Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result
Bengaluru Wire
No Result
View All Result
Home Bengaluru Focus

Vidhyarthi Bhavan Play | ಸವಿ ಸವಿ ನೆನಪು ಸಾವಿರ ನೆನಪು….! ಮಸಾಲೆದೋಸೆ ಸವಿರುಚಿಯ “ವಿದ್ಯಾರ್ಥಿ ಭವನ” ದ ಕಥೆಯೀಗ ರಂಗಪ್ರಯೋಗಕ್ಕೆ

ನೂರಾರು ಅವಿಸ್ಮರಣೀಯ ಅನುಭವಗಳಿಗೆ ಜೀವವಿತ್ತ ವಿದ್ಯಾರ್ಥಿ ಭವನ ಹೋಟೆಲ್, 8 ದಶಕಗಳಲ್ಲಿ ನಾಡಿನ ಲಕ್ಷಾಂತರ ಜನರ ನೆನಪಿನಲ್ಲಿ ಮಾಸದ ಅನುಭವಗಳನ್ನು ಶಾಶ್ವತವಾಗಿ ಉಳಿಸಿದೆ.

by Bengaluru Wire Desk
April 23, 2022
in Bengaluru Focus, Public interest
Reading Time: 2 mins read
0

ಬೆಂಗಳೂರು, (www.bengaluruwire.com) : ರಾಜಧಾನಿಯ ಸಾಂಸ್ಕೃತಿಕ ಸೊಗಡು ಹೊಂದಿದ ಬಸವನಗುಡಿ ಸೆರಗಿನಲ್ಲಿರುವ ಸಾವಿರಾರು ಬೆಂಗಳೂರಿಗರ ನಾಲಿಗೆಯ ಸವಿಗೆ ದೋಸೆ ರುಚಿ ಹತ್ತಿಸಿದ ‘ವಿದ್ಯಾರ್ಥಿ ಭವನ’ ಈಗ ಹೋಟೆಲ್ ಉದ್ಯಮದಿಂದ ರಂಗಭೂಮಿ ಕ್ಷೇತ್ರಕ್ಕೂ ಹೆಜ್ಜಿ ಇರಿಸುತ್ತಿದೆ. ಇದೇ ಮೇ 6ರಿಂದ 8ನೇ ತಾರೀಖಿನವರೆಗೆ ಮಲ್ಲೇಶ್ವರದ  ಚೌಡಯ್ಯ ಸ್ಮಾರಕ ಭವನದಲ್ಲಿ ಅರ್ಜುನ್ ನಿರ್ದೇಶನ ಹಾಗೂ ರಾಜೇಂದ್ರ ಕಾರಂತ್ ರಚನೆಯ ‘ವಿದ್ಯಾರ್ಥಿ ಭವನ’ ನಾಟಕ ಪ್ರದರ್ಶನ ಕಾಣಲಿದೆ.

ವಿದ್ಯಾರ್ಥಿ ಭವನ ನಾಟಕ ಪ್ರದರ್ಶನ ಕುರಿತ ಪೋಸ್ಟರ್ ವಿದ್ಯಾರ್ಥಿ ಭವನ ಹೋಟೆಲ್ ಮುಂಭಾಗ ಅನಾವರಣವಾದ ಕ್ಷಣ

ಈ ಕುರಿತಂತೆ ವಿದ್ಯಾರ್ಥಿ ಭವನದ ವ್ಯವಸ್ಥಾಪಕ ಅರುಣ್ ಅಡಿಗ ಬೆಂಗಳೂರು ವೈರ್ ಗೆ ಮಾಹಿತಿ ನೀಡಿದ್ದು, ‘ವಿದ್ಯಾರ್ಥಿ ಭವನ’ ಹೋಟೆಲ್ ಹೇಗೆ ಬಸವನಗುಡಿಯಲ್ಲಿ ಬೆಂಗಳೂರಿನ ಒಂದು ಸಂಸ್ಕೃತಿಯ ಭಾಗವಾಗಿ ಬೆಳವಣಿಗೆ ಹೊಂದಿ, 8 ದಶಕಗಳಲ್ಲಿ ಲಕ್ಷಾಂತರ ಜನರ ಅವಿಸ್ಮರಣೀಯ ನೆನಪುಗಳಿಗೆ ಸಾಕ್ಷಿಯಾಗಿತ್ತು. ಇಂತಹ ಸವಿ ಅನುಭವಗಳಿಗೆ ಜೀವಂತ ಉದಾಹರಣೆಯಾಗಿ ಉಳಿದ ‘ವಿದ್ಯಾರ್ಥಿ ಭವನ’ ತನ್ನಲ್ಲಿ ಸ್ವಾದಿಷ್ಟ ದೋಸೆಯು ನಾಡಿನ, ದೇಶ- ವಿದೇಶದ ಮನೆ-ಮನಗಳಲ್ಲಿ ಶಾಶ್ವತ ಸ್ಥಾನ ಪಡೆದು ಬೆಳೆದು ಬಂದ ಕಥೆಯನ್ನು ‘ವಿದ್ಯಾರ್ಥಿ ಭವನ’ ನಾಟಕದಲ್ಲಿ ಅನಾವರಣಗೊಳ್ಳಲಿದೆ ಎಂದು ವಿವರಿಸಿದರು.

ಇತ್ತೀಚೆಗೆ ಸಾಮಾಜಿಕ ಜಾಲ ತಾಣದಲ್ಲಿ ಮಲ್ಲೇಶ್ವರದಲ್ಲಿ ವಿದ್ಯಾರ್ಥಿ ಭವನ ಎಂದು ಪೋಸ್ಟರ್ ಹಾಕಿದ್ದ ಬಗ್ಗೆ ಸ್ಪಷ್ಟನೆ ನೀಡಿದ ಅರುಣ್ ಅಡಿಗ, ವಿದ್ಯಾರ್ಥಿ ಭವನ ಹೋಟೆಲ್ ಗೆ ಸಾವಿರಾರು ಗ್ರಾಹಕರಿದ್ದಾರೆ ಹಾಗೂ ಅಭಿಮಾನಿಗಳು ಇದ್ದಾರೆ. ಈ ಕುರಿತಂತೆ ಜನರ ಆಸಕ್ತಿ ಕೆರಳಿಸುವ ನಿಟ್ಟಿನಲ್ಲಿ ‘ಮಲ್ಲೇಶ್ವರದಲ್ಲಿ ವಿದ್ಯಾರ್ಥಿ ಭವನ’ ಎಂದು ಪೋಸ್ಟರ್ ಪೋಸ್ಟ್ ಮಾಡಲಾಗಿತ್ತು. ವಿದ್ಯಾರ್ಥಿ ಭವನ ಹೋಟೆಲ್ ಎಂಟು ದಶಕಗಳಲ್ಲಿ ನಾಡಿನ ಜನರಿಗೆ ಗುಣಮಟ್ಟದ ಆಹಾರವನ್ನು ನೀಡುತ್ತಾ ತನ್ನ ಕಾಯಕವನ್ನು ಮುಂದುವರೆಸಿದೆ.

ಆದರೆ ವಿದ್ಯಾರ್ಥಿ ಭವನ ಹೋಟೆಲ್ ಮಲ್ಲೇಶ್ವರಕ್ಕೆ ಬರುತ್ತಿಲ್ಲ. ಬದಲಿಗೆ ಹೋಟೆಲ್ ಉದ್ಯಮದ ಜೊತೆಗೆ ರಂಗಭೂಮಿಯ ಸಾಂಸ್ಕೃತಿಕ ಚಟುವಟಿಕೆಗಳಿಗೂ ಒತ್ತು ನೀಡಲು ಹೊರಟಿದೆ. ಅದರ ಭಾಗವಾಗಿ ಬೆಂಗಳೂರು ಥಿಯೇಟರ್ ಫೌಂಡೇಶನ್ ನೊಂದಿಗೆ ಸೇರಿ ‘ವಿದ್ಯಾರ್ಥಿ ಭವನ’ ನಾಟಕವನ್ನು ಪ್ರದರ್ಶನ ನೀಡುತ್ತಿದ್ದೇವೆ.

ರಾಜ್ಯದ ಹಿರಿಯ ಕಿರಿಯ ರಾಜಕೀಯ ನಾಯಕರು, ಸಿನಿಮಾ ಕಲಾವಿದರು, ಉದ್ಯಮಿಗಳು, ಅದೆಷ್ಟೋ ಗಣ್ಯರು ವಿದ್ಯಾರ್ಥಿ ಭವನ ಹೋಟೆಲ್ ಗೆ ಬಂದು ಮಸಾಲೆ ದೋಸೆ, ಒಂದು ಲೋಟ ಕಾಫಿ ಕುಡಿದು ಇಲ್ಲಿಯ ಸವಿಗೆ ಬೆರಗಾಗಿ ಹೋಗಿದ್ದಾರೆ. ಲೆಕ್ಕವಿಲ್ಲದಷ್ಟು ಜನರ ಸ್ನೇಹ ಸಂಬಂಧ ಗಟ್ಟಿಗೊಳ್ಳಲು, ನೆನಪಿನ ಜಾತ್ರೆಯಲ್ಲೊಂದು ತನ್ನದೇ ಸ್ಥಾನ ಪಡೆದು ಕೊಳ್ಳಲು ಕಾರಣವಾದ ವಿದ್ಯಾರ್ಥಿ ಭವನ ಹೋಟೆಲ್ ಕುರಿತ ಕಥೆಯು ನಾಟಕದಲ್ಲಿ ಪ್ರದರ್ಶನಗೊಳ್ಳಲಿದೆ. ಇದನ್ನು ಮತ್ತೊಂದು ಪೋಸ್ಟ್ ನಲ್ಲಿ ಪ್ರಕಟಿಸುವ ಉದ್ದೇಶ ಹೊಂದಿದ್ದೆವು. ಆದರೆ ಅದಕ್ಕೆ ಮುಂಚೆಯೇ ಮಲ್ಲೇಶ್ವರದಲ್ಲೂ ವಿದ್ಯಾರ್ಥಿ ಭವನ ಹೋಟೆಲ್ ಬರಲಿದೆ ಎಂಬ ಸುದ್ದಿ ಹರದಾಡಿದೆ. ಇದು ಕೇವಲ ಗಾಳಿಸುದ್ದಿಯಷ್ಟೆ. ರಂಗಭೂಮಿ ಕ್ಷೇತ್ರಕ್ಕೆ ಕಾಲಿಟ್ಟು ಬೆಂಗಳೂರಿನ ಸಾಂಸ್ಕೃತಿಕ ಲೋಕಕ್ಕೆ ತನ್ನದೇ ಕೊಡುಗೆ ನೀಡಲು ನಾವು ತುದಿಗಾಲಲ್ಲಿ ನಿಂತಿದ್ದೇವೆ ಎನ್ನುತ್ತಾರೆ ಅರುಣ್ ಅಡಿಗ.

ವಿದ್ಯಾರ್ಥಿ ಭವನ ಹೋಟೆಲ್ ಮಸಾಲೆದೋಸೆ

ವಿದ್ಯಾರ್ಥಿ ಭವನ ನಾಟಕದಲ್ಲಿ ಯಾರೆಲ್ಲಾ ಕಲಾವಿದರಿದ್ದಾರೆ? ಎಲ್ಲಿ ಟೆಕೆಟ್ ಲಭ್ಯವಿದೆ ?

ನಿರ್ದೇಶಕ ಅರ್ಜುನ್ ಕಬ್ಬಿಣ, ಸಿಹಿಕಹಿ ಚಂದ್ರು, ವೀಣಾ ಸುಂದರ್ ಮತ್ತಿತರರು ‘ವಿದ್ಯಾರ್ಥಿ ಭವನ’  ನಾಟಕದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಲಿದ್ದಾರೆ. ಪ್ರವೀಣ್ ಬಿ.ವಿ, ಪ್ರದೀಪ್ ಬಿ.ವಿ. ಜಂಟಿಯಾಗಿ ರಂಗಸಂಗೀತ ನೀಡಲಿದ್ದು, ಶ್ರೀಧರಮೂರ್ತಿ ರಂಗಸಜ್ಜಿಕೆ ಹಾಗೂ ಪರಿಕರಗಳ ಜವಾಬ್ದಾರಿ ಹೊತ್ತಿದ್ದಾರೆ. ಪ್ರದೀಪ್ ಬೆಳವಾಡಿ ಬೆಳಕು ಹಾಗೂ ವಿಜಯ್ ಕುಮಾರ್ ಬೆಣಚ ಪ್ರಸಾಧನ ಕಾರ್ಯ ನಿರ್ವಹಿಸಲಿದ್ದಾರೆ. ಮೇ 6,7 ಹಾಗೂ 8ರಂದು ಈ ನಾಟಕ ಪ್ರದರ್ಶನಗೊಳ್ಳಲಿದೆ. ಮೇ 6 ಮತ್ತು 7ರಂದು ಸಂಜೆ 6ಕ್ಕೆ, ಮೇ 8ರಂದು ಬೆಳಗ್ಗೆ 11.30 ಹಾಗೂ ಸಂಜೆ 6ಕ್ಕೆ ಪ್ರದರ್ಶನವಿರಲಿದ್ದು, ಪ್ರತಿ ಟಿಕೆಟ್ ಗೆ 249 ರೂ. ದರ ನಿಗಧಿಪಡಿಸಲಾಗಿದೆ. ಬುಕ್ ಮೈ ಶೋ ನಲ್ಲಿ ಸೋಮವಾರದಿಂದ ಟಿಕೆಟ್ ಲಭ್ಯವಿರಲಿದೆ. ಗಾಂಧಿ ಬಜಾರ್ ನಲ್ಲಿರುವ ವಿದ್ಯಾರ್ಥಿ ಭವನ ಹೋಟೆಲ್ ನಲ್ಲೂ ಟೆಕೆಟ್ ಪಡೆಯಬಹುದು.

ಗಾಂಧಿ ಬಜಾರ್- ವಿದ್ಯಾರ್ಥಿ ಭವನ ಅವಿನಾಭಾವ ಸಂಬಂಧ :

ಐತಿಹಾಸಿಕ ನಗರವಾದ ಬೆಂಗಳೂರಿನ ಬಡಾವಣೆಗಳ ಅತ್ಯಂತ ಹಳೆಯ ಜನಸಂಸ್ಕೃತಿ ಬೆಳದಿದ್ದು ಇದೇ ಬಸವನಗುಡಿಯಲ್ಲಿ. ಇದರ ಹಿಂದಿನ ಹೆಸರು ಸುಂಕೇನಹಳ್ಳಿ. ದೊಡ್ಡ ಗಣೇಶ ಮತ್ತು ದೊಡ್ಡ ಬಸವಣ್ಣ ಇಲ್ಲಿನ ಮೂಲ ನಿವಾಸಿಗಳ ಮನೆ ದೇವರು. ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿ ಇಲ್ಲಿಗೆ ಬಂದಿದ್ದರು ಎಂಬ ಬಗ್ಗೆ ಐತಿಹ್ಯವಿದೆ. ಈ ಸವಿನೆನಪಿನಲ್ಲಿ ಗಾಂಧಿ ಬಜಾರ್ ಜನ್ಮ ತಾಳಿತು. ಕಾರಂಜಿ ಆಂಜನೇಯ ದೇವಸ್ಥಾನದ ಆಸುಪಾಸಿನಲ್ಲಿದ್ದ ಈ ಪ್ರದೇಶ, ಕಡಲೆಕಾಯಿ ಪರಿಷೆಯಿಂದ ಸಾಂಸ್ಕೃತಿಕ ಉಡುಗೆ ಧರಿಸಿತು. ನ್ಯಾಷನಲ್ ಹೈಸ್ಕೂಲ್, ಆಚಾರ್ಯ ಪಾಠಶಾಲೆ, ಬಿ.ಎಂ.ಎಸ್.ಕಾಲೇಜು ಮುಂತಾದ ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಸಂಪತ್ತಿನ ನಡುವೆ ವಿದ್ಯಾರ್ಥಿ ಭವನ ಕಳೆದ 79 ವರ್ಷಗಳಿಂದ ನಾಡಿನ ಜನತೆಗೆ ಶುಚಿ- ರುಚಿಯಾದ ತಿಂಡಿಯನ್ನು ನೀಡಿ ಸೇವೆ ಸಲ್ಲಿಸುತ್ತಾ ಬಂದಿದೆ.

‘ವಿದ್ಯಾರ್ಥಿ ಭವನ’  ನಾಟಕದ ಪೋಸ್ಟರ್ ನಲ್ಲೂ ಬಸವನಗುಡಿ ಚಿತ್ರಣ :

ಬೆಂಗಳೂರಿನ ಗಾಂಧಿ ಬಜಾರ್ ನಲ್ಲಿ ಜನ್ಮತೆಳೆದ ವಿದ್ಯಾರ್ಥಿ ಭವನ ಕುರಿತಂತೆ ನಾಟಕ ಪೋಸ್ಟರ್ ನಲ್ಲೂ ಕಹಳೆಬಂಡೆ ಗೋಪುರ, ಕಡಲೇಕಾಯಿ ಪರಿಷೆ, ಹೂವು- ಹಣ್ಣಿನ ವ್ಯಾಪಾರಿಗಳು, ದೊಡ್ಡ ಬಸವಣ್ಣ, ನ್ಯಾಷನಲ್ ಹೈಸ್ಕೂಲ್, ಆಚಾರ್ಯ ಪಾಠಶಾಲೆ, ಸ್ವಾಮಿ ವಿವೇಕಾನಂದರ ಮೂರ್ತಿಗಳನ್ನು ಮೂಡಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಒಂದು ವರ್ಷದಲ್ಲಿ 438 ಕೌಟುಂಬಿಕ ದೌರ್ಜನ್ಯ ಪ್ರಕರಣಗಳಷ್ಟೇ ದಾಖಲು – ಹೆಚ್ಚಿನ ಜಾಗೃತಿ ಅಗತ್ಯ: ಜೆ.ಮಂಜುನಾಥ್

Next Post

ಕೈಚೀಲದಲ್ಲಿ ಚಿನ್ನದ ಗಟ್ಟಿ ಅಡಗಿಸಿಟ್ಟು ಕಳ್ಳಸಾಗಾಣಿಕೆ : ಕಸ್ಟಮ್ಸ್ ಅಧಿಕಾರಿಗಳಿಂದ 192 ಗ್ರಾಂ ಚಿನ್ನ ವಶ

Next Post

ಕೈಚೀಲದಲ್ಲಿ ಚಿನ್ನದ ಗಟ್ಟಿ ಅಡಗಿಸಿಟ್ಟು ಕಳ್ಳಸಾಗಾಣಿಕೆ : ಕಸ್ಟಮ್ಸ್ ಅಧಿಕಾರಿಗಳಿಂದ 192 ಗ್ರಾಂ ಚಿನ್ನ ವಶ

ತ್ರಿಮತಸ್ಥ ಬ್ರಾಹ್ಮಣ ಸ್ವಾಮೀಜಿಗಳು ಒಗ್ಗೂಡುವ ಅವಶ್ಯಕತೆಯಿದೆ : ಖ್ಯಾತ ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d