Tuesday, August 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

    ಡಿ.ಕೆ. ಶಿವಕುಮಾರ್ ಸಂಪುಟ ವಿಸ್ತರಣೆ: ಇಂದು 20 ನೂತನ ಸಚಿವರ ಪ್ರಮಾಣ ವಚನ, ಇಲ್ಲಿದೆ ಎಐಸಿಸಿ ಅಧಿಕೃತ ಪಟ್ಟಿ

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

  • Bengaluru Focus

    ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

    GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

    ಗಾಂಧಿನಗರ: ‘ಬೆಂಗಳೂರು ಪೇಟೆ’ ಪ್ರದೇಶದಲ್ಲಿ ಅಗ್ನಿ ಅವಘಡ ನಿಯಂತ್ರಣಕ್ಕೆ ನಗರದ ಪ್ರಥಮ ‘ಫೈರ್ ಹೈಡ್ರೆಂಟ್’ ವ್ಯವಸ್ಥೆ ಲೋಕಾರ್ಪಣೆ

    ಮತದಾರರ ಪಟ್ಟಿ ಪರಿಶೀಲನೆ ಸಾಂದರ್ಭಿಕ ಚಿತ್ರ

    GBA News | ಮತದಾರರ ಪಟ್ಟಿ ಪರಿಷ್ಕರಣೆ: ಆಗಸ್ಟ್ 8 ಕಡೇ ದಿನ, ಸಮಸ್ಯೆ ಇದ್ದರೆ 1950ಗೆ ಕರೆ ಮಾಡಿ

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Manual Scavengers ID Card | ಬಿಬಿಎಂಪಿ ಮುಖ್ಯ ಆಯುಕ್ತರಿಂದ ಸ್ವಚ್ಛತಾ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಣೆ

ಬೆಂಗಳೂರಿನಲ್ಲಿ 2013ರ ಕಾಯ್ದೆ ಪೂರ್ವದಲ್ಲಿ ಮಲಹೊರುವ ಪದ್ಧತಿ ಅನುಸರಿಸುತ್ತಿದ್ದ ಕಾರ್ಮಿಕರು, ಪುನರ್ವಸತಿ ಮತ್ತು ಕಲ್ಯಾಣ ಕಾರ್ಯಕ್ರಮಗಳ ಸೌಲಭ್ಯ ಪಡೆಯಲು ಈ ಗುರುತಿನ ಚೀಟಿ ಅನುಕೂಲವಾಗಲಿದೆ

by Bengaluru Wire Desk
April 21, 2022
in Bengaluru Focus
Reading Time: 1 min read
0
ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ನೈರ್ಮಲ್ಯ ಕಾರ್ಮಿಕರಿಗೆ ಗುರುವಾರ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ನೈರ್ಮಲ್ಯ ಕಾರ್ಮಿಕರಿಗೆ ಗುರುವಾರ ಸಾಂಕೇತಿಕವಾಗಿ ಗುರುತಿನ ಚೀಟಿ ವಿತರಿಸಿದರು.

ಬೆಂಗಳೂರು, (www.bengaluruwire.com) : ಕೇಂದ್ರ ಸರ್ಕಾರದ ಸೂಚನೆಯಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಮಲದ ಗುಂಡಿಗಳನ್ನು ಸ್ವಚ್ಛತೆ ಮಾಡುತ್ತಿದ್ದ ಸ್ವಚ್ಛತಾ ಕಾರ್ಮಿಕರನ್ನು ಗುರುತಿಸಿ ಸೌಲಭ್ಯ ಕಲ್ಪಿಸಲಾಗುತ್ತಿದ್ದು, ಇಂದು ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರು ಸಾಂಕೇತಿಕವಾಗಿ 8 ಮಂದಿಗೆ ಗುರುತಿನ ಚೀಟಿ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

2013ನೇ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಈ ಹಿಂದೆ ಬರಿಗೈನಿಂದ ಮಲದ ಗುಂಡಿ ಸ್ವಚ್ಛಗೊಳಿಸುತ್ತಿದ್ದ 201 ಜನರನ್ನು ಸಮೀಕ್ಷೆಯ ಮುಖಾಂತರ ಗುರುತಿಸಿತ್ತು. ಅಂತಹ ಸ್ವಚ್ಛತಾ ಕಾರ್ಮಿಕರನ್ನು ಗುರ್ತಿಸಿದ 10 ವರ್ಷಗಳ ನಂತರ ಇದೀಗ ಅವರಿಗೆ ಗುರುತಿನ ಚೀಟಿ ನೀಡಲಾಗುತ್ತಿದೆ. ಈ ಹಿಂದೆ ಮಲಹೊರುವ ಪದ್ಧತಿ ರೂಢಿಯಲ್ಲಿದ್ದು, ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಲಹೊರುವ ಕಾರ್ಮಿಕರ (Manual Scavengers) ನೇಮಕಾತಿ ನಿಷೇಧ ಮತ್ತು ಪುನರ್ವಸತಿ ಅಧಿನಿಯಮ 2013ರ ಕಾಯ್ದೆ ಹಾಗೂ ನಿಯಮಗಳನ್ನು ಜಾರಿಗೆ ತಂದಿತ್ತು.

ಹೀಗೆ ಗುರ್ತಿಸಿದ ಸಫಾಯಿ ಕರ್ಮಚಾರಿಗಳಿಗೆ ಕೇಂದ್ರ ಸರ್ಕಾರದಿಂದ ಒಂದು ಬಾರಿ ಧನ ಸಹಾಯ (One time Cash Assistance – OTCA) ವಾದ ರೂ. 40,000 ರೂ. ಗಳನ್ನು 201 ಜನರ ಪೈಕಿ ಕೇವಲ 185 ಮಂದಿಗೆ ಮಾತ್ರ ಪಾವತಿಸಲಾಗಿದೆ. ಆದರೆ ಸಂಪೂರ್ಣವಾಗಿ ಎಲ್ಲರಿಗೂ ಈತನಕ ಪಾವತಿಯಾಗಿಲ್ಲ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚನೆಯ ಮೇರೆಗೆ ಸಫಾಯಿ ಕರ್ಮಚಾರಿಗಳ ಕಲ್ಯಾಣಕ್ಕಾಗಿ ಪಾಲಿಕೆಯ ಕಲ್ಯಾಣ ಇಲಾಖೆಯು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಕೇಂದ್ರ, ರಾಜ್ಯ ಸರ್ಕಾರ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ವಿವಿಧ ಪುನರ್ವಸತಿ ಯೋಜನೆಯಡಿ ಸೌಲಭ್ಯ ಪಡೆಯಲು ಹಾಗೂ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳನ್ನು ಆದ್ಯತೆ ಮೇಲೆ ಪಡೆಯಲು ಈ ಗುರುತಿನ ಚೀಟಿ ಅವಶ್ಯವಾಗಿದೆ. ಆದಷ್ಟು ಶೀಘ್ರವಾಗಿ ಪಾಲಿಕೆಯ 8 ವಲಯಗಳಲ್ಲಿರ ಈ ಹಿಂದೆ ಕೈಯಿಂದ ಮಲದ ಗುಂಡಿ ಸ್ವಚ್ಛ ಮಾಡುತ್ತಿದ್ದ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸುವುದಾಗಿ ಪಾಲಿಕೆ ಅಧಿಕಾರಿಗಳು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ಗುರುತಿನ ಚೀಟಿಯಿಂದಾಗುವ ಅನುಕೂಲಗಳೇನು ?

ಗುರುತಿನಚೀಟಿ ಪಡೆದ ಕಾಯ್ದೆ ಪೂರ್ವ ನೈರ್ಮಲ್ಯ ಕಾರ್ಮಿಕರಾಗಿದ್ದವರಿಗೆ ಪಾಲಿಕೆಯ ಎಲ್ಲಾ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ವಿದ್ಯಾರ್ಥಿ ಶುಲ್ಕ ಮರುಪಾವತಿ, ಒಂಟಿ ಮನೆ ಸೌಲಭ್ಯ, ಕೌಶಲ್ಯತರಬೇತಿ, ಸ್ವಯಂ ಉದ್ಯೋಗ ಸೇರಿದಂತೆ ಇನ್ನಿತರೆ ಕಲ್ಯಾಣ ಕಾರ್ಯಕ್ರಮದ ಸೌಲಭ್ಯಗಳನ್ನು ಆದ್ಯತೆ ಮೇಲೆ ಪಡೆಯಲು ಅರ್ಹರಾಗಿರುತ್ತಾರೆ. ಸೌಲಭ್ಯಗಳನ್ನು ಪಡೆಯುವುದರ ಮೂಲಕ ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದು ಸಮಾಜದಲ್ಲಿ ಗೌರವಯುತವಾದ ಬದುಕನ್ನು ಕಟ್ಟಿಕೊಳ್ಳಬೇಕೆಂಬುದು ಪಾಲಿಕೆಯ ಆಶಯವಾಗಿದೆ. ಇದನ್ನು ಈಡೇರಿಸುವ ನಿಟ್ಟಿನಲ್ಲಿ ಪಾಲಿಕೆಯು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

2018-19 ಮರು ಸಮೀಕ್ಷೆಯಲ್ಲಿನ ಫಲಾನುಭವಿಗಳಿಗೆ ಪರಿಶೀಲನೆ ಬಳಿಕ ಸೌಲಭ್ಯ :

2018-19ನೇ ಸಾಲಿನಲ್ಲಿ ಸಂಘ ಸಂಸ್ಥೆಗಳು ಅಥವಾ ಇನ್ನಿತರೆ ಸಂಘಗಳಿಂದ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗಳು ಗುರುತಿಸದೇ ಬಿಟ್ಟು ಹೋಗಿರುವುದು ತಿಳಿದು ಬಂದಿರುತ್ತದೆ. ಆಗ ಪುನಃ ಸಮೀಕ್ಷೆ ನಡೆಸಿದಾಗ 1,424 ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಗಳನ್ನು ಗುರುತಿಸಿ  ಸ್ವಚ್ಛತಾ ಅಭಿಯಾನ ಮೊಬೈಲ್ ಆ್ಯಪ್‌ನಲ್ಲಿ ಅಪ್‌ಲೋಡ್ ಮಾಡಲಾಗಿತ್ತು. ಆದರೆ ಆ ಸಮೀಕ್ಷೆಯಲ್ಲಿ ಮಲ ಹೊರುವ ಪದ್ಧತಿಯಲ್ಲಿಲ್ಲದ, ಒಳಚರಂಡಿ ಸ್ವಚ್ಛತೆ ಮಾಡುವವರನ್ನೂ ಸೇರಿಸಲಾಗಿತ್ತು. ಹೀಗಾಗಿ ಈ ಕುರಿತಂತೆ ಪುನಃ ಪರಿಶೀಲಿಸಿ ಮನೆಗಳಲ್ಲಿನ ಶೌಚಗುಂಡಿಗಳನ್ನು ಕೈಯಿಂದ ಸ್ವಚ್ಛ ಮಾಡುತ್ತಿದ್ದ ನೈಜ ಕಾರ್ಮಿಕರನ್ನು ಗುರುತಿಸಿ ಅಂತಹವರ ಪಟ್ಟಿಯನ್ನು ಮರು ಸಲ್ಲಿಸುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ಆ ಹಿನ್ನಲೆಯಲ್ಲಿ ಬಿಬಿಎಂಪಿ ಕಲ್ಯಾಣ ಇಲಾಖೆ ಹಿರಿಯ ಅಧಿಕಾರಿಗಳು 8 ವಲಯಗಳ ಜಂಟಿ ಆಯುಕ್ತರಿಗೆ ಒಂದು ತಿಂಗಳ ಹಿಂದೆಯೇ ಈ ಬಗ್ಗೆ ಸೂಚನೆ ನೀಡಿದ್ದಾರೆ.

ಇಂತಹ ಪಟ್ಟಿಯನ್ನು ಮರು ಸಲ್ಲಿಕೆ ಮಾಡಿದ ಬಳಿಕ ಕೇಂದ್ರ ಸರ್ಕಾರದಿಂದ ಅನುಮೋದನೆ ನೀಡಿದ ನಂತರ ನಿಯಮಾನುಸಾರ ಅಂತಹ ಸ್ವಚ್ಛತಾ ಕಾರ್ಮಿಕರಿಗೆ ಪುನರ್ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಪಾಲಿಕೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುವಾರ ಸಾಂಕೇತಿಕವಾಗಿ ಈ ಹಿಂದೆ ಸ್ವಚ್ಛತಾ ಕಾರ್ಮಿಕರಾಗಿದ್ದ ಮುನಿಕೆಂಚಪ್ಪ, ಕೃಷ್ಣಪ್ಪ, ಮುನಿಸ್ವಾಮಪ್ಪ, ಮಹಾಲಕ್ಷ್ಮಯ್ಯ, ಅಯ್ಯಣ್ಣ,  ಹನುಮಂತಪ್ಪ, ವೆಂಕಟರಮಣ ಮತ್ತು ನರಸಿಂಹ ರವರುಗಳಿಗೆ ಗುರುತಿನಚೀಟಿ ವಿತರಿಸಲಾಯಿತು. ಈ ವೇಳೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಬಿ.ಶರತ್, ಉಪ ಆಯುಕ್ತರಾದ ಮುರಳೀಧರ್, ಸಹಾಯಕ ಆಯುಕ್ತರಾದ ರಾಜೇಶ್ವರಿ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Skill On Wheel | ಗ್ರಾಮೀಣ ಭಾಗದ ಯುವ ಜನತೆಗೆ ಬಂಪರ್…! ಕೌಶಲ್ಯ ತರಬೇತಿ ನೀಡಲು ನಿಮ್ಮ‌ ಮನೆ ಬಳಿ ಬರಲಿದೆ ಕೌಶಲ್ಯ ರಥ

Next Post

BBMP Property Tax New System | ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ವಲಯ ವರ್ಗೀಕರಣ ವಂಚನೆ ತಡೆಗೆ ಹೈಟೆಕ್ ಬ್ರೇಕ್…!

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Property Tax New System | ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ವಲಯ ವರ್ಗೀಕರಣ ವಂಚನೆ ತಡೆಗೆ ಹೈಟೆಕ್ ಬ್ರೇಕ್...!

ಕ್ರೆಡಿಟ್ ಕಾರ್ಡ್ ಗಳ ಸಾಂದರ್ಭಿಕ ಚಿತ್ರ

RBI Credit Card Issue Direction | ಮನವಿ ಮಾಡದಿದ್ದರೂ ಬ್ಯಾಂಕ್ ಗಳು ಕ್ರೆಡಿಟ್ ಕಾರ್ಡ್ ಗಾಗಿ ನಿಮಗೆ ಸತಾಯಿಸ್ತಿದಿಯಾ? : ಅನಗತ್ಯ ಕ್ರೆಡಿಟ್ ಕಾರ್ಡ್ ವಿತರಣೆಗೆ ಆರ್ ಬಿಐ ನ ನಿರ್ಬಂಧ ಏನು ಗೊತ್ತಾ? ಈ ಸುದ್ದಿ ಓದಿ

Please login to join discussion

Like Us on Facebook

Follow Us on Twitter

Recent News

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸರ್ಕಾರಕ್ಕೆ 1 ಕೋಟಿ ರೂ. ಡಿವಿಡೆಂಡ್ ನೀಡಿದ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್

August 4, 2026

ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿ: ಪರಿಶೀಲನೆಗೆ ಜಿಲ್ಲಾವಾರು ಸಚಿವರ ನೇಮಕ

August 4, 2026

GBA News | ಶಾಂತಿನಗರ ಇಇ ಕಚೇರಿಯಲ್ಲಿ 9 ಕೋಟಿ ರೂ.ಗಳ ಕಂಪ್ಯೂಟರ್ ಬಿಲ್ ಹಗರಣ: ಲೋಕಾಯುಕ್ತಕ್ಕೆ ದೂರು

August 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group