Thursday, June 18, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BDA NEWS | ಡಿಸೆಂಬರ್ ಗೆ ಹೂವು-ಹಣ್ಣು ವ್ಯಾಪಾರಿಗಳಿಗೆ ಮಲ್ಲೇಶ್ವರಂ ಮಾರುಕಟ್ಟೆ ಕಟ್ಟಡ ಸಿದ್ಧ : ಎಸ್.ಆರ್.ವಿಶ್ವನಾಥ್

181 ಮಳಿಗೆಗಳು ವ್ಯಾಪಾರಿಗಳಿಗೆ ಸಿದ್ಧವಾಗಲಿದೆ | ಬಹುಮಹಡಿಯಲ್ಲಿ ಮಾಲ್, ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ - ಬಿಡಿಎ ಅಧ್ಯಕ್ಷರ ಹೇಳಿಕೆ

by Bengaluru Wire Desk
February 19, 2022
in Bengaluru Focus
Reading Time: 1 min read
0

ಬೆಂಗಳೂರು, (www.bengaluruwire.com) : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ದಿಂದ ಇನ್ನೂ ಕುಂಟುತ್ತಾ – ತೆವಳುತ್ತಾ ಸಾಗುತ್ತಿರುವ ಬೆಂಗಳೂರು ಕೇಂದ್ರಭಾಗದಲ್ಲಿರುವ ಮಲ್ಲೇಶ್ವರದ ಹೂವು-ಹಣ್ಣು ಮಾರುಕಟ್ಟೆ ಬಹುಮಹಡಿ ಕಟ್ಟಡ ಡಿಸೆಂಬರ್ ವೇಳೆಗೆ ಸಿದ್ಧವಾಗಲಿದೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಸಲಹೆಯಂತೆ ಶನಿವಾರ ಬಿಡಿಎ ಆಯುಕ್ತ ರಾಜೇಶ್ ಗೌಡ ಅವರೊಂದಿಗೆ ಕಟ್ಟಡ ಕಾಮಗಾರಿಯನ್ನು ಪರಿಶೀಲಿಸಿದ ಎಸ್.ಆರ್ ವಿಶ್ವನಾಥ್, ಈಗಾಗಲೇ ಕಾಮಗಾರಿ ತುಂಬಾ ವಿಳಂಬವಾಗಿದೆ. ಇದರಿಂದಾಗಿ ವ್ಯಾಪಾರಿಗಳಿಗೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಮತ್ತಷ್ಟು ವಿಳಂಬ ಮಾಡುವುದು ಬೇಡ ಎಂದು ಗುತ್ತಿಗೆದಾರರಿಗೆ ತಾಕೀತು ಮಾಡಿದರು.

ಬಿಡಿಎ ಅಧ್ಯಕ್ಷರಿಂದ ಕಾಮಗಾರಿ ಪರಿಶೀಲನೆ

ಕಟ್ಟಡ ಕಾಮಗಾರಿ ಪರಿಶೀಲನೆ‌ ನಂತರ ಮಾತನಾಡಿದ ಅವರು, ಈ ಕಟ್ಟಡ ಕಾಮಗಾರಿಗೆ ವೇಗ ನೀಡಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.

ಹೂವು ಮತ್ತು ಹಣ್ಣು ವ್ಯಾಪಾರಿಗಳಿಗೆ ಮೀಸಲಿರುವ 181 ಮಳಿಗೆಗಳ ನಿರ್ಮಾಣ ಕಾಮಗಾರಿಯನ್ನು ಈ ವರ್ಷದ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುತ್ತದೆ. ನಂತರ ನಿಯಮಾನುಸಾರ ಬಿಬಿಎಂಪಿಗೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿಸಿದರು.

ಈ ಬಹುಮಹಡಿ ಕಟ್ಟಡದಲ್ಲಿ ಏನೇನಿರಲಿದೆ?

ಎರಡು ನೆಲಮಹಡಿಗಳಲ್ಲಿ ಸಾರ್ವಜನಿಕ ವಾಹನ ಪಾರ್ಕಿಂಗ್ ವ್ಯವಸ್ಥೆ, ಮೊದಲ ಮಹಡಿಯಲ್ಲಿ ಹೂವು-ಹಣ್ಣು ವ್ಯಾಪಾರಿಗಳಿಗೆ 181 ಮಳಿಗೆಗಳು ಮತ್ತು 1 ರಿಂದ 4 ನೇ ಮಹಡಿವರೆಗೆ ಮಾಲ್ ರೀತಿಯಲ್ಲಿನ ವಾಣಿಜ್ಯ ಸಂಕೀರ್ಣಗಳು, ಐದು ಮತ್ತು ಟೆರೇಸ್ ನಲ್ಲಿ ಪಾರ್ಕಿಂಗ್ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ ಎಂದು ವಿವರಣೆ ನೀಡಿದರು.

ಮೊದಲ ಮಹಡಿಯಿಂದ ನಾಲ್ಕನೇ ಮಹಡಿವರೆಗೆ ನಿರ್ಮಾಣವಾಗಲಿರುವ ಮಳಿಗೆಗಳು ಬಿಡಿಎಗೆ ಸೇರಿರುತ್ತವೆ. ಇವುಗಳನ್ನು ಬಾಡಿಗೆ ಅಥವಾ ಗುತ್ತಿಗೆ ಆಧಾರದಲ್ಲಿ ಮಾಲ್ ಗಳಿಗೆ ಅಥವಾ ಇನ್ನಿತರೆ ವಾಣಿಜ್ಯ ಚಟುವಟಿಕೆಗಳಿಗೆ ನೀಡಲಾಗುತ್ತದೆ. ಇದರಿಂದ ಬಿಡಿಎಗೆ ಆದಾಯ ಬರಲಿದೆ ಎಂದು ತಿಳಿಸಿದರು.

ಮಾರುಕಟ್ಟೆ ನಿರ್ಮಾಣಕ್ಕೆ ಹಣದ ಕೊರತೆ ಇಲ್ಲ :
ಮಾರುಕಟ್ಟೆ ನಿರ್ಮಾಣ ಕುಂಟುತ್ತಾ ತೆವಳುತ್ತಾ ಸಾಗುತ್ತಿದ್ದುದರಿಂದ ಹಲವು ಅನುಮಾನಗಳು ಮೂಡಿದ್ದವು. ಈ ಹಿನ್ನೆಲೆಯಲ್ಲಿ ಸತ್ಯಾಸತ್ಯತೆಯನ್ನು ಅರಿಯಲೆಂದು ಕನ್ಸಲ್ಟೆನ್ಸಿಯಿಂದ ಕಾಮಗಾರಿಯನ್ನು ಪರಿಶೀಲಿಸಲಾಯಿತು. ಅದರ ವರದಿ ಬಂದಿದ್ದು ಮುಂದಿನ ಪ್ರಾಧಿಕಾರದ ಸಭೆಯಲ್ಲಿ ಚರ್ಚಿಸಿ, ಯೋಜನೆಗೆ ಅಗತ್ಯವಿರುವ ಎಲ್ಲಾ ನೆರವನ್ನು ನೀಡುವ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಮಾರುಕಟ್ಟೆ ನಿರ್ಮಾಣಕ್ಕೆ ಯಾವುದೇ ರೀತಿಯ ಹಣಕಾಸಿನ ತೊಂದರೆ ಇಲ್ಲ. ನೇಮಕಗೊಂಡಿದ್ದ ಸಲಹೆಗಾರರಿಂದ ಯೋಜನೆಗೆ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಆ ಸಲಹೆಗಾರ ಸಂಸ್ಥೆಯನ್ನು ಬದಲಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ವಿಶ್ವನಾಥ್ ತಿಳಿಸಿದರು.

ಈ ಸಂದರ್ಭದಲ್ಲಿ ಬಿಡಿಎ ಅಭಿಯಂತರ ಸದಸ್ಯ ಶಾಂತರಾಜಣ್ಣ, ಬಿಡಿಎ ಪೊಲೀಸ್ ಅಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್, ಗುತ್ತಿಗೆದಾರ ಸಂಸ್ಥೆ ಪಿವಿಕೆ ಗ್ರೂಪ್ ನ ವಿಜಯಕುಮಾರ್ ಸೇರಿದಂತೆ ಬಿಡಿಎ ಉನ್ನತಾಧಿಕಾರಿಗಳು ಇದ್ದರು.

WhatsApp Join our WhatsApp Channel
Previous Post

ಛತ್ರಪತಿ ಶಿವಾಜಿ 395ನೇ ಜಯಂತ್ಯೋತ್ಸವ

Next Post

IAF Mi17 Helicopter Rescue | ನಂದಿಬೆಟ್ಟದ ಬ್ರಹ್ಮಗಿರಿ ಗುಡ್ಡದಲ್ಲಿ ಸಿಲುಕಿದ್ದ ಚಾರಣಿಗನ ರಕ್ಷಣೆ : ಕಾರ್ಯಾಚರಣೆಗೆ ಎಂಐ17 ಹೆಲಿಕಾಪ್ಟರ್ ಬಳಕೆ

Next Post

IAF Mi17 Helicopter Rescue | ನಂದಿಬೆಟ್ಟದ ಬ್ರಹ್ಮಗಿರಿ ಗುಡ್ಡದಲ್ಲಿ ಸಿಲುಕಿದ್ದ ಚಾರಣಿಗನ ರಕ್ಷಣೆ : ಕಾರ್ಯಾಚರಣೆಗೆ ಎಂಐ17 ಹೆಲಿಕಾಪ್ಟರ್ ಬಳಕೆ

Red Sandalwood Smuggling | ಪ್ಲೈವುಡ್ ಬಾಕ್ಸ್ ನಲ್ಲಿ ವಿದೇಶಕ್ಕೆ ರಕ್ತಚಂದನ ಸಾಗಿಸುತ್ತಿದ್ದ ಮೂವರನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group