Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Bangalore Chithrasante 2022 | ಬೆಂಗಳೂರಿನ 19ನೇ ಆವೃತ್ತಿಯ ಚಿತ್ರಸಂತೆಗೆ ಅಭೂತಪೂರ್ವ ಪ್ರತಿಕ್ರಿಯೆ : ರಾಜ್ಯದ ಆರು ಪ್ರಾದೇಶಿಕ ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿ ಪ್ರಾರಂಭ – ಸಿಎಂ ಬೊಮ್ಮಾಯಿ

ನಾನಾ ಕಲಾಪ್ರಕಾರಗಳ ಸಂಗಮಕ್ಕೆ ವೇದಿಕೆಯಾದ ಚಿತ್ರಕಲಾ ಪರಿಷತ್ತಿನ ಚಿತ್ರಸಂತೆ | ಮುಂದಿನ ಅಧಿವೇಶನದಲ್ಲಿ ಚಿತ್ರಕಲಾ ಪರಿಷತ್ತನ್ನು ಡೀಮ್ಡ್ ವಿಶ್ವವಿದ್ಯಾಲಯವೆಂದು ಘೋಷಿಸಲು ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ

by Bengaluru Wire Desk
March 27, 2022
in Bengaluru Focus, Photo Gallery
Reading Time: 2 mins read
0
ಬೆಂಗಳೂರಿನ ಚಿತ್ರಸಂತೆ ಸೊಬಗು

ಬೆಂಗಳೂರಿನ ಚಿತ್ರಸಂತೆ ಸೊಬಗು

ಬೆಂಗಳೂರು, (www.bengaluruwire.com) : ರಾಜಧಾನಿಯಲ್ಲಿ ಇಂದು ಬಣ್ಣ ಬಣ್ಣದ ಭಾವನೆಗಳ ಮನಸೂರೆಗೊಳ್ಳುವ ಚಿತ್ರಸಂತೆ ಎರಡು ವರ್ಷಗಳ ನಂತರ ನಡೆಯುತ್ತಿದ್ದು, ನಗರವೂ ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಜನರು ಮಕ್ಕಳು, ಸ್ನೇಹಿತರು, ಬಂಧುಬಾಂಧವರೊಂದಿಗೆ ಆಗಮಿಸಿ ನೂರಾರು ಚಿತ್ರಕಲಾವಿದರ ಚಿತ್ರಕೃತಿಗಳನ್ನು ವೀಕ್ಷಿಸಿ, ಖರೀದಿಸಿದರು.

ಭಾನುವಾರದ ಈ ಚಿತ್ರಸಂತೆ 19ನೇ ಆವೃತ್ತಿಯದ್ದಾಗಿದ್ದು, 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಸ್ವಾತಂತ್ರ್ಯ ಯೋಧರಿಗೆ ಚಿತ್ರಸಂತೆ ಸಮರ್ಪಣೆ ಮಾಡಲಾಗಿದೆ. ಕಳೆದ ವರ್ಷ ಕರೋನಾ ಎರಡನೇ ಅಲೆಯ ಕಾರಣದಿಂದ ಆನ್ ಲೈನ್ ನಲ್ಲಷ್ಟೇ ನಡೆಸಲಾಗಿತ್ತು. ಆದರೆ ಈ ಬಾರಿ ಚಿತ್ರಸಂತೆಯನ್ನು ಸಾರ್ವಜನಿಕರು ಮತ್ತು ಕಲಾವಿದರ ಕಲಾಕೃತಿಗಳ ಪ್ರದರ್ಶನ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಬೆಳಗ್ಗೆಯಿಂದ ಪ್ರವಾಹೋಪಾದಿಯಲ್ಲಿ ಚಿತ್ರರಸಿಕರು ಕುಮಾರಕೃಪಾ ರಸ್ತೆಗೆ ಆಗಮಿಸಿ ತಮ್ಮ ನೆಚ್ಚಿನ ಕಲಾಕೃತಿಗಳನ್ನು ಖರೀದಿಸಿದರು. ದೇಶದ ವಿವಿಧ ಭಾಗಗಳಿಂದ 1500 ಕಲಾವಿದರು ಭಾಗಿಯಾಗಿದ್ದಾರೆ. ಒಟ್ಟು 4 ಕಲಾವಿದರಿಗೆ ಈ ಕಾರ್ಯಕ್ರಮದಲ್ಲಿ ಚಿತ್ರ ಸಮ್ಮಾನ್ ಪ್ರಶಸ್ತಿ ನೀಡಲಾಯಿತು. 4 ಲಕ್ಷ ಜನರು ಚಿತ್ರ ಸಂತೆಗೆ ಬರುವ ನಿರೀಕ್ಷೆ ಇದೆ.

ಚಿತ್ರಸಂತೆಯಲ್ಲಿ ಜನವೋ ಜನ

ಕುಮಾರಕೃಪಾ ರಸ್ತೆಯಲ್ಲಿ ತಾತ್ಕಾಲಿಕವಾಗಿ ಸಂಚಾರ ಬಂದ್ :

19ನೇ ಚಿತ್ರಸಂತೆ ಹಿನ್ನೆಲೆ ಕುಮಾರ ಕೃಪಾ ರಸ್ತೆಯಲ್ಲಿ ಸಂಚಾರ ನಿಷೇಧ ಮಾಡಲಾಗಿತ್ತು. ಬೆಳಗ್ಗೆ 6 ರಿಂದ ರಾತ್ರಿ  9ಗಂಟೆವರೆಗೂ ಕುಮಾರಕೃಪ ರಸ್ತೆ ಬಂದ್ ಮಾಡಲಾಗಿದೆ. ಕುಮಾರಕೃಪ ರಸ್ತೆಯ ವಿನ್ಸರ್ ಮ್ಯಾನರ್ ವೃತ್ತದಿಂದ ರೇಸ್ ವ್ಯೂವ್ ಜಂಕ್ಷನ್ ರಸ್ತೆವರೆಗೂ ಎರಡೂ ಬದಿ ರಸ್ತೆಗಳು ಬಂದ್ ಆಗಿದ್ದವು. ಪರ್ಯಾಯ ಮಾರ್ಗವಾಗಿ ಟ್ರಿಲೈಟ್ ಜಂಕ್ಷನ್, ಬಸವೇಶ್ವರ ವೃತ್ತ, ಹಳೇ ಹೈಗ್ರೌಂಡ್ಸ್ ಮ್ಯಾನರ್ ಸರ್ಕಲ್ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ವಿವಿಧ ಕಲಾ ಪ್ರಕಾರಗಳ ಸಂಗಮದಂತಿದ್ದ ಚಿತ್ರಸಂತೆ :

ಇನ್ನು ಈ  ಚಿತ್ರಸಂತೆಯಲ್ಲಿ ನಟ ಪುನೀತ್ ರಾಜ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಸೇರಿದಂತೆ ವಿವಿಧ ಗಣ್ಯರ ಚಿತ್ರವನ್ನು ಸಹ ಪ್ರದರ್ಶನಕ್ಕೆ ಇಡಲಾಗಿತ್ತು. ಈ ಬಾರಿಯ ಚಿತ್ರಸಂತೆಯಲ್ಲಿ ಕೊಲಾಜ್, ಲಿಥೋಗ್ರಾಫ್, ಡೂಡಲ್, ಎಂಬೋಸಿಂಗ್, ವಿಡಿಯೊ ಕಲೆ, ಗ್ರಾಫಿಕ್ ಕಲೆ, ಶಿಲ್ಪಕಲೆ, ಪರ್ಫಾಮೆನ್ಸ್ ಕಲೆ, ಮಿಶ್ರ ಮಾಧ್ಯಮ, ಫೋಟೋಗ್ರಫಿ ಹೀಗೆ ಹಲವು ಬಗೆಯ ಕಲಾ ಪ್ರಕಾರದ ಚಿತ್ರಗಳನ್ನು ಪ್ರದರ್ಶನಕ್ಕಿಡಲಾಗಿದೆ. ಇನ್ನು ಸಾಂಪ್ರದಾಯಿಕ ತಂಜಾವೂರು ಶೈಲಿ, ಮೈಸೂರು ಶೈಲಿಯ ಕಲೆ, ರಾಜಸ್ಥಾನಿ ಶೈಲಿ, ಮಧುಬನಿ ಶೈಲಿ, ತೈಲ ಮತ್ತು ಜಲವರ್ಣಗಳಲ್ಲಿ ರಚಿಸಿರುವ ಚಿತ್ರಗಳು, ಆಕ್ರಿಲಿಕ್, ಗಾಜಿನ ಮೇಲೆ ಬಿಡಿಸಿರುವ ಚಿತ್ರಗಳು ಸೇರಿದಂತೆ ನಾನಾ ರೀತಿಯ ಕಲಾಕೃತಿಗಳನ್ನು ಒಂದೇ ಸ್ಥಳದಲ್ಲಿ ನೋಡಿ ಕಲಾಭಿಮಾನಿಗಳು ಸಂತಸಪಟ್ಟರು.

ರಾಜ್ಯದ ಆರು ಪ್ರಾದೇಶಿಕ ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿಗಳ ಪ್ರಾರಂಭ :

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾರತಾಂಬೆ ಕಲಾಕೃತಿ ಪಕ್ಕ ಹಸ್ತಾಕ್ಷರ ಹಾಕುವ ಮೂಲಕ ಚಿತ್ರಸಂತೆಗೆ ಚಾಲನೆ ನೀಡಿದ ಚಿತ್ರ

ಇದಕ್ಕೂ ಮುನ್ನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರಸಂತೆ – 2022  ಕಾರ್ಯಕ್ರಮಕ್ಕೆ, ಭಾರತಾಂಬೆ ಕಲಾಕೃತಿ ಪಕ್ಕ ಹಸ್ತಾಕ್ಷರ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡುತ್ತಾ, ಇಡೀ ಕರ್ನಾಟಕದ ಚಿತ್ರಕಲೆಗೆ ತವರೂರು ಚಿತ್ರಕಲಾ ಪರಿಷತ್ತು. ಇದು ಎಲ್ಲೆಡೆ ವ್ಯಾಪಿಸಬೇಕೆಂಬ ಉದ್ದೇಶವಿದೆ. ಆರು ಪ್ರಾದೇಶಿಕ ಸ್ಥಳಗಳಲ್ಲಿ ಚಿತ್ರ ಕಲಾ ಗ್ಯಾಲರಿಗಳನ್ನು  ಪ್ರಾರಂಭಿಸಲು ಕ್ರಮ‌ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಸ್ವಾಯತ್ತ ಸಂಸ್ಥೆಯಾಗಿರುವ ಚಿತ್ರ ಕಲಾ ಪರಿಷತ್ತನ್ನು ಡೀಮ್ಡ್ ವಿಶ್ವವಿದ್ಯಾಲಯ ಮಾಡಬೇಕೆಂಬ ಬೇಡಿಕೆ ಇದ್ದು,  ಬರುವ ಅಧಿವೇಶನದಲ್ಲಿ ಡೀಮ್ಡ್ ವಿಶ್ವವಿದ್ಯಾಲಯವೆಂದು ಘೋಷಿಸಲು ಕ್ರಮ ವಹಿಸಲಾಗುವುದು. ಇದರಡಿಯಲ್ಲಿ  ಹಲವಾರು ಸಂಸ್ಥೆಗಳನ್ನು ತಂದು ಚಿತ್ರಕಲೆಗೆ ಹೊಸ ಆಯಾಮ ನೀಡುವ ಕೆಲಸವನ್ನು ಬಿ.ಎಲ್.ಶಂಕರ್ ಅವರ ನೇತೃತ್ವದಲ್ಲಿ ಮಾಡಲಾಗುವುದು ಎಂದರು. 

ಬಾಲ್ಯದ ನೆನಪಿಗೆ ಜಾರಿ ಮ್ಯಾಂಗೋ ಐಸ್ ಕ್ಯಾಂಡಿ ಸವಿದ ಸಿಎಂ :

ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಐಸ್ ಕ್ಯಾಂಡ್ ಸವಿಯುತ್ತಿರುವ ಚಿತ್ರ

ವಿಂಡ್ಸರ್ ಮ್ಯಾನರ್ ವೃತ್ತದಿಂದ ಶಿವಾನಂದ ವೃತ್ತದವರೆಗೆ ಆಯೋಜಿಸಲಾಗಿದ್ದ ಚಿತ್ರಸಂತೆ ಯಲ್ಲಿ ದೇಶ-ವಿದೇಶದ ಕಲಾವಿದರು ಪ್ರದರ್ಶಿಸಿದ ಕಲಾಕೃತಿಗಳನ್ನು ಮುಖ್ಯಮಂತ್ರಿಗಳು ವೀಕ್ಷಿಸಿ ಕಲಾವಿದರಿಗೆ ಪ್ರೋತ್ಸಾಹಿಸಿದರು. ಈ ಸಂದರ್ಭದಲ್ಲಿ ಐಸ್ ಕ್ರೀಮ್ ಮಾರಾಟ ಮಾಡುತ್ತಿರುವುದನ್ನು ಗಮನಿಸಿದ ಅವರು, ತಮಗೆ ಬಾಲ್ಯದಿಂದಲೂ ಇಷ್ಟವಾದ ಜಾಯ್ ಮ್ಯಾಂಗೋ ಕ್ರೀಮ್ ಐಸ್ ಕ್ಯಾಂಡಿಯನ್ನು ತಾವೇ ಹಣ ಪಾವತಿಸುವ ಮೂಲಕ ಖರೀದಿಸಿ  ಸಂತೋಷದಿಂದ ಸವಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಅಶ್ವತ್ಥನಾರಾಯಣ, ಎಸ್.ಟಿ ಸೋಮಶೇಖರ್, ಶಾಸಕ ರಿಜ್ವಾನ್ ಅರ್ಷದ್, ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿಎಲ್ ಶಂಕರ್, ಮಾಜಿ ಸಚಿವೆ ರಾಣಿ ಸತೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Real Ghost Capture in CCTV | ಸಿಸಿಟಿವಿಯಲ್ಲಿ ಸೆರೆಯಾಯ್ತು ಭೂತ ಚೇಷ್ಟೆಯ ದೃಶ್ಯ…! ದೆವ್ವದ ಕಾಟಕ್ಕೆ ಸೆಕ್ಯುರಿಟಿ ಗಾರ್ಡ್ ಹೈರಾಣು – ಮುಂದೇನಾಯ್ತು? ನೀವೇ ನೋಡಿ

Next Post

Puneeth Rajkumar Statue | ಬಿಬಿಎಂಪಿ ನೌಕರರ ಕನ್ನಡ ಸಂಘ ಸ್ಥಾಪಿಸಿದ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಲೋಕಾರ್ಪಣೆ

Next Post

Puneeth Rajkumar Statue | ಬಿಬಿಎಂಪಿ ನೌಕರರ ಕನ್ನಡ ಸಂಘ ಸ್ಥಾಪಿಸಿದ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಲೋಕಾರ್ಪಣೆ

BW Special | Non IPS SP Promotion Injustice | ಅರ್ಹತೆಯಿದ್ದರೂ ಕರ್ನಾಟಕದಲ್ಲಿ 109 ಎಸ್ ಪಿ ಹುದ್ದೆಗೆ ಬಡ್ತಿ ಸಿಗದೆ ಅನ್ಯಾಯ : ಎಸ್ ಪಿ ಹುದ್ದೆ ಎಂಬುದು ಇವರಿಗೆ ಗಗನಕುಸುಮ...!

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group