Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home BW Special

BW Special | Non IPS SP Promotion Injustice | ಅರ್ಹತೆಯಿದ್ದರೂ ಕರ್ನಾಟಕದಲ್ಲಿ 109 ಎಸ್ ಪಿ ಹುದ್ದೆಗೆ ಬಡ್ತಿ ಸಿಗದೆ ಅನ್ಯಾಯ : ಎಸ್ ಪಿ ಹುದ್ದೆ ಎಂಬುದು ಇವರಿಗೆ ಗಗನಕುಸುಮ…!

1994ನೇ ಬ್ಯಾಚ್ ಪಿಎಸ್ ಐ ಅಧಿಕಾರಿಗಳು ಬಡ್ತಿ ಹೊಂದಿದರೂ ಡೈವೈಎಸ್ ಪಿ ಅಥವಾ ಎಸಿಪಿಯಾಗಿಯೇ ನಿವೃತ್ತಿ | ಐಪಿಎಸ್ ಯೇತರ 109 SP ಹುದ್ದೆಗಳನ್ನು ಮೀಸಲಿಡಲು ಅಧಿಕಾರಿಗಳ ಆಗ್ರಹ | ಮನವಿ ಮಾಡಿದರೂ ಕ್ಯಾರೇ ಅನ್ನದ ರಾಜ್ಯ ಸರ್ಕಾರ | ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ಈ ಬಗ್ಗೆ ಬೆಂಗಳೂರು ವೈರ್ ಜೊತೆ ಮಾತನಾಡಿದ್ದಾರೆ.

by Bengaluru Wire Desk
January 12, 2023
in BW Special, Public interest
Reading Time: 1 min read
0

ಬೆಂಗಳೂರು, (www.bengaluruwire.com) : ರಾಜ್ಯದಲ್ಲಿ ಐಪಿಎಸ್ ಯೇತರ 109 ಸೂಪರಿಂಟೆಂಡೆಂಟ್ ಆಫ್ ಪೊಲೀಸ್ (SP) ಮಂಜೂರಾತಿ ಹುದ್ದೆಗಳಿದ್ದರೂ ಅವುಗಳಿಗೆ ಅರ್ಹರಾದ ಡಿವೈಎಸ್‌ಪಿ ಅಥವಾ ಎಸಿಪಿ ದರ್ಜೆಯ ಹಾಗೂ ನೇರವಾಗಿ ಡಿವೈಎಸ್‌ಪಿ ಹುದ್ದೆಗೆ ನೇಮಕಾತಿ ಹೊಂದಿದ ಅಧಿಕಾರಿಗಳಿಗೆ ಮೀಸಲಿಡದ ಕಾರಣ ನೂರಾರು ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ ಎಂಬ ಕೂಗು ಎದ್ದಿದೆ.

ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್ವಪೆಕ್ಟರ್ (PSI) ಹುದ್ದೆಗೆ ನೇರವಾಗಿ ನೇಮಕವಾಗುವ ಅಧಿಕಾರಿಗಳು, ಇಲಾಖೆಯಲ್ಲಿ ಸುಮಾರು 30 ರಿಂದ 35 ವರ್ಷ ಸೇವೆ ಸಲ್ಲಿಸಿದ್ದರೂ ಸಹ, ಹೆಚ್ಚಿನ ಅಧಿಕಾರಿಗಳು ಎಸಿಪಿ ಅಥವಾ ಡಿವೈಎಸ್‌ಪಿ ಹುದ್ದೆಯಿಂದಲೇ ನಿವೃತ್ತಿ ಆಗುತ್ತಿದ್ದಾರೆಯೇ ವಿನಃ ಅವರಿಗೆ ಎಸ್ ಪಿ ಹುದ್ದೆ ಎಂಬುದು ಕೇವಲ ಗಗನ ಕುಸುಮವಾಗಿದೆ. ಅಂದರೆ ಅವರು ತಮ್ಮ ಸೇವಾವಧಿಯಲ್ಲಿ ಕೇವಲ ಎರಡು ಬಡ್ತಿಗಳನ್ನು ಮಾತ್ರ ಪಡೆದುಕೊಳ್ಳುವಂತಾಗಿದೆ. ಇನ್ನು ಕೆಲವರು ಪೊಲೀಸ್ ಇನ್ಸ್ ಪೆಕ್ಟರ್ (PI) ಹುದ್ದೆಯಿಂದ ನಿವೃತ್ತಿ ಹೊಂದುತ್ತಾರೆ. ಇವರು ತಮ್ಮ ಸೇವಾವಧಿಯಲ್ಲಿ ಕೇವಲ ಒಂದೇ ಬಡ್ತಿಯನ್ನು ಪಡೆಯುವಂತಾಗಿದೆ.

ವಿಧಾನಸೌಧದ ಸಾಂದರ್ಭಿಕ ಚಿತ್ರ

ಹೆಚ್ಚಿನ ಅಧಿಕಾರಿಗಳು ಎಸ್ ಪಿ (Non-IPS) ಹುದ್ದೆಗೆ ಬಡ್ತಿಯನ್ನು ಪಡೆದರೂ ಅವರ ಸೇವಾವಧಿಯ ಒಂದು ದಿನದಿಂದ ಒಂದು ವರ್ಷದವರೆಗೆ ಮಾತ್ರಇರುತ್ತದೆ. ಇಂತಹ ಹಲವಾರು ನಿದರ್ಶನಗಳು ಇವೆ. ಇದರಿಂದ ಪಿಎಸ್‌ಐ ಹುದ್ದೆಗೆ ನೇಮಕ ಹೊಂದುವ ಅಧಿಕಾರಿಗಳಿಗೆ ಅನ್ಯಾಯವಾಗುತ್ತಿದೆ. ರಾಜ್ಯದಲ್ಲಿ ಒಟ್ಟು 109 ಎಸ್ ಪಿ (ಐಪಿಎಸ್- ಯೇತರ) ಹುದ್ದೆಗಳ ಮಂಜೂರಾತಿ ಇದ್ದರೂ ಐಪಿಎಸ್ ಅಧಿಕಾರಿಗಳೇ ಅದರಲ್ಲಿ ತುಂಬಿ ಹೋಗಿದ್ದಾರೆ. ಇದರಿಂದ 1994 ನೇ ಸಾಲಿನಲ್ಲಿ ಪಿಎಸ್‌ಐ ಹುದ್ದೆಗೆ ನೇಮಕಾತಿ ಹೊಂದಿ, ತದನಂತರ ಎಸಿಪಿ ಅಥವಾ ಡಿವೈಎಸ್‌ಪಿ ಹುದ್ದೆಗೆ ಪದನ್ನೋತಿ ಹೊಂದಿ ಐದೂವರೆ ವರ್ಷಗಳನ್ನು ಪೂರೈಸಿದ್ದರೂ ಸಹ ಅಂತಹವರು ಬಡ್ತಿಯಿಂದ ವಂಚಿತರಾಗುವಂತಾಗಿದೆ.

109 SP(ಐಪಿಎಸ್ ಯೇತರ ) ಹುದ್ದೆಯನ್ನು, ನೇರವಾಗಿ ಪಿಎಸ್‌ಐ ಹುದ್ದೆಗೆ ನೇಮಕಾತಿ ಹೊಂದಿ ಬಡ್ತಿ ಪಡೆದು ಐಪಿಎಸ್ ಯೇತರ ಎಸ್ ಪಿ ಹುದ್ದೆಗೆ ಅರ್ಹರಾಗಿರುವ ಡಿವೈಎಸ್‌ಪಿ ಅಥವಾ ಎಸಿಪಿ ರವರಿಗೆ ಹಾಗೂ ನೇರವಾಗಿ ಡಿವೈಎಸ್‌ಪಿ ಹುದ್ದೆಗೆ ನೇಮಕಾತಿ ಹೊಂದಿದ ಅಧಿಕಾರಿಗಳಿಗೆ ಮೀಸಲಿರಿಸಬೇಕು. ಹಾಗೂ ಈ ಅರ್ಹ ಅಧಿಕಾರಿಗಳಿಗೆ SP(ಐಪಿಎಸ್ ಯೇತರ ) ಹುದ್ದೆಗೆ ಬಡ್ತಿ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕೆಂದು, ಈ ಹಿಂದೆ ಸಂಬಂಧಿಸಿದ ಅಧಿಕಾರಿಗಳು ಬಿಜೆಪಿ ನೇತೃತ್ವದ ಸರ್ಕಾರದಲ್ಲಿನ ಗೃಹಸಚಿವ ಆರಗ ಜ್ಞಾನೇಂದ್ರ ಅವರಿಗೆ ಎರಡು ಬಾರಿ ಮನವಿ ಸಲ್ಲಿಸಿದ್ದರು. ಆದರೂ ಅದಿಕ್ಕೆ ರಾಜ್ಯ ಸರ್ಕಾರ ಕ್ಯಾರೇ ಎಂದಿಲ್ಲ ಎಂದು ಆ ಅಧಿಕಾರಿಗಳು ಬೆಂಗಳೂರು ವೈರ್ ಜೊತೆಗೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಗ್ಗೆ ಏನಂತಾರೆ?

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

“ರಾಜ್ಯದಲ್ಲಿ ಐಪಿಎಸ್ ಯೇತರ ಎಸ್ಪಿ ಹುದ್ದೆಗಳಿಗೆ ಬಡ್ತಿ ಹೊಂದಿದ ಅಧಿಕಾರಿಗಳನ್ನು ನೇಮಕ ಮಾಡುವ ಕುರಿತು ಸರ್ಕಾರ ಕೂಡಲೇ ಕ್ರಮ ಜರುಗಿಸಬೇಕು. ಎಸ್ಪಿ ಹುದ್ದೆಗಳಿಗೆ ನೇಮಕ ಮಾಡುವಾಗ ಬಡ್ತಿ ಹೊಂದಿದ ಅಧಿಕಾರಿಗಳನ್ನು ಪರಿಗಣಿಸಿ ಅವರಿಗೆ ನ್ಯಾಯ ಒದಗಿಸಬೇಕು. ಈ ವಿಚಾರದಲ್ಲಿ ನಾನು ಸಹ ಸರ್ಕಾರದ ಗಮನ ಸೆಳೆಯುತ್ತೇನೆ.”

– ಸಿದ್ದರಾಮಯ್ಯ, ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿಗಳು

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಡಿಸಿಪಿ ದರ್ಜೆಯ 7 ಹುದ್ದೆಗಳು, ಮೈಸೂರು, ಧಾರವಾಡ, ಮಂಗಳೂರು ಹಾಗೂ ಕಲ್ಬುರ್ಗಿ(ಕಾನೂನು ಮತ್ತು ಸುವ್ಯವಸ್ಥೆ ಸೇರಿ), ಬೆಳಗಾವಿ (ಕಾನೂನು ಮತ್ತು ಸುವ್ಯವಸ್ಥೆ ಸೇರಿ) ಅಪರಾಧ ಮತ್ತು ಸಂಚಾರ ವಿಭಾಗದಲ್ಲಿ 7 ಹುದ್ದೆಗಳು, ಪೊಲೀಸ್ ಪ್ರಧಾನ ಕಚೇರಿಯಲ್ಲಿರುವ ಎಸ್ ಪಿ ದರ್ಜೆಯ 2 ಹುದ್ದೆಗಳು, ಬೆಂಗಳೂರಿನಲ್ಲಿ ಎಸ್ ಪಿ ದರ್ಜೆಯ ಎಸ್ ಸಿಆರ್ ಬಿ 1 ಹುದ್ದೆ ಸೇರಿದಂತೆ 109 ಐಪಿಎಸ್ ಯೇತರ ಹುದ್ದೆಗಳು ಮಂಜೂರಾಗಿದೆ.

ಸರ್ಕಾರದಿಂದ ಮಂಜೂರು ಮಾಡಲಾದ 109 ಎಸ್ ಪಿ  (ಐಪಿಎಸ್ ಯೇತರ) ಹುದ್ದೆಗಳಲ್ಲಿ,  ಪ್ರಸ್ತುತ 30 ಐಪಿಎಸ್ ಅಧಿಕಾರಿಗಳು, ಸಶಸ್ತ್ರ ಅಧಿಕಾರಿಗಳು ಮತ್ತು ಎಸ್.ಪಿ.ಡಿಟೆಕ್ಟಿವ್ ದರ್ಜೆಯ ಅಧಿಕಾರಿಗಳು (ಸದರಿ ಎಸ್.ಪಿ. ಡಿಟೆಕ್ಟಿವ್ ಅಧಿಕಾರಿಗಳು ನೇಮಕಾತಿ ಹೊಂದುವಾಗಲೇ ಪಿಎಸ್‌ಐ ಡಿಟೆಕ್ಟಿವ್ ಹುದ್ದೆಗೆ 2001ರಲ್ಲಿ ನೇಮಕಾತಿ ಹೊಂದಿರುತ್ತಾರೆ) ಕಾರ್ಯನಿರ್ವಹಿಸುತ್ತಿದ್ದಾರೆ.

ಸದ್ಯ 1994ರ ಬ್ಯಾಚಿನಲ್ಲಿ ನೇಮಕಗೊಂಡ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳು ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ಗಳಿಗೆ ಐಪಿಎಸ್ ಯೇತರ ಎಸ್ ಪಿ ಹುದ್ದೆ ಸಿಗುವಲ್ಲಿ ಅನ್ಯಾಯವಾಗುತ್ತಿದೆ. ಮುಂದೇ ಇದು ಎಲ್ಲರಿಗೂ ವಿಸ್ತರಣೆಯಾಗಲಿದೆ. ಹಾಗಾಗಿ 109 ಎಸ್ ಪಿ  (ಐಪಿಎಸ್ ಯೇತರ) ಹುದ್ದೆಗಳಿಗೆ ಮೀಸಲಾತಿ ಕಲ್ಪಿಸಿದರೆ ಆ ಅನ್ಯಾಯವನ್ನು ತಪ್ಪಿಸಬಹುದು ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Puneeth Rajkumar Statue | ಬಿಬಿಎಂಪಿ ನೌಕರರ ಕನ್ನಡ ಸಂಘ ಸ್ಥಾಪಿಸಿದ ಡಾ.ಪುನೀತ್ ರಾಜ್ ಕುಮಾರ್ ಪುತ್ಥಳಿ ಲೋಕಾರ್ಪಣೆ

Next Post

Karnataka State Highways Toll | ರಾಜ್ಯದ 617 ಕಿ.ಮೀ ಉದ್ದದ ಹತ್ತು ರಸ್ತೆಗಳಲ್ಲಿ ಸಂಚರಿಸಬೇಕೆಂದರೆ ನೀವು ಟೋಲ್ ಕೊಟ್ಟೇ ಹೋಗಬೇಕು : ಮೇ ತಿಂಗಳಿನಿಂದ ಟೋಲ್ ಸಂಗ್ರಹ ನಿರೀಕ್ಷೆ

Next Post
ಸಾಂದರ್ಭಿಕ ಚಿತ್ರ

Karnataka State Highways Toll | ರಾಜ್ಯದ 617 ಕಿ.ಮೀ ಉದ್ದದ ಹತ್ತು ರಸ್ತೆಗಳಲ್ಲಿ ಸಂಚರಿಸಬೇಕೆಂದರೆ ನೀವು ಟೋಲ್ ಕೊಟ್ಟೇ ಹೋಗಬೇಕು : ಮೇ ತಿಂಗಳಿನಿಂದ ಟೋಲ್ ಸಂಗ್ರಹ ನಿರೀಕ್ಷೆ

ತನ್ನದೇ ಸೃಷ್ಟಿಯ ಮೈದಡವಿ ಸಾಗುತಿರುವ ರವಿತೇಜ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d