Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

BW EXCLUSIVE | BBMP PROPERTY KHATA CORRUPTION | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಕ್ಕೆ ಕ್ಯಾರೇ ಅಂತಿಲ್ಲ ಇಲ್ಲಿ !!

ಬಿಬಿಎಂಪಿಯ ಕಂದಾಯ ಇಲಾಖೆ ಗರ್ಭದಲ್ಲಿದೆ ದೊಡ್ಡ ದೊಡ್ಡ ಹಗರಣಗಳು - ಖಾತಾ ಅಕ್ರಮ ಕೇವಲ ಸ್ಯಾಂಪಲ್ ಅಷ್ಟೆ | ಗಂಭೀರ ಆರೋಪ ಹೊತ್ತ ಬಿಬಿಎಂಪಿ ಜಂಟಿ ಆಯುಕ್ತರ ಪರವಹಿಸಿದ್ದರಾ ಶಾಸಕ ಎಂ.ಸತೀಶ್ ರೆಡ್ಡಿ?

by Bengaluru Wire Desk
January 12, 2023
in Bengaluru Focus, BW Special, Public interest
Reading Time: 3 mins read
1
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, (www.bengaluruwire.com) :  ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ಯಲ್ಲಿ ಹೆಜ್ಜೆ ಹೆಜ್ಜೆಗೂ ಅಧಿಕಾರಿ- ಸಿಬ್ಬಂದಿ ತಪ್ಪು ಮಾಡಿದ್ದರೂ, ಭ್ರಷ್ಟತೆಯ ಕೊಂಪೆಯಲ್ಲಿ ಮುಳಗಿರುವ ಪಾಲಿಕೆಗೆ ಇದ್ಯಾವುದು ಲೆಕ್ಕಕ್ಕೇ ಇಲ್ಲ. ಸ್ಥಳೀಯಾಡಳಿತದ ಈಗಿನ ಪರಿಸ್ಥಿತಿ ಹೇಗಿದೆ ಎಂದರೆ ಬೇಲಿಯೇ ಎದ್ದು ಹೊಲವನ್ನು ಮೇಯುಂತಿದೆ…!

ಯಾಕೆ ಹೀಗೆ ಹೇಳ್ತಿದ್ದಾರೆ ಅಂತ ಯೋಚಿಸ್ತಿದ್ದೀರಾ? ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಕರಣವೊಂದರಲ್ಲಿ ಗಂಭೀರ ಆರೋಪ ಎದುರಿಸುತ್ತಿರುವ ಬೃಹತ್  ಬೆಂಗಳೂರು ಮಹಾನಗರ ಪಾಲಿಕೆ ಬೊಮ್ಮನಹಳ್ಳಿ ಜಂಟಿ ಆಯುಕ್ತ ರಾಮಕೃಷ್ಣ ಅವರನ್ನು ಕೂಡಲೇ ಅಮಾನತುಪಡಿಸಿ, ಅವರ ವಿರುದ್ಧ ಎಸಿಬಿ ತನಿಖೆ ನಡೆಸುವಂತೆ ನಗರಾಭಿವೃದ್ಧಿ ಇಲಾಖೆಗೆ ಆದೇಶ ನೀಡಿದ್ದರೂ ಈತನಕ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಅದನ್ನು ಜಾರಿ ಮಾಡಿಲ್ಲ. ಆ ಅಧಿಕಾರಿಯನ್ನು ಸಸ್ಪೆಂಡ್ ಮಾಡಿ, ಎಸಿಬಿ ವಿಚಾರಣೆಗೆ ಅನುವು ಮಾಡಿಕೊಡಲು ಆಗದ ಮಟ್ಟಿಗೆ ವ್ಯವಸ್ಥಿತ ಹುನ್ನಾರ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಪರವಾಗಿ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರು ಮಾ.10ರಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಬೊಮ್ಮನಹಳ್ಳಿ ಜಂಟಿ ಆಯುಕ್ತ ರಾಮಕೃಷ್ಣ ವಿರುದ್ಧ ಕಾನೂನು ಉಲ್ಲಂಘಿಸಿ ಖಾಸಗಿಯವರ ಸ್ವತ್ತುಗಳಿಗೆ ಖಾತಾ ವಿಭಜನೆ ಮಾಡಿಕೊಟ್ಟಿರುವ ಪ್ರಕರಣದ ಹಿನ್ನಲೆಯಲ್ಲಿ ಅವರನ್ನು ಬಿಬಿಎಂಪಿಯಿಂದ ಅವರನ್ನು ವರ್ಗಾವಣೆ ಮಾಡುವಂತೆ ಪತ್ರ ಬರೆದಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆದೇಶದ ಪ್ರತಿ

ಈ ವಿಚಾರವಾಗಿ ನಗರಾಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಅಭಿವೃದ್ಧಿ ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಬಿಎಂಪಿ ಸಲ್ಲಿಸಿದ ದಾಖಲೆಯೊಂದಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಪತ್ರ ಬರೆದಿತ್ತು. ಇದನ್ನು ಪರಿಶೀಲಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಮಕೃಷ್ಣ ವಿರುದ್ಧ ಗಂಭೀರ ಆರೋಪದ ಹಿನ್ನಲೆಯಲ್ಲಿ ಕೂಡಲೇ ಅವರನ್ನು ಅಮಾನತುಪಡಿಸುವಂತೆ ಆದೇಶಿಸಿದ್ದರು. ಅಲ್ಲದೆ ಬಿಬಿಎಂಪಿ ಮುಖ್ಯ ಆಯುಕ್ತರು ಮಾ.10ರಂದು ಉಲ್ಲೇಖಿಸಿದ ಪ್ರಕರಣಗಳ ಬಗ್ಗೆ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರಿಂದ ತನಿಖೆ ನಡೆಸುವಂತೆ ಫರ್ಮಾನು ಹೊರಡಿಸಿದ್ದರು.

ಈ ಪ್ರಕರಣ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪತ್ರ ಸಂಖ್ಯೆ ಯುಡಿಡಿ/133/ಎಂಎನ್ ಯು/2022-ಬಿಬಿಎಂಪಿ-ನಗರಾಭಿವೃದ್ಧಿ ಇಲಾಖೆ (ಕಂಪ್ಯೂಟರ್ ಸಂಖ್ಯೆ : 723287) ರಲ್ಲಿ ಈ ಆದೇಶ ಮಾಡಿದ್ದರು. ಮಾ.28 ರಂದೇ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಈ ಕುರಿತ ಇ-ಫೈಲನ್ನು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಅವರಿಗೆ ಮಾ.28ರಂದು ಮಧ್ಯಾಹ್ನ 12.18ಕ್ಕೆ ಸಲ್ಲಿಕೆ ಮಾಡಿದ್ದಾರೆ. ಆದರೆ ಈ ಪ್ರಕರಣದ ಕುರಿತಂತೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಪ್ರತಿಕ್ರಿಯೆ ಪಡೆಯಲು ರಾಕೇಶ್ ಸಿಂಗ್ ಅವರನ್ನು ಬೆಂಗಳೂರು ವೈರ್ ಸಂಪರ್ಕಿಸಿದಾಗ, ‘ಬಿಬಿಎಂಪಿ ಬೊಮ್ಮನಹಳ್ಳಿ ಜಂಟಿ ಆಯುಕ್ತ ರಾಮಕೃಷ್ಣ ಮೇಲೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದಷ್ಟೇ ಹೇಳಿದ್ದಾರೆ.

ಶಾಸಕ ಎಂ.ಸತೀಸ್ ರೆಡ್ಡಿ ಗಂಭೀರ ಆರೋಪ ಹೊತ್ತವರ ಪರವಹಿಸಿದ್ದರೇ?

ದುರಂತ ಅಂದರೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ಗಂಭೀರ ಆರೋಪ ಎದುರಿಸುತ್ತಿರುವ ಜೆಸಿ ರಾಮಕೃಷ್ಣ ಅವರನ್ನು ಕೂಡಲೇ ಸೇವೆಯಿಂದ ಅಮಾನತು ಮಾಡಲು ಆದೇಶ ಹೊರಡಿಸಿದ್ದರು. ಆದರೆ ಮಾ.28ರಂದು ಸಿಎಂ ಕಚೇರಿಯಿಂದ ನಗರಾಭಿವೃದ್ಧಿ ಇಲಾಖೆಗೆ ಸಿಎಂ ಆದೇಶದ ಕಡತ ಹೋದ ದಿನವೇ ಬೊಮ್ಮನಹಳ್ಳಿ ಶಾಸಕ ಎಂ.ಸತೀಶ್ ರೆಡ್ಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ, ಬೊಮ್ಮನಹಳ್ಳಿ ಜಂಟಿ ಆಯುಕ್ತ ಎಂ.ರಾಮಕೃಷ್ಣ ಪರವಹಿಸಿ ಪತ್ರ ಬರೆದಿದ್ದಾರೆ ಎನ್ನಲಾದ ಪತ್ರದ ಪ್ರತಿ ಬೆಂಗಳೂರು ವೈರ್ ಗೆ ಲಭ್ಯವಾಗಿದೆ.

ಶಾಸಕರಾದ ಎಂ.ಸತೀಶ್ ರೆಡ್ಡಿ ಮುಖ್ಯಮಂತ್ರಿಗಳಿಗೆ ಬರೆದ ಪತ್ರದ ಪ್ರತಿ

ತಮ್ಮ ಮತಕ್ಷೇತ್ರದಲ್ಲಿ ಸಾರ್ವಜನಿಕ ಕೆಲಸ ಹಾಗೂ ಕೋವಿಡ್ 19 ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಕೆಲವು ಆರ್ ಟಿಐ ಕಾರ್ಯಕರ್ತರು ಹಾಗೂ ಕೆಲ ವ್ಯಕ್ತಿಗಳ ಇಲ್ಲ-ಸಲ್ಲದ ಸುಳ್ಳು ಆರೋಪ ಮಾಡಿರುವುದರಿಂದ ಇವರನ್ನು ಸೇವೆಯಿಂದ ಅಮಾನತುಗೊಳಿಸಿರುತ್ತಾರೆ. ಅದಕ್ಕೆ ಸಂಬಂಧಪಟ್ಟಂತೆ ಕಡತ ಸಂಖ್ಯೆ : ಯುಡಿಡಿ: 133:ಎಂಎನ್ ಯು:2022, ಇ-3811939 ಇದ್ದು, ರಾಮಕೃಷ್ಣ ಇದೇ ಏಪ್ರಿಲ್ ತಿಂಗಳಿನಲ್ಲಿ ನಿವೃತ್ತಿ ಆಗುತ್ತಿರುವ ಕಾರಣ ಅವರ ಅಮಾನತು ಆದೇಶವನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರೇ ಖುದ್ದಾಗಿ ತಮ್ಮ ಕೈಕೆಳಗಿನ ಕಂದಾಯ ಇಲಾಖೆ ವಿಶೇಷ ಆಯುಕ್ತರು ಹಾಗೂ ಜಂಟಿ ಆಯುಕ್ತರು ನೀಡಿದ ವರದಿ ಆಧಾರದ ಮೇಲೆ ನಾಲ್ಕು ಪ್ರಕರಣಗಳಲ್ಲಿ ಬೊಮ್ಮನಹಳ್ಳಿ ಜಂಟಿ ಆಯುಕ್ತ ರಾಮಕೃಷ್ಣ ಕಾನೂನು ಉಲ್ಲಂಘಿಸಿ ಸ್ವತ್ತುಗಳಿಗೆ ಖಾತಾ ವಿಭಜಿಸಿದ್ದಾರೆಂದು ಖುದ್ದು ನಗರಾಭಿವೃದ್ಧಿ ಇಲಾಖೆಗೆ ಅವರನ್ನು ಸೇವೆಯಿಂದ ಬಿಡುಗಡೆ ಮಾಡುವಂತೆ ಪತ್ರ ಬರೆದಿದ್ದಾರೆ. ಇನ್ನೊಂದೆಡೆ ನಗರಾಭಿವೃದ್ಧಿ ಇಲಾಖೆ ಬಿಬಿಎಂಪಿ ಮುಖ್ಯ ಆಯುಕ್ತರ ಪತ್ರ ಆಧರಿಸಿ ಬರೆದು ಕಳುಹಿಸಿದ ಕಡತಕ್ಕೆ ಸ್ವತ: ಮುಖ್ಯಮಂತ್ರಿಗಳೇ ಸೂಕ್ತ ಕ್ರಮ ಕೈಗೊಳ್ಳಿ ಎಂದು ಪತ್ರ ಬರೆದಿರುವಾಗ ಕ್ಷೇತ್ರದ ಶಾಸಕ ಎಂ.ಸತೀಶ್ ರೆಡ್ಡಿ, ಗಂಭೀರ ಆರೋಪ ಹೊತ್ತ ಜಂಟಿ ಆಯುಕ್ತರ ರಕ್ಷಣೆಗೇಕೆ ನಿಂತರು ಎಂಬುದೇ ಯಕ್ಷ ಪ್ರಶ್ನೆಯಾಗಿದೆ…?

ಈ ಬಗ್ಗೆ ಬೆಂಗಳೂರು ವೈರ್ ಶಾಸಕ ಎಂ.ಸತೀಶ್ ರೆಡ್ಡಿಯವರಿಂದ ಪ್ರತಿಕ್ರಿಯೆ ಕೇಳಿದಾಗ ಅವರು ಹೇಳಿದ್ದು ಹೀಗೆ : “ಬೊಮ್ಮನಹಳ್ಳಿ ಜಂಟಿ ಆಯುಕ್ತ ರಾಮಕೃಷ್ಣ ಅವರ ಮೇಲಿನ ಆರೋಪ ಏನಂತ ಗೊತ್ತಿಲ್ಲ. ನಾನು ಮೂರು ದಿನದಿಂದ ಬೆಂಗಳೂರಿನಲ್ಲಿ ಇರಲಿಲ್ಲ. ನಾನು ಲೆಟರ್ ಬರೆದ ಬಗ್ಗೆ ಮಾಹಿತಿಯಿಲ್ಲ.” ಎಂದಷ್ಟೇ ಹೇಳಿದ್ದಾರೆ.

ಮಾ.10ರಂದು ಮುಖ್ಯ ಆಯುಕ್ತರ ಪತ್ರದಲ್ಲೇನಿದೆ? :

ಅಸಲಿಗೆ ಮಾ.10ರಂದು ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿಯವರು ಕಂದಾಯ ಇಲಾಖೆ ವಿಶೇಷ ಆಯುಕ್ತ ಹಾಗೂ ಜಂಟಿ ಆಯುಕ್ತರು ನೀಡಿದ ವರದಿಯನ್ವಯ ಈ ಕೆಳಕಂಡಂತೆ ಕರ್ತವ್ಯ ಲೋಪ ಎಸಗಿರುವುದು ಕಂಡು ಬಂದಿರುತ್ತದೆ ಎಂದು ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.

ಪ್ರಕರಣ -1 : ಬೆಂಗಳೂರು ದಕ್ಷಿಣ ತಾಲೂಕು, ಬೇಗೂರು ಹೋಬಳಿ, ಎಳ್ಳಕುಂಟೆ ಗ್ರಾಮದ ಸರ್ವೆ ನಂ.20/4ರಲ್ಲಿ ನೌಷದ್ ಎಂಬುವರ ಜಮೀನಿಗೆ ಖಾತಾ ವಿಭಜನೆ ಪ್ರಸ್ತಾವನೆಗೆ ಅನುಮೋದನೆ ನೀಡಿರುವುದು.

ಪ್ರಕರಣ-2 : ಬೆಂಗಳೂರು ದಕ್ಷಿಣ ತಾಲೂಕು, ಬೇಗೂರು ಹೋಬಳಿ, ಹರಳಕುಂಟೆ ಗ್ರಾಮದ ಸರ್ವೆ ನಂ.31/7 ರಲ್ಲಿನ 1.27 ಎಕರೆ ವಿಸ್ತೀರ್ಣದ ಜಮೀನಿಗೆ ಅರ್ಜಿದಾರರಿಂದ ಖಾತೆ ನೋಂದಣಿ ಪ್ರಸ್ತಾವನೆಗೆ ಅನುಮೋದನೆ ನೀಡುವ ಮುನ್ನವೇ ಸುಧಾರಣಾ ವೆಚ್ಚ ಸಂಗ್ರಹಿಸಿರುವುದು.

ಪ್ರಕರಣ-3 : ಬೆಂಗಳೂರು ದಕ್ಷಿಣ ತಾಲೂಕು, ಬೇಗೂರು ಹೋಬಳಿ, ಎಳ್ಳಕುಂಟೆ ಗ್ರಾಮದ ಸರ್ವೆ ನಂ.15/1ಎ ರಲ್ಲಿ 2.14 ಎಕರೆ ವಿಸ್ತೀರ್ಣವುಳ್ಳ ಜಮೀನಿಗೆ ಖಾತೆ ವಿಭಜಿಸಿರುವುದು.

ಪ್ರಕರಣ-4 : ಬೆಂಗಳೂರು ದಕ್ಷಿಣ ತಾಲೂಕು, ಬೇಗೂರು ಹೋಬಳಿ, ಹರಳಕುಂಟೆ ಗ್ರಾಮದ ಸರ್ವೆ ನಂ.2421/32/14ರಲ್ಲಿನ 5 ಗುಂಟೆ ವಿಸ್ತೀರ್ಣವುಳ್ಳ ಜಮೀನು ಸೋಮಶೇಖರ್ ಅವರ ಹೆಸರಲ್ಲಿ ದಾಖಲಾಗಿದ್ದು, ಭೂಪರಿವರ್ತನೆ ಆದೇಶದ ಪ್ರತಿ ಲಭ್ಯವಿರುವುದಿಲ್ಲ. ಆದರೆ ಈತ 5 ಗುಂಟೆ ವಿಸ್ತೀರ್ಣದ ಪೈಕೆ 1,485 ಚ.ಅಡಿಗಳನ್ನು ಕೆ.ಸಾವಿತ್ರಮ್ಮ ಹಾಗೂ 1,200 ಚ.ಅಡಿಗಳನ್ನು ವಿ.ಜಿತೇಂದ್ರ ಹೆಸರಿಗೆ ಕ್ರಯಕ್ಕೆ ನೀಡಿದ್ದಾರೆ. ಈ ಸ್ವತ್ತಿನ ವಿಸ್ತೀರ್ಣಗಳಿಗೆ ಪ್ರತ್ಯೇಕ ಉಪ ಮುನಿಸಿಪಲ್ ಸಂಖ್ಯೆಗಳನ್ನು ನೀಡಿ, ಉಳಿಕೆ 2,760 ಚ.ಅಡಿಗಳಿಗೆ ಖಾತಾ ವಿಭಜಿಸಿ ನೋಂದಾಯಿಸಲಾಗಿದೆ.

20-10-2014ರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಭೂಪರಿವರ್ತನೆಗೊಂಡ ಏಕ ನಿವೇಶನಗಳಿಗೆ ಮಾತ್ರ ಖಾತೆ ನೋಂದಾಯಿಸಲು ಅವಕಾಶವಿದೆ. ಆದರೆ ವಿಭಜನೆಗೆ ಒಳಗಾದ ಸ್ವತ್ತುಗಳಿಗೆ ಸಕ್ಷಮ ಪ್ರಾಧಿಕಾರದಿಂದ ಅನುಮೋದನೆ ಪಡೆಯದೆ ಖಾತೆ ನೋಂದಾಯಿಸಬಾರದು. ಒಂದೊಮ್ಮೆ ಆ ಆದೇಶ ಉಲ್ಲಂಘಿಸಿ ಖಾತೆ ವಿಭಜಿಸಿದರೆ ಅಂತಹ ಅಧಿಕಾರಿ ಅಥವಾ ನೌಕರರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದೆಂದು ತಿಳಸಲಾಗಿದೆ. ಆದರೆ ವಲಯ ಮಟ್ಟದ ಅಧಿಕಾರಿಗಳು ಮುಖ್ಯ ಆಯುಕ್ತರ ಆದೇಶವನ್ನು ಉಲ್ಲಂಘಿಸಿ ಖಾತಾ ವಿಭಜಿಸಿ ಕಂಡುಬಂದಿದೆ. ಹೀಗಾಗಿ ಎಂ.ರಾಮಕೃಷ್ಣ ಅವರ ಸೇವೆ ಪಾಲಿಕೆಗೆ ಅವಶ್ಯಕತೆಯಿಲ್ಲ. ಅವರನ್ನು ಪಾಲಿಕೆ ಸೇವೆಯಿಂದ ಬಿಡುಗಡೆಗೊಳಿಸಿ ಎಂದು ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿಗಳ ತನಕ ಈ ಪ್ರಕರಣ ಮುಟ್ಟಿದ್ದು ಹೇಗೆ ?

ಹರಳಕುಂಟೆ ಗ್ರಾಮದ ಎಸ್.ಎನ್.ರಾಜು ಸ್ವತ್ತಿನ ಪ್ರಕರಣ ಕುರಿತಂತೆ ಬೊಮ್ಮನಹಳ್ಳಿ ಕಂದಾಯ ವಿಭಾಗದ, ಸಹಾಯಕ ಕಂದಾಯ ಅಧಿಕಾರಿ ಲಕ್ಷ್ಮಿ ಹಾಗೂ ಕಂದಾಯ ಪರಿವೀಕ್ಷಕರಾದ ಸೋಮಶೇಖರ್ ವಿರುದ್ಧ ಬಿಬಿಎಂಪಿ ಆಡಳಿತ ವಿಭಾಗ ನೆಪಮಾತ್ರಕ್ಕೆ ಇವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿ, ಅಮಾನತು ಮಾಡಿ, ಎರಡು- ಮೂರು ದಿನಕ್ಕೆ ವಾಪಸ್ ಅವರನ್ನು ಕೆಲಸಕ್ಕೆ ಮರು ನೇಮಕ ಮಾಡಿದ್ದಾರೆ. ಈ ಪ್ರಕರಣದಲ್ಲಿ ಜಂಟಿ ಆಯುಕ್ತರು, ಉಪ ಆಯುಕ್ತರು ಇತರ ಅಧಿಕಾರಿಗಳ ಸಹಾಯವಿಲ್ಲದೆ ಖಾತಾ ವಿಭಾಗ ಅಥವಾ ಖಾತಾ ವರ್ಗಾವಣೆ ಸಾಧ್ಯವಿಲ್ಲ. ಹೀಗಾಗಿ ಎಲ್ಲಾ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಕಾರ್ಮಿಕರ ಮಾನವ ಹಕ್ಕುಗಳ ಭ್ರಷ್ಟಾಚಾರ ವಿರೋಧಿ ಒಕ್ಕೂಟ ಸಂಸ್ಥೆಯು 2022ರ ಜನವರಿ 20ರಂದು ಬಿಬಿಎಂಪಿ ಆಡಳಿತ ವಿಭಾಗದ ವಿಶೇಷ ಆಯುಕ್ತರಿಗೆ ಪತ್ರ ಬರೆದಿತ್ತು.

ದೂರುದಾರರು ಏನಂತಾರೆ ?

ದೂರುದಾರ ಮೋಹನ್ ರಾಜ್ ಒಡೆಯರ್

“ಬಿಬಿಎಂಪಿ ಆಡಳಿತ ವಿಭಾಗ ಪಾಲಿಕೆ ಕಂದಾಯ ಇಲಾಖೆ ವಿಶೇಷ ಆಯುಕ್ತರು, ಜಂಟಿ ಆಯುಕ್ತರ ವರದಿ ಆಧರಿಸಿ, ಬೊಮ್ಮನಹಳ್ಳಿ ಜಂಟಿ ಆಯುಕ್ತ ರಾಮಕೃಷ್ಣ ಅವರನ್ನು ಸೇವೆಯಿಂದ ಹಿಂಪಡೆಯುವಂತೆ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದಾಗ ಮುಖ್ಯಮಂತ್ರಿಗಳ ವರೆಗೂ ಈ ವಿಷಯ ತಲುಪಿದೆ. ಆದರೆ ಈತನಕವೂ ಪ್ರಕರಣ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರ ಆದೇಶ ಜಾರಿಗೆ ತರುವಲ್ಲಿ ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಹಿಂದೆ ಮುಂದೆ ನೋಡುತ್ತಿದ್ದಾರೆ. ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯವರು, ಈ ತಿಂಗಳಲ್ಲಿ ನಿವೃತ್ತಿಯಾಗುತ್ತಿರುವ ಗಂಭೀರ ಆರೋಪ ಹೊತ್ತ ರಾಮಕೃಷ್ಣ ಪರವಹಿಸಿಕೊಂಡಿರುವುದು ತಲೆತಗ್ಗಿಸುವ ವಿಚಾರ. ತಪ್ಪಿತಸ್ಥರ ವಿರುದ್ಧ ಮುಖ್ಯಮಂತ್ರಿಗಳ ಆದೇಶದಂತೆ ಅಗತ್ಯ ಕ್ರಮ ಕೈಗೊಳ್ಳಬೇಕಿದೆ. ಬಿಬಿಎಂಪಿ ಕಂದಾಯ ಇಲಾಖೆ ಅಧಿಕಾರಿಗಳ ವರದಿ ಆಧರಿಸಿ ತನಿಖೆ ಮತ್ತು ವಿಚಾರಣೆ ಕೈಗೊಳ್ಳುವಂತೆ ಈಗಾಗಲೇ ಲೋಕಾಯುಕ್ತ ಹಾಗೂ ಭ್ರಷ್ಟಾಚಾರ ನಿಗ್ರಹ ದಳಕ್ಕೂ ದೂರು ನೀಡಲಾಗಿದೆ.”

  • ಮೋಹನ್ ರಾಜ್ ಒಡೆಯರ್, ಸಂಚಾಲಕ, ರಾಷ್ಟ್ರೀಯ ಕಾರ್ಮಿಕರ ಮಾನವ ಹಕ್ಕುಗಳ ಭ್ರಷ್ಟಾಚಾರ ವಿರೋಧಿ ಒಕ್ಕೂಟ

ಈ ಪ್ರಕರಣದ ಕುರಿತಂತೆ ಈಗಾಗಲೇ ಫೈಲ್ ಮುಖ್ಯಮಂತ್ರಿಗಳ ಕಚೇರಿಯಿಂದ ನಗರಾಭಿವೃದ್ಧಿ ಇಲಾಖೆಗೆ ಮಾ.28ರಂದು ರವಾನೆಯಾಗಿರುವುದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಹೀಗಿದ್ದರೂ, ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ಲಕ್ಷ್ಮೀಸಾಗರ್, ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತ ರಾಮಕೃಷ್ಣ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ದೂರವಾಣಿ ಕರೆ ಮಾಡಿ ಅವರನ್ನು ಕೇಳಿದ್ರೆ, “ರಾಮಕೃಷ್ಣ ಅವರ ಕುರಿತ ಫೈಲ್ ಇನ್ನು ಮುಖ್ಯಮಂತ್ರಿಗಳ ಕಚೇರಿಯಲ್ಲೇ ಇದೆ. ಇನ್ನೂ ಬಂದಿಲ್ಲ. ನಾನು ಈಗ ಮೀಟಿಂಗ್ ನಲ್ಲಿದಿನಿ.” ಎಂದು ಹೇಳಿ ಕರೆ ಸ್ಥಗಿತಗೊಳಿಸಿದ್ದಾರೆ.

ಬೊಮ್ಮನಹಳ್ಳಿ ಜಂಟಿ ಆಯುಕ್ತ ಎಂ.ರಾಮಕೃಷ್ಣ

ಇನ್ನು ಈ ಬಗ್ಗೆ ತಮ್ಮ ವಿರುದ್ಧದ ಗುರುತರ ಆರೋಪದ ಬಗ್ಗೆ ಬೊಮ್ಮನಹಳ್ಳಿ ಜಂಟಿ ಆಯುಕ್ತ ರಾಮಕೃಷ್ಣ ಬೆಂಗಳೂರು ವೈರ್ ಗೆ ಹೇಳಿದ್ದು ಹೀಗೆ, “ತಮ್ಮ ಮೇಲೆ ಬಂದಿರುವ ಗಂಭೀರ ಆರೋಪಗಳ ಬಗ್ಗೆ ಮುಖ್ಯಮಂತ್ರಿ ಕಚೇರಿ ಹಾಗೂ ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳ ಕಚೇರಿಗೆ ಸೂಕ್ತ ರೀತಿಯ ಉತ್ತರ ಕೊಟ್ಟಿದ್ದೇನೆ. ತಮ್ಮ ಮೇಲೆ ಬಂದಿರುವುದೆಲ್ಲ ಸುಳ್ಳು ಆರೋಪಗಳು, ಎಸಿಎಸ್ ಕಚೇರಿಯಿಂದ ತಮ್ಮನ್ನು ಅಮಾನತು ಮಾಡುವ ಆದೇಶ ಆಗಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಪಾಲಿಕೆಯ ಕಂದಾಯ ಇಲಾಖೆಯ ಗರ್ಭದಲ್ಲಿದೆ ದೊಡ್ಡ ದೊಡ್ಡ ಹಗರಣಗಳು – ಖಾತಾ ಅಕ್ರಮ ಕೇವಲ ಸ್ಯಾಂಪಲ್ ಅಷ್ಟೆ :

ಬೆಂಗಳೂರಿನ ಮಹದೇವಪುರ, ಬೊಮ್ಮನಹಳ್ಳಿ ವಲಯಗಳು ಬಿಬಿಎಂಪಿಗೆ ಯಾವುದೇ ದೃಷ್ಟಿಯಿಂದ ನೋಡಿದರೂ ಹಣದ ಮೂಟೆ ಇರುವ ಸಂಪನ್ಮೂಲ ಭರಿತ ವಲಯಗಳೇ. ಹೀಗಾಗಿ ಈ ವಲಯಗಳಿಗೆ ಇತರ ವಲಯಗಳಗಿಂತ ಸಾವಿರಾರು ಕೋಟಿ ರೂ. ಹಣವು ರಸ್ತೆ ಮತ್ತು ಮೂಲಭೂತಸೌಕರ್ಯ ಕಲ್ಪಿಸಲು ಹಣ ಸುರಿಯುತ್ತಲೇ ಇರುತ್ತೆ ಬಿಬಿಎಂಪಿ. ಅದೇ ರೀತಿ ಸಾಕಷ್ಟು ಅಕ್ರಮ- ಅವ್ಯವಹಾರ ನಡೆಯುವ ಸ್ಥಳಗಳು ಇದೇ ಎರಡು ವಲಯಗಳಲ್ಲಿದೆ. ಬಿಬಿಎಂಪಿ ಮುಖ್ಯ ಆಯುಕ್ತರ ಕಚೇರಿಯಿಂದ ಮುಖ್ಯಮಂತ್ರಿಗಳವರೆಗೆ ಖಾತೆ ವಿಭಜನೆ ಮಾಡಿಕೊಡುವ ನಾಲ್ಕು ಪ್ರಕರಣಗಳ ಅಕ್ರಮಗಳು ಕೇವಲ ಸ್ಯಾಂಪಲ್ ಅಷ್ಟೆ. 19 ಲಕ್ಷಕ್ಕೂ ಅಧಿಕ ಸ್ವತ್ತುಗಳಿರುವ ಪಾಲಿಕೆಯಲ್ಲಿ ಬಹುದೊಡ್ಡ ಹಗರಣಗಳು ಪಾಲಿಕೆಯ ಕಂದಾಯ ಇಲಾಖೆಯ ಗರ್ಭದಲ್ಲಿ ಬೆಚ್ಚಗೆ ಮಲಗಿದೆ. ಅಲ್ಲಿನ ಭ್ರಷ್ಟಾಚಾರವನ್ನು ಮುಲಾಜಿಲ್ಲದೆ ಬಯಲಿಗೆಳೆಯುವ ಕಾರ್ಯ ತ್ವರಿತಗತಿಯಲ್ಲಿ ಆಗಬೇಕಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.

WhatsApp Join our WhatsApp Channel
Previous Post

Karnataka Govt. Employees DA Increase | ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.2.75 ರಷ್ಟು ಹೆಚ್ಚಳ :
ಸಿಎಂ ಬೊಮ್ಮಾಯಿ ಆದೇಶ

Next Post

AICC CRITICIZE CENTERAL GOVT. RATES HIKE | ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜೇಯ್ ಮಕಾನ್ ಟೀಕಾ ಪ್ರಹಾರ

Next Post

AICC CRITICIZE CENTERAL GOVT. RATES HIKE | ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜೇಯ್ ಮಕಾನ್ ಟೀಕಾ ಪ್ರಹಾರ

BBMP NEWS | ಪತ್ರಕರ್ತರ ಚಿಕಿತ್ಸಾ ವೆಚ್ಚ ಭರಿಸಲು 2 ಕೋಟಿ ರೂ. ನಿಗದಿ - ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group