Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

Ukraine News Update | ಉಕ್ರೇನ್ ಖಾರ್ಕೀವ್ ನಲ್ಲಿ ಶೆಲ್ ದಾಳಿಗೆ ಕರ್ನಾಟಕದ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಬಲಿ

ಸಾವನ್ನಪ್ಪಿದ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಕುಟಂಬಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಾಂತ್ವಾನ | ಉಕ್ರೇನ್ ರಾಜಧಾನಿ ಕೀವ್ ತೊರೆಯುವಂತೆ ಭಾರತೀಯರಿಗೆ ಎಂಇಎ ಸೂಚನೆ | ರಾಜ್ಯಕ್ಕೆ ಈತನಕ 49 ವಿದ್ಯಾರ್ಥಿಗಳು ಮರಳಿದ್ದಾರೆ

by Bengaluru Wire Desk
March 1, 2022
in News Wire, Public interest
Reading Time: 1 min read
0
ಉಕ್ರೇನ್ ನಲ್ಲಿ ಸಾವಿಗೀಡಾದ ಕರ್ನಾಟಕ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಗ್ಯಾನಗೌಡರ್

ಉಕ್ರೇನ್ ನಲ್ಲಿ ಸಾವಿಗೀಡಾದ ಕರ್ನಾಟಕ ಹಾವೇರಿ ಮೂಲದ ವಿದ್ಯಾರ್ಥಿ ನವೀನ್ ಗ್ಯಾನಗೌಡರ್

ಬೆಂಗಳೂರು, (www.bengaluruwire.com) : ಉಕ್ರೇನ್ ನ ಖಾರ್ಕೀವ್ ಮೇಲೆ ರಷ್ಯಾ ಒಂದೇ ಸಮನೆ ದಾಳಿ ನಡೆಸುತ್ತಿದೆ. ಮಂಗಳವಾರ ಬೆಳಗ್ಗೆ ಖಾರ್ಕೀವ್ ಸೂಪರ್ ಮಾರ್ಕೆಟ್ ಮುಂಭಾಗ ನಡೆದ ಶೆಲ್ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕ ಮೂಲದ ನವೀನ್ ಗ್ಯಾನಗೌಡರ್ (21) ಎಂಬ ವಿದ್ಯಾರ್ಥಿ ಬಲಿಯಾಗಿದ್ದಾನೆ ಎಂದು ವಿದೇಶಾಂಗ ಇಲಾಖೆ ದೃಢಪಡಿಸಿದೆ.

ಭಾರತ ಸರ್ಕಾರ ಉಕ್ರೇನ್ ನಲ್ಲಿರುವ ಭಾರತೀಯರನ್ನು ಉಕ್ರೇನ್ ಗಡಿಭಾಗದ ರಾಷ್ಟ್ರಗಳಿಂದ ಸುರಕ್ಷಿತವಾಗಿ ಸ್ವದೇಶಕ್ಕೆ ಕರತರಲು ನಿರಂತರ ಪ್ರಯತ್ನ ಮುಂದುವರೆಸುತ್ತಿರುವ ಹೊತ್ತಿನಲ್ಲಿಯೇ ಇಂತಹ ದುಖಃಕರ ವಿಚಾರ ಹೊರಬಿದ್ದಿದೆ. ಉಕ್ರೇನ್ ನ ಎರಡನೇ ಅತಿದೊಡ್ಡ ನಗರವನ್ನು ಪ್ರವೇಶಿಸಿರುವ ರಷ್ಯಾದ ಮಿಲಿಟರಿ ಪಡೆಗಳು ಅಲ್ಲಿನ ಸರ್ಕಾರದ ಮೇಲೆ ಒತ್ತಡ ಹೇರಲು ನಾಗರೀಕರ ಮೇಲೆ ದಾಳಿಯನ್ನು ನಡೆಸುತ್ತಿದೆ.

ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ಮಂಗಳವಾರ ಬೆಳಗ್ಗೆ ರಷ್ಯಾದ ಪಡೆ ನಡೆಸಿದ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕದ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಇದನ್ನು ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಖಚಿತಪಡಿಸಿದ್ದಾರೆ. ರಷ್ಯಾದ ಪಡೆಗಳು ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವನ್ನು ಪ್ರವೇಶಿಸಿ, ಉಕ್ರೇನ್ ಸರ್ಕಾರದ ಮೇಲೆ ಒತ್ತಡವನ್ನು ಹೇರಲು ಕಳೆದ ಎರಡು ದಿನಗಳಿಂದ  ನಾಗರಿಕರ ಮೇಲೂ ದಾಳಿಯನ್ನು ಪ್ರಾರಂಭಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಉಕ್ರೇನ್ ನ ಖಾರ್ಕೀವ್ ನಲ್ಲಿ ನಡೆದ ಶೆಲ್ ದಾಳಿಯಲ್ಲಿ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ಗ್ಯಾನಗೌಡರ್ ಮೃತಪಟ್ಟಿದ್ದು ಒಂದು ದುರಂತದ ಸಂಗತಿ. ಈ ಕುರಿತು ನವೀನ್ ಅವರ ತಂದೆ ಶೇಖರ್ ಗೌಡ ಅವರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸಾಂತ್ವಾನ ಹೇಳಿದ್ದೇನೆ. ನವೀನ್ ಅವರ ಮೃತದೇಹವನ್ನು ಭಾರತಕ್ಕೆ ತರುವ ಎಲ್ಲಾ ಪ್ರಯತ್ನ ನಡೆಸಲಾಗುವುದು. ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಉಳಿದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುತ್ತಿದೆ.” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಉಕ್ರೇನ್ ನಲ್ಲಿ ಶೆಲ್ ಗಳ ದಾಳಿಗೆ ಕರ್ನಾಟಕದ ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದು ಒಂದು ದುರಂತದ ಸಂಗತಿ, ಈ ಕುರಿತು ನವೀನ್ ಅವರ ತಂದೆ ಶೇಖರಗೌಡ ಅವರಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಸಾಂತ್ವನ ಹೇಳಿದ್ದೇನೆ‌.
ನವೀನ ಅವರ ಮೃತದೇಹವನ್ನು ಭಾರತಕ್ಕೆ ತರಿಸಿಕೊಳ್ಳುವ ಎಲ್ಲ ಪ್ರಯತ್ನ ನಡೆಸಲಾಗುವುದು.
1/2

— Basavaraj S Bommai (Modi Ka Parivar) (@BSBommai) March 1, 2022

ಇನ್ನೊಂದೆಡೆ ನವೀನ್ ಗ್ಯಾನಗೌಡರ್ ಮೃತದೇಹವನ್ನು ಖಾರ್ಕಿವ್ ನಗರದ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮೃತ ನವೀನ್ ಸ್ನೇಹಿತರು ಆತನ ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ. ಚಳಗೇರಿಯಲ್ಲಿರುವ ನವೀನ್ ಕುಟುಂಬಸ್ಥರು ಈ ವಿಷಯದಿಂದ ತೀವ್ರ ಆಘಾತಕ್ಕೆ ಒಳಗಾಗಿದ್ದು, ಗ್ರಾಮಸ್ಥರು, ಸ್ನೇಹಿತರು, ಸಂಬಂಧಿಕರು ಗ್ರಾಮದ ಅವರ ಮನೆ ಮುಂದೆ ನೆರೆದಿದ್ದಾರೆ.

ಇಂದೇ ಉಕ್ರೇನ್ ರಾಜಧಾನಿ ಕೀವ್ ತೊರೆಯಲು ಭಾರತೀಯರಿಗೆ ಕರೆ :

ರಷ್ಯಾ ಸೇನೆ ಉಕ್ರೇನ್ ರಾಜಧಾನಿ ಕೀವ್ ಮೇಲೆ ನಡೆಸುತ್ತಿರುವ ದಾಳಿಯ ತೀವ್ರತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಉಕ್ರೇನ್ ರಾಜಧಾನಿ ಕೀವ್​ನಲ್ಲಿರುವ ಭಾರತೀಯರು ಅದರಲ್ಲೂ ವಿದ್ಯಾರ್ಥಿಗಳು ಈ ಕೂಡಲೇ ರೈಲು ಅಥವಾ ಇನ್ನಾವುದೇ ರೀತಿಯ ವಿಧಾನವನ್ನು ಬಳಸಿ ಕೀವ್ ನಗರವನ್ನು ತೊರೆದು ಸುರಕ್ಷಿತ ಜಾಗಕ್ಕೆ ಸ್ಥಳಾಂತರವಾಗುವಂತೆ ಉಕ್ರೇನ್​​ನಲ್ಲಿರುವ ಭಾರತದ ರಾಯಭಾರಿ ಸೂಚನೆ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಯಭಾರಿ ಕಚೇರಿ, ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಭಾರತೀಯರು ಮಂಗಳವಾರವೇ ತುರ್ತಾಗಿ ಕೀವ್​ ತೊರೆಯಬೇಕು ಎಂದು ತಿಳಿಸಿದೆ.

Advisory to Indians in Kyiv

All Indian nationals including students are advised to leave Kyiv urgently today. Preferably by available trains or through any other means available.

— India in Ukraine (@IndiainUkraine) March 1, 2022
ಈತನಕ ಕರ್ನಾಟಕಕ್ಕೆ 49 ವಿದ್ಯಾರ್ಥಿಗಳ ಕರೆತರಲಾಗಿದೆ :
ಕಳೆದ ಏಳು ದಿನಗಳಿಂದ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಉಕ್ರೇನ್ ನ ಹಲವು ಸ್ಥಳಗಳು ನಾಶವಾಗಿದೆ. ಈ ಮಧ್ಯೆ ಭಾರತದ ವಿದೇಶಾಂಗ ಇಲಾಖೆಯು ಉಕ್ರೇನ್ ಗಡಿಭಾಗದ ರಾಷ್ಟ್ರಗಳಾದ ಸ್ಪೋವಾಕ್ ಗಣರಾಜ್ಯ, ಪೋಲಾಂಡ್, ಹಂಗೇರಿ, ರೊಮಾನಿಯಾ ಮತ್ತಿತರ ದೇಶಗಳಿಗೆ ಭಾರತದ ವಿದೇಶಾಂಗ ಇಲಾಖೆಯ ಅಧಿಕಾರಿಗಳು, ಹಿರಿಯ ಕೇಂದ್ರ ಮಂತ್ರಿಗಳನ್ನು ನಿಯೋಜಿಸಿದೆ. ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ತಾಯ್ನಾಡಿಗೆ ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ “ಆಪರೇಷನ್ ಗಂಗಾ” ಕಾರ್ಯಾಚರಣೆಯಡಿ ಈತನಕ 9 ವಿಮಾನಗಳ ಮೂಲಕ 1,500 ಭಾರತೀಯರನ್ನು ಸ್ವದೇಶಕ್ಕೆ ಕರೆತಂದಿದೆ.

 “ಉಕ್ರೇನ್ ನಿಂದ ದೆಹಲಿ, ಬಾಂಬೆಗೆ ಆಗಮಿಸಿದ ಭಾರತೀಯರು ಹಾಗೂ ವಿದ್ಯಾರ್ಥಿಗಳನ್ನು ಕರ್ನಾಟಕ ವಿಪತ್ತು ನಿರ್ವಹಣಾ ಪ್ರಾಧಿಕಾರ (KSDMA) ರಾಜ್ಯ ಸರ್ಕಾರದ ಕರ್ಚಿನಲ್ಲಿ ವಿಮಾನದ ಮೂಲಕ ಬೆಂಗಳೂರಿಗೆ ಕರೆತಂದು ಅವರವರ ಸ್ಥಳಗಳಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಮಂಗಳವಾರದ ತನಕ ಒಟ್ಟು 49 ವಿದ್ಯಾರ್ಥಿಗಳನ್ನು ಕರ್ನಾಟಕಕ್ಕೆ ಕರೆತರಲಾಗಿದೆ.” ಎಂದು ಕೆಎಸ್ ಡಿಎಂಎ ನೋಡೆಲ್ ಅಧಿಕಾರಿ ಮನೋಜ್ ರಾಜನ್ ತಿಳಿಸಿದ್ದಾರೆ.

ಉಕ್ರೇನ್‌ನ ಖಾರ್ಕಿವ್ ನಗರದಲ್ಲಿ ಮಂಗಳವಾರ ಬೆಳಗ್ಗೆ ರಷ್ಯಾದ ಪಡೆ ನಡೆಸಿದ ದಾಳಿಯಲ್ಲಿ ಹಾವೇರಿ ಜಿಲ್ಲೆಯ ಕರ್ನಾಟಕದ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದಕ್ಕೆ ಮನೋಜ್ ರಾಜನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಉಕ್ರೇನ್ ನಲ್ಲಿರುವ ಕರ್ನಾಟಕದ ನಾಗರೀಕರನ್ನು ಸುರಕ್ಷಿತವಾಗಿ ಕರೆತರಲು ಸಾಧ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಉಕ್ರೇನ್ ಮತ್ತಿತರ ಗಡಿಭಾಗದ ದೇಶದಲ್ಲಿರುವ ವಿದೇಶಾಂಗ ಇಲಾಖೆ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BWSSB WATER SHUTDOWN | ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ಮಾ.3ರಂದು ಕಾವೇರಿ ನೀರು ಪೂರೈಕೆ ಸಂಪೂರ್ಣ ಬಂದ್….! : ಆ ಏರಿಯಾಗಳ ಸಂಪೂರ್ಣ ಪಟ್ಟಿ ಇಲ್ಲಿದೆ

Next Post

MahaShivarathi ISHA LIVE | ಇಶಾ ಯೋಗ ಕೇಂದ್ರದಿಂದ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ : ಬೆಂಗಳೂರು ವೈರ್ ನಲ್ಲಿ ವೀಕ್ಷಿಸಿ ನೇರಪ್ರಸಾರ

Next Post

MahaShivarathi ISHA LIVE | ಇಶಾ ಯೋಗ ಕೇಂದ್ರದಿಂದ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಕಾರ್ಯಕ್ರಮ : ಬೆಂಗಳೂರು ವೈರ್ ನಲ್ಲಿ ವೀಕ್ಷಿಸಿ ನೇರಪ್ರಸಾರ

Mahashivarathri 2022 Shankara Math | ಬೆಂಗಳೂರಿನ ಶಂಕರಮಠದಲ್ಲಿ ಮಹಾದೇವನಿಗೆ ಚತುರ್ವೇದ ಸಹಿತ ಚತುರ್ಯಾಮ ಪೂಜೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d