Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

    GBA NEWS | “ಗ್ರೇಟರ್ ಬೆಂಗಳೂರು” ಪಾಲಿಕೆ ಚುನಾವಣೆ ಮತ್ತಷ್ಟು ವಿಳಂಬ: ಸೆಪ್ಟೆಂಬರ್ ವರೆಗೆ ಕಾಲಾವಕಾಶ ಕೋರಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

ACB RAIDS IN KARNATAKA | ಎಸಿಬಿ ಪೊಲೀಸರ ದಾಳಿಗೆ ಹೆದರಿ ಕಸದ ಡಬ್ಬಿಗೆ ಚಿನ್ನ- ಬೆಳ್ಳಿ ಆಭರಣ ಎಸೆದಿದ್ದ ಭ್ರಷ್ಟ ಅಧಿಕಾರಿ

ರಾಜ್ಯಾದ್ಯಂತ ಎಸಿಬಿ ಅಧಿಕಾರಿಗಳ ವ್ಯಾಪಕ ಕಾರ್ಯಾಚರಣೆ- 18 ಭ್ರಷ್ಟ ಅಧಿಕಾರಿಗಳ ಮೇಲೆ ದಾಳಿ |ಹುಡುಕಿದಷ್ಟು ಸಿಗುತ್ತಿದೆ ಭ್ರಷ್ಟ ಅಧಿಕಾರಿಗಳ ಚರ- ಸ್ಥಿರಾಸ್ತಿ | ಕೆಜಿಗಟ್ಟಲೆ ಚಿನ್ನ, ಬೆಳ್ಳಿ ಆಭರಣ – ಗಟ್ಟಿಗಳ ಪತ್ತೆ |ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಸ್ತಿ- ಪಾಸ್ತಿ ದಾಖಲೆಗಳ ಬಗ್ಗೆ ಎಸಿಬಿ ಅಧಿಕಾರಿಗಳಿಂದ ಶೋಧ

by Bengaluru Wire Desk
March 16, 2022
in News Wire, Others
Reading Time: 2 mins read
0
ದಕ್ಷಿಣ ಕನ್ನಡದ ಕೆಪಿಟಿಸಿಎಲ್ ಎಇ ದಯಾ ಸುಂದರ್ ರಾಜು ಅವರ ಬಂಗಲೆ

ದಕ್ಷಿಣ ಕನ್ನಡದ ಕೆಪಿಟಿಸಿಎಲ್ ಎಇ ದಯಾ ಸುಂದರ್ ರಾಜು ಅವರ ಬಂಗಲೆ

ಬೆಂಗಳೂರು, (www.bengaluruwire.com) : ಭ್ರಷ್ಟ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ACB)ದ ಅಧಿಕಾರಿಗಳು ನಡೆಸಿರುವ ಕಾರ್ಯಾಚರಣೆಯಿಂದ ಕಂಗಾಲಾಗಿದ್ದಾರೆ. ಬೆಳಗ್ಗೆ ಬೆಳಗ್ಗೆ ರಾಜ್ಯದ ವಿವಿಧ ಜಿಲ್ಲೆಗಳ 18 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 77 ಕಡೆಗಳಲ್ಲಿ 100ಕ್ಕೂ ಹೆಚ್ಚು ಅಧಿಕಾರಿಗಳು ಏಕ ಕಾಲಕ್ಕೆ ದಾಳಿ ಮಾಡಿ ಶೋಧ ಕಾರ್ಯ ನಡೆಸಿದ್ದಾರೆ.

ಸುಮಾರು 300 ಸಿಬ್ಬಂದಿಯ ಜೊತೆ ಶೋಧ ಕಾರ್ಯದ ವೇಳೆ ಭ್ರಷ್ಟ ಸರ್ಕಾರಿ ಅಧಿಕಾರಿಗಳ ಬಳಿ ಲಕ್ಷದಿಂದ ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಆಸ್ತಿ, ಒಡವೆ, ಚಿನ್ನಾಭರಣ, ಬೆಲೆ ಬಾಳುವ ವಸ್ತುಗಳು, ನಿವೇಶನ, ಕಟ್ಟಡ, ಕಾಂಪ್ಲೆಕ್ಸ್, ಮ್ಯೂಚೆಲ್ ಫಂಡ್ ಹೂಡಿಕೆ, ಕೃಷಿಭೂಮಿ ಸೇರಿದಂತೆ ವಿವಿಧ ರೀತಿ ಚರ-ಸ್ಥಿರಾಸ್ತಿಗಳನ್ನು ಎಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಹೊತ್ತು ಹೋದಂತೆ ಆ ಲಂಚಬಾಕ ಅಧಿಕಾರಿಗಳ ಆಸ್ತಿ-ಪಾಸ್ತಿಗಳನ್ನು ಕಂಡು ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರೇ ದಂಗುಬಡಿದು ಹೋಗಿದ್ದಾರೆ.

ಎಸಿಬಿ ದಾಳಿಗೆ ಹೆದರಿ ಕಸದ ಡಬ್ಬಿಗೆ ಚಿನ್ನ- ಬೆಳ್ಳಿ ಆಭರಣ ಎಸೆದ ಭ್ರಷ್ಟ ಅಧಿಕಾರಿ :

ಕಸದ ಡಬ್ಬಿಯಲ್ಲಿದ್ದ ಚಿನ್ನ- ಬೆಳ್ಳಿ ಆಭರಣ ಹಾಗೂ ನಗದು

ರಾಯಚೂರಿನ ಕೃಷ್ಣ ಜಲಭಾಗ್ಯ ನಿಗಮದ ಎಇಇ ಅಶೋಕ್ ರೆಡ್ಡಿ ಮನೆಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದಾಗ ಮನೆಯವರು ಬೆದರಿ, ತಮ್ಮ ಮನೆಯ ಕಸದ ಡಬ್ಬಕ್ಕೆ ನಗದು, ಚಿನ್ನಾಭರಣ, ಬೆಳ್ಳಿಯ ಆಭರಣಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ ಬಿಸಾಡಿದ್ದರು. ಆದರೆ ಎಸಿಬಿ ದಳ ಪೊಲೀಸರು ಇದನ್ನು ಪತ್ತೆಹಚ್ಚಿ ಕವರ್ ಬಿಚ್ಚಿ ನೋಡಿದಾಗ ಅದರಲ್ಲಿ 7 ಲಕ್ಷ ನಗದು, 41 ತೊಲೆ ಚಿನ್ನ ಹಾಗೂ 60 ತೊಲೆ ಬೆಳ್ಳಿಯ ಆಭರಣಗಳು ಪತ್ತೆಯಾಯಿತು.

ಕಸದ ಡಬ್ಬಿಗೆ ಹಣ, ಚಿನ್ನ- ಬೆಳ್ಳಿ ಆಭರಣ ಕವರ್ ನಲ್ಲಿ ಸುತ್ತಿ ಎಸೆದಿರುವುದನ್ನು ಪತ್ತೆ ಹಚ್ಚಿದ ಎಸಿಬಿ ತಂಡ

ಇನ್ನು ಬಾದಾಮಿಯ ಅರಣ್ಯ ಇಲಾಖೆಯ ಆರ್ ಎಫ್ ಒ ಪಿ.ಶಿವಾನಂದ ಅವರ ಮನೆಯಲ್ಲಿ ನೋಟನ್ನು ಎಣಿಸುವ ಯಂತ್ರ ಹಾಗೂ 3 ಕೆಜಿ ಗಂಧದ ತುಂಡುಗಳು ಪತ್ತೆಯಾಗಿದೆ. ವಿಜಯಪುರ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕ ಗೋಪಿನಾಥ್ ಎನ್.ಮಾಳಗಿ ಅವರ ಬಳಿ ಬರೋಬ್ಬರಿ ಕೋಟ್ಯಾಂತರ ರೂಪಾಯಿ ಹಣವನನ್ನು ಮ್ಯೂಚುವಲ್ ಫಂಡ್ ನಲ್ಲಿ ಹೂಡಿಕೆ ಮಾಡಿರುವುದು ಪತ್ತೆಯಾಗಿದೆ.

ಬಾದಾಮಿಯ ಅರಣ್ಯ ಇಲಾಖೆ ಆರ್ ಎಫ್ ಒ ಮನೆಯಲ್ಲಿ ಕಂಡು ಬಂದ 3 ಕೆಜಿ ಗಂಧದ ತುಂಡು ಹಾಗೂ ಹಣ ಎಣಿಸುವ ಯಂತ್ರ

ಎಇ ಅಧಿಕಾರಿ ಮನೆಯಲ್ಲಿ ಐಷಾರಾಮಿ ಹೋಮ್ ಥಿಯೇಟರ್ :

ಐಷಾರಾಮಿ ಹೋಮ್ ಥಿಯೇಟರ್

ಇನ್ನು ಚಿಕ್ಕಮಗಳೂರಿನ ಲೋಕೋಪಯೋಗಿ ಇಲಾಖೆಯ ಎಇ ಗವಿರಂಗಪ್ಪ ತಮ್ಮ ಐಷಾರಾಮಿ ಮನೆಯಲ್ಲಿ ಭಾರೀ ಮೌಲ್ಯ ಹೋಮ್ ಥಿಯೇಟರ್ ಸೌಲಭ್ಯ ಕಲ್ಪಿಸಿಕೊಂಡಿದ್ದನ್ನು ಕಂಡು ಎಸಿಬಿ ಅಧಿಕಾರಿಗಳು ಹುಬ್ಬೇರಿಸಿದ್ದರು.

ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ ಹೆಚ್ಚುವರಿ ಆಯುಕ್ತ ಜೆ.ಜ್ಞಾನೇಂದ್ರ ಕುಮಾರ್ ಮನೆಯಲ್ಲಿ ಎಸಿಬಿ ಅಧಿಕಾರಿಗಳು 1.64 ಗ್ರಾಮ್ ಚಿನ್ನಾಭರಣ, 13.73 ಕೆಜಿ ಬೆಳ್ಳಿಯ ಆಭರಣ ಹಾಗೂ 2.24 ಲಕ್ಷ ನಗದು ಹಣವಿರುವುದನ್ನು ಪತ್ತೆಹಚ್ಚಿದ್ದಾರೆ.

ಸಾರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಜೆ.ಜ್ಞಾನೇಂದ್ರ ಕುಮಾರ್ ಅವರ ಮನೆಯಲ್ಲಿ ಸಿಕ್ಕ ಬೆಲೆ ಬಾಳುವ ಚಿನ್ನಾಭರಣ, ಸೀರೆ, ವಾಚ್, ನಗದು ಇತ್ಯಾದಿ

.ಎಸಿಬಿ ದಾಳಿಗೆ ಒಳಗಾದ ಅಧಿಕಾರಿಗಳ ಅಧಿಕಾರಿಗಳ ವಿವರ ಈ ಕೆಳಕಂಡಂತಿದೆ :

  1. ಬಿ.ಕೆ.ಶಿವಕುಮಾರ್, ಹೆಚ್ಚುವರಿ ನಿರ್ದೇಶಕ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಖನಿಜ ಭವನ ಬೆಂಗಳೂರು
  2. ಜೆ.ಜ್ಞಾನೇಂದ್ರ ಕುಮಾರ್, ಹೆಚ್ಚುವರಿ ಆಯುಕ್ತರು, ರಸ್ತೆ ಸುರಕ್ಷತೆ, ಸಾರಿಗೆ ಇಲಾಖೆ, ಟಿಟಿಎಂಸಿ ಬಿಲ್ಡಿಂಗ್, ಶಾಂತಿನಗರ, ಬೆಂಗಳೂರು
  3. ವಿ.ರಾಕೇಶ್ ಕುಮಾರ್, ಉಪನಿರ್ದೇಶಕ, ನಗರ ಯೋಜನೆ ವಿಭಾಗ, ಬಿಡಿಎ, ಬೆಂಗಳೂರು
  4. ರಮೇಶ್ ಕನಕಟ್ಟೆ, ಆರ್ ಎಫ್ ಒ, ಸಾಮಾಜಿಕ ಅರಣ್ಯ, ಯಾದಗಿರಿ
  5. ಬಸವರಾಜ ಶೇಖರ್ ರೆಡ್ಡಿ ಪಾಟಿಲ್, ಇಂಜಿನಿಯರ್, ಕೌಜಳಗಿ ವಿಭಾಗ ಗೋಕಾಕ್
  6.  ಬಸವಕುಮಾರ್.ಎಸ್, ಶಿರಸ್ತೆದಾರ್,ಅಣ್ಣಿಗೇರಿ, ಜಿಲ್ಲಾಧಿಕಾರಿ ಕಚೇರಿ, ಗದಗ
  7.  ಗೋಪಿನಾಥ್ ಎನ್.ಮಾಳಗಿ, ವ್ಯವಸ್ಥಾಪಕ, ನಿರ್ಮಿತಿ ಕೇಂದ್ರ ವಿಜಯಪುರ
  8. ಶಿವಾನಂದ ಪಿ. ಶರಣಪ್ಪ, ಆರ್ ಎಫ್ ಒ, ಬಾದಾಮಿ,
  9. ಮಂಜುನಾಥ್, ಅಸಿಸ್ಟೆಂಟ್ ಕಮೀಷನರ್, ರಾಮನಗರ
  10.  ಶ್ರೀನಿವಾಸ್, ಜನರಲ್ ಮ್ಯಾನೇಜರ್ ಸಮಾಜ ಕಲ್ಯಾಣ ಇಲಾಖೆ
  11.  ಮಹೇಶ್ವರಪ್ಪ, ಜಿಲ್ಲಾ ಪರಿಸರ ಅಧಿಕಾರಿ, ದಾವಣಗೆರೆ
  12.  ಕೃಷ್ಣನ್, ಎಇ, ಎಪಿಎಂಸಿ ಹಾವೇರಿ
  13. ಚೆಲುವರಾಜ್, ಅಬಕಾರಿ ನಿರೀಕ್ಷಕ, ಗುಂಡ್ಲುಪೇಟೆ
  14. ಗಿರೀಶ್, ಸಹಾಯಕ ಇಂಜಿನಿಯರ್, ರಾಷ್ಟ್ರೀಯ ಹೆದ್ದಾರಿ
  15.  ಬಾಲಕೃಷ್ಣ, H.N., ಪೊಲೀಸ್ ಇನ್ಸ್ ಪೆಕ್ಟರ್, ವಿಜಯನಗರ ಪೊಲೀಸ್ ಠಾಣೆ, ಮೈಸೂರು
  16.  ಗವಿ ರಂಗಪ್ಪ, ಎಇ, ಲೋಕೋಪಯೋಗಿ ಇಲಾಖೆ, ಚಿಕ್ಕಮಗಳೂರು
  17.  ಅಶೋಕ ರೆಡ್ಡಿ ಪಾಟೀಲ್, ಎಇಇ, ಕೃಷ್ಣ ಜಲ ಭಾಗ್ಯ ನಿಗಮ, ರಾಯಚೂರು
  18.  ದಯಾ ಸುಂದರ್ ರಾಜು, ಎಇ, ಕೆಪಿಟಿಸಿಎಲ್, ದಕ್ಷಿಣ ಕನ್ನಡ

ಇನ್ನು, ಎಸಿಬಿ ಅಧಿಕಾರಿಗಳು ದಾಳಿ ವೇಳೆ ಏನೇನು ವಶಪಡಿಸಿಕೊಂಡಿದ್ದಾರೆ. ಎಷ್ಟು ಅಕ್ರಮ ಅಸ್ತಿ ಪತ್ತೆಯಾಗಿವೆ ಎಂಬುವುದರ ಸಂಪೂರ್ಣ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

WhatsApp Join our WhatsApp Channel
Previous Post

Hijab Row | ಹಿಜಾಬ್ ಪ್ರಕರಣ ಕುರಿತಂತೆ ಉಚ್ಚ ನ್ಯಾಯಾಲಯದ ತೀರ್ಪು ಪ್ರಕಟ ಹಿನ್ನಲೆ : ಮಕ್ಕಳ ಹಿತದೃಷ್ಟಿಯಿಂದ ಎಲ್ಲರೂ ಹೈಕೋರ್ಟ್ ಆದೇಶ ಪಾಲಿಸಬೇಕು –  ಸಿಎಂ ಬೊಮ್ಮಾಯಿ

Next Post

ISKCON Guru Purnima 2022 | ನಾಳೆ ಇಸ್ಕಾನ್ ನಲ್ಲಿ ಗುರುಪೂರ್ಣಿಮೆ ಆಚರಣೆ : 108 ನದಿಗಳ ಪವಿತ್ರ ಜಲದೊಂದಿಗೆ ವಿಗ್ರಹಗಳಿಗೆ ಮಹಾಭಿಷೇಕ

Next Post
ಬೆಂಗಳೂರಿನ ಇಸ್ಕಾನ್ ದೇವಸ್ಥಾನ

ISKCON Guru Purnima 2022 | ನಾಳೆ ಇಸ್ಕಾನ್ ನಲ್ಲಿ ಗುರುಪೂರ್ಣಿಮೆ ಆಚರಣೆ : 108 ನದಿಗಳ ಪವಿತ್ರ ಜಲದೊಂದಿಗೆ ವಿಗ್ರಹಗಳಿಗೆ ಮಹಾಭಿಷೇಕ

ಚಿತ್ರಕೃಪೆ : ಜೇಮ್ಸ್

JAMES FILM RELEASE | ಅಪ್ಪು ನೆನಪಿನಲ್ಲಿ ಬೇಸರದ ನಡುವೆ ಭರ್ಜರಿಯಾಗಿ ತೆರೆಕಂಡ ಜೇಮ್ಸ್ ಚಿತ್ರಕ್ಕೆ ಸಖತ್ ರೆಸ್ಪಾನ್ಸ್

Please login to join discussion

Like Us on Facebook

Follow Us on Twitter

Recent News

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026

ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

April 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group