Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

JAMES FILM RELEASE | ಅಪ್ಪು ನೆನಪಿನಲ್ಲಿ ಬೇಸರದ ನಡುವೆ ಭರ್ಜರಿಯಾಗಿ ತೆರೆಕಂಡ ಜೇಮ್ಸ್ ಚಿತ್ರಕ್ಕೆ ಸಖತ್ ರೆಸ್ಪಾನ್ಸ್

ಮಾ.17 ಮೊದಲ ದಿನದಂದೇ 4 ಸಾವಿರ ಸಿನಿಪರದೆ ಹಾಗೂ ಪಂಚಫಾಷೆಗಳಲ್ಲಿ ಚಿತ್ರ ಪ್ರದರ್ಶನ| ಕರ್ನಾಟಕವೊಂದರಲ್ಲೇ 400 ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ | ಜೇಮ್ಸ್ ಚಿತ್ರದ ಬಗ್ಗೆ ಸಹೋದರ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದೇನು?

by Bengaluru Wire Desk
March 17, 2022
in News Wire, Public interest
Reading Time: 1 min read
0
ಚಿತ್ರಕೃಪೆ : ಜೇಮ್ಸ್

ಚಿತ್ರಕೃಪೆ : ಜೇಮ್ಸ್

 ಬೆಂಗಳೂರು, (www.bengaluruwire.com) : ಅಭಿಮಾನಿಗಳ ಪಾಲಿನ ಅಪ್ಪು, ನಟ ಪುನೀತ್ ರಾಜ್ ಕುಮಾರ್ (Actor Puneeth Rajkumar) ಇಲ್ಲದ ಬೇಸರದ ನಡುವೆ ಅವರ ಅಭಿನಯದ ಕೊನೆಯ ಚಿತ್ರ ಜೇಮ್ಸ್ (‘James’) ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಗುರುವಾರ ತೆರೆ ಕಂಡಿದ್ದು, ಅಭಿಮಾನಿಗಳು ಅಪ್ಪು ಇಲ್ಲದ ಜನ್ಮದಿನ ಹಾಗೂ ಜೇಮ್ಸ್ ಚಿತ್ರದ ಸಂಭ್ರಮಾಚರಣೆ ಈ ಎರಡು ಕಾರ್ಯಕ್ರಮವನ್ನು ಜೇಮ್ಸ್ ಜಾತ್ರೆ ಹೆಸರಿನಲ್ಲಿ ಖುಷಿ ಹಾಗೂ ದುಖಃ ಮಿಶ್ರ ಭಾವಗಳ ಮಧ್ಯೆ ಆಚರಿಸಿದರು.

ಕನ್ನಡ ಚಿತ್ರೋದ್ಯಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಹಠಾತ್ ಅಗಲಿಕೆ ಶೂನ್ಯ ಸೃಷ್ಟಿಸಿದ್ದಂತೂ ಸತ್ಯ. ಇದೇ ಕೊರಗಿನಲ್ಲಿ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರವನ್ನು ಅವರ ಅಭಿಮಾನಿಗಳು ಮುಂಗಡವಾಗಿ ಟಿಕೆಟ್ ಬುಕಿಂಗ್ ಮಾಡಿ, ಸಾಲುದ್ದ ಕ್ಯೂನಲ್ಲಿ ರಾತ್ರೋರಾತ್ರಿ ಸಾಲುಗಟ್ಟಿ ನಿಂತು ಟಿಕೆಟ್ ಪಡೆದು ನೋಡಿ ತೃಪ್ತಿ ವ್ಯಕ್ತಪಡಿಸಿದ್ದಾರೆ.

12 ದೇಶಗಳ ನಾಲ್ಕು ಸಾವಿರ ಥಿಯೇಟರ್ ಗಳಲ್ಲಿ ರಿಲೀಸ್ :

ಜೇಮ್ಸ್ ಚಲನಚಿತ್ರ ಮಾ.17ರ ಮೊದಲದಿನದಂದೇ 4,000 ಥಿಯೇಟರ್ ಗಳಲ್ಲಿ (4000 screens) ಪ್ರದರ್ಶನಗೊಂಡಿದ್ದಲ್ಲದೆ ಕನ್ನಡ, ತಮಿಳು, ಮಲಯಾಳಿ, ತೆಲಗು ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಗೊಂಡು ಚಿತ್ರರಸಿಕರ ಮನತಣಿಸಿದೆ. ಒಂದೊಂಡೆ ಜೇಮ್ಸ್ ಚಿತ್ರ ನೋಡಿದ ಸಂಭ್ರಮವಾದರೆ, ಅಪ್ಪು ನೆನಪಿನಲ್ಲಿ ಲಕ್ಷಾಂತರ ಅಭಿಮಾನಿಗಳು ಬೇಸರವನ್ನು ಹೊರಹಾಕಿದ್ದಾರೆ. ಕರ್ನಾಟಕದ 400 ಸಿನಿಮಾ ಮಂದಿರದಲ್ಲಿ ಜೇಮ್ಸ್ ಚಿತ್ರ ಇಂದು ತೆರೆಕಂಡಿದೆ.

ಆಂಧ್ರ-ತೆಲಂಗಾಣದಲ್ಲಿ 300ಕ್ಕೂ ಹೆಚ್ಚು ಸ್ಕ್ರೀನ್, ಆಸ್ಟ್ರೇಲಿಯಾದಲ್ಲಿ 150ಕ್ಕೂ ಹೆಚ್ಚು ಸ್ಕ್ರೀನ್ಗಳಲ್ಲಿ ರಿಲೀಸ್ ಆಗಿದೆ. ಅಮೆರಿಕದಲ್ಲಿ 160 ಸಿನಿಪರದೆ ಸೇರಿದಂತೆ 12 ದೇಶಗಳಲ್ಲಿ ಜೇಮ್ಸ್ ಚಿತ್ರ ಬಿಡುಗಡೆಗೊಂಡಿದೆ.

ಅಪ್ಪುವಿನ 46 ಕೆಜಿ ಕೇಕ್ ಕತ್ತರಿಸಿದ ರಾಘವೇಂದ್ರ ರಾಜ್ ಕುಮಾರ್ :

ಕಂಠೀರವ ಸ್ಟುಡಿಯೋದಲ್ಲಿ ಗುರುವಾರ ಬೆಳಗ್ಗೆ ನಟಿ ಪುನೀತ್ ಬರ್ತ್ ಡೇ ಪ್ರಯುಕ್ತ ನಟ ರಾಘವೇಂದ್ರ ರಾಜ್ ಕುಮಾರ್ 46 ಕೆಜಿ ತೂಕದ ಕೇಕ್ ಕಟ್ ಮಾಡಿದರು. ಇದೇ ವೇಳೆ ಅಪ್ಪುವನ್ನು ನೆನೆದು ದೊಡ್ಡಮನೆ ಕುಟುಂಬ ಬೇಸರದಲ್ಲಿತ್ತು.

ನಟ ಪುನೀತ್ ರಾಜ್ ಕುಮಾರ್ ಕಳೆದ ವರ್ಷದ ಅಕ್ಟೋಬರ್ ನಲ್ಲಿ ಸಾವನ್ನಪ್ಪಿದ ಬಳಿಕ ಅವರ ಅಭಿನಯದ ಈ ಚಿತ್ರಕ್ಕೆ ಅವರ ಹಿರಿಯ ಸಹೋದರ ನಟ ಶಿವರಾಜ್ ಕುಮಾರ್ 11 ಗಂಟೆಗಳ ಕಾಲ ಸಮಯ ಮೀಸಲಿಟ್ಟು ವಾಯ್ಸ್ ಡಬ್ ಮಾಡಿದ್ದಾರೆ. ಪುನೀತ್ ಇಬ್ಬರು ಸಹೋದರರಾದ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್ ಕುಮಾರ್ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಿರುವುದು ಮತ್ತೊಂದು ವಿಶೇಷ.

ಬಹದ್ದೂರು ಚಿತ್ರದ ಖ್ಯಾತಿ ಚೇತನ್ ಕುಮಾರ್ ಈ ಜೇಮ್ಸ್ ಚಿತ್ರವನ್ನು ನಿರ್ದೇಶಿಸಿದ್ದು, ಪ್ರಿಯಾ ಆನಂದ್, ಅನುಪ್ರಭಾಕರ್ ಮುಖರ್ಜಿ, ಶ್ರೀಕಾಂತ್ ಮೆಕಾ, ಶರತ್ ಕುಮಾರ್ ಹಾಗೂ ಇತರರು ತಾರಾಗಣದಲ್ಲಿದ್ದಾರೆ. ಕಿಶೋರ್ ಪತ್ತಿಕೊಂಡ ಈ ಚಿತ್ರದ ನಿರ್ಮಾಪಕರಾಗಿದ್ದರೆ, ಚೇತನ್ ರಾಜ್ ಸಂಗೀತ ನಿರ್ದೇಶಿಸಿದ್ದಾರೆ.

ಇತ್ತೀಚೆಗೆ ಅಂದರೆ ಮಾ.13ರಂದು ಜೇಮ್ಸ್ ಚಿತ್ರದ ಪ್ರೀಲಾಂಚ್ ಪ್ರದರ್ಶನದಲ್ಲಿ ಈ ಚಿತ್ರದ ತಂಡದೊಂದಿಗೆ, ಕನ್ನಡ ಚಿತ್ರೋದ್ಯಮದ ಹಲವು ಹಿರಿಯ ನಟ, ನಟಿಯರು, ಪುನೀತ್ ರಾಜ್ ಕುಮಾರ್ ಕುಟುಂಬಸ್ಥರು ಈ ಭಾವನಾತ್ಮಕ ಸಂದರ್ಭದಲ್ಲಿ ಹಾಜರಿದ್ದು, ಚಿತ್ರ ವೀಕ್ಷಣೆ ಮಾಡಿದ್ದರು. ಅಪ್ಪು ವಿದಾಯದ ಚಿತ್ರವೆಂದೇ ಹೇಳುತ್ತಿರುವ ಅಭಿಮಾನಿಗಳು ಈ ಹಿಂದಿನ ಚಲನಚಿತ್ರಗಳು ಬಿಡುಗಡೆಯಾಗಿದ್ದಾಗ ಮನಪೂರ್ವಕವಾಗಿ ಸಂಭ್ರಮಿಸಿ ಚಿತ್ರವನ್ನು ವೀಕ್ಷಿಸುತ್ತಿದ್ದರೆ, ಈ ಕೊನೆಯ ಚಿತ್ರವನ್ನು ಇನ್ನಿಲ್ಲದ ಬೇಸರದಲ್ಲಿ ನೋಡುತ್ತಿರುವುದು ದುರ್ದೈವವೇ ಸರಿ.

ಜೇಮ್ಸ್ ಚಿತ್ರದ ಬಗ್ಗೆ ಸಹೋದ ರಾಘವೇಂದ್ರ ರಾಜ್ ಕುಮಾರ್ ಹೇಳಿದ್ದೇನು?

ನಟ ರಾಘವೇಂದ್ರ ರಾಜ್ ಕುಮಾರ್ ಜೇಮ್ಸ್ ಚಿತ್ರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದರು

ನಟ ಪುನೀತ್ ರಾಜ್ ಕುಮಾರ್ ಸಹೋದರ ರಾಘವೇಂದ್ರ ರಾಜ್ ಕುಮಾರ್ ಜೇಮ್ಸ್ ಚಿತ್ರ ನೋಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಒಬ್ಬ ಅಣ್ಣನಾಗಿ ನನ್ನ ತಮ್ಮನ ಸಿನಿಮಾದ ಬಗ್ಗೆ ಮಾತನಾಡಬಾರದು. ಏಕಂದರೆ ನನ್ನ ತಮ್ಮನ ಸಿನಿಮಾ ಹೇಗಿದ್ದರೂ ಚೆನ್ನಾಗಿರುತ್ತೆ ಅಂತ ಹೇಳುತ್ತೇನೆ. ಜೇಮ್ಸ್ ಸಿನಿಮಾ ನನ್ನ ತಮ್ಮನ ಕೊನೆಯ ಚಿತ್ರ. ಜನರು ಈ ಚಿತ್ರದ ಬಗ್ಗೆ ಮಾತನಾಡಿದ್ದನ್ನು ನಾವು ಕೇಳಬೇಕು. ಅವನ ಹುಟ್ಟುಹಬ್ಬಕ್ಕೆ ಕೊನೆಯದಾಗಿ ಜನರಿಗೆ ಕೊಡುಗೆಯಾಗಿ ಕೊಟ್ಟಿದ್ದಾನೆ. ಜನರಿಗೆ ಈ ಚಿತ್ರ ಇಷ್ಟ ಆದರೆ ನನಗೂ ಇಷ್ಟ ಆದಂತೆ. ಅಪ್ಪುವಿನ ಕೊನೆಯ ನಾಲ್ಕು ಸಿನಿಮಾದಲ್ಲಿ ಏನು ಹೇಳೋಕೆ ಹೊರಟಿದ್ದ? ಒಂದು ರಾಜ್ ಕುಮಾರ ಮಾಡ್ತಿಯಾ, ಒಂದು ಕಡೆ ಯುವರತ್ನ ಮಾಡ್ತಿಯಾ, ಮತ್ತೊಂದು ಕಡೆ ಗಂಧದ ಗುಡಿ ಮಾಡ್ತಿಯಾ, ಮತ್ತೆ ಜೇಮ್ಸ್ ಮಾಡ್ತಿಯಾ? ಅಪ್ಪು ಏನ್ ಮಾಡೋಕೆ ಹೊರಟಿದ್ದಾ? ಅನಾಥ ಆಶ್ರಮದಲ್ಲಿನ ಮಕ್ಕಳನ್ನು ಹೇಗೆ ನೋಡಿಕೊಳ್ಳಬೇಕು ಅಂತ ಹೇಳ್ತೀಯ. ಗಂಧದ ಗುಡಿಯಲ್ಲಿ ಪರಿಸರ ಹೇಗೆ ಕಾಪಾಡಬೇಕು? ಕಾಡನ್ನು ಕಾಪಾಡಬೇಕು ಅಂತ ಹೇಳ್ತಿಯಾ. ಜೇಮ್ಸ್ ನಲ್ಲಿ ಯೋಧರ ಬಗ್ಗೆ ಮಾತಾಡ್ತಿಯಾ. ಆತ ಏನು ಹೇಳೋಕೆ ಬಂದಿದ್ದ ಅಂತ ಗೊತ್ತಾಗಲಿಲ್ಲ. ಇದ್ಯಾವುದನ್ನೂ ನಮಗೆ ಹೇಳಿಲ್ಲ. ಸಿನಿಮಾ ಮುಖಾಂತರ ಅಭಿಮಾನಿಗಳಿಗೆ ಹೇಳಿದ್ದೀಯ. ಅದನ್ನು ಎಲ್ಲರೂ ಪಾಲಿಸುತ್ತಾರೆ. ಅವರ ಜೊತೆ ನಾವೂನು ನೀನು ಹೇಳಿದ್ದನ್ನು ಪಾಲಿಸುತ್ತೇವೆ” ಎಂದು ನಟ ರಾಘವೇಂದ್ರ ರಾಜ್ ಕುಮಾರ್ ಭಾವುಕರಾಗಿ ನುಡಿದರು.

WhatsApp Join our WhatsApp Channel
Previous Post

ISKCON Guru Purnima 2022 | ನಾಳೆ ಇಸ್ಕಾನ್ ನಲ್ಲಿ ಗುರುಪೂರ್ಣಿಮೆ ಆಚರಣೆ : 108 ನದಿಗಳ ಪವಿತ್ರ ಜಲದೊಂದಿಗೆ ವಿಗ್ರಹಗಳಿಗೆ ಮಹಾಭಿಷೇಕ

Next Post

ಕಸಾಪ ಸುದ್ದಿ | ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ಅಂತಿಮ ಕರಡು ತಿದ್ದುಪಡಿ ಪ್ರತಿ ಕಸಾಪ ಅಧ್ಯಕ್ಷರಿಗೆ ಹಸ್ತಾಂತರ

Next Post

ಕಸಾಪ ಸುದ್ದಿ | ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳ ಅಂತಿಮ ಕರಡು ತಿದ್ದುಪಡಿ ಪ್ರತಿ ಕಸಾಪ ಅಧ್ಯಕ್ಷರಿಗೆ ಹಸ್ತಾಂತರ

ಉದ್ಯೋಗ ಮಾಹಿತಿ ಕುರಿತ ಸಾಂದರ್ಭಿಕ ಚಿತ್ರ

Employment News | ಉದ್ಯೋಗಕಾಂಕ್ಷಿಗಳಿಗೆ ಸಿಹಿ ಸುದ್ದಿ : ಮಾ.27 ರಂದು ಬೆಂಗಳೂರಿನಲ್ಲಿ ಉದ್ಯೋಗ ಮೇಳ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group