Wednesday, April 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

  • Bengaluru Focus

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW EXCLUSIVE | UKRAINE GROUND REPORT | ಉಕ್ರೇನ್ ನಿಂದ ಬೆಂಗಳೂರಿನ ವೈದ್ಯ ವಿದ್ಯಾರ್ಥಿಗಳು ಹಂಚಿಕೊಂಡ ಸಾಕ್ಷಾತ್ ವರದಿ…!

ಖಾರ್ಕೀವ್ ನಗರದಿಂದ ವೈದ್ಯ ವಿದ್ಯಾರ್ಥಿನಿ ಆರ್.ವಾರುಣಿ ಉಪಾಧ್ಯ, ವಿನ್ನಿಟ್ಸಿಯಾ ನಗರದಿಂದ ಅನಿಶ್ ಜಯಂತ್ ಆಯಾ ನಗರಗಳಲ್ಲಿನ ಪ್ರಸ್ತುತ ಪರಿಸ್ಥಿತಿ ಹಾಗೂ ತಮಗಾದ ಅನುಭವವನ್ನು “ಬೆಂಗಳೂರು ವೈರ್” ನೊಂದಿಗೆ ದೂರವಾಣಿ ಮುಖಾಂತರ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

by Bengaluru Wire Desk
January 12, 2023
in BW Special, Public interest
Reading Time: 3 mins read
1
ಚಿತ್ರ ಕೃಪೆ : ರಾಯಿಟರ್ಸ್, ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ರಷ್ಯಾ ತೀವ್ರ ವಾಯುದಾಳಿ ನಡೆಸಿದ ಬಳಿಕ ಹಾನಿಗೆ ಒಳಗಾದ ಕಟ್ಟದ ದೃಶ್ಯ

ಚಿತ್ರ ಕೃಪೆ : ರಾಯಿಟರ್ಸ್, ಉಕ್ರೇನ್ ರಾಜಧಾನಿ ಕೀವ್ ನಗರದ ಮೇಲೆ ರಷ್ಯಾ ತೀವ್ರ ವಾಯುದಾಳಿ ನಡೆಸಿದ ಬಳಿಕ ಹಾನಿಗೆ ಒಳಗಾದ ಕಟ್ಟದ ದೃಶ್ಯ

ವಿನ್ನಿಟ್ಸಿಯಾ/ ಖಾರ್ಕೀವ್ (ಉಕ್ರೇನ್), (www.bengaluruwire.com) : ಉಕ್ರೇನ್ ರಾಷ್ಟ್ರದ ಮೇಲೆ ಗುರುವಾರದಿಂದ ಯುದ್ಧ ಸಾರಿರುವ ರಷ್ಯಾ ಈಗಾಗಲೇ ಉಕ್ರೇನ್ ನ ಹಲವು ಕಡೆಗಳಲ್ಲಿ ಮಿಸೈಲ್, ಬಾಂಬ್ ದಾಳಿಯನ್ನು ಮುಂದುವರೆಸಿದೆ. ಈ ಸಂದರ್ಭದಲ್ಲಿ ಉಕ್ರೇನ್ ನಲ್ಲಿ ಪರಿಸ್ಥಿತಿಯ ಬಗ್ಗೆ ವಿನ್ನಿಟ್ಸಿಯಾ ನಗರ ಹಾಗೂ ಉಕ್ರೇನ್ ಪೂರ್ವಭಾಗದಲ್ಲಿರುವ ಖಾರ್ಕೀವ್ ನಗರದಲ್ಲಿನ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಓದುತ್ತಿರುವ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಅಲ್ಲಿಂದಲೇ  “ಬೆಂಗಳೂರು ವೈರ್” ನೊಂದಿಗೆ ದೂರವಾಣಿ ಮುಖಾಂತರ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

ಉಕ್ರೇನ್ ರಾಜಧಾನಿ ಕೀವ್ ನಿಂದ 400 ಕಿ.ಮೀ ದೂರದಲ್ಲಿರುವ ಖಾರ್ಕೀವ್ ನಗರದಲ್ಲಿ ಬೆಂಗಳೂರಿನ ವಿದ್ಯಾಮಾನ್ಯ ನಗರದವರಾದ ಆರ್.ವಾರುಣಿ ಉಪಾಧ್ಯ ಖಾರ್ಕೀವ್ ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ನಾಲ್ಕನೇ ವರ್ಷದ ಎಂಬಿಬಿಎಂಸ್ ವ್ಯಾಸಂಗ ಮಾಡುತ್ತಿದ್ದಾರೆ. ಯುದ್ಧಪೀಡಿತ ಉಕ್ರೇನ್ ನಲ್ಲಿ ದೇಶಾದ್ಯಂತ ತುರ್ತುಪರಿಸ್ಥಿತಿ ಹೇರಿರುವ ಕಾರಣ ಹಾಗೂ ರಷ್ಯಾ ಬಾಂಬ್ ದಾಳಿ ಹಿನ್ನಲೆಯಲ್ಲಿ ಸದ್ಯ ಖಾರ್ಕೀವ್ ನಗರದಲ್ಲಿನ ತಮ್ಮ ಅಪಾರ್ಟ್ ಮೆಂಟ್ ಬಿಟ್ಟು ರೂಮ್ ಮೇಟ್ ಗಳ ಜೊತೆ ಹತ್ತಿರದಲ್ಲಿರುವ ಮೆಟ್ರೊ ರೈಲು ನಿಲ್ದಾಣದ ಬಾಂಬ್ ಶೆಲ್ಟರ್ ನಂತಹ ಸುರಕ್ಷಿತ ಸ್ಥಳದಲ್ಲಿ ಉಳಿದುಕೊಂಡಿದ್ದಾರೆ.

ಖಾರ್ಕೀವ್ ನಲ್ಲಿರುವ ಬಾಂಬ್ ಶೆಲ್ಟರ್ ನಲ್ಲಿ ತಂಗಿರುವ ವಿದ್ಯಾರ್ಥಿಗಳು, ನಾಗರೀಕರು
ವೈದ್ಯ ವಿದ್ಯಾರ್ಥಿನಿ ಆರ್.ವಾರುಣಿ ಉಪಾಧ್ಯ

ಆಗಾಗ ಬಾಂಬ್ ದಾಳಿಯ ಸದ್ದು ಕೇಳುತ್ತಿರುತ್ತೆ :

ಅಲ್ಲಿನ ಪರಿಸ್ಥಿತಿ ಬಗ್ಗೆ ಅವರು “ಬೆಂಗಳೂರು ವೈರ್” ಜೊತೆ ಮಾತನಾಡಿದ್ದಾರೆ, “ಖಾರ್ಕೀವ್ ಸಿಟಿಯಲ್ಲಿ ಉಕ್ರೇನ್ ನಲ್ಲಿ ರಾಷ್ಟ್ರಾದ್ಯಂತ ತುರ್ತುಪರಿಸ್ಥಿತಿ ಹೇರಿದ ಮೇಲೆ ನಮ್ಮ ಕಾಲೇಜಿಗೆ ತಾತ್ಕಾಲಿಕ ರಜೆ ಘೋಷಿಸಿದ್ದಾರೆ. ರಾತ್ರಿ 10ರಿಂದ ಬೆಳಗ್ಗೆ 6 ಗಂಟೆಯ ತನಕ ಕರ್ಪ್ಯೂಯಿದೆ. ಹಾಗಾಗಿ ಆ ಸಂದರ್ಭದಲ್ಲಿ ಹೊರಗಡೆ ಓಡಾಡುವಂತಿಲ್ಲ. ನಾವಿರುವ ಖಾರ್ಕೀವ್ ನಗರ ಉಕ್ರೇನ್ ನ ಪೂರ್ವ ಭಾಗದಲ್ಲಿದ್ದು, ರಷ್ಯಾ ಗಡಿಯಿಂದ ಕೇವಲ 42 ಕಿ.ಮೀ ದೂರದಲ್ಲಿದೆ. ಹಾಗಾಗಿ ಆಗಾಗ ರಷ್ಯಾ ಕಡೆಯಿಂದ ಹಾರಿಬರುವ ಬಾಂಬ್ ಮತ್ತು ಕ್ಷಿಪಣಿಗಳ ಸದ್ದು ಕೇಳುತ್ತಲೇ ಇದೆ. ಖಾರ್ಕೀವ್ ನಗರದ ಮೇಲೆ ಅಷ್ಟಾಗಿ ದಾಳಿಯಾಗಿಲ್ಲ. ಆದರೆ ಯುದ್ಧಭೀತಿಯ ಜೊತೆಗೆ ಈಗ ಹಿಮ ಸುರಿಯಲು ಆರಂಭವಾಗಿದೆ.”

ತಾಯ್ನಾಡಿಗೆ ಬರಲು ಕಾತುರರಾಗಿದ್ದೇವೆ :

“ನ್ಯಾಷನಲ್ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಕರ್ನಾಟಕದ 100 ರಿಂದ 120 ಜನ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಕೆಲವರು ಭಾರತಕ್ಕೆ ತೆರಳಲು ಗುರುವಾರಕ್ಕೆ ಮುಂಚೆಯೇ ಕೀವ್ ನಿಂದ ವಿಮಾನ ಬುಕಿಂಗ್ ಮಾಡಿದವರು ತಮ್ಮ ದೇಶಕ್ಕೆ ಮರಳಿದ್ದಾರೆ. ಆದರೆ ನಾವೀಗ ದೇಶಕ್ಕೆ ಬರಲು ಕಾತುರರಾಗಿದ್ದೇವೆ. ಆದರೆ ಬರಲು ಸಾಧ್ಯವಾಗುತ್ತಿಲ್ಲ. ವಿದೇಶಾಂಗ ಇಲಾಖೆಯ ಅಧಿಕಾರಿಗಳು ನಮಗೆ, ಉಕ್ರೇನ್ ನಲ್ಲಿರುವ ಹಂಗೇರಿ, ಸ್ಲೋವಾಕಿಯಾ, ರೊಮೇನಿಯಾ ಅಥವಾ ಪೊಲೆಂಡ್ ದೇಶಗಳ ಗಡಿಭಾಗದಲ್ಲಿರುವ ವಿದ್ಯಾರ್ಥಿಗಳು ಅಲ್ಲಿನ ಸ್ಥಳಕ್ಕೆ ಬಂದರೆ ಅಲ್ಲಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಕರೆದೊಯ್ಯುವುದಾಗಿ ವಾಟ್ಸಪ್ ಸಂದೇಶದ ಮೂಲಕ ತಿಳಿಸಿದ್ದಾರೆ.”

“ಆದರೆ ನಾವಿರುವ ಕಾರ್ಕೀವ್ ನಿಂದ ಆ ಉಕ್ರೇನ್ ಗಡಿಭಾಗದಲ್ಲಿನ ಆ ರಾಷ್ಟ್ರಗಳ ಬಳಿಗೆ ತೆರಳಲು ಕನಿಷ್ಠ ಒಂದು ಸಾವಿರ ಕಿ.ಮೀ ದೂರ ಹೋಗಬೇಕು. ಅದಕ್ಕಾಗಿ ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲ. ಹಾಗಾಗಿ ಅಲ್ಲಿಗೆ ಹೋಗಿ ತೊಂದರೆ ಅನುಭವಿಸುವದಕ್ಕಿಂತ ಇದ್ದ ಜಾಗದಲ್ಲೇ ಕಾದು ಭಾರತದ ರಾಯಭಾರ ಕಚೇರಿ ಸಂದೇಶಕ್ಕಾಗಿ ಕಾಯುತ್ತೇವೆ.”

ಅಂಗಡಿ- ಮುಂಗಟ್ಟುಗಳೆಲ್ಲಾ ಖಾಲಿ ಖಾಲಿ- ಎಲ್ಲೆಲ್ಲೂ ಮಾರುದ್ದ ಕ್ಯೂ :

ಖಾರ್ಕೀವ್ ನಗರದಲ್ಲಿ ಅಗತ್ಯ ಸಾಮಗ್ರಿಗಳ ಖರೀದಿಗಾಗಿ ಮಾರುದ್ದ ಕ್ಯೂನಲ್ಲಿ ನಿಂತಿರುವ ನಾಗರೀಕರು

“ರಾಷ್ಟ್ರೀಯ ತುರ್ತುಪರಿಸ್ಥಿತಿ ಹಾಗೂ ಯಾವುದೇ ಸಮಯದಲ್ಲಿ ಎಲ್ಲಿ ಬೇಕಾದರೂ ದಾಳಿ ಸಾಧ್ಯತೆಯಿದೆ. ಹಾಗಾಗಿ ಜನರು ಗುರುವಾರವೇ ಅಂಗಡಿಗಳಲ್ಲಿ ತಮಗೆ ಅಗತ್ಯವಾದ ಸಾಮಾನು- ಸರಂಜಾಮುಗಳನ್ನು ಮುಗಿಬಿದ್ದು ಖರೀದಿ ಮಾಡಿದ್ದಾರೆ. ಇದರಿಂದಾಗಿ ಹಲವು ಅಂಗಡಿಗಳು ಖಾಲಿಯಾಗಿದೆ. ಈಗ ಕಾರ್ಕೀನ್ ನಾದ್ಯಂತ ಜನರು ಅಗತ್ಯ ಸಾಮಗ್ರಿಗಳ ಖರೀದಿಗೆ ಮಾರುದ್ದ ಕ್ಯೂನಲ್ಲಿ ನಿಲ್ಲುತ್ತಿದ್ದಾರೆ. ಎಟಿಎಮ್ ಯಂತ್ರದಿಂದ ಹಣ ಪಡೆದುಕೊಳ್ಳಲು ಬ್ಯಾಂಕ್ ಗಳು ನಿರ್ದಿಷ್ಟ ಮಿತಿ ಹೇರಿದೆ. ಹಲವು ಕಡೆಗಳ ಎಟಿಎಂಗಳಲ್ಲಿ ಹಣವೂ ಬರಿದಾಗಿದೆ.” ಎಂದು ಅಲ್ಲಿನ ಪರಿಸ್ಥಿತಿಯ ಕರಾಳ ಸತ್ಯವನ್ನು ನಮ್ಮ ಮುಂದೆ ತೆರದಿಟ್ಟಿದ್ದಾರೆ ಆರ್.ವಾರುಣಿ ಉಪಾಧ್ಯ.

ಇದನ್ನೂ ಓದಿ : Ukraine Karnataka 91 MBBS Students Stranded | ಉಕ್ರೇನ್ ದೇಶದಲ್ಲಿ ಕರ್ನಾಟಕದ 91 ವೈದ್ಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ : ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ

ಬಾಂಬ್ ಶೆಲ್ಟರ್ ಗಳಲ್ಲೂ ಜನದಟ್ಟಣೆ :

 “ನಾವು ನಮಗೆ ಎಷ್ಟು ಬೇಕೋ ಅಷ್ಟು ದಿನಸಿ ಮತ್ತಿತರ ವಸ್ತುಗಳನ್ನು ಖರೀದಿ ಮಾಡಿಟ್ಟುಕೊಂಡಿದ್ದೇವೆ. ಸದ್ಯ ಮೆಟ್ರೋ ಸ್ಟೇಷನ್ ನಲ್ಲಿರುವ ಬಾಂಬ್ ಶೆಲ್ಟರ್ ಸ್ಥಳದಲ್ಲಿ ತಂಗಿದ್ದೇವೆ. ಭಾರತೀಯ ವಿದ್ಯಾರ್ಥಿಗಳು ಉಳಿದುಕೊಂಡ ಹಾಸ್ಟೆಲ್ ಗಳಲ್ಲಿ ಅಲ್ಲಿನ ನೆಲಮಾಳಗಿಯಲ್ಲಿ ಬಾಂಬ್ ಶೆಲ್ಟರ್ ನಲ್ಲಿ ಉಳಿದುಕೊಂಡಿದ್ದಾರೆ. ಉಕ್ರೇನ್ ಕೆಲವು ನಾಗರೀಕರು ಮಾತ್ರ ತಮ್ಮ ತಮ್ಮ ಮನೆಗಳಲ್ಲಿ ಇರಲು ಇಚ್ಛೆಪಟ್ಟಿದ್ದಾರೆ. ಉಳಿದವರು ಬಾಂಬ್ ಶೆಲ್ಟರ್ ನಲ್ಲಿರೋದರಿಂದ ಇಲ್ಲಿ ಜನದಟ್ಟಣೆ ಉಂಟಾಗಿದೆ. ಬೆಂಗಳೂರು ಕೇಂದ್ರ ಲೋಕಸಭಾ ಸದಸ್ಯ ಸದಾನಂದಗೌಡರು ನನಗೆ ನಿನ್ನೆ ಕರೆ ಮಾಡಿ ಕ್ಷೇಮ ವಿಚಾರಿಸಿದರು. ಅಲ್ಲದೆ ಭಾರತದ ರಾಯಭಾರ ಕಚೇರಿಯ ಅಧಿಕಾರಿಗಳ ಫೋನ್ ನಂಬರ್ ಕೊಟ್ಟು, ಆ ಅಧಿಕಾರಿಗಳು ಸುರಕ್ಷಿತವಾಗಿ ನನ್ನನ್ನು ಭಾರತಕ್ಕೆ ಕರೆತರುವಂತೆ ಸೂಚಿಸಿದ್ದಾರೆ. ಅದಕ್ಕೆ ಅವರಿಗೆ ನನ್ನ ಧನ್ಯವಾದಗಳನ್ನು ತಿಳಿಸುತ್ತೇನೆ” ಎಂದು ವಾರುಣಿ ಹೇಳಿದ್ದಾರೆ.

ವಿನ್ನಿಟ್ಸಿಯಾ ನಗರದಲ್ಲಿನ ಪರಿಸ್ಥಿತಿಯ ಬಗ್ಗೆ :

ಇನ್ನು ಉಕ್ರೇನ್ ನಲ್ಲಿನ ವಿನ್ನಿಟ್ಸಿಯಾ ನಗರದಲ್ಲಿನ ನ್ಯಾಷನಲ್ ಪರ್ಗು ಮೆಡಿಕಲ್ ಯೂನಿರ್ವಸಿಟಿಯಲ್ಲಿ ಎರಡನೇ ವರ್ಷದ ಎಂಬಿಬಿಎಸ್ ಓದುತ್ತಿರುವ ಬೆಂಗಳೂರಿನ ಗಿರಿನಗರದ ವಿದ್ಯಾರ್ಥಿ ಅನಿಶ್ ಜಯಂತ್ ತಾವಿರುವ ಊರು ಹಾಗೂ ಆ ದೇಶದ ಪ್ರಸ್ತುತ ಪರಿಸ್ಥಿತಿ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ :

“ವಿನ್ನಿಟ್ಸಿಯಾ ನಗರದಲ್ಲೆಲ್ಲೊ ರಷ್ಯಾ ಕ್ಷಿಪಣಿ ದಾಳಿ ನಡೆಸಿದಂತಿದೆ. ಹಾಗಾಗಿ ಶುಕ್ರವಾರ ಬೆಳಗ್ಗೆಯಿಂದ ಒಂದೇ ಸಮನೆ ಎಚ್ಚರಿಕೆ ಸೈರನ್ ಹಾಗೂ ಮೈಕ್ ಮೂಲಕ ಸಾರ್ವಜನಿಕರು ಹೊರಗೆ ಓಡಾಡದಂತೆ ಎಚ್ಚರಿಕೆಯ ಸಂದೇಶಗಳು ಬರ್ತಾನೆ ಇದೆ. ವಿನ್ನಿಟ್ಸಿಯಾ ನಗರದಲ್ಲಿ ಬಾಂಬ್ ದಾಳಿಯಿಂದ ರಕ್ಷಣೆ ಪಡೆಯಲು 80 ರಿಂದ 90 ಬಾಂಬ್ ಶೆಲ್ಟರ್ ಗಳನ್ನು ತೆರೆದಿದ್ದಾರೆ. ಜಾಸ್ತಿ ಸೈರನ್ ಬಂದರೆ ಎಲ್ಲರೂ ಬಾಂಬ್ ಶೆಲ್ಟರ್ ಗೆ ಹೋಗುವಂತೆ ಸೂಚನೆ ನೀಡ್ತಿದ್ದಾರೆ. ಯೂನಿವರ್ಸಿಟಿ ಸಿಬ್ಬಂದಿ ನಮ್ಮ ಕಾಲೇಜಿನ ಹಾಸ್ಟೆಲ್ ನೆಲಮಹಡಿಯಲ್ಲೇ ಉಳಿಯೋಕೆ ಸಲಹೆ ನೀಡಿದ್ದಾರೆ.”

ನಾಲ್ಕು ಹಾಸ್ಟೇಲ್ ಗಳಲ್ಲಿ 1,200 ವೈದ್ಯ ವಿದ್ಯಾರ್ಥಿಗಳು ತಂಗಿದ್ದಾರೆ :

“ಉಕ್ರೇನ್ ರಾಜಧಾನಿ ಕೀವ್ ನಗರದಿಂದ ಗುರುವಾರ ಭಾರತ ಸರ್ಕಾರದಿಂದ ಏರ್ ಇಂಡಿಯಾ ವಿಮಾನದ ಮೂಲಕ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಮೊದಲು ಯೋಜಿಸಲಾಗಿತ್ತು. ಕೊನೆಹಂತದಲ್ಲಿ ಆ ಪ್ರಯತ್ನ ವಿಫಲವಾಯಿತು. ಕೀವ್ ಏರ್ ಪೋರ್ಟ್ ಗೆ ಅದಾಗಲೇ ಸ್ವದೇಶಕ್ಕೆ ತೆರಳಲು ಪ್ರಯತ್ನದಲ್ಲಿದ್ದ ವಿದ್ಯಾರ್ಥಿಗಳಿಗೆ ಮಾಹಿತಿಯಿಲ್ಲದೆ ಪರದಾಡಿದರು. ನಾವಂತೂ ವಿನ್ನಿಟ್ಸಿಯಾ ನಗರದಲ್ಲಿನ ನಮ್ಮ ಕಾಲೇಜಿನ ಹಾಸ್ಟೇಲ್ ನಲ್ಲಿದ್ದೇವೆ. ನಾವಿದ್ದ ಮೆಡಿಕಲ್ ಹಾಸ್ಟೇಲ್ ನಿಂದ 15 ಕಿ.ಮೀ ದೂರದಲ್ಲಿನ ಸೇನಾ ಕ್ಯಾಂಪ್ ಮೇಲೆ ಗುರುವಾರ ರಷ್ಯಾದ ಕ್ಷಿಪಣಿ ದಾಳಿಯಾಗಿತ್ತು. ಆ ಸದ್ದು ನಾವಿದ್ದ ಸ್ಥಳದ ತನಕ ಕೇಳಿ ಬಂದಿತ್ತು. ನಾನಿರುವ ಹಾಸ್ಟೇಲ್ ಸೇರಿದಂತೆ ನಾಲ್ಕು ಹಾಸ್ಟೆಲ್ ಗಳಲ್ಲಿ ಕನಿಷ್ಠ 1,200 ವೈದ್ಯ ವಿದ್ಯಾರ್ಥಿಗಳಿದ್ದೇವೆ. ಉಕ್ರೇನ್ ದೇಶದಲ್ಲಿ ಭಾರತದ ಅಂದಾಜು 20 ಸಾವಿರ ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ಹೇಳುತ್ತಿದ್ದಾರೆ. ಅವರೆಲ್ಲಾ ವೈದ್ಯಕೀಯ, ಡಿಪ್ಲೊಮೊ, ಏರೊನಾಟಿಕಲ್ ಎಂಜಿನಿಯರಿಂಗ್ ಇತ್ಯಾದಿ ಕೋರ್ಸ್ ಗಳಿಗೆ ಸೇರಿದ್ದಾರೆ.”

ವಿನ್ನಿಟ್ಸಿಯಾ ನಗರದ ರಸ್ತೆಗಳಲ್ಲಿ ನಿರಂತರವಾಗಿ ಗಸ್ತು ತಿರುಗುತ್ತಿರುವ ಉಕ್ರೇನ್ ಮಿಲಿಟರಿ ಪಡೆ

ಅಂಗಡಿ- ಮುಂಗಟ್ಟು ಬಂದ್, ಎಟಿಎಮ್ ನಲ್ಲಿ ಹಣ ಖಾಲಿ :

ನ್ಯಾಷನಲ್ ಪರ್ಗು ಮೆಡಿಕಲ್ ಯೂನಿರ್ವಸಿಟಿ ಹಾಸ್ಟೆಲ್ ನೆಲ ಅಂತಸ್ತಿನಲ್ಲಿ ರಕ್ಷಣೆ ಪಡೆಯುತ್ತಿರುವ ವಿದ್ಯಾರ್ಥಿಗಳು

“ಗುರುವಾರ ಮಧ್ಯಾಹ್ನದಿಂದ ವಿನ್ನಿಟ್ಸಿಯಾ ನಗರದಲ್ಲಿ ಮೆಡಿಕಲ್ ಸ್ಟೋರ್, ಆಸ್ಪತ್ರೆ ಹೊರತುಪಡಿಸಿ ಹಲವು ಅಂಗಡಿ- ಮುಂಗಟ್ಟುಗಳು ಬಂದ್ ಆಗಿದೆ. ಡೆಬಿಟ್- ಕ್ರೆಡಿಟ್ ಕಾರ್ಡ್ ಗಳು ಬಳಸೋಕೆ ಆಗುತ್ತಿಲ್ಲ. ಬ್ಯಾಂಕಿನ ಎಟಿಎಮ್ ಗಳಲ್ಲಿ ಹಣವಿಲ್ಲ. ಎಲ್ಲೆಡೆ ಎಟಿಎಮ್ ಖಾಲಿಯಾಗಿದೆ. ಮೂರ್ನಾಲ್ಕು ದಿನಗಳ ಹಿಂದಷ್ಟೇ ನಮ್ಮ ತಂದೆ ನನ್ನ ಬ್ಯಾಂಕ್ ಖಾತೆಗೆ ಹಾಕಿದ ಹಣವನ್ನು ಎಟಿಎಮ್ ನಿಂದ ಡ್ರಾ ಮಾಡಿಟ್ಟುಕೊಂಡಿದ್ದಕ್ಕೆ ಬಚಾವಾದೆ. ಈಗ ನನ್ನ ಕರ್ಚು- ವೆಚ್ಚಗಳಿಗೆ ಅದನ್ನೇ ಬಳಸುತ್ತಿದ್ದೇನೆ.  ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯ ತನಕ ಹೊರಗೆ ಎಲ್ಲೂ ಕರ್ಪ್ಯೂ ಹೇರಿರುವ ಕಾರಣ ಓಡಾಡುವಂತಿಲ್ಲ. ಹೊರಗೆ ಬಾಂಬ್ ದಾಳಿ, ಯುದ್ಧ ವಿಮಾನ ಹಾರಾಟವಾದಲ್ಲಿ ಪಬ್ಲಿಕ್ ಪ್ಲೇಸ್ ನಲ್ಲಿ ಜೋರಾಗಿ ಎಚ್ಚರಿಕೆಯ ಅಲಾರಾಮ್ ಮೊಳಗುತ್ತೆ. ಬೆಳಗ್ಗೆ ಹೊತ್ತು ಹೆಚ್ಚು ಜನರು ಮೊದಲಿನಂತೆ ಹೆಚ್ಚಾಗಿ ಓಡಾಡುತ್ತಿಲ್ಲ. ನಗರದ ಪಾದಚಾರಿ ಮಾರ್ಗಗಳು, ರಸ್ತೆಗಳಲ್ಲಿ ಮಿಲಿಟರಿ ಪಡೆಗಳು ನಿರಂತರವಾಗಿ ಗಸ್ತು ತಿರುಗುತ್ತಿವೆ.” ಎಂದು ಪ್ರಸ್ತುತ ಪರಿಸ್ಥಿತಿಯನ್ನು ವಿವರಿಸುತ್ತಾರೆ ಅನಿಶ್ ಜಯಂತ್.

ನಮ್ಮನ್ನೆಲ್ಲಾ ಭಾರತಕ್ಕೆ ಯಾವಾಗ ಕರೆದೊಯ್ತಾರೋ ?

“ನಮ್ಮ ವೈದ್ಯ ವಿದ್ಯಾರ್ಥಿಗಳಿಗೆಲ್ಲಾ ಭಾರತಕ್ಕೆ ಸುರಕ್ಷಿತವಾಗಿ ಬಂದರೆ ಸಾಕಾಗಿದೆ. ಈಗಾಗಲೇ ಉಕ್ರೇನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಉಕ್ರೇನ್ ಗಡಿಭಾಗಕ್ಕೆ ಹತ್ತಿರವಾಗಿರುವ ರುಮಾನಿಯಾ, ಹಂಗೇರಿ, ಸ್ಲೊವಾಕಿಯಾ ಹಾಗೂ ಬಲ್ಗೇರಿಯಾ ರಾಷ್ಟ್ರಗಳ ಬಳಿಗೆ ಬಂದಲ್ಲಿ ಭಾರತಕ್ಕೆ ಸುರಕ್ಷಿತವಾಗಿ ವಿಮಾನದಲ್ಲಿ ಕರೆದೊಯ್ಯುವುದಾಗಿ ಆಯಾ ದೇಶಗಳ ಭಾರತದ ವಿದೇಶಾಂಗ ಇಲಾಖೆ ಅಧಿಕಾರಿಗಳು ಸಂದೇಶ ಕಳುಹಿಸಿದ್ದಾರೆ. ನಮ್ಮನ್ನೆಲ್ಲಾ ಭಾರತಕ್ಕೆ ಯಾವಾಗ ಕರೆದುಕೊಂಡು ಹೋಗುತ್ತಾರೋ ಅಂತ ಕಾಯುತ್ತಿದ್ದೇವೆ.”

ಇದು ಸಂದರ್ಭದಲ್ಲಿ ಉಕ್ರೇನ್ ನಲ್ಲಿ ಪರಿಸ್ಥಿತಿಯ ಬಗ್ಗೆ ವಿನ್ನಿಟ್ಸಿಯಾ ನಗರ ಹಾಗೂ ಉಕ್ರೇನ್ ಪೂರ್ವಭಾಗದಲ್ಲಿರುವ ಖಾರ್ಕೀವ್ ನಗರದಲ್ಲಿನ ಮೆಡಿಕಲ್ ಯೂನಿವರ್ಸಿಟಿಯಲ್ಲಿ ಓದುತ್ತಿರುವ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಅನುಭವ. ಉಕ್ರೇನ್ ನಲ್ಲಿರುವ ಭಾರತದ ವಿದ್ಯಾರ್ಥಿಗಳು ಸೇರಿದಂತೆ ಇಲ್ಲಿನ ನಾಗರೀರನ್ನು ಯಾವುದೇ ಅಪಾಯವಿಲ್ಲದೆ ಕರೆತರುವ ನಿಟ್ಟಿನಲ್ಲಿ ವಿದೇಶಾಂಗ ಇಲಾಖೆ ಅಧಿಕಾರಿಗಳು ನಿರಂತರ ಪ್ರಯತ್ನ ನಡೆಸಿದ್ದಾರೆ.

WhatsApp Join our WhatsApp Channel
Previous Post

Karnataka 91 MBBS Students Stranded in Ukraine | ಉಕ್ರೇನ್ ದೇಶದಲ್ಲಿ ಕರ್ನಾಟಕದ 91 ವೈದ್ಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆ : ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ

Next Post

ಅಂಬೇಡ್ಕರ್ – ವಾಲ್ಮೀಕಿ ಭವನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸುಸಜ್ಜಿತ ಗ್ರಂಥಾಲಯ ನಿರ್ಮಿಸಲು ಕ್ರಮ : ಜಿಲ್ಲಾಧಿಕಾರಿ ಜೆ.ಮಂಜುನಾಥ್

Next Post
ಬೆಂಗಳೂರು ನಗರ ಜಿಲ್ಲೆ ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ಸಭೆ ನಡೆಸಿರುವ ಚಿತ್ರ

ಅಂಬೇಡ್ಕರ್ - ವಾಲ್ಮೀಕಿ ಭವನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸುಸಜ್ಜಿತ ಗ್ರಂಥಾಲಯ ನಿರ್ಮಿಸಲು ಕ್ರಮ : ಜಿಲ್ಲಾಧಿಕಾರಿ ಜೆ.ಮಂಜುನಾಥ್

Citizens Good Governance | ಸ್ಥಳೀಯಾಡಳಿತಕ್ಕೆ ಕಾಯದೆ ಕ್ರೌಡ್ ಫಂಡ್ ಸಂಗ್ರಹಿಸಿ ಆ ಬಡಾವಣೆ ನಾಗರೀಕರು ಮಾಡಿದ್ದೇನು?

Please login to join discussion

Like Us on Facebook

Follow Us on Twitter

Recent News

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

April 28, 2026

BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

April 28, 2026

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group