Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

UPI Digital Payment | ನೀವು ಡಿಜಿಟಲ್ ಪೇಮೆಂಟ್ ವಿಧಾನದ ಮೂಲಕ ಹಣಪಾವತಿ ಮಾಡುತ್ತಿದ್ದರೆ ಈ ಸುದ್ದಿ ತಪ್ಪದೇ ನೋಡಿ…! ರಾಜ್ಯದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಬಳಕೆ, ವಂಚನೆ ಪ್ರಮಾಣ ಎಷ್ಟಿದೆ ಗೊತ್ತಾ?

ದೇಶದಲ್ಲಿ ಡಿಜಿಟಲ್ ಪಾವತಿ ಬಳಕೆದಾರರ ಪ್ರಮಾಣದಲ್ಲಿ ಕರ್ನಾಟಕಕ್ಕೆ 2 ಸ್ಥಾನ | ದೇಶದ ಡಿಜಿಟಲ್ ವಹಿವಾಟಿನಲ್ಲಿ ರಾಜ್ಯವು ಅತ್ಯಂತ ಹೆಚ್ಚಿನ ಪಾಲು ಹೊಂದಿದ್ದರೂ ಇಲ್ಲಿ ಡಿಜಿಟಲ್ ಬ್ಯಾಂಕಿಂಗ್ ವಂಚನೆ ಪ್ರಮಾಣ ಕಡಿಮೆಯಿದೆ| ಡಿಜಿಟಲ್ ವಂಚನೆ ಎದುರಿಸಲು ಸಶಕ್ತ ಸೈಬರ್ ಕೋಶ ಸದೃಢ ಮಾಡಲು ಕರ್ನಾಟಕ ಆರ್ಥಿಕ ಸಮೀಕ್ಷೆ 2021-22ರಲ್ಲಿ ಶಿಫಾರಸ್ಸು

by Bengaluru Wire Desk
March 8, 2022
in BW Special, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ದೇಶದಲ್ಲಿಯೇ ಡಿಜಿಟಲ್ ಪಾವತಿ ಬಳಕೆದಾರರ ಪ್ರಮಾಣದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಒಟ್ಟಾರೆ ನಡೆಯುವ ಹಣಪಾವತಿ ವಿಧಾನದಲ್ಲಿ ಡಿಜಿಟಲ್ ಮೂಲಕ ಪೇಮೆಂಟ್ ಮಾಡುವ ಬಳಕೆದಾರರ ಪ್ರಮಾಣ ಶೇ.39.4ರಷ್ಟಿದೆ.

ಇನ್ನು ಡಿಜಿಟಲ್ ಪೇಮೆಂಟ್ ವಿಧಾನದಲ್ಲಿ ಪಾವತಿ ಮೌಲ್ಯದ ಪ್ರಮಾಣ (2021ರ ತ್ರೈಮಾಸಿಕದಲ್ಲಿ 75.33 ಕೋಟಿ ರೂ.)ದಲ್ಲಿ ರಾಜ್ಯವು ಶೇ.14.31ರಷ್ಟು ಪಾಲನ್ನು ಅಂದರೆ ಹೊಂದಿದೆ. ತೆಲಂಗಾಣದಲ್ಲಿ ಅತಿಹೆಚ್ಚಿನ ಅಂದರೆ ಶೇ.49ರಷ್ಟು ಜನರು ಬಳಕೆದಾರರು ಡಿಜಿಟಲ್ ಪಾವತಿ ವಿಧಾನದ ಮೂಲಕ ಹಣ ಪಾವತಿ ಮಾಡಿದ್ದಾರೆ.

ಡಿಜಿಟಲ್ ಪಾವತಿಯ ಮೂಲಕ ಹಣದ ವಹಿವಾಟಿನ ಪ್ರಮಾಣ, ಮೌಲ್ಯ ಹಾಗೂ ಬಳಕೆದಾರರ ತಲುಪುವಿಕೆಯ ಎಲ್ಲಾ ಪ್ರವೃತ್ತಿಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿ ಹೊರಹೊಮ್ಮಿದೆ ಎಂದು ರಾಜ್ಯ ಸರ್ಕಾರದ ನೂತನ ಕರ್ನಾಟಕ ಆರ್ಥಿಕ ಸಮೀಕ್ಷೆ 2021-22ರಲ್ಲಿ ಈ ವಿಷಯವನ್ನು ತಿಳಿಸಲಾಗಿದೆ.

ಡಿಜಿಟಲ್ ಪಾವತಿ ಸಾಮಾನ್ಯ ಗ್ರಾಹಕರ ಬಳಕೆಗೆ ಅತಿ ಸುಲಭ ಹಾಗೂ ಪಟಾಪಟ್ ಅಂತ ಕೆಲಸ ಮುಗಿಸುವ ಸಾಧನವಾಗಿರಬಹುದು. ಆದರೆ ಡಿಜಿಟಲ್ ಪಾವತಿಗೆ ಸಂಬಂಧಿಸಿದ ವಂಚನೆಯ ಉಲ್ಬಣವು ದೊಡ್ಡ ಸವಾಲುಗಳಲ್ಲಿ ಒಂದಾಗಿದೆ. YouGov ಮತ್ತು ACI ನಡೆಸಿದ ಸಮೀಕ್ಷೆಯಲ್ಲಿ ಶೇ.71ರಷ್ಟು ಬಳಕೆದಾರರು ಡಿಜಿಟಲ್ ಪಾವತಿಗೆ ಬದಲಾವಣೆಗೊಂಡಿದ್ದರಿಂದ ವಂಚನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಸರ್ಕಾರ, ಎನ್ ಪಿಸಿಐ, ಆರ್ ಬಿಐ ಮತ್ತು ಪಾವತಿ ಕಂಪನಿಗಳು ಫಿಶಿಂಗ್ ಮತ್ತು ಭದ್ರತೆಯ ಬಗ್ಗೆ ಗ್ರಾಹಕರಲ್ಲಿ ಅರಿವು ಮೂಡಿಸುವಲ್ಲಿ ಅನೇಕ ಪ್ರಯತ್ನಗಳನ್ನು ಮಾಡಿದ್ದು, ದೃಢವಾದ ದೂರು ಪರಿಹಾರ ಕಾರ್ಯವಿಧಾನವನ್ನು ಸ್ಥಾಪಿಸಿದೆ. ಆದರೂ, ಪ್ರತಿವರ್ಷ ಡಿಜಿಟಲ್ ಪಾವತಿಗೆ ಸಂಬಂಧಿಸಿದ ವಂಚನೆಯ ಪ್ರಕರಣಗಳು ಏರಿಕೆ ಕಾಣುತ್ತಿದೆ ಎಂದು ರಾಜ್ಯ ಸರ್ಕಾರದ ಆರ್ಥಿಕ ಸಮೀಕ್ಷೆಯಲ್ಲಿ ಹೇಳಲಾಗಿದೆ.

ಡಿಜಿಟಲ್ ಪಾವತಿಯಲ್ಲಿ ದೇಶಾದ್ಯಂತ 288 ಕೋಟಿ ರೂ. ವಂಚನೆ :

ದೇಶಾದ್ಯಂತ 2019-20ನೇ ಸಾಲಿನಲ್ಲಿ ಎಟಿಎಂ- ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮತ್ತು ಇಂಟರ್ ನೆಟ್ ವಹಿವಾಟುಗಳಲ್ಲಿ ಬರೋಬ್ಬರಿ 288 ಕೋಟಿ ರೂ. ಮೌಲ್ಯದ ವಂಚನೆಗಳಾಗಿರುವುದನ್ನು ಬ್ಯಾಂಕ್ ಗಳು ವರದಿ ಮಾಡಿವೆ. ರಾಜ್ಯದಲ್ಲಿ 2017-18ನೇ ಆರ್ಥಿಕ ವರ್ಷದಲ್ಲಿ 1,573 ಡಿಜಿಟಲ್ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ವರದಿಯಾಗಿದ್ದು, ಅವುಗಳ ಮೊತ್ತ 10.58 ಕೋಟಿ ರೂ.ಗಳಾಗಿತ್ತು. 2019-20ನೇ ಸಾಲಿನಲ್ಲಿ 2,845ಕ್ಕೆ ವಂಚನೆ ಪ್ರಕರಣಗಳು ಏರಿಕೆಯಾಗಿದ್ದು, ಈ ವರ್ಷದಲ್ಲಿ ವಂಚನೆಯಾದ ಮೌಲ್ಯ 17.57 ಕೋಟಿ ರೂ. ಗೆ ಹೆಚ್ಚಳವಾಗಿದೆ. ಆದರೂ ಒಂದು ಸಮಾಧಾನ ಸಂಗತಿಯೆಂದರೆ ದೇಶದಲ್ಲಿನ ಒಟ್ಟು ಡಿಜಿಟಲ್ ಬ್ಯಾಂಕಿಂಗ್ ವಂಚನೆ ಪ್ರಕರಣಗಳಲ್ಲಿ ರಾಜ್ಯದಲ್ಲಾಗುವ ಮೋಸದ ಪ್ರಮಾಣ ಶೇ.5.5ರಷ್ಟಿದೆ. ದೇಶದಲ್ಲಿ ನಡೆಯವ ವಂಚನೆ ಪ್ರಮಾಣ ಮಹಾರಾಷ್ಟ್ರದಲ್ಲಿ ಶೇ.42.1ರಷ್ಟಿದ್ದು, ಮೊದಲನೇ ಸ್ಥಾನದಲ್ಲಿದೆ. ಭಾರತದಲ್ಲಿ ನಡೆಯುವ ಡಿಜಿಟಲ್ ವಹಿವಾಟಿನ ಅತ್ಯಂತ ಹೆಚ್ಚಿನ ಪಾಲವನ್ನು ಕರ್ನಾಟಕವು ಹೊಂದಿದ್ದರೂ, ರಾಷ್ಟ್ರಮಟ್ಟದ ವಂಚನೆ ದರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಮೋಸಕ್ಕೆ ಒಳಗಾಗುವ ಪ್ರಮಾಣ ಕಡಿಮೆಯಿದೆ. ಈ ಸವಾಲನ್ನು ಎದುರಿಸಲು ರಾಜ್ಯ ಸರ್ಕಾರ ಆಧುನಿಕ ಪರಿಕರ ಹಾಗೂ ಸಾಮರ್ಥ್ಯಗಳೊಂದಿಗೆ ತನ್ನ ಸೈಬರ್ ಕೋಶಗಳನ್ನು ಬಲಪಡಿಸಿಕೊಳ್ಳಬೇಕಿದೆ ಎಂದು ರಾಜ್ಯ ಸರ್ಕಾರದ ಆರ್ಥಿಕ ಸಮೀಕ್ಷೆಯಲ್ಲಿ ಶಿಫಾರಸ್ಸು ಮಾಡಲಾಗಿದೆ.

ದೇಶದಲ್ಲಿದ್ದಾರೆ 15 ಕೋಟಿ ಸಕ್ರಿಯ ಯುಪಿಐ ಬಳಕೆದಾರರು :

ದೇಶದಲ್ಲಿ ಯುಪಿಐ (UPI) ಪಾವತಿಗಳ ಹೆಚ್ಚಳದೊಂದಿಗೆ ಡಿಜಿಟಲ್ ಪೇಮೆಂಟ್ ಗಳಲ್ಲಿ ಕ್ರಾಂತಿಕಾರಿ ಬೆಳವಣಿಗೆಗೆ ಸಾಕ್ಷಿಯಾಗಿದೆ. ನವೆಂಬರ್ 2021ರ ತನಕ ಯುಪಿಐ ಸರಿಸುಮಾರು 150 ಮಿಲಿಯನ್ ಸಕ್ರಿಯ ಬಳಕೆದಾರರನ್ನು ಅಂದರೆ 15 ಕೋಟಿ ಬಳಕೆದಾರರನ್ನು ಹೊಂದಿದೆ. ಈ ತಂತ್ರಜ್ಞಾನದ ಮೂಲಕ ಒಂದು ದಿನದಲ್ಲಿ 10 ಮಿಲಿಯನ್ ವಹಿವಾಟನ್ನು ನಡೆಸಲಾಗುತ್ತಿದೆ. ಈ ಯುಪಿಐ ನಲ್ಲಿ ಫೋನ್ ಪೇ (Phone pe) ಪ್ರಮುಖ ಪಾವತಿ ವಿಧಾನವಾಗಿದೆ. ಡಿಜಿಟಲ್ ಮಾರಕಟ್ಟೆಯಲ್ಲಿ ಶೇ.46.7ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದೆ.

ಏನಿದು ಕರ್ನಾಟಕ ಆರ್ಥಿಕ ಸಮೀಕ್ಷೆ – 2021-22?

ರಾಜ್ಯ ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಪ್ರಮುಖ ಅಭಿವೃದ್ಧಿ ಕಾರ್ಯಕ್ರಮಗಳ, ನೀತಿಗಳ ಮುಖ್ಯಾಂಶಗಳು ಮತ್ತು ಭವಿಷ್ಯದ ನೀತಿ ಉಪಕ್ರಮಗಳು ಹಾಗೂ ಆರ್ಥಿಕತೆಯ ನಿರೀಕ್ಷೆಗಳ ಸಾರಾಂಶವನ್ನು ಕರ್ನಾಟಕ ಆರ್ಥಿಕ ಸಮೀಕ್ಷೆಯು ಬಿಂಬಿಸುತ್ತದೆ. ರಾಜ್ಯದ ಎಲ್ಲಾ ವಲಯಗಳ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲು ಕ್ಷೇತ್ರವಾರು ನಿರ್ದಿಷ್ಟ ಅಂತರ ಮತ್ತು ಸವಾಲುಗಳನ್ನು ಗುರ್ತಿಸಿ, ಸೂಕ್ತ ಕ್ರಮಗಳನ್ನು ಹಮ್ಮಿಕೊಳ್ಳುವ ಉದ್ದೇಶದಿಂದ ಈ ದಾಖಲೆಯನ್ನು ವಿಧಾನಮಂಡಲದಲ್ಲಿ ಮಂಡಿಸಲಾಗುತ್ತದೆ.

WhatsApp Join our WhatsApp Channel
Previous Post

Vehicle Insurance TP Premium Will Hike | ಹೆಚ್ಚಾಗಲಿದೆ ನಿಮ್ಮ ಕಾರು, ದ್ವಿಚಕ್ರ ವಾಹನಗಳ ಥರ್ಡ್ ಪಾರ್ಟಿ ವಿಮಾ ಕಂತಿನ ಮೊತ್ತ..! : ಏ.1 ರಿಂದ ಜಾರಿಗೆ ಬರುವ ಸಾಧ್ಯತೆ

Next Post

NREGA EMPLOYMENT NEWS | ಕರ್ನಾಟಕದಲ್ಲಿ ಪ್ರಸಕ್ತ ಸಾಲಿನಲ್ಲಿ ನರೇಗಾ ಯೋಜನೆಯಡಿ 15.27 ಕೋಟಿ ಮಾನವ ಉದ್ಯೋಗ ಸೃಷ್ಟಿ – ಸಚಿವ ಈಶ್ವರಪ್ಪ

Next Post

NREGA EMPLOYMENT NEWS | ಕರ್ನಾಟಕದಲ್ಲಿ ಪ್ರಸಕ್ತ ಸಾಲಿನಲ್ಲಿ ನರೇಗಾ ಯೋಜನೆಯಡಿ 15.27 ಕೋಟಿ ಮಾನವ ಉದ್ಯೋಗ ಸೃಷ್ಟಿ - ಸಚಿವ ಈಶ್ವರಪ್ಪ

ವಿಶ್ವ ಮಹಿಳಾ ದಿನಾಚರಣೆ – 2022ರ ಅಂಗವಾಗಿ ವಿವಿಧ ಕ್ಷೇತ್ರಗಳ ಮಹಿಳೆಯರಿಗೆ ಸನ್ಮಾನ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group