Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

ಸಿಲಿಕಾನ್ ಸಿಟಿಯಲ್ಲಿ ಮಳೆಯ ಆರ್ಭಟ ; ಐತಿಹಾಸಿಕ ಕರಗ ಮಹೋತ್ಸವ ಸಂಭ್ರಮಕ್ಕೆ ವರುಣನ ಅಡ್ಡಿ

ರಾಜಧಾನಿಯಲ್ಲಿ ನಾಲ್ಕನೇ ದಿನವೂ ಮುಂದುವರೆದ ಮಳೆಯ ಅಬ್ಬರ | ಉತ್ತರಹಳ್ಳಿ ಮತ್ತು ದೊರೆಕೆರೆಯಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಮುಖ್ಯ ಆಯುಕ್ತರ ಭೇಟಿ - ಪರಿಶೀಲನೆ

by Bengaluru Wire Desk
April 16, 2022
in Bengaluru Focus, News Wire
Reading Time: 2 mins read
0

ಬೆಂಗಳೂರು, (www.bengaluruwire.com) : ನಗರದ ನಾನಾ ಭಾಗಗಳಲ್ಲಿ ಸಂಜೆಯಿಂದ ವ್ಯಾಪಕವಾಗಿ ಆರಂಭವಾದ ಧಾರಾಕಾರ ಮಳೆ ಒಂದೇ ಸಮನೆ ಬಿಡದೆ ಸುರಿಯುತ್ತಿದೆ. ಹೀಗಾಗಿ ಕಳೆದ ಎರಡು ವರ್ಷಗಳಿಂದಲೂ ಕಳೆಗುಂದಿದ್ದ ಕರಗ ಮಹೋತ್ಸವ ಈ ಬಾರಿ ಅದ್ಧೂರಿ ಆಚರಣೆಗೆ ಅಂತಿಮ ಸಿದ್ಧತೆ ಮಾಡಿಕೊಂಡಿರುವಾಗಲೇ ವರುಣನ ಆರ್ಭಟ ಕರಗದ ಸಂಭ್ರಮಕ್ಕೆ ಅಡ್ಡಿಯುಂಟು ಮಾಡಿದೆ.

ಸಿಲಿಕಾನ್ ಸಿಟಿಯಲ್ಲಿ ಸತತ ನಾಲ್ಕನೇ ದಿನವೂ ಮಳೆಯಾದ ಕಾರಣ ಜನರ ವೀಕೆಂಡ್ ಸುತ್ತಾಟಕ್ಕೆ ಬ್ರೇಕ್ ಬಿದ್ದಂತಾಯಿತು. ಮಳೆಯಿಂದಾಗಿ ಟ್ರಾಫಿಕ್ ನಲ್ಲಿ ಸಿಲುಕಿ ವಾಹನ ಸವಾರರು ಪೇಚಾಡಿದರು. ಹಲವು ರಸ್ತೆಗಳಲ್ಲಿ, ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಸಾರ್ವಜನಿಕರು ತೊಂದರೆ ಅನುಭವಿಸಿದರು.

ನಗರದ ಟ್ರಿನಿಟಿ ಸರ್ಕಲ್, ಎಮ್.ಜಿ ರಸ್ತೆ, ಮೆಜೆಸ್ಟಿಕ್, ಗಾಂಧಿನಗರ, ಸಂಪಂಗಿರಾಮನಗರ, ಲಾಲ್ ಭಾಗ್, ಜಯನಗರ, ಬಸವೇಶ್ವರ ವೃತ್ತ, ಶಿವಾನಂದ ಸರ್ಕಲ್, ವಸಂತ ನಗರ, ರಾಜರಾಜೇಶ್ವರಿ ನಗರ, ನಾಗರಬಾವಿ, ಚಂದ್ರಲೇಔಟ್, ಕೆಂಗೇರಿ, ಉಲ್ಲಾಳ, ಸುತ್ತಮುತ್ತ ಧಾರಾಕಾರ ಗಾಳಿ ಮಳೆ ಸುರಿಯುತ್ತಿತ್ತು.

ರಾಜ್ಯದಲ್ಲಿ ಮುಂದಿನ ಎರಡು ದಿನವೂ ಗುಡುಗು ಹಾಗೂ ಸಿಡಿಲು ಸಹಿತ ಮೂಗಾಂರು ಪೂರ್ವ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಐತಿಹಾಸಿಕ ಕರಗ‌ ಮಹೋತ್ಸವದ ಸಂಭ್ರಮಕ್ಕೆ ಮಳೆ ಕಾಟ :

ಇಂದು ರಾತ್ರಿ 12.30ಕ್ಕೆ ಶ್ರೀ ಧರ್ಮರಾಯ ಸ್ವಾಮಿ ರಥೋತ್ಸವ ಹಾಗೂ ದ್ರೌಪದಿ ದೇವಿಯ ಕರಗ ಶಕ್ತ್ಯೋತ್ಸವಕ್ಕೆ ಚಾಲನೆ ದೊರೆಯಲಿದೆ. ರಾತ್ರಿ 8 ಗಂಟೆಯಿಂದ ಮಳೆಯು ಕೊಂಚ ಕಡಿಮೆಯಾದ ಮಧ್ಯೆಯೇ ವಿವಿಧ ಪೂಜೆ ಕಾರ್ಯಕ್ರಮ ಆರಂಭವಾಯಿತು. ಆದರೂ ಮಳೆ ಸಂಪೂರ್ಣವಾಗಿ ನಿಂತಿರಲಿಲ್ಲ.

ಶನಿವಾರ ರಾತ್ರಿ 12 ರಿಂದ 1.30 ರ ಒಳಗೆ ಕರಗ ದೇವಾಲಯದಿಂದ ಹೂವಿನ ಕರಗ ಹೊರಗೆ ಬರಲಿದೆ. ಕರಗ ಸಾಗುವ ದಾರಿಯುದ್ದಕ್ಕೂ ಬಿಬಿಎಂಪಿ ಈಗಾಗಲೇ ರಸ್ತೆಯನ್ನು ಸ್ವಚ್ಚಗೊಳಿಸಿ, ವಿದ್ಯುತ್ ದೀಪಗಳಿಂದ ಅಲಂಕಾರ‌ಗೊಳಿಸಿತ್ತು. ಮಳೆಯಿಂದಾಗಿ ಕರಗ ಸಾಗುವ ಮಾರ್ಗ ಸ್ವಚ್ಛವಾಗಿದ್ದರೂ ಅಲ್ಲಲ್ಲಿ ರಸ್ತೆ ಮೇಲೆ ಮಳೆನೀರಿನಿಂದ ಹಲವು ವಸ್ತುಗಳು ತೇಲಿ ಬಂದಿದ್ದವು.

ಹತ್ತು ಬಾರಿ ಕರಗ ಹೊತ್ತಿದ್ದ ಜ್ಞಾನೇಂದ್ರ ಈ ಬಾರಿಯೂ ಕರಗ ಹೊರಲಿದ್ದು, ಈ ಬಾರಿಯದು ಸೇರಿದರೆ 11ನೆಯ ಸಲವಾಗುತ್ತದೆ. ನಾಳೆ ಬೆಳಿಗ್ಗೆ 6 ರಿಂದ 7 ಗಂಟೆಯೊಳಗೆ ಕರಗ ಧರ್ಮರಾಯಸ್ವಾಮಿ ದೇವಸ್ಥಾನ ತಲುಪಲಿದೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ದೇವಸ್ಥಾನದ ಸುತ್ತ ಮುತ್ತ ಹಾಗೂ ಕರಗ ಸಾಗುವ ಹಾದಿ ಉದ್ದಕ್ಕೂ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಈಗಾಗಲೇ ದೇವಸ್ಥಾನದಲ್ಲಿ ಸಾವಿರಾರು ಭಕ್ತರು ದೇವರ ದರ್ಶನ ಪಡೆದುಕೊಳ್ಳುತ್ತಿದ್ದಾರೆ.

ಇಂದು ನಡೆಯಲಿರುವ ಕರಗ ಉತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗಿ ಸಾಧ್ಯತೆಯನ್ನು ನಿರೀಕ್ಷಿಸಲಾಗಿತ್ತು. ಆದರೆ ಭಾರೀ‌
ಮಳೆಯಿಂದ ಕರಗ ಮಹೋತ್ಸವದಲ್ಲಿ ಪಾಲ್ಗೊಳ್ಳುವವರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಕಳೆದ ಎರಡು ವರ್ಷದಿಂದ ಕರೋನಾ ಕಾರಣಕ್ಕೆ ಕಳೆಗುಂದಿದ್ದ ಕರಗ ಶಕ್ತ್ಯೋತ್ಸವವನ್ನು ಈ ಬಾರಿ ಅದ್ದೂರಿ ಕರಗಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ವರುಣನ ಆರ್ಭಟದಿಂದ ಕರಗದ ಸಂಭ್ರಮಕ್ಕೆ ಅಡ್ಡಿಯಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತರಿಂದ ರಾಜಕಾಲುವೆ ಪರಿಶೀಲನೆ :

ಬೆಂಗಳೂರು ದಕ್ಷಿಣ ಕ್ಷೇತ್ರದ ಉತ್ತರಹಳ್ಳಿ ಮತ್ತು ದೊರೆಕೆರೆಯಲ್ಲಿ ಮಳೆ ಪೀಡಿತ ಪ್ರದೇಶಗಳನ್ನು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಉತ್ತರಹಳ್ಳಿ ಹೇಮಾವತಿ ರಸ್ತೆ, ಲಕ್ಷಯ್ಯ ಲೇಔಟ್ ಗೆ ರಾಜಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಸುಮಾರು 150 ಮನೆಗಳಿಗೆ ನೀರು ನುಗ್ಗಿತ್ತು. ಈ ಸಂಬಂಧ ರಾಜಕಾಲುವೆಯನ್ನು ಪರಿಶೀಲನೆ ನಡೆಸಿ ಕೂಡಲೆ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಬೇಕು. ನೀರು ಸರಾಗವಾಗಿ ಹರಿದು ಹೋಗುವಂತೆ ಹೂಳನ್ನು ತೆರವುಗೊಳಿಸಬೇಕು. ಜೊತೆಗೆ ರಾಜಕಾಲುವೆಯ ಕಲ್ವರ್ಟ್ ಅನ್ನು ಅಭಿವೃದ್ಧಿಪಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಯಾವ್ಯಾವ ಮನೆಗೆ ನೀರು ನುಗ್ಗಿದೆ ಎಂಬುದನ್ನು ಅಧಿಕಾರಿಗಳಿಂದ ಸಮೀಕ್ಷೆ ನಡೆಸಿ ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ವಲಯ ಜಂಟಿ ಆಯುಕ್ತರಾದ ರಾಮಕೃಷ್ಣ, ವಲಯ ಮುಖ್ಯ ಇಂಜಿನಿಯರ್ ಶಶಿಕುಮಾರ್, ಬೃಹತ್ ನೀರುಗಾಲುವೆ ವಿಭಾಗದ ಮುಖ್ಯ ಇಂಜಿನಿಯರ್ ಸುಗುಣಾ, ಕೆರೆಗಳ ವಿಭಾಗದ ಮುಖ್ಯ ಇಂಜಿನಿಯರ್ ವಿಜಯ್ ಕುಮಾರ್ ಹರಿದಾಸ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BBMP Office Fire Accident | ಬಿಬಿಎಂಪಿ ಚೀಫ್ ಎಂಜಿನಿಯರ್ ಕಚೇರಿಯಲ್ಲಿ ಅಗ್ನಿ ಆಕಸ್ಮಿಕ ; ಕಚೇರಿ ಕಡತಗಳು, ಪೀಠೋಪಕರಣ ಭಸ್ಮ

Next Post

Online Survey Maps | ವಿವಿಧ ರೀತಿಯ ನಕ್ಷೆಗಾಗಿ ಇನ್ನು ಸರ್ವೆ ಕಚೇರಿಗಳಿಗೆ ಅಲೆದಾಡಬೇಕಿಲ್ಲ ! ಎಲ್ಲವೂ ಆನ್ ಲೈನ್ ನಲ್ಲಿ ಲಭ್ಯ

Next Post

Online Survey Maps | ವಿವಿಧ ರೀತಿಯ ನಕ್ಷೆಗಾಗಿ ಇನ್ನು ಸರ್ವೆ ಕಚೇರಿಗಳಿಗೆ ಅಲೆದಾಡಬೇಕಿಲ್ಲ ! ಎಲ್ಲವೂ ಆನ್ ಲೈನ್ ನಲ್ಲಿ ಲಭ್ಯ

ಸಾಂದರ್ಭಿಕ ಚಿತ್ರ

Crypto Currency Fraud | ಕ್ರಿಪ್ಟೋ ಕರೆನ್ಸಿ ಮೋಸದ ಜಾಲಕ್ಕೆ ಸಿಲುಕುವಿರಿ ಹುಷಾರ್...!  ಬೆಂಗಳೂರು ಸೈಬರ್ ಕ್ರೈಮ್ ಪೊಲೀಸರಿಂದ ನಾಲ್ವರ ಬಂಧನ – 17 ಕೋಟಿ ರೂ. ವಶ

Please login to join discussion

Like Us on Facebook

Follow Us on Twitter

Recent News

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026

PIB FACT CHECK | ​ಎಚ್ಚರ! ನಿರ್ಮಲಾ ಸೀತಾರಾಮನ್ ಅವರ AI ನಕಲಿ ವಿಡಿಯೋ ಬಳಸಿ ಹೂಡಿಕೆ ವಂಚನೆ

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group