Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW SPECIAL | Karnataka Exports Decline | ರಾಜ್ಯದಲ್ಲಿ ಕುಸಿತ ಕಂಡ ರಫ್ತು ಬೆಳವಣಿಗೆ ಪ್ರಮಾಣ : ದೇಶದ 30 ಜಿಲ್ಲೆಗಳ ನಿರ್ಯಾತದಲ್ಲಿ ಬೆಂಗಳೂರಿಗೆ 10ನೇ ಸ್ಥಾನ

2021ರ ಏಪ್ರಿಲ್ ನಿಂದ ಸೆಪ್ಟೆಂಬರ್ ಅವಧಿಯಲ್ಲಿ ರಾಜ್ಯದಿಂದ 4.26 ಲಕ್ಷ ಕೋಟಿ ರೂ. ಮೌಲ್ಯದ ಉತ್ಪನ್ನ ರಫ್ತು | ಕೋವಿಡ್-19 ಕಾರಣಕ್ಕೆ 2022-21 ಹಾಗೂ 2021-22ನೇ ಸಾಲಿನಲ್ಲಿ ರಫ್ತು ಪ್ರಮಾಣದಲ್ಲಿ ಇಳಿಕೆ

by Bengaluru Wire Desk
March 12, 2022
in BW Special, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) : ರಾಜ್ಯದ ರಫ್ತು ಬೆಳವಣಿಗೆಯ ಪ್ರಮಾಣ 2020-21 ಹಾಗೂ 2021-22ನೇ ಸಾಲಿನಲ್ಲಿ ಕೋವಿಡ್-19 ಕಾರಣಕ್ಕೆ ಸಾಕಷ್ಟು ಇಳಿಮುಖವಾಗಿರುವುದು 2021-22ನೇ ಸಾಲಿನ ಕರ್ನಾಟಕ ಆರ್ಥಿಕ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ.

2016-17ನೇ ಸಾಲಿನಲ್ಲಿ ರಾಜ್ಯದ ರಫ್ತು ಮೌಲ್ಯ 5.49 ಲಕ್ಷ ಕೋಟಿ ರೂ.ಗಳಾಗಿತ್ತು. 2018-19ನೇ ಸಾಲಿನಲ್ಲಿ ಇದರ ಪ್ರಮಾಣ 6.59 ಲಕ್ಷ ಕೋಟಿ ರೂ.ಗಳಾಗಿದ್ದರೆ, 2019-20ನೇ ಸಾಲಿನಲ್ಲಿ 7.03 ಲಕ್ಷ ಕೋಟಿ ರೂ. ಗಳಿಗೆ ಏರಿಕೆಯಾಗಿತ್ತು. ಆದರೆ 2020-21ನೇ ಸಾಲಿನಲ್ಲಿ ಕೋವಿಡ್-19 ಸೋಂಕಿನಿಂದ ಕರ್ನಾಟಕದ ರಫ್ತು ಪ್ರಮಾಣ 6.93 ಲಕ್ಷ ಕೋಟಿ ರೂ.ಗಳಿಗೆ ಇಳಿಮುಖವಾಯ್ತು. ಇನ್ನು 2021-22ನೇ ಸಾಲಿನಲ್ಲಿ (ಏಪ್ರಿಲ್ ನಿಂದ – ಸೆಪ್ಟೆಂಬರ್ 2021 ರ ತನಕ) 4.26 ಲಕ್ಷ ಕೋಟಿ ರೂ.ಗಳಿಗೆ ಮತ್ತಷ್ಟು ಕುಸಿತವಾಗಿದೆ.

ರಾಜ್ಯದಿಂದ ಕಾಫಿ, ಮಸಾಲೆ ಪದಾರ್ಥಗಳು, ರೇಷ್ಮೆ, ಗೋಡಂಬಿ, ಕೈಮಗ್ಗ ಮತ್ತು ಅಗರಬತ್ತಿಯಂತಹ ಸಾಂಪ್ರದಾಯಿಕ ರಫ್ತುಗಳ ಜೊತೆಗೆ ಕಳೆದ ಎರಡು ದಶಕಗಳಿಂದ ಎಲೆಕ್ಟ್ರಾನಿಕ್ಸ್, ಸಾಫ್ಟ್ ವೇರ್, ಇಂಜಿನಿಯರಿಂಗ್ ಸರಕುಗಳು, ರೆಡಿಮೇಡ್ ಗಾರ್ಮೆಂಟ್ಸ್, ಖನಿಜ, ಅದಿರುಗಳು, ಕೆಮಿಕಲ್ಸ್, ಸಾಗರೋತ್ಪನ್ನಗಳು ಸೇರಿದಂತೆ ಹಲವು ಉತ್ಪನ್ನಗಳನ್ನು ಕರ್ನಾಟಕ ರಫ್ತು ಮಾಡುತ್ತಿದೆ. ಹೀಗಿದ್ದರೂ, 2016-17ನೇ ಸಾಲಿನಲ್ಲಿ ರಾಜ್ಯವು ರಫ್ತು ಭಾಗವಹಿಸುವಿಕೆ ಪ್ರಮಾಣ ಶೇ.45 ರಷ್ಟಿದ್ದು ನಂತರದ ವರ್ಷಗಳಲ್ಲಿ ಏರಿಳಿಕೆಯಾಗುತ್ತಾ 2020-21 ಹಾಗೂ 2021-22ನೇ ಸಾಲಿನಲ್ಲಿ ಕ್ರಮವಾಗಿ ಶೇ.42 ಹಾಗೂ ಶೇ.25.28ಕ್ಕೆ ಇಳಿಕೆ ಕಂಡಿದೆ. 2021-22ನೇ ಸಾಲಿನಲ್ಲಿ ಕೋವಿಡ್-19 ಕಾರಣದಿಂದಾಗಿ ಈ ಕುಸಿತ ಕಂಡುಬಂದಿದೆ. ಆದರೆ ಇದೇ ಅವಧಿಯಲ್ಲಿ ರಫ್ತು ವಹಿವಾಟಿನಲ್ಲಿ ಭಾರತದ ಭಾಗವಹಿಸುವಿಕೆ ಶೇ.7.46ರಷ್ಟು ಮಾತ್ರ ಆಗಿದೆ ಎಂದು ರಾಜ್ಯದ ಆರ್ಥಿಕ ಸಮೀಕ್ಷೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ದೇಶದ ಒಟ್ಟಾರೆ ಸೇವೆ ಮತ್ತು ಸರಕುಗಳ ರಫ್ತಿನಲ್ಲಿ ರಾಜ್ಯದ ಪ್ರಮಾಣ ಶೇ.18ರಷ್ಟಿದೆ. ಸಾಫ್ಟ್ ವೇರ್ ಮತ್ತು ಸೇವೆಗಳ ಸರಕಿನಲ್ಲಿ ಕರ್ನಾಟಕದ ಪ್ರಮಾಣ ಶೇ.38ರಷ್ಟಿದೆ. 2020-21 ದೇಶದಲ್ಲಿ ನಡೆದಿರುವ ವಾಣಿಜ್ಯ ಸರಕು ರಫ್ತಿನಲ್ಲಿ ಕರ್ನಾಟಕದ ಪಾಲು ಈ ರೀತಿಯಿದೆ : ಕಾಫಿ ಶೇ.86ರಷ್ಟು, ರೇಷ್ಮೆ ಉತ್ಪನ್ನಗಳು ಶೇ.50ರಷ್ಟು, ಗೋಡಂಬಿ ಶೇ.22ರಷ್ಟು, ಸೆಮಿಕಂಡಕ್ಟರ್ ಶೇ.15, ಏರೋಸ್ಪೇಸ್ ಶೇ.24 ಮತ್ತು ಇಂಜಿನಿಯರಿಂಗ್ ವಲಯದ ಒಟ್ಟು ರಫ್ತಿನಲ್ಲಿ ರಾಜ್ಯದ ಪಾಲು ಶೇ.9ರಷ್ಟಿದೆ.

ರಫ್ತಿನಲ್ಲಿ ದೇಶದ 30 ಜಿಲ್ಲೆಗಳಲ್ಲಿ ಬೆಂಗಳೂರಿಗೆ 10ನೇ ಸ್ಥಾನ :

ದೇಶದಿಂದ ಹೊರ ದೇಶಗಳಿಗೆ ರಫ್ತಿನಲ್ಲಿ ಪ್ರಮುಖ ಪಾತ್ರವಹಿಸಿರುವ ಭಾರತದ 30 ಜಿಲ್ಲೆಗಳಲ್ಲಿ ಕರ್ನಾಟಕದ ಬೆಂಗಳೂರು ನಗರ, ದಕ್ಷಿಣ ಕನ್ನಡ ಹಾಗೂ ಬಳ್ಳಾರಿ ಜಿಲ್ಲೆಗಳು ಕ್ರಮವಾಗಿ 10, 17 ಹಾಗೂ 26 ಸ್ಥಾನವನ್ನು ಗಳಿಸಿಕೊಂಡಿದೆ. 2021ನೇ ಸಾಲಿನಲ್ಲಿ ಏಪ್ರಿಲ್ ತಿಂಗಳಿನಿಂದ ಸೆಪ್ಟೆಂಬರ್ ತನಕ, ಬೆಂಗಳೂರು ನಗರದಿಂದ 3,749.18 ದಶಲಕ್ಷ ಡಾಲರ್ ಮೌಲ್ಯದ ವಸ್ತುಗಳನ್ನು ಎಕ್ಸ್ ಪೋರ್ಟ್ ಮಾಡಲಾಗಿದೆ. ಆ ಪೈಕಿ 3,283.09 ದಶಲಕ್ಷ ಡಾಲರ್ ಮೌಲ್ಯದ ಇಂಜಿನಿಯರಿಂಗ್ ಸರಕು, ಎಲೆಕ್ಟ್ರಾನಿಕ್ಸ್, ರೆಡಿಮೇಡ್ ಬಟ್ಟೆ, ಔಷಧಿ, ಸಾವಯವ ಮತ್ತು ಸಾವಯೇತರ ಪ್ರಮುಖ ಉತ್ಪನ್ನಗಳು ಸೇರಿವೆ.

ಇನ್ನು ದಕ್ಷಿಣ ಕನ್ನಡದಿಂದ 2,488.41 ದಶಲಕ್ಷ ಡಾಲರ್ ಮೌಲ್ಯದ ವಸ್ತುಗಳನ್ನು ಎಕ್ಸ್ ಪೋರ್ಟ್ ಮಾಡಲಾಗಿದೆ. ಆ ಪೈಕಿ 2,368.94 ದಶಲಕ್ಷ ಡಾಲರ್ ಮೌಲ್ಯದ ಪೆಟ್ರೋಲಿಯಂ ಉತ್ಪನ್ನಗಳು, ಸಾವಯವ ಮತ್ತು ಸಾವಯವೇತರ ರಾಸಾಯನಿಕಗಳು, ಕಬ್ಬಿಣದ ಅದಿರು, ಸಾಗರದ ಉತ್ಪನ್ನಗಳು ಹಾಗೂ ಇಂಜಿನಿಯರಿಂಗ್ ನಂತಹ ಪ್ರಮುಖ ಉತ್ಪನ್ನಗಳನ್ನು ಎಕ್ಸ್ ಪೋರ್ಟ್ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯಿಂದ 1,769.36 ದಶಲಕ್ಷ ಡಾಲರ್ ಮೌಲ್ಯದ ವಸ್ತುಗಳನ್ನು ರಫ್ತು ಮಾಡಲಾಗಿದೆ. ಆದರೆ ಆ ಪೈಕಿ 1,754.98 ದಶಲಕ್ಷ ಡಾಲರ್ ಮೌಲ್ಯದ ಇಂಜಿನಿಯರಿಂಗ್ ಉತ್ಪನ್ನಗಳು, ಭತ್ತ, ಮೈಕಾ, ಕಲ್ಲಿದ್ದಲು, ಖನಿಜಗಳು, ಹಣ್ಣು ಮತ್ತು ತರಕಾರಿ, ಸಾವಯವ ಮತ್ತು ಸಾವಯವೇತರ ರಾಸಾಯನಿಕ ಉತ್ಪನ್ನಗಳು ಸೇರಿದೆ.

3.44 ಲಕ್ಷ ಕೋಟಿ ರೂ. ಮೌಲ್ಯದ ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸಾಫ್ಟ್ ವೇರ್ ರಫ್ತು :

ರಾಜ್ಯದಿಂದ 2020-21ನೇ ಸಾಲಿನಲ್ಲಿ 5,86,302 ಕೋಟಿ ರೂ. ಮೌಲ್ಯದ ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸಾಫ್ಟ್ ವೇರ್ ಗಳನ್ನು ವಿದೇಶಗಳಿಗೆ ರಫ್ತು ಮಾಡಲಾಗಿದೆ. 2021-22ನೇ ಸಾಲಿನಲ್ಲಿ (ಏಪ್ರಿಲ್ ನಿಂದ ಸೆಪ್ಟೆಂಬರ್ ತನಕ) 3,44,079 ಕೋಟಿ ರೂ. ಮೌಲ್ಯದ ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸಾಫ್ಟ್ ವೇರ್ ಗಳನ್ನು ಎಕ್ಸ್ ಪೋರ್ಟ್ ಮಾಡಲಾಗಿದೆ.

30 ಜಿಲ್ಲೆಯ ರಫ್ತುಕೇಂದ್ರಗಳಿಗೆ ಉತ್ಪನ್ನಗಳನ್ನು ಗುರ್ತಿಸಿದ ಕೇಂದ್ರ ಸರ್ಕಾರ :

ಕರ್ನಾಟಕವು ರಫ್ತುಕೇಂದ್ರವಾಗಿ ಅಭಿವೃದ್ಧಿ ಹೊಂದುತ್ತಿರುವ 30 ಜಿಲ್ಲೆಗಳಿಗೆ ಸ್ಥಳೀಯ ನೆಲೆಯಲ್ಲಿ ವಿಶಿಷ್ಠತೆ ಸಾಧಿಸಿದ ಅವುಗಳದ್ದೇ ಆದ ಉತ್ಪನ್ನಗಳನ್ನು ಭಾರತ ಸರ್ಕಾರ ಗುರುತಿಸಿದೆ. ತೆಂಗಿನಕಾಯಿ, ಗೋಡಂಬಿ, ಬೆಲ್ಲ, ದಾಳಿಂಬೆ, ನೆಲಗಡಲೆ, ಮಾವು, ಭೆಂಡಿ, ಈರುಳ್ಳಿ, ಅಕ್ಕಿ, ಜೋಳ, ಗ್ರಾನೈಟ್, ಜೀನ್ಸ್ ಪ್ಯಾಂಟ್, ಕಾಫಿ, ಸೀರೆ, ವಿದ್ಯುತ್ ಯಂತ್ರೋಪಕರಣಗಳು, ಫಾರ್ಮಾ ಮತ್ತು ಬಯೋಟೆಕ್ ಹೀಗೆ ನಾನಾ ಉತ್ಪನ್ನಗಳನ್ನು ಗುರುತಿಸಲಾಗಿದೆ.

ಭೌಗೋಳಿಕ ವಿಶಿಷ್ಠತೆ ಕಾಯ್ದುಕೊಳ್ಳುವ ಉತ್ಪನ್ನದ ಜಿಐ ನೀತಿ ಅವಳಡಿಸಿಕೊಂಡ ಕರ್ನಾಟಕ :

ಜಿಐ ಟ್ಯಾಗ್ ಹೊಂದಿದ ಉತ್ಪನ್ನಗಳ ಚಿತ್ರ

ರಾಜ್ಯ ಸರ್ಕಾರವು ಇದೇ ಮೊದಲ ಬಾರಿಗೆ ಭೌಗೋಳಿಕತೆಯನ್ನು ಸೂಚಿಸುವ (GI) ನೀತಿಯನ್ನು ಅಳವಡಿಸಿಕೊಂಡಿದೆ. ಇದರ ಮೂಲಕ ಭೌಗೋಳಿಕ ವಿಶಿಷ್ಠತೆಯನ್ನು ಕಾಯ್ದುಕೊಳ್ಳುವ ಮತ್ತು ಅದಕ್ಕೆ ಅನುಗುಣವಾಗಿ ಭೌಗೋಳಿಕ ಮಾಹಿತಿ ವ್ಯವಸ್ಥೆಯ ಕ್ಲಸ್ಟರ್ ಗಳನ್ನು ರಚಿಸಿ, ಅವುಗಳಿಗೆ ಸೂಕ್ತ ಮೂಲಸೌಕರ್ಯಗಳನ್ನು ಒದಗಿಸುವ ಕಾರ್ಯನೀತಿಯನ್ನು ಜಾರಿಗೆ ತರುತ್ತಿದೆ.

ಈ ನೀತಿಯನ್ನು ರಾಜ್ಯದಾದ್ಯಂತ ಪೂರ್ಣವಾಗಿ ಜಾರಿಗೆ ತರಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಶ್ರಯದಲ್ಲಿ ವಿಶ್ವೇಶ್ವರಯ್ಯ ಟ್ರೈಡ್ ಪ್ರಮೋಷನ್ ಸೆಂಟರ್ (VTPC) ಯು ರಾಜ್ಯದ ಏಳು ಜಿಐ ಕ್ಲಸ್ಟರ್ ಗಳನ್ನು ಅಧ್ಯಯನಕ್ಕೆ ಒಳಪಡಿಸಿದೆ. ಮೈಸೂರಿನ ಗಂಝೀಫಾ ಕಾರ್ಡುಗಳು, ಮೈಸೂರಿನ ಸಾಂಪ್ರದಾಯಿಕ ಚಿತ್ರಕಲೆ, ಉಡುಪಿಯ ಸೀರೆಗಳು, ಬಿದರು ಪಾತ್ರೆಗಳು, ಮೈಸೂರಿನ ಬೀಟೆ ಮರದ ಇನ್ಲೇ ಕಲೆ, ಉಡುಪಿಯ ಮುಳ್ಳುಗುಳ್ಳ ಬದನೆ, ಉಡುಪಿ ಮಲ್ಲಿಗೆ ಈ ಏಳು ಉತ್ಪನ್ನಗಳ ಏಳು ಕ್ಲಸ್ಟರ್ ಗಳನ್ನು ಅಧ್ಯಯನಕ್ಕೆ ಒಳಪಡಿಸಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ 26 ಉತ್ಪನ್ನಗಳು ನೋಂದಾಯಿತ ಜಿಐ ಟ್ಯಾಗ್ ಹೊಂದಿವೆ. ಇದಲ್ಲದೆ ಕರ್ನಾಟಕದಲ್ಲಿ 414 ಸಾಫ್ಟ್ ವೇರ್ ಜಿಐ ಟ್ಯಾಗ್ ಅನುಮತಿ ನೀಡಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW EXCLUSIVE | BBMP 51K JOB CODE WILL BE CANCEL? | ಬೆಂಗಳೂರಿನ ಅಭಿವೃದ್ಧಿ ಕಾಮಗಾರಿಗಳಿಗೆ ಬಿಬಿಎಂಪಿ ಬ್ರೇಕ್….? ಹಲವು ವರ್ಷವಾದ್ರೂ ಆರಂಭವಾಗದ 51 ಸಾವಿರ ಕಾಮಗಾರಿಗಳ ರದ್ಧತಿ ?

Next Post

EPFO Interest Rate | ಚಂದಾದಾರರ ಪಿಎಫ್ ಬಡ್ಡಿದರ ಶೇ.8.1ಕ್ಕೆ ಇಳಿಕೆ :  ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಹೆಚ್ಚಳ ನಿರೀಕ್ಷೆಗೆ ತಣ್ಣೀರು

Next Post
ಚಿತ್ರಕೃಪೆ : ಪಿಟಿಐ - ಸಾಂದರ್ಭಿಕ ಚಿತ್ರ

EPFO Interest Rate | ಚಂದಾದಾರರ ಪಿಎಫ್ ಬಡ್ಡಿದರ ಶೇ.8.1ಕ್ಕೆ ಇಳಿಕೆ :  ನೌಕರರ ಭವಿಷ್ಯ ನಿಧಿ ಠೇವಣಿ ಬಡ್ಡಿದರ ಹೆಚ್ಚಳ ನಿರೀಕ್ಷೆಗೆ ತಣ್ಣೀರು

ಚಿತ್ರಕೃಪೆ : ಜೀ ಸ್ಟುಡಿಯೋಸ್

The Kashmir Files Movie | ದೇಶದಲ್ಲಿ ಜೋರಾಗಿ ಸದ್ದು ಮಾಡುತ್ತಾ- ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿದೆ ‘ದಿ ಕಾಶ್ಮೀರ್ ಫೈಲ್ಸ್’ : ಚಿತ್ರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d