Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

#KGFChapter2 Film | ವಿಶ್ವದಾದ್ಯಂತ ಕೆಜಿಎಫ್-2 ರಿಲೀಸ್ ಗೆ ಕ್ಷಣಗಣನೆ : ರಾಜ್ಯದಲ್ಲೇ ಮೊದಲಿಗೆ ಮಧ್ಯರಾತ್ರಿ ಫಸ್ಟ್ ಶೋ

ವಿಶ್ವದಾದ್ಯಂತ 7,500 ಸ್ಕ್ರೀನ್ ಗಳಲ್ಲಿ ತೆರೆ ಕಾಣುತ್ತಿರುವ ಪಂಚಭಾಷೆಯ ಚಲನಚಿತ್ರ | ಮೊದಲ ದಿನ ಭರ್ಜರಿ ಕಲೆಕ್ಷನ್ ಆಗುವ ನಿರೀಕ್ಷೆ | ನಟ ಯಶ್ ಅಭಿಮಾನಿಗಳಿಂದ ನೆಲದ ಮೇಲೆ ಬಣ್ಣದ ಮೊಸಾಯಿಕ್ ಟೈಲ್ಸ್ ನಿಂದ ಮೈದಾನದಷ್ಟು ಗಾತ್ರದ ಭಾವಚಿತ್ರ ರಚನೆ

by Bengaluru Wire Desk
April 13, 2022
in Bengaluru Focus, News Wire
Reading Time: 2 mins read
0

ಬೆಂಗಳೂರು, (www.bengaluruwire.com) : ಬಹು ನಿರೀಕ್ಷೆಯ ನಟ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ -2 (KGFChapter2) ಸಿನಿಮಾ ನಾಳೆ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ. ಯಶ್ ಅಭಿಮಾನಿಗಳು ಈ ಚಿತ್ರದ ವೀಕ್ಷಣೆಗಾಗಿ ಪ್ರಪಂಚದಾದ್ಯಂತ ಕಾತುರದಿಂದ ಕಾಯುತ್ತಿದ್ದಾರೆ.

ಈ ಚಿತ್ರದ ಮೊದಲ ಶೋ ಕರ್ನಾಟಕದಲ್ಲೇ ತೆರೆ ಕಾಣಲಿದ್ದು, ಏ.13ರ ಮಧ್ಯರಾತ್ರಿ 12ಗಂಟೆಯ ನಂತರ ಅಂದರೆ ಏ.14ರಂದು ಊರ್ವಶಿ ಥಿಯೇಟರ್ ನಲ್ಲಿ ಮೊದಲ ಪ್ರದರ್ಶನ ಕಾಣಲಿದೆ. ಭಾರತವೊಂದರಲ್ಲೇ ಕನ್ನಡ, ಹಿಂದಿ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕ ಕಾಲಕ್ಕೆ ತೆರೆ ಕಾಣುತ್ತಿರುವ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್-2 ಬಾಕ್ಸ್ ಆಫೀಸ್ ಕಲೆಕ್ಷನ್ ವಿಚಾರದಲ್ಲಿ ಹೊಸ ದಾಖಲೆ ಬರೆಯುವ ನಿರೀಕ್ಷೆ ವ್ಯಕ್ತವಾಗಿದೆ.

ಮೊದಲ ದಿನವೇ ಭರ್ಜರಿ ಗಳಿಕೆ ನಿರೀಕ್ಷೆ :

ನಮ್ಮ ದೇಶದ ಸುಮಾರು 6,500 ಚಿತ್ರಮಂದಿರ ಸೇರಿದಂತೆ ವಿಶ್ವದಾದ್ಯಂತ 7,500 ಸ್ಕ್ರೀನ್ ಗಳಲ್ಲಿ ತೆರೆ ಕಾಣುತ್ತಿರುವ ಪಂಚಭಾಷೆಯ ಈ ಚಲನಚಿತ್ರ ಪ್ರೀಬುಕ್ಕಿಂಗ್ ನಲ್ಲೇ 20 ಕೋಟಿ ರೂ. ಮೊತ್ತದ ಪ್ರೀ ಬುಕಿಂಗ್ ಆಗುವ ನಿರೀಕ್ಷೆಯಿದೆ. ಆದರೆ ಚಿತ್ರ ಬಿಡುಗಡೆಯಾದ ಮೊದಲ ದಿನ ಕರ್ನಾಟಕದಲ್ಲಿ 30 ಕೋಟಿ ರೂ., ಆಂಧ್ರ/ತೆಲಂಗಾಣದಲ್ಲಿ 35 ಕೋಟಿ ರೂ., ತಮಿಳುನಾಡಿನಲ್ಲಿ 10 ಕೋಟಿ ರೂ., ಕೇರಳದಲ್ಲಿ 5 ಕೋಟಿ ರೂ., ದೇಶದ ಇತರ ಭಾಗಗಳಲ್ಲಿ 60 ಕೋಟಿ ರೂ., ವಿದೇಶಗಳಲ್ಲಿ 25 ಕೋಟಿ ರೂ. ಹಾಗೂ ಒಟ್ಟಾರೆ ವಿಶ್ವದಾದ್ಯಂತ ಒಂದೇ ದಿನ 165 ಕೋಟಿ ರೂ. ಗಳಿಕೆಯಾಗಲಿದೆ ಎಂದು ಚಿತ್ರೋದ್ಯಮದ ವಿಶ್ಲೇಷಕರು ಅಂದಾಜಿಸಿದ್ದಾರೆ. ರಾಜ್ಯದ ಕೆಲವು ಥಿಯೇಟರ್ ಗಳಲ್ಲಿ ಚಿತ್ರ ಬಿಡುಗಡೆಯ ಮೊದಲ ದಿನ ಸತತ 24 ಗಂಟೆಗಳ ಕಾಲ 7 ಚಿತ್ರಪ್ರದರ್ಶನವಿರಲಿದೆ. ಮೊದಲ ದಿನವೇ ಕೆಜಿಎಫ್ ಚಾಪ್ಟರ್-2 ಚಿತ್ರವು ಒಟ್ಟು 13,006 ಪ್ರದರ್ಶನ ಕಾಣಲಿದ್ದು, 12.09 ಲಕ್ಷ ಜನರು ಈ ಚಿತ್ರವನ್ನು ನೋಡಲಿದ್ದಾರೆ.

ಹೊಂಬಾಳೆ ಫಿಲಮ್ಸ್ ಎಂದಿಗೂ ಕೆಜಿಎಫ್ ಚಿತ್ರ ಮಾರಾಟ ಮಾಡಿಲ್ಲ :

ಕರ್ನಾಟಕವೊಂದರಲ್ಲೇ 500 ಏಕ ತೆರೆ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಂಡರೆ, ತಮಿಳು ನಾಡಿನಲ್ಲಿ 350 ಸಿಂಗಲ್ ಸ್ಕ್ರೀನ್ ನಲ್ಲಿ ಮತ್ತು ತೆಲುಗು ಭಾಷೆಯಲ್ಲೂ ಈ ಚಿತ್ರಕ್ಕೆ ಸಖತ್ ನಿರೀಕ್ಷೆಯಿದೆ. ಹೊಂಬಾಳೆ ಫಿಲಮ್ಸ್ ಚಿತ್ರ ನಿರ್ಮಾಣ ಕೆಜಿಎಫ್ ಚಾಪ್ಟರ್-1 ಕೂಡ ಈ ಹಿಂದೆ ಬಿಡುಗಡೆಯಾಗಿ ಸಾಕಷ್ಟು ಯಶಸ್ಸುಗಳಿಸಿತ್ತು. ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಜನಪ್ರಿಯ ಬ್ಯಾನರ್ ಗಳ, ನಟರ ಸಿನಿಮಾಗಳು ಬಿಡುಗಡೆಯಾದ ಸಂದರ್ಭದಲ್ಲೇ ದೊಡ್ಡ ಮೊತ್ತಕ್ಕೆ ಟಿವಿ, ಒಟಿಟಿ ಫ್ಲಾಟ್ ಫಾರಮ್ ಅಥವಾ ಅಮೆಜಾನ್, ನೆಟ್ ಫ್ಲಿಕ್ಸ್ ಮತ್ತಿತರ ಕಡೆ ಮಾರಾಟವಾಗುತ್ತದೆ. ಆದರೆ ಈ ಕೆಜಿಎಫ್ ಚಾಪ್ಟರ್-1 ಚಿತ್ರವಾಗಲಿ, ಚಾಪ್ಟರ್-2 ಚಿತ್ರವಾಗಲಿ ಇವುಗಳನ್ನು ನಿರ್ಮಾಪಕ ವಿಜಯ್ ಕಿರಗಂದೂರ್ ಯಾವತ್ತೂ ಮಾರಾಟ ಮಾಡಿಲ್ಲ. ಕೇವಲ ವಿತರಕರಿಗೆ ಇಂತಿಷ್ಟು ಕಮಿಷನ್ ರೂಪದಲ್ಲೇ ಚಿತ್ರವನ್ನು ಪ್ರದರ್ಶನಕ್ಕೆ ನೀಡುತ್ತಿದ್ದರು. ಆ ಚಿತ್ರ ಯಶಸ್ಸು ಪಡೆಯಲಿ ಅಥವಾ ಫ್ಲಾಪ್ ಆಗಲಿ ಅವುಗಳನ್ನು ಯಾವತ್ತೂ ಮಾರಾಟ ಮಾಡಿಲ್ಲ ಎಂದು ಹೊಂಬಾಳೆ ಫಿಲ್ಸ್ಮ್ ಪ್ರತಿನಿಧಿಯೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಈ ಚಿತ್ರದ ಮೊದಲ ದಿನದ ಕಲೆಕ್ಷನ್, ಒಟ್ಟಾರೆ ಗಳಿಕೆಯ ಬಗ್ಗೆ ಇಂತಿಷ್ಟೆ ಗಳಿಕೆಯಾಗುತ್ತದೆಂದು ಊಹೆ ಮಾಡಲು ಆಗುತ್ತಿಲ್ಲ. ಹೊಂಬಾಳೆ ಫಿಲಂಮ್ಸ್ ಗೂ ಪಂಚಭಾಷೆಗಳಲ್ಲಿ ಬಿಡುಗಡೆ ಮಾಡುತ್ತಿರುವುದು ಇದು ಮೊದಲ ಅನುಭವ. ಒಟ್ಟಾರೆ ಚಿತ್ರರಂಗದ ಹಲವು ದಾಖಲೆಗಳನ್ನು ಮಾಡಲಿದೆ ಎಂಬ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.

ಏಪ್ರಿಲ್.13ರಂದು ಅಂದರೆ ಬುಧವಾರ ತಮಿಳು ನಟ ವಿಜಯ್ ದಳಪತಿಯವರ ಬೀಸ್ಟ್ ಚಿತ್ರ ತೆರೆ ಕಂಡಿದೆ. ಆದರೆ ಕೆಜಿಎಫ್-2 ಚಿತ್ರದ ಎಬ್ಬಿಸಿರುವ ಹವಾದ ಎದುರು ಬೀಸ್ಟ್ ಚಿತ್ರದ ಅಬ್ಬರ ಕಡಿಮೆಯಿದೆ. ಇಂದು ರಾಜ್ಯದ 300 ಚಲನಚಿತ್ರ ಮಂದಿರದಲ್ಲಿ 1,500 ಪ್ರದರ್ಶನ ಕಾಣಲಿದೆ. ಆದರೆ ಗುರುವಾರ ಕೆಜಿಎಫ್ ಚಾಪ್ಟರ್-2 ಚಿತ್ರ ಬಿಡುಗಡೆಯಾಗುತ್ತಿರುವ ಕಾರಣ ಕೇವಲ 50 ಚಿತ್ರಮಂದಿರದಲ್ಲಷ್ಟೇ ಬೀಸ್ಟ್ ಚಿತ್ರ ಪ್ರದರ್ಶನವಿರಲಿದೆ ಎಂದು ಚಿತ್ರರಂಗದ ಮೂಲಗಳು ತಿಳಿಸಿವೆ.

ಸಾಲು ಸಾಲು ರಜೆಗಳ ಮಧ್ಯೆ ಫಿಲಮ್ ರಿಲೀಸ್ :

ಕೆಜಿಎಫ್-2 ಭರ್ಜರಿ ಬುಕ್ಕಿಂಗ್ ಗೆ ಮತ್ತೊಂದು ಕಾರಣವೆಂದರೆ ಈ ವಾರದಲ್ಲಿ ಬಂದಿರುವ ಸಾಲು ಸಾಲು ರಜೆಗಳು ಎನ್ನಬಹುದು. ಏ.14ರ ಗುರುವಾರ ಅಂಬೇಡ್ಕರ್ ಜಯಂತಿ, ಏ.15ರಂದು ಗುಡ್ ಫ್ರೈಡೆ, 16ರಂದು ಶನಿವಾರ ಹಾಗೂ 17 ಭಾನುವಾರ ಬಂದಿರುವುದರಿಂದ ಲಕ್ಷಾಂತರ ಪ್ರೇಕ್ಷಕರು ಈ ಅವಧಿಯಲ್ಲೇ ಸಿನಿಮಾ ನೋಡಬೇಕೆಂದು ತುದಿಗಾಲಲ್ಲಿ ನಿಂತಿದ್ದಾರೆ. ಈ ಅವಧಿಯಲ್ಲೇ ದಾಖಲೆ ಪ್ರಮಾಣದ ಟಿಕೆಟ್ ಆದಾಯ ಹರಿದು ಬರುವ ನಿರೀಕ್ಷೆಯಿದೆ.

ಅಭಿಮಾನಿಗಳಿಂದ ನಟ ಯಶ್ ದೊಡ್ಡ ಮೈದಾನ ಗಾತ್ರದ ಭಾವಚಿತ್ರ ರಚನೆ :

ಕೋಲಾರದ ಮಾಲೂರಿನ ಅಖಿಲ ಕರ್ನಾಟಕ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಂಘದವರು ಕೆಜಿಎಫ್-2 ಬಿಡುಗಡೆ ಹಿನ್ನಲೆಯಲ್ಲಿ ದೊಡ್ಡ ಮೈದಾನದಲ್ಲಿ ಚಿಕ್ಕ ಚಿಕ್ಕ ಮೊಸಾಯಿಕ್ ತುಂಡನ್ನು ಬಳಸಿ ನೆಲದ ಮೇಲೆ ನಟ ಯಶ್ ಬೃಹತ್ ಪೋಟ್ರೈಟ್ ಅನ್ನು ರಚಿಸಿದ್ದಾರೆ. ಇದು ವಿಶ್ವದಲ್ಲೇ ಅತಿದೊಡ್ಡದಾದ ಮೊಸಾಯಿಕ್ ಭಾವಚಿತ್ರವೆಂದು ಟ್ವಿಟರ್ ನಲ್ಲಿ ಅವುಗಳ ಚಿತ್ರವನ್ನು ಶೇರ್ ಮಾಡಿದ್ದಾರೆ.

World's largest books mosaic portrait HD Pics..!!#YashBOSS @TheNameIsYash #KGFChapter2 #KGF2 #KGF2onApr14 pic.twitter.com/h2XNo3cRT8

— Team Yash FC (@TeamYashFC) April 13, 2022

ಮಧ್ಯಾಹ್ನದವರೆಗೂ ಬಹುತೆರೆ ಸಂಸ್ಥೆ ಜೊತೆ ಮಾತುಕತೆ ಮುಂದುವರಿಕೆ :

ಮಲ್ಟಿಪ್ಲೆಕ್ಸ್, ಪಿವಿಆರ್, ಮತ್ತಿತರ ಬಹುತೆರೆಯ ಸಂಸ್ಥೆಗಳೊಂದಿಗೆ ಏ.13ರ ಮಧ್ಯಾಹ್ನ 12 ಗಂಟೆಯವರೆಗೂ ಚಿತ್ರ ಬಿಡುಗಡೆ ಸಂಬಂಧ ನಿರ್ಮಾಪಕ ವಿಜಯ್ ಕಿರಂಗದೂರ್ ಬಿಡುವಿಲ್ಲದೆ ಮಾತುಕತೆ ನಡೆಸುತ್ತಿದ್ದರೂ, ಒಮ್ಮತ ಸಂಬಂಧ ಅಂತಿಮ ತೀರ್ಮಾನಕ್ಕೆ ಬಂದಿರಲಿಲ್ಲ. ನಿರ್ಮಾಪಕರು ಹಾಗೂ ಬಹುತೆರೆ ಸಿನಿಮಾ ಪ್ರದರ್ಶಕರ ನಡುವೆ ಇಬ್ಬರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಮಾತುಕತೆ ನಡೆಯುತ್ತಿದೆ ಎಂದು ಮೂಲಗಳು ಬೆಂಗಳೂರು ವೈರ್ ಗೆ ಹೇಳಿವೆ.

ಈ ಮಧ್ಯೆ ಕೆಜಿಎಫ್-2 ನಿರ್ಮಾಪಕ ವಿಜಯ್ ಕಿರಗಂದೂರ್ ತಮ್ಮ ಟ್ವಿಟರ್ ನಲ್ಲಿ ಚಿತ್ರದ ವಿಡಿಯೋ ತುಣಕುಗಳನ್ನು ಹಂಚಿಕೊಂಡಿದ್ದಾರೆ.

https://twitter.com/VKiragandur/status/1514099070020726786

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

INDIA PATENT FILING | ಅಂತರರಾಷ್ಟ್ರೀಯ ಮಟ್ಟಕ್ಕಿಂತ ಹೆಚ್ಚಳವಾದ ಸ್ವದೇಶಿ ಪೇಟೆಂಟ್ ಅರ್ಜಿ ಸಲ್ಲಿಕೆ ಟ್ರೆಂಡ್ : ಹಾಗಾದ್ರೆ ಭಾರತದಲ್ಲಿ ಪೇಟೆಂಟ್ ಗಾಗಿ ಎಷ್ಟು ಅಪ್ಲಿಕೇಷನ್ ಹಾಕಲಾಗುತ್ತಿದೆ ಗೊತ್ತಾ?

Next Post

#Viral Video | ಶ್ರೀ ಸೀತಾರಾಮ ಕಲ್ಯಾಣ ಕಾರ್ಯಕ್ರಮದಲ್ಲಿ ಹನುಮ ದೇವರ ದರ್ಶನ!? ವಿಡಿಯೋ ವೈರಲ್

Next Post

#Viral Video | ಶ್ರೀ ಸೀತಾರಾಮ ಕಲ್ಯಾಣ ಕಾರ್ಯಕ್ರಮದಲ್ಲಿ ಹನುಮ ದೇವರ ದರ್ಶನ!? ವಿಡಿಯೋ ವೈರಲ್

ಮಳೆಯ ಸಾಂದರ್ಭಿಕ ಚಿತ್ರ

Bangalore Heavy Rain Warning | ರಾಜಧಾನಿಯಲ್ಲಿ ಇಂದು ಮತ್ತು ನಾಳೆ ಸಾಧಾರಣದಿಂದ ಭಾರೀ ಮಳೆ ಸಾಧ್ಯತೆ…! ; ಗಾಳಿಮಳೆ ಸಂದರ್ಭ ಅನಗತ್ಯವಾಗಿ ಸಂಚರಿಸದಂತೆ ತಜ್ಞರ ಎಚ್ಚರಿಕೆ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d