಸೇವಾ ಆಯೋಗ (UPSC)ಕ್ಕೆ ಅರ್ಹ ಅಧಿಕಾರಿಗಳ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರ್ಕಾರ ತನ್ನ ನಿಯಮಾವಳಿಗಳಿಗೆ ಇತ್ತೀಚೆಗೆ ತಿದ್ದುಪಡಿ ತಂದಿದೆ.

ಕರ್ನಾಟಕದಲ್ಲಿ ಈತನಕ ರಾಜ್ಯೇತರ ನಾಗರೀಕ ಸೇವೆ (NON KAS) ಹುದ್ದೆಗಳಲ್ಲಿರುವ ಕೃಷಿ, ಆರ್ಥಿಕ ಇಲಾಖೆ, ಸಾರಿಗೆ ಸೇರಿದಂತೆ ಮತ್ತಿತರ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅಧಿಕಾರಿಗಳನ್ನು ಕೇವಲ ಆಯಾ ಇಲಾಖೆಗಳ ಜೇಷ್ಠತಾಪಟ್ಟಿ ಹಾಗೂ ಆಯಾ ವ್ಯಕ್ತಿಯು ಎಷ್ಟರ ಮಟ್ಟಿಗೆ ಪ್ರಭಾವಿ ಎಂಬುದರ ಆಧಾರದ ಮೇಲೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸುತ್ತಿದ್ದ ಶಿಫಾರಸ್ಸು ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಿದ್ದರು.

ಭಾರತೀಯ ನಾಗರೀಕ ಸೇವಾ ವೃಂದಕ್ಕೆ ಪರಿಗಣಿಸಲು ಹಾಗೂ ಶಿಫಾರಸ್ಸು ಮಾಡುವ ಪ್ರಕ್ರಿಯೆಯು ಇದರಿಂದಾಗಿ ಹೆಚ್ಚು ವ್ಯಕ್ತಿಗತವಾಗಿರುತ್ತಿತ್ತು. ಅಲ್ಲದೆ ಇದರ ಪರಿಣಾಮವಾಗಿ ನ್ಯಾಯಾಲಯಗಳಲ್ಲಿ ಹಲವಾರು ಪ್ರಕರಣಗಳು ದಾಖಲಾಗಿ, ಕೇಂದ್ರ ನಾಗರೀಕ ಸೇವಾ ವೃಂದಕ್ಕೆ ಅಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ವಿಳಂಬಗೊಳ್ಳುತ್ತಿತ್ತು. ಹೀಗಾಗಿ ಈ ನಿಟ್ಟಿನಲ್ಲಿ ಭಾರತೀಯ ನಾಗರೀಕ ಸೇವಾ (ಆಯ್ಕೆ ಮೂಲಕ ನೇಮಕಾತಿ) ನಿಯಮಾವಳಿ 1977ರ ನಿಯಮ 2(ಎ) ಪ್ರಕಾರ ಕರ್ನಾಟಕ ಆಡಳಿತ ಸೇವಾ ಅಧಿಕಾರಿಗಳನ್ನು (KAS) ಹೊರತುಪಡಿಸಿ ಉಳಿದಂತೆ ಸಿವಿಲ್ ಸೇವೆಯಲ್ಲಿರುವ ಅಧಿಕಾರಿಗಳಿಗೆ ಭಾರತೀಯ ಆಡಳಿತ ಸೇವೆ (IAS) ವೃಂದಕ್ಕೆ ನೇಮಿಸಲು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ (DPAR) ಇಲಾಖೆ ಫೆ.10ರಂದು ಈ ಸಂಬಂಧ ಆದೇಶ ಹೊರಡಿಸಿದೆ.

ವಿಧಾನಸೌಧದ ಸಾಂದರ್ಭಿಕ ಚಿತ್ರ

ಗುಜರಾತ್, ಹರಿಯಾಣ ಸೇರಿದಂತೆ ಮುಂತಾದ ವಿವಿಧ ರಾಜ್ಯಗಳಲ್ಲಿ ಕೇಂದ್ರ ಲೋಕಸೇವಾ ಆಯೋಗಕ್ಕೆ ಅಧಿಕಾರಿಗಳ ಹೆಸರನ್ನು ಶಿಫಾರಸ್ಸು ಮಾಡಲು ಲಿಖಿತ ಪರೀಕ್ಷೆಗಳನ್ನು ಈಗಾಗಲೇ ಪರಿಚಯಿಸಿವೆ. ಇದರಿಂದ NON- SCS ವೃಂದ ಅಧಿಕಾರಿಗಳಿಗೆ IAS ವೃಂದಕ್ಕೆ ಆಯ್ಕೆ ಹೊಂದಲು ಸಮಾನಾಂತರ ಅವಕಾಶಗಳು ದೊರೆಯುತ್ತದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಲಾಗಿದೆ.

ಹೇಗೆ ನಡೆಯಲಿದೆ ಐಎಎಸ್ ಆಯ್ಕೆಗೆ ರಾಜ್ಯ ಸರ್ಕಾರದ ಶಿಫಾರಸ್ಸು ಪ್ರಕ್ರಿಯೆ?

ಕೇಂದ್ರ ಲೋಕಸೇವಾ ಆಯೋಗದ ಐಎಎಸ್ ಹುದ್ದೆಗೆ ಅರ್ಹರಿರುವ ಕೆಎಎಎಸ್ ಸೇವೆ ಹೊರತುಪಡಿಸಿದ ರಾಜ್ಯೇತರ ನಾಗರೀಕ ಸೇವೆಯ ಅಭ್ಯರ್ಥಿಗಳು ಕೆಪಿಎಸ್ ಸ್ಸಿ ಅಧಿಸೂಚನೆ ಹೊರಡಿಸುವ ಲಿಖಿತ ಪರೀಕ್ಷೆಗೆ (Objective Type) ಅರ್ಜಿ ಸಲ್ಲಿಸಬಹುದು. ಈ ಲಿಖಿತ ಪರೀಕ್ಷೆಯಲ್ಲಿ ಎಲ್ಲಾ ಅಧಿಕಾರಿಗಳು ಪಡೆದ ಅಂಕಗಳೊಂದಿಗೆ ಶ್ರೇಣಿಪಟ್ಟಿಯನ್ನು ಕೆಪಿಎಸ್ ಸ್ಸಿಯು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದೆ. ಈ ಶ್ರೇಣಿಪಟ್ಟಿ ಹಾಗೂ ರಾಜ್ಯ ಸರ್ಕಾರವು ಅರ್ಹ ಅಧಿಕಾರಿಗಳ ಸಿಆರ್ ದಸ್ತಾವೇಜಿನ ಜೊತೆಗೆ ನಿಗಧಿತ ಫಾರ್ಮ್ ನಲ್ಲಿ ಆಯಾ ಇಲಾಖೆಗಳಿಂದ ಅಭ್ಯರ್ಥಿಗಳ ಸೇವಾ ಮಾಹಿತಿಗಳ ಸಾರಾಂಶವನ್ನು ಪಡೆದು, ಕೇಂದ್ರ ಸರ್ಕಾರ ಅಥವಾ ಕೇಂದ್ರ ಲೋಕಾಸೇವಾ ಆಯೋಗಕ್ಕೆ ಅರ್ಹತೆಯ ಆಧಾರದಲ್ಲಿ ಹೆಸರನ್ನು ಶಿಫಾರಸ್ಸು ಮಾಡಲಿದೆ.

ರಾಜ್ಯದಲ್ಲಿ ಸದ್ಯ 260 ಐಎಎಸ್ ಅಧಿಕಾರಿಗಳು, 170ಕ್ಕೂ ಹೆಚ್ಚು ಐಪಿಎಸ್ ಅಧಿಕಾರಿಗಳು ಹಾಗೂ 360ಕ್ಕೂ ಹೆಚ್ಚು ಕೆಎಎಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ಐಎಎಸ್ ಆಯ್ಕೆ ಪ್ರಕ್ರಿಯೆಗೆ ಶಿಫಾರಸ್ಸು ಮಾಡಲು ಅಭ್ಯರ್ಥಿಗಳಿಗಾಗಿ ಈ ಕೆಳಕಂಡ ವಿಷಯಗಳನ್ನು ಪರೀಕ್ಷೆಯ ಪಠ್ಯಕ್ರಮವಾಗಿ ಪರಿಗಣಿಸಿದೆ :

ರಾಜ್ಯ, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರಾಮುಖ್ಯತೆಗೆ ಸಂಬಂಧಿಸಿದ ಪ್ರಚಲಿತ ವಿದ್ಯಮಾನಗಳು, ಇತಿಹಾಸ ಮತ್ತು ಪರಂಪರೆಗಳು (ಭಾರತ ಹಾಗೂ ಕರ್ನಾಟಕ), ಪ್ರಚಲಿತ ಸನ್ನಿವೇಶದಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ಅರ್ಥಶಾಸ್ತ್ರದ ಪರಿಕಲ್ಪನೆ, ಭಾರತ ಸಂವಿಧಾನದ ಅವಲೋಕನ, ಪರಿಸರ ವಿಜ್ಞಾನ, ಜೀವವೈವಿಧ್ಯತೆ ಮತ್ತು ಹವಾಮಾನ ಬದಲಾವಣೆಯಲ್ಲಿನ ಸಾಮಾನ್ಯ ಜ್ಞಾನ, ಪ್ರಮುಖವಾದ ಅಂತರರಾಷ್ಟ್ರೀಯ ಸಂಸ್ಥೆಗಳು, ಏಜನ್ಸೀಸ್ ಮತ್ತು ಅವುಗಳ ರಚನೆ, ಕರ್ತವ್ಯಗಳು, ಭಾರತದ ಅಂತರರಾಷ್ಟ್ರೀಯ ಸಂಬಂಧಗಳು, ಮಾಹಿತಿ ತಂತ್ರಜ್ಞಾನ, ಬಾಹ್ಯಾಕಾಶ, ಕಂಪ್ಯೂರ್ ಗಳು, ರೋಬೋಟಿಕ್ಸ್, ನ್ಯಾನೋ- ಟೆಕ್ನಾಲಜಿ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿನ ಸಾಮಾನ್ಯ ಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನದ ಅಭಿವೃದ್ಧಿ ಮತ್ತು ಅದರ ಅನ್ವಯಿಸುವಿಕೆ, ಸಾಮಾನ್ಯ ವಿಜ್ಞಾನ, ತಾರ್ಕಿಕ ಮತ್ತು ವಿಶ್ಲೇಷಣಾತ್ಮಕ ಸಾಮರ್ಥ್ಯ ವಿಷಯಗಳನ್ನು ಲಿಖಿತ ಪರೀಕ್ಷೆಗೆ ಪಠ್ಯಕ್ರಮವಾಗಿ ನಿಗಧಿಪಡಿಸಿದೆ.

ಖಾಲಿಯಿರುವ ಐಎಎಸ್ ವೃಂದದ ಹುದ್ದೆ ಹೇಗೆ ಭರ್ತಿಮಾಡಲಾಗುತ್ತಿತ್ತು?

ರಾಜ್ಯದಲ್ಲಿ ಐಎಎಸ್ ಹುದ್ದೆ ಖಾಲಿಯಾದಾಗ ಸಾಮಾನ್ಯವಾಗಿ 65:35 ಅನುಪಾತದ ಪೈಕಿ 65 ಅನುಪಾತದ ಖಾಲಿ ಹುದ್ದೆಯನ್ನು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣದ ಅರ್ಹ ಅಭ್ಯರ್ಥಿಗಳನ್ನು ತುಂಬಲಾಗುತ್ತಿತ್ತು. ಉಳಿದ 35ರ ಅನುಪಾತದ ಭಾಗದ ಖಾಲಿ ಹುದ್ದೆಯಲ್ಲಿ ಶೇ.6ರಷ್ಟು ಹುದ್ದೆಯನ್ನು ಕೆಎಎಸ್ ಅಲ್ಲದ ನಾಗರೀಕ ಸೇವಾ ಅಧಿಕಾರಿಗಳನ್ನು ನೇಮಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುತ್ತಿತ್ತು. ಶೇ.94ರಷ್ಟು ಹುದ್ದೆಯನ್ನು ಕೆಎಎಎಸ್ ಅಧಿಕಾರಿಗಳಿಗೆ ಮೀಸಲಿಡಲಾಗುತ್ತಿತ್ತು. ಆಯ್ಕೆ ಪ್ರಕ್ರಿಯೆಗೆ ಕೆಎಎಸ್ ಅಥವಾ ರಾಜ್ಯೇತರ ನಾಗರೀಕ ಸೇವೆಯ ಅಧಿಕಾರಿಗಳು ಕನಿಷ್ಠ 8 ವರ್ಷ ಸೇವೆ ಸಲ್ಲಿಸಬೇಕಾಗಿರುತ್ತದೆ. ಎಷ್ಟೋ ವೇಳೆ ಪ್ರತಿ ವರ್ಷ ಖಾಲಿಯಿರುವ ಐಎಎಸ್ ಹುದ್ದೆಗಳಿಗೆ ಅರ್ಹರನ್ನು ಆಯ್ಕೆ ಮೂಲಕ ಶಿಫಾರಸ್ಸು ಮಾಡುವಾಗ ಸೂಕ್ತ ಮಾನದಂಡಗಳಿಲ್ಲದೆ ಪ್ರಭಾವಿಗಳಷ್ಟೇ ಐಎಎಸ್ ಹುದ್ದೆಗಳನ್ನು ಪಡೆಯುವಂತಾಗುತ್ತಿತ್ತು.

ಇದೀಗ ಪರೀಕ್ಷೆಯ ಮೂಲಕ ರಾಜ್ಯ ನಾಗರೀಕ ಸೇವೆಯೇತರ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರ ಸೂಕ್ತ ಕಾರ್ಯವಿಧಾನವನ್ನು ಅಳವಡಿಸಿಕೊಂಡಿದೆ.

WhatsApp Join our WhatsApp Channel
Previous Post

ACB TRAP 3 Officials Arrest | ಪೋನ್ ಪೇ ಮೂಲಕ ಲಂಚದ ಹಣ ಪಡೆದು ಸಿಕ್ಕಬಿದ್ದ ಭೂಪ…! : ಎಸಿಬಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಸರ್ಕಾರಿ ನೌಕರರ ಬಂಧನ

Next Post

Smart City Bengaluru | ನಡಿಗೆ ಮತ್ತು ಓಟದ ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ ಗರಿ

Next Post

Smart City Bengaluru | ನಡಿಗೆ ಮತ್ತು ಓಟದ ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ಬೆಂಗಳೂರಿಗೆ ಪ್ರಶಸ್ತಿ ಗರಿ

ಛತ್ರಪತಿ ಶಿವಾಜಿ 395ನೇ ಜಯಂತ್ಯೋತ್ಸವ

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group