Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

  • Bengaluru Focus

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home News Wire

KARNATAKA POWER RATE HIKE | ರಾಜ್ಯದಲ್ಲಿ ಪ್ರತಿ ಯೂನಿಟ್ ಸರಾಸರಿ ವಿದ್ಯುತ್ ದರ 35 ಪೈಸೆ ಹೆಚ್ಚಳ

ಏ.1ರಿಂದಲೇ ಪೂರ್ವಾನ್ವಯದಂತೆ ಪರಿಷ್ಕೃತ ದರ ಜಾರಿ | ಎಸ್ಕಾಂಗಳ ಬೇಡಿಕೆ ಪರಿಶೀಲಿಸಿ ಸರಾಸರಿ ಪ್ರತಿ ಯೂನಿಟ್ ವಿದ್ಯುತ್ ದರ 35 ಪೈಸೆಗೆ ಹೆಚ್ಚಳ |

by Bengaluru Wire Desk
April 5, 2022
in News Wire, Public interest
Reading Time: 2 mins read
0

ಬೆಂಗಳೂರು (www.bengaluruwire.com) :  ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಗ್ರಾಹಕರು ತತ್ತರಿಸಿರುವ ಹೊತ್ತಿನಲ್ಲೇ, ರಾಜ್ಯದ ಜನರಿಗೆ ವಿದ್ಯುತ್​ ನಿಯಂತ್ರಣ ಆಯೋಗ (KERC) ಸರಾಸರಿ ವಿದ್ಯುತ್ ದರವನ್ನು ಯೂನಿಟ್ ಗೆ 35 ಪೈಸೆ ಏರಿಕೆ ಮಾಡಿ ಆದೇಶ ಹೊರಡಿಸಿದೆ.

ನಗರದಲ್ಲಿ ಸೋಮವಾರ ಕೆಇಆರ್ ಸಿ ಆಯೋಗದ ನಿಯೋಜಿತ ಅಧ್ಯಕ್ಷ ಹಾಗೂ ಸದಸ್ಯರಾದ ಎಚ್.ಎಮ್.ಮಂಜುನಾಥ್, 2022-23ನೇ ಸಾಲಿಗೆ ಅನ್ವಯವಾಗುವಂತೆ ಬೆಸ್ಕಾಂ, ಮೆಸ್ಕಾಂ, ಸೆಸ್ಕಾಂ, ಹೆಸ್ಕಾಂ, ಜೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರವನ್ನು ಸರಾಸರಿ 35 ಪೈಸೆ ವಿದ್ಯುತ್ ದರ ಪರಿಷ್ಕರಣೆ ಏರಿಕೆ (ಶೇ.4.33) ಮಾಡಿರುವುದನ್ನು ಪ್ರಕಟಿಸಿದ್ದಾರೆ.

ಏಪ್ರಿಲ್ 1 ರಿಂದ ಪೂರ್ವಾನ್ವಯವಾಗುವಂತೆ ಅಥವಾ ಅದರ ನಂತರ ಮೊದಲ ಮೀಟರ್ ಓದುವ ದಿನಾಂಕದಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ ಎಂದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್ ಸಿ) ತಿಳಿಸಿದೆ.

ರಾಜ್ಯದಲ್ಲಿರುವ ಐದು ಎಸ್ಕಾಂಗಳು 11,320 ಕೋಟಿ ರೂ.ಗಳ ಕಂದಾಯ ಕೊರತೆಗೆ ಪ್ರತಿ ಯೂನಿಟ್ ಗೆ ಸರಾಸರಿ 1.85 ಪೈಸೆ ಅಂದರೆ ಶೇ.23.83 ರಷ್ಟು ಹೆಚ್ಚಳ ಮಾಡುವಂತೆ ಕೋರಿದ್ದವು. ಈ ಬಗ್ಗೆ ಸವಿಸ್ತರವಾಗಿ ವಿಚಾರಣೆ ಮಾಡಿದ ಕೆಇಆರ್ ಸಿ ಆಯೋಗ, ಆರ್ಥಿಕ ವರ್ಷ 2022-23ಕ್ಕೆ ಅನ್ವಯವಾಗುವಂತೆ ಈ ಪರಿಷ್ಕೃತ ದರವನ್ನು ಜಾರಿ ಮಾಡಿದೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಪ್ರತಿ ಯೂನಿಟ್​ಗೆ 1.58 ರೂ. ಏರಿಕೆ ಮಾಡುವಂತೆ ಕೆಇಆರ್​ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಅದೇ ರೀತಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ 2.17 ಪೈಸೆ, ಚಾಮುಂಡೇಶ್ವರಿ 2.27 ರೂ., ಮಂಗಳೂರು 1.33 ರೂ. ಹಾಗೂ ಗುಲ್ಬರ್ಗ ವಿದ್ಯುತ್ ಸರಬರಾಜು ಕಂಪನಿ 2.36 ರೂ. ಪ್ರತಿ ಯೂನಿಟ್ ವಿದ್ಯುತ್ ನ ದರ ಪರಿಷ್ಕರಣೆ ಮಾಡಲು ಕೆಇ ಆರ್ ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವ ಕೆಇಆರ್ ಸಿ ನಿಯೋಜಿತ ಅಧ್ಯಕ್ಷ ಎಚ್.ಎಂ.ಮಂಜುನಾಥ್, ಸದಸ್ಯ ಎಂ.ಡಿ.ರವಿ

ಆದರೆ ಎಲ್ಲ ಐದು ವಿದ್ಯುತ್ ಸರಬರಾಜು ಕಂಪನಿಯಲ್ಲಿ ನಿಗಧಿತ ಶುಲ್ಕ (ಫಿಕ್ಸೆಡ್ ಚಾರ್ಜಸ್) ವನ್ನು ಪ್ರತಿ ಕಿಲೋ ವ್ಯಾಟ್/ಕೆವಿಎಗೆ 10 ರೂ. ನಿಂದ 30 ರೂ.  ನಿಗಧಿಮಾಡಿ, ಪ್ರತಿ ಯೂನಿಟ್​ ನ ಸರಾಸರಿ ವಿದ್ಯುತ್​ ದರವನ್ನು 35 ಪೈಸೆಗೆ ಏರಿಕೆ ಮಾಡಲು ಒಪ್ಪಿಗೆ ಸೂಚಿಸಿದೆ ಎಂದು ಕೆಇಆರ್ ಸಿ ಅಧ್ಯಕ್ಷರು ತಿಳಿಸಿದ್ದಾರೆ.

ಸ್ಥಳೀಯ ಸಂಸ್ಥೆಗಳಿಂದ ಎಸ್ಕಾಂಗಳಿಗೆ 8 ಸಾವಿರ ಕೋಟಿ ರೂ. ಬಾಕಿ :
ರಾಜ್ಯದಲ್ಲಿ ವಿದ್ಯುತ್ ಸುಧಾರಣಾ ಸಮಿತಿ ಪ್ರಕಾರ ಸರ್ಕಾರಿ ಸ್ಥಳೀಯ ಸಂಸ್ಥೆಗಳು ಎಸ್ಕಾಂಗಳಿಗೆ 8,000 ಕೋಟಿ ರೂ. ಗಳಷ್ಟು ಹಣವನ್ನು ಪಾವತಿಸುವಂತೆ ಕೆಇಆರ್ ಸಿ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತಿಳಿಸಲಾಗಿದೆ ಎಂದು ಆಯೋಗದ ಅಧ್ಯಕ್ಷ ಎಚ್.ಎಮ್.ಮಂಜುನಾಥ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ವಿದ್ಯುತ್ ಶಕ್ತಿ ದರ ಏರಿಕೆಗೆ ಪ್ರಮುಖ ಕಾರಣಗಳನ್ನು ಕೆಇಆರ್ ಸಿ ನೀಡಿದೆ :
ಆರ್ಥಿಕ ವರ್ಷ 2022-23ರಲ್ಲಿ ಉಂಟಾಗುವ ಆದಾಯ ಕೊರತೆಯ ಮೊತ್ತ 2,159.48 ಕೋಟಿ ರೂ.ಗಳನ್ನು ಮರುಪಡೆಯಲು ದರ ಹೆಚ್ಚಳ ಅವಶ್ಯವಾಗಿದೆ. ಈ ಮೊತ್ತವು 2020-21ನೇ ಆರ್ಥಿಕ ವರ್ಷದ ಕೊರತೆಯ 1,700.49 ಕೋಟಿ ರೂ.ಗಳನ್ನು ಒಳಗೊಂಡಿರುತ್ತದೆ ಎಂದರು.

ಆರ್ಥಿಕ ವರ್ಷ 2020-21ನೇ ಸಾಲಿನ ಆದಾಯ ಕೊರತೆಯು ಪ್ರತಿ ಯೂನಿಟ್ ಗೆ 27 ಪೈಸೆಯಷ್ಟು ದರ ಹೆಚ್ಚಳಕ್ಕೆ ಕಾರಣವಾಗಿರುತ್ತದೆ. ಆದರೆ 2022-23ನೇ ಸಾಲಿನಲ್ಲಿ ಎಸ್ಕಾಂಗಳ ವಿದ್ಯುತ್ ಖರೀದಿ ವೆಚ್ಚ, ಕಾರ್ಯನಿರ್ವಹಣಾ ವೆಚ್ಚ ಹಾಗೂ ಪಡೆಯುವ ಸಾಲಗಳು ಯೂನಿಟ್ ಗೆ 8 ಪೈಸೆ ಹೆಚ್ಚಳಕ್ಕೆ ಕಾರಣವಾಗಿರುತ್ತದೆ.

ಕರ್ನಾಟಕದಲ್ಲಿ ಶೇ.13ರಷ್ಟು ಟಿಎಂಡ್ ಡಿ ನಷ್ಟ :

ರಾಜ್ಯದಲ್ಲಿ ಶೇ.13ರಷ್ಟು ವಿದ್ಯುತ್ ಸರಬರಾಜು ಮತ್ತು ಪ್ರಸರಣ ನಷ್ಟವಿದೆ. ಇದನ್ನು ಕಡಿಮೆ ಮಾಡಲು ವಿದ್ಯುತ್ ಸರಬರಾಜು ಮತ್ತು ಪ್ರಸರಣ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಒಂದು ಯೂನಿಟ್ ವಿದ್ಯುತ್ ಉತ್ಪಾದನೆಗೆ ಸರಾಸರಿ 6 ರೂ. ವೆಚ್ಚವಾಗಲಿದೆ. ಆದರೆ ಅವುಗಳನ್ನು ಮಾರಾಟ ಮಾಡುವಾಗ ಪ್ರತಿ ಯೂನಿಟ್ ಗೆ 8.43 ರೂ. ನಿಗಧಿ ಮಾಡಲಾಗುತ್ತದೆ ಎಂದು ಕೆಇಆರ್ ಸಿ ಅಧ್ಯಕ್ಷರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಉಚಿತ ವಿದ್ಯುತ್ ಪೂರೈಕೆಗಾಗಿ ರಾಜ್ಯ ಸರ್ಕಾರ 13,637 ಸಹಾಯಧನ ನೀಡಬೇಕಿದೆ :

ವಿಧಾನಸೌಧದ ಸಾಂದರ್ಭಿಕ ಚಿತ್ರ

ಎಲೆಕ್ಟ್ರಿಕ್ ವಾಹನ ಬಳಕೆ ಪ್ರೋತ್ಸಾಹಿಸಲು ಬ್ಯಾಟರಿ ಚಾರ್ಜಿಂಗ್ ಸ್ಟೇಷನ್ ವಿದ್ಯುತ್ ಬಳಕೆಗೆ ಯೂನಿಟ್​ಗೆ 5 ರೂ. ಹಿಂದೆ ನಿಗಧಿಪಡಿಸಿದ್ದನ್ನು ಮುಂದುವರೆಸಲಾಗಿದೆ. ರಾಜ್ಯದಲ್ಲಿ 10 ಎಚ್​ಪಿಗಿಂತ ಕಡಿಮೆ ಸಾಮರ್ಥ್ಯದ 33.15 ಲಕ್ಷ ನೀರಾವರಿ ಪಂಪ್ ಸೆಟ್ ಗಳಿವೆ. ಇವುಗಳಿಗೆ ಉಚಿತ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ 2022-23ನೇ ಸಾಲಿನಲ್ಲಿ ಎಲ್ಲಾ ವಿದ್ಯುತ್ ಸರಬರಾಜು‌ ಕಂಪನಿಗಳಿಗೆ ಸರ್ಕಾರವು 13,019 ಕೋಟಿ ರೂ. ಸಹಾಯಧನ (ಸಬ್ಸೀಡಿ) ನೀಡಬೇಕಿದೆ. 

26.39 ಲಕ್ಷ ಭಾಗ್ಯ ಜ್ಯೋತಿ ಹಾಗೂ ಕುಟೀರ ಜ್ಯೋತಿ ಸಂಪರ್ಕಕ್ಕೆ ಉಚಿತ ವಿದ್ಯುತ್ ಸರಬರಾಜು ಮಾಡಲು 618.04 ಕೋಟಿ ರೂ.ಗಳನ್ನು ಎಸ್ಕಾಂಗಳಿಗೆ ಸರ್ಕಾರ ಸಹಾಯಧನ ನೀಡಬೇಕಿದೆ.

ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಒಂದು ವರ್ಷದ ತನಕ ಮಾಸಿಕ ಇಂಧನ ಬಳಕೆಯಲ್ಲಿ ಪ್ರತಿ ಯೂನಿಟ್ ಗೆ 50 ಪೈಸೆ ರಿಯಾಯಿತಿ ನೀಡಲು ನಿರ್ಧರಿಸಿದೆ.

ಮಳೆಗಾಲದಲ್ಲಿ ಸಂಜೆಯ ಸಮಯದಲ್ಲಿ ಸಂಜೆ 4ರಿಂದ ರಾತ್ರಿ 10ಗಂಟೆವರೆಗೆ ವಿದ್ಯುತ್ ಬಳಕೆಗಾಗಿ ಸಂಜೆಯ ವಿದ್ಯುತ್ ದರ ಸಡಿಲಿಕೆಯನ್ನು ಮುಂದುವರಿಸಲಾಗಿದೆ. ಹೈಟೆನ್ಶನ್ ವಿದ್ಯುತ್ ಗ್ರಾಹಕರಿಗೆ ರಾತ್ರಿ 10ಗಂಟೆಯಿಂದ ಮರುದಿನ ಬೆಳಗ್ಗೆ 6 ಗಂಟೆವರೆಗೆ ಬಳಸುವ ಎಲ್ಲಾ ಯೂನಿಟ್ ಗಳಿಗೆ ಪ್ರತಿ ಯೂನಿಟ್ 2ರೂ. ಪ್ರೋತ್ಸಾಹಧನವನ್ನು ಅನುಮತಿಸಿದೆ.

ಪೀಕ್ ಅವಧಿಯಲ್ಲಿ ವಿದ್ಯುತ್ ಬಳಸಿದರೆ ಎಚ್.ಟಿ.ಗ್ರಾಹಕರಿಗೆ ದಂಡ :
2023ರ ಆರ್ಥಿಕ ವರ್ಷದಲ್ಲಿ ಮಳೆಗಾಲವಲ್ಲದ ಅವಧಿಯಲ್ಲಿ ಸಂಜೆಯ ಪೀಕ್ ಅವಧಿಯಲ್ಲಿ ಸಂಜೆ 4ಗಂಟೆಯಿಂದ ರಾತ್ರಿ 10ಗಂಟೆಯವರೆಗೆ ಸಮಯದಲ್ಲಿ ಎಚ್.ಟಿ.ಗ್ರಾಹಕರು ವಿದ್ಯುತ್ ಶಕ್ತಿಗೆ ಪ್ರತಿ ಯೂನಿಟ್ ಗೆ 1ರೂ. ದಂಡ ಶುಲ್ಕ ವಿಧಿಸಲಾಗುವುದು.

ಹಸಿರು ದರ ಪ್ರತಿ ಯೂನಿಟ್ ಗೆ 50ಪೈಸೆ ಹೆಚ್ಚಿನ ಹಸಿರು ದರ ಮುಂದುವರಿಕೆ :
ಕೆಇಆರ್ ಸಿಯು, ನವೀಕರಿಸಬಹುದಾದ ಮೂಲಗಳಿಂದ ವಿದ್ಯುತ್ ಖರೀದಿ ಮತ್ತು ಬಳಕೆ ಉತ್ತೇಜನವನ್ನು ಮುಂದುವರೆಸಿದೆ. ಎಚ್.ಟಿ.ಕೈಗಾರಿಕೆಗಳು ಮತ್ತು ಎಚ್.ಟಿ.ವಾಣಿಜ್ಯ ಗ್ರಾಹಕರಿಗೆ ಅವರ ಆಯ್ಕೆಯಂತೆ ಅನ್ವಯವಾಗುವ ವಿದ್ಯುತ್ ದರಕ್ಕಿಂತ ಪ್ರತಿ ಯೂನಿಟ್ ಗೆ 50 ಪೈಸೆಯಷ್ಟು ಹೆಚ್ಚಿನ ಹಸಿರು ದರವನ್ನು ಮುಂದುವರಿಸಲಾಗಿದೆ.

ಈ ಹಿಂದೆ ಯಾವ ವರ್ಷ ಎಷ್ಟೆಷ್ಟು ವಿದ್ಯುತ್ ದರ ಪರಿಷ್ಕರಣೆಯಾಗಿತ್ತು..?

  • 2009 ರಲ್ಲಿ ಪ್ರತಿ ಯೂನಿಟ್ ಗೆ 34 ಪೈಸೆ ಹೆಚ್ಚಳ
  • 2010 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ
  • 2011 ರಲ್ಲಿ ಪ್ರತಿ ಯೂನಿಟ್ ಗೆ 28 ಪೈಸೆ ಹೆಚ್ಚಳ
  • 2012 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ ಹೆಚ್ಚಳ
  • 2013 ರಲ್ಲಿ ಪ್ರತಿ ಯೂನಿಟ್ ಗೆ 13 ಪೈಸೆ ಹೆಚ್ಚಳ
  • 2017 ರಲ್ಲಿ ಪ್ರತಿ ಯೂನಿಟ್ ಗೆ 53 ಪೈಸೆ ಹೆಚ್ಚಳ
  • 2018 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ
  • 2019 ರಲ್ಲಿ ಪ್ರತಿ ಯೂನಿಟ್ ಗೆ 33 ಪೈಸೆ ಹೆಚ್ಚಳ
  • 2020 ರಲ್ಲಿ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ
  • 2021 ರಲ್ಲಿ ಪ್ರತಿ ಯೂನಿಟ್ ಗೆ 30 ಪೈಸೆ ಹೆಚ್ಚಳ

ದೇಶಾದ್ಯಂತ ದಿನ ನಿತ್ಯ ಒಂದೇ ಸಮನೆ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರುತ್ತಲೇ ಇದೆ. ಇದೀಗ ವಿದ್ಯುತ್ ದರ ಏರಿಕೆಯ ಭಾರವನ್ನು ಸಾಮಾನ್ಯ ಜನರು ಹೊರುವಂತಾಗಿರುವುದು ನಿಜಕ್ಕೂ ದುರದೃಷ್ಟವೇ ಸರಿ.

WhatsApp Join our WhatsApp Channel
Previous Post

Vikrant Rona Movie Teaser | ನಟ ಕಿಚ್ಚಾ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಟೀಸರ್ ಅಂತರ್ಜಾಲ ತಾಣದಲ್ಲಿ ಸೃಷ್ಟಿಸಿದೆ ಹೊಸ ಹವಾ…!

Next Post

HAL Hands Over Gaganyaan Hardware to ISRO | ಗಗನಯಾನದ ಮೊದಲ ಹಂತದ ಯಂತ್ರಾಂಶವನ್ನು ಇಸ್ರೋಗೆ ಹಸ್ತಾಂತರಿಸಿದ ಎಚ್ ಎಎಲ್

Next Post

HAL Hands Over Gaganyaan Hardware to ISRO | ಗಗನಯಾನದ ಮೊದಲ ಹಂತದ ಯಂತ್ರಾಂಶವನ್ನು ಇಸ್ರೋಗೆ ಹಸ್ತಾಂತರಿಸಿದ ಎಚ್ ಎಎಲ್

Hotel News | ಗ್ಯಾಸ್, ಎಣ್ಣೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಆಯ್ತು...ಈಗ ಹೋಟೆಲ್ ಆಹಾರ ದರ ಶೇ.10ರಷ್ಟು ಏರಿಕೆ

Please login to join discussion

Like Us on Facebook

Follow Us on Twitter

Recent News

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

August 3, 2026

ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

August 3, 2026
ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

August 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group